ಕಾಂಗ್ರೆಸ್ ಭವನ ಟ್ರಸ್ಟ್ಗೆ ಕಾನೂನು ಬಾಹಿರವಾಗಿ ಜಾಗ ನೀಡಿದ ಆರೋಪ
Tumkur News: ತುಮಕೂರು ನಗರದ ಮರಳೂರು ಗ್ರಾಮದ ಸರ್ವೆ ನಂಬರ್ 87/1 ಮತ್ತು 87/2ರಲ್ಲಿ ಒಟ್ಟು 4 ಎಕೆರೆ ಜಮೀನಿನಲ್ಲಿ ಸಾರ್ವಜನಿಕ ಉದ್ದೇಶಕ್ಕೆ ಮೀಸಲಾಗಿದ್ದ ನಗರಪಾಲಿಕೆಯ ಎರಡು ಎಕರೆ ಜಮೀನನ್ನು ರಾಜ್ಯ ಸರ್ಕಾರ ಕಾನೂನು ಬಾಹೀರವಾಗಿ ಕಾಂಗ್ರೆಸ್ ಭವನ ಟ್ರಸ್ಟ್ಗೆ ಮಂಜೂರು ಮಾಡಿದೆ. ಪೋಡಿ, ಸ್ಕೆಚ್ ಆಗದ ಜಮೀನನ್ನು ನಿಯಮ ಉಲ್ಲಂಘಿಸಿ ಮಂಜೂರಾತಿ ಪತ್ರವನ್ನು ನೋಂದಣಿ ಮಾಡಲಾಗಿದೆ ಎಂದು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷ ಜಿ.ಎಸ್.ಬಸವರಾಜು ಆರೋಪಿಸಿದ್ದಾರೆ.