ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Sushmitha Jain

[email protected]

Articles
ಭಯೋತ್ಪಾದಕರ ಸ್ವರ್ಗ ಪಾಕಿಸ್ತಾನದಲ್ಲೇ ಲಷ್ಕರ್-ಎ-ತೊಯ್ಬಾ ಉಗ್ರರ ಸರಣಿ ಹತ್ಯೆ; ಅಪರಿಚಿತರ ದಾಳಿಗೆ 30ಕ್ಕೂ ಹೆಚ್ಚು ಸದಸ್ಯರ ಸಾವು

ಲಷ್ಕರ್ ಉಗ್ರರ ಸರಣಿ ಹತ್ಯೆ ಬಹಿರಂಗ

Lashkar-e-Taiba: ಲಷ್ಕರ್-ಎ-ತೊಯ್ಬಾದ ಹಿರಿಯ ಉಗ್ರ ರಿಜ್ವಾನ್ ಹನೀಫ್ ವಿಡಿಯೊವೊಂದರಲ್ಲಿ 3–4 ವರ್ಷಗಳಲ್ಲಿ ಪಾಕಿಸ್ತಾನ ಹಾಗೂ ಪಿಒಕೆ ಪ್ರದೇಶಗಳಲ್ಲಿ ಸಂಘಟನೆಯ 30ಕ್ಕೂ ಹೆಚ್ಚು ಸದಸ್ಯರು ಅಪರಿಚಿತ ದಾಳಿಕೋರರಿಂದ ಹತ್ಯೆಯಾಗಿದ್ದಾರೆ ಎಂದು ಹೇಳಿದ್ದಾನೆ. ಈ ಹತ್ಯೆಗಳ ಹಿಂದೆ ಭಾರತದ ಕೈವಾಡವಿದೆ ಎಂದು ಆತ ಆರೋಪಿಸಿದ್ದರೂ, ಭಾರತ ಈ ಆರೋಪವನ್ನು ತಳ್ಳಿಹಾಕಿದೆ.

ಟಿಎಂಸಿಗೆ ಮತ್ತೊಂದು ಆಘಾತ; ಪಕ್ಷಕ್ಕೆ ನೇತಾಜಿ ಕುಟುಂಬದ ಚಂದ್ರಕುಮಾರ್ ಬೋಸ್ ಗುಡ್‌ಬೈ

ನೇತಾಜಿ ಕುಟುಂಬದ ಕುಡಿ ಚಂದ್ರಕುಮಾರ್ ಬೋಸ್ ಟಿಎಂಸಿಗೆ ಗುಡ್‌ಬೈ

Chandra Kumar Bose: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದ ಸದಸ್ಯ ಹಾಗೂ ಮಾಜಿ ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 2023ರಲ್ಲಿ ಬಿಜೆಪಿ ತೊರೆದ ಬಳಿಕ ಟಿಎಂಸಿ ಸೇರಿದ್ದ ಅವರು, ಇದೀಗ ಮತ್ತೆ ರಾಜಕೀಯ ಬದಲಾವಣೆಯ ಹೆಜ್ಜೆ ಇಟ್ಟಿದ್ದಾರೆ.

ಬಿಜೆಪಿಯ 30 ವರ್ಷಗಳ ಭದ್ರಕೋಟೆ ಪುಡಿ ಪುಡಿ ಮಾಡಿದ ಪ್ರಶಾಂತ್ ಕಿಶೋರ್; ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್‌ಗೆ ಐತಿಹಾಸಿಕ ಗೆಲುವು

ಬಿಜೆಪಿ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

Prashant Kishor: ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಬಿಜೆಪಿ ಭದ್ರಕೋಟೆಯನ್ನು ಭೇದಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಅವರು, ಮೂರು ತಿಂಗಳಲ್ಲಿ ಬಂಕಿಪುರದಲ್ಲಿ ಗೋಚರಿಸುವ ಬದಲಾವಣೆ ತರುವುದಾಗಿ ಭರವಸೆ ನೀಡಿದ್ದಾರೆ. ಈ ಗೆಲುವು ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಎಂದೇ ಪರಿಗಣಿಸಲಾಗಿದೆ.

ಕಾಂಗ್ರೆಸ್‌ ನಾಯಕ ನಾನಾ ಪಟೋಲೆ ಪಾದಪೂಜೆ ಮಾಡಿದ ಕಾರ್ಯಕರ್ತರು: ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ; ವಿಡಿಯೊ ವೈರಲ್‌

ಕಾಂಗ್ರೆಸ್‌ ನಾಯಕ ನಾನಾ ಪಟೋಲೆ ಪಾದಪೂಜೆಗೆ ಬಿಜೆಪಿ ಟೀಕೆ

Congress Leader Nana Patole: ಗುರು ಪೂರ್ಣಿಮೆಯ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ನಾನಾ ಪಟೋಲೆ ಅವರ ಪಾದಗಳನ್ನು ಇಬ್ಬರು ಕಾರ್ಯಕರ್ತರು ತೊಳೆದು ಪೂಜೆ ಸಲ್ಲಿಸಿದ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದ್ದು, ಇದನ್ನು ಕಾಂಗ್ರೆಸ್ ಸಂಸ್ಕೃತಿಯ ಪ್ರತಿಬಿಂಬ ಎಂದು ಆರೋಪಿಸಿದೆ. ಪಟೋಲೆ ಈ ಬಗ್ಗೆ ಸ್ಪಷ್ಟನೆ ನೀಡಿ ಪಾದಪೂಜೆ ಮಾಡಿದವರು ತಮ್ಮ ಕುಟುಂಬದ ಸದಸ್ಯರು ಹಾಗೂ ಗುರು ಪೂರ್ಣಿಮೆಯ ಅಂಗವಾಗಿ ಗೌರವ ಸೂಚಕವಾಗಿ ಈ ಆಚರಣೆ ನಡೆಸಿದ್ದಾರೆ ಎಂದಿದ್ದಾರೆ.

ಜಾರ್ಜಿಯಾ ಮೆಲೋನಿಗೆ ನರೇಂದ್ರ ಮೋದಿ ಚಾಕೊಲೇಟ್‌ ಗಿಫ್ಟ್‌ ಕೊಟ್ಟ ಎಫೆಕ್ಟ್‌: ಇಟಲಿ ಸೊಗಡಿನಲ್ಲಿ ಪಾರ್ಲೆ Melody ಕ್ಯಾಂಡಿ; Melodi ಟ್ರೆಂಡ್‌ಗೆ ಸಿಹಿ ಟ್ವಿಸ್ಟ್

ಇಟಲಿ ಸೊಗಡಿನಲ್ಲಿ ಮೆಲೋಡಿ: ಹೊಸ ರುಚಿಗೆ ನೆಟ್ಟಿಗರ ಮೆಚ್ಚುಗೆ

India-Italy Friendship: ಭಾರತ–ಇಟಲಿ ಸ್ನೇಹವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಪಾರ್ಲೆ ಸಂಸ್ಥೆ ತಿರಾಮಿಸು ರುಚಿಯ ಸೀಮಿತ ಆವೃತ್ತಿಯ ಮೆಲೋಡಿ ಕ್ಯಾಂಡಿಯನ್ನು ಬಿಡುಗಡೆ ಮಾಡಿದೆ. ಸೋಷಿಯಲ್‌ ಮೀಡಿಯಾದಲ್ಲಿ ಜನಪ್ರಿಯವಾಗಿದ್ದ ʼಮೆಲೋಡಿʼ ಟ್ರೆಂಡ್‌ಗೆ ಸೃಜನಾತ್ಮಕ ಸ್ಪರ್ಶ ನೀಡಿರುವ ಈ ಹೊಸ ಪ್ರಯತ್ನ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ಹೊಸ ರುಚಿಯ ಮೆಲೋಡಿ ಬಿಡುಗಡೆಯಾದ ಕೂಡಲೇ ಭಾರಿ ಚರ್ಚೆಗೆ ಕಾರಣವಾಗಿದ್ದು, ಬ್ರ್ಯಾಂಡ್‌ನ ಹೊಸತನದ ಮಾರಾಟ ತಂತ್ರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Astro Tips: ಆಷಾಢ ಮಾಸದಲ್ಲಿ ಸೂರ್ಯನಿಗೆ ಅರ್ಘ್ಯ ಅರ್ಪಿಸುವುದರಿಂದ ಏನೆಲ್ಲಾ ಲಾಭ? ಧಾರ್ಮಿಕ ನಂಬಿಕೆ ಹಾಗೂ ಆರೋಗ್ಯದ ಮಹತ್ವ ತಿಳಿಯಿರಿ!

ಆಷಾಢ ಮಾಸದಲ್ಲಿ ಸೂರ್ಯಾರಾಧನೆ ಏಕೆ ವಿಶೇಷ?

ಆಷಾಢ ಮಾಸದಲ್ಲಿ ಸೂರ್ಯನಿಗೆ ಅರ್ಘ್ಯ ಅರ್ಪಿಸುವುದು ಹಿಂದೂ ಸಂಪ್ರದಾಯದಲ್ಲಿ ವಿಶೇಷ ಮಹತ್ವ ಪಡೆದ ಆಚರಣೆಯಾಗಿದೆ. ಇದರಿಂದ ಅಕ್ಷಯ ಪುಣ್ಯ, ಆತ್ಮವಿಶ್ವಾಸ, ಉದ್ಯೋಗದಲ್ಲಿ ಪ್ರಗತಿ ಹಾಗೂ ಮನಸ್ಸಿಗೆ ಶಾಂತಿ ದೊರೆಯುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಜೊತೆಗೆ ಬೆಳಗಿನ ಸೂರ್ಯನ ಕಿರಣಗಳು ವಿಟಮಿನ್–ಡಿ ಒದಗಿಸಿ ರೋಗನಿರೋಧಕ ಶಕ್ತಿ, ಮೂಳೆಗಳ ಆರೋಗ್ಯ ಮತ್ತು ದೈಹಿಕ ಕ್ಷೇಮವನ್ನು ಉತ್ತಮಗೊಳಿಸಲು ಸಹಕಾರಿಯಾಗುತ್ತವೆ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ.

Chanakya Niti: ಮನುಷ್ಯನಿಗೆ ಅತ್ಯಂತ ನೋವು ನೀಡುವ 3 ಜೀವನ ಸನ್ನಿವೇಶಗಳು ಇವು ಎನ್ನುತ್ತಾರೆ ಚಾಣಕ್ಯ

ಈ 3 ದುಃಖಗಳು ಜೀವನವನ್ನು ಬದಲಿಸುತ್ತವೆ..!

ಆಚಾರ್ಯ ಚಾಣಕ್ಯರ ಪ್ರಕಾರ, ವೃದ್ಧಾಪ್ಯದಲ್ಲಿ ಜೀವನ ಸಂಗಾತಿಯನ್ನು ಕಳೆದುಕೊಳ್ಳುವುದು, ಪರರ ಆಶ್ರಯದಲ್ಲಿ ಬದುಕುವುದು ಹಾಗೂ ಶ್ರಮದಿಂದ ಗಳಿಸಿದ ಹಣ ಶತ್ರುಗಳ ಕೈಗೆ ಸಿಲುಕುವುದು ಮನುಷ್ಯನ ಜೀವನದ ಅತ್ಯಂತ ನೋವಿನ ಸಂದರ್ಭಗಳಾಗಿವೆ. ಆದರೆ ಇಂತಹ ಕಷ್ಟಗಳು ಎದುರಾದಾಗ ಧೈರ್ಯ, ತಾಳ್ಮೆ ಮತ್ತು ಆತ್ಮವಿಶ್ವಾಸವನ್ನು ಕಳೆದುಕೊಳ್ಳದೆ ಮುನ್ನಡೆಯಬೇಕು ಎಂಬುದೇ ಚಾಣಕ್ಯ ನೀತಿಯ ಪ್ರಮುಖ ಸಂದೇಶವಾಗಿದೆ.

ಬೆಳಗಿನ ವಾಕಿಂಗ್‌ ಅಥವಾ ಸಂಜೆ ವಾಕಿಂಗ್‌; ಆರೋಗ್ಯಕ್ಕೆ ಯಾವುದು ಹೆಚ್ಚು ಉತ್ತಮ? ವೇಗದ ತೂಕ ಇಳಿಕೆಗೆ ನೆರವಾಗೋದು ಯಾವುದು?

ಬೆಳಗಿನ ನಡಿಗೆ VS ಸಂಜೆ ನಡಿಗೆ: ಆರೋಗ್ಯಕ್ಕೆ ಯಾವುದು ಉತ್ತಮ?

Morning Walk vs Evening Walk: ಪ್ರತಿದಿನ 30–45 ನಿಮಿಷಗಳ ವಾಕಿಂಗ್ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ. ಆದರೆ ಬೆಳಗ್ಗೆ ನಡೆಯುವುದು ಉತ್ತಮವೇ ಅಥವಾ ಸಂಜೆ ನಡೆಯುವುದೇ ಹೆಚ್ಚು ಲಾಭಕರವೇ ಎಂಬ ಪ್ರಶ್ನೆಗೆ ತಜ್ಞರು ಉತ್ತರ ನೀಡಿದ್ದಾರೆ. ತೂಕ ಇಳಿಕೆ, ಹೃದಯದ ಆರೋಗ್ಯ, ಉತ್ತಮ ನಿದ್ರೆ ಸೇರಿ ವಿವಿಧ ವಿಚಾರಗಳಿಗೆ ಸಂಬಂಧಿಸಿ ಎರಡೂ ಸಮಯದ ನಡಿಗೆಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.

ಬಿಹಾರದಲ್ಲೊಬ್ಬ ಬಾಹುಬಲಿ; ಗದ್ದೆಯಲ್ಲಿ ಸಿಕ್ಕ ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಪೊಲೀಸ್‌ ಠಾಣೆಗೆ ಬಂದ ಯುವಕ: ವಿಡಿಯೊ ವೈರಲ್‌

ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಪೊಲೀಸ್‌ ಠಾಣೆಗೆ ಬಂದ ಯುವಕ

Viral video: ಬಿಹಾರದ ಸುಪೌಲ್ ಜಿಲ್ಲೆಯ ಹೊಲದಲ್ಲಿ ಸಿಕ್ಕ ಬೃಹತ್ ಮೊಸಳೆಯನ್ನು ಗ್ರಾಮಸ್ಥರು ಸುರಕ್ಷಿತವಾಗಿ ಹಿಡಿದ ಬಳಿಕ, ಯುವಕನೊಬ್ಬ ಅದನ್ನು ಹೆಗಲ ಮೇಲೆ ಹೊತ್ತು ಪೊಲೀಸ್ ಠಾಣೆಗೆ ತಂದ ಘಟನೆ ವೈರಲ್ ಆಗಿದೆ. ಬಳಿಕ ಅರಣ್ಯ ಇಲಾಖೆ ಮೊಸಳೆಯನ್ನು ವಶಕ್ಕೆ ಪಡೆದು ಆರೋಗ್ಯ ತಪಾಸಣೆ ನಡೆಸಿ ಕೋಸಿ ನದಿಗೆ ಸುರಕ್ಷಿತವಾಗಿ ಬಿಡುಗಡೆ ಮಾಡಿದೆ. ವನ್ಯಜೀವಿಗಳು ಕಂಡುಬಂದರೆ ಸಾರ್ವಜನಿಕರು ಸ್ವತಃ ಹಿಡಿಯಲು ಮುಂದಾಗದೆ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸ್ವಾಮಿ ವಿವೇಕಾನಂದರ ತತ್ತ್ವ ಉಲ್ಲೇಖಿಸಿ ದೇಶದ ಯುವ ಜನತೆಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ವಿವರಿಸಿದ ಪ್ರಧಾನಿ ನರೇಂದ್ರ ಮೋದಿ

ಮೈಸೂರಿನಲ್ಲಿ ಯುವಶಕ್ತಿ, ಶಿಕ್ಷಣಕ್ಕೆ ಪ್ರಧಾನಿ ಮೋದಿ ಒತ್ತು

Narendra modi: ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ 'ವಿವೇಕ ಸ್ಮಾರಕ' ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಯುವಜನತೆ, ಶಿಕ್ಷಣ ಮತ್ತು ಸಮಾನ ಅವಕಾಶಗಳ ಮಹತ್ವವನ್ನು ಒತ್ತಿ ಹೇಳಿದರು. ಮಾತೃಭಾಷೆಯಲ್ಲಿನ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ, ಮಹಿಳೆಯರಿಗೆ ಎನ್‌ಡಿಎ ಪ್ರವೇಶ, ಸ್ಟಾರ್ಟ್‌ಅಪ್‌ಗಳು ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಯುವಕರ ಸಾಧನೆಗಳನ್ನು ಶ್ಲಾಘಿಸಿ, ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಸಕ್ರಿಯ ಭಾಗವಹಿಸುವಿಕೆಗೆ ಕರೆ ನೀಡಿದರು.

ʼʼ12 ವರ್ಷವಾದರೂ ಸರ್ವಾಧಿಕಾರಿಯಾಗಲು ಮೋದಿ ವಿಫಲʼʼ: ಪ್ರಧಾನಿ ವಿರುದ್ಧ ತಿರುಗಿ ಬಿದ್ರಾ ಶೆಹಜಾದ್ ಪೂನಾವಾಲಾ?

ಮೋದಿ ಸರ್ವಾಧಿಕಾರಿಯಾಗಲು ವಿಫಲ: ಪೂನಾವಾಲಾ ವ್ಯಂಗ್ಯ

Shehzad Poonawalla: ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಟೀಕಿಸುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ, "12 ವರ್ಷವಾದರೂ ಮೋದಿ ಸರ್ವಾಧಿಕಾರಿಯಾಗಲು ವಿಫಲರಾಗಿದ್ದಾರೆ" ಎಂದು ವ್ಯಂಗ್ಯವಾಡಿದ್ದಾರೆ. ನೀಟ್ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳನ್ನು ಕ್ಷಮಿಸುವಂತೆ ಮೋದಿ ಮಾಡಿದ ಮನವಿಯನ್ನೂ ಅವರು ಉಲ್ಲೇಖಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಹೈಬ್ರಿಡ್‌ ಉಗ್ರರು ಸಕ್ರಿಯ; ದಾಳಿಯ ನಂತರ ಸಾಮಾನ್ಯ ಜನರ ನಡುವೆ ಬೆರೆತು ತಪ್ಪಿಸಿಕೊಳ್ಳುವ ತಂತ್ರ

ಇಬ್ಬರು ವಲಸೆ ಕಾರ್ಮಿಕರ ಹತ್ಯೆ, ಲತೀಫ್ ಭಟ್ ಮೇಲೆ ಶಂಕೆ

Latif Bhat: ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಈ ದಾಳಿಯ ಹಿಂದೆ ಲಷ್ಕರ್-ಎ-ತೊಯ್ಬಾ ಕಮಾಂಡರ್ ಲತೀಫ್ ಭಟ್ ಹಾಗೂ ಆತನ ಸಹಚರರ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರಿಸಿವೆ.

2 ಗಂಟೆಗಳಲ್ಲಿ 250 ಕಿಲೋ ಮೀಟರ್... ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಮೊದಲ ಬಾರಿಗೆ ದಾನಿಯ ಹೃದಯ ಸಾಗಾಟ: ರೈಲ್ವೆಯ ಇತಿಹಾಸದಲ್ಲಿ ಸಾಧನೆ

ವಂದೇ ಭಾರತ್‌ನಲ್ಲಿ ಮೊದಲ ಬಾರಿಗೆ ಜೀವಂತ ಹೃದಯ ಸಾಗಾಟ

Vande Bharat Express: ಭಾರತೀಯ ರೈಲ್ವೆ ಮೊದಲ ಬಾರಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಮೂಲಕ ಗುಜರಾತ್‌ನಿಂದ ಸೂರತ್‌ನಿಂದ ಅಹಮದಾಬಾದ್‌ಗೆ ಜೀವಂತ ದಾನಿಯ ಹೃದಯವನ್ನು ಯಶಸ್ವಿಯಾಗಿ ಸಾಗಿಸಿತು. ಹಸಿರು ಮಾರ್ಗದ ನೆರವಿನಿಂದ ಹೃದಯವನ್ನು ನಿಗದಿತ ಸಮಯಕ್ಕೆ ಆಸ್ಪತ್ರೆಗೆ ತಲುಪಿಸಿ, ಹೃದಯ ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯ ಜೀವ ಉಳಿಸಲಾಯಿತು.

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ! ಇಂದಿನಿಂದ IRCTCನಲ್ಲಿ ಹೆಚ್ಚುವರಿ ಲಗೇಜ್ ಆನ್‌ಲೈನ್ ಬುಕ್ಕಿಂಗ್ ಸೌಲಭ್ಯ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್; IRCTC ಲಗೇಜ್‌ ನಿಯಮದಲ್ಲಿ ಬದಲಾವಣೆ

ಭಾರತೀಯ ರೈಲ್ವೆ ಜುಲೈ 31ರಿಂದ ದೃಢೀಕೃತ ಮೀಸಲು ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ಹೆಚ್ಚುವರಿ ವೈಯಕ್ತಿಕ ಲಗೇಜ್ ಅನ್ನು IRCTC ಮೂಲಕವೇ ಆನ್‌ಲೈನ್‌ನಲ್ಲಿ ಬುಕ್ ಮಾಡುವ ಸೌಲಭ್ಯವನ್ನು ಆರಂಭಿಸಿದೆ. ಇದರಿಂದ ಪಾರ್ಸೆಲ್ ಕಚೇರಿಗೆ ತೆರಳಿ ಪ್ರತ್ಯೇಕವಾಗಿ ಬುಕ್ಕಿಂಗ್ ಮಾಡುವ ಅಗತ್ಯ ಕಡಿಮೆಯಾಗಲಿದ್ದು, ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದೆ.

ಐಬಿ ಅಧಿಕಾರಿ ಅಂಕಿತ್‌ ಶರ್ಮಾ ಹತ್ಯೆ ಕೇಸ್‌;  ಮಾಜಿ ಆಮ್ ಆದ್ಮಿ ಕೌನ್ಸಿಲರ್  ತಾಹಿರ್ ಹುಸೇನ್ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ಮಾಜಿ AAP ಕೌನ್ಸಿಲರ್ ತಾಹಿರ್ ಹುಸೇನ್‌ಗೆ ಜೀವಾವಧಿ ಶಿಕ್ಷೆ

Delhi Riots: 2020ರ ದೆಹಲಿ ಗಲಭೆಯ ವೇಳೆ ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣದಲ್ಲಿ ಮಾಜಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹಿರ್ ಹುಸೇನ್ ಸೇರಿದಂತೆ ಆರೋಪಿಗಳಿಗೆ ದೆಹಲಿಯ ಕರ್ಕರಡೂಮಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಕ್ರೌರ್ಯವನ್ನು ಉಲ್ಲೇಖಿಸಿದ ನ್ಯಾಯಾಲಯ, ಇದು ಅತ್ಯಂತ ಗಂಭೀರ ಅಪರಾಧ ಎಂದು ಹೇಳಿದೆ.

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾಗೆ ಸುಪ್ರೀಂ ಕೋರ್ಟ್‌ನಿಂದ  ವಿಚ್ಛೇದನ ಮಂಜೂರು

ಸುಪ್ರೀಂ ಕೋರ್ಟ್‌ನಿಂದ ಒಮರ್ ಅಬ್ದುಲ್ಲಾಗೆ ವಿಚ್ಛೇದನ ಮಂಜೂರು

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಿಗೆ ಸುಪ್ರೀಂ ಕೋರ್ಟ್ ವಿಚ್ಛೇದನ ಮಂಜೂರು ಮಾಡಿದೆ. ಪತ್ನಿ ಪಾಯಲ್ ಅಬ್ದುಲ್ಲಾ ಅವರೊಂದಿಗೆ ಮಧ್ಯಸ್ಥಿಕೆ ಮೂಲಕ ಎಲ್ಲ ವಿವಾದಗಳು ಸೌಹಾರ್ದಯುತವಾಗಿ ಇತ್ಯರ್ಥಗೊಂಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಲಾಯಿತು. 15 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ದಂಪತಿಯ ವೈವಾಹಿಕ ಸಂಬಂಧಕ್ಕೆ ಇದೀಗ ಕಾನೂನುಬದ್ಧ ಅಂತ್ಯ ದೊರೆತಿದೆ.

ಬರೋಬ್ಬರಿ 20 ವರ್ಷಗಳ ಬಳಿಕ ಕೊಲ್ಕತ್ತಾಗೆ ಮರಳಿದ ಬಾಂಗ್ಲಾ ಲೇಖಕಿ ತಸ್ಲೀಮಾ ನಸ್ರೀನ್; ಕಾರಣವೇನು?

20 ವರ್ಷಗಳ ಬಳಿಕ ಕೊಲ್ಕತ್ತಾಗೆ ಮರಳಿದ ತಸ್ಲೀಮಾ ನಸ್ರೀನ್

ಸುಮಾರು 20 ವರ್ಷಗಳ ಬಳಿಕ ದೇಶಭ್ರಷ್ಟ ಬಾಂಗ್ಲಾದೇಶ ಮೂಲದ ಲೇಖಕಿ ತಸ್ಲೀಮಾ ನಸ್ರೀನ್ ಕೊಲ್ಕತ್ತಾಗೆ ಮರಳಿದ್ದಾರೆ. 2007ರಲ್ಲಿ ವಿವಾದಾತ್ಮಕ ಆತ್ಮಕಥೆ 'ದ್ವಿಖಂಡಿತೋ' ಹಿನ್ನೆಲೆ ನಗರ ತೊರೆಯಬೇಕಾಗಿದ್ದ ಅವರು, ಮೂಲಭೂತವಾದ ವಿರೋಧಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಅವರ ಭೇಟಿ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚರ್ಚೆಗೂ ಕಾರಣವಾಗಿದೆ.

"ನನ್ನ ತಂದೆಯನ್ನು ಎಳೆದು ಹೊಡೆದರು"; ಜಂತರ್ ಮಂತರ್ ಪ್ರತಿಭಟನೆಯಲ್ಲಿ ಪೊಲೀಸರ ಮೇಲಿನ ಹಲ್ಲೆ ಬಗ್ಗೆ ಕುಟುಂಬ ಹೇಳಿದ್ದೇನು?

ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ದಾಳಿ; ಕುಟುಂಬಗಳ ಆಕ್ರೋಶ

Jantar Mantar Protest: ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯ ವೇಳೆ ಕರ್ತವ್ಯದಲ್ಲಿದ್ದ ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಘಟನೆ ಬಳಿಕ ಅವರ ಕುಟುಂಬದ ಸದಸ್ಯರು ತಮ್ಮ ನೋವು ಹಂಚಿಕೊಂಡಿದ್ದು, ಪೊಲೀಸರ ಮೇಲಿನ ಹಲ್ಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಟೀಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Astro Tips: ಆಷಾಢ ಶುಕ್ರವಾರ: ಈ ಲಕ್ಷ್ಮೀ ಮಂತ್ರಗಳನ್ನು ಜಪಿಸಿದರೆ ಧನ, ಐಶ್ವರ್ಯ ಮತ್ತು ಸೌಭಾಗ್ಯ ಲಭಿಸುತ್ತದೆ..!

ಆಷಾಢ ಶುಕ್ರವಾರ ಲಕ್ಷ್ಮೀ ಕೃಪೆಗೆ ಈ ಮಂತ್ರಗಳನ್ನು ತಪ್ಪದೇ ಜಪಿಸಿ

ಆಷಾಢ ಶುಕ್ರವಾರದಂದು ಶ್ರೀ ಮಹಾಲಕ್ಷ್ಮೀ ದೇವಿಯನ್ನು ವಿಧಿ-ವಿಧಾನದಂತೆ ಭಕ್ತಿಯಿಂದ ಪೂಜಿಸಿ, ವಿಶೇಷ ಲಕ್ಷ್ಮೀ ಮಂತ್ರಗಳನ್ನು ಜಪಿಸುವುದರಿಂದ ಧನ, ಐಶ್ವರ್ಯ, ಸೌಭಾಗ್ಯ, ಕುಟುಂಬದಲ್ಲಿ ಸುಖ-ಶಾಂತಿ ಹಾಗೂ ಸಮೃದ್ಧಿ ಲಭಿಸುತ್ತದೆ ಎಂಬುದು ಹಿಂದೂ ಧಾರ್ಮಿಕ ನಂಬಿಕೆಯಾಗಿದೆ. ಈ ದಿನ ದೇವಿಯ ಆರಾಧನೆಯಿಂದ ಆರ್ಥಿಕ ಸಂಕಷ್ಟಗಳು ದೂರವಾಗಿ, ಜೀವನದಲ್ಲಿ ಯಶಸ್ಸು, ನೆಮ್ಮದಿ ಮತ್ತು ಶುಭಫಲಗಳು ಹೆಚ್ಚುತ್ತವೆ ಎಂದು ಭಕ್ತರು ನಂಬುತ್ತಾರೆ. ಜೊತೆಗೆ, ಶುಕ್ರ ಗ್ರಹದ ದೋಷಗಳ ಪ್ರಭಾವವೂ ಕಡಿಮೆಯಾಗುತ್ತದೆ ಎಂಬ ನಂಬಿಕೆಯಿಂದ ಈ ದಿನದ ಪೂಜೆಗೆ ವಿಶೇಷ ಮಹತ್ವ ನೀಡಲಾಗುತ್ತದೆ.

ರೈತರ ಹೋರಾಟ; ಪ್ರತಿಭಟನಾಕಾರರ ಚಲಿಸುವ ಬಸ್‌ ಮುಂದೆ ನಿಂತ 'ಲೇಡಿ ಸಿಂಘಂ' ಎಸಿಪಿ ಮೋನಿಕಾ ಶುಕ್ಲಾ: ವಿಡಿಯೊ ನೋಡಿ

ರೈತರ ಪ್ರತಿಭಟನೆ ವೇಳೆ ಧೈರ್ಯ ತೋರಿದ ಎಸಿಪಿ ಮೋನಿಕಾ ಶುಕ್ಲಾ

Viral Video: ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ರೈತರ ಪ್ರತಿಭಟನೆ ವೇಳೆ ಬಸ್‌ ಮುಂದೆ ನಿಂತು ಪ್ರತಿಭಟನಾಕಾರರನ್ನು ತಡೆದ ಎಸಿಪಿ ಮೋನಿಕಾ ಶುಕ್ಲಾ ಅವರ ವಿಡಿಯೊ ವೈರಲ್ ಆಗಿದೆ. ಕರ್ತವ್ಯ ನಿರ್ವಹಣೆಯ ಭಾಗವಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಪ್ರತಿಭಟನಾಕಾರರನ್ನು ಸಂಯಮದಿಂದಲೇ ನಿಭಾಯಿಸಬೇಕು ಎಂದು ಅವರು ಹೇಳಿದ್ದಾರೆ.

ಜಾಗತಿಕ ಉದ್ವಿಗ್ನತೆ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ CCS ಸಭೆ; ಇಂಧನ ಭದ್ರತೆ ಬಗ್ಗೆ ಸಮಾಲೋಚನೆ

ಜಾಗತಿಕ ಉದ್ವಿಗ್ನತೆ: ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

West Asia Crisis: ಪಶ್ಚಿಮ ಏಷ್ಯಾದ ಉದ್ವಿಗ್ನತೆ ಮತ್ತು ಪ್ರಮುಖ ಸಮುದ್ರ ಮಾರ್ಗಗಳಲ್ಲಿನ ಅಡಚಣೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ CCS ಸಭೆಯಲ್ಲಿ ಭಾರತದ ಇಂಧನ ಭದ್ರತೆ, ರಸಗೊಬ್ಬರ ಪೂರೈಕೆ, ಹಡಗು ಸಾಗಣೆ ಹಾಗೂ ವಿದೇಶದಲ್ಲಿರುವ ಭಾರತೀಯರ ಸುರಕ್ಷತೆ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.

ಮತ್ತೆ ಬಾಲ ಬಿಚ್ಚಿದ ಚೀನಾ; ಲಡಾಖ್-ಅರುಣಾಚಲ ಪ್ರದೇಶ ಗಡಿ ಬಳಿ ಭಾರತದತ್ತ ಮುಖ ಮಾಡಿ ಜೆ-20 ಯುದ್ಧ ವಿಮಾನಗಳ ನಿಯೋಜನೆ

ಭಾರತ ಗಡಿ ಬಳಿ ಚೀನಾದ ಶಕ್ತಿ ಪ್ರದರ್ಶನ

J-20 Stealth Jets: ಭಾರತ-ಚೀನಾ ಗಡಿಯಲ್ಲಿನ LAC ಸಮೀಪ ಚೀನಾ ತನ್ನ ಅತ್ಯಾಧುನಿಕ ಜೆ-20 ಸ್ಟೆಲ್ತ್ ಯುದ್ಧ ವಿಮಾನಗಳನ್ನು ಹೋಟಾನ್ ಹಾಗೂ ಡ್ಯಾಮ್‌ಶುಂಗ್ ವಾಯುನೆಲೆಗಳಲ್ಲಿ ನಿಯೋಜಿಸಿದೆ. ಉಪಗ್ರಹ ಚಿತ್ರಗಳು ಈ ಬೆಳವಣಿಗೆಯನ್ನು ಬಹಿರಂಗಪಡಿಸಿದ್ದು, ಗಡಿಯಲ್ಲಿ ಚೀನಾದ ಸೇನಾ ಸನ್ನದ್ಧತೆ ಹೆಚ್ಚುತ್ತಿರುವುದನ್ನು ಸೂಚಿಸುತ್ತವೆ.

ಪಿಒಕೆ ಕುರಿತು ಪ್ರಕಟಿಸಿದ್ದ ಅಮೆರಿಕದ ಪತ್ರಿಕೆಗೆ ಭಾರತ ತಿರುಗೇಟು;  'ಪಾಕಿಸ್ತಾನದ ಕಾಶ್ಮೀರ' ಅಲ್ಲ, 'ಪಾಕ್‌ ಆಕ್ರಮಿತ ಕಾಶ್ಮೀರ ಎಂದು ಸ್ಪಷ್ಟನೆ

'ಪಾಕಿಸ್ತಾನದ ಕಾಶ್ಮೀರ' ಪದಪ್ರಯೋಗಕ್ಕೆ ವಿರೋಧ

ಪಿಒಕೆ ಕುರಿತು ಪ್ರಕಟಿಸಿದ ವರದಿಯಲ್ಲಿ "ಪಾಕಿಸ್ತಾನದ ಕಾಶ್ಮೀರ" ಎಂಬ ಪದಪ್ರಯೋಗ ಬಳಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. "ಪಾಕಿಸ್ತಾನ ಆಕ್ರಮಿತ ಕಾಶ್ಮೀರ" ಎಂಬುದೇ ಸರಿಯಾದ ಉಲ್ಲೇಖ ಎಂದು ಭಾರತ ಸ್ಪಷ್ಟಪಡಿಸಿದೆ. ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ದಮನದಲ್ಲಿ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ವರದಿಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಂದು ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ; ಐದು ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದ್ದೇಗೆ?

ಬೆಂಗಳೂರಿನಲ್ಲಿ ಪತ್ನಿ ಹತ್ಯೆ: ಬಿಹಾರಕ್ಕೆ ಪರಾರಿಯಾದ ಪತಿ

ಬೆಂಗಳೂರಿನ ಹೊರವಲಯದ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಹಾರ ಮೂಲದ ಮಹಿಳೆ ರೀಮಾ ಕುಮಾರಿಯನ್ನು ಪತಿ ಧೀರಜ್ ಕುಮಾರ್ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಕೊಲೆ ಮಾಡಿದ ಬಳಿಕ ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಮನೆಯೊಳಗೆ ಬಿಟ್ಟು ಆರೋಪಿಯು ಪರಾರಿಯಾಗಿದ್ದಾನೆ. ಸುಮಾರು ಐದು ದಿನಗಳ ಬಳಿಕ ಮನೆಯಿಂದ ಬರುತ್ತಿದ್ದ ತೀವ್ರ ದುರ್ವಾಸನೆ ಗಮನಿಸಿದ ಸಹೋದ್ಯೋಗಿ ಮತ್ತು ನೆರೆಹೊರೆಯವರು ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದು, ಬಾಗಿಲು ತೆರೆಯುತ್ತಿದ್ದಂತೆ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದೆ.

Loading...