ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಾಗಲಕೋಟೆ

Mudhol Breed Dogs: ಕರ್ನಾಟಕ ಮೂಲದ ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ; ಮನ್‌ ಕಿ ಬಾತ್‌ನಲ್ಲಿ ಹೇಳಿದ್ದೇನು?

ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ

Mann Ki Baat: ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ಮನ್‌ ಕಿ ಬಾತ್‌ ಕಾರ್ಯಕ್ರಮದ 127ನೇ ಕಂತಿನಲ್ಲಿ ಕರ್ನಾಟಕ ಮೂಲದ ಮುಧೋಳ ತಳಿಯ ಶ್ವಾನದ ಬಗ್ಗೆ ಪ್ರಸ್ತಾವಿಸಿದರು. ʼಬಿಎಸ್‌ಎಫ್‌ ಮತ್ತು ಸಿಆರ್‌ಪಿಎಫ್‌ ತಮ್ಮ ತಂಡಗಳಲ್ಲಿ ಭಾರತೀಯ ತಳಿಯ ಶ್ವಾನಗಳ ಸಂಖ್ಯೆಯನ್ನು ಹೆಚ್ಚಿಸಿವೆʼʼ ಎಂದರು.

Karnataka Weather: ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಯೆಲ್ಲೋ ಅಲರ್ಟ್‌; ರಾಜ್ಯದಲ್ಲಿ ಮುಂದಿನ ಒಂದು ವಾರ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

Cylinder Explosion: ಬಾಗಲಕೋಟೆಯಲ್ಲಿ ಸಿಲಿಂಡರ್‌ ಸ್ಫೋಟ; 8 ಮಂದಿಗೆ ಗಂಭೀರ ಗಾಯ, 7 ಬೈಕ್‌ ಸುಟ್ಟು ಕರಕಲು

ಬಾಗಲಕೋಟೆಯಲ್ಲಿ ಸಿಲಿಂಡರ್‌ ಸ್ಫೋಟವಾಗಿ 8 ಮಂದಿಗೆ ಗಾಯ

Bagalkot News: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್​ ಬಳಿ ಅವಘಡ ನಡೆದಿದೆ. ಭಾನುವಾರ ಮುಂಜಾನೆ ಮನೆಯೊಂದರಲ್ಲಿ ಸಿಲಿಂಡರ್​​ ಸ್ಫೋಟಗೊಂಡಿದೆ. ಘಟನೆಯಲ್ಲಿ ಒಟ್ಟು 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏಳು ಬೈಕ್‌ ಸುಟ್ಟು ಕರಕಲಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Kaneri Swamiji: ಡಿಸಿ ನೋಟಿಸ್‌ ಬಳಿಕ ಬಾಗಲಕೋಟೆ ತೊರೆದ ಕನೇರಿ ಸ್ವಾಮೀಜಿ; ಮೂಲ ಮಠಕ್ಕೆ ವಾಪಸ್‌

ಡಿಸಿ ನೋಟಿಸ್‌ ಬಳಿಕ ಬಾಗಲಕೋಟೆ ತೊರೆದ ಕನೇರಿ ಸ್ವಾಮೀಜಿ

Adrushya Kadhsiddheshwar Swamiji : ವಿಜಯಪುರ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ, ಕನೇರಿ ಶ್ರೀಗಳು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ (ಕನೇರಿ ಶಾಖಾ ಮಠ) ಕಳೆದ ಎರಡು ದಿನಗಳಿಂದ ವಾಸ್ತವ್ಯ ಹೂಡಿದ್ದರು. ಆದರೆ, ಆದರೆ, ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಬಹುದು ಎಂದು ಜಿಲ್ಲಾಧಿಕಾರಿ ನೋಟಿಸ್ ಜಾರಿಗೊಳಿಸಿದ್ದಹಿನ್ನೆಲೆ ಸ್ವಾಮೀಜಿ ಜಿಲ್ಲೆಯನ್ನು ತೊರೆದಿದ್ದಾರೆ.

Kaneri Swamiji: ವಿಜಯಪುರದ ಬೆನ್ನಲ್ಲೇ ಕನ್ನೇರಿ ಶ್ರೀಗಳಿಗೆ ಬಾಗಲಕೋಟೆಯಿಂದಲೂ ಗಡಿಪಾರು, ಚಿಕ್ಕಾಲಗುಂಡಿ ಮಠ ತೊರೆಯುವಂತೆ ನೋಟಿಸ್

ವಿಜಯಪುರದ ಬೆನ್ನಲ್ಲೇ ಕನ್ನೇರಿ ಶ್ರೀಗಳಿಗೆ ಬಾಗಲಕೋಟೆಯಿಂದಲೂ ಗಡಿಪಾರು

Bagalakote: ಲಿಂಗಾಯತ ಶ್ರೀಗಳಿಗೆ ಅವಮಾನಕಾರಿಯಾಗಿ ಮಾತನಾಡಿದ್ದು, ಪ್ರಕ್ಷುಬ್ಧತೆಗೆ ಕಾರಣವಾಗಲಿದೆ ಎಂಬ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಕನ್ನೇರಿ ಶ್ರೀಗಳನ್ನು ನಿರ್ಬಂಧಿಸಲಾಗಿತ್ತು. ಇದೀಗ ಬಾಗಲಕೋಟೆ ಜಿಲ್ಲೆಯಲ್ಲೂ ಅವರಿಗೆ ಜಿಲ್ಲಾಧಿಕಾರಿಗಳು ನೋಟಿಸ್‌ ನೀಡಿದ್ದು, ಚಿಕ್ಕಾಲಗುಂಡಿ ಮಲ್ಲಿಕಾರ್ಜುನ ಮಠದಿಂದ ಆಚೆ ಕಳಿಸಲಾಗಿದೆ.

Murder Case: ಎರಡು ಅಮಾನುಷ ಘಟನೆ; ಹೆತ್ತ ತಾಯಿಯನ್ನೇ ಕತ್ತು ಸೀಳಿ ಕೊಂದ ಇಬ್ಬರು ಪುತ್ರರು!

ಎರಡು ಅಮಾನುಷ ಘಟನೆ; ಹೆತ್ತ ತಾಯಿಯನ್ನೇ ಕತ್ತು ಸೀಳಿ ಕೊಂದ ಇಬ್ಬರು ಪುತ್ರರು!

Murder Case: ಜಮೀನು ಮಾರಾಟ ಮಾಡಿ ಬಂದ ಹಣ ಕೊಡಲಿಲ್ಲ ಎಂದು ಮಗ ತಾಯಿಯ ಕತ್ತು ಕೊಯ್ದ ಘಟನೆ ರಾಮನಗರದಲ್ಲಿ ನಡೆದಿದ್ದರೆ, ಕುಡಿಯಲು ಹಣ ಕೊಡಲಿಲ್ಲ ಎಂದು ಬಾಗಲಕೋಟೆಯಲ್ಲಿ ಮಗ ತಾಯಿಯ ಕುತ್ತಿಗೆ ನರ ಕತ್ತರಿಸಿದ್ದಾನೆ. ಇಬ್ಬರೂ ಪಾಪಿಗಳನ್ನು ಬಂಧಿಸಲಾಗಿದೆ.

Caste Census: ಜಾತಿ ಸಮೀಕ್ಷೆ ವೇಳೆ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಬಿಡುಗಡೆ

ಜಾತಿ ಸಮೀಕ್ಷೆ; ಮೃತ ಶಿಕ್ಷಕರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ

compensation to Teachers: ಜಾತಿ ಸಮೀಕ್ಷೆ ಕಾರ್ಯದ ವೇಳೆ ಮೃತಪಟ್ಟಿದ್ದ ಬಾಗಲಕೋಟೆ ತಾಲೂಕಿನ ರಾಂಪೂರ ಸರ್ಕಾರಿ ಆಶ್ರಯ ಕಾಲೋನಿ ಶಾಲೆ ಸಹ ಶಿಕ್ಷಕಿ ದಾನಮ್ಮ ಐ ನಂದರಗಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ದಿಗುವಕೋಟೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ವೈ.ವಿ ರಾಮಕೃಷ್ಣಪ್ಪ ಅವರ ಕುಟುಂಬಗಳಿಗೆ ತಲಾ 20 ಪರಿಹಾರವನ್ನು ಸರ್ಕಾರ ಘೋಷಿಸಿದೆ.

Ban on RSS activities: ಆರ್‌ಎಸ್ಎಸ್‌ಗೆ ಅಂಕುಶ; ತಮಿಳುನಾಡು ಮಾದರಿ ಪರಿಶೀಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಆರ್‌ಎಸ್ಎಸ್‌ಗೆ ಅಂಕುಶ; ತಮಿಳುನಾಡು ಮಾದರಿ ಪರಿಶೀಲಿಸಲು ಸಿಎಂ ಸೂಚನೆ

CM Siddaramaiah: ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ. ಈ ಬಗ್ಗೆ ಪರಿಶೀಲಿಸಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Self Harming: ಜಾತ್ರೆಯಿಂದ ಖುಷಿಯಾಗಿ ಬಂದ ವಿದ್ಯಾರ್ಥಿನಿ ಪಿಜಿಯಲ್ಲಿ ಅನುಮಾನಾಸ್ಪದ ಸಾವು

ಜಾತ್ರೆಯಿಂದ ಖುಷಿಯಾಗಿ ಬಂದ ವಿದ್ಯಾರ್ಥಿನಿ ಪಿಜಿಯಲ್ಲಿ ಅನುಮಾನಾಸ್ಪದ ಸಾವು

Bagalkote: ಬಾಗಲಕೋಟೆಯ ವಾಗ್ದೇವಿ ಸೈನ್ಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಸೀಮಾ, ಕಳೆದ ಮೂರು ದಿನಗಳ ಹಿಂದೆಯಷ್ಟೇ ಊರಿಗೆ ಬಂದು ಕುಟುಂಬಸ್ಥರ ಜೊತೆ ಜಾತ್ರೆ ತಿರುಗಿ ಖುಷಿಯಾಗಿದ್ದಳು. ಸೆ.25ರಂದು ಹಾಸ್ಟೆಲ್‌ಗೆ ಬಂದವಳು ಕೆಲ ಕಾಲ ಹಾಸ್ಟೆಲ್ ವಾರ್ಡನ್ ಜೊತೆ ಮಾತಾಡಿದ ಬಳಿಕ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡಿದ್ದಾಳೆ.

Jaya Mruthyunjaya Swamiji: ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟಣೆ

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟಣೆ

Kudalasangama Panchamasali Peeta: ಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ತತ್ವ ಬಿಟ್ಟು ಹಿಂದುತ್ವ ಪರ ಹೊರಟಿದ್ದಾರೆ. ಟ್ರಸ್ಟ್ ಸದಸ್ಯರ ಮಾತು ಕೇಳುತ್ತಿಲ್ಲ. ಒಂದು ಪಕ್ಷದ ಪರ ಹೊರಟಿದ್ದಾರೆ. ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ಹೀಗೆ ಅನೇಕ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿದೆ ಎಂದು ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್‌ ತಿಳಿಸಿದೆ.

Bagalkot News: ಶಾಲೆಯಲ್ಲಿ ಇಬ್ಬರು ಮಕ್ಕಳ ಮಧ್ಯೆ ಗಲಾಟೆ; ಕಟ್ಟಿಗೆ ಇರಿತದಿಂದ ಕಣ್ಣು ಕಳೆದುಕೊಂಡ  ವಿದ್ಯಾರ್ಥಿ!

ಶಾಲೆಯಲ್ಲಿ ಗಲಾಟೆ; ಕಟ್ಟಿಗೆ ಇರಿತದಿಂದ ಕಣ್ಣು ಕಳೆದುಕೊಂಡ ವಿದ್ಯಾರ್ಥಿ!

Bagalkot News: ತೀವ್ರ ಗಾಯದ ಹಿನ್ನೆಲೆಯಲ್ಲಿ ಕಣ್ಣಿನ ಗುಡ್ಡೆಯನ್ನೇ ವೈದ್ಯರು ತೆಗೆದಿದ್ದಾರೆ. ಪೆನ್ ವಾಪಸ್‌ ಕೇಳುವ ವಿಚಾರದಲ್ಲಿ ಮಕ್ಕಳಿಬ್ಬರ ನಡುವೆ ಗಲಾಟೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಸದ್ಯ ಬೆಳಗಾವಿ ಜಿಲ್ಲೆಯ ಅಥಣಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Murder case: ಬರ್ಬರ ಕೃತ್ಯ, ಮಗನನ್ನೇ ಡೀಸೆಲ್‌ ಸುರಿದು ಸುಟ್ಟು ಕೊಂದು ಹಾಕಿದ ಹೆತ್ತವರು!

ಬರ್ಬರ ಕೃತ್ಯ, ಮಗನನ್ನೇ ಡೀಸೆಲ್‌ ಸುರಿದು ಸುಟ್ಟು ಕೊಂದು ಹಾಕಿದ ಹೆತ್ತವರು!

Bagalakote: ಮಗ ದುಶ್ಚಟಗಳ ದಾಸನಾಗಿ, ಸಾಕಷ್ಟು ಸಾಲ ಮಾಡಿದ್ದಲ್ಲದೆ ಆಸ್ತಿಯಲ್ಲಿ ಪಾಲು ಕೇಳಿ ಮನೆಯವರಿಗೆ ಸದಾ ಕಿರುಕುಳ ನೀಡುತ್ತಿದ್ದ. ಮನೆಯವರ ಮೇಲೆ ಹಲ್ಲೆಗೂ ಯತ್ನಿಸಿದ್ದ ಎಂದು ತಿಳಿದುಬಂದಿದೆ. ಇಂಥ ಮಗನನ್ನು ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬಾಗಲಕೋಟೆಯಲ್ಲಿ ಹೀನ ಕೃತ್ಯ; ಕಂಠಪೂರ್ತಿ ಕುಡಿದು ಪತ್ನಿ ತಲೆ ಬೋಳಿಸಿದ ಪತಿರಾಯ!

ಕಂಠಪೂರ್ತಿ ಕುಡಿದು ಪತ್ನಿ ತಲೆ ಬೋಳಿಸಿದ ಪತಿರಾಯ!

Bagalkot News: ಬಾಗಲಕೋಟೆ ಜಿಲ್ಲೆಯ ಕಡಕೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಲಾಟೆ ಮಾಡಿ ಪತ್ನಿ ಮೇಲೆ ಹಲ್ಲೆ ನಡೆಸಿರುವ ಪತಿ, ಬಳಿಕ ಪತ್ನಿಯ ಅರ್ಧತಲೆ ಬೋಳಿಸಿದ್ದಾನೆ. ಹಲ್ಲೆಗೊಳಗಾದ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Water crisis: ಬಾಗಲಕೋಟೆಯ ಗುಡೂರ ಎಸ್.ಸಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಟ; ಗ್ರಾಪಂ ಕಚೇರಿಗೆ ಜನರ ಮುತ್ತಿಗೆ

ಬಾಗಲಕೋಟೆಯ ಗುಡೂರ ಎಸ್.ಸಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಟ

Bagalkot News: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗುಡೂರ (ಎಸ್.ಸಿ) ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಹದಿನೈದು ದಿನ ಕಳೆದರೂ ಶುದ್ಧ ಕುಡಿಯುವ ನೀರು ಬಂದಿಲ್ಲ. ಬಂದ ನೀರು ಕೂಡ ಕಲುಷಿತಗೊಂಡಿರುವುದರಿಂದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Chaddi Gang: ಮುಧೋಳದಲ್ಲಿ ಮನೆ ಕಳವಿಗೆ ಚಡ್ಡಿ ಗ್ಯಾಂಗ್‌ ಯತ್ನ, ಅಮೆರಿಕದಲ್ಲಿದ್ದೇ ಅವರನ್ನು ಓಡಿಸಿದ ಪುತ್ರಿ!

ಮುಧೋಳದ ಮನೆಕಳವಿಗೆ ಬಂದ ಚಡ್ಡಿ ಗ್ಯಾಂಗನ್ನು ಅಮೆರಿಕದಲ್ಲಿದ್ದೇ ಓಡಿಸಿದಳು!

Bagalakote: ಮಧ್ಯರಾತ್ರಿ ಚಡ್ಡಿ ಗ್ಯಾಂಗ್ ಮನೆ ಒಳಗೆ ಕಳ್ಳತನಕ್ಕಾಗಿ ನುಗ್ಗಿದ್ದು, ಈ ವೇಳೆ ಅಮೆರಿಕದಲ್ಲಿದ್ದ ಶೃತಿ ಮೊಬೈಲ್‌ಗೆ ಅಲರ್ಟ್ ಮೆಸೇಜ್ ಬಂದಿದೆ. ಮೊಬೈಲ್ ಓಪನ್ ಮಾಡಿ ನೋಡಿದಾಗ ಚಡ್ಡಿ ಗ್ಯಾಂಗ್ ಮನೆಗೆ ಬಂದಿರುವುದು ಕಂಡು ಬಂದಿದೆ. ಕೂಡಲೆ ಮನೆಯವರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾಳೆ.

Road Accident: ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಕಾರು ಡಿಕ್ಕಿ; ಕಾರು ಚಾಲಕ ಸ್ಥಳದಲ್ಲೇ ಸಾವು

ಕೆಎಸ್‌ಆರ್‌ಟಿಸಿ ಬಸ್‌ಗೆ ಇನ್ನೋವಾ ಡಿಕ್ಕಿ; ಕಾರು ಚಾಲಕ ಸಾವು

Bagalkot accident: ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಹುಬ್ಬಳ್ಳಿ -ವಿಜಯಪುರ ಹೆದ್ದಾರಿಯಲ್ಲಿ ನಡೆದಿದೆ. ಕಾರು ಓವರ್ ಟೇಕ್‌ ಮಾಡಲು ಹೋದ ವೇಳೆ ಅಪಘಾತ ನಡೆದಿದೆ. ಸ್ಥಳಕ್ಕೆ ಕೆರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Bagalkot News: ಬಾಗಲಕೋಟೆಯಲ್ಲಿ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Bagalkot News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬಾಗಲಕೋಟೆ ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಮಹಿಳಾ ಘಟಕದ ಅಧ್ಯಕ್ಷರ ಆಯ್ಕೆ ಇಂದು ಬಾಗಲಕೋಟೆಯಲ್ಲಿ ಜರುಗಿತು. ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಜೋಶಿ, ರಾಜ್ಯ ಉಪಾಧ್ಯಕ್ಷ ರಾಘವೇಂದ್ರ ಅಲಗೂರ, ವಿಜಯಪುರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪವನ ಕುಲಕರ್ಣಿ ಪಾಲ್ಗೊಂಡಿದ್ದರು.

ಆಧುನಿಕ ಶ್ರವಣಕುಮಾರ; ಶತಾಯುಷಿ ತಾಯಿಯನ್ನು 220 ಕಿ.ಮೀ ದೂರ ಹೆಗಲ ಮೇಲೆ ಹೊತ್ತು ವಿಠ್ಠಲನ ದರ್ಶನ ಮಾಡಿಸಿದ ಮಗ!

ಶತಾಯುಷಿ ತಾಯಿಯನ್ನು ಹೆಗಲ ಮೇಲೆ ಹೊತ್ತು ವಿಠ್ಠಲನ ದರ್ಶನ ಮಾಡಿಸಿದ ಮಗ!

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೆಂಪಟ್ಟಿ ಗ್ರಾಮದ 55 ವರ್ಷದ ಪುತ್ರನೊಬ್ಬ ತನ್ನ ಹೆತ್ತಮ್ಮಳನ್ನು 220 ಕಿ.ಮೀ. ದೂರ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ತಾಯಿಗೆ, ಪಂಡರಾಪುರದ ಶ್ರೀ ವಿಠ್ಠಲ ಪಾಂಡುರಂಗನ ದರ್ಶನ ಮಾಡಿಸಿದ್ದಾರೆ. ಈ ಮೂಲಕ ಆಧುನಿಕ‌ ಶ್ರವಣ ಕುಮಾರನಾಗಿ ಗಮನಸೆಳೆದಿದ್ದಾರೆ.

Heart Attack: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Heart Failure: ಬೆಂಗಳೂರಿನ ಕಾಲೇಜ್ ಒಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನವೀನ್ ರಜೆ ಇದ್ದ ಕಾರಣ ಊರಿಗೆ ಬಂದಿದ್ದ. ಮನೆಯಲ್ಲಿ ಇದ್ದಾಗಲೇ ಎದೆನೋವಿನಿಂದ ಕುಸಿದುಬಿದ್ದಿದ್ದಾನೆ. ಚಿಕಿತ್ಸೆಗಾಗಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯದಲ್ಲೇ ನವೀನ್ ಮೃತಪಟ್ಟಿದ್ದಾನೆ.

Self Harming: ಸಹಪಾಠಿಗಳ ಕಿರುಕುಳ, ಡೆತ್‌ ನೋಟ್‌ನಲ್ಲಿ ಹೆಸರು ಬರೆದಿಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಸಹಪಾಠಿಗಳ ಕಿರುಕುಳ, ಡೆತ್‌ ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Bagalakote: ಕಿರುಕುಳ ನೀಡಿದವರ ಹೆಸರನ್ನು ವಿದ್ಯಾರ್ಥಿನಿ ಅಂಜಲಿ ತಮ್ಮ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಈ ಘಟನೆಯ ಕುರಿತು ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೆತ್ ನೋಟ್‌ನಲ್ಲಿ ಉಲ್ಲೇಖವಾಗಿರುವ ವ್ಯಕ್ತಿಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Bagalkot Accident: ಬಾಗಲಕೋಟೆಯಲ್ಲಿ ಕಾರಿನ ಮೇಲೆ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರ ಸಾವು

ಬಾಗಲಕೋಟೆಯಲ್ಲಿ ಕಾರಿನ ಮೇಲೆ ಲಾರಿ ಬಿದ್ದು ಸ್ಥಳದಲ್ಲೇ ಇಬ್ಬರ ಸಾವು

Bagalokot News: ಬಾಗಲಕೋಟೆಯ ಸೀಮಿಕೇರಿ ಬೈ ಪಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಲಾರಿ ಪಲ್ಟಿಯಾಗಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Murder Case: ಬೈದು ಬುದ್ಧಿವಾದ ಹೇಳಿದ್ದಕ್ಕೆ ಅಣ್ಣನ ಮಗನನ್ನೇ ಕೊಂದ ಪಾಪಿ ತಮ್ಮ!

ಬೈದು ಬುದ್ಧಿವಾದ ಹೇಳಿದ್ದಕ್ಕೆ ಅಣ್ಣನ ಮಗನನ್ನೇ ಕೊಂದ ತಮ್ಮ!

Bagalkot News: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಂಗನವಾಡಿಯಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದಾಗ ಬಾಲಕನನ್ನು, ಪಾಪಿ ಭೀಮಪ್ಪ ಕರೆದುಕೊಂಡು ಹೋಗಿ, ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ‌ಅಮೀನಗಢ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Basava Jaya Mruthyunjaya Swamiji: ಬಸವಜಯ ಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ: ಅರವಿಂದ್ ಬೆಲ್ಲದ ಆರೋಪ

ಬಸವಜಯ ಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ: ಅರವಿಂದ್ ಬೆಲ್ಲದ ಆರೋಪ

Arvind Bellad: 2ಎ ಮೀಸಲಾತಿಗೆ ಹೋರಾಟ ಮಾಡುತ್ತಿರುವ ಸ್ವಾಮೀಜಿಯನ್ನು ಮಟ್ಟ ಹಾಕಲು ಯತ್ನ ನಡೆದಿದೆ. ಲಿಂಗಾಯತ ಸಮಾಜ ಕಾಂಗ್ರೆಸ್ ಸರ್ಕಾರ ಮಾಡಿದ ಅನ್ಯಾಯವನ್ನು ನೋಡುತ್ತಿದೆ. ಸ್ವಾಮೀಜಿಯನ್ನು ಮುಗಿಸಲು ಯತ್ನ ಮಾಡುತ್ತಿರುವ ಸರ್ಕಾರ ಹಾಗೂ ವ್ಯಕ್ತಿಗಳಿಗೆ ಸರಿಯಾದ ಶಿಕ್ಷೆಯಾಗಲಿದೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.

Basava Jaya Mruthyunjaya Swamiji: ಕೂಡಲಸಂಗಮ ಬಸವ ಜಯ ಮೃತ್ಯುಂಜಯ ಶ್ರೀ ಆರೋಗ್ಯ ಏರುಪೇರು; ಮಠದಿಂದ ಶ್ರೀಗಳನ್ನು ಹೊರಹಾಕಲು ಚಿಂತನೆ

ಬಸವ ಜಯ ಮೃತ್ಯುಂಜಯ ಶ್ರೀ ಆರೋಗ್ಯ ಏರುಪೇರು; ಮಠದಿಂದ ಹೊರಹಾಕಲು ಚಿಂತನೆ

Basava Jaya Mruthyunjaya Swamiji: ನಾಲ್ಕು ದಿನಗಳ ಹಿಂದೆ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ್ದು ವಿವಾದವಾಗಿತ್ತು. ಬೀಗ ಹಾಕಿದ ಹಿನ್ನೆಲೆಯಲ್ಲಿ ಬಸವ ಜಯ ಮೃತ್ಯುಂಜಯ ಶ್ರೀಗಳು ಬಹಳ ನೊಂದುಕೊಂಡಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Loading...