ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

ವಿದ್ಯಾ ಇರ್ವತ್ತೂರು

[email protected]

ಕಾರ್ಕಳ ತಾಲೂಕಿನ ಇರ್ವತ್ತೂರಿನವರಾದ ಇವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ಕನ್ನಡಪ್ರಭ ದಿನಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ವೃತ್ತಿ ಜೀವನ ಪ್ರಾರಂಭಿಸಿದರು. ಬಳಿಕ ಉದಯವಾಣಿ ದಿನಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದು, ನವಸಮಾಜ, ನ್ಯೂಸ್ ಆ್ಯರೋ, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 16 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದು, ಬರವಣಿಗೆ, ಓದು, ಪ್ರವಾಸ ಇವರ ನೆಚ್ಚಿನ ಹವ್ಯಾಸ. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ಗೆ ಸುದ್ದಿ, ವಿಶೇಷ ಲೇಖನಗಳನ್ನು ಬರೆಯುತ್ತಿದ್ದಾರೆ.

Articles
ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಸಮರಕ್ಕೆ ಇಳಿದ ತಮಿಳುನಾಡು  ಸಿಎಂ ವಿಜಯ್

ಕಾವೇರಿ ನೀರಿಗಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಎಂ ವಿಜಯ್

ಕಾವೇರಿ ನದಿ ನೀರಿಗಾಗಿ ಈಗ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನವಿದ್ದು, ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದರೂ ಕರ್ನಾಟಕ ನೀರು ಬಿಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಜೈಶ್‌-ಎ-ಮೊಹಮ್ಮದ್‌ ಗ್ಯಾಂಗ್ ಜತೆ ಸೇರಿ ಬಂಗಾಳ ಸಚಿವರ ಮಗನನ್ನು ಹನಿಟ್ರ್ಯಾಪ್‌ಗೆ ಕೆಡವಲು ಯೋಜನೆ: ಕಾಲೇಜು ವಿದ್ಯಾರ್ಥಿಯ ಬಂಧನ

ಜೈಶ್ ಜೊತೆ ನಂಟು: ಕಾಲೇಜು ವಿದ್ಯಾರ್ಥಿಯ ಬಂಧನ

ಪಾಕಿಸ್ತಾನ ಮೂಲದ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದ ಹಮೀಮ್ ಮೊಂಡಲ್ ಮತ್ತು ಅರ್ಪಿತಾ ಸರ್ಕಾರ್ ಬಂಧನದ ಬಳಿಕ ಇದೀಗ ಜೈಶ್-ಎ-ಮೊಹಮ್ಮದ್ ಜೊತೆಗೆ ನಂಟು ಹೊಂದಿದ್ದ ಆರೋಪದ ಮೇಲೆ ಪಶ್ಚಿಮ ಬಂಗಾಳದ ವಿಶೇಷ ಕಾರ್ಯಪಡೆಯು ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದೆ. ಪಶ್ಚಿಮ ಬಂಗಾಳ ಸಚಿವ ಮತ್ತು ಅವರ ಮಗನಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ದಾಖಲಿಸಿಕೊಂಡು ಅದನ್ನು ಹಮೀಮ್ ಮತ್ತು ಅರ್ಪಿತಾ ಜೊತೆಗೆ ಹಂಚಿಕೊಂಡಿದ್ದ ಎಂದು ಆರೋಪಿಸಲಾಗಿದೆ.

Vishwavani Health: ಮಳೆಗಾಲದಲ್ಲಿ ಮಧುಮೇಹಿಗಳು ವಹಿಸಲೇಬೇಕಾದ ಎಚ್ಚರಿಕೆ ಏನು? ಇಲ್ಲಿದೆ ತಜ್ಞರ ಸಲಹೆ Video

ಮಳೆಗಾಲದಲ್ಲಿ ಮಧುಮೇಹಿಗಳಿಗೆ ಕಾಡುವ ಆರೋಗ್ಯ ಸಮಸ್ಯೆಗಳು

ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಮಳೆಗಾಲದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಲೇಬೇಕು. ಸ್ವಲ್ಪ ನಿರ್ಲಕ್ಷವು ಅಪಾಯಕಾರಿಯಾಗಬಹುದು ಎನ್ನುತ್ತಾರೆ ಮಧುಮೇಹ ತಜ್ಞ ಡಾ. ಸುಮನ್. ಮಳೆಗಾಲದಲ್ಲಿ ಮಧುಮೇಹಿಗಳು ಯಾವ ರೀತಿಯ ಆಹಾರ ಸೇವಿಸಬೇಕು? ದಿನಚರಿ ಪಾಲಿಸಬೇಕು ಎಂಬುದರ ಕುರಿತು ಅವರು ನೀಡಿರುವ ಮಾಹಿತಿ ಇಲ್ಲಿದೆ.

ಕೇರಳದಲ್ಲಿ ಮುಂದುವರಿದ ಮಳೆ: ಭೂಕುಸಿತ, ಪ್ರವಾಹದಿಂದ 15 ಮಂದಿ ಸಾವು

ಭಾರಿ ಮಳೆ: ಕೇರಳದಲ್ಲಿ ಅಪಾರ ಹಾನಿ

ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನಿರಂತರ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಉಂಟಾಗಿರುವ ಭೂಕುಸಿತ, ಪ್ರವಾಹದಿಂದಾಗಿ ಶನಿವಾರ 15 ಮಂದಿ ಸಾವನ್ನಪ್ಪಿದ್ದಾರೆ, 8 ಮಂದಿ ನಾಪತ್ತೆಯಾಗಿದ್ದಾರೆ ಹಾಗೂ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತ ಹವಾಮಾನ ಇಲಾಖೆ ಕೇರಳದ 12 ಜಿಲ್ಲೆಗಳಿಗೆ ಅರೇಂಜ್ ಅಲರ್ಟ್ ಮತ್ತು ತಿರುವನಂತಪುರಂ, ಕೊಲ್ಲಂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.

ಪ್ರಧಾನಿಯನ್ನು ನಿಂದಿಸಿದ ಅಪ್ರಾಪ್ತ ಬಾಲಕಿ ವಿರುದ್ಧ ಯಾವುದೇ ಕೇಸು ಇಲ್ಲ: ದೆಹಲಿ ಪೊಲೀಸ್

ಅಪ್ರಾಪ್ತ ಬಾಲಕಿ ವಿರುದ್ಧ ಯಾವುದೇ ಕೇಸಿಲ್ಲ

ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿ ಬಳಿಕ ವಿಡಿಯೊ ಮೂಲಕ ಕ್ಷಮೆಯಾಚಿಸಿದ ಬಾಲಕಿ ವಿರುದ್ಧ ಯಾವುದೇ ಪ್ರಕರಣವಿಲ್ಲ ಎಂಬುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಪ್ರಧಾನಿಯವರನ್ನು ನಿಂದಿಸಿದ ಬಾಲಕಿ ವಿರುದ್ಧ ನೋಯ್ಡಾ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದರು. ಇದರ ಬಳಿಕ ಆಕೆ ಕ್ಷಮೆ ಕೇಳಿದ್ದು, ಆಕೆಯ ತಾಯಿಯು ಕೂಡ ಕ್ಷಮೆಯಾಚಿಸಿದ್ದರು.

ಬಿಹಾರ, ಗುಜರಾತ್‌, ಮಧ್ಯಪ್ರದೇಶ ಉಪಚುನಾವಣೆ ಫಲಿತಾಂಶ ಇಂದು: ಸಿಜೆಪಿ ಪ್ರತಿಭಟನೆಯಿಂದ ಬಿಜೆಪಿಗೆ ಬೀಳುತ್ತಾ ಹೊಡೆತ?

ಸಿಜೆಪಿ ಪ್ರತಿಭಟನೆ: ಉಪಚುನಾವಣೆ ಮೇಲೆ ಪರಿಣಾಮ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಇತ್ತೀಚೆಗೆ ದೇಶಾದ್ಯಂತ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಪರಿಣಾಮ ಉಪ ಚುನಾವಣೆ ಮೇಲೆ ಬೀರುವುದೇ ? ಎನ್ನುವ ಆತಂಕ ಈಗ ಶುರುವಾಗಿದೆ. ಅದರಲ್ಲೂ ಮುಖ್ಯವಾಗಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಫಲಿತಾಂಶ ಏನಾಗಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ.

ʼʼಪ್ರಧಾನಿ ನರೇಂದ್ರ ಮೋದಿ ಮಗಳಿಗೆ ಜೀವದಾನ ನೀಡಿದ್ದಾರೆʼʼ: ಕೃತಜ್ಞತೆ ಸಲ್ಲಿಸಿದ ಕ್ಷಮೆಯಾಚಿಸಿದ ಬಾಲಕಿಯ ತಾಯಿ

ಪ್ರಧಾನಿ ಕ್ಷಮೆಯಾಚಿಸಿದ ಬಾಲಕಿಯ ತಾಯಿ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಕ್ಷಮೆ ಯಾಚಿಸಿದ್ದ ಬಾಲಕಿಯ ತಾಯಿ ಈಗ ಮೊದಲ ರಿಯಾಕ್ಷನ್ ನೀಡಿದ್ದಾರೆ. ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ವೇಳೆಯಲ್ಲಿ ಬಾಲಕಿ ಪ್ರಧಾನಿ ಮೋದಿಯನ್ನು ನಿಂದಿಸಿದ್ದು, ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ಬಳಿಕ ಆಕೆ ಇನ್‌ಸ್ಟಾಗ್ರಾಮ್ ವಿಡಿಯೊದಲ್ಲಿ ಪ್ರಧಾನಿಯವರ ಬಳಿ ಕ್ಷಮೆ ಯಾಚಿಸಿದ್ದಳು. ಇದೀಗ ಆಕೆಯ ತಾಯಿ, ಪ್ರಧಾನಿಯವರು ತನ್ನ ಮಗಳಿಗೆ ಜೀವದಾನ ಮಾಡಿದ್ದಾರೆ ಎಂದಿದ್ದಾರೆ.

ತರಬೇತಿ ಪಡೆದಿಲ್ಲ, ಮೋಟಾರು ದೋಣಿ ಹೊಂದಿಲ್ಲ;  ಅಸ್ಸಾಂ ಪ್ರವಾಹಕ್ಕೆ ಸಿಲುಕಿದ 2,000 ಸಂತ್ರಸ್ತರನ್ನು ರಕ್ಷಿಸಿದ ಯುವಕನ ಸಾಹಸಗಾಥೆ ಇಲ್ಲಿದೆ

ಅಸ್ಸಾಂ ಪ್ರವಾಹ ಸಂತ್ರಸ್ತರ ರಕ್ಷಕ ಯುವಕನ ಸಾಹಸಗಾಥೆ

ತರಬೇತಿ ಪಡೆದಿಲ್ಲ, ಮೋಟಾರು ದೋಣಿ ಹೊಂದಿಲ್ಲ.. ಆದರೂ ಈ ಬಾರಿಯ ಅಸ್ಸಾಂ ಪ್ರವಾಹದ ಸಂತ್ರಸ್ತರ ರಕ್ಷಣೆ ಕಾರ್ಯದಲ್ಲಿ ಕೇಳಿ ಬರುತ್ತಿರುವ ಹೆಸರು ಶ್ರವಣ್ ಕುಮಾರ್. ಸುಮಾರು 2,000 ಸಂತ್ರಸ್ತರನ್ನು ರಕ್ಷಿಸಿರುವ ಈತ 10ನೇ ತರಗತಿಯ ಶಾಲೆ ಬಿಟ್ಟು ಉರುವಲು ಸಂಗ್ರಹದಿಂದ ತನ್ನ ಮತ್ತು ಕುಟುಂಬವನ್ನು ಪೊರೆಯುತ್ತಿದ್ದಾನೆ.

ಸಿಎಂ ಸುವೇಂದು ಅಧಿಕಾರಿ ಮೇಲೆ ನಿಗಾ, ಸಿಜೆಪಿ ಪ್ರತಿಭಟನೆಯಲ್ಲಿ ಸೇರಿಕೊಳ್ಳಲು ಪ್ರಯತ್ನ; ತನಿಖೆಯಲ್ಲಿ ಬಹಿರಂಗವಾಯಿತು ಪಾಕಿಸ್ತಾನದ ಭಯೋತ್ಪಾದಕರ ತಂತ್ರ

ಸಿಜೆಪಿ ಪ್ರತಿಭಟನೆಯಲ್ಲಿ ಸೇರಿಕೊಂಡಿದ್ದರೆ ಭಯೋತ್ಪಾದಕರು ?

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಸೇರಿಕೊಳ್ಳಲು ಪಾಕಿಸ್ತಾನದ ಭಯೋತ್ಪಾದಕರು ಸಂಚು ರೂಪಿಸಿದ್ದರು. ಇದರೊಂದಿಗೆ ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಮೇಲೆ ದಾಳಿಗೆ ನಿರಂತರ ನಿಗಾ ಇರಿಸಿದ್ದರು ಎಂದು ಗುಪ್ತಚರ ಇಲಾಖೆ ಮಾಹಿತಿ ತಿಳಿಸಿದೆ.

ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಭಾರಿ ಮಳೆಗೆ ತೀರ್ಥಹಳ್ಳಿಯಲ್ಲಿ ಮೂವರು ಸಾವು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಭಾನುವಾರ ಮುಂಜಾನೆ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಗುಡ್ಡ ಕುಸಿತದಿಂದಾಗಿ ಶೆಡ್ ನಲ್ಲಿ ಮಲಗಿದ್ದ ಮೂವರು ಸಮಾಧಿಯಾಗಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಪ್ರವಾಸಿಗರಿದ್ದ ವಿಮಾನ ಅಪಘಾತ: ಪೆರುವಿನಲ್ಲಿ 13 ಮಂದಿ ಸಾವು

ಪೆರುವಿನಲ್ಲಿ ವಿಮಾನ ಅಪಘಾತ: 13 ಮಂದಿ ಸಾವು

ಪೆರುವಿನಲ್ಲಿ ಸಣ್ಣ ಪ್ರವಾಸಿ ವಿಮಾನವೊಂದು ಅಪಘಾತಕ್ಕೀಡಾಗಿ 13 ಮಂದಿ ಸಾವನ್ನಪ್ಪಿದ್ದಾರೆ. ಏರೋಡಯಾನ ನಿರ್ವಹಿಸುತ್ತಿದ್ದ ವಿಮಾನವು ಪ್ರವಾಸಿಗರಿಗೆ 30 ನಿಮಿಷಗಳಿಂದ ಒಂದು ಗಂಟೆಯವರೆಗೆ ದೃಶ್ಯವೀಕ್ಷಣೆಗೆ ಅವಕಾಶ ಮಾಡಿಕೊಡುತ್ತದೆ. ಶನಿವಾರ ಅಪಘಾತಕ್ಕೀಡಾದ ವಿಮಾನದಲ್ಲಿ 11 ವಿದೇಶಿ ಪ್ರವಾಸಿಗರು ಮತ್ತು ಇಬ್ಬರು ಸಿಬ್ಬಂದಿ ಇದ್ದರು ಎಂದು ಪೆರುವಿನ ವ್ಯಾಪಾರ ಮತ್ತು ಪ್ರವಾಸೋದ್ಯಮ ಸಚಿವಾಲಯ ತಿಳಿಸಿದೆ.

ಎಥೆನಾಲ್ ಮಿಶ್ರಣ ಮಾಡದಿದ್ದರೆ ಇರಾನ್‌ ಯುದ್ಧದ ವೇಳೆ ದೇಶದಲ್ಲಿ ಪೆಟ್ರೋಲ್ ಬೆಲೆ 125 ರುಪಾಯಿ ದಾಟುತ್ತಿತ್ತು ಎಂದ ಕೇಂದ್ರ ಸರ್ಕಾರ

E20ಯಿಂದ ದೇಶದಲ್ಲಿ ಪೆಟ್ರೋಲ್ ಬೆಲೆ ಕಡಿಮೆಯಾಗಿದೆ: ಕೇಂದ್ರ ಸರ್ಕಾರ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಪೆಟ್ರೋಲ್ ಗೆ ಎಥೆನಾಲ್ ಮಿಶ್ರಣವನ್ನು ಕೇಂದ್ರ ಸರ್ಕಾರ ಪ್ರೋತ್ಸಾಹಿಸುತ್ತಿದೆ. ಈ ನಡುವೆ ಇದು ವಾಹನಗಳ ಎಂಜಿನ್ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ಈಗ ಕೇಂದ್ರ ಸರ್ಕಾರ ಸ್ಪಷ್ಟನೆಯನ್ನು ನೀಡಿದ್ದು, ಎಥೆನಾಲ್ ಮಿಶ್ರಣ ಮಾಡದಿದ್ದರೆ ದೇಶದಲ್ಲಿ ಪೆಟ್ರೋಲ್ ಬೆಲೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿತ್ತು. ಇದರಿಂದ ಜನಸಾಮಾನ್ಯರಿಗೆ ಕಷ್ಟವಾಗುತ್ತಿತ್ತು ಎಂದು ಹೇಳಿದೆ.

ಕೇರಳದಾದ್ಯಂತ ಭಾರಿ ಮಳೆ:  ಭೂಕುಸಿತದಿಂದ ಮೂವರ ಸಾವು, ಹಲವು ಮನೆಗಳು ಜಲಾವೃತ

ಕೇರಳದಾದ್ಯಂತ ಭಾರಿ ಮಳೆ: ಮೂವರು ಸಾವು

ಕೇರಳದಾದ್ಯಂತ ಭಾರಿ ಮಳೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಹಲವಾರು ಸ್ಥಳಗಳಲ್ಲಿ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ರಸ್ತೆಗಳು ಮುಚ್ಚಿ ಹೋಗಿವೆ. ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿವೆ. ರಸ್ತೆ ಸಂಪರ್ಕ ಕಡಿತಗೊಂಡಿದೆ. ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಆರಂಭವಾದ ಮೇಲೆ ಎರಡನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆ; ಗೃಹ ಬಳಕೆಯ ಸಿಲಿಂಡರ್ ಬೆಲೆ ಎಷ್ಟಿದೆ?  ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆ

ಅಮೆರಿಕ ಮತ್ತು ಇರಾನ್ ನಡುವೆ ಸಂಘರ್ಷ ಆರಂಭವಾದ ಬಳಿಕ ಎರಡನೇ ಬಾರಿಗೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 192 ರೂ. ಇಳಿಕೆಯಾಗಿದೆ. ಇದರಿಂದ ವಾಣಿಜ್ಯ ಸಿಲಿಂಡರ್ ದರ 2,930 ರೂ.ಗಳಿಂದ 2,738 ರೂ. ಗೆ ಇಳಿಕೆಯಾಗಿದೆ. ಇದರೊಂದಿಗೆ ವಾಯುಯಾನ ಟರ್ಬೈನ್ ಇಂಧನ ಬೆಲೆ ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಗಳು ಸ್ಥಿರವಾಗಿವೆ.

ಝೆನ್ ಜಿ ಬಗ್ಗೆ ತಿಳಿದುಕೊಳ್ಳಲು ಯುವ ನಾಯಕರಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾದ ಬಿಜೆಪಿ

ಸಿಜೆಪಿ ಪ್ರತಿಭಟಣೆ ಬಳಿಕ ಬಿಜೆಪಿಯಿಂದ ಮಹತ್ವದ ನಿರ್ಧಾರ

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ಎನ್ ಡಿಎ ಸರ್ಕಾರಕ್ಕೆ ಬಹುದೊಡ್ಡ ಹೊಡೆತವನ್ನೇ ನೀಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗೆ ಕ್ರಮಗಳನ್ನು ಕೈಗೊಂಡ ಬೆನ್ನಲ್ಲೇ ಝೆನ್ ಜಿ ಬಗ್ಗೆ ತಿಳಿದುಕೊಳ್ಳಲು ಬಿಜೆಪಿ ನಿರ್ಧರಿಸಿದೆ. ಇದಕ್ಕಾಗಿ ಸಚಿವ ಸಂಪುಟ, ಮುಖ್ಯಸ್ಥರ ತಂಡದಲ್ಲಿ ಯುವ ನಾಯಕರಿಗೆ ಮಣೆ ಹಾಕಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ನಾನು ಮಾಡಿರುವುದು ಕ್ಷಮೆಗೆ ಅರ್ಹವಲ್ಲ; ಆದರೂ ನನ್ನನ್ನು ಕ್ಷಮಿಸಿಬಿಡಿ: ಪ್ರಧಾನಿ ಮೋದಿ ಬಳಿ ಕ್ಷಮೆಯಾಚಿಸಿದ ಬಾಲಕಿ

ಪ್ರಧಾನಿ ಮೋದಿ ಬಳಿ ಕ್ಷಮೆಯಾಚಿಸಿದ ಬಾಲಕಿ ಮಾಡಿರುವ ತಪ್ಪೇನು?

ನನಗೆ ಕೇವಲ 15 ವರ್ಷ. ನಾನು ಮಾಡಿರುವುದು ಕ್ಷಮೆಗೆ ಅರ್ಹವಲ್ಲ, ಆದರೂ ನನ್ನನ್ನು ಕ್ಷಮಿಸಿ ಎಂದು ಬಾಲಕಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿಯವರ ಬಳಿ ಕ್ಷಮೆ ಕೇಳಿದ್ದಾಳೆ. ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ವೇಳೆಯಲ್ಲಿ ಬಾಲಕಿ ಪ್ರಧಾನಿ ಮೋದಿಯನ್ನು ನಿಂದಿಸಿದ್ದು, ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರ ಬಳಿಕ ಆಕೆ ಇನ್‌ಸ್ಟಾಗ್ರಾಮ್ ವಿಡಿಯೊದಲ್ಲಿ ಪ್ರಧಾನಿಯವರ ಬಳಿ ಕ್ಷಮೆ ಯಾಚಿಸಿದ್ದಾಳೆ.

ಸೋನಮ್ ವಾಂಗ್ಚುಕ್ ಅವರ ತ್ಯಾಗವನ್ನು ಮರೆಯಲು ಸಾಧ್ಯವಿಲ್ಲ: ಅಭಿಜೀತ್ ದಿಪ್ಕೆ

ವಾಂಗ್ಚುಕ್ ಜೊತೆ ಭಿನ್ನಾಭಿಪ್ರಾಯ: ವದಂತಿ ತಿರಸ್ಕರಿಸಿದ ಅಭಿಜೀತ್ ದಿಪ್ಕೆ

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ತ್ಯಾಗವನ್ನು ಮರೆಯಲು ಸಾಧ್ಯವಿಲ್ಲ. ಅವರ 26 ದಿನಗಳ ಉಪವಾಸ ಸತ್ಯಾಗ್ರಹವು ಶಿಕ್ಷಣ ಸಚಿವರ ರಾಜೀನಾಮೆಗೆ ನಿರ್ಣಾಯಕವಾಗಿತ್ತು ಎಂದು ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ತಿಳಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ಮಾತನಾಡಿ ಸಿಜೆಪಿ ಜೊತೆ ಸೋನಮ್ ವಾಂಗ್ಚುಕ್ ಭಿನ್ನಾಭಿಪ್ರಾಯ ವದಂತಿಯನ್ನು ತಿರಸ್ಕರಿಸಿದರು.

ಕಾಕ್ರೋಚ್ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸಿದ ಬಿಜೆಪಿ ನಾಯಕರ ಮಕ್ಕಳು

ಸಿಜೆಪಿಗೆ ಬಿಜೆಪಿ ನಾಯಕನ ಪುತ್ರಿಯಿಂದ ಬೆಂಬಲ

ಹಲವು ಬಿಜೆಪಿ ನಾಯಕರ ಮಕ್ಕಳು ಕಾಕ್ರೋಚ್ ಜನತಾ ಪಕ್ಷಕ್ಕೆ ಬಹಿರಂಗವಾಗಿಯೇ ಬೆಂಬಲ ಸೂಚಿಸಿದ್ದಾರೆ. ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಿಜೆಪಿ ನಾಯಕ ವಿಕ್ರಮ್ ಸಿಂಗ್ ಅವರ ಪುತ್ರಿ ಯಶಸ್ವಿನಿ ರಾಜೇ ಸಿಂಗ್, ಸಿಜೆಪಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಧಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಸಂಭ್ರಮಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಮುಂದಿನ ವರ್ಷ ಪಾಕಿಸ್ತಾನಕ್ಕೆ ಭೇಟಿ? ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತ SCO ಸುಮ್ಮಿಟ್?

ಇಸ್ಲಾಮಾಬಾದ್‌ಗೆ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಹ್ವಾನ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಶೀಘ್ರದಲ್ಲೇ ಇಸ್ಲಾಮಾಬಾದ್‌ಗೆ ಆಹ್ವಾನಿಸಲಾಗುವುದು ಎಂದ ಪಾಕಿಸ್ತಾನ ಹೇಳಿದೆ. 2027ರ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಗಾಗಿ ಅವರನ್ನು ಪಾಕಿಸ್ತಾನಕ್ಕೆ ಆಹ್ವಾನಿಸಲಾಗುವುದು. ಈ ಸಭೆಗೆ ಭಾರತ ಸೇರಿದಂತೆ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಆಹ್ವಾನ ನೀಡಲಾಗುತ್ತದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಸಂಘರ್ಷದಲ್ಲಿ 10 ನಾವಿಕರು ಸೇರಿ 16 ಭಾರತೀಯರು ಸಾವು: ಸಂಸತ್ತಿಗೆ ಮಾಹಿತಿ ನೀಡಿದ  ಸಚಿವ ಕೀರ್ತಿ ವರ್ಧನ್ ಸಿಂಗ್

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: 16 ಭಾರತೀಯರು ಸಾವು

ಕಳೆದ ಫೆಬ್ರವರಿಯಲ್ಲಿ ಪ್ರಾರಂಭವಾಗಿರುವ ಇರಾನ್ ಮತ್ತು ಯುಎಸ್ ನಡುವಿನ ಸಂಘರ್ಷದಲ್ಲಿ ಈವರೆಗೆ ಒಟ್ಟು 16 ಭಾರತೀಯರು ಸಾವನ್ನಪ್ಪಿದ್ದಾರೆ. ಇದರಲ್ಲಿ 10 ನಾವಿಕರು ಸೇರಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಗುರುವಾರ ಸಂಸತ್ತಿಗೆ ಮಾಹಿತಿ ನೀಡಿದರು.

ಬಲೂಚಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ: 32 ಮಂದಿ ಸಾವು

ಬಲೂಚಿಸ್ತಾನದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ

ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದ ಹೊರವಲಯದಲ್ಲಿ ಗುರುವಾರ ಕಲ್ಲಿದ್ದಲು ಗಣಿಯಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಇದರಿಂದ ಸುಮಾರು 32 ಮಂದಿ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಭೂಗತದಲ್ಲಿ ಸಿಲುಕಿಕೊಂಡಿದ್ದಾರೆ. ಮೀಥೇನ್ ಅನಿಲದ ಶೇಖರಣೆಯಿಂದ ಸ್ಫೋಟ ಉಂಟಾಗಿದೆ ಎಂದು ಸರ್ಕಾರಿ ಗಣಿ ನಿರೀಕ್ಷಕ ಘನಿ ಬಲೋಚ್ ತಿಳಿಸಿದ್ದಾರೆ.

ಸಂಸತ್‌ನ 100 ಮೀಟರ್‌ ಸಮೀಪಕ್ಕೆ ಬಂದಿದ್ದ ಸಿಜೆಪಿ ಪ್ರತಿಭಟನಾಕಾರರು; ಜುಲೈ 20ರಂದು ಏನಾಯಿತು? ಹೊಸ ವಿಡಿಯೊದಲ್ಲಿದೆ ಅಚ್ಚರಿಯ ಮಾಹಿತಿ

ಜುಲೈ 20ರಂದು ಏನಾಗಿತ್ತು? ಹೊಸ ವಿಡಿಯೊ ಬೆಳಕಿಗೆ

ಕಾಕ್ರೋಚ್ ಜನತಾ ಪಕ್ಷದ ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸಂಸತ್ತಿನ 100 ಮೀಟರ್ ಒಳಗೆ ಬಂದಿದ್ದರು. ಈ ಕುರಿತು ಹೊಸ ವಿಡಿಯೊ ಬೆಳಕಿಗೆ ಬಂದಿದ್ದು, ಇದರಲ್ಲಿ ವಿದ್ಯಾರ್ಥಿ ಪ್ರತಿಭಟನಾಕಾರರು ಸಂಸತ್ತಿನ ಹತ್ತಿರ ತಲುಪಿ ಪೊಲೀಸರೊಂದಿಗೆ ಘರ್ಷಣೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ.

ಪೆಲೆಟ್ ಗನ್ ಬಳಕೆ ನಿಯಮ ಪರಿಶೀಲಿಸಲು ಸುಪ್ರೀಂ ಕೋರ್ಟ್ ಸೂಚನೆ

ಪೆಲೆಟ್ ಗನ್ ಬಳಕೆಗೆ ನಿಯಂತ್ರಣ ಬೇಕಿದೆ ಎಂದ ಸುಪ್ರೀಂ ಕೋರ್ಟ್

ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ಭದ್ರತಾ ಸಿಬ್ಬಂದಿ ಬಳಸುವ ಪೆಲೆಟ್ ಗನ್ ಬಳಕೆ ಮೇಲೆ ನಿಯಂತ್ರಣ ಹೇರಲು ಸುಪ್ರೀಂ ಕೋರ್ಟ್ ತೀರ್ಮಾನಿಸಿದೆ. ಪೆಲೆಟ್ ಗನ್ ಬಳಕೆ ಬಗ್ಗೆ ಇರುವ ನಿಯಮಾವಳಿಗಳನ್ನು ಪರಿಶೀಲಿಸುವುದಾಗಿ ಹೇಳಿರುವ ನ್ಯಾಯಾಲಯ, ಇದರ ಬಳಕೆ ನಿಯಂತ್ರಣಕ್ಕೆ ನಿಯಮ ರೂಪಿಸಬೇಕು ಎಂದು ತಿಳಿಸಿದೆ.

ಇರಾನ್ ಮೇಲೆ ಜೋರ್ಡಾನ್ ಪ್ರತೀಕಾರದ ದಾಳಿ ಆರಂಭಿಸಿದ ಅಮೆರಿಕ; ಹೊರ್ಮುಜ್‌ನಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಳ

ಇರಾನ್ ಮೇಲೆ ಅಮೆರಿಕ ದಾಳಿ: ಭೀಕರ ಯುದ್ಧದ ಆತಂಕ

ಜೋರ್ಡಾನ್ ಮೇಲೆ ಇರಾನ್ ದಾಳಿ ನಡೆಸಿದ ಬಳಿಕ ಪ್ರತೀಕಾರವಾಗಿ ಅಮೆರಿಕವು ಇರಾನ್ ಮೇಲೆ ಡ್ರೋನ್ ದಾಳಿಯನ್ನು ನಡೆಸಿದೆ. ಇದು ಹೊರ್ಮುಜ್ ಸಲಸಂಧಿಯಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದ್ದು, ಭೀಕರ ಯುದ್ಧದ ಆತಂಕವನ್ನು ಉಂಟು ಮಾಡಿದೆ. ಜೋರ್ಡಾನ್‌ನಲ್ಲಿನ ಯುಎಸ್ ಮಿಲಿಟರಿ ನೆಲೆಗಳ ಮೇಲೆ ಇರಾನ್ ಬುಧವಾರ ದಾಳಿ ನಡೆಸಿದ ಬಳಿಕ ಅಮೆರಿಕ ಸೇನಾ ಪಡೆಗಳು ಪ್ರತೀಕಾರದ ದಾಳಿಯನ್ನು ಪ್ರಾರಂಭಿಸಿವೆ.

Loading...