ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Kote

[email protected]

Articles
RCB vs KKR: ವಿರಾಟ್‌ ಕೊಹ್ಲಿ ಶತಕದ ಬಲದಿಂದ ಗೆದ್ದು ಅಗ್ರ ಸ್ಥಾನಕ್ಕೆ ಮರಳಿದ ಆರ್‌ಸಿಬಿ!

ವಿರಾಟ್‌ ಕೊಹ್ಲಿ ಶತಕದ ಬಲದಿಂದ ಗೆದ್ದು ಅಗ್ರ ಸ್ಥಾನಕ್ಕೇರಿದ ಆರ್‌ಸಿಬಿ!

RCB vs KKR Match Highlights: ವಿರಾಟ್‌ ಕೊಹ್ಲಿ ಶತಕದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, ಎದುರಾಳಿ ಕೋಲ್ಕತಾ ನೈಟ್‌ ರೈಡರ್ಸ್‌ ಎದುರು 6 ವಿಕೆಟ್‌ಗಳ ಸುಲಭ ಗೆಲುವು ಪಡೆಯಿತು. ಆ ಮೂಲಕ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಪುನಃ ಅಗ್ರ ಸ್ಥಾನಕ್ಕೆ ಮರಳಿತು ಹಾಗೂ ಪ್ಲೇಆಫ್ಸ್‌ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಇನ್ನು ಸೋತ ಕೆಕೆಆರ್‌ಗೆ ನಾಕೌಟ್‌ ಹಾದಿ ಕಠಿಣವಾಗಿದೆ.

RCB vs KKR ಪಂದ್ಯದಲ್ಲಿ ಕಣಕ್ಕೆ ಇಳಿಯುವ ಮೂಲಕ ಎಂಎಸ್‌ ಧೋನಿ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

IPL 2026: ಎಂಎಸ್‌ ಧೋನಿ ದಾಖಲೆ ಮುರಿದ ವಿರಾಟ್‌ ಕೊಹ್ಲಿ!

ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದ ಆರ್‌ಸಿಬಿ ಪ್ಲೇಯಿಂಗ್‌ XIನಲ್ಲಿ ಕಾಣಿಸಿಕೊಳ್ಳುವ ಮೂಲಕ ವಿರಾಟ್‌ ಕೊಹ್ಲಿ ನೂತನ ದಾಖಲೆಯನ್ನು ಬರೆದಿದ್ದಾರೆ. ಅವರು ಐಪಿಎಲ್‌ ಟೂರ್ನಿಯಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ ಎನಿಸಿಕೊಳ್ಳುವ ಮೂಲಕ ಎಂಎಸ್‌ ಧೋನಿ ಹಾಗೂ ರೋಹಿತ್‌ ಶರ್ಮಾ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

RCB vs KKR: ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು!

IPL 2026: ಕೆಕೆಆರ್ ಎದುರು ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡ ಆರ್‌ಸಿಬಿ!

RCB vs KKR Match Toss, Playing XI: ರಾಯ್ಪುರದ ಶಾಹೀದ್‌ ವೀರ್‌ ನಾರಾಯಣ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 57ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳು ಕಾದಾಟ ನಡೆಸುತ್ತಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಆರ್‌ಸಿಬಿ ಬೌಲಿಂಗ್ ಆರಿಸಿಕೊಂಡಿದೆ.

IPL 2026: ಪ್ಲೇಆಫ್ಸ್‌ಗೆ ತಲುಪಲು ಎದುರು ನೋಡುತ್ತಿರುವ ತಂಡಗಳಿಗೆ ಎಚ್ಚರಿಕೆ ನೀಡಿದ ಮೊಹಮ್ಮದ್‌ ಕೈಫ್‌!

IPL 2026: ಪ್ಲೇಆಫ್ಸ್‌ ಮೇಲೆ ಕಣ್ಣಿಟ್ಟಿರುವ ತಂಡಗಳಿಗೆ ಕೈಫ್‌ ವಾರ್ನಿಂಗ್‌!

ಪ್ರಸ್ತುತ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ನಿರ್ಣಾಯಕ ಹಂತಕ್ಕೆ ತಲುಪಿದ್ದು, ಎಂಟು ತಂಡಗಳ ನಡುವೆ ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಭಾರಿ ಪೈಪೋಟಿ ನಡೆಯುತ್ತಿದೆ. ಇದರ ನಡುವೆ ಭಾರತ ತಂಡದ ಮಾಜಿ ಬ್ಯಾಟ್ಸ್‌ಮನ್‌ ಮೊಹಮ್ಮದ್‌ ಕೈಫ್‌, ಅಂತಿಮ ನಾಲ್ಕರ ರೇಸ್‌ನಲ್ಲಿರುವ ತಂಡಗಳ ಎಚ್ಚರಿಕೆಯನ್ನು ನೀಡಿದ್ದಾರೆ.

IPL 2026: ವಿರಾಟ್‌ ಕೊಹ್ಲಿ ಅಲ್ಲವೇ ಅಲ್ಲ, ಈ ಸಲ ಆರೆಂಜ್‌ ಕ್ಯಾಪ್‌ ಗೆಲ್ಲಬಲ್ಲ ಬ್ಯಾಟರ್‌ ಆರಿಸಿದ ಗ್ರೇಮ್‌ ಸ್ಮಿತ್‌!

ಆರೆಂಜ್‌ ಕ್ಯಾಪ್‌ ಗೆಲ್ಲಬಲ್ಲ ಆಟಗಾರನನ್ನು ಆರಿಸಿದ ಗ್ರೇಮ್‌ ಸ್ಮಿತ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ನಿರ್ಣಾಯಕ ಹಂತಕ್ಕೆ ತಲುಪಿದೆ. ಇದೀಗ ಎಂಟು ತಂಡಗಳ ನಡುವೆ ಅಗ್ರ ನಾಲ್ಕರ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದೆ. ಇದರ ನಡುವೆ ಆರೆಂಜ್‌ ಕ್ಯಾಪ್‌ಗೂ ಕೂಡ ಬ್ಯಾಟ್ಸ್‌ಮನ್‌ಗಳ ನಡುವೆ ಫೈಟ್‌ ನಡೆಯುತ್ತಿದೆ. ಅಂದ ಹಾಗೆ ಈ ಬಾರಿ ಆರೆಂಜ್‌ ಕ್ಯಾಪ್‌ ಗೆಲ್ಲಬಲ್ಲ ಬ್ಯಾಟ್ಸ್‌ಮನ್‌ ಯಾರೆಂದು ದಕ್ಷಿಣ ಆಫ್ರಿಕಾ ದಿಗ್ಗಜ ಗ್ರೇಮ್‌ ಸ್ಮಿತ್‌ ಅಭಿಪ್ರಾಯಪಟ್ಟಿದ್ದಾರೆ.

IPL 2026: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಲ್ಲಿ ಕರ್ನಾಟಕ ಆಲ್‌ರೌಂಡರ್‌ ಮ್ಯಾಕ್ನೀಲ್ ನೊರೊನ್ಹಾಗೆ ಅವಕಾಶ!

ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಸೇರ್ಪಡೆಯಾದ ಕನ್ನಡಿಗ ಮ್ಯಾಕ್ನೀಲ್ ನೊರೊನ್ಹಾ!

ಮುಂಬೈ ಇಂಡಿಯನ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ರಾಮಕೃಷ್ಣ ಘೋಷ್‌ ಅವರ ಸ್ಥಾನಕ್ಕೆ ಕರ್ನಾಟಕ ಆಲ್‌ರೌಂಡರ್‌ ಮ್ಯಾಕ್ನೀಲ್‌ ನೊರೊನ್ಹಾ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಸಿಎಸ್‌ಕೆ ತಂಡ ತನ್ನ ಅಧಿಕೃತ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ ಪ್ರಕಟಿಸಿದೆ.

RCB vs KKR: ಫಾರ್ಮ್‌ ಕಂಡುಕೊಳ್ಳಲು ಜಿತೇಶ್‌ ಶರ್ಮಾಗೆ ಮಹತ್ವದ ಸಲಹೆ ನೀಡಿದ ಅಂಬಾಟಿ ರಾಯುಡು!

IPL 2026: ಫಾರ್ಮ್‌ ಕಂಡುಕೊಳ್ಳಲು ಜಿತೇಶ್‌ ಶರ್ಮಾಗೆ ಸಲಹೆ ನೀಡಿದ ರಾಯುಡು!

RCB vs KKR: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಜಿತೇಶ್‌ ಶರ್ಮಾಗೆ ಫಾರ್ಮ್‌ ಕಂಡುಕೊಳ್ಳಲು ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ಆಟಗಾರ ಅಂಬಾಟಿ ರಾಯುಡು ಮಹತ್ವದ ಸಲಹೆಯನ್ನು ನೀಡಿದ್ದಾರೆ.

‌IPL 2026: 500 ರನ್‌ಗಳ ಮೂಲಕ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಸಾಯಿ ಸುದರ್ಶನ್!

500 ರನ್‌ಗಳ ಮೂಲಕ ವಿರಾಟ್‌ ಕೊಹ್ಲಿ ದಾಖಲೆ ಮುರಿದ ಸಾಯಿ ಸುದರ್ಶನ್‌!

ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 2016ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಬಳಿಕ ಗುಜರಾತ್‌ ಟೈಟನ್ಸ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಸಾಯಿ ಸುದರ್ಶನ್‌ ಅವರು 500 ರನ್‌ಗಳನ್ನು ಪೂರ್ಣಗೊಳಿಸಿದರು. ಆ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.

GT vs SRH: ಗುಜರಾತ್‌ ಟೈಟನ್ಸ್‌ ಬೌಲರ್‌ಗಳಿಗೆ ಸುಲಭ ತುತ್ತಾದ ಸನ್‌ರೈಸರ್ಸ್‌ ಹೈದರಾಬಾದ್‌!

ಗುಜರಾತ್‌ ಟೈಟನ್ಸ್‌ಗೆ ಸುಲಭ ತುತ್ತಾದ ಸನ್‌ರೈಸರ್ಸ್‌ ಹೈದರಾಬಾದ್‌!

GT vs SRH Match Highlights: ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗಗಳಲ್ಲಿ ಅಧಿಕಾರಯುತ ಪ್ರದರ್ಶನವನ್ನು ತೋರಿದ ಗುಜರಾತ್‌ ಟೈಟನ್ಸ್‌ ತಂಡ, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 82 ರನ್‌ಗಳ ಭಾರಿ ಅಂತರದಲ್ಲಿ ಗೆದ್ದು ಬೀಗಿತು. ಈ ಗೆಲುವಿನ ಬಳಿಕ ಜಿಟಿ ಟೂರ್ನಿಯ ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ.

ವಿನೇಶ ಫೋಗಟ್‌ಗೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿ: ಪಿಎಂ ಮೋದಿಗೆ ಸಾಕ್ಷಿ ಮಲಿಕ್‌ ಮನವಿ!

ವಿನೇಶ್‌ ಫೋಗಟ್‌ಗೆ ಟ್ರಯಲ್ಸ್‌ನಲ್ಲಿ ಅವಕಾಶ ನೀಡಿ: ಸಾಕ್ಷಿ ಮಲಿಕ್

ಉತ್ತರ ಪ್ರದೇಶದ ಗೊಂಡಾದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಷ್ಟ್ರೀಯ ಓಪನ್ ಶ್ರೇಯಾಂಕ ಕುಸ್ತಿ ಟೂರ್ನಿಯಲ್ಲಿ ಭಾಗವಹಿಸಲಿ ವಿನೇಶ್‌ ಫೋಗಟ್‌ಗೆ ಅವಕಾಶ ಕಲ್ಪಿಸಬೇಕೆಂದು ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್‌, ಪ್ರಧಾನಿ ನರೇಂದ್ರ ಮೋದಿ ಹಾಗೂ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ವಿಡಿಯೊದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ವಿನೇಶ್‌ ಫೋಗಟ್‌ ಅವರು ಸದ್ಯ ನಿಷೇಧದ ಶಿಕ್ಷೆಗೆ ಗುರಿಯಾಗಿದ್ದಾರೆ.

IPL 2026:  ಸತತ 4 ಪಂದ್ಯ ಗೆದ್ದಿರುವ ಕೆಕೆಆರ್‌ ಬಗ್ಗೆ ಸಂಜಯ್‌ ಬಾಂಗರ್‌ ದೊಡ್ಡ ಹೇಳಿಕೆ!

ಸತತ 4 ಪಂದ್ಯ ಗೆದ್ದಿರುವ ಕೆಕೆಆರ್‌ ಬಗ್ಗೆ ಬಾಂಗರ್‌ ದೊಡ್ಡ ಹೇಳಿಕೆ!

ಪ್ರಸ್ತುತ ನಡೆಯುತ್ತಿರುವ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯು ನಿರ್ಣಾಯಕ ಹಂತಕ್ಕೆ ತಲುಪಿದ್ದು, ಪ್ಲೇಆಫ್ಸ್‌ಗೆ ಅರ್ಹತೆ ಪಡೆಯಲು ಎಂಟು ತಂಡಗಳ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ. ಇದರ ನಡುವೆ ಮಾಜಿ ಕ್ರಿಕೆಟಿಗ ಸಂಜಯ್‌ ಬಾಂಗರ್‌, ಕೋಲ್ಕತಾ ನೈಟ್‌ ರೈಡರ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳ ಬಗ್ಗೆ ದೊಡ್ಡ ಹೇಳಿಕೆಯನ್ನು ನೀಡಿದ್ದಾರೆ.

RCB vs KKR ಪಂದ್ಯದಲ್ಲಿ ಫಿಲ್‌ ಸಾಲ್ಟ್‌ ಆಡ್ತಾರಾ? ಸ್ಟಾರ್‌ ಬ್ಯಾಟರ್‌ ಬಗ್ಗೆ ಬಿಗ್‌ ಅಪ್‌ಡೇಟ್‌!

RCB vs KKR ಪಂದ್ಯದಲ್ಲಿ ಫಿಲ್‌ ಸಾಲ್ಟ್‌ ಆಡ್ತಾರಾ? ಇಲ್ಲಿದೆ ಮಾಹಿತಿ..

RCB vs KKR: ಫಿಲ್‌ ಸಾಲ್ಟ್‌ ಅವರ ಅನುಪಸ್ಥಿತಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಬಲವಾಗಿ ಕಾಡುತ್ತಿದೆ. ಗಾಯದಿಂದಾಗಿ ಕಳೆದ ಕೆಲ ಪಂದ್ಯಗಳನ್ನು ಕಳೆದುಕೊಂಡಿದ್ದ ಅವರು, ತವರು ನಾಡಿನಿಂದ ಆರ್‌ಸಿಬಿಗೆ ಕ್ಯಾಂಪ್‌ಗೆ ಮರಳಿದ್ದಾರೆಂದು ಹೇಳಲಾಗುತ್ತಿದೆ. ಮೇ 13 ರಂದು ಕೋಲ್ಕತಾ ನೈಟ್‌ ರೈಡರ್ಸ್ ನಡೆಯುವ ಪಂದ್ಯದಲ್ಲಿ ಅವರು ಆಡುವ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ.

RCB vs KKR: ʻವಿರಾಟ್‌ ಕೊಹ್ಲಿಗೆ ಪ್ಲ್ಯಾನ್‌ ರೆಡಿ ಇದೆʼ-ಆರ್‌ಸಿಬಿಗೆ ಶೇನ್‌ ವಾಟ್ಸನ್‌ ವಾರ್ನಿಂಗ್‌!

ವಿರಾಟ್‌ ಕೊಹ್ಲಿಯನ್ನು ಔಟ್‌ ಮಾಡುತ್ತೇವೆʼ: ಶೇನ್‌ ವಾಟ್ಸನ್‌ ಎಚ್ಚರಿಕೆ!

IPL 2026: ರಾಯ್ಪುರದಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ಧದ ಪಂದ್ಯಕ್ಕೂ ಮುನ್ನ ವಿರಾಟ್‌ ಕೊಹ್ಲಿಯನ್ನು ನಿಯಂತ್ರಿಸಲು ವಿಶೇಷ ಯೋಜನೆ ರೂಪಿಸಲಾಗಿದೆ ಎಂದು ಕೋಲ್ಕತಾ ನೈಟ್‌ ರೈಡರ್ಸ್‌ ತಂಡದ ಸಹಾಯಕ ಕೋಚ್‌ ಶೇನ್‌ ವಾಟ್ಸನ್‌ ತಿಳಿಸಿದ್ದಾರೆ. ಕಳೆದ ಎರಡು ಪಂದ್ಯಗಳಲ್ಲಿ ಕೊಹ್ಲಿ ಸತತವಾಗಿ ಡಕ್‌ಔಟ್‌ ಆಗಿದ್ದರು.

RCB vs KKR ಪಂದ್ಯಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಬಲಿಷ್ಠ ಪ್ಲೇಯಿಂಗ್‌ XI ವಿವರ!

IPL 2026: KKR ಪಂದ್ಯಕ್ಕೆ RCB ಬಲಿಷ್ಠ ಪ್ಲೇಯಿಂಗ್‌ XI ವಿವರ!

RCBʼs Strongest Playimg XI: ಮುಂಬೈ ಇಂಡಿಯನ್ಸ್‌ ವಿರುದ್ಧ ಕಠಿಣ ಹೋರಾಟ ನಡೆಸಿ ಗೆಲುವು ಪಡೆಯುವ ಮೂಲಕ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ, 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪ್ಲೇಆಫ್ಸ್‌ಗೆ ಸನಿಹವಾಗಿದೆ. ಬುಧವಾರ ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧ ಆರ್‌ಸಿಬಿ ಅಂತಿಮ ನಾಲ್ಕರಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

IPL 2026: ಮುಂಬೈ ಇಂಡಿಯನ್ಸ್‌ಗೆ ನೂತನ ನಾಯಕನನ್ನು ಸೂಚಿಸಿದ ಸಂಜಯ್‌ ಮಾಂಜ್ರೇಕರ್‌!

ಮುಂಬೈ ಇಂಡಿಯನ್ಸ್‌ಗೆ ನೂತನ ನಾಯಕನನ್ನು ಸೂಚಿಸಿದ ಮಾಂಜ್ರೇಕರ್‌!

2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡ ಸತತ ವೈಫಲ್ಯ ಅನುಭವಿಸುವ ಮೂಲಕ ಪ್ಲೇಆಫ್ಸ್‌ ರೇಸ್‌ನಿಂದ ಹೊರಬಿದ್ದಿದೆ. ಈ ಹಿನ್ನೆಲೆಯಲಿ ಮುಂಬೈ ತಂಡದ ನಾಯಕತ್ವವನ್ನು ಜಸ್‌ಪ್ರೀತ್‌ ಬುಮ್ರಾಗೆ ನೀಡಬೇಕೆಂದು ಮಾಜಿ ಕ್ರಿಕೆಟಿಗ ಸಂಜಯ್‌ ಮಾಂಜ್ರೇಕರ್‌ ಸಲಹೆ ನೀಡಿದ್ದಾರೆ.

IPL 2026: ಕ್ಯಾಮೆರಾಗಳ ಮುಂದೆ ವಿರಾಟ್‌ ಕೊಹ್ಲಿ ನಟನೆ?  ಸಂಜಯ್‌ ಮಾಂಜ್ರೇಕರ್‌ ಅಚ್ಚರಿ ಹೇಳಿಕೆ!

ಕ್ಯಾಮೆರಾಗಳ ಮುಂದೆ ವಿರಾಟ್‌ ಕೊಹ್ಲಿ ನಟನೆ? ಮಾಂಜ್ರೇಕರ್‌ ಹೇಳಿಕೆ!

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರಾಟ್‌ ಕೊಹ್ಲಿ ತಮ್ಮ 37ನೇ ವಯಸ್ಸಿನಲ್ಲಿಯೂ ಇನ್ನೂ ಅದೇ ಉತ್ಸಾಹ, ಜ್ವಾಲೆ ಮತ್ತು ಶಕ್ತಿಯನ್ನು ಉಳಿಸಿಕೊಂಡಿರುವುದು ತಮಗೆ ಅಚ್ಚರಿ ತಂದಿದೆ ಎಂದು ಮಾಜಿ ಕ್ರಿಕೆಟಿಗ ಸಂಜಯ್‌ ಮಾಂಜ್ರೇಕರ್ ಹೇಳಿದ್ದಾರೆ. ಕೊಹ್ಲಿಯ ಭಾವನಾತ್ಮಕ ತೀವ್ರತೆ ಹಾಗೂ ಟೀಕೆಗಳಿಗೆ ಸ್ಪಂದಿಸುವ ಸ್ವಭಾವವೇ ಹಲವು ವರ್ಷಗಳಿಂದ ಅವರ ಆಟಕ್ಕೆ ಪ್ರೇರಣೆಯಾಗಿದ್ದು, ಅದೇ ಮನೋಭಾವ ಅವರನ್ನು ನಿರಂತರವಾಗಿ ಉನ್ನತ ಮಟ್ಟದಲ್ಲಿ ಪ್ರದರ್ಶನ ನೀಡುವಂತೆ ಮಾಡುತ್ತಿದೆ ಎಂದು ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

DC vs PBKS: ಪಂಜಾಬ್‌ ಕಿಂಗ್ಸ್‌ಗೆ ಸತತ ನಾಲ್ಕನೇ ಸೋಲು, ಜಯದೊಂದಿಗೆ ಡೆಲ್ಲಿ ಪ್ಲೇಆಫ್ಸ್‌ ಆಸೆ ಜೀವಂತ!

IPL 2026: ಪಂಜಾಬ್‌ ಎದುರು ಗೆದ್ದ ಡೆಲ್ಲಿ ಪ್ಲೇಆಫ್ಸ್‌ ಆಸೆ ಜೀವಂತ!

DC vs PBKS Match Highlights: ಡೇವಿಡ್‌ ಮಿಲ್ಲರ್‌ ಹಾಗೂ ಅಕ್ಷರ್‌ ಪಟೇಲ್‌ ಅವರ ನಿರ್ಣಾಯಕ ಅರ್ಧಶತಕಗಳ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ, ಎದುರಾಳಿ ಪಂಜಾಬ್‌ ಕಿಂಗ್ಸ್‌ ಎದುರು 3 ವಿಕೆಟ್‌ಗಳ ಗೆಲುವು ಪಡೆಯಿತು. ಆ ಮೂಲಕ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪ್ಲೇಆಫ್ಸ್‌ ಆಸೆಯನ್ನು ಜೀವಂತವಾಗಿಸಿಕೊಂಡಿದೆ. ಇನ್ನು ಪಂಜಾಬ್‌ ತಂಡದ ಸೋಲಿನ ಸರಪಳಿ ಮುಂದುವರಿದಿದೆ.

DC vs PBKS: ಪಂದ್ಯದ ಮೊದಲ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿ ವಿಶಷ ದಾಖಲೆ ಬರೆದ ಪ್ರಿಯಾಂಶ್‌ ಆರ್ಯ!

ಮೊದಲ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿ ದಾಖಲೆ ಬರೆದ ಪ್ರಿಯಾಂಶ್‌ ಆರ್ಯ!

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದ ಮೊದಲ ಎಸೆತದಲ್ಲಿಯೇ ಪ್ರಿಯಾಂಶ್‌ ಆರ್ಯ ಸಿಕ್ಸರ್‌ ಬಾರಿಸುವ ಮೂಲಕ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಐಪಿಎಲ್‌ ಟೂರ್ನಿಯಲ್ಲಿ ವಿವಿಧ ಪಂದ್ಯಗಳ ಮೊಟ್ಟ ಎಸೆತದಲ್ಲಿಯೇ ಸಿಕ್ಸರ್‌ ಬಾರಿಸಿದ ಮೊದಲ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ICC ODI Ranking: ವಾರ್ಷಿಕ ನವೀಕರಣದ ಬಳಿಕ ಅಗ್ರ ಸ್ಥಾನವನ್ನು ಉಳಿಸಿಕೊಂಡ ಭಾರತ ತಂಡ!

ICC ODI Ranking: ಅಗ್ರ ಸ್ಥಾನವನ್ನು ಉಳಿಸಿಕೊಂಡ ಭಾರತ!

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯು ವಾರ್ಷಿಕ ಒಡಿಐ ತಂಡಗಳ ಶ್ರೇಯಾಂಕವನ್ನು ನವೀಕರಣಗೊಳಿಸಿದ ಬಳಿಕವೂ ಶುಭಮನ್‌ ಗಿಲ್‌ ನಾಯಕತ್ವದ ಭಾರತ ತಂಡ ಅಗ್ರ ಸ್ಥಾನವನ್ನು ಕಾಯ್ದುಕೊಂಡಿದೆ. ಭಾರತ ತಂಡ 118 ಅಂಕಗಳನ್ನು ಹೊಂದಿದ್ದರೆ, ಐದು ಅಂಕಗಳನ್ನು ಕಡಿಮೆ ಹೊಂದಿರುವ ನ್ಯೂಜಿಲೆಂಡ್‌ ತಂಡ ಎರಡನೇ ಸ್ಥಾನದಲ್ಲಿದೆ.

ʻವಿರಾಟ್‌ ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರೆ ದುಡ್ಡು ಕೊಡ್ತಿವಿʼ: ಶಾಕಿಂಗ್‌ ಹೇಳಿಕೆ ಕೊಟ್ಟ ಜರ್ಮನ್‌ ಮಾಡೆಲ್‌!

ʻಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡುವಂತೆ ಆಮಿಷʼ: ಜರ್ಮನ್‌ ಮಾಡೆಲ್‌!

ಜರ್ಮನ್‌ ಮಾಡೆಲ್‌ ಲಿಝ್‌ಲ್ಯಾಝ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಮಾಜಿ ನಾಯಕ ಹಾಗೂ ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ ವಿರುದ್ಧ ರೂಪಿಸಿದ್ದ ಷಡ್ಯಂತ್ರವೊಂದನ್ನು ರಿವೀಲ್‌ ಮಾಡಿದ್ದಾರೆ. ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರೆ ನಿಮಗೆ ಹಣ ನೀಡುತ್ತೇವೆಂದು ಆಮಿಷ ಬಂದಿದ್ದ ಸಂಗತಿಯನ್ನು ಬೆಳಕಿಗೆ ತಂದಿದ್ದಾರೆ.

ʻಕೃಣಾಲ್‌ ಪಾಂಡ್ಯ ಸಾಯಲಿ ಬಿಡಿʼ ಎಂದಿದ್ದ ಎಸ್‌ ಬದ್ರಿನಾಥ್‌ ಕಾಮೆಂಟರಿ ಪ್ಯಾನೆಲ್‌ನಿಂದ ವಜಾ?

ಸ್ಟಾರ್‌ ಸ್ಪೋರ್ಟ್ಸ್‌ ಕಾಮೆಂಟರಿ ಪ್ಯಾನಲ್‌ನಿಂದ ಬದ್ರಿನಾಥ್‌ ವಜಾ?

ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಸಾಲಿನ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯದಲ್ಲಿ ಕಾಮೆಂಟರಿ ವೇಳೆ ಮಾಡುವ ವೇಳೆ ಚೆನ್ನೈ ಸೂಪರ್‌ ಕಿಂಗ್ಸ್‌ ಮಾಜಿ ಬ್ಯಾಟ್ಸ್‌ಮನ್‌ ಎಸ್‌ ಬದ್ರಿನಾಥ್‌ ಅವರು ನೀಡಿದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗಾಗಿ ಅವರನ್ನು ಸ್ಟಾರ್‌ ಸ್ಪೋರ್ಟ್ಸ್‌ ಕಾಮೆಂಟರಿ ಪ್ಯಾನಲ್‌ನಿಂದ ವಜಾಗೊಳಿಸುವ ಸಾಧ್ಯತೆ ಇದೆ.

RCB vs MI ಪಂದ್ಯದ ವೇಳೆ ಮಧ್ಯದ ಬೆರಳು ತೋರಿಸಿದ ಟಿಮ್‌ ಡೇವಿಡ್‌ ಬಿತ್ತು ಭಾರಿ ದಂಡ!

RCB vs MI ಪಂದ್ಯದಲ್ಲಿ ಮಧ್ಯದ ಬೆರಳು ತೋರಿಸಿದ ಟಿಮ್‌ ಡೇವಿಡ್‌ಗೆ ದಂಡ!

IPL 2026: ಮುಂಬೈ ಇಂಡಿಯನ್ಸ್‌ ವಿರುದ್ಧದ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಮಧ್ಯದ ಬೆರಳು ತೋರಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಟಿಮ್‌ ಡೇವಿಡ್‌ಗೆ ಭಾರಿ ದಂಡವನ್ನು ವಿಧಿಸಲಾಗಿದೆ. ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇಕಡಾ 30 ರಷ್ಟು ದಂಡವನ್ನು ವಿಧಿಸಲಾಗಿದೆ.

Bhuvneshwar Kumar: ಆರ್‌ಸಿಬಿ ವೇಗಿಗೆ ಭಾರತ ತಂಡದಲ್ಲಿ ಸ್ಥಾನ ನೀಡಬೇಕೆಂದ ಆರ್‌ ಅಶ್ವಿನ್‌!

ಭಾರತ ತಂಡದಲ್ಲಿ ಭುವನೇಶ್ವರ್‌ ಕುಮಾರ್‌ಗೆ ಸ್ಥಾನ ನೀಡಬೇಕೆಂದ ಅಶ್ವಿನ್!

IPL 2026: ಮುಂಬೈ ಇಂಡಿಯನ್ಸ್‌ ವಿರುದ್ಧ 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಭುವನೇಶ್ವರ್‌ ಕುಮಾರ್‌ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಎರಡೂ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ತೋರಿದರು. ಬೌಲಿಂಗ್‌ನಲ್ಲಿ 4 ವಿಕೆಟ್‌ ಹಾಗೂ ಬ್ಯಾಟಿಂಗ್‌ನಲ್ಲಿ ಒಂದು ಸಿರ್ಣಾಯಕ ಸಿಕ್ಸರ್‌ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಸ್ಪಿನ್‌ ದಿಗ್ಗಜ ರವಿಚಂದ್ರನ್‌ ಅಶ್ವಿನ್‌ ಅವರು, ಭುವನೇಶ್ವರ್‌ ಕುಮಾರ್‌ಗೆ ಭಾರತ ತಂಡದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

RCB vs MI: ʻ4 ವಿಕೆಟ್‌ ಪಡೆದಿದ್ದು ವಿಶೇಷ ಎನ್ನಿಸಲಿಲ್ಲ, ಸಿಕ್ಸರ್‌ ಅನ್ನು ಆನಂದಿಸಿದ್ದೇನೆʼ-ಭುವನೇಶ್ವರ್‌ ಕುಮಾರ್‌

ಆರ್‌ಸಿಬಿ ತಂಡವನ್ನು ಗೆಲ್ಲಿಸಿದ ಬಳಿಕ ಭುವನೇಶ್ವರ್‌ ಕುಮಾರ್‌ ಹೇಳಿದ್ದೇನು?

Bhuvneshwar Kumar: 2026ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಮುಂಬೈ ಇಂಡಿಯನ್ಸ್‌ ವಿರುದ್ಧದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಎರಡು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ 4 ವಿಕೆಟ್‌ ಹಾಗೂ ಎರಡು ಎಸೆತಗಳಲ್ಲಿ 7 ರನ್‌ ಗಳಿಸಿ ಆರ್‌ಸಿಬಿಯನ್ನು ಗೆಲ್ಲಿಸಿದರು. ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Loading...