ಯುಪಿಎಸ್ಸಿ ಪರೀಕ್ಷೆ ತೇರ್ಗಡೆಯಾದ ಬಾಗಲಕೋಟೆ ರೈತನ ಮಗ!
UPSC Result 2024: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಅಕ್ಕಿಮರಡಿ ಗ್ರಾಮದ ಪಾಂಡುರಂಗ ಸದಾಶಿವ ಕಂಬಳಿ ಅವರು ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 529ನೇ ರ್ಯಾಂಕ್ ಪಡೆದಿದ್ದಾರೆ. ಸದ್ಯ ಬೆಂಗಳೂರಿನಲ್ಲಿರುವ ಪಾಂಡುರಂಗ ಕಂಬಳಿ, ಯುಪಿಎಸ್ಸಿ ಪರೀಕ್ಷೆಗೆ ಸಂದರ್ಶನ ನೀಡಿ ಕೆಎಎಸ್ ಪರೀಕ್ಷೆ ತಯಾರಿ ನಡೆಸುತ್ತಿದ್ದರು. ಇದೀಗ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.