ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬೆಂಗಳೂರು ಗ್ರಾಮಾಂತರ
‌Ricky Rai Shoot out: ತನಗೆ ತಾನೇ ಗುಂಡಿಕ್ಕಿಕೊಂಡು ಶೂಟೌಟ್‌ ನಾಟಕವಾಡಿದ ರಿಕ್ಕಿ ರೈ! ಬಾಯಿ ಬಿಟ್ಟ ಗನ್‌ ಮ್ಯಾನ್

ತನಗೆ ತಾನೇ ಗುಂಡಿಕ್ಕಿಕೊಂಡು ರಿಕ್ಕಿ ರೈ ನಾಟಕ! ಬಾಯಿ ಬಿಟ್ಟ ಗನ್‌ ಮ್ಯಾನ್

ಸಾಕಷ್ಟು ಅನುಮಾನ ಉಂಟಾಗಿದ್ದರಿಂದ ರಿಕ್ಕಿ ರೈ ಗನ್ ಮ್ಯಾನ್ ವಿಠಲ್‌ನನ್ನು ರಾಮನಗರ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಬಳಿಕ ರಾಮನಗರ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ. ವಿಚಾರಣೆಯ ವೇಳೆ ಆತ ಮಹತ್ವದ ಮಾಹಿತಿ ನೀಡಿದ್ದಾನೆ.

Self Harming: ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು

ತೋಟದ ಮನೆಯಲ್ಲಿ ಯುವ ವಕೀಲೆ, ಯುವಕ ಅನುಮಾನಾಸ್ಪದ ಸಾವು

ಇಬ್ಬರ ಸಾವೂ ಅನುಮಾನಾಸ್ಪದವಾಗಿದ್ದು, ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಪರಾಧ ಕೃತ್ಯದ ಸಾಧ್ಯತೆಗಳನ್ನು ಪೊಲೀಸರು ತಳ್ಳಿಹಾಕಿಲ್ಲ. ಇಬ್ಬರ ಸಾವಿನ ಹಿಂದೆ ಪ್ರೇಮ ಪ್ರಕರಣದ ಆಯಾಮ ಇರುವ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.

Ricky Rai Shoot Out: ರಿಕ್ಕಿ ರೈ ಮೇಲೆ ಗುಂಡು; ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್‌ ಮೇಲೆ ಹೆಚ್ಚಿದ ಅನುಮಾನ

ರಿಕ್ಕಿ ರೈ ಮೇಲೆ ಗುಂಡು; ಮಾಜಿ ಗನ್‌ಮ್ಯಾನ್‌ ಮೇಲೆ ಹೆಚ್ಚಿದ ಅನುಮಾನ

ಹಲವು ಕಾರಣಗಳಿಂದಾಗಿ ಮುತ್ತಪ್ಪ ರೈ ಮಾಜಿ ಗನ್‌ಮ್ಯಾನ್‌ ವಿಠಲ್‌ ಮೇಲೆ ಪೊಲೀಸರಿಗೆ ಅನುಮಾನ ಹೆಚ್ಚಿದೆ. ಸದ್ಯ ಆತ ಆಸ್ಪತ್ರೆಯಲ್ಲಿದ್ದಾನೆ. ಗನ್‌ಮ್ಯಾನ್‌ ಸ್ವತಃ ಇದನ್ನು ಮಾಡಿದನೇ ಅಥವಾ ರಿಕ್ಕಿ ರೈಯೇ ಇದನ್ನು ಮಾಡಿಸಿ ಫೈರಿಂಗ್‌ನ ನಾಟಕವಾಡಿದನೇ ಎನ್ನುವ ಅನುಮಾನ ಕೂಡ ಪೊಲೀಸರಿಗೆ ಮೂಡಿದೆ.

Grater Bangalore: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌

ಈ ಹಿಂದೆ ವಿಧೇಯಕವನ್ನು ರಾಜ್ಯಪಾಲರು ಅಂಕಿತ ಹಾಕದೆ ಮರಳಿ ಕಳಿಸಿ, ಕೆಲವು ಸ್ಪಷ್ಟನೆಗಳನ್ನು ಕೇಳಿದ್ದರು. ರಾಜ್ಯ ಸರ್ಕಾರ ಸ್ಪಷ್ಟನೆಗಳೊಂದಿಗೆ ಮರಳಿ ಕಳಿಸಿತ್ತು. ನಿನ್ನೆ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಗೆಜೆಟ್ ಮೂಲಕ ಪ್ರಕಟಿಸಲಿದೆ.

Ricky Rai Shoot out: ಮುತ್ತಪ್ಪ ರೈ ಮಗನ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಟ್ವಿಸ್ಟ್‌, ಗನ್‌ ಮ್ಯಾನ್‌ ವಶಕ್ಕೆ! ಗುಂಡಿನ ದಾಳಿಯ ನಾಟಕವಾಡಿದನಾ ರಿಕ್ಕಿ?

ರಿಕ್ಕಿ ರೈ ಗನ್‌ ಮ್ಯಾನ್‌ ಪೊಲೀಸರ ವಶಕ್ಕೆ, ಗುಂಡಿನ ದಾಳಿ ಬರೀ ನಾಟಕವಾ?

ರಿಕ್ಕಿ ರೈಗೆ ಮೂವರು ಗನ್​ ಮ್ಯಾನ್​ಗಳಿದ್ದು, ತನಿಖೆ ವೇಳೆ ಮೂವರು ವಿಭಿನ್ನ ಹೇಳಿಕೆ ನೀಡಿದ್ದಾರೆ. ಹೀಗಾಗಿ ರಿಕ್ಕಿ ರೈ ಗನ್​ಮ್ಯಾನ್​ಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ. ಅಷ್ಟೇ ಅಲ್ಲ ಪ್ರಕರಣವನ್ನು ಡೈವರ್ಟ್ ಮಾಡಲು, ಮತ್ತಪ್ಪ ರೈ 2ನೇ ಪತ್ನಿ ಅನುರಾಧ, ರಾಕೇಶ್ ಮಲ್ಲಿ ಸೇರಿದಂತೆ ನಾಲ್ವರ ವಿರುದ್ಧ ದೂರು ಕೊಟ್ಟರೇ ಎಂಬ ಶಂಕೆ ಪೊಲೀಸರಿಗೆ ಮೂಡಿದೆ ಎಂದು ಮೂಲಗಳು ತಿಳಿಸಿವೆ.

Self Harming: 8 ವರ್ಷದಿಂದ ಪ್ರೀತಿಸಿ, ಕೈಕೊಟ್ಟ ವಿವಾಹಿತ ಶಿಕ್ಷಕಿ; ಮನನೊಂದು ಶಿಕ್ಷಕ ಆತ್ಮಹತ್ಯೆ

ಪ್ರೀತಿಸಿ ವಂಚಿಸಿದ ಶಿಕ್ಷಕಿ; ಮನನೊಂದು ಶಿಕ್ಷಕ ಆತ್ಮಹತ್ಯೆ

Self Harming: ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಕಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ವಿವಾಹಿತ ಶಿಕ್ಷಕಿ ವಿರುದ್ಧ ಮೃತ ಶಿಕ್ಷಕನ ಕುಟುಂಬಸ್ಥರು ದೂರು ನೀಡಿದ್ದು, ಶಿಕ್ಷಕಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Plane Accident : ಕೆಂಪೇಗೌಡ ಏರ್ ಪೋರ್ಟ್‌ನಲ್ಲಿ ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿ;  ತಪ್ಪಿದ ದುರಂತ

ಕೆಂಪೇಗೌಡ ಏರ್ ಪೋರ್ಟ್‌ನಲ್ಲಿ ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ಡಿಕ್ಕಿಯಾಗಿದ್ದು, ಭಾರೀ ದುರಂತವೊಂದು ತಪ್ಪಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಡಿಕ್ಕಿ ರಭಸಕ್ಕೆ ಟಿಟಿ ವಾಹನದ ಟಾಪ್ ನಜ್ಜುಗುಜ್ಜಾಗಿದೆ. ಸಣ್ಣಪುಟ್ಟ ಗಾಯಗಳಿಂದ ಟಿಟಿ ಚಾಲಕ ಪಾರಾಗಿದ್ದಾರೆ.

Muthappa Rai: ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ತನಿಖೆಗೆ 5 ತಂಡ, ಬಲಗೈ ಬಂಟನ ಮೇಲೂ ಅನುಮಾನ

ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ತನಿಖೆಗೆ 5 ತಂಡ, ಬಲಗೈ ಬಂಟನ ಮೇಲೂ ಅನುಮಾನ

ಮುತ್ತಪ್ಪ ರೈ ಅವರ ₹2000 ಕೋಟಿ ಆಸ್ತಿಗೆ ಸಂಬಂಧಿಸಿದ ವಿವಾದದಿಂದ ರಿಕ್ಕಿ ರೈ ಕೊಲೆಗೆ ಯತ್ನ ನಡೆದಿರಬಹುದು ಎಂಬ ಅನುಮಾನವೂ ಇದೆ. ಮುತ್ತಪ್ಪ ರೈ ಬೆಂಗಳೂರು, ಗೋವಾ, ಮೈಸೂರು, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ವ್ಯಾಪಕ ಬ್ಯುಸಿನೆಸ್ ಹೊಂದಿದ್ದರು. ಈಗ ಈ ಬ್ಯುಸಿನೆಸ್‌ ಅನ್ನು ರಿಕ್ಕಿ ರೈ ನಿರ್ವಹಿಸುತ್ತಿದ್ದಾರೆ.

Muthappa Rai: ಮುತ್ತಪ್ಪ ರೈ ಮಗನ ಹತ್ಯೆಗೆ ಮಾಜಿ ಪತ್ನಿಯೇ ಸ್ಕೆಚ್‌ ಹಾಕಿದಳಾ? ಮೂವರ ಮೇಲೆ ದೂರು

ಮುತ್ತಪ್ಪ ರೈ ಮಗನ ಹತ್ಯೆಗೆ ಮಾಜಿ ಪತ್ನಿಯದೇ ಸ್ಕೆಚ್‌? ಮೂವರ ಮೇಲೆ ದೂರು

ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಮಾಡಿದ್ದು ಯಾರು, ಯಾಕೆ ಎನ್ನುವ ಪ್ರಶ್ನೆ ಮೂಡಿದೆ. ರಿಕ್ಕಿ ರೈ ಸಾಕಷ್ಟು ರಿಯಲ್ ಎಸ್ಟೇಟ್ ಡೀಲಿಂಗ್‌ ನಡೆಸುತ್ತಿದ್ದು, ಸಂಚಿನ ಹಿಂದೆ ರಿಯಲ್‌ ಎಸ್ಟೇಟ್‌ ಮಾಫಿಯಾ ಇರುವ ಶಂಕೆ ಮೂಡಿದೆ. ಜಮೀನು ವಿಚಾರಕ್ಕೆ ಈ ಹಿಂದೆ ಕೆಲವು ವಿವಾದಗಳಾಗಿದ್ದವು. ಪ್ರತಿಸ್ಪರ್ಧಿಗಳ ಮೇಲೂ ಶಂಕೆ ಇದೆ.

Self Harming: ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡಿ ನೇಣಿಗೆ ಶರಣು!

ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ; ವಿಡಿಯೋ ಮಾಡಿ ನೇಣಿಗೆ ಶರಣು!

Self Harming: ಆನೇಕಲ್‌ನ ಎಸ್‌ವಿಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ರಾತ್ರಿ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Self Harming: ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ

ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ವಿಡಿಯೊ ಮಾಡಿ ಆತ್ಮಹತ್ಯೆ

ಫೇಸ್ಬುಕ್‌ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಾ ಬಿಜೆಪಿ ಕಾರ್ಯಕರ್ತ ಪ್ರವೀಣ್ ಗೌಡ ಬೇಲೂರು (35) ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್‌ವಿಎಂ ಸ್ಕೂಲ್ ಬಳಿ ಈ ಘಟನೆ ನಡೆದಿದೆ. ಸಾವಿಗೆ ಕಾರಣರಾದವರ ಹೆಸರುಗಳನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿರುವ ಪ್ರವೀಣ್, ಇವರುಗಳಿಗೆ ಶಿಕ್ಷೆ ಆಗಬೇಕು ಎಂದು ಕೋರಿದ್ದಾರೆ.

Bengaluru Traffic Alert: ಇಂದು ಐಪಿಎಲ್‌ ಪಂದ್ಯದ ಕಾರಣ ಸಂಚಾರ ಬದಲಾವಣೆ; ಬೆಂಗಳೂರಿಗರು ಗಮನಿಸಿ

ಇಂದು ಆರ್‌ಸಿಬಿ ಪಂದ್ಯದ ಕಾರಣ ಸಂಚಾರ ಬದಲಾವಣೆ; ಬೆಂಗಳೂರಿಗರು ಗಮನಿಸಿ

RCB vs PBKS: ಪಂದ್ಯವನ್ನು ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಸೇವೆ ಒದಗಿಸಿದೆ. ಜತೆಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೂಡ ಎಲ್ಲ ನಾಲ್ಕು ಮೆಟ್ರೊ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಿದೆ.

Laxmi Hebbalkar: ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಹೆಬ್ಬಾಳ್ಕರ್‌

Laxmi Hebbalkar: ನಾನು ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಾಡಿನ ಮೂಲೆ ಮೂಲೆಗಳಿಂದ ಮಠಾಧೀಶರು ಆಸ್ಪತ್ರೆಗೆ ಬಂದು ಆಶೀರ್ವದಿಸಿದರು. ಇದನ್ನು ನಾನೆಂದು ಮರೆಯುವುದಿಲ್ಲ. ನಾನೇನು ಅಂಥಹ ಸಾಧನೆ ಮಾಡಿದವಳಲ್ಲ, ಸಂಘರ್ಷದ ಹಾದಿಯಲ್ಲಿ ಬೆಳೆದು ಬಂದವಳು ನಾನು, ನನಗೆ ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯುವಂತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Soil Mafia: ಸರ್ಕಾರಿ ಗೋಮಾಳದಲ್ಲಿ ಮಣ್ಣು ಮಾಫಿಯಾ ಅವ್ಯಾಹತ; ಅಧಿಕಾರಿಗಳು ಶಾಮೀಲು ಶಂಕೆ

ಸರ್ಕಾರಿ ಗೋಮಾಳದಲ್ಲಿ ಮಣ್ಣು ಮಾಫಿಯಾ ಅವ್ಯಾಹತ; ಅಧಿಕಾರಿಗಳು ಶಾಮೀಲು ಶಂಕೆ

Soil Mafia: ನೆಲಮಂಗಲ ತಾಲೂಕಿನಲ್ಲಿ ಕೆಂಪು ಮಣ್ಣಿನ ಹಗಲುದರೋಡೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಯಂತ್ರಗಳ ಮೂಲಕ ಅಕ್ರಮವಾಗಿ ಮಣ್ಣು ಸಾಗಣೆ ದಿನನಿತ್ಯ ನಿರಂತರವಾಗಿ ನಡೆಯುತ್ತಿದ್ದು, ಲಕ್ಷಾಂತರ ರೂ. ಬೆಲೆ ಬಾಳುವ  ಸುಮಾರು 10 ರಿಂದ 15 ಸಾವಿರ ಲೋಡ್ ಮಣ್ಣು ದೋಚಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

IPL 2025: ಪ್ರಯಾಣಿಕರೇ ಗಮನಿಸಿ; ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ವಾಹನ ಸಂಚಾರ ಮಾರ್ಪಾಡು

RCB vs DC: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ವಾಹನ ನಿಲುಗಡೆ ನಿಷೇಧ

Bengaluru Traffic Alert: ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Bengaluru's second airport: ಬೆಂಗಳೂರಿನ 2ನೇ ಏರ್‌ಪೋರ್ಟ್‌; ಕೇಂದ್ರ ತಂಡದಿಂದ ನೆಲಮಂಗಲದಲ್ಲಿ ಸ್ಥಳ ವೀಕ್ಷಣೆ

ಬೆಂಗಳೂರಿನ 2ನೇ ಏರ್‌ಪೋರ್ಟ್‌; ನೆಲಮಂಗಲದಲ್ಲಿ ಸ್ಥಳ ವೀಕ್ಷಣೆ

Bengaluru's second airport: ಸದ್ಯ ಕನಕಪುರ ರಸ್ತೆಯಲ್ಲಿ ಗುರುತಿಸಿರುವ ಎರಡು ಪ್ರದೇಶ ಮತ್ತು ನೆಲಮಂಗಲ - ಕುಣಿಗಲ್ ರಸ್ತೆಯಲ್ಲಿರುವ ಪ್ರದೇಶದಲ್ಲಿ ಏರ್‌ಪೋರ್ಟ್‌ ನಿರ್ಮಿಸಲು ಸೂಕ್ತ ಸ್ಥಳಕ್ಕಾಗಿ ಹುಡುಕಾಟ ನಡೆಯುತ್ತಿದೆ. ಆದರೆ, ಏರ್‌ಪೋರ್ಟ್‌ ರೇಸ್‌ನಲ್ಲಿದ್ದ ಬಿಡದಿ ಸ್ಪರ್ಧೆಯಿಂದ ಔಟ್ ಆಗಿದೆ.

RCB vs GT: ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯ; ಈ ಮಾರ್ಗದ ಸಂಚಾರ ನಿಷೇಧ

ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ ಪಂದ್ಯ; ಈ ಮಾರ್ಗದ ಸಂಚಾರ ನಿಷೇಧ

Bangalore Traffic Advisory: ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಜನರು, ತಮ್ಮ ವಾಹನಗಳನ್ನು ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ, ಯು.ಬಿ ಸಿಟಿ, ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗ ಹಾಗೂ ಕಿಂಗ್ಸ್ ರಸ್ತೆಯಲ್ಲಿ ನಿಲ್ಲಿಸಬಹುದು. ಜನರು, ಮೆಟ್ರೊ ಹಾಗೂ ಬಸ್‌ ಬಳಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

Self Harming: ಸಾಲದ ಸುಳಿ; ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ- ಮಗ ಆತ್ಮಹತ್ಯೆ

ಸಾಲದ ಸುಳಿ; ಒಂದೂವರೆ ತಿಂಗಳ ಅವಧಿಯಲ್ಲಿ ತಾಯಿ- ಮಗ ಆತ್ಮಹತ್ಯೆ

ಮೃತ ಯುವಕ ಪುಡ್​​ ಡೆಲಿವೆರಿ ಕೆಲಸ ಮಾಡುತ್ತಿದ್ದರು. ಮಾರಸಂದ್ರದ ಫೈವ್​​ ಸ್ಟಾರ್, ಸ್ವಿಗ್ಗಿ ಸೇರಿದಂತೆ ಹಲವು ಕಂಪನಿಗಳ ಡೆಲಿವರ್​ ಬಾಯ್​ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ನಂದಿ ಮೋರಿ ಬಳಿ ರಕ್ಷಿತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ತಿಂಗಳ ಹಿಂದೆ ಮೃತ ಯುವಕನ ತಾಯಿ ಕೊನಘಟ್ಟ ಗ್ರಾಮದ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.

Murder Case: ಯುಗಾದಿಯ ಎಣ್ಣೆಪಾರ್ಟಿಯಲ್ಲಿ ಕುಖ್ಯಾತ ರೌಡಿಶೀಟರ್ ಕೊಚ್ಚಿ ಕೊಲೆ​​

ಯುಗಾದಿಯ ಎಣ್ಣೆಪಾರ್ಟಿಯಲ್ಲಿ ಕುಖ್ಯಾತ ರೌಡಿಶೀಟರ್ ಕೊಚ್ಚಿ ಕೊಲೆ​​

ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಅಬ್ಬರಿಸುತ್ತ ಓಡಾಡುತ್ತಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಿದ್ದರು. ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್​​ಗೆ ಶಿಫ್ಟ್ ಆಗಿದ್ದ.

HD Kumaraswamy: ಒತ್ತುವರಿ ತೆರವಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ, ಎಚ್‌ಡಿ ಕುಮಾರಸ್ವಾಮಿಗೆ ಹಿನ್ನಡೆ

ಒತ್ತುವರಿ ತೆರವಿಗೆ ತಡೆ ನೀಡದ ಸುಪ್ರೀಂ ಕೋರ್ಟ್‌, ಎಚ್‌ಡಿಕೆಗೆ ಹಿನ್ನಡೆ

ಹೈಕೋರ್ಟ್ ಒತ್ತುವರಿ ತೆರವು ಮಾಡಲು ಸೂಚನೆ ನೀಡಿತ್ತು. ಆದರೆ ಹೆಚ್.ಡಿ. ಕುಮಾರಸ್ವಾಮಿ ಅವರು ತೆರವು ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್‌ ಕೂಡ ತೆರವಿಗೆ ತಡೆ ನೀಡಲು ನಿರಾಕರಿಸುವ ಮೂಲಕ, ಎಚ್‌ಡಿಕೆ ಅವರಿಗೆ ಹಿನ್ನಡೆಯಾಗಿದೆ.

Self Harming: ಕೌಟುಂಬಿಕ ಕಲಹ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ

ಕೌಟುಂಬಿಕ ಕಲಹ, ಹೆಂಡತಿಯನ್ನು ಕೊಂದು ಗಂಡ ಆತ್ಮಹತ್ಯೆ

ಗಂಡ ಹೆಂಡತಿ ನಡುವೆ ಸದಾ ಒಂದಿಲ್ಲೊಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಬುಧವಾರ ತಡರಾತ್ರಿ ಇಬ್ಬರ ನಡುವೆ ಗಲಾಟೆ ಉಲ್ಬಣಿಸಿದೆ. ಹೆಂಡತಿಯನ್ನು ನೇಣಿಗೆ ಹಾಕಿದ ಗಂಡ ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Nelamangala CMC: ಸರ್ಕಾರದ ಆದೇಶಕ್ಕೆ ಸಿಗದ ಕಿಮ್ಮತ್ತು; ನೆಲಮಂಗಲ ನಗರಸಭೆಯಲ್ಲಿ ಹೆಚ್ಚಿದ ಬ್ರೋಕರ್‌ಗಳ ಹಾವಳಿ

ನೆಲಮಂಗಲ ನಗರಸಭೆಯಲ್ಲಿ ಹೆಚ್ಚಿದ ಬ್ರೋಕರ್‌ಗಳ ಹಾವಳಿ

Nelamangala CMC: ನೆಲಮಂಗಲದಲ್ಲಿ ಬಿ-ಖಾತಾ ಆಂದೋಲನದ ಮೂಲಕ ಕೆಲವು ನಗರಸಭೆ ಸದಸ್ಯರು ಹಾಗೂ ಕೆಲವು ಬ್ರೋಕರ್‌ಗಳು ಹಣ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ. ವಾರ್ಡ್‌ಗಳಲ್ಲಿನ ನಿವಾಸಿಗಳಿಗೆ ತಪ್ಪು ಮಾಹಿತಿಯನ್ನು ನೀಡಿ ಖಾತೆ ಮಾಡಿಸಲು 10 ರಿಂದ 15 ಸಾವಿರ ಹಣವನ್ನು ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Pralhad Joshi: ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಪ್ರಲ್ಹಾದ್‌ ಜೋಶಿ

Pralhad Joshi: ಬೆಂಗಳೂರು-ಹುಬ್ಬಳ್ಳಿ ಮಧ್ಯೆ ಇದೇ ಮಾರ್ಚ್‌ 30ರಿಂದ ಮತ್ತೊಂದು ಇಂಡಿಗೋ (IndiGo6E) ವಿಮಾನ ಸಂಚಾರ ಆರಂಭವಾಗಲಿದೆ. ಈ ಎರಡು ಮಹಾನಗರಗಳ ನಡುವೆ ಈಗ ನಿತ್ಯ ಮೂರು ವಿಮಾನಗಳ ಸಂಚಾರ ಆರಂಭವಾದಂತೆ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Nandi Hills: ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌

ಇಂದಿನಿಂದ ನಂದಿ ಗಿರಿಧಾಮ ಒಂದು ತಿಂಗಳು ಬಂದ್‌

ಪ್ರವಾಸಿಗರ ಹಿತದೃಷ್ಟಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನುಳಿದಂತೆ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರದಂದು ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.