ಕೆಪಿಸಿಸಿ ಅಧ್ಯಕ್ಷರಿಗೇ ಹೈಕಮಾಂಡ್ ಶಿಸ್ತಿನ ಪಾಠ
ಪಕ್ಷದ ರಾಜ್ಯಾಧ್ಯಕ್ಷರೇ ಸರಕಾರದ ವಿರುದ್ಧ ಹೇಳಿಕೆ ನೀಡಿದರೆ ಪಕ್ಷಕ್ಕೆ ಹಾಗೂ ಸರಕಾರಕ್ಕೆ ಹೊಡೆತ ಬೀಳುತ್ತದೆ. ಇದಿಷ್ಟೇ ಅಲ್ಲದೇ, ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಇಲ್ಲ ಎನ್ನುವ ಸಂದೇಶ ರವಾನೆಯಾದರೆ ಸಂಘಟನೆಗೆ ಸಮಸ್ಯೆಯಾಗುತ್ತದೆ. ಆದ್ದರಿಂದ ಮುಂದಿನ ದಿನದಲ್ಲಿ ಈ ರೀತಿಯ ಗೊಂದಲಗಳ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.