ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Siddalinga Swamy

[email protected]

Articles
ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಕಲಬುರಗಿಯಲ್ಲಿ ಅಭಿಮಾನಿಗಳ ಬಳಗದಿಂದ ಪ್ರತಿಭಟನೆ

ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ತೆರವುಗೊಳಿಸಿರುವ ಸ್ಥಳದಲ್ಲಿಯೇ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಮರಳಿ ಪ್ರತಿಷ್ಠಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಮಂಗಳೂರು ಕಾರಾಗೃಹದ ಬಳಿ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ

Priyank Kharge: ಕಾರಾಗೃಹದ ಭದ್ರತೆ ಅತ್ಯಂತ ಮುಖ್ಯವಾಗಿರುವಂತೆಯೇ, ಕಾರಾಗೃಹದ ಸುತ್ತಮುತ್ತ ವಾಸಿಸುವ ಸಾರ್ವಜನಿಕರಿಗೆ ಮತ್ತು ಇತರ ಬಳಕೆದಾರರಿಗೆ ಮೊಬೈಲ್ ಸಂಪರ್ಕ ಸೇವೆಯಲ್ಲಿ ಅನಗತ್ಯ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದೂ ಅಗತ್ಯ. ಈ ಎರಡೂ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ನಿಟ್ಟಿನಲ್ಲಿ ತಾಂತ್ರಿಕ ಪರಿಹಾರಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವಯಂ ರಕ್ತದಾನ; ಯುವ ಸಮುದಾಯಕ್ಕೆ ಪ್ರೇರಣೆಯಾದ ಶಿಕ್ಷಣ ಸಚಿವ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವಯಂ ರಕ್ತದಾನ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಆಯೋಜಿಸಿದ್ದ "ಸೇವಾ ಸಂಕಲ್ಪ ಅಭಿಯಾನ"ದ ಭಾಗವಾಗಿ ಬಿಜೆಪಿ ಯುವ ಮೋರ್ಚಾವು ಮಹಾಮನೆ ಮನಗುಂಡಿಯಲ್ಲಿ ಗುರುವಾರ ಆಯೋಜಿಸಿದ್ಧ ರಕ್ತದಾನ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವತಃ ರಕ್ತದಾನ ಮಾಡುವ ಮೂಲಕವೇ ಚಾಲನೆ ನೀಡಿದ್ದಾರೆ.

ಹಾವೇರಿಯ ಸೈಬರ್ ಠಾಣೆಯಲ್ಲಿ ಭಾವೈಕ್ಯತೆಯ ಗಣೇಶ ಚತುರ್ಥಿ; ಗಣಪತಿ ಪ್ರತಿಷ್ಠಾಪಿಸಿ, ಪೂಜೆಯಲ್ಲಿ ಪಾಲ್ಗೊಂಡ ಡಿಎಸ್‌ಪಿ ಸಮೀವುಲ್ಲಾ

ಹಾವೇರಿಯ ಸೈಬರ್ ಠಾಣೆಯಲ್ಲಿ ಭಾವೈಕ್ಯತೆಯ ಗಣಪತಿ

Haveri News: ಹಾವೇರಿ ನಗರದ ಹಳೆ ಕೋರ್ಟ್ ಆವರಣದಲ್ಲಿರುವ ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್‌ಪಿ ಕೆ. ಸಮೀವುಲ್ಲಾ, ಠಾಣೆಯಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಿ, ತಾವೇ ಖುದ್ದಾಗಿ ಪೂಜಾ ಕಾರ್ಯದಲ್ಲಿ ಭಾಗವಹಿಸುವ ಮೂಲಕ ಸೌಹಾರ್ದತೆಯ ಸಂದೇಶ ಮೆರೆದಿದ್ದಾರೆ. ಗುರುವಾರ ವಿಶೇಷ ಸತ್ಯನಾರಾಯಣ ಪೂಜೆ ಹಮ್ಮಿಕೊಂಡು ಕುಟುಂಬ ಸಮೇತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಪೂಜಾ ಕಾರ್ಯ ನೆರವೇರಿಸಿದರು.

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್; ತಳಮಟ್ಟದಿಂದಲೇ ಶೈಕ್ಷಣಿಕ ಗುಣಮಟ್ಟ ವೃದ್ಧಿಗೆ ಸಚಿವ  ಪ್ರಲ್ಹಾದ್‌ ಜೋಶಿ ಮಹತ್ತರ ಹೆಜ್ಜೆ

ಪ್ರಾಥಮಿಕ ಶಾಲೆ ಶಿಕ್ಷಕರಿಗಿನ್ನು 6 ತಿಂಗಳ ವಿಶೇಷ ಬ್ರಿಡ್ಜ್ ಕೋರ್ಸ್

Pralhad Joshi: ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಮಹತ್ತರ ಹೆಜ್ಜೆ ಇಟ್ಟಿರುವ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ, ಪ್ರಾಥಮಿಕ ಶಿಕ್ಷಕರ ಶಿಕ್ಷಣದಲ್ಲಿ ಆರು ತಿಂಗಳ ಪ್ರಮಾಣಪತ್ರ (ಬ್ರಿಡ್ಜ್) ಕೋರ್ಸ್‌ಗೆ ಚಾಲನೆ ನೀಡಿದ್ದಾರೆ.

ನೀರು ಯಾವಾಗ ಕುಡಿಯಬೇಕು, ಯಾವಾಗ ಕುಡಿಯಬಾರದು? ರಾಘವೇಶ್ವರ ಭಾರತೀ ಶ್ರೀ ಸಲಹೆ ಇಲ್ಲಿದೆ

ಅತಿಯಾದ ನೀರು ಸೇವನೆಯೂ ಅನಾರೋಗ್ಯಕ್ಕೆ ದಾರಿ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀವನದಲ್ಲಿ ಯಾವುದು ಹೆಚ್ಚು ಅಥವಾ ಕಡಿಮೆ ಆದರೂ ಅನರ್ಥವೇ ಆಗುವುದು. ಹಾಗೆಯೇ ಹೆಚ್ಚಿನ ನೀರು ಹಾಗೂ ಕಡಿಮೆ ನೀರು ಸೇವನೆಯಿಂದ ಅನರ್ಥವೇ ಆಗುತ್ತದೆ. ನೀರನ್ನು ಹೆಚ್ಚಾಗಿ ಕುಡಿದಾಗ ಸರಿಯಾಗಿ ಸೇವಿಸಿದ ಆಹಾರವೂ ಸಮರ್ಪಕವಾಗಿ ಜೀರ್ಣವಾಗುವುದಿಲ್ಲ. ಹೆಚ್ಚಾಗಿ ನೀರು ಕುಡಿಯುವುದು ಎಲ್ಲ ರೀತಿಯ ಅನಾರೋಗ್ಯಕ್ಕೆ ಮೂಲವಾಗಬಹುದು. ಅಸಮರ್ಪಕವಾಗಿ ಸೇವಿಸಿದ ಔಷಧ, ಆಹಾರದಂತೆ ನೀರಿನಿಂದಲೂ ಅಡ್ಡಪರಿಣಾಮವಿದ್ದು, ನೀರನ್ನು ಸಮರ್ಪಕವಾಗಿ ಸೇವಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಹಾವೇರಿ ಅನ್ನದಾತರಿಗೆ‌ ಕೊಂಚ ರಿಲೀಫ್; ಬರಪೀಡಿತ ಜಿಲ್ಲೆಯಾಗಿ ಘೋಷಣೆ: ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ ರುದ್ರಪ್ಪ ಲಮಾಣಿ

ಹಾವೇರಿ ಬರಪೀಡಿತ ಜಿಲ್ಲೆ ಘೋಷಣೆ

Haveri News: ಹಾವೇರಿ ಜಿಲ್ಲೆಯನ್ನು ಅಧಿಕೃತವಾಗಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಜಿಲ್ಲೆಯ ರೈತರ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಸಕ್ಕರೆ ಮತ್ತು ಜವಳಿ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ಸಾಲದ ಶೂಲಕ್ಕೆ ಮತ್ತೊಂದು ಬಲಿ; ಬರದಿಂದ ಕೈಕೊಟ್ಟ ಬೆಳೆ: ಹಾವೇರಿಯಲ್ಲಿ ರೈತ ಆತ್ಮಹತ್ಯೆ

ಹಾವೇರಿಯಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Haveri News: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಒಂದು ವಾರದ ಹಿಂದೆ ಸಾಲ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಗುರುವಾರ ಮಧ್ಯಾಹ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗಾಣಗಾಪುರದ ಶ್ರೀ ದತ್ತಾತ್ರೇಯ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್

ಗಾಣಗಾಪುರದ ಶ್ರೀ ದತ್ತಾತ್ರೇಯ ಸನ್ನಿಧಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ

CM DK Shivakumar: ಗಾಣಗಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಈಗಾಗಲೇ ಸೂಕ್ತ ಯೋಜನೆಗಳನ್ನು ಘೋಷಿಸಿದೆ. ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮನವಿಯಂತೆ ಹಂತ- ಹಂತವಾಗಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ  ಸಂಸ್ಮರಣೋತ್ಸವ; ಪ್ರಶಸ್ತಿ ಪ್ರದಾನ, ಅಭಿನಂದನಾ ಸಮಾರಂಭ

ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಸಂಸ್ಮರಣೋತ್ಸವ

Chikkaballapur News: ಪರಮಪೂಜ್ಯ ಜಗದ್ಗುರು ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಸಂಸ್ಮರಣೋತ್ಸವದ ಅಂಗವಾಗಿ ಚಿಕ್ಕಬಳ್ಳಾಪುರದ ಎಸ್.ಜೆ.ಸಿ.ಐ.ಟಿ. ಕಾಲೇಜು ಸಭಾಂಗಣದಲ್ಲಿ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಸಾಧಕರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭ ಜರುಗಿತು.

Tiptur News: ಜಿಲ್ಲಾಮಟ್ಟದ ಕ್ರೀಡಾಕೂಟ; ತಿಪಟೂರು ತಾಲೂಕು ವಿದ್ಯಾರ್ಥಿಗಳ ಉತ್ತಮ ಸಾಧನೆ

ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತಿಪಟೂರು ವಿದ್ಯಾರ್ಥಿಗಳ ಸಾಧನೆ

Tiptur News: ತಿಪಟೂರು ತಾಲೂಕಿನ ಶ್ರೀ ವಿದ್ಯಾಪೀಠ ಎಸ್‌ವಿಪಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರಮಾಣಪತ್ರ, ಪದಕ ಹಾಗೂ ಕಪ್‌ಗಳನ್ನು ನೀಡಿ ಗೌರವಿಸಿ ಅಭಿನಂದಿಸಲಾಯಿತು.

Chikkanayakanahalli News: ಅಬಕಾರಿ ಇಲಾಖೆ ಕಾರ್ಯಾಚರಣೆಯ ಮಾಹಿತಿ ಚಾಲಕನಿಂದಲೇ ಸೋರಿಕೆ; ಅಧಿಕಾರಿ ಅಸಹಾಯಕತೆ

ಅಬಕಾರಿ ಇಲಾಖೆ ಕಾರ್ಯಾಚರಣೆಯ ಮಾಹಿತಿ ಚಾಲಕನಿಂದಲೇ ಸೋರಿಕೆ

Chikkanayakanahalli News: ಎತ್ತಿನಹೊಳೆ ಯೋಜನೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಅ.21ರೊಳಗೆ ಟ್ರಯಲ್ ನಡೆಸಲಾಗುವುದು ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ತಿಳಿಸಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ: ರಾಘವೇಶ್ವರ ಭಾರತೀ ಶ್ರೀ

ಉಷಃಪಾನ ಹಾಗೂ ನಾಸಾಪಾನದಿಂದ ಶತಾಯುಷಿ ಜೀವನ ಸಾಧ್ಯ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಉಷಃಪಾನವನ್ನು ಒಂದನೇ ವಯಸ್ಸಿಗೇ ಆರಂಭಿಸಬಹುದಾಗಿದ್ದು, ಹಂತಹಂತವಾಗಿ ನೀರಿನ ಸೇವನೆಯನ್ನು ಹೆಚ್ಚಿಸುತ್ತಾ ಹೋಗಬೇಕು. ಹದಿನಾರನೇಯ ವಯಸ್ಸಿಗೆ ಬರುವಾಗ ಅದು ಎಂಟು ಬೊಗಸೆ ಆಗುವಂತೆ ಹೊಂದಿಸಿಕೊಳ್ಳುಬೇಕು. ಈ ಕ್ರಿಯೆಗಾಗಿ ನೀರನ್ನು ರಾತ್ರಿ ಶೇಖರಿಸಿಡುವಾಗ ತಾಮ್ರ ಅಥವಾ ಯಾವುದಾದರೂ ಉತ್ತಮ ಪಾತ್ರೆಯಲ್ಲಿಯೇ ನೀರನ್ನು ಶೇಖರಿಸಿಡಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

Bengaluru Infrastructure Crisis: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಮಾಜಿ ಪಿಡಬ್ಲ್ಯೂಡಿ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ ವಿನೂತನ ಸಲಹೆ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಡಾ. ಕೃಷ್ಣ ರೆಡ್ಡಿ ವಿನೂತನ ಸಲಹೆ

Dr Krishna Reddy: ನಾವು ನಿನ್ನೆಯ ಬೆಂಗಳೂರಿನ ಬಗ್ಗೆ ಅಲ್ಲ, 2050ರ ಬೆಂಗಳೂರಿನ ಬಗ್ಗೆ ಯೋಜನೆ ರೂಪಿಸಬೇಕು. ಬೆಂಗಳೂರಿನ ದಟ್ಟಣೆಯನ್ನು ಮ್ಯಾಜಿಕ್ ನಂತೆ ಸರಿಪಡಿಸುವ ಯಾವುದೇ ಅದ್ಭುತ ಯೋಜನೆಯಿಲ್ಲ. ಆದರೆ ಒಂದು ಪರಿಹಾರವಿದೆ -ಸಮಗ್ರ ಯೋಜನೆ, ದೊಡ್ಡ ಪ್ರಮಾಣದ ಮೂಲಭೂತ ಸೌಕರ್ಯ ಮತ್ತು ಅದನ್ನು ಕಾರ್ಯಗತಗೊಳಿಸುವ ರಾಜಕೀಯ ಇಚ್ಛಾಶಕ್ತಿ. ನಾವು ಇಂದಿನ ನಿರ್ಧಾರಗಳನ್ನು ಮುಂದೂಡಿದರೆ, ಮುಂದಿನ ಪೀಳಿಗೆಗೆ ನಾವು ದೊಡ್ಡ ಬಿಕ್ಕಟ್ಟನ್ನು ಬಿಟ್ಟುಹೋದಂತೆ ಆಗುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಮಾಜಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್‌ಡಿಸಿಎಲ್) ಮಾಜಿ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಎಸ್.ಕೃಷ್ಣ ರೆಡ್ಡಿ ತಿಳಿಸಿದ್ದಾರೆ.

ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ರಿಲಯನ್ಸ್ ಫೌಂಡೇಶನ್‌ನಿಂದ 25 ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

ತಿರುಪತಿ ದೇವಸ್ಥಾನಕ್ಕೆ ರಿಲಯನ್ಸ್ ಫೌಂಡೇಶನ್‌ನಿಂದ 25 ಎಲೆಕ್ಟ್ರಿಕ್ ಬಸ್‌

Reliance Foundation: ರಿಲಯನ್ಸ್ ಫೌಂಡೇಶನ್ ವತಿಯಿಂದ ತಿರುಮಲ ತಿರುಪತಿ ದೇವಸ್ಥಾನ ಮಂಡಳಿಗೆ (ಟಿಟಿಡಿ) 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳು ಹಾಗೂ ಪ್ರತ್ಯೇಕ ಇವಿ ಚಾರ್ಜಿಂಗ್ ಕೇಂದ್ರವನ್ನು ಹಸ್ತಾಂತರಿಸಿದೆ. ಕಳೆದ ಜೂನ್ 2026ರಲ್ಲಿ ತಿರುಮಲಕ್ಕೆ ಭೇಟಿ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ, ಈ ಬಸ್‌ಗಳನ್ನು ನೀಡುವುದಾಗಿ ನೀಡಿದ್ದ ಭರವಸೆಯನ್ನು ಈಗ ಈಡೇರಿಸಿದ್ದಾರೆ.

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಜಿಲ್ಲಾಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್‌ ಸೂಚನೆ

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು: ಡಿಸಿಎಂ

Dr G Parameshwara: ರಾಜ್ಯದಾದ್ಯಂತ 43.81 ಲಕ್ಷ ಮತದಾರರ ಮ್ಯಾಪಿಂಗ್ ಆಗಿಲ್ಲ. ಹೆಸರು ತಿದ್ದುಪಡಿ ಸೇರಿದಂತೆ ಇನ್ನಿತರ ವಿಚಾರಗಳಿಗೆ ನೋಟಿಸ್ ನೀಡಲಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ ಸೂಚನೆ ನೀಡಿದ್ದಾರೆ.

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ: ರಾಘವೇಶ್ವರ ಭಾರತೀ ಶ್ರೀ

ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಉತ್ತಮವಾದದ್ದನ್ನು ಕೆಡಿಸಿ, ಹಾನಿಕಾರಕವಾದುದನ್ನು ಸಮಾಜಕ್ಕೆ ಕೊಡುವುದೇ ಕಲಿಯುಗದ ಲಕ್ಷಣ. ಪ್ಲಾಸ್ಟಿಕ್, ಕೃತಕ ವಸ್ತುಗಳು ಅತ್ಯಂತ ಹಾನಿಕಾರಕ ಎಂದು ವಿಜ್ಞಾನವೇ ಒಪ್ಪಿಕೊಂಡಿದ್ದರೂ ಅವುಗಳ ಉತ್ಪಾದನೆ ಮತ್ತು ಬಳಕೆ ನಿಲ್ಲುತ್ತಿಲ್ಲ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

ಅಮೆರಿಕದ ಸೆಮಿಕಂಡಕ್ಟರ್ ಚಿಪ್ ತಯಾರಿಕಾ ಕಂಪನಿ ಅಪ್ಲೈಡ್ ಮೆಟೀರಿಯಲ್ಸ್‌ನಿಂದ ರಾಜ್ಯದಲ್ಲಿ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್‌

ಅಪ್ಲೈಡ್ ಮೆಟೀರಿಯಲ್ಸ್‌ನಿಂದ 3,600 ಕೋಟಿ ರುಪಾಯಿ ಹೂಡಿಕೆ: ಎಂ.ಬಿ. ಪಾಟೀಲ್‌

MB Patil: ಅಪ್ಲೈಡ್ ಮೆಟೀರಿಯಲ್ಸ್ ಕಂಪನಿಯು ರಾಜ್ಯದಲ್ಲಿ ಮುಂದಿನ 10 ವರ್ಷಗಳಲ್ಲಿ 3,600 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ. ಬೆಂಗಳೂರು ಸಿಗ್ನೇಚರ್ ಬಿಝಿನೆಸ್ ಪಾರ್ಕ್ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಯೋಜನೆಯಿಂದ 1,000 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.

ವೈಟ್‌ಫೀಲ್ಡ್‌ನಲ್ಲಿ ವಿಶ್ವ ದರ್ಜೆಯ ಬಹುಪಯೋಗಿ ವಸ್ತು ಪ್ರದರ್ಶನ ಸಭಾಂಗಣ, ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ: ಎಂ.ಬಿ.ಪಾಟೀಲ್‌

ವೈಟ್‌ಫೀಲ್ಡ್‌ನಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್ ಅಭಿವೃದ್ಧಿ

MB Patil: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಕರ್ನಾಟಕ ವ್ಯಾಪಾರ ಉತ್ತೇಜನಾ ಸಂಸ್ಥೆ (ಕೆಟಿಪಿಒ) ಹೊಂದಿರುವ 48.35 ಎಕರೆ ಪ್ರದೇಶದಲ್ಲಿ ವಿಶ್ವ ದರ್ಜೆಯ ಕನ್ವೆನ್ಷನ್ ಸೆಂಟರ್, ಸಭಾಂಗಣ, ಪ್ರದರ್ಶನಾಂಗಣ ಇತ್ಯಾದಿಗಳಿರುವ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

Koratagere News: ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

ಕೊರಟಗೆರೆಯಲ್ಲಿ ನೂತನ ಬಿಜೆಪಿ ಕಚೇರಿ ಉದ್ಘಾಟನೆ

Koratagere News: ಕೊರಟಗೆರೆ ಪಟ್ಟಣದಲ್ಲಿ ಮಂಗಳವಾರ ಬಿಜೆಪಿ ಪಕ್ಷದ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್, ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿ ಎಂದು ಕರೆ ನೀಡಿದ್ದಾರೆ.

ಸಂಸ್ಕೃತಿ, ಪರಂಪರೆ ಮುಂದುವರಿಸಲು ಮುಂದಿನ ಪೀಳಿಗೆಗೆ ಹಿರಿಯರ ಮಾರ್ಗದರ್ಶನ ಅಗತ್ಯ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಸಂಸ್ಕೃತಿ, ಪರಂಪರೆ ಮುಂದುವರಿಸಲು ಹಿರಿಯರ ಮಾರ್ಗದರ್ಶನ ಅಗತ್ಯ

Madhugiri News: ಇಂದಿನ ಆಧುನಿಕ ಯುಗದಲ್ಲಿ ಯುವಪೀಳಿಗೆಯನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ, ಧಾರ್ಮಿಕ ಮೌಲ್ಯಗಳನ್ನು ಕಲಿಸುವ ಹಾಗೂ ಸತ್ಸಂಪ್ರದಾಯಗಳನ್ನು ಮುಂದುವರಿಸುವ ಗುರುತರ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಸಿದ್ಧರಬೆಟ್ಟ ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

BESCOM Online Services: ಸಾಫ್ಟ್‌ವೇರ್ ಅಳವಡಿಕೆ: ಬೆಸ್ಕಾಂನ 20 ಪಟ್ಟಣಗಳಲ್ಲಿ ಸೆ.17ರವರೆಗೆ ಆನ್‌ಲೈನ್ ಸೇವೆ ಅಲಭ್ಯ

ಬೆಸ್ಕಾಂನ 20 ಪಟ್ಟಣಗಳಲ್ಲಿ ಸೆ.17ರವರೆಗೆ ಆನ್‌ಲೈನ್ ಸೇವೆ ಅಲಭ್ಯ

BESCOM: ಐಪಿಡಿಎಸ್ ಐಟಿ ಅಪ್ಲಿಕೇಶನ್ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ವಿವಿಧ ಪಟ್ಟಣ ಪ್ರದೇಶಗಳಲ್ಲಿ ಸೆ.15ರಂದು ಮಂಗಳವಾರ ಮಧ್ಯರಾತ್ರಿಯಿಂದ ಸೆ.17ರ ಮಧ್ಯರಾತ್ರಿವರೆಗೆ ಬೆಸ್ಕಾಂನ ಆನ್‌ಲೈನ್ ಸೇವೆಗಳು ಲಭ್ಯ ವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಎಲ್‌ ನಿನೋ ಎಫೆಕ್ಟ್‌; ಹಾವೇರಿಯಲ್ಲಿ ಮುಂಗಾರು ಮಳೆ ಕೊರತೆಯಿಂದ ಕೃಷಿ, ಕುಡಿಯುವ ನೀರಿಗೂ ಸಂಕಷ್ಟ!

ಹಾವೇರಿಯಲ್ಲಿ ಮಳೆ ಕೊರತೆ: ಕೃಷಿ, ಕುಡಿಯುವ ನೀರಿಗೂ ಸಂಕಷ್ಟ!

Haveri News: ಮುಂಗಾರು ಮಳೆ ಕೊರತೆ ಹಿನ್ನಲೆ ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕುವ ಆತಂಕ ಎದುರಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ 8ರವರೆಗೆ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.45.41ರಷ್ಟು ಮಳೆ ಕೊರತೆಯಾಗಿದ್ದು, ಸೆಪ್ಟೆಂಬರ್‌ 1ರಿಂದ 8ರವರೆಗೆ ಶೇ.71.84ರಷ್ಟು ಮಳೆ ಅಭಾವ ದಾಖಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ, ಕ್ಷೇತ್ರದ ಜನರ ಕುಶಲೋಪರಿ ವಿಚಾರಣೆ

ಕನಕಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ; ಗಣೇಶೋತ್ಸವದಲ್ಲಿ ಭಾಗಿ

CM DK Shivakumar: ಕನಕಪುರ ತಾಲೂಕಿನ ಚಿಕ್ಕೇಗೌಡನದೊಡ್ಡಿಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ 10ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ವಿಘ್ನ ವಿನಾಶಕ ಶ್ರೀ ಗಣೇಶನಿಗೆ ಸಿಎಂ ಡಿ.ಕೆ. ಶಿವಕುಮಾರ್‌, ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.

Loading...