ರಾಜ್ಯದ ಹಲವೆಡೆ ಭಾರೀ ಮಳೆ ಸೂಚನೆ
Karnataka Weather: ಕೆಲ ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಇಂದೂ ಸಹ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
West Bengal New CM: ಪಶ್ಚಿಮ ಬಂಗಾಳದ ಚುನಾವಣೆಯ ಫಲಿತಾಂಶ ರಾಜಕೀಯದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಮಮತಾ ಬ್ಯಾನರ್ಜಿಯ ಭದ್ರಕೋಟೆಯನ್ನು ಒಡೆದು ಬಿಜೆಪಿ ಅಧಿಕಾರಕ್ಕೆ ಬಂದಿದೆ. 200 ಕ್ಕೂ ಅಧಿಕ ಕ್ಷೇತ್ರವನ್ನು ಗೆಲ್ಲುವ ಮೂಲಕ ಬಂಗಾಳದಲ್ಲಿ ಸರ್ಕಾರ ರಚಿಸಲು ಭಾರತೀಯ ಜನತಾ ಪಕ್ಷ ಸಜ್ಜಾಗಿದೆ.
ತಮಿಳುನಾಡಿನ ರಾಜಕೀಯದಲ್ಲಿ ಭಾರೀ ಬೆಳವಣಿಗೆ ಸಂಭವಿಸಿದ್ದು, ಟಿವಿಕೆ ಭರ್ಜರಿ ಗೆಲುವನ್ನು ಸಾಧಿಸಿದೆ. ಆರಂಭಿಕವಾಗಿ ಕೆಲ ಕ್ಷೇತ್ರಗಳಲ್ಲಿ ಹಿನ್ನಡೆಯಲ್ಲಿದ್ದ ವಿಜಯ್ ದಳಪತಿ ಪಕ್ಷ ಇದೀಗ 106 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಸರ್ಕಾರ ರಚಿಸಲು ಸಿದ್ಧತೆ ನಡೆಸುತ್ತಿದೆ. ತಮಿಳುನಾಡಿನ 234 ಸ್ಥಾನಗಳ ಪೈಕಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಪಶ್ಚಿಮ ಬಂಗಾಳದ ಚುನಾವಣೆ ಇಡೀ ಬಂಗಾಳದ ರಾಜಕೀಯ ಚಿತ್ರಣವೇ ಸಂಪೂರ್ಣವಾಗಿ ಬದಲಾಗಿದೆ. ಟಿಎಂಸಿಯಿಂದ 15 ವರ್ಷಗಳಿಂದ ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ದೀದಿ ಎಂದೇ ಪ್ರಸಿದ್ಧರಾಗಿದ್ದ ಮಮತಾ ಬಂಗಾಳದಲ್ಲಿ ಭದ್ರ ಕೋಟೆಯನ್ನು ಕಟ್ಟಿದ್ದರು. ಆದರೆ ಈ ಬಾರಿ ಬ್ಯಾನರ್ಜಿಗೆ ಭಾರೀ ಸೋಲಾಗಿದೆ.
ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲ್ಲಲ್ಪಟ್ಟ ಯುವತಿಯ ತಾಯಿ ರತ್ನ ದೇಬ್ನಾಥ್ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ಪಾಣಿಹಟಿ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ತೃಣಮೂಲ ಕಾಂಗ್ರೆಸ್ನ ತೀರ್ಥಂಕರ ಘೋಷ್ ಅವರು ಹಿನ್ನಡೆಯಲ್ಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿತ್ತು. ಮತದಾರ ಬಿಜೆಪಿಯತ್ತ ಒಲವು ತೋರಿದ್ದು, ಭಾರತೀಯ ಜನತಾ ಪಕ್ಷ ಗೆಲುವಿನತ್ತ ಮುನ್ನಗ್ಗುತ್ತಿದೆ. ಗೆಲುವಿನ ಕುರಿತು ಮಾತನಾಡಿದ ಸುವೆಂದು ಅಧಿಕಾರಿ ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಬಲವರ್ಧನೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಈಶಾನ್ಯ ರಾಜ್ಯದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಅಸ್ಸಾಂನಲ್ಲಿ ಬಿಜೆಪಿ ಜಯದತ್ತ ಮುನ್ನುಗುತ್ತಿದೆ. 126 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, 722 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಎನ್ಡಿಎ ನೇತೃತ್ವದ ಪಕ್ಷವು ಇದೀಗ 96 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, 27 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದೆ.
Davanagere Byelection: ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬೈ ಎಲೆಕ್ಷನ್ ನಡೆದಿದ್ದು, ಇಂದು ಫಲಿತಾಂಶ ಹೊರ ಬೀಳಲಿದೆ. ದಾವಣಗೆರೆ ಕ್ಷೇತ್ರದ ಫಲಿತಾಂಶ ಇದೀಗ ಭಾರೀ ಕುತೂಹಲ ಮೂಡಿಸಿದೆ. ದಾವಣಗೆರೆಯಲ್ಲಿ ಸಮರ್ಥ ಐದನೇ ಸುತ್ತನಲ್ಲಿಯೂ ಹಿನ್ನಡೆಯಲ್ಲಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಲು ಕೆಲವೇ ಗಂಟೆಗಳ ಮೊದಲು , ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಸ್ಟ್ರಾಂಗ್ ರೂಮ್ಗಳ ಬಳಿ ವಿದ್ಯುತ್ ಕಡಿತಗೊಳಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಹೈಕೋರ್ಟ್ ಆದೇಶದಂತೆ ನಡೆಸಿದ್ದ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಮಾ.3 ರಂದು ಭಾನುವಾರ ಬೆಳಗಿನ ಜಾವ ಮುಕ್ತಾಯಗೊಂಡಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಜಯಗಳಿಸಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.
Bagalkot and Davangere By Election and 5 State Assembly Election 2026 Live Counting and Updates Online: ಪಂಚ ವಿಧಾನಸಭಾ ಚುನಾವಣೆಗಳ ಫಲಿತಾಂಶ ಇಂದು (May 4) ರಂದು ಪ್ರಕಟಗೊಳ್ಳಲಿದೆ. ಸೋಮವಾರ ಸಂಜೆಯ ವೇಳೆಗೆ ಸಂಪೂರ್ಣ ಫಲಿತಾಂಶದ ನಿರೀಕ್ಷೆಯಿದ್ದು, ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗುತ್ತದೆ.
ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ಗೆ ಇದೀಗ ಶಾಕ್ ಎದುರಾಗಿದೆ. ಪಾಠಕ್ ವಿರುದ್ಧ ಪಂಜಾಬ್ನ ಎರಡು ಜಿಲ್ಲೆಗಳಲ್ಲಿ ಜಾಮೀನು ರಹಿತ ಎರಡು ಎಫ್ಐಆರ್ ದಾಖಲಿಸಲಾಗಿದೆ. ಮಹಿಳೆಯರಿಗೆ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪದ ಮೇಲೆ ಎಫ್ಐಆರ್ಗಳನ್ನು ದಾಖಲಿಸಲಾಗಿದೆ.
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಘಟನೆ ನಡೆದಿದೆ. ಮೃತಳನ್ನು ವಂದನಾ ಎಂದು ಗುರುತಿಸಲಾಗಿದ್ದು, ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ವಿವಾಹವಾಗಿದ್ದರು.
ಇಂದಿನಿಂದ ನಾಲ್ಕು ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ ಮೇ 8ರ ಬೆಳಗ್ಗೆ 11ರವರೆಗೆ ಪ್ಲೈಓವರ್ ಕ್ಲೋಸ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಹೀಗಾಗಿ ಫ್ಲೈಓವರ್ನ 2 ಬದಿಯಲ್ಲಿ ವಾಹನ ಸಂಚಾರಗಳಿಗೆ ನಿರ್ಬಂಧ ವಿಧಿಸಲಾಗಿದ್ದು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ. ಇತ್ತೀಚೆಗೆ 44 ನವಿಲುಗಳು ಸಾವನ್ನಪ್ಪಿದ್ದು, ಹಕ್ಕಿಜ್ವರ H5N1 ಸೋಂಕು ದೃಢಪಟ್ಟಿದೆ. ಏಪ್ರಿಲ್ 16 ರಂದು ಘಟನೆ ಮೊದಲಿಗೆ ವರದಿಯಾಗಿತ್ತು. ತದನಂತರ ಒಂದು ವಾರದ ಅವಧಿಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 44 ನವಿಲುಗಳು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದವು.
ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆ ಅಂಚೆ ಮತಪತ್ರಗಳ ಮತ ಎಣಿಕೆ ಮೇ 2ರ ಶನಿವಾರ ಬೆಳಗ್ಗೆ 9ಕ್ಕೆ ಆರಂಭಗೊಳ್ಳಲಿದೆ. ಮತ ಎಣಿಕಾ ಕೇಂದ್ರದ 200 ಮೀ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಆದೇಶಿಸಿದ್ದಾರೆ.
ಮಧ್ಯ ಪ್ರಾಚ್ಯ ಬಿಕ್ಕಟ್ಟಿನಿಂದಾಗಿ ಗ್ಯಾಸ್ ಸಿಲಿಂಡರ್ ಸಮಸ್ಯೆಯಿಂದ ಜನ ಹೈರಾಣಾಗಿದ್ದರು. ಇದರ ನಡುವೆಯೇ ಜನಸಾಮಾನ್ಯರಿಗೆ ಮತ್ತೊಂದು ಹೊರೆ ಎನ್ನುವಂತೆ ಮೇ 1ರಿಂದ ವಾಣಿಜ್ಯ ಅನಿಲ (LPG) ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಹೊಟೆಲ್ನ ತಿಂಡಿ ತಿನಿಸುಗಳ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
Electricity Bill Hike: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್ಸಿ) ಗೃಹ ಬಳಕೆಯ ವಿದ್ಯುತ್ ದರ ಪರಿಷ್ಕರಿಸಿದ್ದು, ಬೆಸ್ಕಾಂ ಮತ್ತು ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ. ಉಳಿದಂತೆ ಜೆಸ್ಕಾಂ, ಹೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ.
ಬೇಸಿಗೆಯ ಬಿಸಿಲಿನ ಝಳ ಹೆಚ್ಚಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ತಂಪಾದ ಪಾನೀಯಗಳು ಹಾಗೂ ಐಸ್ಕ್ರೀಮ್ಗಳ ಮೊರೆ ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಪ್ರಮುಖ ಆನ್ಲೈನ್ ಡೆಲಿವರಿ ಪ್ಲಾಟ್ಫಾರ್ಮ್ 'ಇನ್ಸ್ಟಾಮಾರ್ಟ್' ಬಿಡುಗಡೆ ಮಾಡಿರುವ 'ಸಮ್ಮರ್ ಟ್ರೆಂಡ್ಸ್ 2026'ರ ವರದಿ. ಇದರ ಪ್ರಕಾರ, ಬೆಂಗಳೂರಿನ ಜನ ದೇಶದಲ್ಲೇ ಅತಿ ಹೆಚ್ಚು ಐಸ್ಕ್ರೀಮ್ ಸೇವಿಸುತ್ತಿದ್ದಾರೆ.
ಕರ್ನಾಟಕ ಸರ್ಕಾರವು ಮೋಟಾರು ವಾಹನಗಳ (Motor Vehicle) ತೆರಿಗೆ ದರವನ್ನು ಕಡಿತಗೊಳಿಸಿದ್ದು, ಪರಿಷ್ಕೃತ ತೆರಿಗೆ ವಿಧೇಯಕವೂ ನಾಳೆ ಮೇ 1ರಿಂದ ಜಾರಿಗೆ ಬರಲಿದೆ. ಸಾರಿಗೆ ಇಲಾಖೆಗೆ ಈಗಾಗಲೇ ಸರ್ಕಾರ ಸೂಚನೆ ನೀಡಿದ್ದು, ಮೇ 1ರಿಂದ ಹೊಸ ದರಗಳು ಜಾರಿಯಾಗಲಿವೆ.