ವಿಶ್ವೇಶ್ವರ ಭಟ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಮೂರೂರಿನವರು. ಧಾರವಾಡ ವಿವಿಯಲ್ಲಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ, ಪತ್ರಿಕೋದ್ಯಮದಲ್ಲೂ ಸ್ನಾತಕೋತ್ತರ ಪದವಿ ಗಳಿಸಿದರು. ನಂತರ ಲಂಡನ್ನಲ್ಲಿ ಪತ್ರಿಕೋದ್ಯಮ ಕುರಿತಂತೆ ವಿಶೇಷ ಶಿಕ್ಷಣ ಪಡೆದರು.
ಸಂಯುಕ್ತ ಕರ್ನಾಟಕದ ಮೂಲಕ ವೃತ್ತಿ ಆರಂಭಿಸಿದರು. ಬಳಿಕ ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಅವರಿಗೆ ಮಾಧ್ಯಮ ಸಲಹೆಗಾರರಾಗಿ, ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ನಂತರ ವಿಜಯ ಕರ್ನಾಟಕ, ಕನ್ನಡಪ್ರಭ ಪ್ರಧಾನ ಸಂಪಾದಕರಾಗಿ ಆ ಪತ್ರಿಕೆಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ದರು.
2016ರಲ್ಲಿ ವಿಶ್ವವಾಣಿ ದಿನ ಪತ್ರಿಕೆ ಆರಂಭಿಸಿದರು. ವಿಶ್ವವಾಣಿ ಸಮೂಹ ಇದೀಗ ಲೋಕಧ್ವನಿ, ವಿಶ್ವವಾಣಿ ಟಿವಿ ಮತ್ತು ವಿಶ್ವವಾಣಿ ಪುಸ್ತಕ ಪ್ರಕಾಶನವನ್ನು ಒಳಗೊಂಡು ಬೆಳೆಯುತ್ತಿದೆ.
ವಿಶ್ವೇಶ್ವರ ಭಟ್ 97 ಕೃತಿಗಳನ್ನು ರಚಿಸಿದ್ದಾರೆ. 'ನೂರೆಂಟು ವಿಶ್ವ', 'ಸಂಪಾದಕರ ಸದ್ಯಶೋಧನೆ', ಭಟ್ಟರ್ ಸ್ಕಾಚ್, 'ಇದೇ ಅಂತರಂಗ ಸುದ್ದಿ' ಹಾಗೂ 'ಆಸ್ಕ್ ದಿ ಎಡಿಟರ್' ಅಂಕಣಗಳನ್ನು ಬರೆಯುತ್ತಿದ್ದಾರೆ.