ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Profile

ಆರ್‌.ಟಿ. ವಿಠ್ಠಲಮೂರ್ತಿ‌

columnist

[email protected]

ವಿಶ್ವವಾಣಿ ಪತ್ರಿಕೆಯ ಅಂಕಣಕಾರ ಆರ್.ಟಿ.ವಿಠ್ಠಲಮೂರ್ತಿ ಅವರು 1985 ರಿಂದ ಪತ್ರಕರ್ತರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ಆಂದೋಲನ, ಹಾಯ್ ಬೆಂಗಳೂರ್, ತರಂಗ, ಸುದ್ದಿಸಂಗಾತಿ, ಅಭಿಮಾನಿ ಸೇರಿದಂತೆ ನಾಡಿನ ಹಲವು ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಆಂದೋಲನ ಪತ್ರಿಕೆಯಲ್ಲಿ ಸತತ 30 ವರ್ಷಗಳಿಂದ ರಾಜಕೀಯ ಅಂಕಣ 'ಬೆಂಗಳೂರು ಡೈರಿ' ಬರೆಯುತ್ತಿರುವ ಆರ್.ಟಿ.ವಿಠ್ಠಲಮೂರ್ತಿ ಅವರು, ರಾಜಕೀಯ ವಿಶ್ಲೇಷಕರಾಗಿ ಗಮನ ಸೆಳೆದವರು. ಪ್ರಸ್ತುತ ರಾಜ್ಯಮಟ್ಟದ ಕನ್ನಡ ದಿನಪತ್ರಿಕೆ ʼಅಂಕಣಗಳ ಪತ್ರಿಕೆʼ ಎಂದು ಹೆಸರುವಾಸಿಯಾದ ವಿಶ್ವವಾಣಿಯಲ್ಲಿ ಅವರು ಬರೆಯುತ್ತಿರುವ ಮೂರ್ತಿ ಪೂಜೆ ಅಂಕಣ ಪ್ರತಿ ಸೋಮವಾರ ಪ್ರಕಟವಾಗುತ್ತಿದ್ದು, ರಾಜ್ಯ ರಾಜಕಾರಣದ ನೈಜ ಪ್ರತಿಬಿಂಬವಾಗಿದೆ

Articles
R‌ T Vittalmurthy Column: ಬಿಜೆಪಿಯಲ್ಲಿ ಮತ್ತೆ ಪ್ರೆಸಿಡೆಂಟ್‌ ವಾರ್

R‌ T Vittalmurthy Column: ಬಿಜೆಪಿಯಲ್ಲಿ ಮತ್ತೆ ಪ್ರೆಸಿಡೆಂಟ್‌ ವಾರ್

ಸರಕಾರ ಅಸ್ತಿತ್ವಕ್ಕೆ ಬಂದು 33 ತಿಂಗಳುಗಳು ಕಳೆದಿವೆ. ಈಗಲಾದರೂ ಸಂಪುಟ ಪುನಾರಚನೆ ಮಾಡದಿದ್ದರೆ ಹೇಗೆ? ಅಂತ ಹಿರಿಯ ಶಾಸಕರು ವರಾತ ತೆಗೆಯುತ್ತಿದ್ದಾರೆ. ಅವರ ಈ ವರಾತ ವನ್ನು ತಡೆಗಟ್ಟಲು ಮುಂದಾಗದಿದ್ದರೆ ಅಪಾಯ ಗ್ಯಾರಂಟಿ. ಹೀಗಾಗಿ ಸಂಪುಟ ಪುನಾರಚನೆಗೆ ಅನುಮತಿ ಕೊಡಿ ಅಂತ ಕೇಳುತ್ತಾರೆ.

R T Vittalmurthy Column: ದೇವೇಗೌಡ್ರು ಮತ್ತೆ ರಾಜ್ಯಸಭೆಗೆ ಹೋಗುತ್ತಾರೆ

ದೇವೇಗೌಡ್ರು ಮತ್ತೆ ರಾಜ್ಯಸಭೆಗೆ ಹೋಗುತ್ತಾರೆ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠಎಚ್.ಡಿ.ದೇವೇಗೌಡರು ಪುನಃ ರಾಜ್ಯಸಭೆಗೆ ಹೋಗಲಿದ್ದಾರೆ. ಹೀಗೆ ದೇವೇಗೌಡರು ಮರಳಿ ರಾಜ್ಯಸಭೆಗೆ ಹೋದರೆ ರಾಜ್ಯ ಬಿಜೆಪಿ ನಾಯಕರಿಗೇಕೆ ವಿಸ್ಮಯ ಎಂದರೆ, ಅವರನ್ನು ಮರಳಿ ರಾಜ್ಯಸಭೆಗೆ ಕಳಿಸುವ ವಿಷಯದಲ್ಲಿ ಖುದ್ದು ನರೇಂದ್ರ ಮೋದಿ ಯವರೇ ಉತ್ಸುಕತೆ ತೋರಿಸಿರುವುದು. ಈ ವರ್ಷದ ಜೂನ್ ಹೊತ್ತಿಗೆ ಕರ್ನಾಟಕ ವಿಧಾನಸಭೆ ಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ.

‌R T Vittalmurthy Column: ಯಡಿಯೂರೋತ್ಸವಕ್ಕೆ 114ರ ಟಾರ್ಗೆಟ್

‌R T Vittalmurthy Column: ಯಡಿಯೂರೋತ್ಸವಕ್ಕೆ 114ರ ಟಾರ್ಗೆಟ್

ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ನ ಜತೆಗೂಡಿ ಅಧಿಕಾರ ಹಿಡಿಯುವುದು ಗ್ಯಾರಂಟಿ ಎಂಬ ಲೆಕ್ಕಾಚಾರದಲ್ಲಿರುವ ರಾಜ್ಯ ಬಿಜೆಪಿ ನಾಯಕರು ಇದೀಗ 114ರ ಟಾರ್ಗೆಟ್ ಮೇಲೆ ಕಣ್ಣಿಟ್ಟು ‘ಯಡಿಯೂರೋತ್ಸವ’ಕ್ಕೆ ಸಜ್ಜಾಗುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಕಾರಣಕ್ಕೆ ಬಂದು ಐವತ್ತು ವರ್ಷವಾಗಿರುವ ಹಿನ್ನೆಲೆಯಲ್ಲಿ ಇಂಥ ಉತ್ಸವ ನಡೆಸಲು ಸಜ್ಜಾಗಿರುವ ಬಿಜೆಪಿ ನಾಯಕರಿಗೆ ಈಗ ಇದ್ದಕ್ಕಿದ್ದಂತೆ ಒಗ್ಗಟ್ಟಿನ ಅನಿವಾರ್ಯತೆ ಕಾಣತೊಡಗಿದೆ.

R T Vittalmurthy Column: ಪರಂ-ಕುಮಾರಸ್ವಾಮಿ ತಾಜ್‌ ಮೀಟಿಂಗ್‌ ರಹಸ್ಯವೇನು ?

ಪರಂ-ಕುಮಾರಸ್ವಾಮಿ ತಾಜ್‌ ಮೀಟಿಂಗ್‌ ರಹಸ್ಯವೇನು ?

ಈ ಮಧ್ಯೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬೆಳವಣಿಗೆ ರಾಜಕೀಯ ವಲಯಗಳಲ್ಲಿ ಸಂಚಲನ ಮೂಡಿಸಿದೆ. ಬೆಂಗಳೂರಿನ ತಾರಾ ಹೋಟೆಲ್ ಒಂದರಲ್ಲಿ ಕಳೆದ ಶನಿವಾರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಪರಮೇಶ್ವರ್ 45 ನಿಮಿಷಗಳ ಕಾಲ ರಹಸ್ಯವಾಗಿ ಚರ್ಚಿಸಿದ್ದು ಕೈ ಪಾಳಯದಲ್ಲಿ ಸಂಭವಿಸಲಿರುವ ಅಪಾಯದ ಮುನ್ಸೂಚನೆ ಎಂಬುದು ಮೂಲಗಳ ಅಭಿಪ್ರಾಯ.

R T Vittalmurthy Column: ಮತ್ತೆ ತಲೆ ಎತ್ತಲಿದೆಯೇ ಪ್ರಗತಿಪರ ದಳ ?

R T Vittalmurthy Column: ಮತ್ತೆ ತಲೆ ಎತ್ತಲಿದೆಯೇ ಪ್ರಗತಿಪರ ದಳ ?

ಇಪ್ಪತ್ತು ವರ್ಷಗಳ ಹಿಂದೆ ಕರ್ನಾಟಕದ ರಾಜಕೀಯಕ್ಕೆ ಹೊಸ ದಿಕ್ಕು ತೋರಿಸಿದ್ದ ಮತ್ತು ಕಾಂಗ್ರೆಸ್ ಪಡಸಾಲೆಯಲ್ಲಿ ಲೀನವಾಗಿದ್ದ ಪ್ರಗತಿಪರ ಜನತಾದಳಕ್ಕೆ ಮರುಚೈತನ್ಯ ನೀಡುವ ಸಲುವಾಗಿ, ಸಿದ್ದು ಸಂಪುಟದ ಕೆಲ ಸಚಿವರು ಮತ್ತು ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಮಾತು ಕತೆ ಆರಂಭಿಸಿದ್ದಾರೆ.

R T Vittalmurthy Column: ರಾಜೀನಾಮೆ ಕೊಡ್ತೀನಂದ್ರಾ ಮಲ್ಲಿಕಾರ್ಜುನ್‌ ?

R T Vittalmurthy Column: ರಾಜೀನಾಮೆ ಕೊಡ್ತೀನಂದ್ರಾ ಮಲ್ಲಿಕಾರ್ಜುನ್‌ ?

ಮಲ್ಲಿಕಾರ್ಜುನ್ ಅವರು ಹೀಗೆ ಏಕಾಏಕಿಯಾಗಿ ರಾಜೀನಾಮೆಗೆ ರೆಡಿಯಾಗಿದ್ದನ್ನು ಕಂಡು ವಿಸ್ಮಿತ ರಾದ ಸಿದ್ದರಾಮಯ್ಯ ಅವರು, “ಅದೇಕ್ರೀ ಮಲ್ಲಿಕಾರ್ಜುನ್, ಮಂತ್ರಿಯಾಗಿ ನಿಮ್ಮ ಪಾಡಿಗೆ ನೀವು ಕೆಲಸ ಮಾಡಿಕೊಂಡು ಹೋಗುತ್ತಿದ್ದೀರಿ. ಅದರಲ್ಲೂ ನೀವು ನೋಡಿಕೊಳ್ಳುತ್ತಿರುವ ಗಣಿ ಖಾತೆ ಎಂದರೆ ವಿವಾದದ ಗೂಡು. ಅದರೆ ಅಂಥ ವಿವಾದದ ಗೂಡನ್ನೇ ತಂಟೆ-ತಕರಾರಿಲ್ಲದೆ ನಿರ್ವಹಿಸಿ ಕೊಂಡು ಹೋಗುತ್ತಿದ್ದೀರಿ. ಹೀಗಿರುವಾಗ ಮಂತ್ರಿಗಿರಿಯಿಂದ ನಿಮ್ಮನ್ನೇಕೆ ರಿಲೀವ್ ಮಾಡಲಿ? ನೋ, ನೋ, ನಿಮ್ಮ ಪಾಡಿಗೆ ನೀವು ನೆಮ್ಮದಿಯಾಗಿ ಮುಂದುವರಿಯಿರಿ" ಎಂದರಂತೆ.

R T Vittalmurthy Column: ಶಾಮನೂರು ಸಾಮ್ರಾಜ್ಯಕ್ಕೆ ಓವೈಸಿ ಎಂಟ್ರಿ ?

R T Vittalmurthy Column: ಶಾಮನೂರು ಸಾಮ್ರಾಜ್ಯಕ್ಕೆ ಓವೈಸಿ ಎಂಟ್ರಿ ?

ಕಳೆದ ವಾರ ರಾಜ್ಯದ ಕಾಂಗ್ರೆಸ್ ನಾಯಕರಿಗೆ ತಲುಪಿದ ಸುದ್ದಿ ಅಷ್ಟೇನೂ ಹಿತಕರವಾಗಿರಲಿಲ್ಲ. ಕಾರಣ? ಹೈದರಾಬಾದ್‌ನ ಕಟ್ಟರ್ ಮುಸ್ಲಿಂ ನಾಯಕ ಅಸಾದುದ್ದೀನ್ ಓವೈಸಿ ಕರ್ನಾಟಕದ ರಾಜಕಾರಣಕ್ಕೆ ಎಂಟ್ರಿ ಆಗಲಿದ್ದಾರೆ ಎಂಬ ಸುದ್ದಿ. ಅಂದ ಹಾಗೆ, ‘ಆಲ್ ಇಂಡಿಯಾ ಮಜ್ಲಿಸ್ ಎ ಇತ್ತೆಹಾದ್ ಮುಸ್ಲಿಮಿನ್’ ಪಕ್ಷದ ಸರ್ವೋಚ್ಚ ನಾಯಕರಾದ ಅಸಾದುದ್ದೀನ್ ಓವೈಸಿ ಅವರಿಗೆ ಕರ್ನಾಟಕದ ರಾಜಕಾರಣದ ಮೇಲೆ ಒಂದು ಕಣ್ಣು ಇದ್ದೇ ಇದೆ.

R T Vittalmurthy Column: ಸಿದ್ದುಗೆ ಅನುದಾನ ಹೊಂದಿಸುವ ತಲೆನೋವು ಶುರುವಾಗಿದೆ

ಸಿದ್ದುಗೆ ಅನುದಾನ ಹೊಂದಿಸುವ ತಲೆನೋವು ಶುರುವಾಗಿದೆ

ರಾಜ್ಯದ ಆದಾಯ ಕಡಿಮೆ, ಹೊರೆ ಜಾಸ್ತಿಯಾಗಿ ಬಜೆಟ್ಟಿನ ಸೊಂಟಕ್ಕೆ ‘ತಾಕತ್ ಕಿ ದವಾ’ ಕೊಡುವುದೇ ಸಿದ್ದರಾಮಯ್ಯ ಅವರಿಗೆ ಸವಾಲಾಗಿದೆ. ಇದೇ ಕಾರಣಕ್ಕಾಗಿ ಬಜೆಟ್ಟಿಗೆ ಹೊಸ ಸಂಪನ್ಮೂಲಗಳನ್ನು ಕಂಡುಹಿಡಿಯಲು ಆರ್ಥಿಕ ತಜ್ಞರಾದ ಕೃಷ್ಣನ್ ನೇತೃತ್ವದ ತಂಡವನ್ನು ರಚಿಸಿ, ವರದಿ ಪಡೆದಿದ್ದರೂ ಸಿದ್ದರಾಮಯ್ಯ ಅವರಿಗೆ ತಲೆನೋವು ತಪ್ಪಿಲ್ಲ.

R T Vittalmurthy Column: ಡೋಂಟ್‌ ವರಿ, ಕಮ್‌ ಟು ಡೆಲ್ಲಿ

R T Vittalmurthy Column: ಡೋಂಟ್‌ ವರಿ, ಕಮ್‌ ಟು ಡೆಲ್ಲಿ

ಸಿದ್ದರಾಮಯ್ಯ ಅವರನ್ನಿಳಿಸಲು ರಾಹುಲ್ ಗಾಂಧಿ ಏಕೆ ಬಯಸುತ್ತಿಲ್ಲ? ಎಂಬುದು. ಎಲ್ಲಕ್ಕಿಂತ ಮುಖ್ಯವಾಗಿ ಅಹಿಂದ ವರ್ಗಗಳ ಸಾಲಿಡ್ಡು ನಾಯಕರಾಗಿ ನೆಲೆಯಾಗಿರುವ ಸಿದ್ದರಾಮಯ್ಯ ಅವರನ್ನಿ ಳಿಸಿದರೆ ಪಕ್ಷಕ್ಕೆ ಹಾನಿಯಾಗುತ್ತದೆ ಎಂಬುದು ಅವರ ಲೆಕ್ಕಾಚಾರ. ಆದರೆ ಇದನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೇರವಾಗಿ ಹೇಳಲು ತಯಾರಿಲ್ಲದ ರಾಹುಲ್ ಗಾಂಧಿಯವರು, ರಾಜ್ಯ ಬಜೆಟ್ ಹತ್ತಿರದಲ್ಲಿರು ವಾಗ, ಐದು ರಾಜ್ಯಗಳ ಚುನಾವಣೆ ಸನಿಹಕ್ಕೆ ಬಂದಿರುವಾಗ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಸರಿಯಲ್ಲ ಎಂಬ ನಿಲುವಿಗೆ ಬಂದಿದ್ದಾರೆ.

R T Vittalmurthy Column: ಬೊಮ್ಮಾಯಿ ರೂಪಿಸಿದ ಸಂಕಷ್ಟ ಸೂತ್ರ

R T Vittalmurthy Column: ಬೊಮ್ಮಾಯಿ ರೂಪಿಸಿದ ಸಂಕಷ್ಟ ಸೂತ್ರ

ಬಿಜೆಪಿ ಮೂಲಗಳ ಪ್ರಕಾರ, ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಸಂಕಷ್ಟ ಸೂತ್ರ ಬಹುತೇಕ ಎಲ್ಲರಿಗೂ ಒಪ್ಪಿಗೆಯಾಗಿದೆ. ಅರ್ಥಾತ್, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನಿಳಿಸಲು ಎಲ್ಲ ಬಗೆಯ ಹೋರಾಟ ನಡೆಸುವುದು, ಒಂದು ವೇಳೆ ಅದು ಯಶಸ್ವಿಯಾಗದೆ ಇದ್ದರೆ ತಮ್ಮ ತಮ್ಮ ಪಾಳೇಪಟ್ಟುಗಳನ್ನು ಭದ್ರಗೊಳಿಸಿಕೊಂಡು ಹಿತ ಕಾಪಾಡಿ ಕೊಳ್ಳುವುದು ಅನಿವಾರ್ಯ ಎಂಬುದು ಮನದಟ್ಟಾಗಿದೆ.

R T Vittalmurthy Column: ಯುದ್ಧಕ್ಕೆ ರೆಡಿಯಾಗಿ ಅಂದ್ರಂತೆ ಸಿದ್ದು

R T Vittalmurthy Column: ಯುದ್ಧಕ್ಕೆ ರೆಡಿಯಾಗಿ ಅಂದ್ರಂತೆ ಸಿದ್ದು

ಎಲ್ಲಕ್ಕಿಂತ ಮುಖ್ಯವಾಗಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಿಂದ ಹಿಡಿದು, ಜೂನ್ ಹೊತ್ತಿಗೆ ಕರ್ನಾಟಕ ವಿಧಾನಪರಿಷತ್ತಿನ ಹಲವು ಸ್ಥಾನಗಳಿಗೆ ಮತ್ತು ವಿಧಾನಸಭೆಯಿಂದ ರಾಜ್ಯ ಸಭೆಯ ಕೆಲವು ಸ್ಥಾನಗಳಿಗೆ ಚುನಾವಣೆ ನಡೆಯುವುದರಿಂದ ಅಲ್ಲಿಯ ತನಕ ಅಧಿಕಾರ ಹಸ್ತಾಂತರದ ಮಾತಿಗೆ ಬ್ರೇಕ್ ಬಿದ್ದಿದೆ ಎಂಬುದು ಮೂಲಗಳ ಹೇಳಿಕೆ.

R T Vittalmurthy Column: ಜನವರಿ ಒಂಬತ್ತಕ್ಕೆ ದಿಲ್ಲಿಯಲ್ಲಿ ಫೈನಲ್

R T Vittalmurthy Column: ಜನವರಿ ಒಂಬತ್ತಕ್ಕೆ ದಿಲ್ಲಿಯಲ್ಲಿ ಫೈನಲ್

ಯಾವಾಗ ಸಿದ್ದರಾಮಯ್ಯನವರು ಈ ಪ್ರಸ್ತಾಪ ಮಂಡಿಸಿದರೋ, ಆಗ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ವೈ ನಾಟ್ ಸಿದ್ರಾಮಯ್ಯಾಜೀ? ಸಂಪುಟ ಪುನಾರಚನೆಯ ಸ್ವರೂಪ ಹೇಗಿರಬೇಕು? ಮಂತ್ರಿಮಂಡಲ ದಿಂದ ಹೊರಹೋಗಬೇಕಾದವರು ಯಾರು? ಸೇರ್ಪಡೆ ಅಗಬೇಕಾದವರು ಯಾರು? ಎಂಬ ಬಗ್ಗೆ ವಿವರವಾಗಿ ಚರ್ಚಿಸಿ ಜನವರಿ 9ರಂದು ದಿಲ್ಲಿಗೆ ಬನ್ನಿ. ಫೈನಲ್ ಮಾಡೋಣ" ಎಂದಿದ್ದಾರೆ.

R T Vittalmurthy Column: ಬಜೆಟ್‌ ಮಂಡಿಸಲು ಸಿದ್ದು-ಡಿಕೆಶಿ ರೆಡಿ

R T Vittalmurthy Column: ಬಜೆಟ್‌ ಮಂಡಿಸಲು ಸಿದ್ದು-ಡಿಕೆಶಿ ರೆಡಿ

ಮಲ್ಲಿಕಾರ್ಜುನ ಖರ್ಗೆ ಅವರ ಮನಸ್ಸಿನಲ್ಲಿರುವ ಈ ಯೋಚನೆ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿಲ್ಲ ಅಂತೇನಲ್ಲ. ಆದರೆ ಬಜೆಟ್ ಮಂಡನೆಯ ಅವಕಾಶವನ್ನು ಕಳೆದುಕೊಳ್ಳಲು ಅವರು ಸಿದ್ದರಿಲ್ಲ. ಕಾರಣ? ಒಂದು ಸರಕಾರದ ನಾಲ್ಕು ಮತ್ತು ಐದನೇ ಬಜೆಟ್‌ಗಳಿಗೆ ಅಂಥ ಮಹತ್ವವಿಲ್ಲ. ಕನಿಷ್ಠಪಕ್ಷ ಮೂರನೇ ಬಜೆಟ್ ಮಂಡಿಸಲು ಅವಕಾಶ ಸಿಕ್ಕರೆ ಇಡೀ ದೇಶವೇ ಕರ್ನಾ ಟಕದತ್ತ ತಿರುಗಿ ನೋಡುವಂತೆ ಮಾಡ ಬಹುದು.

R T Vittalmurthy Column: ನಿಖಿಲ್‌ ಪತ್ತೆ ಮಾಡಿದ ಚಿದಂಬರ ರಹಸ್ಯ ಯಾವುದು ?

ನಿಖಿಲ್‌ ಪತ್ತೆ ಮಾಡಿದ ಚಿದಂಬರ ರಹಸ್ಯ ಯಾವುದು ?

ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ತೆ ಮಾಡಿದ ರಹಸ್ಯ ವೊಂದು ದೊಡ್ಡ ಗೌಡರು ಮತ್ತು ಕುಮಾರಸ್ವಾಮಿಯವರ ಗಮನ ಸೆಳೆದಿದೆ. ಪಕ್ಷಕ್ಕೆ ದೊಡ್ಡ ಯಶಸ್ಸು ಸಿಗಬೇಕೆಂದರೆ ‘ಲೀಡರ್-ಟು-ಲೀಡರ್’ ಬದಲು ‘ಲೀಡರ್-ಟು-ಕೇಡರ್’ ಸೂತ್ರವನ್ನು ಅನುಸರಿಸುವುದು ಅನಿವಾರ್ಯ ಎಂಬುದು ನಿಖಿಲ್ ಅವರು ಕಂಡುಹಿಡಿದ ಸತ್ಯ.

R T Vittalmurthy Column: ವಿಜಯೇಂದ್ರ ಇಳೀತಿಲ್ಲ, ಭಿನ್ನರು ಬಿಡ್ತಿಲ್ಲ

R T Vittalmurthy Column: ವಿಜಯೇಂದ್ರ ಇಳೀತಿಲ್ಲ, ಭಿನ್ನರು ಬಿಡ್ತಿಲ್ಲ

ಇವತ್ತು ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಮಿತಿಮೀರಿ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಮುಂದಾ ಗಿದ್ದು ಇದರ ಪರಿಣಾಮವಾಗಿ ಹಿಂದೂ ಮತಬ್ಯಾಂಕಿನ ಕ್ರೋಡೀಕರಣವಾಗಬೇಕಿದೆ. ಇವತ್ತಿನ ಸ್ಥಿತಿ ಯಲ್ಲಿ ರಾಜ್ಯ ಬಿಜೆಪಿಯ ಯಾವುದೇ ನಾಯಕರಿಗಿಂತ ಬಲವಾಗಿ ಈ ಕೆಲಸ ಮಾಡಬಲ್ಲವರು ಬಸನಗೌಡ ಪಾಟೀಲ್ ಯತ್ನಾಳ್.

R T Vittalmurthy Column: ರಾಹುಲ್‌ ಗಾಂಧಿಯವರಿಗೆ ಒಪ್ಪಂದದ ಕತೆ ಬೇಕಿಲ್ಲ

R T Vittalmurthy Column: ರಾಹುಲ್‌ ಗಾಂಧಿಯವರಿಗೆ ಒಪ್ಪಂದದ ಕತೆ ಬೇಕಿಲ್ಲ

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಕಳೆದ ವಾರ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು, ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಅಂದ ಹಾಗೆ, ಕರ್ನಾಟಕದಲ್ಲಿ ಸಿಎಂ ಹುದ್ದೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದಾರೆ, ಸಿಎಂ ಸಿದ್ದರಾಮಯ್ಯ ಕನಲಿ ಕೂತಿದ್ದಾರೆ.

R T Vittalmurthy Column: 'ಕೂಲ್‌ ಆಗಿರಿ ಡಿಕೆʼ ಅಂದ್ರಾ ಖರ್ಗೆ ಸಾಹೇಬರು ?

'ಕೂಲ್‌ ಆಗಿರಿ ಡಿಕೆʼ ಅಂದ್ರಾ ಖರ್ಗೆ ಸಾಹೇಬರು ?

ಸುರೇಶ್ ಅವರ ಮಾತು ಕೇಳಿದ ಮಲ್ಲಿಕಾರ್ಜುನ ಖರ್ಗೆ ಅವರು, “ರೀ, ಸ್ವಲ್ಪ ದಿನ ಸುಮ್ಮನಿರ್ರೀ. ಮುಂದಿನ ತಿಂಗಳು ಸಂಸತ್ ಅಧಿವೇಶನ ಪ್ರಾರಂಭವಾಗುತ್ತದೆ. ಆಗ ಬನ್ರೀ. ಏನೇ ವಿಷಯ ಇದ್ದರೂ ರಾಹುಲ್ ಗಾಂಧಿ ಅವರ ಮುಂದೆ ಮಾತನಾಡೋಣ. ಆಗ ಸಿದ್ದರಾಮಯ್ಯ ಅವರೂ ಬರಲಿ. ಒಟ್ಟಿನಲ್ಲಿ ಏನೇ ಇದ್ರೂ ಅಮೈಕಬಲ್ ಆಗಿ ಸೆಟ್ಲ್ ಮಾಡೋಣ" ಎಂದಿದ್ದಾರೆ.

R T Vittalmurthy Column: ಸಿದ್ದು ಸೇಫ್‌ ಆಗಿದ್ದೇ ಬಿಜೆಪಿಗೆ ಚಿಂತೆ

R T Vittalmurthy Column: ಸಿದ್ದು ಸೇಫ್‌ ಆಗಿದ್ದೇ ಬಿಜೆಪಿಗೆ ಚಿಂತೆ

ಇನ್ನು ಬಿಹಾರದ ರಾಜಕಾರಣದಲ್ಲಿ ದೊಡ್ಡ ಮಟ್ಟದ ಆಟ ಅಡುವ ಕನಸು ಕಂಡಿದ್ದ ಕಾಂಗ್ರೆಸ್ ಯಗಾದಿಗಾ ಹೊಡೆತ ತಿಂದು ಮೂಲೆ ಸೇರಿದೆ. ಯಾವಾಗ ಅದು ಇಂಥ ದಯನೀಯ ಸ್ಥಿತಿಗೆ ತಲುಪಿತೋ, ಆಗ ಕಾಂಗ್ರೆಸ್ ವರಿಷ್ಠರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲ, ಕರ್ನಾಟಕದಲ್ಲಿ ಸಿಎಂ ಬದಲಾವಣೆಗೆ ಕೈ ಹಾಕುವ ಆಟದಿಂದ ಗಪ್ಪನೆ ಹಿಂದೆ ಸರಿದಿದ್ದಾರೆ.

R T Vittalmurthy Column: ಬಿಜೆಪಿ ನಾಯಕರು ʼಭಾಗವತʼ ಓದಬೇಕು

R T Vittalmurthy Column: ಬಿಜೆಪಿ ನಾಯಕರು ʼಭಾಗವತʼ ಓದಬೇಕು

ಇವತ್ತು ಸಿದ್ದರಾಮಯ್ಯ ಸಿಎಂ ಆಗಿ ಉಳಿಯಲಿ, ಇಲ್ಲವೇ ಅವರ ಜಾಗಕ್ಕೆ ಡಿ.ಕೆ. ಶಿವಕುಮಾರ್ ಬರಲಿ ಅಥವಾ ದಲಿತರೊಬ್ಬರು ಸಿಎಂ ಆಗಲಿ. ಅದರಿಂದ ನಮಗೇನಾಗಬೇಕು?" ಎಂದು ಗುಡು ಗಿದ್ದಾರೆ. ಹೀಗೆ ಮೋಹನ್ ಭಾಗವತ್ ಅವರು ಗುಡುಗಿ ಹೋದ ಮೇಲೆ ರಾಜ್ಯದ ಬಿಜೆಪಿ ನಾಯಕ ರು ತಣ್ಣಗಾಗಿದ್ದಾರೆ. ಅಷ್ಟೇ ಅಲ್ಲ, ದಿನ ಬೆಳಗಾದರೆ ಕಾಂಗ್ರೆಸ್ ಪಕ್ಷದ ಆಂತರಿಕ ಸಂಘರ್ಷದ ಬಗ್ಗೆ ಮಾತನಾಡುವುದನ್ನು ಕಡಿಮೆ ಮಾಡಿದ್ದಾರೆ.

R T Vittalmurthy Column: ಅಧಿಕಾರ ಸಂಘರ್ಷಕ್ಕೆ ರಾಹುಲ್‌ ಬ್ರೇಕ್‌ ?

R T Vittalmurthy Column: ಅಧಿಕಾರ ಸಂಘರ್ಷಕ್ಕೆ ರಾಹುಲ್‌ ಬ್ರೇಕ್‌ ?

ಸ್ವತಃ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉತ್ಸುಕತೆ ತೋರಿಸಿದರೂ ರಾಹುಲ್ ಗಾಂಧಿ ಮಾತ್ರ ನಿರಾಸಕ್ತಿ ತೋರಿಸು ತ್ತಿದ್ದಾರೆ. ಅವರಿಗೀಗ ಯಾವುದೇ ಗಂಡಾಂತರ ಎದುರಾಗುವುದು ಬೇಕಿಲ್ಲ. ಯಾಕೆಂದರೆ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಲು ಅಂತ ಉಳಿದಿರುವ ಏಕೈಕ ರಾಜ್ಯ ಕರ್ನಾಟಕ.

R T Vittalmurthy Column: ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್‌-ಜಮೀರ್‌ ?

R T Vittalmurthy Column: ಡಿಸಿಎಂ ಪಟ್ಟಕ್ಕೆ ಪ್ರಿಯಾಂಕ್‌-ಜಮೀರ್‌ ?

ಆರೆಸ್ಸೆಸ್ ವಿರುದ್ಧದ ಹೋರಾಟದಿಂದ ವರಿಷ್ಠರ ಗಮನ ಸೆಳೆದಿರುವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಸಂಪುಟದಲ್ಲಿ ಡಿಸಿಎಂ ಆಗಲಿ ಅಂತ ಸಿದ್ದರಾಮಯ್ಯ ಬಯಸಿದ್ದಾರೆ. ಅವರ ಈ ಬಯಕೆಗೆ ಮತ್ತೊಂದು ಒಳ ಉದ್ದೇಶವೂ ಇದೆ. ಅದೆಂದರೆ ಕರ್ನಾಟಕದಲ್ಲಿ ಪರ್ಯಾಯ ನಾಯಕತ್ವದ ಕೂಗು ಮೇಲೇಳಲು ಕಾರಣವಾಗುತ್ತಿರುವ ಮೂಲವು ‘ಕೂಲ್’ ಆಗುತ್ತದೆ ಎಂಬುದು.

R T Vittalmurthy Column: ಆ ನಿರಾಶ್ರಿತೆಯ ಕಣ್ಣೀರ ಕತೆ ಹಲವರಿಗೆ ಆಶ್ರಯ ದಕ್ಕಿಸಿ ಕೊಟ್ಟಿತು

ಆ ನಿರಾಶ್ರಿತೆಯ ಕಣ್ಣೀರ ಕತೆ ಹಲವರಿಗೆ ಆಶ್ರಯ ದಕ್ಕಿಸಿ ಕೊಟ್ಟಿತು

ಆಶ್ರಯ ಯೋಜನೆ ಜಾರಿಗೆ ತರಲು ನಿಮಗಿದ್ದ ಪ್ರೇರಣೆ ಏನು ಅನ್ನುವುದು ಗೊತ್ತಾಯಿತು. ಆದರೆ ಅದರ ವಿವರ ಗೊತ್ತಾಗಲಿಲ್ಲ ಎಂದೆ. ಅಂದ ಹಾಗೆ ಅವತ್ತು ನನ್ನ ಕುತೂಹಲದ ಪ್ರಶ್ನೆಗೆ ನೀರಿನ ಕಾರಂಜಿಯಂತೆ ಉತ್ತರ ಹೊರ ಹೊಮ್ಮಿಸಿದವರು ಬಂಗಾರಪ್ಪ. ‌ತೊಂಭತ್ತರಿಂದ ತೊಂಭತ್ತೆರಡರ ತನಕ ಕರ್ನಾಟಕದ ಮುಖ್ಯ ಮಂತ್ರಿಯಾಗುವ ಅವಕಾಶ ಅವರಿಗೆ ದಕ್ಕಿತ್ತು.

R T Vittalmurthy Column: ಜೆಡಿಎಸ್‌ ರಥ ಹತ್ತಲು ಈಗ ಕುಮಾರಣ್ಣ ರೆಡಿ

R T Vittalmurthy Column: ಜೆಡಿಎಸ್‌ ರಥ ಹತ್ತಲು ಈಗ ಕುಮಾರಣ್ಣ ರೆಡಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ‘ಆಂಗ್ರಿ ಯಂಗ್‌ಮ್ಯಾನ್’ ತರಹ ಮುಗಿ ಬಿದ್ದ ಕುಮಾರಸ್ವಾಮಿ ಇದ್ದಕ್ಕಿದ್ದಂತೆ ಮೌನವಾದ ರೀತಿ ಜೆಡಿಎಸ್ ಪಾಳಯ ಮಂಕಾಗುವಂತೆ ಮಾಡಿತ್ತು. ಹೀಗಾಗಿ ಕರ್ನಾಟಕದಿಂದ ದೂರವೇ ಉಳಿದು, ದಿಲ್ಲಿಯಲ್ಲಿ ಸೆಟ್ಲಾಗಿದ್ದ ಕುಮಾರಸ್ವಾಮಿ ಅವರನ್ನು ಕರ್ನಾಟಕದ ನೆಲಕ್ಕೆ ಸೆಳೆಯಲು ಜೆಡಿಎಸ್‌ನ ಕೆಲ ಶಾಸಕರು ಯತ್ನಿಸಿದ್ದಾರೆ.

R T Vittalmurthy Column: ರಾಹುಲ್‌ ಗಾಂಧಿಯವರಿಗೆ ಸಿದ್ದು ಹೇಳಿದ್ದೇನು ?

R T Vittalmurthy Column: ರಾಹುಲ್‌ ಗಾಂಧಿಯವರಿಗೆ ಸಿದ್ದು ಹೇಳಿದ್ದೇನು ?

ಸಿದ್ದರಾಮಯ್ಯ ಅವರ ಈ ಮಾತಿಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಷ್ಟೇ ಅಲ್ಲ, ಪಕ್ಷದ ರಣತಂತ್ರ ನಿಪುಣರು ನೀಡಿರುವ ಸಲಹೆಯ ಪ್ರಕಾರ ಕೆಲ ಹಿರಿಯ ಸಚಿವರನ್ನು ಸಂಪುಟ ದಿಂದ ಕೈ ಬಿಟ್ಟು ಪಕ್ಷದ ಕೆಲಸಕ್ಕೆ ನಿಯೋಜಿಸಬೇಕು ಎಂದಿದ್ದಾರೆ. ಯಾವಾಗ ಸಿದ್ದು-ರಾಹುಲ್ ಮಧ್ಯೆ ಇಂಥ ಮಾತುಕತೆ ನಡೆದಿದೆ ಎಂಬುದು ಸಾಬೀತಾಯಿತೋ, ಆಗ ಅವರ ಆಪ್ತರ ಪಡೆ ಹೊಸ ಉತ್ಸಾಹದಿಂದ ತಿರುಗಾಡುತ್ತಿದೆ.

Loading...