ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬಾಗಲಕೋಟೆ
UPSC Result 2024: ಯುಪಿಎಸ್‌ಸಿ ಪರೀಕ್ಷೆ ತೇರ್ಗಡೆಯಾದ ಬಾಗಲಕೋಟೆ ರೈತನ ಮಗ!

ಯುಪಿಎಸ್‌ಸಿ ಪರೀಕ್ಷೆ ತೇರ್ಗಡೆಯಾದ ಬಾಗಲಕೋಟೆ ರೈತನ ಮಗ!

UPSC Result 2024: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಅಕ್ಕಿಮರಡಿ ಗ್ರಾಮದ ಪಾಂಡುರಂಗ ಸದಾಶಿವ ಕಂಬಳಿ ಅವರು ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ 529ನೇ ರ‍್ಯಾಂಕ್ ಪಡೆದಿದ್ದಾರೆ. ಸದ್ಯ ಬೆಂಗಳೂರಿನಲ್ಲಿರುವ ಪಾಂಡುರಂಗ ಕಂಬಳಿ, ಯುಪಿಎಸ್‌ಸಿ ಪರೀಕ್ಷೆಗೆ ಸಂದರ್ಶನ ನೀಡಿ ಕೆಎಎಸ್ ಪರೀಕ್ಷೆ ತಯಾರಿ ನಡೆಸುತ್ತಿದ್ದರು. ಇದೀಗ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

BY Vijayendra: ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿ: ಬಿ.ವೈ.ವಿಜಯೇಂದ್ರ

ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿ: ಬಿ.ವೈ.ವಿಜಯೇಂದ್ರ

BY Vijayendra: ಜನಾಕ್ರೋಶ ಯಾತ್ರೆಯ ಮೊದಲ ಹಂತ ಯಶಸ್ವಿಯಾಗಿ ಮುಗಿದಿದೆ. ಸಿದ್ದರಾಮಯ್ಯನವರೇ ನೀವು ಮುಖ್ಯಮಂತ್ರಿಗಳಾದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಹಿಂದೂ ಹೆಣ್ಮಕ್ಕಳ ಮೇಲೆ ಅಪಮಾನ, ಲವ್ ಜಿಹಾದ್ ಹೆಚ್ಚಾಗಿದೆ. ಗೋಹತ್ಯೆಗಳು ಜಾಸ್ತಿ ಆಗಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

Panchamasali Trust: ಪಂಚಮಸಾಲಿ ಟ್ರಸ್ಟ್ ಅಸಮಾಧಾನ; ಏ.20ಕ್ಕೆ ರಾಜ್ಯ‌ಮಟ್ಟದ ಸಭೆ ಕರೆದ ಜಯ ಮೃತ್ಯುಂಜಯ ಸ್ವಾಮೀಜಿ

ಏ.20ಕ್ಕೆ ರಾಜ್ಯ‌ಮಟ್ಟದ ಪಂಚಮಸಾಲಿ ಸಮಾಜ ಸಭೆ: ಜಯ ಮೃತ್ಯುಂಜಯ ಸ್ವಾಮೀಜಿ

Panchamasali Trust: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರ ಬೆಂಬಲಕ್ಕೆ ನಿಂತ ಕಾರಣ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಪದಾಧಿಕಾರಿಗಳು ಅಸಮಾಧಾನ ಹೊರಹಾಕಿದ್ದರು. ಇದೀಗ ಭಿನ್ನಮತ ಶಮನಗೊಳಿಸಲು, ಜಯ ಮೃತ್ಯುಂಜಯ ಸ್ವಾಮೀಜಿ ಅವರು ಏ. 20ಕ್ಕೆ ಸಭೆ ಕರೆದಿದ್ದಾರೆ.

Bagalkot News: ಮಲಪ್ರಭಾ ನದಿಯಲ್ಲಿ ಮುಳುಗಿ ಯೋಧ ಸೇರಿ ಇಬ್ಬರ ಸಾವು; ಬಾಲಕನ ರಕ್ಷಿಸಲು ಹೋಗಿ ನೀರುಪಾಲು

ಮಲಪ್ರಭಾ ನದಿಯಲ್ಲಿ ಮುಳುಗಿ ಯೋಧ ಸೇರಿ ಇಬ್ಬರ ಸಾವು

Bagalkot News: ಬಾಗಲಕೋಟೆ ಜಿಲ್ಲೆಯ ಮಣ್ಣೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ನಾನ ಮಾಡಲು ಬಾಲಕನೊಬ್ಬ ಮೊದಲು ನದಿಗೆ ಇಳಿದಿದ್ದ. ಈ ವೇಳೆ ಈಜು ಬಾರದೇ ಆತನ ಮುಳುಗುತ್ತಿದ್ದಾಗ ರಕ್ಷಣೆಗೆ ಯೋಧ ತೆರಳಿದ್ದಾರೆ. ನೀರಿನ ಮಧ್ಯೆ ಯೋಧನ ಕೊರಳು ಹಿಡಿದು ಬಾಲಕ ಒದ್ದಾಡಿದ್ದಾನೆ. ಹೀಗಾಗಿ ಇಬ್ಬರೂ ದಡ ಸೇರಲಾಗದೆ ನೀರಿನಲ್ಲಿ ಮುಳುಗಿದ್ದಾರೆ.

Drown in River: ಯುಗಾದಿ ಹಬ್ಬದ ದಿನವೇ ದುರಂತ; ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರ ಸಾವು

ಕೃಷ್ಣಾ ನದಿಯಲ್ಲಿ ಮುಳುಗಿ ಮೂವರು ಬಾಲಕರ ಸಾವು

Drown in River: ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ನಡೆದಿದೆ. ಮೂವರು ಬಾಲಕರ ಪೈಕಿ ಒಬ್ಬನ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Road Accident: ಬಸ್‌-ಬೈಕ್‌ ಡಿಕ್ಕಿಯಾಗಿ ದಂಪತಿ ದುರ್ಮರಣ, ಹಲವರಿಗೆ ಗಾಯ

ಬಸ್‌-ಬೈಕ್‌ ಡಿಕ್ಕಿಯಾಗಿ ದಂಪತಿ ದುರ್ಮರಣ, ಹಲವರಿಗೆ ಗಾಯ

Road Accident: ಬಾಗಲಕೋಟೆ ಜಿಲ್ಲೆಯ ಮುಧೋಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್‌ ಡಿಕ್ಕಿಯಾಗಿದ್ದರಿಂದ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ ಕೂಡ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.

Viral News: ಯುನಿಫಾರ್ಮ್‌ನಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ 6 ಪೊಲೀಸರಿಗೆ ಇಲಾಖೆಯಿಂದ ಟ್ರಾನ್ಸ್‌ಫರ್‌ ಆಶೀರ್ವಾದ!

ಖಾಕಿಯಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದ ಪೊಲೀಸರಿಗೆ ಟ್ರಾನ್ಸ್‌ಫರ್‌ ಆಶೀರ್ವಾದ!

ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ 6 ಜನ ಪೊಲೀಸರನ್ನು ವರ್ಗಾವಣೆ ಮಾಡಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಬಾಗಲಕೋಟೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರು 6 ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಬಾದಾಮಿ ಪಟ್ಟಣದ ಪೊಲೀಸ್ ಠಾಣೆಯಿಂದ ಜಿಲ್ಲೆಯ ವಿವಿಧ ಗ್ರಾಮೀಣ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ.

Upper Krishna Project: ರೈತರಿಗೆ ಸಿಹಿಸುದ್ದಿ; ನಾಳೆಯಿಂದ ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ

ನಾಳೆಯಿಂದ ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ

Upper Krishna Project: ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2024-25ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆದಿದೆ. ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ಸೇರಿ ಪ್ರತಿ ದಿನ 0.8ಂಟಿ.ಎಂ.ಸಿ ದರದಂತೆ ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.

Bird Flu: ರಾಜ್ಯದಲ್ಲಿ ಹಕ್ಕಿ ಜ್ವರದ ಹಾಹಾಕಾರ, 17000 ಕೋಳಿಗಳ ಹತ್ಯೆ

ರಾಜ್ಯದಲ್ಲಿ ಹಕ್ಕಿ ಜ್ವರದ ಹಾಹಾಕಾರ, 17000 ಕೋಳಿಗಳ ಹತ್ಯೆ

ಬಳ್ಳಾರಿ ಜಿಲ್ಲೆಯಲ್ಲಿ ಈ ವರೆಗೆ 17400 ಕೋಳಿಗಳು ಸತ್ತಿವೆ. ಅಸಿಲ್ ಹಾಗೂ ಕಾವೇರಿ ತಳಿ ಕೋಳಿಗಳೇ ಹಕ್ಕಿಜ್ವರಕ್ಕೆ ಟಾರ್ಗೆಟ್ ಆಗಿವೆ. ಬಳ್ಳಾರಿಯ ದರೋಜಿ ಕೆರೆಗೆ ಸಾವಿರಾರು ವಲಸೆ ಪಕ್ಷಿಗಳು ಬರುತ್ತವೆ. ಇದೇ ಪಕ್ಷಿಗಳಿಂದ ಹಕ್ಕಿಜ್ವರ ಜಿಲ್ಲೆಗೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್‌ ಮಿಶ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ.

Road Accident: ಆಲಮಟ್ಟಿ ಡ್ಯಾಂ ಬಳಿ ಟೆಂಪೋ-ಟ್ರ್ಯಾಕ್ಟರ್ ಡಿಕ್ಕಿ; 10 ಜನರಿಗೆ ಗಂಭೀರ ಗಾಯ

ಆಲಮಟ್ಟಿ ಡ್ಯಾಂ ಬಳಿ ಟೆಂಪೋ-ಟ್ರ್ಯಾಕ್ಟರ್ ಡಿಕ್ಕಿ; 10 ಜನರಿಗೆ ಗಂಭೀರ ಗಾಯ

Road Accident: ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಜಲಾಶಯದ ಬಲಭಾಗದ ಕೆಎಸ್‌ಐಎಸ್‌ಎಫ್ ಸಿಬ್ಬಂದಿಗಳ ವಸಾಹತು ಸಮೀಪ ಸೋಮವಾರ ಸಂಜೆ ಅಪಘಾತ ನಡೆದಿದೆ. ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್‌ಗೆ ಡಿಕ್ಕಿಯಾಗಿ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Drown in River: ಕಾಶಿಯಲ್ಲಿ ನದಿ ಸ್ನಾನ ಮಾಡುವಾಗ ಮುಳುಗಿ ಬಾಗಲಕೋಟೆಯ ವ್ಯಕ್ತಿ ಸಾವು

ಕಾಶಿಯಲ್ಲಿ ನದಿ ಸ್ನಾನ ಮಾಡುವಾಗ ಮುಳುಗಿ ಬಾಗಲಕೋಟೆಯ ವ್ಯಕ್ತಿ ಸಾವು

Drown in River: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಭಾಗಿಯಾಗಿದ ನಂತರ ಬಾಗಲಕೋಟೆಯ ವ್ಯಕ್ತಿ ಕಾಶಿಗೆ ತೆರಳಿದ್ದರು. ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮುಳುಗಿ ಮೃತಪಟ್ಟಿದ್ದಾರೆ. ಬಾಗಲಕೋಟೆಯಿಂದ 35 ಜನ ಪ್ರವಾಸಿ ಬಸ್‌ನಲ್ಲಿ ತೆರಳಿದ್ದರು.

Santosh Lad: ಅಪಘಾತದ ಗಾಯಾಳುವನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದ ಸಚಿವ ಸಂತೋಷ್‌ ಲಾಡ್‌

ಗಾಯಾಳುವನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದ ಸಚಿವ ಸಂತೋಷ್‌ ಲಾಡ್‌

Santosh Lad: ಟ್ರ್ಯಾಕ್ಟರ್ ಹಿಂಬದಿ ಹೋಗುತ್ತಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ವೇಳೆ ಜಮಖಂಡಿಯಿಂದ ಅದೇ ಮಾರ್ಗವಾಗಿ ತೆರಳುತ್ತಿದ್ದ ಸಚಿವ ಸಂತೋಷ ಲಾಡ್ ಅವರು, ಬೈಕ್ ಸವಾರ ಬಿದ್ದಿರುವುದನ್ನು ಕಂಡು ತಮ್ಮ ಕಾರಲ್ಲೇ ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

Physical Abuse: ರಾಯಚೂರಿನಲ್ಲಿ ಹೇಯ ಕೃತ್ಯ, 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ರಾಯಚೂರಿನಲ್ಲಿ ಹೇಯ ಕೃತ್ಯ, 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಪೋತ್ನಾಳ್ ಗ್ರಾಮದ ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪಾತಕಿ ಶಿವನಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Mahakumbh 2025: ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗ್‌ರಾಜ್‌ನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಸುತ್ತೂರು ಶ್ರೀ, ವಚನಾನಂದ ಸ್ವಾಮೀಜಿ ಭೇಟಿ

ಪ್ರಯಾಗರಾಜ್‌ನ ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ಭವ್ಯ ದಿವ್ಯವಾಗಿ ನಿರ್ಮಿಸಿರುವ ನೂತನ ಪರಮಾರ್ಥ ಪುಷ್ಪ ಆಶ್ರಮಕ್ಕೆ ಭೇಟಿ ನೀಡಿದ ಶ್ರೀ ಸುತ್ತೂರುಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹಾಗೂ ಕನ್ನಡ ನಾಡಿನ ವಿವಿಧ ಮಠ ಪೀಠಗಳ ಮಠಾಧೀಶರುಗಳನ್ನು ಪರಮಾರ್ಥ ನಿಕೇತನ ಆಶ್ರಮದ ಶ್ರೀ ಸ್ವಾಮಿ ಚಿದಾನಂದ ಸರಸ್ವತಿಜೀ ಹಾಗೂ ಸಾದ್ವಿ ಭಗವತಿ ಸರಸ್ವತಿಜೀ ಅವರು ಸ್ವಾಗತಿಸಿದರು.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ.

Sudha Murthy: ವಿಜಯಪುರ ಏರ್‌ಪೋರ್ಟ್‌ ಯಾವಾಗ ಶುರು ಮಾಡ್ತೀರಿ? ರಾಜ್ಯಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನೆ

ರಾಜ್ಯಸಭೆಯಲ್ಲಿ ವಿಜಯಪುರ ಏರ್‌ಪೋರ್ಟ್‌ ಬಗ್ಗೆ ಪ್ರಶ್ನಿಸಿದ ಸುಧಾ ಮೂರ್ತಿ

ವಿಜಯಪುರ ವಿಮಾನ ನಿಲ್ದಾನ ಯಾವಾಗ ಉದ್ಘಟನೆಯಾಗಲಿದ ಎಂದು ರಾಜ್ಯ ಸಭೆಯಲ್ಲಿ ಸುಧಾ ಮೂರ್ತಿ ಪ್ರಶ್ನಿಸಿದ್ದಾರೆ. ʼʼಆಗ ಹೇಳ್ತೀನಿ, ಈಗ ಹೇಳ್ತೀನಿ ಅನ್ನೋದು ಬೇಡ. ನಂಗೆ ಈಗಲೇ ಹೇಳಿ ಯಾವಾಗ ಶುರು ಮಾಡ್ತೀರಿ ಅಂತ. ಲಿಖಿತ ರೂಪದಲ್ಲಿ ನನಗೆ ಉತ್ತರ ಬೇಕು” ಎಂದು ಅವರು ಆಗ್ರಹಿಸಿದ್ದಾರೆ. ಇದಕ್ಕೆ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಉತ್ತರಿಸಿ, ʼʼಈ ವರ್ಷವೇ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆʼʼ ಎಂದು ಭರವಸೆ ನೀಡಿದ್ದಾರೆ.

Reliance: ರಿಲಯನ್ಸ್ ಗ್ರೂಪ್ ಸಿಎಂಒ ಆಗಿ ಗಾಯತ್ರಿ ವಾಸುದೇವ ಯಾದವ್ ನೇಮಕ

ಗಾಯತ್ರಿ ವಾಸುದೇವ ಯಾದವ್ ರಿಲಯನ್ಸ್ ಗ್ರೂಪ್ ಸಿಎಂಒ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷರ ಕಚೇರಿಯ ನೂತನ ಮುಖ್ಯ ಮಾರುಕಟ್ಟೆ ಅಧಿಕಾರಿ ಮತ್ತು ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ಗಾಯತ್ರಿ ವಾಸುದೇವ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಅವರು ಪೀಕ್ ಎಕ್ಸ್ ವಿ ಪಾರ್ಟ್ನರ್ಸ್‌ನಿಂದ ನಮ್ಮ ಕಂಪನಿಗೆ ಸೇರಿದ್ದಾರೆ ಎಂದು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಪುತ್ರಿ ಇಶಾ ಅಂಬಾನಿ ತಿಳಿಸಿದ್ದಾರೆ.

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್‌ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ. ಪಾಟೀಲ್‌

Global Investors Meet: ಬೆಂಗಳೂರಿನಲ್ಲಿ ಫೆ.11 ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿ, ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.