R T Vittalmurthy Column: ಶಾಮನೂರು ಸಾಮ್ರಾಜ್ಯಕ್ಕೆ ಓವೈಸಿ ಎಂಟ್ರಿ ?
ಕಳೆದ ವಾರ ರಾಜ್ಯದ ಕಾಂಗ್ರೆಸ್ ನಾಯಕರಿಗೆ ತಲುಪಿದ ಸುದ್ದಿ ಅಷ್ಟೇನೂ ಹಿತಕರವಾಗಿರಲಿಲ್ಲ. ಕಾರಣ? ಹೈದರಾಬಾದ್ನ ಕಟ್ಟರ್ ಮುಸ್ಲಿಂ ನಾಯಕ ಅಸಾದುದ್ದೀನ್ ಓವೈಸಿ ಕರ್ನಾಟಕದ ರಾಜಕಾರಣಕ್ಕೆ ಎಂಟ್ರಿ ಆಗಲಿದ್ದಾರೆ ಎಂಬ ಸುದ್ದಿ. ಅಂದ ಹಾಗೆ, ‘ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೆಹಾದ್ ಮುಸ್ಲಿಮಿನ್’ ಪಕ್ಷದ ಸರ್ವೋಚ್ಚ ನಾಯಕರಾದ ಅಸಾದುದ್ದೀನ್ ಓವೈಸಿ ಅವರಿಗೆ ಕರ್ನಾಟಕದ ರಾಜಕಾರಣದ ಮೇಲೆ ಒಂದು ಕಣ್ಣು ಇದ್ದೇ ಇದೆ.