ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

ವಿದ್ಯಾ ಇರ್ವತ್ತೂರು

[email protected]

ಕಾರ್ಕಳ ತಾಲೂಕಿನ ಇರ್ವತ್ತೂರಿನವರಾದ ಇವರು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು ಕನ್ನಡಪ್ರಭ ದಿನಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ವೃತ್ತಿ ಜೀವನ ಪ್ರಾರಂಭಿಸಿದರು. ಬಳಿಕ ಉದಯವಾಣಿ ದಿನಪತ್ರಿಕೆಯಲ್ಲಿ ಹಿರಿಯ ಉಪಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದು, ನವಸಮಾಜ, ನ್ಯೂಸ್ ಆ್ಯರೋ, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲೂ ಕಾರ್ಯ ನಿರ್ವಹಿಸಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 16 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದು, ಬರವಣಿಗೆ, ಓದು, ಪ್ರವಾಸ ಇವರ ನೆಚ್ಚಿನ ಹವ್ಯಾಸ. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ಗೆ ಸುದ್ದಿ, ವಿಶೇಷ ಲೇಖನಗಳನ್ನು ಬರೆಯುತ್ತಿದ್ದಾರೆ.

Articles
Vishwavani Health: ಆರೋಗ್ಯಕ್ಕೆ ಹಾಳು ಎಂದು ಗೊತ್ತಿದ್ದರೂ ಪಿಜ್ಜಾ, ಬರ್ಗರ್ ಸೇವಿಸೋದ್ಯಾಕೆ? ಇದರ ಹಿಂದಿರುವ ಸೀಕ್ರೆಟ್‌ ಗೊತ್ತೆ? ಇಲ್ಲಿದೆ ಅಪರೂಪದ ಮಾಹಿತಿ

ಪಿಜ್ಜಾ, ಬರ್ಗರ್ ಬಗ್ಗೆ ಆಕರ್ಷಣೆ ಏಕೆ? ಈ ಬಗ್ಗೆ ವಿಜ್ಞಾನ ಹೇಳೋದೇನು?

ಎದುರು ಬಗೆಬಗೆಯ ಆಹಾರಗಳು ಇದ್ದಾಗ ಜಂಕ್ ಆಹಾರಗಳೇ ನಮ್ಮನ್ನು ಹೆಚ್ಚು ಸೆಳೆಯುತ್ತವೆ. ಇದಕ್ಕೆ ಮುಖ್ಯ ಕಾರಣ ನಮ್ಮ ಹಾರ್ಮೋನ್‌ಗಳು. ಕೆಲವೊಂದು ಆಹಾರಗಳನ್ನು ಎಷ್ಟು ತಿಂದರೂ ತೃಪ್ತಿ ಕೊಡುವುದಿಲ್ಲ. ಇದರಿಂದಾಗಿಯೇ ಇವತ್ತು ನಾನಾ ರೀತಿಯ ಕಾಯಿಲೆಗಳು ಉಂಟಾಗುತ್ತಿವೆ ಎನ್ನುತ್ತಾರೆ ಮೈಸೂರು ವಿವಿಯ ಜೆನೆಟಿಕ್ಸ್‌ ಮತ್ತು ಜಿನೋಮಿಕ್ಸ್‌ ಅಧ್ಯಯನ ವಿಭಾಗದ ಮುಖ್ಯಸ್ಥೆ ಡಾ. ಸುತ್ತೂರು ಮಾಲಿನಿ.

ʼʼಬಾಡಿಗೆಗೆ ಗೆಳೆಯನನ್ನು ಪಡೆಯಿರಿ...ʼʼ: ಆಮಿಷಕ್ಕೆ ಬಲಿಯಾಗದಂತೆ, ಹೊಸ ಸ್ಕ್ಯಾಮ್ ಬಗ್ಗೆ ಎಚ್ಚರಿಸಿದ ಹೈದರಾಬಾದ್ ಪೊಲೀಸರು

'ಗೆಳೆಯ ಬಾಡಿಗೆಗೆ' ವಂಚನೆ ಬಗ್ಗೆ ಎಚ್ಚರಿಕೆ

ಬಾಡಿಗೆಗೆ ಗೆಳೆಯ ದೊರೆಯುತ್ತಾನೆ ಎನ್ನುವ ಪೋಸ್ಟರ್ ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಇದನ್ನು ನಂಬಿ ಮೋಸ ಹೋಗದಿರಿ ಎಂದು ವಿಶೇಷವಾಗಿ ಮಹಿಳೆಯರಿಗೆ ಹೈದರಾಬಾದ್ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ. ವಂಚಕರು ಹಣ ಮತ್ತು ವಯಕ್ತಿಕ ಮಾಹಿತಿಗಳನ್ನು ಕದಿಯಲು ಮಾಡಿರುವ ವಂಚನೆಯ ಜಾಲ ಇದಾಗಿದೆ ಎಂದು ಅವರು ಎಚ್ಚರಿಸಿದ್ದಾರೆ.

ಕೆಲಸಕ್ಕೆ ಸೇರಿದ ನಾಲ್ಕೇ ದಿನಕ್ಕೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಸೆಕ್ಯೂರಿಟಿ ಗಾರ್ಡ್; ಗುಜರಾತಿನಲ್ಲಿ ಬೆಚ್ಚಿ ಬೀಳಿಸುವ ಘಟನೆ

ಮಹಿಳೆ ಮೇಲೆ ಸೆಕ್ಯುರಿಟಿ ಗಾರ್ಡ್ ನಿಂದ ಲೈಂಗಿಕ ದೌರ್ಜನ್ಯ

ವಸತಿ ಕಟ್ಟಡದ ಭದ್ರತಾ ಸಿಬ್ಬಂದಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಕಟ್ಟಡದ ಟೆರೇಸ್ ಮೇಲೆ ಬಾಡಿಗೆದಾರ ಮಹಿಳೆಯ ಸೆಕ್ಯುರಿಟಿ ಗಾರ್ಡ್ ಅತ್ಯಾಚಾರ ನಡೆಸಿ ಟೆರೇಸ್ ಗೆ ಬೀಗ ಹಾಕಿ ಆರೋಪಿ ಪರಾರಿಯಾಗಿದ್ದು ಬಳಿಕ ಆತನನ್ನು ಬಂಧಿಸಲಾಗಿದೆ. ಆರೋಪಿಯನ್ನು ಉತ್ತರ ಪ್ರದೇಶದ ಹಾರ್ದೋಯ್ ಜಿಲ್ಲೆಯ ಆರೋಪಿ ಧರಮ್ ಸಿಂಗ್ ಎಂದು ಗುರುತಿಸಲಾಗಿದೆ.

ಜೆಎಸ್‌ಎಸ್‌ಸಿ ಪರೀಕ್ಷೆ ರದ್ದು ಮಾತುಕತೆ ವಿಫಲ: ಜಾರ್ಖಂಡ್ ವಿಧಾನಸಭೆಗೆ ವಿದ್ಯಾರ್ಥಿಗಳ  ಮೆರವಣಿಗೆ

ಜಾರ್ಖಂಡ್ ವಿಧಾನಸಭೆಗೆ ಇಂದು ವಿದ್ಯಾರ್ಥಿಗಳ ಮೆರವಣಿಗೆ

ಜಾರ್ಖಂಡ್‌ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಸೋಮವಾರ ರಾಜ್ಯ ವಿಧಾನಸಭೆಗೆ ಮೆರವಣಿಗೆ ನಡೆಸಲಿದ್ದಾರೆ. ಭಾನುವಾರ ಮತ್ತು ಸೋಮವಾರ ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದು, ಇದರಲ್ಲಿ ಯಾವುದೇ ಅಂತಿಮ ನಿರ್ಣಯ ಕೈಗೊಳ್ಳಲು ಸಾಧ್ಯವಾಗದೇ ಇರುವುದರಿಂದ ಈ ಮೆರವಣಿಗೆ ನಡೆಸುತ್ತಿರುವುದಾಗಿ ವಿದ್ಯಾರ್ಥಿ ನಾಯಕ ಸಂಜಯ್ ಮೆಹ್ತಾ ತಿಳಿಸಿದ್ದಾರೆ.

ವಾಟ್ಸ್‌ಆ್ಯಪ್‌ ಮೂಲಕ ರವಾನೆ; 2024ರ ಜೆಎಸ್‌ಎಸ್‌ಸಿ  ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಹೇಗೆ? ಸಿಐಡಿ ವರದಿಯಲ್ಲೇನಿದೆ?

ಜೆಎಸ್‌ಎಸ್‌ಸಿ 2024ರ ಪ್ರಶ್ನೆ ಪತ್ರಿಕೆ ಸೋರಿಕೆ: ಸಿಐಡಿ ವರದಿಯಲ್ಲೇನಿದೆ?

ಜಾರ್ಖಂಡ್ ಸಿಬ್ಬಂದಿ ಆಯ್ಕೆ ಸಮಿತಿ ನಡೆಸುವ ಪದವಿ ಹಂತದ (JSSC-CGL) ಪರೀಕ್ಷೆ 2024ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರವು ಅಕ್ರಮಗಳನ್ನು ತಳ್ಳಿ ಹಾಕಿದ್ದರೂ ವಾಟ್ಸ್ ಆಪ್ ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಇನ್ನು ಹಲವು ಸ್ಪೋಟಕ ಮಾಹಿತಿಗಳನ್ನು ಸಿಐಡಿ ವರದಿ ಬಹಿರಂಗಪಡಿಸಿದೆ.

14ನೇ ಜೆಪಿಎಸ್‌ಸಿ ಪರೀಕ್ಷೆ ರದ್ದು? ನೀಟ್ ಬಳಿಕ ಮತ್ತೊಂದು ವಿವಾದ ಎಬ್ಬಿಸಿದ ಜಾರ್ಖಂಡ್ ನಾಗರಿಕ ಸೇವಾ ಪರೀಕ್ಷೆ

ನೀಟ್ ಬಳಿಕ ವಿವಾದ ಎಬ್ಬಿಸಿದ ಮತ್ತೊಂದು ಪರೀಕ್ಷೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದಿಂದ ದೇಶಾದ್ಯಂತ ವಿದ್ಯಾರ್ಥಿಗಳ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರಿಂದ ಕೇಂದ್ರ ಶಿಕ್ಷಣ ಸಚಿವರ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಈಗ ಜಾರ್ಖಂಡ್ ನಲ್ಲಿ ಮತ್ತೊಂದು ಪರೀಕ್ಷೆ ವಿವಾದ ಎದ್ದಿದೆ. 14ನೇ ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಂಡಿದ್ದು, ಪರೀಕ್ಷೆ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ನಿಜವಾಗಿಯೂ ಆರೋಗ್ಯವಾಗಿದ್ದಾರಾ? ಬಿಡುಗಡೆಯಾದ ಹೊಸ ವಿಡಿಯೊದಲ್ಲಿ ಏನಿದೆ?

ಮೊಜ್ತಬಾ ಖಮೇನಿ ಅವರ ಮೊದಲ ವಿಡಿಯೊ ಬಿಡುಗಡೆ

ಇರಾನಿನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ವದಂತಿಗಳ ನಡುವೆ ಇದೀಗ ಖಮೇನಿ ಅವರ ಹೊಸ ವಿಡಿಯೊವೊಂದನ್ನು ಬಿಡುಗಡೆ ಮಾಡಲಾಗಿದೆ. ಈ ವಿಡಿಯೊದ ಸ್ಥಳ, ದಿನಾಂಕದ ಬಗ್ಗೆ ಉಲ್ಲೇಖ ಇಲ್ಲದೇ ಇರುವುದು ಕೂಡ ಹಲವು ಅನುಮಾನಗಳಿಗೆ ಕಾರಣವಾಗಿದೆ.

ರಾಜೀನಾಮೆ ಬಳಿಕ ಮೊದಲ ಬಾರಿ  ಜೆನ್ ಜಿಗಳ ಕುರಿತು ಮಾತನಾಡಿದ ಧರ್ಮೇಂದ್ರ ಪ್ರಧಾನ್; ಹೇಳಿದ್ದೇನು?

ಹುದ್ದೆ ನನಗೆ ಮುಖ್ಯವಾಗಿರಲಿಲ್ಲ: ಧರ್ಮೇಂದ್ರ ಪ್ರಧಾನ್

ನನಗೆ ಹುದ್ದೆ ಮುಖ್ಯವಾಗಿರಲಿಲ್ಲ ಎಂದು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ಮನದ ಮಾತನ್ನು ಸಚಿವ ಧರ್ಮೇಂದ್ರ ಪ್ರಧಾನ್ ಎಲ್ಲರ ಮುಂದಿಟ್ಟಿದ್ದಾರೆ. ಸಂಬಲ್ಪುರದ ಜಿಎಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿರುವ ಅವರು, ನೀಟ್ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಜೆನ್ ಜಿಗಳನ್ನು ದಾರಿತಪ್ಪಿಸುವ ಪ್ರಯತ್ನವನ್ನು ಕೆಲವರು ನಡೆಸಿದ್ದಾರೆ ಎಂದು ಆರೋಪಿಸಿದರು.

Honey Trap: ಮಹಿಳೆಯ ಆಮಿಷಕ್ಕೆ ಒಳಗಾಗಿ ಪಾಕಿಸ್ತಾನಕ್ಕೆ ರಕ್ಷಣಾ ರಹಸ್ಯ ಸೋರಿಕೆ ಮಾಡಿದ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅರೆಸ್ಟ್‌

ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಹನಿ ಟ್ರ್ಯಾಪ್‌ಗೆ ಬಲಿ

ಪಾಕಿಸ್ತಾನಕ್ಕೆ ಭಾರತದ ವಾಯುಪಡೆಯ ರಕ್ಷಣಾ ರಹಸ್ಯಗಳನ್ನು ನೀಡಿರುವ ಆರೋಪದಲ್ಲಿ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅನ್ನು ಬಂಧಿಸಲಾಗಿದೆ. ಹನಿ ಟ್ರ್ಯಾಪ್‌ಗೆ ಬಲಿಯಾದ ಸೇವೆಯಲ್ಲಿದ್ದ ಅಧಿಕಾರಿ ಆರೋಪಿಯನ್ನು ಕಳೆದ ಮೇ 30ರಂದು ಬಂಧಿಸಲಾಗಿದ್ದು, ಇದೀಗ ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾ ತೈಲ ಖರೀದಿಸುವ ಭಾರತದ ವಿರುದ್ಧ ಅಮೆರಿಕ ಕೆಂಡ; ಶೇಕಡಾ 100 ಸುಂಕ ವಿಧಿಸುವ ಸೆನೆಟರ್ ಲಿಂಡ್ಸೆ ಗ್ರಹಾಂ ಮಸೂದೆಗೆ ಅಂಗೀಕಾರ

ರಷ್ಯಾ ವಿರುದ್ಧ ನಿರ್ಬಂಧ ಮಸೂದೆ ಅಂಗೀಕಾರ

ರಷ್ಯಾ ವಿರುದ್ಧ ನಿರ್ಬಂಧ ವಿಧಿಸುವ ಸೆನೆಟರ್ ಲಿಂಡ್ಸೆ ಗ್ರಹಾಂ ಅವರ ಗೌರವಾರ್ಥ ಮಸೂದೆಯನ್ನು ಅಮೆರಿಕದ ಸೆನೆಟ್ ಅನುಮೋದಿಸಿದೆ. ಈ ಮಸೂದೆಯು ರಷ್ಯಾದ ತೈಲ ಅಥವಾ ನೈಸರ್ಗಿಕ ಅನಿಲದ ವಿಶ್ವದ ಐದು ಅಗ್ರ ಖರೀದಿದಾರರ ಮೇಲೆ ಪರಿಣಾಮ ಬೀರಲಿದೆ. ಉಕ್ರೇನ್ ಯುದ್ಧ ಪ್ರಾರಂಭಿಸಿದ್ದಕ್ಕಾಗಿ ರಷ್ಯಾ ವಿರುದ್ಧ ಹೊಸ ನಿರ್ಬಂಧಗಳನ್ನು ಗ್ರಹಾಂ ಬಲವಾಗಿ ಪ್ರತಿಪಾದಿಸಿದ್ದರಿಂದ ಅವರ ಹೆಸರನ್ನು ಈ ಮಸೂದೆಗೆ ಇಡಲಾಗಿದೆ.

ಶುಲ್ಕ ಕಡಿತ, ಗ್ರಾಹಕರಿಗೆ ರಿಯಾಯಿತಿಯಿಂದ ಆರ್ಥಿಕ ಹೊರೆ:  ಸ್ವಿಗ್ಗಿಗೆ ಬೆಂಗಳೂರಿನ ಹೊಟೇಲ್ ಆಡಳಿತ ಮಂಡಳಿಯಿಂದ ಪತ್ರ

ಸ್ವಿಗ್ಗಿ ಮೇಲೆ ಹೊಟೇಲ್ ಆಡಳಿತ ಮಂಡಳಿ ಅಸಮಾಧಾನ

ದೇಶದ ಸುಪ್ರಸಿದ್ದ ಆಹಾರ ವಿತರಣೆ ಕಂಪೆನಿಗಳಲ್ಲಿ ಒಂದಾದ ಸ್ವಿಗ್ಗಿಯಿಂದಾಗಿ ಹೊಟೇಲ್ ಮತ್ತು ರೆಸ್ಟೋರೆಂಟ್ ಮಾಲೀಕರು ಎದುರಿಸುತ್ತಿರುವ ಹಲವಾರು ಕಾರ್ಯಾಚರಣೆಯ ಸಮಸ್ಯೆಗಳ ಕುರಿತಾಗಿ ಸಿಇಒ ರೋಹಿತ್ ಕಪೂರ್ ಅವರಿಗೆ ಬೆಂಗಳೂರಿನ ಹೊಟೇಲ್ ಆಡಳಿತ ಮಂಡಳಿ ಪತ್ರ ಬರೆದಿದ್ದು, ಬಡ್ತಿ, ಕಮಿಷನ್‌, ರಿಯಾಯಿತಿ ಶುಲ್ಕಗಳು ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ: ಉಡುಪಿ ಉದ್ಯಮಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನ ಕಾಲಿಗೆ ಗುಂಡು, ಬಂಧನ

ಮುದರಂಗಡಿ ಶೂಟೌಟ್ ಪ್ರಕರಣ: ಆರೋಪಿಯೊಬ್ಬನ ಬಂಧನ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿಯೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗಳಲ್ಲಿ ಓರ್ವನನ್ನು ಕಾಪು ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್ ತಂಡವು ಬಂಧಿಸಿದೆ. ಈ ಕಾರ್ಯಾಚರಣೆ ವೇಳೆ ಪಿಎಸ್ಐ ಅವರಿಗೂ ಗುಂಡೇಟು ತಗಲಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಧಾನಿ ನರೇಂದ್ರ  ಮೋದಿ - ಸುಖ್ಬೀರ್ ಬಾದಲ್ ಭೇಟಿ: ಪಂಜಾಬ್ ಚುನಾವಣೆಗೂ ಮೊದಲು ಒಂದಾಗುವುದೇ  ಬಿಜೆಪಿ-  ಶಿರೋಮಣಿ ಅಕಾಲಿ ದಳ ?

ಕುತೂಹಲ ಹೆಚ್ಚಿಸಿದ ಪ್ರಧಾನಿ ಮೋದಿ -ಸುಖ್ಬೀರ್ ಬಾದಲ್ ಭೇಟಿ

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಚುನಾವಣೆಗಳಿಗೆ ರಾಜಕೀಯ ಪಕ್ಷಗಳು ಸಿದ್ಧತೆ ಮಾಡತೊಡಗಿವೆ. ಇದರಲ್ಲಿ ಈಗ ಕುತೂಹಲಕ್ಕೆ ಕಾರಣವಾಗಿರುವುದು ಪಂಜಾಬ್ ವಿಧಾನ ಸಭಾ ಚುನಾವಣೆ. 2020ರಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ವರ್ಷಗಳ ಬಳಿಕ ಇದೀಗ ಎಸ್‌ಎಡಿ ಮತ್ತೆ ಬಿಜೆಪಿ ಜೊತೆ ಸೇರುವುದೇ ಎನ್ನುವ ಪ್ರಶ್ನೆ ಎದ್ದಿದೆ. ಇದಕ್ಕೆ ಮುಖ್ಯ ಕಾರಣ ಪ್ರಧಾನಿ ನರೇಂದ್ರ ಮೋದಿ ಮತ್ತು ಸುಖ್ಬೀರ್ ಬಾದಲ್ ಅವರು ಭೇಟಿಯಾಗಿರುವುದು.

ನಿಮ್ಮೊಂದಿಗೆ ನಾನಿದ್ದೇನೆ: ಬಂಡಾಯ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ

ಬಂಡಾಯ ಸಂಸದರೊಂದಿಗೆ ಪ್ರಧಾನಿ ಮೋದಿ ಭೋಜನ ಸಂವಾದ

ತೃಣಮೂಲ ಕಾಂಗ್ರೆಸ್ ಮತ್ತು ಉದ್ಭವ ಠಾಕ್ರೆ ಬಣದ ಬಂಡಾಯ ಸಂಸದರೊಂದಿಗೆ ತಮ್ಮ ಅಧಿಕೃತ ನಿವಾಸದಲ್ಲಿ ಭೋಜನ ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ನಿಮ್ಮೊಂದಿಗೆ ನಾನಿದ್ದೇನೆ. ಯಾರೂ ಚಿಂತಿಸಬೇಕಿಲ್ಲ ಎಂದು ಭರವಸೆ ನೀಡಿದರು. ಮುಂಗಾರು ಅಧಿವೇಶನದಲ್ಲಿ ಶಾಸಕರ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಈ ಸಂವಾದ ನಡೆಯಿತು.

ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು: ಪಾಟ್ನಾದಲ್ಲಿ ಭುಗಿಲೆದ್ದ ಹಿಂಸಾಚಾರ, ಹೊತ್ತಿ ಉರಿದ ವಾಹನಗಳು

ಪಾಟ್ನಾದಲ್ಲಿ ಹಿಂಸಾಚಾರ; ಪೊಲೀಸ್ ಜೀಪ್ ಗಳಿಗೆ ಬೆಂಕಿ

ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದರಿಂದ ಪಾಟ್ನಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಉದ್ರಿಕ್ತ ಜನ ಸಮೂಹ ಮೂರು ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಹಲವೆಡೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ತಮಿಳುನಾಡಿನಲ್ಲಿ ಕೋಲಾಹಲ ಎಬ್ಬಿಸಿದ ಮೇಕೆದಾಟು ಯೋಜನೆ: ಸಿಎಂ ವಿಜಯ್ ಬೆಂಗಳೂರು ಭೇಟಿ ಪ್ರಶ್ನಿಸಿದ ಉದಯನಿಧಿ ಸ್ಟಾಲಿನ್

ಕರ್ನಾಟಕದೊಂದಿಗೆ ಮಾತನಾಡುವುದೇನಿದೆ.. ಉದಯನಿಧಿ ಸ್ಟಾಲಿನ್ ಪ್ರಶ್ನೆ

ಮೇಕೆದಾಟು ಯೋಜನೆ ವಿಚಾರವಾಗಿ ಕರ್ನಾಟಕದೊಂದಿಗೆ ಮಾತನಾಡುವುದು ಏನಿದೆ ಎಂದು ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ಪ್ರಶ್ನಿಸಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ಶುಕ್ರವಾರ ಕಾವೇರಿ ನೀರಿನ ವಿಚಾರವಾಗಿ ಸಿಎಂ ವಿಜಯ್ ಮತ್ತು ಜೂನಿಯರ್ ಸ್ಟಾಲಿನ್ ನಡುವೆ ತೀವ್ರ ವಾಗ್ವಾದ ನಡೆಯಿತು.

ಗಾರ್ಡನ್ ಸಿಟಿ ಬೆಂಗಳೂರಿಗೆ ಇನ್ನಷ್ಟು ಕಳೆ: ತಲೆ ಎತ್ತಲಿವೆ ಲಾಲ್ ಬಾಗ್ ಮಾದರಿಯ ಇನ್ನೂ 3 ಉದ್ಯಾನವನಗಳು

ಲಾಲ್‌ಬಾಗ್ ಮಾದರಿಯ 3 ಉದ್ಯಾನ ಯೋಜನೆ ಅನಾವರಣ

ಉತ್ತರ ಬೆಂಗಳೂರಿನ ಪ್ರಸ್ತಾವಿತ ಸುರಂಗ ಯೋಜನೆಯ ಪರಿಣಾಮ ಸುಮಾರು 900 ಮರಗಳು ನಾಶವಾಗುತ್ತವೆ ಎನ್ನುವ ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲಾಲ್‌ಬಾಗ್ ಮಾದರಿಯ 3 ಉದ್ಯಾನ ಯೋಜನೆಗಳನ್ನು ಅನಾವರಣಗೊಳಿಸಿದರು. ಇದರಲ್ಲಿ ಒಂದು ರಕ್ಷಣಾ ಭೂಮಿಯಲ್ಲಿ ಹಾಗೂ ಮತ್ತೆರಡು ನಗರದೊಳಗಿನ ಅರಣ್ಯ ಭೂಮಿಯಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.

Handloom Day: ನೇಕಾರರನ್ನು ಬೆಂಬಲಿಸಿ, ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿ: ಪ್ರಧಾನಿ ನರೇಂದ್ರ ಮೋದಿ ಕರೆ

ಕೈಮಗ್ಗ ದಿನ: ನೇಕಾರರನ್ನು ಬೆಂಬಲಿಸಲು ಪ್ರಧಾನಿ ಮೋದಿ ಕರೆ

ಕೈ ಮಗ್ಗ ದಿನದ ಮುನ್ನಾ ದಿನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದಾರೆ. ಈ ದಿನದ ಆಚರಣೆಯಿಂದ ದೇಶದ ನೇಕಾರರು ಮತ್ತು ಸಣ್ಣ ವ್ಯಾಪಾರಿಗಳಿಗೆ ಸಹಾಯವಾಗುವುದು. ನೇಕಾರರನ್ನು ಬೆಂಬಲಿಸಿ, ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿ ಎಂದು ಅವರು ಕರೆ ನೀಡಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಜೈಲು ಶಿಕ್ಷೆ

ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಜೈಲು ಶಿಕ್ಷೆ

ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಬಾಂಬೆ ಹೈಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. 2013ರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಗುರುವಾರ ಅವರನ್ನು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.

2013ರ ಲೈಂಗಿಕ ದೌರ್ಜನ್ಯ ಪ್ರಕರಣ: ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ ಅಪರಾಧಿ ಎಂದು ಘೋಷಿಸಿದ ಬಾಂಬೆ ಹೈಕೋರ್ಟ್‌

ಲೈಂಗಿಕ ದೌರ್ಜನ್ಯ: ತೆಹಲ್ಕಾ ಮಾಜಿ ಸಂಪಾದಕ ದೋಷಿ ಎಂದು ಘೋಷಣೆ

ಕಿರಿಯ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಲ್ಲಿ ಬಂಧಿಸಲಾಗಿದ್ದ ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ ನನ್ನು ಬಾಂಬೆ ಹೈಕೋರ್ಟ್ ದೋಷಿ ಎಂದು ಘೋಷಿಸಿದೆ. 2013ರಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತರುಣ್ ತೇಜ್‌ಪಾಲ್ ನನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.

ಮೂವರು ಪುತ್ರಿಯರಿದ್ದರೂ ಕೊನೆಗಾಲದಲ್ಲಿ ಅನಾಥನಾದ ಶ್ರೀಮಂತ ವ್ಯಾಪಾರಿ: ಅಂತ್ಯಕ್ರಿಯೆಯ ವಿಡಿಯೊ ಕಳುಹಿಸಿ ಸಾಕು ಎಂದ ಮಕ್ಕಳು

ತಂದೆಯ ಅಂತ್ಯಕ್ರಿಯೆ ಮಾಡಿ ವಿಡಿಯೊ ಕಳುಹಿಸಿ ಎಂದ ಮಕ್ಕಳು

ಜೀವವನ್ನೇ ತೇಯ್ದು ಮಕ್ಕಳನ್ನು ಚೆನ್ನಾಗಿ ನೋಡಿಕೊಂಡರೂ ಕೊನೆಗಾಲದಲ್ಲಿ ಅವರು ಜೊತೆ ನಿಲ್ಲುತ್ತಾರೆ ಎನ್ನುವ ಭರವಸೆ ಇರುವುದಿಲ್ಲ ಎಂಬುದನ್ನು ಕೆಲವೊಂದು ಘಟನೆಗಳು ಮತ್ತೆ ಮತ್ತೆ ಸಾಬೀತು ಪಡಿಸುತ್ತಲೇ ಇರುತ್ತದೆ. ಇಂತಹ ಒಂದು ಘಟನೆ ಈಗ ಹರಿಯಾಣದಲ್ಲಿ ನಡೆದಿದೆ. ಶ್ರೀಮಂತ ವ್ಯಾಪಾರಿಯೊಬ್ಬರಿಗೆ ಮೂವರು ಹೆಣ್ಣು ಮಕ್ಕಳಿದ್ದರೂ ಕೂಡ ತಂದೆಯ ಕೊನೆ ಘಳಿಗೆಯಲ್ಲಿ ಅವರು ಜೊತೆ ಇರಲಿಲ್ಲ. ವೃದ್ದಾಶ್ರಮದಲ್ಲೇ ಸಾವನ್ನಪ್ಪಿದ ತಂದೆಯ ಅಂತಿಮ ದರ್ಶನವನ್ನು ಮಾತ್ರವಲ್ಲ ಅಂತ್ಯಕ್ರಿಯೆ ನಡೆಸಲು ಕೂಡ ಬರಲಿಲ್ಲ.

100 ವರ್ಷ ಬದುಕಬೇಕಿದ್ದರೆ ಈ ಜಾಗಕ್ಕೆ ಹೋಗಿ!

ಶತಾಯುಷಿಯಾಗುವುದು ಹೇಗೆ ?

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿಗೆ ಜನರು ಹೃದಯಾಘಾತ, ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ 100 ವರ್ಷ ದಾಟುವುದು ಬಿಡಿ 40 ದಾಟಿದರೂ ದೊಡ್ಡದೇ ಎನ್ನುವಂತಾಗಿದೆ. ಇಂತಹ ಸಮಯದಲ್ಲೂ ಕೂಡ 100 ವರ್ಷಕ್ಕಿಂತ ಹೆಚ್ಚು ಕಾಲ ಬಾಳಬೇಕು ಎನ್ನುವವರು ವಿಶ್ವದ ಈ ಒಂದು ಜಾಗಗಳಿಗೆ ಹೋಗಿ ವಾಸ ಮಾಡಬಹುದು. ಅಂತಹ ಜಾಗ ಯಾವುದು, ಅಲ್ಲಿನ ವಿಶೇಷತೆ ಏನು ಎಂಬುದರ ಕುರಿತು ಮೈಸೂರು ವಿವಿಯ ಡಾ. ಸುತ್ತೂರು ಮಾಲಿನಿ ಅವರು ನೀಡಿರುವ ಮಾಹಿತಿ ಇಲ್ಲಿದೆ.

ಪಾಕಿಸ್ತಾನದಂತೆ ಮತ್ತೊಂದು ಭಯೋತ್ಪಾದನೆ ತಾಣವಾಗುತ್ತಿದೆ ಬಾಂಗ್ಲಾದೇಶ: ಶೇಕ್ ಹಸೀನಾ ಪುತ್ರ ಸಜೀಬ್ ವಾಜೀದ್ ಜಾಯ್

ಪಾಕಿಸ್ತಾನವಾಗುತ್ತಿದೆ ಬಾಂಗ್ಲಾದೇಶ: ಶೇಕ್ ಹಸೀನಾ ಪುತ್ರ ಆತಂಕ

ಬಾಂಗ್ಲಾದೇಶದ ವಿಚಾರದಲ್ಲಿ ಅಂತಾರಾಷ್ಟ್ರೀಯ ಸಮುದಾಯಗಳು ಮಧ್ಯಪ್ರವೇಶ ಮಾಡದೇ ಇದ್ದರೆ ಬಾಂಗ್ಲಾದೇಶ ಮತ್ತೊಂದು ಪಾಕಿಸ್ತಾನವಾಗಲಿದೆ. ಇದು ಭಯೋತ್ಪಾದನೆಯ ತಾಣವಾಗಲಿದೆ ಎಂದು ಶೇಖ್ ಹಸೀನಾ ಮಗ ಸಜೀಬ್ ವಾಜೀದ್ ಜಾಯ್ ಆತಂಕ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಬಾಂಗ್ಲಾದೇಶದಲ್ಲಿ ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನ್; ವಿಶ್ವದ ಹೊಸ ದೇಶವಾಗುವುದೇ?

ವಿಶ್ವದ ಹೊಸ ದೇಶವಾಗುವುದೇ ಬಲೂಚಿಸ್ತಾನ್?

ಹಲವಾರು ವರ್ಷಗಳಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಬಲೂಚಿಸ್ತಾನ್ ಈಗ ತನ್ನನ್ನು ತಾನು ಸ್ವಾತಂತ್ರ್ಯ ದೇಶವೆಂದು ಘೋಷಿಸಿಕೊಂಡಿದೆ. ಆಗಸ್ಟ್ 11 ಅನ್ನು ತನ್ನ ಸ್ವಾತಂತ್ರ್ಯ ದಿನವೆಂದು ಘೋಷಿಸುವ ಮೂಲಕ ಅದು ಇದಕ್ಕಾಗಿ ಜಾಗತಿಕ ಮನ್ನಣೆ ಗಳಿಸಲು ಮುಂದಾಗಿದೆ. ಆದರೆ ಇದು ಸಾಧ್ಯವೇ? ಇಲ್ಲಿದೆ ಈ ಕುರಿತು ಸಂಪೂರ್ಣ ಮಾಹಿತಿ.

Loading...