ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

ವಿದ್ಯಾ ಇರ್ವತ್ತೂರು

[email protected]

ಕಾರ್ಕಳ ತಾಲೂಕಿನ ಇರ್ವತ್ತೂರಿನವರಾದ ಇವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ಕನ್ನಡಪ್ರಭ ದಿನಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ವೃತ್ತಿ ಜೀವನ ಪ್ರಾರಂಭಿಸಿದರು. ಬಳಿಕ ಉದಯವಾಣಿ ದಿನಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದು, ನವಸಮಾಜ, ನ್ಯೂಸ್ ಆ್ಯರೋ, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 16 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದು, ಬರವಣಿಗೆ, ಓದು, ಪ್ರವಾಸ ಇವರ ನೆಚ್ಚಿನ ಹವ್ಯಾಸ. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ಗೆ ಸುದ್ದಿ, ವಿಶೇಷ ಲೇಖನಗಳನ್ನು ಬರೆಯುತ್ತಿದ್ದಾರೆ.

Articles
ಹೊಟೇಲ್ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಹೊರೆ; ಮತ್ತೆ ಹೆಚ್ಚಾಗುತ್ತ ತಿಂಡಿ ಬೆಲೆ?

ಬೆಂಗಳೂರಿನಲ್ಲಿ ಹೊಟೇಲ್ ತಿಂಡಿ ತಿನಿಸು ಬೆಲೆ ಏರಿಕೆ

ಊಟ, ತಿಂಡಿಗಾಗಿ ಹೊಟೇಲ್ ಅನ್ನೇ ನೆಚ್ಚಿಕೊಂಡಿದ್ದೀರಾ ? ಹಾಗಿದ್ದರೆ ಬೆಂಗಳೂರು ಹೊಟೇಲ್ ಗಳು ನಿಮಗೆ ಶಾಕ್ ಕೊಡುವುದು ಗ್ಯಾರಂಟಿ. ಬಹುತೇಕ ಎಲ್ಲಾ ಹೊಟೇಲ್ ಗಳಲ್ಲೂ ಚಹಾ, ಕಾಫಿ, ತಿಂಡಿ, ಊಟದ ಬೆಲೆಯನ್ನು ಹೆಚ್ಚಿಸಲಾಗಿದೆ. ಕನಿಷ್ಠ 5 ರೂ. ನಿಂದ 20 ರೂ. ವರೆಗೂ ದರ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರ ಜೇಬಿಗೆ ಕತ್ತರಿ ಹಾಕಲಿದೆ.

ಟಿವಿಕೆ ಅಭ್ಯರ್ಥಿ ವಿರುದ್ಧ ಡಿಎಂಕೆ ಸಚಿವನನ್ನು ಸೋಲಿಸಿತ್ತು ಕೇವಲ ಒಂದು ಮತ

ತಮಿಳುನಾಡಿನ ಒಂದು ಮತದ ಕಥೆ

ಕೇವಲ ಒಂದೇ ಒಂದು ಮತ ಮಸ್ಕತ್‌ ವ್ಯಕ್ತಿ ಹಾಕದೇ ಇರುತ್ತಿದ್ದರೆ ಅಲ್ಲಿನ ರಾಜಕೀಯ ಚಿತ್ರಣವೇ ಬೇರೆ ಆಗಿರುತ್ತಿತ್ತು. ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಡಿಎಂಕೆ ಸಚಿವನ ಸೋಲಿಗೆ ಕಾರಣವಾಗಿದ್ದು ಕೇವಲ ಒಂದು ಮತ ಎಂದರೆ ಅಚ್ಚರಿಯಾಗಲೇಬೇಕು. ಇದರಿಂದಾಗಿಯೇ ಟಿವಿಕೆ ಅಭ್ಯರ್ಥಿ ಗೆದ್ದರು. ಇಂದು ಒಂದು ಮತದ ಮಹತ್ವದ ಕಥೆಯನ್ನು ಈಗ ಹೇಳುತ್ತಿದೆ.

ದಳಪತಿ ಗೆಲುವಿಗೆ ರಾಹುಲ್ ಗಾಂಧಿ ಅಭಿನಂದನೆ; ಟಿವಿಕೆ ಜೊತೆ ಸೇರಲು ಡಿಎಂಕೆಯೊಂದಿಗಿನ ಮೈತ್ರಿ ಮುರಿಯುತ್ತಾ ಕಾಂಗ್ರೆಸ್?

ಟಿವಿಕೆ ಜೊತೆ ಕಾಂಗ್ರೆಸ್ ಮೈತ್ರಿ? ರಾಹುಲ್ ಗಾಂಧಿ ಹೇಳಿದ್ದೇನು?

ಭಾರಿ ಗದ್ದಲದ ನಡುವೆ ಅಧಿಕಾರದ ಗದ್ದುಗೆ ಏರಲು ಈಗ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕ ದಳಪತಿ ವಿಜಯ್ ಅವರಿಗೆ ಬಹುಮತದ ಸವಾಲು ಎದುರಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಭಾಶಯ ಸಂದೇಶಗಳನ್ನು ಅವರಿಗೆ ಕಳುಹಿಸಿದ್ದು, ಕಾಂಗ್ರೆಸ್ ಮತ್ತು ಟಿವಿಕೆ ಮೈತ್ರಿ ಮಾಡಿಕೊಳ್ಳುತ್ತದೆ ಎನ್ನಲಾಗುತ್ತಿದೆ.

624 ಕೋಟಿ ರೂ. ಸಂಪತ್ತಿನ ಒಡೆಯ ನಟ, ರಾಜಕಾರಣಿ ದಳಪತಿ ವಿಜಯ್

ನಟ ವಿಜಯ್ ಅವರ ಸಂಪತ್ತು ಎಷ್ಟಿದೆ ಗೊತ್ತೇ?

ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸುವುದರೊಂದಿಗೆ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷವು ದಶಕಗಳ ಕಾಲ ಆಡಳಿತ ನಡೆಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಸೋಲುಣಿಸಿದೆ. ಈ ಮೂಲಕ ವಿಜಯ್ ಅವರು ತಮಿಳುನಾಡು ರಾಜಕೀಯದಲ್ಲಿ ಪೂರ್ಣ ಪ್ರಮಾಣದ ರಾಜಕಾರಣಿಯಾಗಿ ಹೊರಹೊಮ್ಮಿದ್ದು, ಇವರ ಒಟ್ಟು ಆಸ್ತಿ ಎಷ್ಟಿದೆ ? ಎನ್ನುವ ಕುರಿತು ವಿವರ ಇಲ್ಲಿದೆ.

ʼಮೋದಿಮಯ್ ಭಾರತ್ʼ ನಕ್ಷೆ ಬಿಡುಗಡೆ ಮಾಡಿದ ಬಿಜೆಪಿ: ಪಶ್ಚಿಮ ಬಂಗಾಳವನ್ನು ತಲುಪಿದೆ ಕೇಸರಿ ಅಲೆ

ಪಶ್ಚಿಮ ಬಂಗಾಳದಲ್ಲಿ ಈಗ ಕೇಸರಿ ಅಲೆ

ಉತ್ತರ ಭಾರತದ ಐದು ರಾಜ್ಯಗಳನ್ನು ಹೊರತು ಪಡಿಸಿ ಈಗ ಸಂಪೂರ್ಣ ಕೇಸರಿಮಯವಾಗಿದೆ. ಉತ್ತರ ಭಾರತದ ಐದು ರಾಜ್ಯಗಳಾದ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಜಾರ್ಖಂಡ್ ಹಾಗೂ ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ ಹೊರತು ಉಳಿದ ಎಲ್ಲಾ ರಾಜ್ಯಗಳಲ್ಲೂ ಕೇಸರಿ ಪಕ್ಷ ರಾರಾಜಿಸುತ್ತಿದೆ. ಇದೀಗ ಪಶ್ಚಿಮ ಬಂಗಾಳ ಕೂಡ ಕೇಸರಿಮಯವಾಗುವ ಮುನ್ಸೂಚನೆ ಇದೆ.

ಕೇರಳದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮೂವರು ಹಿರಿಯ ಕಾಂಗ್ರೆಸ್ ನಾಯಕರ ಸ್ಪರ್ಧೆ

ಕೇರಳದ ಮುಂದಿನ ಮುಖ್ಯಮಂತ್ರಿ ಯಾರು?

Assembly Election Results 2026: ಕೇರಳ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭಾರಿ ಮುನ್ನಡೆ ಸಾಧಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದೀಗ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವ ಕುತೂಹಲ ಕೂಡ ಹೆಚ್ಚಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಮೂವರು ಹಿರಿಯ ಕಾಂಗ್ರೆಸ್ ನಾಯಕರು ಸ್ಪರ್ಧೆಯಲ್ಲಿದ್ದಾರೆ. ಅವರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.

ಅಸ್ಸಾಂನಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್‌ಡಿಎ ಮೈತ್ರಿಕೂಟ

ಅಸ್ಸಾಂನಲ್ಲಿ ಗೆಲುವಿನತ್ತ ಬಿಜೆಪಿ ದಾಪುಗಾಲು

ವಿಧಾನ ಸಭಾ ಚುನಾವಣೆ ಮತ ಎಣಿಕೆಯ ಆರಂಭದಿಂದಲೇ ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಆರಂಭದಿಂದಲೇ ಮುನ್ನಡೆ ಸಾಧಿಸಿದೆ. 100 ಸ್ಥಾನಗಳ ಗಡಿ ದಾಟಿದ್ದು, ಈವರೆಗೆ ಅತ್ಯುತ್ತಮ ಪ್ರದರ್ಶನವನ್ನು ಕೂಡ ನೀಡಿದೆ. ವಿರೋಧ ಪಕ್ಷಗಳು ಪ್ರಮುಖ ಕ್ಷೇತ್ರಗಳಲ್ಲಿ ವೇಗವನ್ನು ಕಾಯ್ದುಕೊಳ್ಳಲು ಹೆಣಗಾಡುತ್ತಿವೆ.

Election Results 2026:ಮ್ಯಾಜಿಕ್ ಸಂಖ್ಯೆ ದಾಟಲು ವಿಫಲವಾದರೆ ಏನು ಮಾಡುತ್ತಾರೆ ನಟ ವಿಜಯ್?

ತಮಿಳುನಾಡಿನಲ್ಲಿ ಟಿವಿಕೆ- ಎಐಎಡಿಎಂಕೆ ಜೊತೆಯಾಗುವುದೇ?

ದೇಶದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಇದೀಗ ತಮಿಳುನಾಡು ವಿಧಾನ ಸಭಾ ಕ್ಷೇತ್ರವು ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಮತ ಎಣಿಕೆಯ ಆರಂಭದಿಂದ ಮುನ್ನಡೆಯಲ್ಲಿರುವ ನಟ ವಿಜಯ್ ಅವರ ಹೊಸ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಒಂದು ವೇಳೆ ಮ್ಯಾಜಿಕ್ ಸಂಖ್ಯೆ ದಾಟಲು ಸಾಧ್ಯವಾಗದಿದ್ದರೆ ಏನು ಮಾಡಬಹುದು ಎನ್ನುವ ಕುತೂಹಲವನ್ನು ಉಂಟು ಮಾಡಿದೆ.

Election Results 2026: ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್, ದಳಪತಿ ವಿಜಯ್ ದಾಖಲೆ ನಿರ್ಮಿಸುವರೇ?

ಬಂಗಾಳ, ತಮಿಳುನಾಡು, ಕೇರಳದಲ್ಲಿ ದಾಖಲೆ ಬರೆಯುವುದೇ ಈ ಚುನಾವಣೆ ?

ಪಂಚ ರಾಜ್ಯಗಳ ಚುನಾವಣೆಯಲ್ಲಿ ಈ ಬಾರಿ ಎಲ್ಲರ ಗಮನ ಸೆಳೆದಿರುವುದು ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ. ಇದಕ್ಕೆ ಮುಖ್ಯ ಕಾರಣ ಈ ಚುನಾವಣೆಯು ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್ ಮತ್ತು ದಳಪತಿ ವಿಜಯ್ ಅವರಿಗೆ ದಾಖಲೆಗಳ ಚುನಾವಣೆಯಾಗಲಿದೆ. ಅದರಲ್ಲೂ ಮುಖ್ಯವಾಗಿ ಮೊದಲ ಬಾರಿಗೆ ಹೊಸ ಪಕ್ಷ ಸ್ಥಾಪಿಸಿ ಚುನಾವಣೆ ಸ್ಪರ್ಧಿಸುತ್ತಿರುವ ವಿಜಯ್ ಅವರಿಗೆ ಇದು ಪ್ರಮುಖ ಸ್ಪರ್ದೆಯಾಗಲಿದೆ.

Elections 2026: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ, ತಮಿಳುನಾಡಿನಲ್ಲಿ ಎಡಿಎಂಕೆಗೆ ಪೈಪೋಟಿ ನೀಡುತ್ತಿರುವ ಟಿವಿಕೆ

ಪಂಚರಾಜ್ಯಗಳ ಮತ ಎಣಿಕೆ ಆರಂಭ: ಎಲ್ಲಿ, ಹೇಗಿದೆ ಪರಿಸ್ಥಿತಿ?

ಕೇರಳಂ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯ ವಿಧಾನ ಸಭಾ ಚುನಾವಣಾ ಮತ ಎಣಿಕೆ ಕಾರ್ಯ ಸೋಮವಾರ ಬೆಳಗ್ಗೆ ಆರಂಭವಾಗಿದೆ. ಈವರೆಗಿನ ಲೆಕ್ಕಾಚಾರದ ಪ್ರಕಾರ ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದು, ತಮಿಳುನಾಡಿನಲ್ಲಿ ಎಡಿಎಂಕೆಗೆ ನಟ ವಿಜಯ್ ಅವರ ಪಕ್ಷ ಪ್ರಬಲ ಪೈಪೋಟಿಯನ್ನು ನೀಡುತ್ತಿದೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮುನ್ನಡೆಯಲ್ಲಿದೆ.

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು; ರಿಸಲ್ಟ್‌ ಎಲ್ಲಿ, ಹೇಗೆ ನೋಡೋದು?

ಇಂದು ಪಂಚ ರಾಜ್ಯಗಳ ಮತ ಎಣಿಕೆ

ಕೇರಳಂ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯ ವಿಧಾನ ಸಭಾ ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಲಿದೆ. ಮತ ಎಣಿಕೆ ಕಾರ್ಯ ಬೆಳಗ್ಗೆಯೇ ಆರಂಭಗೊಳ್ಳಲಿದೆ. 4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಯಾವಾಗ, ಎಲ್ಲಿ ಆರಂಭವಾಗುತ್ತದೆ, ಫಲಿತಾಂಶ ಎಲ್ಲಿ ವೀಕ್ಷಿಸಬೇಕು ಎಂಬುದರ ಕುರಿತು ಸಂಪೂರ್ಣ ವಿವರ ಇಲ್ಲಿದೆ.

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ: ಇಂದು ಮತ ಎಣಿಕೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಮತ ಎಣಿಕೆ ಇಂದು

ಬಾಗಲಕೋಟೆ ಮತ್ತು ದಾವಣಗೆರೆಯ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದ್ದು, ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ವಿಧಿಸಲಾಗಿದೆ. ಎರಡು ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಧ್ಯಾಹ್ನದ ವೇಳೆಗೆ ಹೊರಬೀಳುವ ನಿರೀಕ್ಷೆ ಇದೆ.

2026 ಚುನಾವಣೆ ಫಲಿತಾಂಶ; ಸಮೀಕ್ಷೆ ಹೇಳಿದೆ ಕಾಂಗ್ರೆಸ್ ಭವಿಷ್ಯ

4 ರಾಜ್ಯ, 1 ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ಭವಿಷ್ಯವೇನು?

ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯ ವಿಧಾನ ಸಭಾ ಚುನಾವಣಾ ಫಲಿತಾಂಶ ಸೋಮವಾರ ಘೋಷಣೆಯಾಗಲಿದೆ. ಈ ಬಾರಿ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿ ನೇರ ಪ್ರತಿಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರೆ, ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ. ರಾಜ್ಯವಾರು ಕಾಂಗ್ರೆಸ್ ಸ್ಥಿತಿ ಹೇಗಿದೆ? ಎಲ್ಲಿ ಗೆಲ್ಲುವ ಭರವಸೆ ಇದೆ ? ಅಂತಿಮ ಕ್ಷಣದ ಸಮೀಕ್ಷೆ ಹೇಳುವುದೇನು? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ತಮಿಳುನಾಡು ಚುನಾವಣೆ: 62 ಮತ ಎಣಿಕೆ ಕೇಂದ್ರಗಳ ಭದ್ರತೆಗೆ ಲಕ್ಷಕ್ಕೂ ಹೆಚ್ಚು ಸಿಬ್ಬಂದಿ

ತಮಿಳುನಾಡು ಮತ ಎಣಿಕೆ ಭದ್ರತೆಗೆ ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಕಾವಲು

ತಮಿಳುನಾಡು ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ 62 ಎಣಿಕೆ ಕೇಂದ್ರಗಳಲ್ಲಿ ನಡೆಯಲಿದೆ. ಚುನಾವಣಾ ಭದ್ರತಾ ಕರ್ತವ್ಯಗಳಿಗಾಗಿ ಸುಮಾರು 1,00,000 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇದರಲ್ಲಿ ಚೆನ್ನೈನಲ್ಲಿ ಸುಮಾರು 20,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ: ಟಿಎಂಸಿಗೆ ಅಧಿಕಾರ ಉಳಿಸಿಕೊಳ್ಳುವ ಚಿಂತೆ; ಬಿಜೆಪಿಗೆ ಐತಿಹಾಸಿಕ ಗೆಲುವಿನ ನಿರೀಕ್ಷೆ

ಚುನಾವಣೆ ಫಲಿತಾಂಶಕ್ಕಾಗಿ ಕಾತರವಾಗಿದೆ ಪಶ್ಚಿಮ ಬಂಗಾಳ

ವಿಧಾನ ಸಭಾ ಚುನಾವಣಾ ಫಲಿತಾಂಶಕ್ಕಾಗಿ ಪಶ್ಚಿಮ ಬಂಗಾಳವು ಕಾತರದಿಂದ ಕಾಯುತ್ತಿದೆ. ಒಂದೆಡೆ ತೃಣಮೂಲ ಕಾಂಗ್ರೆಸ್ ಗೆ ಅಧಿಕಾರ ಉಳಿಸಿಕೊಳ್ಳುವ ಚಿಂತೆಯಾಗಿದ್ದರೆ, ಇನ್ನೊಂದೆಡೆ ಬಿಜೆಪಿಗೆ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಿಂದಾಗಿ ಹೆಚ್ಚಿನ ಮತದಾರರಿಗೆ ಮತದಾನ ಮಾಡಲಾಗದೇ ಇರುವುದು ಟಿಎಂಸಿಗೆ ಆತಂಕ ಉಂಟು ಮಾಡಿದ್ದರೆ, ಭಾರಿ ಪ್ರಮಾಣದಲ್ಲಿ ಮತದಾನವಾಗಿರುವುದು ಬಿಜೆಪಿಗೆ ಗೆಲುವಿನ ಭರವಸೆಯನ್ನು ಕೊಟ್ಟಿದೆ.

ಪಂಚ ರಾಜ್ಯಗಳ ಆಡಳಿತ ಯಾರ ಕೈಗೆ? ನಾಳೆ ಭವಿಷ್ಯ ನಿರ್ಧಾರ

ನಾಳೆ ಐದು ರಾಜ್ಯಗಳಲ್ಲಿ ಮತ ಎಣಿಕೆ

ಪಂಚ ರಾಜ್ಯಗಳ ಆಡಳಿತ ಅಧಿಕಾರ ಯಾರ ಕೈಗೆ ಎಂಬುದು ಸೋಮವಾರ ನಿರ್ಧಾರವಾಗಲಿದೆ. ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿಯ ವಿಧಾನ ಸಭಾ ಚುನಾವಣಾ ಫಲಿತಾಂಶ ನಾಳೆ ಘೋಷಣೆಯಾಗಲಿದೆ. ಮತ ಎಣಿಕೆ ಯಾವಾಗ ಆರಂಭವಾಗುತ್ತದೆ, ಫಲಿತಾಂಶ ಎಲ್ಲಿ ವೀಕ್ಷಣೆ ಮಾಡಬೇಕು ಎಂಬುದರ ಕುರಿತು ಸಂಪೂರ್ಣ ವಿವರ.

ಸರ್ಕಾರಿ ನೌಕರರಿಗೆ ಶುಭ ಸುದ್ದಿ: ಶೀಘ್ರದಲ್ಲೇ ಕನಿಷ್ಠ ಪಿಂಚಣಿ ಹೆಚ್ಚಳ ಸಾಧ್ಯತೆ

ಕನಿಷ್ಠ ಪಿಂಚಣಿ ಹೆಚ್ಚಳಕ್ಕೆ ಪ್ರಸ್ತಾಪ

ಸರ್ಕಾರಿ ನೌಕರರಿಗೆ ಒಂದು ಶುಭ ಸುದ್ದಿ ಇದೆ. ಕೇಂದ್ರ ಸರ್ಕಾರವು ಕನಿಷ್ಠ ಪಿಂಚಣಿ ಹೆಚ್ಚಳಕ್ಕೆ ಪ್ರಸ್ತಾಪ ಸಲ್ಲಿಸಿದೆ. ಇದರಿಂದ ಲಕ್ಷಾಂತರ ಜನರಿಗೆ ಪ್ರಯೋಜನವಾಗಲಿದೆ. ಶೀಘ್ರದಲ್ಲಿ ಪಿಂಚಣಿ ಹಣವನ್ನು ಎಟಿಎಂ ಮೂಲಕ ಪಡೆಯುವ ಮತ್ತು ಪಿಂಚಣಿ ಕನಿಷ್ಠ ಮೊತ್ತವನ್ನು 7,500 ರೂ. ಗೆ ಹೆಚ್ಚಿಸುವ ಕುರಿತು ಸರ್ಕಾರ ಪರಿಗಣಿಸುತ್ತಿದೆ ಎನ್ನಲಾಗಿದೆ.

ನಾಸಿಕ್ ಟಿಸಿಎಸ್ ಪ್ರಕರಣ: ನಿದಾ ಖಾನ್‌ಗೆ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನ್ಯಾಯಾಲಯ

ನಿದಾ ಖಾನ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ

ಮಹಾರಾಷ್ಟ್ರದ ನಾಸಿಕ್‌ನ ಟಿಸಿಎಸ್ ಕಚೇರಿಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮತ್ತು ಬಲವಂತದ ಮತಾಂತರ ಯತ್ನದ ಆರೋಪದಲ್ಲಿ ಬಂಧಿತಳಾಗಿರುವ ನಿದಾ ಖಾನ್‌ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನಾಸಿಕ್ ರಸ್ತೆ ನ್ಯಾಯಾಲಯ ತಿರಸ್ಕರಿಸಿದೆ. ಡಿಜಿಟಲ್ ಪುರಾವೆಗಳು, ತನಿಖೆ ವಿಷಯಗಳನ್ನು ಆಧರಿಸಿ ಈ ಆದೇಶ ಹೊರಡಿಸುತ್ತಿರುವುದಾಗಿ ನ್ಯಾಯಾಲಯ ತಿಳಿಸಿದೆ.

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ನಾಳೆ ಘೋಷಣೆ: ಫಾಲ್ಟಾ ಕ್ಷೇತ್ರಕ್ಕಿಲ್ಲ ನಾಯಕನ ಆಯ್ಕೆ

ಪಶ್ಚಿಮ ಬಂಗಾಳದ ಈ ಕ್ಷೇತ್ರಕ್ಕೆ ನಾಳೆ ನಾಯಕನ ಆಯ್ಕೆ ಭಾಗ್ಯವಿಲ್ಲ

ಘರ್ಷಣೆ, ಗೊಂದಲ, ಬೆದರಿಕೆ, ಮತ ಪೆಟ್ಟಿಗೆಯ ದುರ್ಬಳಕೆ ಸೇರಿದಂತೆ ಪಶ್ಚಿಮ ಬಂಗಾಳದ ಎರಡನೇ ಹಂತದ ಮತದಾನದ ವೇಳೆ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ ಪಶ್ಚಿಮ್ ಮಗ್ರಹತ್ ಮತ್ತು ಡೈಮಂಡ್ ಹಾರ್ಬರ್ ವಿಧಾನಸಭಾ ಕ್ಷೇತ್ರಗಳ 15 ಮತಗಟ್ಟೆಗಳಲ್ಲಿ ಮರು ಮತದಾನ ನಡೆಯಿತು. ಆದರೆ ಮತ್ತೆ 32 ಫಾಲ್ಟಾದಲ್ಲಿ ಹಲವು ದೂರುಗಳು ದಾಖಲಾಗಿರುವುದರಿಂದ ಇಲ್ಲಿನ ಚುನಾವಣೆ ಫಲಿತಾಂಶ ಘೋಷಣೆಯನ್ನು ತಡೆ ಹಿಡಿಯಲಾಗಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ: ಮತಗಳಲ್ಲಿ ಡಬಲ್‌ ಟಿಕ್‌ನಿಂದಾಗಿ 255 ಮತ ತಿರಸ್ಕೃತ, ಕಾಂಗ್ರೆಸ್‌ಗೆ  ಶಾಕ್

ಶಾಸಕ ಟಿ.ಡಿ. ರಾಜೇಗೌಡಗೆ ಶಾಕ್ ಕೊಟ್ಟ ಮರು ಮತ ಎಣಿಕೆ

2023ರಲ್ಲಿ ನಡೆದಿದ್ದ ಚಿಕ್ಕಮಗಳೂರು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಏಣಿಕೆ ವೇಳೆ ಕಾಂಗ್ರೆಸ್ ಗೆ ಬಹುದೊಡ್ಡ ಹಿನ್ನಡೆಯಾಗಿದೆ. ಡಬ್ಬಲ್ ಟಿಕ್ ನಿಂದಾಗಿ 255 ಮತಗಳು ತಿರಸ್ಕೃತಗೊಂಡಿದ್ದು, ಶಾಸಕ ಟಿ.ಡಿ. ರಾಜೇಗೌಡ ಅವರು ಶಾಕ್ ಅನುಭವಿಸಿದ್ದಾರೆ. ಮೊದಲ ಬಾರಿಯ ಎಣಿಕೆಯಲ್ಲಿ ಗೆಲುವು ಸಾಧಿಸಿದ್ದ ರಾಜೇಗೌಡ ಅವರು ಮರು ಮತ ಎಣಿಕೆ ವೇಳೆ ಭಾರಿ ಹಿನ್ನಡೆ ಅನುಭವಿಸಿದರು.

ಸಮುದ್ರದಲ್ಲಿ ನಾವು ತೈಲ, ಸರಕುಗಳನ್ನು ದೋಚುತ್ತೇವೆ: ಡೊನಾಲ್ಡ್ ಟ್ರಂಪ್

"ನಾವು ಕಡಲ್ಗಳ್ಳರು' ಈ ಬಗ್ಗೆ ಹೆಮ್ಮೆ ಇದೆ: ಡೊನಾಲ್ಡ್ ಟ್ರಂಪ್

ಇರಾನ್ ಬಂದರುಗಳಿಗೆ ದಿಗ್ಬಂಧನವನ್ನು ವಿಧಿಸಿರುವ ಯುಎಸ್ ನೌಕಾ ಪಡೆಯು ಕಡಲ್ಗಳ್ಳರಂತೆ ಸಮುದ್ರದಲ್ಲಿ ಇರಾನಿನ ತೈಲ, ಸರಕುಗಳನ್ನು ದೋಚುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಫ್ಲೋರಿಡಾದಲ್ಲಿ ಈ ಕುರಿತು ಶನಿವಾರ ಮಾತನಾಡಿದ ಅವರು ಈ ಬಗ್ಗೆ ನಮಗೆ ಹೆಮ್ಮೆ ಇದೆ ಎಂದರು.

Guinness World Record: ಅಂಡಮಾನ್, ನಿಕೋಬಾರ್ ದ್ವೀಪದ ಬಳಿ ಸಮುದ್ರದಾಳದಲ್ಲಿ ಅರಳಿದ ಬೃಹತ್ ಭಾರತ ಧ್ವಜ; ವಿಶ್ವ ದಾಖಲೆ

ಸಮುದ್ರದಾಳದಲ್ಲಿ ಅರಳಿದ ಭಾರತದ ಧ್ವಜ

ಅದು ಹೆಮ್ಮೆಯ ಕ್ಷಣವಾಗಿತ್ತು. ಸುಮಾರು 200 ಮಂದಿ ಸೇರಿ ಅಂಡಮಾನ್, ನಿಕೋಬಾರ್ ದ್ವೀಪದ ಬಳಿ ಸಮುದ್ರದಾಳದಲ್ಲಿ ಬೃಹತ್ ಭಾರತ ಧ್ವಜವನ್ನು ಅರಳಿಸಿದರು. ಸ್ವರಾಜ್ ದ್ವೀಪದ ರಾಧಾನಗರ ಬೀಚ್ ಬಳಿ ಬೃಹತ್ ಧ್ವಜವನ್ನು ಅರಳಿಸಲಾಗಿದ್ದು, ಇದು ಗಿನ್ನೆಸ್ ವಿಶ್ವ ದಾಖಲೆಯನ್ನು ಬರೆದಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಪತಿಯರನ್ನು ಅದಲು ಬದಲು ಮಾಡಲು ಅನುಮತಿ ಕೊಡಿ; ಸಹೋದರಿಯರ ವಿಚಿತ್ರ ಬೇಡಿಕೆ ಕೇಳಿ ದಂಗಾದ ಜಡ್ಜ್

ಸಹೋದರಿಯರ ವಿಚಿತ್ರ ಬೇಡಿಕೆ ಕೇಳಿ ನ್ಯಾಯಾಧೀಶರಿಗೆ ಶಾಕ್

ಸಹೋದರಿಯರಿಬ್ಬರು ನ್ಯಾಯಾಧೀಶರ ಮುಂದೆ ವಿಚಿತ್ರ ಬೇಡಿಕೆ ಇಟ್ಟ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಸ್ವಂತ ಸಹೋದರಿಯರಿಬ್ಬರು ತಮ್ಮ ಪತಿಯರನ್ನು ಅದಲು ಬದಲು ಮಾಡಿಕೊಳ್ಳಲು ಅವಕಾಶ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈ ಬೇಡಿಕೆಯನ್ನು ಕೇಳಿ ನ್ಯಾಯಾಧೀಶರು ಕೂಡ ದಂಗಾಗಿದ್ದಾರೆ. ಈ ಪ್ರಕರಣ ಈಗ ದೇಶಾದ್ಯಂತ ಸುದ್ದಿ ಮಾಡಿದೆ.

ಪಶ್ಚಿಮ ಬಂಗಾಳ ಮರು ಮತದಾನದ ನಡುವೆಯೇ ಬಿಜೆಪಿ, ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ

ಪಶ್ಚಿಮ ಬಂಗಾಳದಲ್ಲಿ 15 ಬೂತ್‌ಗಳಲ್ಲಿ ಶನಿವಾರ ಮರು ಮತದಾನ ನಡೆಯುತ್ತಿದ್ದ ನಡುವೆಯೇ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಎರಡನೇ ಹಂತದ ಮತದಾನದ ವೇಳೆ ನಡೆದಿರುವ ದುಷ್ಕೃತ್ಯಗಳ ಕಾರಣದಿಂದ ಭಾರತೀಯ ಚುನಾವಣಾ ಆಯೋಗವು ಮಗ್ರಹತ್ ಪಶ್ಚಿಮ್ ಮತ್ತು ಡೈಮಂಡ್ ಹಾರ್ಬರ್‌ ನ ಒಟ್ಟು 15 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಆದೇಶಿಸಿತ್ತು.

Loading...