ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಾಗಲಕೋಟೆ

ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡೋದನ್ನು ವಿಡಿಯೊ ಕಾಲ್‌ನಲ್ಲಿ ಅತ್ತೆ-ಮಾವನಿಗೆ ತೋರಿಸಿದ ಗಂಡ!

ಪತ್ನಿಗೆ ನೇಣು ಹಾಕಿ ವಿಡಿಯೊ ಕಾಲ್‌ನಲ್ಲಿ ಅತ್ತೆ-ಮಾವನಿಗೆ ತೋರಿಸಿದ ಗಂಡ!

Bagalkot News: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ನೇಣಿನ ಕುಣಿಕೆಯಲ್ಲಿ ಪತ್ನಿ ನರಳಾಡುತ್ತಿದ್ದ ವೇಳೆ ವಿಡಿಯೊ ಕಾಲ್‌ ಮಾಡಿ, ಆಕೆಯ ತಂದೆ-ತಾಯಿಗೆ ಗಂಡ ತೋರಿಸಿದ್ದಾನೆ. ಅನೈತಿಕ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ನೇಣು ಹಾಕಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

Bagalkot Car Blast: ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ, ಛಿದ್ರಛಿದ್ರಗೊಂಡ ವಾಹನ!

ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ!

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಕಾರು ಸ್ಫೋಟಗೊಂಡಿದೆ. ಘಟನೆಯ ವೇಳೆ ವೈನ್ ಶಾಪ್ ಮಾಲೀಕ ಅಂಗಡಿ ಮುಚ್ಚುತ್ತಿದ್ದರು. ಇದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಫೋಟದ ರಭಸಕ್ಕೆ ಸುತ್ತಮುತ್ತ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕಾರು ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿಯಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ಕಟ್‌ ಆಗಿ ಬಿದ್ದಿದ್ದ ಕೈಯನ್ನೇ ಆಸ್ಪತ್ರೆಗೆ ಹಿಡಿದು ಬಂದ ಯುವಕ!

ಅಪಘಾತದಲ್ಲಿ ಕಟ್‌ ಆಗಿದ್ದ ಕೈಯನ್ನೇ ಆಸ್ಪತ್ರೆಗೆ ಹಿಡಿದು ಬಂದ ಯುವಕ!

ಭೀಕರ ರಸ್ತೆ ಅಪಘಾತದಲ್ಲಿ ತುಂಡಾಗಿ ಬಿದ್ದಿದ್ದ ಕೈಯನ್ನು ಹಿಡಿದು ಯುವಕನೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಯುವಕ ಕೈ ಮಣಿಕಟ್ಟಿನ ಭಾಗದಲ್ಲಿ ಸಂಪೂರ್ಣವಾಗಿ ಕತ್ತರಿಹೋದರೂ ಧೈರ್ಯ ಕಳೆದುಕೊಳ್ಳದೆ, ಕತ್ತರಿಸಿದ ಕೈಯನ್ನೇ ಹಿಡಿದು ಆಸ್ಪತ್ರೆಗೆ ಬಂದಿದ್ದಾನೆ. ರೋಹನ್ ಎಂಬ ಯುವಕ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ.

ರಾಜ್ಯ ಸರ್ಕಾರ ತಕ್ಷಣವೇ ರೈತರ ನೆರವಿಗೆ ಧಾವಿಸಲಿ: ನಿಖಿಲ್ ಕುಮಾರಸ್ವಾಮಿ ಆಗ್ರಹ

ರಾಜ್ಯ ಸರ್ಕಾರ ತಕ್ಷಣವೇ ರೈತರ ನೆರವಿಗೆ ಧಾವಿಸಲಿ: ನಿಖಿಲ್ ಕುಮಾರಸ್ವಾಮಿ

Nikhil Kumaraswamy: ಮಳೆಯ ಅಭಾವದಿಂದ ರೈತರು ಸಂಪೂರ್ಣವಾಗಿ ಕಂಗಾಲಾಗಿದ್ದಾರೆ. ಬಿತ್ತನೆ ಮಾಡಲು ಸಾಧ್ಯವಾಗಿಲ್ಲ, ಮಾಡಿದ ಬೆಳೆ ಕೂಡ ಒಣಗಿ ಹೋಗುತ್ತಿದೆ. ಕುಡಿಯಲು ನೀರಿಲ್ಲ, ಬೆಳೆಗೆ ನೀರಿಲ್ಲ. ರೈತರ ನೆರವಿಗೆ ಬರಬೇಕಾದ ರಾಜ್ಯ ಸರ್ಕಾರ ಕಣ್ಣು, ಮೂಗು, ಬಾಯಿ ಮುಚ್ಚಿಕೊಂಡು ಕುಳಿತಿದೆ. ಇದು ರೈತ ವಿರೋಧಿ ಧೋರಣೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷ್ಣಾ ತೀರದಲ್ಲಿ ಪ್ರವಾಹ ಭೀತಿ

ಕೃಷ್ಣಾ ತೀರದಲ್ಲಿ ಪ್ರವಾಹ ಭೀತಿ

ಪ್ರತಿ ವರ್ಷ ಪ್ರವಾಹದ ಸಂದರ್ಭದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪಂಪ್‌ಸೆಟ್‌ಗಳು ನೀರಿನಲ್ಲಿ ಮುಳುಗಿ ಹಾಳಾಗುತ್ತಿದ್ದ ಕಹಿ ಅನುಭವ ದಿಂದ ಎಚ್ಚೆತ್ತುಕೊಂಡಿರುವ ಕೃಷ್ಣಾ ತೀರದ ರೈತರು, ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ತಮ್ಮ ನೀರಾವರಿ ಪಂಪ್‌ಸೆಟ್‌ಗಳು ಹಾಗೂ ವಿದ್ಯುತ್ ಮೋಟಾರ್‌ ಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Almatti Dam : ಕುಡಿಯುವ ನೀರಿಗೆ ಮಾತ್ರ ಆದ್ಯತೆ: ಜಲಾಶಯಗಳು ಆರ್.ಸಿ. ವ್ಯಾಪ್ತಿಗೆ

ಕುಡಿಯುವ ನೀರಿಗೆ ಮಾತ್ರ ಆದ್ಯತೆ: ಜಲಾಶಯಗಳು ಆರ್.ಸಿ. ವ್ಯಾಪ್ತಿಗೆ

ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ಕುಡಿಯುವ ನೀರು ಕೃಷ್ಣಾ ನದಿಯನ್ನೇ ಅವಲಂಬಿಸಿದೆ. ಕಲಬುರಗಿ ನಗರದ ಸರಡಗಿ ಬ್ಯಾರೇಜ್ ಸೇರಿದಂತೆ ಇಂಡಿ, ಸಿಂದಗಿ, ತಾಳಿಕೋಟೆ ಭಾಗಗಳಿಗೆ ನಾರಾಯಣಪುರ ಜಲಾಶಯದಿಂದ ಸುಮಾರು 150 ಕಿ.ಮೀ. ದೂರದವರೆಗೆ ನೀರು ಹರಿಸ ಬೇಕಾಗುತ್ತದೆ.

Mohan Bhagwat: ಬಾಗಲಕೋಟೆಯ ಕಲಾದಗಿಗೆ ಮೋಹನ್ ಭಾಗವತ್ ಭೇಟಿ; ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆ

ಬಾಗಲಕೋಟೆಯ ಕಲಾದಗಿಗೆ ಮೋಹನ್ ಭಾಗವತ್ ಭೇಟಿ

RSS chief Mohan Bhagwat: ಭಾಗಲಕೋಟೆಯ ಆರ್‌ಎಸ್‌ಎಸ್‌ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ನಿವಾಸಕ್ಕೆ ಮೋಹನ್ ಭಾಗವತ್ ಅವರು ಭೇಟಿ ನೀಡಿದ್ದರು. ಝಡ್ ಪ್ಲಸ್ ಭದ್ರತೆ ಹೊಂದಿರುವ ಮೋಹನ್ ಭಾಗವತ್ ಅವರು ಕಲಾದಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಬಿಸಿಯೂಟ ಸೇವಿಸಿ ಬಾಗಲಕೋಟೆ ಸರ್ಕಾರಿ ಶಾಲೆಯ 12 ಮಕ್ಕಳು ಅಸ್ವಸ್ಥ

ಬಿಸಿಯೂಟ ಸೇವಿಸಿ ಬಾಗಲಕೋಟೆ ಸರ್ಕಾರಿ ಶಾಲೆಯ 12 ಮಕ್ಕಳು ಅಸ್ವಸ್ಥ

Bagalkot News: ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭೂ ಪರಿಹಾರ ಕೊಡದೇ ಸತಾಯಿಸುತ್ತಿದ್ದ ಅಧಿಕಾರಿ; ಚಪ್ಪಲಿಯಿಂದ ಹೊಡೆದ ರೈತ!

ಭೂ ಪರಿಹಾರ ಕೊಡದೇ ಸತಾಯಿಸುತ್ತಿದ್ದ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ!

ಮುಳುಗಡೆ ಭೂಮಿಗೆ ಹಲವು ವರ್ಷಗಳಿಂದ ಪರಿಹಾರ ಕೊಡದೇ ಆಟಾಡಿಸುತ್ತಿದ್ದ ಅಧಿಕಾರಿಗಳ ವರ್ತನೆಗೆ ಬೇಸರಗೊಂಡ ಬಾಗಲಕೋಟೆ ರೈತರೊಬ್ಬರು ಅಧಿಕಾರಿಗೆ ಚಪ್ಪಲಿಯಲ್ಲಿ ಥಳಿಸಿ ಆಕ್ರೋಶ ಹೊರಹಾಕಿದ್ದಾರೆ. ಬಾಗಲಕೋಟೆ ನಗರವನ್ನು ಸಂಪರ್ಕಿಸುವ ರಸ್ತೆ ಯೋಜನೆಗಾಗಿ 2004 ರಲ್ಲಿ ದಾದೇನವರ್ ವೃತ್ತದ ಬಳಿ ಇದ್ದ ರೈತ ಬಸವರಾಜ ದೊಡ್ಡಮನಿ ಎಂಬುವವರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು.

Bagalkot Child Death: ಸಂಪ್‌ಗೆ ಬಿದ್ದು ಮಗು ಸಾವು; ಉಪ್ಪಿನ ರಾಶಿ ಮೇಲೆ ಮೃತದೇಹವಿಟ್ಟು, ಕುರಾನ್‌ ಪಠಿಸಿ ಬದುಕಿಸಲು ಪೋಷಕರ ಯತ್ನ

ಸಂಪ್‌ಗೆ ಬಿದ್ದು ಮಗು ಸಾವು; ಮೃತದೇಹ ಉಪ್ಪಿನಲ್ಲಿಟ್ಟು ಬದುಕಿಸಲು ಯತ್ನ

ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38ರಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಗುವನ್ನು ಬದುಕಿಸಲು ಪೋಷಕರು ನಡೆಸಿದ ಪ್ರಯತ್ನದ ದೃಶ್ಯ ನೋಡುಗರ ಮನ ಕಲಕುವಂತೆ ಮಾಡಿದೆ.

ಸೌಲಭ್ಯ ವಂಚಿತ ಪದವಿ ಕಾಲೇಜು

ಸೌಲಭ್ಯ ವಂಚಿತ ಪದವಿ ಕಾಲೇಜು

ತಾಲೂಕಾ ಕೇಂದ್ರವಾಗಿರುವ ರಬಕವಿ-ಬನಹಟ್ಟಿಗೆ ಪದವಿ ಕಲಿಯುವ ವಿದ್ಯಾರ್ಥಿಗಳಿಗೆ ಸರಕಾರಿ ಪದವಿ ಕಾಲೇಜು ಸವಾಲಾಗಿ ಕಾಡುತ್ತಿದೆ. ಕಲೆ ಹಾಗೂ ವಾಣಿಜ್ಯ ವಿಭಾಗ ನಿರ್ವಹಣೆ ಯಲ್ಲಿರುವ ಇಲ್ಲಿನ ಕಾಲೇಜು ಪ್ರಸಕ್ತ ವರ್ಷದಿಂದ ಬಿಬಿಎ ಹಾಗೂ ಬಿಸಿಎ ವಿಭಾಗ ಪ್ರಾರಂಭ ಗೊಳ್ಳಲಿದೆ.

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಆರಂಭದಲ್ಲಿ ಕೈ ಟಿಕೆಟ್ ವಿಚಾರವಾಗಿ ಮೇಟಿ ಕುಟುಂಬದಲ್ಲಿ ಉಂಟಾದ ಗೊಂದಲ ಕಾಂಗ್ರೆಸ್ ಗೆ ಕೊಂಚ ಹಿನ್ನಡೆ ಉಂಟುಮಾಡಿದ್ದರೂ ಕೊನೆಗೆ ಸಿಎಂ ಸಿದ್ದರಾಮಯ್ಯನವರ ಸಂಧಾನದ ಫಲವಾಗಿ ಉಮೇಶ್ ಮೇಟಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಯಿತು. ಜತೆಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಮತಕ್ಷೇತ್ರದ ಅಭ್ಯರ್ಥಿ ಪರವಾಗಿ ಹಳ್ಳಿ, ಹಳ್ಳಿಯಲ್ಲೂ ಪ್ರಚಾರ ಮಾಡಿದ್ದರ ಕಾರಣಕ್ಕೆ ಕಾಂಗ್ರೆಸ್ 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ಮುಸ್ಲಿಮರ ಅಸಮಾಧಾನದ ನಡುವೆ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್‌ ಗೆದ್ದಿದ್ದೇಗೆ?; ಬಾಗಲಕೋಟೆಯಲ್ಲಿ ಮೇಟಿ ಗೆಲುವಿಗೆ ಪ್ರಮುಖ ಕಾರಣಗಳು

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು

Karnataka By-Election Results 2026: ಪಂಚ ರಾಜ್ಯ ಚುನಾವಣೆ ಜತೆಗೆ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಸೋಮವಾರ ಹೊರಬಿದ್ದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಕಾರಣವಾದ ಪ್ರಮುಖ ಅಂಶಗಳು ಇಲ್ಲಿವೆ.

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು, ಇದು ಕಾರ್ಯಕರ್ತರ ಗೆಲುವು: ಬಾಗಲಕೋಟೆ ಕೈ ಅಭ್ಯರ್ಥಿ ಉಮೇಶ್‌ ಮೇಟಿ

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು: ಕೈ ಅಭ್ಯರ್ಥಿ ಉಮೇಶ್‌ ಮೇಟಿ

Bagalkot By-Election Results: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರು 22,332 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿಜೆಪಿಯ ವೀರಣ್ಣ ಚರಂತಿಮಠ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜೇತ ಅಭ್ಯರ್ಥಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.

Bagalkot By-Election Results 2026: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

Karnataka Bypoll Results: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ಕ್ಷೇತ್ರದಲ್ಲಿ ಎಚ್ ವೈ ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದೀಗ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Karnataka By-Election Results 2026: ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು, ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿ ಮುನ್ನಡೆ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಮುನ್ನಡೆ

Karnataka Bypoll Results: ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಸ್ಪರ್ಧಿಸಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಸ್ಪರ್ಧಿಸಿದ್ದಾರೆ. ಇವರ ರಾಜಕೀಯ ಭವಿಷ್ಯ ಇಂದು ಹೊರಬೀಳಲಿದೆ.

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ: ಇಂದು ಮತ ಎಣಿಕೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಮತ ಎಣಿಕೆ ಇಂದು

ಬಾಗಲಕೋಟೆ ಮತ್ತು ದಾವಣಗೆರೆಯ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದ್ದು, ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ವಿಧಿಸಲಾಗಿದೆ. ಎರಡು ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಧ್ಯಾಹ್ನದ ವೇಳೆಗೆ ಹೊರಬೀಳುವ ನಿರೀಕ್ಷೆ ಇದೆ.

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ; ಯಾರಿಗೆ ಒಲಿಯಲಿದೆ ಗೆಲುವು?

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ

ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಉಪಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಡಿದೆ. ಬೈ ಎಲೆಕ್ಷನ್‌ನಲ್ಲಿ ಯಾರಿಗೆ ಗೆಲುವು ಒಲಿಯಲಿದೆ ಎಂಬ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮೂಡಿದೆ.

Weather report: ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ವಿಶ್ವದ ಅತ್ಯಂತ ಬಿಸಿಯಾದ 100 ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಮೂರು ಜಿಲ್ಲೆಗಳು ಸ್ಥಾನ ಪಡೆದಿದೆ. ಇದು ರಾಜ್ಯದಲ್ಲಿ ತಾಪಮಾನ ಏರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ಸೂರ್ಯನ ಪ್ರತಾಪ ಅತಿಯಾಗಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

Murder case: ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಮೃತ ದುರ್ದೈವಿ. ಈ ಘಟನೆಯ ಕ್ರೌರ್ಯ ಕಂಡು ಕನ್ನೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮೃತನ ದೊಡ್ಡಪ್ಪನ ಮಗ ಸದಾಶಿವ ಪಡಸಲಗಿಯೇ ಕೊಲೆಗೈದ ಆರೋಪಿ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲೂ ಲವ್‌ ಜಿಹಾದ್‌ ಶಂಕೆ: ಅನ್ಯಕೋಮಿನ ಯುವಕನ ಕಿರುಕುಳ, ಯುವತಿ ಆತ್ಮಹತ್ಯೆ

ಬಾಗಲಕೋಟೆ:‌ ಲವ್‌ ಜಿಹಾದ್‌ ಶಂಕೆ, ಯುವಕನ ಕಿರುಕುಳ, ಯುವತಿ ಆತ್ಮಹತ್ಯೆ

ಟಯರ್‌ ಅಂಗಡಿಗೆ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೊಂಗ್ರಿಸಾಬ್ ನದಾಫ್‌ ಮಧ್ಯೆ ಕಳೆದ 2 ವರ್ಷಗಳಿಂದ ಪ್ರೀತಿಯಿತ್ತು. ಆದರೆ ಏಪ್ರಿಲ್ 15ರಂದು ಈಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾಗಿರುವ ಭೂಮಿಕಾ ಹಿಜಾಬ್‌ನಲ್ಲಿ ಕಾಣಿಸಿಕೊಂಡಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Karnataka Bypolls: ಉಪಚುನಾವಣೆ; ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ ದಾಖಲು

ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ

Voter Turnout: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಗುರುವಾರ ಉಪಚುನಾವಣೆ ನಡೆದಿದೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಇಲ್ಲಿದೆ.

Karnataka By Elections: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮುಂಜಾನೆ ಮತದಾನ ಆರಂಭವಾಗಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಬಸನಗೌಡ ಪಾಟೀಲ ಯತ್ನಾಳ Video

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ: ಬಸನಗೌಡ ಪಾಟೀಲ ಯತ್ನಾಳ

Bagalkot Bypoll 2026: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಕ್ಷೇತ್ರದ ಕಮತಗಿ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಸ್ಲಿಂ ಸಮುದಾಯ ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು. ಆಜಾನ್ ಕೂಗೋರಿಗೆ 6 ಸಾವಿರ ರುಪಾಯಿ, ವಿದೇಶಗಳಲ್ಲಿ ಹೆಚ್ಚಿನ ವ್ಯಾಸಂಗ ಮಾಡಲು ಇಚ್ಚಿಸುವ ಮುಸ್ಲಿಂ ಸಮುದಾಯದ ಮಕ್ಕಳಿಗೆ ಮಕ್ಕಳಿಗೆ 30 ಲಕ್ಷ ರೂಪಾಯಿ ಶಿಷ್ಯವೇತನ, ಮುಸ್ಲಿಂ ಓಣಿಗಳಲ್ಲಿ ಒಂದೊಂದು ಸರ್ಕಾರಿ ಐಟಿಐ ಕಾಲೇಜು, ಮುಸ್ಲಿಂ ಯುವಕರಿಗೆ ಸ್ಟಾರ್ಟ್‌ ಅಪ್‌ಗೆ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಪಿಸಿದರಲ್ಲದೇ, ಹಿಂದುಳಿದ, ದಲಿತ ಸಮುದಾಯದವರಿಗೆ ಈ ಯೋಜನೆ ಇದೆಯಾ ಎಂದು ಅವರು ಪ್ರಶ್ನಿಸಿದ್ದಾರೆ.

Loading...