ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಂಗಳೂರು ಗ್ರಾಮಾಂತರ

ಸೈಟ್‌ ಕೊಡಿಸುವುದಾಗಿ ಮಂಚಕ್ಕೆ ಕರೆದ ಸ್ವಾಮೀಜಿ; ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯಿಂದ ದೂರು

ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ; ಬ್ರಹ್ಮಾನಂದ ಗುರೂಜಿ ವಿರುದ್ಧ ದೂರು

Brahmananda Guruji: ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಮಹಿಳೆಯಿಂದ 5 ಲಕ್ಷ ಹಣವನ್ನು ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ, ಒಂದು ವರ್ಷವಾದರೂ ಸೈಟ್‌ ನೀಡದ ಹಿನ್ನೆಲೆಯಲ್ಲಿ ಹಣ ವಾಪಸ್‌ ಕೇಳಿದಾಗ ಮಹಿಳೆಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಬೆಂಗಳೂರು ನಿವಾಸದಲ್ಲಿ ಕಳ್ಳತನ; ವಿಡಿಯೊ ವೈರಲ್‌

ರಿಕ್ಕಿ ಕೇಜ್ ನಿವಾಸಕ್ಕೆ ಕನ್ನ ಹಾಕಿದ ಜೊಮ್ಯಾಟೊ ಡೆಲಿವರಿ ಬಾಯ್‌!

Grammy Winner Ricky Kej: ರಿಕಿ ಕೇಜ್ ಒಬ್ಬ ಭಾರತೀಯ ಸಂಗೀತ ಸಂಯೋಜಕ, ಪರಿಸರವಾದಿ ಮತ್ತು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತರು. ರಿಕಿ ಕೇಜ್ 1981 ರಲ್ಲಿ ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಜನಿಸಿದರು. ಅವರು ಎಂಟು ವರ್ಷದವರಾಗಿದ್ದಾಗ ಅವರ ಕುಟುಂಬ ಬೆಂಗಳೂರಿಗೆ ಸ್ಥಳಾಂತರಗೊಂಡಿತು.

Road Accident: ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

HM Revanna Son: ಸಚಿವ ಹೆಚ್ಎಂ ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದು, ನನ್ನ ಮಗನ ಕಾರು ಅಪಘಾತ ಆಗಿರುವುದು ನಿಜ. ಕಾರು ಓಡಿಸುತ್ತಿದ್ದದ್ದು ನನ್ನ ಮಗ ಅಲ್ಲ, ಡ್ರೈವರ್. ಓವರ್ಟೇಕ್ ಮಾಡುವಾಗ ಈ ಅಪಘಾತ ಆಗಿದೆ. ಮೃತ ಯುವಕನ ಕುಟುಂಬಸ್ಥರು ನನಗೆ ಪರಿಚಯ, ಕುಟುಂಬದವರ ಜೊತೆಗೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.

Bengaluru Weather: ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ! ಏನಿದರ ಕಾರಣ?

ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ!

ಕಳೆದ ವಾರದಿಂದ ಸುಮಾರು 16 ಡಿಗ್ರಿ ಸೆಲ್ಸಿಯಸ್‌ನಲ್ಲಿದ್ದ ಬೆಂಗಳೂರಿನಲ್ಲಿ ಮುಂದಿನ ವಾರದ ವೇಳೆಗೆ ಕನಿಷ್ಠ ತಾಪಮಾನ (bengaluru weather) ಸುಮಾರು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ತಾಪಮಾನ 12 ಡಿಗ್ರಿಗೆ ಇಳಿದರೆ, 2016ರ ನಂತರ ಬೆಂಗಳೂರು ಕಂಡ ಅತೀ ಶೀತಲ ಡಿಸೆಂಬರ್‌ ಎನಿಸಲಿದೆ. ಮಂಜಿನೊಂದಿಗೆ ನಗರದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳುತ್ತದೆ.

Road Accident: ದೇವನಹಳ್ಳಿಯಲ್ಲಿ ಬಸ್ಸಿಗೆ ಕಾರು ಡಿಕ್ಕಿ, ಮೂವರು ಸಾವು

Road Accident: ದೇವನಹಳ್ಳಿಯಲ್ಲಿ ಬಸ್ಸಿಗೆ ಕಾರು ಡಿಕ್ಕಿ, ಮೂವರು ಸಾವು

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

BJP Protest: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

Nelamangala News: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ, ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ವತಿಯಿಂದ ನೆಲಮಂಗಲದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಗ್ರಾಮಾಂತರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ಭೃಂಗೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

‌DK Shivakumar: ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಸೂಚನೆ

Bengaluru Air Pollution: ಬೆಂಗಳೂರು ಭವಿಷ್ಯದಲ್ಲಿ ತೀವ್ರ ಮಾಲಿನ್ಯದ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ದಿನೇಶ್ ಗೂಳಿಗೌಡ ಅವರು ಡಿಸಿಎಂಗೆ ಪತ್ರ ಬರೆದಿದ್ದರು. ಪತ್ರಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಮುಖ್ಯ ಕಾರ್ಯದರ್ಶಿಗಳ ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ತುರ್ತು ಮಾರ್ಗೋಪಾಯಗಳನ್ನು ಕಂಡುಹಿಡಿಯಲು ತಜ್ಞರ ತಂಡವನ್ನು ರಚಿಸುವಂತೆ ಆದೇಶಿಸಿದ್ದಾರೆ.

Murder Case: ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

Doddaballapuara news: ಯುವತಿಯೊಬ್ಬಳನ್ನು ಈತ ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಕೆಲವರು ನಿನ್ನನ್ನು ನೋಡಿಕೊಳ್ಳುವುದಾಗಿ ಈತನಿಗೆ ಧಮಕಿ ಹಾಕಿದ್ದರು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ದರು. ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಬಾಡಿಗೆ ನಿಯಮ ಬದಲಾವಣೆ: ಹೊಸ ರೂಲ್ಸ್‌ನಲ್ಲಿ ಏನೆಲ್ಲ ಇದೆ?

ಭದ್ರತೆ ಪಾವತಿ: ಏನಿದೆ ಹೊಸ ಬಾಡಿಗೆ ನಿಯಮ?

ಮನೆ, ಕಚೇರಿ ಬಾಡಿಗೆ ಕೊಡುವವರು ಭದ್ರತೆ ಮೊತ್ತವಾಗಿ ಸಾವಿರದಿಂದ ಲಕ್ಷಾಂತರ ರೂಪಾಯಿ ಕೇಳುವುದು ವಾಡಿಕೆ. ಆದರೆ ಅದಕ್ಕೆ ಈಗ ಬೆಂಗಳೂರು ಮತ್ತು ಮುಂಬೈ ನಗರಗಲ್ಲಿ ಕಡಿವಾಣ ಹಾಕಲಾಗುತ್ತಿದೆ. ಬಾಡಿಗೆ ನೀಡುವವರು ತೆಗೆದುಕೊಳ್ಳಬೇಕಾದ ಭದ್ರತೆ ಪಾವತಿಯಲ್ಲಿ ಹೊಸ ಬದಲಾವಣೆಗಳನ್ನು ಮಾಡಲಾಗಿದೆ. ಅದು ಏನು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

Road Accident: ಭೀಕರ ಅಪಘಾತ, ಮಂತ್ರಾಲಯಕ್ಕೆ ತೆರಳುತ್ತಿದ್ದ ಕುಟುಂಬದ ಐವರು ಸಾವು

ಭೀಕರ ಅಪಘಾತ, ಮಂತ್ರಾಲಯಕ್ಕೆ ತೆರಳುತ್ತಿದ್ದ ಕುಟುಂಬದ ಐವರು ಸಾವು

ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ ಹೊರಟಿದ್ದ ಸ್ವಿಫ್ಟ್​ ಕಾರು ಡಿಕ್ಕಿ ಹೊಡೆದಿವೆ. ಭೀಕರ ಅಪಘಾತದಿಂದ ಫಾರ್ಚುನರ್ ಮತ್ತು ಸ್ವಿಫ್ಟ್ ಕಾರ್ ಸಂಪೂರ್ಣ ಜಖಂಗೊಂಡಿದೆ.

Murder Case: ತಾಯಿ ಇಲ್ಲದ ಬಾಲಕಿಯ ಕತ್ತು ಹಿಸುಕಿ ಹತ್ಯೆ

ತಾಯಿ ಇಲ್ಲದ ಬಾಲಕಿಯ ಕತ್ತು ಹಿಸುಕಿ ಹತ್ಯೆ

Bengaluru crime news: ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ನಂತರ ಹುಡುಕಾಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಹತ್ಯೆಯ ಹಿಂದಿನ ನಿಖರ ಕಾರಣ ಗೊತ್ತಾಗಿಲ್ಲ. ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ.

ಪುರುಷರ ಜೂನಿಯರ್ ಹಾಕಿ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಜೂ. ಹಾಕಿ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ ಸಿದ್ದರಾಮಯ್ಯ

Hockey Men’s Junior World Cup 2025: ಜೂನಿಯರ್‌ ಹಾಕಿ ವಿಶ್ವಕಪ್‌ ಪಂದ್ಯಾವಳಿ ತಮಿಳುನಾಡಿನಲ್ಲಿ ಇದೇ ಶುಕ್ರವಾರದಿಂದ (ನವೆಂಬರ್‌ 28) ಡಿಸೆಂಬರ್‌ 10ರ ವರೆಗೆ ನಡೆಯಲಿದೆ. ತಮಿಳುನಾಡಿನ ಮದುರೈ ಮತ್ತು ಚೆನ್ನೈ ನಗರಗಳು ಆತಿಥ್ಯ ವಹಿಸುತ್ತಿದ್ದು, ಒಟ್ಟು 24 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಭದ್ರತಾ ಕಾಳಜಿಯಿಂದಾಗಿ ಪಾಕಿಸ್ತಾನ ಕೊನೆಯ ಹಂತದಲ್ಲಿ ಪಂದ್ಯಾವಳಿಯಿಂದ ಹಿಂದೆ ಸರಿದಿತ್ತು.

Laxmi Hebbalkar: ರಾಜ್ಯದ ಜನತೆಗೆ ಗುಡ್‌ನ್ಯೂಸ್‌; ಗ್ಯಾರಂಟಿ ಬಳಿಕ ಮತ್ತೆ 3 ದೊಡ್ಡ ಯೋಜನೆ ಘೋಷಿಸಿದ ಸರ್ಕಾರ

ಅಂಗನವಾಡಿ ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ: ಹೆಬ್ಬಾಳ್ಕರ್

ದೇಶವನ್ನು ಕಟ್ಟಿದ್ದು ಕಾಂಗ್ರೆಸ್. ಇಂದು ವಿಶ್ವದ ಹಿರಿಯಣ್ಣ ಆಗುವ ಮಟ್ಟಕ್ಕೆ ಭಾರತ ಬೆಳೆದಿದೆ. ಪಕ್ಷದ ನೀತಿ, ಸಿದ್ದಾಂತ, ಯೋಜನೆಗಳೇ ದೇಶದ ಅಭಿವೃದ್ಧಿಗೆ ಪೂರಕ. ಕಾಂಗ್ರೆಸ್ ಎಂದರೆ ಜನರ ಪರ, ಮಹಿಳೆಯರ ಪರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Bengaluru news: ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

Death by Flex: ಜರ್ಮನಿಯಲ್ಲಿ ಅಧ್ಯಯನ ಮಾಡುತ್ತಿದ್ದು, ಸ್ನೇಹಿತನ ಮದುವೆಯ ಸಂಭ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನ ನೆಲಮಂಗಲಕ್ಕೆ ಬಂದಿದ್ದ ಯುವಕಮನ್ನು ಅಕ್ರಮ ಫ್ಲೆಕ್ಸ್‌ ಬಲಿ ಪಡೆದುಕೊಂಡಿದೆ. ನಿಯಮ ಮೀರಿ ರಾರಾಜಿಸುತ್ತಿರುವ ಫ್ಲೆಕ್ಸ್-‌ ಬ್ಯಾನರ್‌ಗಳ ತೆರವಿಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

Murder Case: ಹಣ ದುಪ್ಪಟ್ಟು ಆಮಿಷಕ್ಕೆ ಬಲಿಯಾದ ಇಂಜಿನಿಯರ್‌, ʼದೃಶ್ಯʼ ಸಿನಿಮಾ ಮಾದರಿಯಲ್ಲಿ ಹತ್ಯೆ!

ಹಣ ದುಪ್ಪಟ್ಟು ಆಮಿಷಕ್ಕೆ ಇಂಜಿನಿಯರ್‌ ಬಲಿ, ʼದೃಶ್ಯʼ ಸಿನಿಮಾದಂತೆ ಹತ್ಯೆ!

Bengaluru crime news: ಆಂಧ್ರಪ್ರದೇಶದ ಕುಪ್ಪಂ ಮೂಲದ ಶ್ರೀನಾಥ್ (30) ಕೊಲೆಯಾದ ವ್ಯಕ್ತಿ. ಹಣ ಡಬಲ್ ಮಾಡಿಕೊಡುವುದಾಗಿ ಹಂತಕ ಪ್ರಭಾಕರ್, ಶ್ರೀನಾಥ್‌ಗೆ ಹೇಳಿದ್ದಾನೆ. ಈ ವೇಳೆ ಸೋದರ ಸಂಬಂಧಿತರಿಂದ ಶ್ರೀನಾಥ್ 40,00,000 ಪಡೆದುಕೊಂಡು ಪ್ರಭಾಕರ್‌ಗೆ ಹಣ ಕೊಟ್ಟಿದ್ದಾನೆ. ಇತ್ತೀಚಿಗೆ ಹಣ ವಾಪಸ್ ಕೊಡುವಂತೆ ಶ್ರೀನಾಥ್ ಪ್ರಭಾಕರ್‌ಗೆ ಕೇಳಿದ್ದಾನೆ. ಆಗ ಶ್ರೀನಾಥ್ ಕೊಲೆಗೆ ಮಾಸ್ಟರ್ ಪ್ಲಾನ್ ಮಾಡಿದ್ದಾನೆ.

Bengaluru Crime news: ಜನ್ಮದಿನವೇ ಕೇಕ್‌ ಆಸೆ ತೋರಿಸಿ ಬಾಲಕಿಯ ಮೇಲೆರಗಿದ ಪಾಪಿ; ಅತ್ಯಾಚಾರಿಯ ಬಂಧನ

ಜನ್ಮದಿನವೇ ಕೇಕ್‌ ಆಸೆ ತೋರಿಸಿ ಬಾಲಕಿಯ ಮೇಲೆರಗಿದ ಪಾಪಿ; ಅತ್ಯಾಚಾರಿಯ ಬಂಧನ

15 ವರ್ಷದ ಬಾಲಕಿಯನ್ನು ಜನ್ಮದಿನದ ಕೇಕ್‌ ಕತ್ತರಿಸುವುದಾಗಿ ಪುಸಲಾಯಿಸಿ ರಾಶಿ ಲೇಔಟ್‌ಗೆ ಕರೆದೊಯ್ದು ಅತ್ಯಾಚಾರ (Physical Abuse) ಎಸಗಿದ್ದಾನೆ. ಅತ್ಯಾಚಾರ ಎಸಗಿದ ಬಳಿಕ ಕಾಮುಕ ಎಸ್ಕೇಪ್ ಆಗಿದ್ದಾನೆ. 9ನೇ ತರಗತಿ ವಿದ್ಯಾರ್ಥಿನಿ ಹೆತ್ತವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಸಂಬಂಧ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

Saalumarada Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಇಂದು ಬೆಂಗಳೂರಿನಲ್ಲಿ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಇಂದು ಬೆಂಗಳೂರಿನಲ್ಲಿ

ಇಂದು (ನ.15) ಮಧ್ಯಾಹ್ನ 12 ಗಂಟೆಗೆ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಆ ಮೂಲಕ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂಬ ವದಂತಿಗೆ ತೆರೆ ಎಳೆಯಲಾಗಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆಯೇ ಹೊರತು ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಲಾಗಿದೆ ಎಂಬುದು ಸುಳ್ಳು ಎಂದು ಸರ್ಕಾರ ತಿಳಿಸಿದೆ.

Anekal News: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ ಕಾಮುಕ ರೇಡಿಯಾಲಜಿಸ್ಟ್; ಕೇಸ್‌ ದಾಖಲು

ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ

Physical abuse on women in Anekal: ಮಹಿಳೆಯೊಬ್ಬರು ಹೊಟ್ಟೆ ನೋವು ಎಂದು ಪತಿಯೊಂದಿಗೆ ಸ್ಕ್ಯಾನಿಂಗ್‌ ಸೆಂಟರ್‌ಗೆ ತೆರಳಿದ್ದರು. ಆರೋಪಿ ಸ್ಕ್ಯಾನಿಂಗ್‌ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಧಮ್ಕಿ ಹಾಕಿದ್ದಾನೆ.

Mamatheya Thottilu: ಪರಿತ್ಯಕ್ತ ಮಗುವಿಗಾಗಿ ಬೆಂಗಳೂರಿನಲ್ಲಿ ಮಮತೆಯ ತೊಟ್ಟಿಲು

ಮಮತೆಯ ತೊಟ್ಟಿಲು ಮಗುವಿನ ಸುರಕ್ಷತೆಯ ತೊಟ್ಟಿಲು

ಹೆತ್ತವರಿಗೆ ಬೇಡದ ಕೂಸು ಕಸದ ಬುಟ್ಟಿ, ಚರಂಡಿ, ರಸ್ತೆ ಬದಿ, ಗುಡ್ಡಗಾಡು ಪ್ರದೇಶಗಳಲ್ಲಿ ಕಂಡು ಬರುತ್ತಿದೆ. ಇದರಿಂದ ಅವುಗಳ ಜೀವಕ್ಕೆ ಅಪಾಯ ಬಂದೊದಗುತ್ತವೆ. ಯಾರೋ ಮಾಡಿದ ತಪ್ಪಿಗೆ ಇನ್ಯಾರಿಗೋ ಶಿಕ್ಷೆ ಎನ್ನುವಂತೆ ಇಂತಹ ಘಟನೆಗಳು ಕೆಲವೊಮ್ಮೆ ಮನ ಕಲಕುವಂತೆ ಮಾಡುತ್ತದೆ. ಇಂತಹ ಘಟನೆಗಳನ್ನು ತಪ್ಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಇದೀಗ ಮಮತೆಯ ತೊಟ್ಟಿಲನ್ನು ಪ್ರಾರಂಭಿಸಲಾಗಿದ್ದು, ಇದು ನವಜಾತ ಶಿಶುಗಳಿಗೆ ಸುರಕ್ಷತೆಯ ತೊಟ್ಟಿಲಾಗಲಿದೆ.

Bengaluru Central Jail: ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ಕುಣಿತ, ಮೋಜು, ಮಸ್ತಿ: ಇನ್ನೊಂದು ವಿಡಿಯೋ ವೈರಲ್‌

ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ಮೋಜು, ಮಸ್ತಿ: ಇನ್ನೊಂದು ವಿಡಿಯೋ ವೈರಲ್‌

Parappana Agrahara Jail: ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಅಲರ್ಟ್​ ಆಗಿರುವ ಜೈಲಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್​ಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಒಟ್ಟು 100ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿ ಕೈದಿಗಳ ಬ್ಯಾರಕ್​ಗಳ ಪರಿಶೀಲನೆ ಮಾಡಿದ್ದು, ಪರಿಶೀಲನೆ ವೇಳೆ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಬ್ಯಾರಕ್​ಗಳಲ್ಲಿ ಸಿಬ್ಬಂದಿ ಪರಿಶೀಲನೆ ವೇಳೆ ಯಾವುದೇ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದಾಳಿಯ ಮಾಹಿತಿ ಸೋರಿಕೆ ಆಗಿರುವ ಅನುಮಾನ ವ್ಯಕ್ತವಾಗಿದೆ.

Police Firing: ಆನೇಕಲ್‌ನಲ್ಲಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಆನೇಕಲ್‌ನಲ್ಲಿ ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರ ಫೈರಿಂಗ್

Bengaluru Crime News: ಕಿಡ್ನಾಪ್​ ಮತ್ತು ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್​ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್​​ ಕಾನ್‌​ಸ್ಟೇಬಲ್​​ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ.

Murder Case: ಆನೇಕಲ್‌ನಲ್ಲಿ ಪ್ರಾವಿಜನ್‌ ಸ್ಟೋರ್‌ ಮಾಲಿಕನ ಕತ್ತು ಕೊಯ್ದು ಹತ್ಯೆ

ಆನೇಕಲ್‌ನಲ್ಲಿ ಪ್ರಾವಿಜನ್‌ ಸ್ಟೋರ್‌ ಮಾಲಿಕನ ಕತ್ತು ಕೊಯ್ದು ಹತ್ಯೆ

Bengaluru Crime news: ಕೊಲೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್​ ಈ ಬಗ್ಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು 112ಗೆ ಫೋನ್​ ಬಂದಿತ್ತು. ಕೂಡಲೇ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಇದನ್ನು ನೋಡಿದ್ದಾರೆ. ಕೂಡಲೇ ಆರೋಪಿಯನ್ನು ಹಿಡಿಯಲು ಮುಂದಾಗಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟುವಾಗ ಅವರ ಮೇಲೂ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎಂದರು.

Road Accident: ಕೆಟ್ಟು ನಿಂತ ಕಾರಿಗೆ ಬಂದು ಬಡಿದ ಕ್ಯಾಂಟರ್‌, ಡ್ಯಾನ್ಸರ್‌ ಸುಧೀಂದ್ರ ಸಾವು

ಕೆಟ್ಟು ನಿಂತ ಕಾರಿಗೆ ಬಂದು ಬಡಿದ ಕ್ಯಾಂಟರ್‌, ಡ್ಯಾನ್ಸರ್‌ ಸುಧೀಂದ್ರ ಸಾವು

Dancer Sudhindra: ರಸ್ತೆಯ ಮಧ್ಯೆ ಡ್ಯಾನ್ಸರ್ ಸುಧೀಂದ್ರ ಅವರ ಕಾರು ಕೆಟ್ಟು ನಿಂತಿತ್ತು. ಕಾರು ಪರಿಶೀಲನೆಯ ವೇಳೆ ವೇಗವಾಗಿ ಬಂದಂತಹ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಕ್ಯಾಂಟರ್ ಗುದ್ದಿದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಡ್ಯಾನ್ಸರ್‌ ಸುಧೀಂದ್ರ ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತು ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Nelamangala News: ನೆಲಮಂಗಲದಲ್ಲಿ ಭೋವಿ ಸಮುದಾಯದ ರೈತರ ಕೆಲಸ ಕಸಿದು 'ವರ್ಕ್ ಆರ್ಡರ್' ರದ್ದು; ಉಗ್ರ ಹೋರಾಟದ ಎಚ್ಚರಿಕೆ

ನೆಲಮಂಗಲದಲ್ಲಿ ಭೋವಿ ಸಮಾಜ ರೈತರ ಕೆಲಸ ಕಸಿದು 'ವರ್ಕ್ ಆರ್ಡರ್' ರದ್ದು

Work order canceled: ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಗೊಟ್ಟಿಗೆರೆ ಗ್ರಾಮದಲ್ಲಿ ಭೂಮಿ ಕಳೆದುಕೊಂಡ ಪರಿಶಿಷ್ಟ ಜಾತಿಯ ಹತ್ತಾರು ರೈತರು ತೀವ್ರ ಅನ್ಯಾಯಕ್ಕೆ ಒಳಗಾಗಿದ್ದಾರೆ. ಖಾಸಗಿ ಸಂಸ್ಥೆಯಾದ ಮಾರ್ಕ್ ಏಷ್ಯಾ, ರೈತರಿಂದ ಭೂಮಿ ಪಡೆದು, ಪ್ರತಿಯಾಗಿ ನೀಡಿದ್ದ ಕೆಲಸವನ್ನು ಏಕಾಏಕಿ ರದ್ದುಗೊಳಿಸಿ, ಪ್ರಭಾವಿ ವ್ಯಕ್ತಿಗಳಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

Loading...