ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಳಗಾವಿ

Murder Case: ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಶವದ ಮೇಲೆ ಕಾಲಿಟ್ಟು ನಿಂತ!

10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನ ಕೊಲ್ಹಾಪುರದಲ್ಲಿ ಬಿಟ್ಟು ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆಯಷ್ಟೇ ಬಸಪ್ಪ ಬಂದಿದ್ದ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಆರೋಪಿ ಈರಯ್ಯ ಆತನನ್ನು ಕೊಲೆ ಮಾಡಿದ್ದಾನೆ.

ರಾಜ್ಯದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್‌ ಪಾಟೀಲ್

ರಾಜ್ಯದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್‌ ಪಾಟೀಲ್

400 ಕೋಟಿ ರು. ಹಣ ಇದ್ದ ಜೋಡಿ ಕಂಟೇನರ್ ಹೈಜಾಕ್ ಪ್ರಕರಣದ ಮೂಲ ಹುಡುಕುವುದೇ ಪೊಲೀಸ ರಿಗೆ ಸವಾಲಿನ ಕೆಲಸವಾಗಿದೆ. ಚೋರ್ಲಾ ಘಾಟ್‌ನಲ್ಲಿ ದರೋಡೆ ಆಗಿದ್ದು ಒಂದು ಭಾಗವಾಗಿದ್ದರೆ ಕಂಟೇನರ್‌ನಲ್ಲಿ ಹಣವನ್ನು ಯಾವ ಜಾಗದಲ್ಲಿ ತುಂಬಿಸಲಾಯಿತು ಎಂಬುವುದೇ ಯಕ್ಷಪ್ರಶ್ನೆಯಾಗಿದೆ. ಮೂಲಗಳ ಪ್ರಕಾರ, 2025ರ ಸಪ್ಟೆಂಬರ್‌ನಲ್ಲಿ ಗೋವಾದಲ್ಲಿ ಎರಡು ಕಂಟೇನರ್‌ ನಲ್ಲಿ 2 ಸಾವಿರ ಮುಖಬೆಲೆಯ ನೋಟು ತುಂಬಿಸಲಾಗಿದೆ.

Ramadurga News: ವ್ಹಿಬಿ-ಜಿ-ರಾಮ್‌ಜಿ ಯೋಜನೆ ಜಾಗೃತಿ ಅಭಿಯಾನ: ಡಾ.ಕೆ.ವ್ಹಿ.ಪಾಟೀಲ

ವ್ಹಿಬಿ-ಜಿ-ರಾಮ್‌ಜಿ ಯೋಜನೆ ಜಾಗೃತಿ ಅಭಿಯಾನ: ಡಾ.ಕೆ.ವ್ಹಿ.ಪಾಟೀಲ

ಕಾಂಗ್ರೆಸ್ ಪಕ್ಷ ಯೋಜನೆಯ ಕುರಿತು ಅಪಪ್ರಚಾರ ಮಾಡುತ್ತಿದೆ. ಮಾರ್ಪಾಡುಗಳು ಜನಪರ ವಾಗಿದ್ದರೂ ರಾಜಕೀಯ ಮಾಡುವುದು ಸರಿಯಲ್ಲ. ಅದರಲ್ಲಿರುವ ಉತ್ತಮ ಅಂಶಗಳನ್ನು ಜನತೆಗೆ ತಿಳಿಸುವ ಸಲುವಾಗಿ ಗೊಡಚಿಯಿಂದ ರಾಮದುರ್ಗ ವರೆಗೆ ಮಧ್ಯದಲ್ಲಿ ಬರುವ ಗ್ರಾಮ ಪಂಚಾಯತಿ ಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪಾದಯಾತ್ರೆ ರಾಮದುರ್ಗ ತಪುಪಿದ ನಂತರ ತುರನೂರ ಹತ್ತಿರ ಇರುವ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದ ಹತ್ತಿರ ಇರುವ ಬಿಜೆಪಿ ತಾಲೂಕಾ ಘಟಕದ ಕಾರ್ಯಾಲಯದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ

Ramadurga News: ಜನರ ಬಾಳಿಗೆ ಬೆಳಕಾದ ಧರ್ಮಸ್ಥಳ ಸಂಸ್ಥೆ ಕಾರ್ಯ ಯೋಜನೆ

ಜನರ ಬಾಳಿಗೆ ಬೆಳಕಾದ ಧರ್ಮಸ್ಥಳ ಸಂಸ್ಥೆ ಕಾರ್ಯ ಯೋಜನೆ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಆರ್ಥಿಕ ಸಹಾಯ, ನಿರ್ಗತಿಕರಿಗೆ ಮಾಶಾಸನ, ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೇರಿದಂತೆ ನೂರಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ. ಕ್ಷೇತ್ರದ ಕಾರ್ಯ ಯೋಜನೆ ಇನ್ನಷ್ಟು ವಿಸ್ತಾರವಾಗಲಿ

400 ಕೋಟಿ ರು. ದರೋಡೆಯಲ್ಲಿ ಬೆಳಗಾವಿ ಪೊಲೀಸರು ಭಾಗಿ ?

400 ಕೋಟಿ ರು. ದರೋಡೆಯಲ್ಲಿ ಬೆಳಗಾವಿ ಪೊಲೀಸರು ಭಾಗಿ ?

ಸಂಭಾಷಣೆ ಪ್ರಕಾರ ದರೋಡೆ ಪ್ರಕರಣ ಗುಜರಾತ್ ಮೂಲದ ರಾಜಕಾರಣಿಗೆ ಗೊತ್ತಾಗಿದೆ. ಇಷ್ಟೊಂದು ಹಣ ನಾಪತ್ತೆ ಆಗಲು ಹೇಗೆ ಸಾಧ್ಯ? ಇದರ ಹಿಂದೆ ಕರ್ನಾಟಕ ಪೊಲೀಸರು ಇದ್ದಾರೆ ಎಂದು ಮಾತನಾಡಿದ್ದಾರೆ. ಚೋರ್ಲಾ ಘಾಟ್‌ನಲ್ಲಿ ಸಂಭವಿಸಿದ್ದ ದರೋಡೆ ಪ್ರಕರಣದಲ್ಲಿ ಬೆಳಗಾವಿ ಪೊಲೀಸರ ಕೈವಾಡ ಕುರಿತು ಹೊರಬಿದ್ದಿರುವ ಸಂಭಾಷಣೆ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

Savadatti News: ಸವದತ್ತಿಯಲ್ಲಿ ಹೆಚ್ಚಾದ ಗೂಳಿಗಳ ಹಾವಳಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಸವದತ್ತಿಯಲ್ಲಿ ಹೆಚ್ಚಾದ ಗೂಳಿಗಳ ಹಾವಳಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಸವದತ್ತಿ‌ ಪಟ್ಟಣದಲ್ಲಿ ಗೂಳಿಗಳ ಹಾವಳಿ ಹೆಚ್ಚಾಗಿದ್ದು ಮಹಿಳೆಯರು, ಮಕ್ಕಳು, ವೃದ್ಧರು, ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಬೈಕ್‌ ಸವಾರರು ಓಡಾಡಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಪುರಸಭೆ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ವಹಿಸಿ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

400 ಕೋ. ದರೋಡೆ: ಅಂತೆ, ಕಂತೆಗಳ ಸದ್ದು

400 ಕೋ. ದರೋಡೆ ಅಂತೆ, ಕಂತೆಗಳ ಸದ್ದು

400 ಕೋಟಿ ರು. ಹಣ ಇದ್ದ ಕಂಟೇನರ್ ದರೋಡೆ ಪ್ರಕರಣ ಅಂತೆ ಕಂತೆಗಳ ಮೇಲೆ ಸಾಗಿದೆ. ಈ ನಡುವೆ ಅಪಹರಣ ಪ್ರಕರಣ ಬಂಧನಕ್ಕೆ ಒಳಗಾದ ವಿರಾಟ್ ಗಾಂಧಿ ಹಾಗೂ ಜಯೇಶ್ ಮಧ್ಯೆ ನಡೆದ ವಾಟ್ಸಪ್ ಕರೆ ಸಂಭಾಷಣೆ ವೈರಲ್ ಆಗಿದೆ. ಸಂಭಾಷಣೆ ಪ್ರಕಾರ ಹಣ ಗುಜರಾತ್ ಮೂಲದ ರಾಜಕಾರಣಿಗೆ ಸೇರಿದ್ದು ಎಂದು ಹೇಳಲಾಗುತ್ತಿದ್ದು, ಬಾಲಾಜಿ ಟ್ರಸ್ಟ್ ಹೆಸರು ತಳುಕು ಹಾಕಿಕೊಂಡಿದೆ.

ಸಿನಿಮೀಯ ರೀತಿಯ 400 ಕೋಟಿ ರುಪಾಯಿ ದರೋಡೆ ಬಗ್ಗೆ ಸ್ಫೋಟಕ ಮಾಹಿತಿ ಲಭ್ಯ: ರಕ್ಷಕರೇ ಭಕ್ಷಕರಾದ್ರಾ?

400 ಕೋಟಿ ರುಪಾಯಿ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

Robbery Case: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರುಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ 2 ಕಂಟೇನರ್‌ ಹೈಜಾಕ್‌ಗೆ ಸಂಬಂಧಿಸಿ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಕರ್ನಾಟಕ ಪೊಲೀಸರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆಡಿಯೊ ವೈರಲ್‌ ಆಗಿದೆ.

ಬೆಳಗಾವಿಯಲ್ಲಿ ನಡೀತು ದೇಶದಲ್ಲಿಯೇ ಅತ್ಯಂತ ದೊಡ್ಡ ದರೋಡೆ; 400 ಕೋಟಿ  ರಾಬರಿ!

ಬೆಳಗಾವಿಯಲ್ಲಿ ನಡೀತು ದೇಶದಲ್ಲಿಯೇ ಅತ್ಯಂತ ದೊಡ್ಡ ದರೋಡೆ!

Maharashtra Robbery Case: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್;  ಬೃಹತ್‌ ಅಕ್ರಮ ಜಾಲ ಬಯಲು

ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್!

ಚಿನ್ನದಂತೆ ಗಲ್ಫ್‌ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್‌ ಸ್ಮಗ್ಲಿಂಗ್‌ ಮಾಡ್ತಿದ್ದ ಅಕ್ರಮ ಜಾಲವೊಂದು ಇದೀಗ ಸಿಕ್ಕಿ ಬಿದ್ದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಈ ಜಾಲವನ್ನು ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ.

ಸಂಗೊಳ್ಳಿ ರಾಯಣ್ಣ ವೀರಭೂಮಿ, ಪುತ್ಥಳಿ ಲೋಕಾರ್ಪಣೆ; ನಮ್ಮ ಸರ್ಕಾರ ದೇಶ ಮೆಚ್ಚುವ ಕೆಲಸ ಮಾಡಿದೆ ಎಂದ ಹೆಬ್ಬಾಳ್ಕರ್

ನಮ್ಮ ಸರ್ಕಾರದಿಂದ ಇಡೀ ದೇಶವೇ ಮೆಚ್ಚುವಂಥ ಕೆಲಸ: ಹೆಬ್ಬಾಳ್ಕರ್

Laxmi Hebbalkar: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುಣ್ಯ ಭೂಮಿ ನಂದಗಡದಲ್ಲಿ ವೀರ ಭೂಮಿಯನ್ನು ಲೋಕಾರ್ಪಣೆ ಮಾಡುವ ಮೂಲಕ ಇಡೀ ದೇಶವೇ ಮೆಚ್ಚುವಂಥ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಜ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿಪೂಜೆ

ಜ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಾಮಗಾರಿಗಳ ಭೂಮಿಪೂಜೆ

ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ನಿರ್ಮಿಸಲಾಗಿರುವ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ, ರಾಯಣ್ಣ ಪ್ರತಿಮೆ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಭೂಮಿಪೂಜೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಮಧ್ಯಾಹ್ನ 12 ಗಂಟೆಗೆ ನೆರವೇರಿಸಲಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಆತನ ಸಂಗಡಿಗರಿಗೆ ನೇಣು ಹಾಕಿದ್ದ ನಂದಗಡದಲ್ಲಿ ವೀರಭೂಮಿ ಹೆಸರಿನಲ್ಲಿ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗಿದೆ.

Street Dog Attack: ಅಟ್ಟಿಸಿಕೊಂಡು ಬಂದ ಬೀದಿ ನಾಯಿಗೆ ಬೈಕ್‌ ಸವಾರ ಬಲಿ

ಅಟ್ಟಿಸಿಕೊಂಡು ಬಂದ ಬೀದಿ ನಾಯಿಗೆ ಬೈಕ್‌ ಸವಾರ ಬಲಿ

ಬೈಕ್ ಅಪಘಾತ ಎಂದು ಭಾವಿಸಿ ಪೊಲೀಸರು ಸುಮ್ಮನಾಗಿದ್ದರು. ಆದರೆ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ನೋಡಿದಾಗ ಸಾವಿನ ರಹಸ್ಯ ಬಯಲಾಗಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಬೀದಿ ನಾಯಿಯೊಂದು ವಿಶ್ವನಾಥರನ್ನು ಅಟ್ಟಾಡಿಸಿಕೊಂಡು ಬಂದಿತ್ತು. ಅದರಿಂದ ತಪ್ಪಿಸಿಕೊಳ್ಳಲು ವಿಶ್ವನಾಥ್ ವೇಗವಾಗಿ ಬೈಕ್‌ ಓಡಿಸಿದ್ದಾರೆ. ಈ ವೇಳೆ ಮನೆಯ ಗೋಡೆಗೆ ಸ್ಕೂಟಿ ಡಿಕ್ಕಿ ಹೊಡೆದು ಸ್ಥಳದಲ್ಲೇ ವಿಶ್ವನಾಥ್ ಸಾವನಪ್ಪಿದ್ದಾರೆ.

Belagavi Rains: ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಭಾರೀ ಮಳೆ; 1 ಗಂಟೆಗೂ ಹೆಚ್ಚು ಕಾಲ ವರ್ಷಧಾರೆ!

ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಅಬ್ಬರಿಸಿದ ಮಳೆರಾಯ!

Karnataka Rains: ರಾಜ್ಯದಲ್ಲಿ ಬೆಳಗಾವಿ ಮಾತ್ರವಲ್ಲದೇ ಚಿಕ್ಕಮಗಳೂರು ಜಿಲ್ಲೆಯಲಲ್ಲೂ ಮಂಗಳವಾರ ಮಳೆ ಅಬ್ಬರಿಸಿದೆ. ಬೆಳಗಾವಿಯಲ್ಲಿ ಅಕಾಲಿಕ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಹೈರಾಣಾದರು. ರಾಜ್ಯ ವಿವಿಧೆಡೆ ವರ್ಷದ ಮೊದಲ ಮಳೆ ಸಿಂಚನವಾಗಿದೆ.

ಕನ್ನಡ ನಾಡಿನ ಬಗ್ಗೆ ಅವಹೇಳನಕಾರಿ ಹೇಳಿಕೆ; ಎಂಇಎಸ್‌ ಮುಖಂಡ ಶುಭಂ ಶೆಳಕೆ ಗಡಿಪಾರಿಗೆ ಕರವೇ ಒತ್ತಾಯ

ಎಂಇಎಸ್‌ ಮುಖಂಡ ಶುಭಂ ಶೆಳಕೆ ಗಡಿಪಾರಿಗೆ ಕರವೇ ಒತ್ತಾಯ

Savadatti News: ಕನ್ನಡ ನಾಡಿನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಎಂಇಎಸ್‌ ಮುಖಂಡ ಶುಭಂ ವಿಕ್ರಾಂತ್‌ ಶೆಳಕೆಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಗ್ರೇಡ್ 2 ತಹಸೀಲ್ದಾರ್ ಎಂ.ಎನ್. ಮಠದ ಅವರ ಮೂಲಕ ಗೃಹ ಸಚಿವರಿಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾ ಘಟಕದಿಂದ ಮನವಿ ಸಲ್ಲಿಸಲಾಗಿದೆ.

Bailahongala News: ದೊರೆತ ಕಾಲಾವಕಾಶದಲ್ಲಿ ಅನುದಾನಗಳ ಸದ್ಬಳಕೆ ಮಾಡಿದ್ದೇನೆ: ಈರಣ್ಣ ಕಡಾಡಿ

ದೊರೆತ ಕಾಲಾವಕಾಶದಲ್ಲಿ ಅನುದಾನಗಳ ಸದ್ಬಳಕೆ ಮಾಡಿದ್ದೇನೆ

ರಾಜ್ಯಸಭಾ ಸದಸ್ಯರಿಗೆ ಅನುದಾನಗಳು ಬಹಳ ಕಡಿಮೆ ಆದರೂ ನೀಡಿರುವ ಅನುದಾನವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿ ಜನರಿಗೆ ನೆರವಾಗುವ ಕೆಲಸವನ್ನು ಮಾಡುತ್ತಿದ್ದೇನೆ, ಈ ಸಮುದಾಯ ಭವನಗಳ ಸದ್ಬಳಕೆ ಸರಿಯಾಗಿ ಆಗಲಿ, ನರೇಂದ್ರ ಮೋದಿಜಿ ಅವರ ವಿಕಸಿತ ಭಾರತದ ಕನಸನ್ನ ಸಾಕಾರಗೊಳಿಸುವ ನಿಟ್ಟಿನಲ್ಲಿ ನಾವು ಕೆಲಸಗಳನ್ನು ಮಾಡೋಣ, ಭಾರತ ವಿಶ್ವಗುರು ಸ್ಥಾನದಲ್ಲಿ ವಿಜೃಂಭಿಸುವ ವೇಳೆಯನ್ನು ನಾವೆಲ್ಲರೂ ಕಾತರದಿಂದ ಕಾಯುತ್ತಿದ್ದೇವೆ

MLA Ashoka Pattana: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಹಾಯಧನ ಚೆಕ್ ವಿತರಣೆ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಹಾಯಧನ ಚೆಕ್ ವಿತರಣೆ

ರಾಜ್ಯಾದ್ಯಂತ ಹಲವು ಅಪಘಾತ ಪ್ರಕರಣಗಳು ಇದ್ದು, ನಮ್ಮ ರಾಮದುರ್ಗ ತಾಲೂಕಿನ ಪರಿಶಿಷ್ಠ ಕುಟುಂಬಗಳ ಮೃತರ ಸಂಬಂಧಿಕ ರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ವಿಶೇಷ ಪ್ರಕಣವೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿ, ಪರಿಹಾರ ಹಣ ಮಂಜೂರು ಮಾಡಿಸಿದ್ದೇನೆ. ಪರಿಹಾರ ಪಡೆದ ಕುಟುಂಬಸ್ಥರು ಸರಕಾರದಿಂದ ದೊರೆತ ಪರಿಹಾರದ ಹಣವನ್ನು ದುರುಪಯೋಗ ಮಾಡಿಕೊಳ್ಳಬಾರದು. ಮಕ್ಕಳ ಶಿಕ್ಷಣದ ಜೊತೆಗೆ ಕುಟುಂಬದ ಅಭಿವೃದ್ಧಿಗೆ ವೆಚ್ಚ ಮಾಡಬೇಕು

Assembly Chief Whip Ashoka Pattana: ಜಾಲಿಕಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ಉದ್ಘಾಟನೆ

ಜಾಲಿಕಟ್ಟಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ಉದ್ಘಾಟನೆ

ಶಾಸಕರ ಮುತವರ್ಜಿಯಿಂದ ತಾಲೂಕಿ ನಲ್ಲಿ ಈಗಾಗಲೇ 35 ಪ್ರಾಥಮಿಕ, 10 ಪ್ರೌಢಶಾಲಾ ಕೊಠಡಿಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಿಂದ ತಾಲೂಕಿನ 30 ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಎಲ್‌ಕೆಜಿ, ಯುಕೆಜಿ ತರಗತಿ ಗಳನ್ನು ಆರಂಭಿಸಲಾಗುತ್ತಿದೆ. ತಾಲೂಕಿನಾದ್ಯಂತ ಅಲ್ಲಲ್ಲಿ ಶಿಕ್ಷಕರ ಕೊರತೆ ಇದ್ದು, ಶಾಸಕರು ಸರಕಾರದ ಮಟ್ಟದಲ್ಲಿ ಈ ಕುರಿತು ಚರ್ಚಿಸಿ, ಅಗತ್ಯ ಶಿಕ್ಷಕರು ತಾಲೂಕಿನಲ್ಲಿ ಸೇವೆ ಮಾಡುವಂತಾ ಗಲು ಅನುವು ಮಾಡಿಕೊಡಬೇಕು

Assembly Chief Whip Ashoka Pattana: ರೈತರ ಜಮೀನುಗಳ ರಸ್ತೆ ಸುಧಾರಣೆಗೆ ಸರಕಾರದಿಂದ ಅನುದಾನ ಬಿಡುಗಡೆ: ಅಶೋಕ ಪಟ್ಟಣ

ರೈತರ ಜಮೀನುಗಳ ರಸ್ತೆ ಸುಧಾರಣೆಗೆ ಸರಕಾರದಿಂದ ಅನುದಾನ ಬಿಡುಗಡೆ

ತಾಲೂಕಿನ ಕಲ್ಲೂರ ಗ್ರಾಮದಲ್ಲಿ ಶನಿವಾರ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಯೋಜನೆಗಳ ಅಡಿಯಲ್ಲಿ ಸುಮಾರು 29 ಲಕ್ಷ ವೆಚ್ಚದಲ್ಲಿ ಕಲ್ಲೂರ-ಮುಳ್ಳೂರ ಗ್ರಾಮಗಳ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಶನಿವಾರ ಮಾತನಾಡಿದರು

Boiler Blast: ಬೈಲಹೊಂಗಲ ಸಕ್ಕರೆ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಬೈಲಹೊಂಗಲ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ: ಮೃತರ ಸಂಖ್ಯೆ 7ಕ್ಕೆ ಏರಿಕೆ

ಕಾರ್ಖಾನೆ ವಾಲ್ ದುರಸ್ತಿ ಮಾಡುವಾಗ ವಾಲ್ ಸಿಡಿದು ಕುದಿಯುವ ಕಬ್ಬಿನ ಹಾಲು ಮೈಮೇಲೆ ಬಿದ್ದು 8 ಜನ ಕಾರ್ಮಿಕರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇದುವರೆಗೆ 7 ಮಂದಿ ಮೃತಪಟ್ಟಿದ್ದಾರೆ. ಒಬ್ಬನನ್ನು ಹೊರತುಪಡಿಸಿ ಯಾರಿಗೂ ಪರಿಹಾರ ದೊರೆತಿಲ್ಲ, ಪೊಲೀಸರೂ ಕಠಿಣ ಕ್ರಮ ಕೈಗೊಂಡಿಲ್ಲ.

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಇರಿದ ನಾಲ್ವರು ಆರೋಪಿಗಳ ಸೆರೆ

ಲಕ್ಷ್ಮೀ ಹೆಬ್ಬಾಳ್ಕರ್‌ ಪುತ್ರನ ಚಾಲಕನಿಗೆ ಇರಿದ ನಾಲ್ವರು ಆರೋಪಿಗಳ ಸೆರೆ

ಕಾರು ಚಾಲಕ ಬಸವಂತ ಕಡಲೇಕರ್ ಸ್ನೇಹಿತ ಮದನ್ ಈ ಕುರಿತು ದೂರು ನೀಡಿದ್ದರು. ಬೆಳಗಾವಿಯ ಕ್ಯಾಂಪ್ ಠಾಣೆಯಲ್ಲಿ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಮದನ್ ನೀಡಿದ ದೂರಿನ ಮೇಲೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ತಿಳಿಸಿದರು. ಜನವರಿ 6ರಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ ಬಸವಂತಗೆ ಚಾಕು ಇರಿದು ಎಸ್ಕೇಪ್ ಆಗಿದ್ದರು.

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಕಾರ್ಮಿಕರ ಸಾವು, 6 ಮಂದಿಗೆ ಗಾಯ

ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರ ಸಾವು

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಅವಘಡದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಉಡುಪಿ ಪರ್ಯಾಯ ಹಿನ್ನೆಲೆ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಿ: ಹೆಬ್ಬಾಳ್ಕರ್ ನಿರ್ದೇಶನ

ಉಡುಪಿಯಲ್ಲಿ 6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಿ: ಹೆಬ್ಬಾಳ್ಕರ್

Laxmi Hebbalkar: ಉಡುಪಿ ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ ಸಮರೋಪಾದಿಯಲ್ಲಿ ಹಗಲು- ರಾತ್ರಿ ಕೆಲಸ ಮಾಡಬೇಕು. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಹಾಡಹಗಲೇ ಚಾಕು ಇರಿತ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಹಾಡಹಗಲೇ ಚಾಕು ಇರಿತ

Belagavi News: ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹಣಕಾಸಿನ ವಿಚಾರಕ್ಕೆ ಗಲಾಟೆ ಆಗಿ ಕಿಡಿಗೇಡಿಗಳು ಚಾಕು ಇರಿದಿದ್ದಾರೆ ಎನ್ನಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

Loading...