ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬಾಗಲಕೋಟೆ

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಮೇಟಿ ಬಿಡದ ಮತದಾರ, ವೀರಣ್ಣ ಹರೋಹರ

ಆರಂಭದಲ್ಲಿ ಕೈ ಟಿಕೆಟ್ ವಿಚಾರವಾಗಿ ಮೇಟಿ ಕುಟುಂಬದಲ್ಲಿ ಉಂಟಾದ ಗೊಂದಲ ಕಾಂಗ್ರೆಸ್ ಗೆ ಕೊಂಚ ಹಿನ್ನಡೆ ಉಂಟುಮಾಡಿದ್ದರೂ ಕೊನೆಗೆ ಸಿಎಂ ಸಿದ್ದರಾಮಯ್ಯನವರ ಸಂಧಾನದ ಫಲವಾಗಿ ಉಮೇಶ್ ಮೇಟಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಯಿತು. ಜತೆಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಮತಕ್ಷೇತ್ರದ ಅಭ್ಯರ್ಥಿ ಪರವಾಗಿ ಹಳ್ಳಿ, ಹಳ್ಳಿಯಲ್ಲೂ ಪ್ರಚಾರ ಮಾಡಿದ್ದರ ಕಾರಣಕ್ಕೆ ಕಾಂಗ್ರೆಸ್ 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ಮುಸ್ಲಿಮರ ಅಸಮಾಧಾನದ ನಡುವೆ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್‌ ಗೆದ್ದಿದ್ದೇಗೆ?; ಬಾಗಲಕೋಟೆಯಲ್ಲಿ ಮೇಟಿ ಗೆಲುವಿಗೆ ಪ್ರಮುಖ ಕಾರಣಗಳು

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು

Karnataka By-Election Results 2026: ಪಂಚ ರಾಜ್ಯ ಚುನಾವಣೆ ಜತೆಗೆ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಸೋಮವಾರ ಹೊರಬಿದ್ದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಕಾರಣವಾದ ಪ್ರಮುಖ ಅಂಶಗಳು ಇಲ್ಲಿವೆ.

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು, ಇದು ಕಾರ್ಯಕರ್ತರ ಗೆಲುವು: ಬಾಗಲಕೋಟೆ ಕೈ ಅಭ್ಯರ್ಥಿ ಉಮೇಶ್‌ ಮೇಟಿ

ತಂದೆ ಸ್ಥಾನದಲ್ಲಿ ನಿಂತು ಸಿಎಂ ಬೆಂಬಲಿಸಿದರು: ಕೈ ಅಭ್ಯರ್ಥಿ ಉಮೇಶ್‌ ಮೇಟಿ

Bagalkot By-Election Results: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಅವರು 22,332 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿಜೆಪಿಯ ವೀರಣ್ಣ ಚರಂತಿಮಠ್ ವಿರುದ್ಧ ಜಯಭೇರಿ ಬಾರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜೇತ ಅಭ್ಯರ್ಥಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.

Bagalkot By-Election Results 2026: ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌ ಮೇಟಿ ಜಯಭೇರಿ

Karnataka Bypoll Results: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ಕ್ಷೇತ್ರದಲ್ಲಿ ಎಚ್ ವೈ ಮೇಟಿ ಅವರ ಪುತ್ರ ಉಮೇಶ್‌ ಮೇಟಿ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದೀಗ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

Karnataka By-Election Results 2026: ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು, ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿ ಮುನ್ನಡೆ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಮುನ್ನಡೆ

Karnataka Bypoll Results: ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಸ್ಪರ್ಧಿಸಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಸ್ಪರ್ಧಿಸಿದ್ದಾರೆ. ಇವರ ರಾಜಕೀಯ ಭವಿಷ್ಯ ಇಂದು ಹೊರಬೀಳಲಿದೆ.

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ: ಇಂದು ಮತ ಎಣಿಕೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ಮತ ಎಣಿಕೆ ಇಂದು

ಬಾಗಲಕೋಟೆ ಮತ್ತು ದಾವಣಗೆರೆಯ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದ್ದು, ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ವಿಧಿಸಲಾಗಿದೆ. ಎರಡು ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಧ್ಯಾಹ್ನದ ವೇಳೆಗೆ ಹೊರಬೀಳುವ ನಿರೀಕ್ಷೆ ಇದೆ.

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ; ಯಾರಿಗೆ ಒಲಿಯಲಿದೆ ಗೆಲುವು?

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ

ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಉಪಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಡಿದೆ. ಬೈ ಎಲೆಕ್ಷನ್‌ನಲ್ಲಿ ಯಾರಿಗೆ ಗೆಲುವು ಒಲಿಯಲಿದೆ ಎಂಬ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮೂಡಿದೆ.

Weather report: ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ವಿಶ್ವದ ಅತ್ಯಂತ ಬಿಸಿಯಾದ 100 ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಮೂರು ಜಿಲ್ಲೆಗಳು ಸ್ಥಾನ ಪಡೆದಿದೆ. ಇದು ರಾಜ್ಯದಲ್ಲಿ ತಾಪಮಾನ ಏರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ಸೂರ್ಯನ ಪ್ರತಾಪ ಅತಿಯಾಗಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

Murder case: ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಹೊಸ ಕಾರಿನೊಂದಿಗೆ ಪೂಜೆಗೆ ಬಂದವನ ಬರ್ಬರ ಕೊಲೆ, ಕಾರಿಗೂ ಬೆಂಕಿ

ಸೋಮು ಅಲಿಯಾಸ್ ಸೋಮಲಿಂಗಪ್ಪ ಪಡಸಲಗಿ (36) ಮೃತ ದುರ್ದೈವಿ. ಈ ಘಟನೆಯ ಕ್ರೌರ್ಯ ಕಂಡು ಕನ್ನೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಮೃತನ ದೊಡ್ಡಪ್ಪನ ಮಗ ಸದಾಶಿವ ಪಡಸಲಗಿಯೇ ಕೊಲೆಗೈದ ಆರೋಪಿ ಎನ್ನಲಾಗುತ್ತಿದೆ. ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲೂ ಲವ್‌ ಜಿಹಾದ್‌ ಶಂಕೆ: ಅನ್ಯಕೋಮಿನ ಯುವಕನ ಕಿರುಕುಳ, ಯುವತಿ ಆತ್ಮಹತ್ಯೆ

ಬಾಗಲಕೋಟೆ:‌ ಲವ್‌ ಜಿಹಾದ್‌ ಶಂಕೆ, ಯುವಕನ ಕಿರುಕುಳ, ಯುವತಿ ಆತ್ಮಹತ್ಯೆ

ಟಯರ್‌ ಅಂಗಡಿಗೆ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೊಂಗ್ರಿಸಾಬ್ ನದಾಫ್‌ ಮಧ್ಯೆ ಕಳೆದ 2 ವರ್ಷಗಳಿಂದ ಪ್ರೀತಿಯಿತ್ತು. ಆದರೆ ಏಪ್ರಿಲ್ 15ರಂದು ಈಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾಗಿರುವ ಭೂಮಿಕಾ ಹಿಜಾಬ್‌ನಲ್ಲಿ ಕಾಣಿಸಿಕೊಂಡಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Karnataka Bypolls: ಉಪಚುನಾವಣೆ; ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ ದಾಖಲು

ಬಾಗಲಕೋಟೆಯಲ್ಲಿ ಶೇ.68.66, ದಾವಣಗೆರೆ ದಕ್ಷಿಣದಲ್ಲಿ ಶೇ.68.43 ಮತದಾನ

Voter Turnout: ಬಾಗಲಕೋಟೆಯಲ್ಲಿ ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ ನಿಧನ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಗುರುವಾರ ಉಪಚುನಾವಣೆ ನಡೆದಿದೆ. ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ನಡೆದಿದೆ ಎಂಬ ಮಾಹಿತಿ ಇಲ್ಲಿದೆ.

Karnataka By Elections: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಉಪಚುನಾವಣೆ ಮತದಾನ ಆರಂಭ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮುಂಜಾನೆ ಮತದಾನ ಆರಂಭವಾಗಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ: ಬಸನಗೌಡ ಪಾಟೀಲ ಯತ್ನಾಳ Video

2028ಕ್ಕೆ ನಮ್ಮ ಬುಲ್ಡೋಜರ್‌ ಸರ್ಕಾರ: ಬಸನಗೌಡ ಪಾಟೀಲ ಯತ್ನಾಳ

Bagalkot Bypoll 2026: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಕ್ಷೇತ್ರದ ಕಮತಗಿ ಪಟ್ಟಣದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಸ್ಲಿಂ ಸಮುದಾಯ ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು. ಆಜಾನ್ ಕೂಗೋರಿಗೆ 6 ಸಾವಿರ ರುಪಾಯಿ, ವಿದೇಶಗಳಲ್ಲಿ ಹೆಚ್ಚಿನ ವ್ಯಾಸಂಗ ಮಾಡಲು ಇಚ್ಚಿಸುವ ಮುಸ್ಲಿಂ ಸಮುದಾಯದ ಮಕ್ಕಳಿಗೆ ಮಕ್ಕಳಿಗೆ 30 ಲಕ್ಷ ರೂಪಾಯಿ ಶಿಷ್ಯವೇತನ, ಮುಸ್ಲಿಂ ಓಣಿಗಳಲ್ಲಿ ಒಂದೊಂದು ಸರ್ಕಾರಿ ಐಟಿಐ ಕಾಲೇಜು, ಮುಸ್ಲಿಂ ಯುವಕರಿಗೆ ಸ್ಟಾರ್ಟ್‌ ಅಪ್‌ಗೆ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಪಿಸಿದರಲ್ಲದೇ, ಹಿಂದುಳಿದ, ದಲಿತ ಸಮುದಾಯದವರಿಗೆ ಈ ಯೋಜನೆ ಇದೆಯಾ ಎಂದು ಅವರು ಪ್ರಶ್ನಿಸಿದ್ದಾರೆ.

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಕ್ಷಣಗಣನೆ; ಸಿದ್ಧತೆ ಹೇಗಿದೆ?

ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಕ್ಷಣಗಣನೆ; ಸಿದ್ಧತೆ ಹೇಗಿದೆ?

Davangere And Bagalkot by-elections: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ಏಪ್ರಿಲ್ 9 ಕ್ಕೆ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್​ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ಕೆಲವು ದಿನಗಳ ಭರ್ಜರಿ ಪ್ರಚಾರದ ಬಳಿಕ ಮಂಗಳವಾರ ಸಂಜೆ 5.30 ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು.

Bagalakote news: ಬಾಗಲಕೋಟೆ: ಪ್ರೇಮಿ ಜತೆ ಜಗಳದಿಂದ ನೊಂದು ಯುವತಿ ಆತ್ಮಹತ್ಯೆ, ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ

ಜಗಳದಿಂದ ನೊಂದು ಯುವತಿ ಆತ್ಮಹತ್ಯೆ, ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ

ಮೃತ ಕಾರ್ತಿಕ್ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಅಸಂಗಿ ಗ್ರಾಮದವನಾಗಿದ್ದು, ಪವಿತ್ರಾ ಬನಹಟ್ಟಿಯ ಕೆ ಹೆಚ್ ಡಿ ಸಿ ಕಾಲೋನಿ ನಿವಾಸಿಯಾಗಿದ್ದಾಳೆ. ನಿನ್ನೆ ಪವಿತ್ರಾ ಹಾಗೂ ಕಾರ್ತಿಕ್ ಜಗಳ ಮಾಡಿಕೊಂಡಿದ್ದರು. ಜಗಳವೇ ಕಾರಣವಾಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Karnataka bypolls: ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಚುನಾವಣೆ; ಏಪ್ರಿಲ್‌ 9ಕ್ಕೆ ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಏಪ್ರಿಲ್‌ 9ಕ್ಕೆ ಉಪಚುನಾವಣೆ; ಸರ್ಕಾರಿ ನೌಕರರಿಗೆ ರಜೆ ಘೋಷಣೆ

ಏಪ್ರಿಲ್‌ 9ರ ಗುರುವಾರದಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ ನೌಕರರಿಗೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ: ಜನಸಂಘದ ಇತಿಹಾಸ ಬಿಚ್ಚಿಟ್ಟ ಮಾಜಿ ಸಿಎಂ Video

ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

Basavaraj Bommai slams Congress: ಬಿಜೆಪಿ ಮತ್ತು ಜನಸಂಘದ ಇತಿಹಾಸದ ಬಗ್ಗೆ ಮಾತನಾಡುತ್ತಾ, ಕಾಂಗ್ರೆಸ್ (Congress) ಪಕ್ಷದ ವಿರುದ್ಧ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಬ್ರಿಟಿಷರಿಂದ ಸ್ಥಾಪಿಸಲ್ಪಟ್ಟಿತು. ಭಾರತೀಯರನ್ನು ಗುಲಾಮಗಿರಿಯಲ್ಲಿಡಲು ಮತ್ತು ಬ್ರಿಟಿಷರ ಹಿತಾಸಕ್ತಿ ಕಾಪಾಡಲು ಈ ವ್ಯವಸ್ಥೆ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.

Bagalkot bypolls: ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸವಾಗುತ್ತಿದೆ: ವೀರಣ್ಣ ಚರಂತಿಮಠ

ಕಾಂಗ್ರೆಸ್‌ನಿಂದ ವಿದ್ಯಾರ್ಥಿಗಳಿಗೆ ಬೆದರಿಕೆ: ವೀರಣ್ಣ ಚರಂತಿಮಠ ಆರೋಪ

ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಶಿಕ್ಷಣ ಸಂಸ್ಥೆಗೆ ತೆರಳಿ ಅಲ್ಲಿರುವ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ. ಅವರನ್ನು ನವನಗರ ಪೊಲೀಸ್ ಠಾಣೆಗೆ ಕರೆದೊಯ್ದರೆ, ಅವರ ಮೇಲೆ ಕೇಸ್ ದಾಖಲು ಮಾಡಲು ಮೀನಮೇಷ ಎಣಿಸುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಹೇಳಿದ್ದಾರೆ.

Bagalkot Bypoll 2026: ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರದಲ್ಲಿ ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚಿದೆ: ಸಿಎಂ

ಬಾಗಲಕೋಟೆಯ ಜನಪ್ರತಿನಿಧಿಯಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿದ ಎಚ್.ವೈ. ಮೇಟಿ ಅವರು ಅಕಾಲಿಕ ನಿಧನರಾದ ಕಾರಣದಿಂದ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಉಮೇಶ್ ಅವರನ್ನು ಜನರು ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 2,809 ರೈತರ ಸಾವು: ಕಾಂಗ್ರೆಸ್‌ ಸರ್ಕಾರದ ಆಡಳಿತದ ಬಗ್ಗೆ ಸಚಿವ ಸೋಮಣ್ಣ ಕಿಡಿ

ಮೂರು ವರ್ಷದಲ್ಲಿ 2,809 ರೈತರ ಸಾವು: ಸಚಿವ ಸೋಮಣ್ಣ ಕಿಡಿ

V Somanna: ಭ್ರಷ್ಟಾಚಾರ, ಸ್ವಜನಪಕ್ಷಪಾತ ಮಿತಿಮೀರಿದೆ. ಅವ್ಯವಸ್ಥೆಯ ಆಗರವಾಗಿದೆ. ತಮ್ಮವರೇ ನಿಂದಿಸಿದರೂ ಎಚ್ಚೆತ್ತುಕೊಳ್ಳದ ನಿರ್ಲಿಪ್ತ ಸರ್ಕಾರ ಸಿದ್ದರಾಮಯ್ಯ ಅವರದು ಎಂದು ಟೀಕಿಸಿದ ಕೇಂದ್ರ ಸಚಿವ ವಿ. ಸೋಮಣ್ಣ, ಮೂಲಭೂತ ಸೌಕರ್ಯದತ್ತ ಎಲ್ಲೂ ಗಮನ ಕೊಡದೇ ಇಡೀ ಸಚಿವ ಸಂಪುಟ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ ಎಂದು ಅವರು ಆರೋಪಿಸಿದ್ದಾರೆ.

Bagalkot Byelection: ಬಾಗಲಕೋಟೆಯಲ್ಲಿ ಕಾಂಗ್ರೆಸ್‌ʼಗೆ ಒಳೇಟಿನ ಭೀತಿ

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ʼಗೆ ಒಳೇಟಿನ ಭೀತಿ

ಎಚ್.ವೈ ಮೇಟಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ಪುತ್ರ ಉಮೇಶ್ ಮೇಟಿ ಸ್ಪರ್ಧಿಸಿದ್ದಾರೆ. ಆದರೆ ಕೇವಲ ಅನುಕಂಪದ ಅಲೆಯನ್ನೇ ಮೆಚ್ಚಿಕೊಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಮತದಾರ ರನ್ನು ಸೆಳೆಯುವುದೇ ಸವಾಲಿನ ಕೆಲಸವಾಗಿದೆ. ಇಡೀ ಸರಕಾರವೇ ಮೇಟಿ ಪರ ಪ್ರಚಾರದಲ್ಲಿ ತೊಡಗಿದರು ಸಮನ್ವಯ ಕೊರತೆ ಎದ್ದು ಕಾಣುತ್ತಿದೆ

ʼʼನಾನೇ ಅಭ್ಯರ್ಥಿ ಎಂದುಕೊಂಡು ಮತ ಹಾಕಿʼʼ; ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ Video

ಬಾಗಲಕೋಟೆ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಭರ್ಜರಿ ಪ್ರಚಾರ

CM Siddaramaiah campaigns: ಬಾಗಲಕೋಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಹಾಗೂ ಬಿಜೆಪಿ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಪರ ಬಿರುಸಿನ ಪ್ರಚಾರ ನಡೆಸಿದ್ದಾರೆ. ನಾವು ಗೆದ್ದೇ ಗೆಲ್ಲುತ್ತೇವೆ ಎನ್ನುವ ಭರವಸೆ ಇದೆ ಎಂದು ಅವರು ಹೇಳಿದರು.

Karnataka Bypolls: ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ; ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಉಪ ಚುನಾವಣೆ; ಕಾಂಗ್ರೆಸ್‌ನಿಂದ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಮತದಾನ ಏಪ್ರಿಲ್‌ 9ರಂದು ನಡೆಯಲಿದೆ. ಮೇ 4 ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿ 40 ಮಂದಿ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

Bagalkot Bypoll 2026: ಎಲ್ಲರ ಅಭಿಪ್ರಾಯ ಪಡೆದು ಉಮೇಶ್ ಮೇಟಿಗೆ ಕಾಂಗ್ರೆಸ್‌ ಟಿಕೆಟ್: ಡಿ.ಕೆ. ಶಿವಕುಮಾರ್

ಎಲ್ಲರ ಅಭಿಪ್ರಾಯ ಪಡೆದು ಉಮೇಶ್ ಮೇಟಿಗೆ ಟಿಕೆಟ್: ಡಿ.ಕೆ. ಶಿವಕುಮಾರ್

DK Shivakumar: ಎಲ್ಲರ ಅಭಿಪ್ರಾಯ ಪಡೆದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರನಿಗೆ ಒಮ್ಮತದಿಂದ ಉಪಚುನಾವಣೆ ಟಿಕೆಟ್ ನೀಡಲಾಗಿದೆ. ಬೂತ್ ಮಟ್ಟದಲ್ಲಿಯೂ ಸಮೀಕ್ಷೆ ನಡೆಸಿ ವರದಿ ತರಿಸಿಕೊಂಡು ಟಿಕೆಟ್ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Loading...