ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಂಗಳೂರು ಗ್ರಾಮಾಂತರ

BESCOM: ಪೂರ್ವ ಮುಂಗಾರು ಮಳೆ ಅಬ್ಬರ; ವಿದ್ಯುತ್ ಸುರಕ್ಷತಾ ಕ್ರಮ ಅನುಸರಿಸಲು ಬೆಸ್ಕಾಂ ಮನವಿ

ಭಾರಿ ಮಳೆ; ವಿದ್ಯುತ್ ಸುರಕ್ಷತಾ ಕ್ರಮ ಅನುಸರಿಸಲು ಬೆಸ್ಕಾಂ ಮನವಿ

BESCOM: ಗಾಳಿ-ಮಳೆ ಸಂದರ್ಭದಲ್ಲಿ ಕರೆಗಳ ಒತ್ತಡದಿಂದ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಕೆಲವೊಮ್ಮೆ ಲಭ್ಯವಾಗುವುದಿಲ್ಲ, ಹೀಗಾಗಿ ಬೆಸ್ಕಾಂ ವಾಟ್ಸ್ ಆಪ್ ಸಂಖ್ಯೆಗಳಿಗೆ ವಿದ್ಯುತ್ ಸಮಸ್ಯೆ ಕುರಿತ ಸಂದೇಶಗಳನ್ನು ಕಳುಹಿಸಲು ಬೆಸ್ಕಾಂ ಮನವಿ ಮಾಡಿದೆ. ಈ ಕುರಿತ ವಿವರ ಇಲ್ಲಿದೆ.

Bengaluru AQI : ತಂಪಾಯ್ತು ಸಿಟಿ, ವೃದ್ಧಿಯಾಯ್ತು ಗಾಳಿಯ ಗುಣಮಟ್ಟ: ಎಲ್ಲಾ ತುಂತುರು ಮಳೆಯ ಪರಿಣಾಮ

ತಂಪಾಯ್ತು ಸಿಟಿ, ವೃದ್ಧಿಯಾಯ್ತು ಗಾಳಿಯ ಗುಣಮಟ್ಟ: ಎಲ್ಲಾ ಮಳೆಯ ಪರಿಣಾಮ

ಇಂದಿನ ವಾಯು ಗುಣಮಟ್ಟ ಎಲ್ಲಾ ವಯಸ್ಸಿನವರಿಗೂ ಸುರಕ್ಷಿತವಾಗಿದೆ. ದೈಹಿಕ ವ್ಯಾಯಾಮ ಮತ್ತು ಹೊರಾಂಗಣ ಚಟುವಟಿಕೆಗಳಿಗೆ ಇದು ಸೂಕ್ತ ಸಮಯ. ಪೀಣ್ಯ ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ಮಾಲಿನ್ಯವಿದ್ದರೂ ಅದು ‘ತೃಪ್ತಿದಾಯಕ’ ಮಟ್ಟದಲ್ಲಿಯೇ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವಾಯು ಮಾಲಿನ್ಯದ ಮಟ್ಟ ಪ್ರಸ್ತುತ ನಿಯಂತ್ರಣದಲ್ಲಿದೆ.

BAMUL Milk incentive: ಯುಗಾದಿ ಹಬ್ಬಕ್ಕೆ ಬಮುಲ್‌ನಿಂದ ಹೈನುಗಾರರಿಗೆ ಭರ್ಜರಿ ಗಿಫ್ಟ್; ಪ್ರತಿ ಲೀಟರ್‌ ಹಾಲಿಗೆ 1 ರೂ. ಪ್ರೋತ್ಸಾಹ ಧನ, ಗುತ್ತಿಗೆ ಕಾರ್ಮಿಕರಿಗೆ 5 ಸಾವಿರ ಬೋನಸ್‌

ಹಾಲು ಉತ್ಪಾದಕರಿಗೆ ಭರ್ಜರಿ ಗಿಫ್ಟ್; ಲೀಟರ್‌ಗೆ 1 ರೂ. ಪ್ರೋತ್ಸಾಹ ಧನ

ಕಳೆದ ವರ್ಷ 14.50 ಕೋಟಿ ನಷ್ಟದಲ್ಲಿದ್ದ ಬಮುಲ್‌ಗೆ ಈ ವರ್ಷ 60 ಕೋಟಿ ರೂ. ಲಾಭವಾಗಿದೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲು ಬಮುಲ್‌ ಮುಂದಾಗಿದ್ದು, ಮಾ.31 ಅಥವಾ ಏ.10ರ ಒಳಗೆ ರೈತರ ಖಾತೆಗೆ ಹಣ ಬರಲಿದೆ. ಬಮುಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ತೀರ್ಮಾನ ಮಾಡಲಾಗಿದೆ.

ಆಟವಾಡುವ ವೇಳೆ ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಘಟನೆ ನಡೆದಿದೆ. ಕಾರು ತೊಳೆಯಲು ಸಂಪಿನ ಕ್ಯಾಪ್‌ ತೆರೆದು ಮನೆಯೊಳಗೆ ತಂದೆ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು ಸಂಪ್‌ಗೆ ಬಿದ್ದು ಮೃತ ಪಟ್ಟಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Voters List: ಬೆಂಗಳೂರಿನ ಮತದಾರರ ಪಟ್ಟಿ ಪ್ರಕಟ: ನಿಮ್ಮ ಹೆಸರು, ವಾರ್ಡ್‌ ಹುಡುಕಿ, ಆಕ್ಷೇಪ ಸಲ್ಲಿಕೆಗೆ ಮಾ.16ರವರೆಗೆ ಅವಕಾಶ

ಬೆಂಗಳೂರಿನ ಮತದಾರರ ಪಟ್ಟಿ ಪ್ರಕಟ: ಆಕ್ಷೇಪ ಸಲ್ಲಿಕೆಗೆ ಮಾ.16ರವರೆಗೆ ಅವಕಾಶ

ಮತದಾರರು ತಮ್ಮ ಹೆಸರು ಅಥವಾ ಮತದಾರರ ಚೀಟಿಯ ಎಪಿಕ್‌ ಸಂಖ್ಯೆಯೊಂದಿಗೆ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬಹುದು. ಹೆಸರು ಬಿಟ್ಟು ಹೋಗಿದ್ದರೆ, ಸೇರ್ಪಡೆ ಆಗಿರದೇ ಇದ್ದರೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ. ಮತದಾರರ ಪಟ್ಟಿಯಲ್ಲಿ ಲೋಪದೋಷಗಳಾಗಿದ್ದರೆ, ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವಾದರೆ, ಮತ್ತೊಂದು ವಾರ್ಡ್‌ ವ್ಯಾಪ್ತಿಯಲ್ಲಿ ಹೆಸರು ಪ್ರಕಟವಾಗಿದ್ದರೆ, ಮಾರ್ಚ್ 16ರೊಳಗೆ ಆಕ್ಷೇಪಣೆ ಸಲ್ಲಿಸಬೇಕು.

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಡಿ.ಕೆ. ಶಿವಕುಮಾರ್‌ರ ಕನಸು: ಡಿ.ಕೆ. ಸುರೇಶ್

ಬೆಂ.ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಡಿಕೆಶಿ ಕನಸು: ಡಿ.ಕೆ. ಸುರೇಶ್

DK Suresh: ನಾವು ಸುಳ್ಳು ಹೇಳಿ ಕೆಲಸ ಮಾಡುವವರಲ್ಲ‌‌. ನಿಮ್ಮ ಬಳಿ ಅತ್ತು ಕರೆದು ನಾಟಕ ಮಾಡುವವರಲ್ಲ. ನಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುವವನು, ಕೊಟ್ಟ ಭರವಸೆ ಈಡೇರುವ ತನಕ ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದ್ದಾರೆ.

Body Found: ಬೆಂಗಳೂರಿನ ಮನೆಯೊಳಗೆ ವ್ಯಕ್ತಿಯ ಕೊಳೆತ ಶವ ಪತ್ತೆ; ಹತ್ಯೆ ಎಸಗಿ ಮನೆಗೆ ಲಾಕ್‌ ಮಾಡಿದ ದುಷ್ಟರು

ಬೆಂಗಳೂರಿನ ಮನೆಯೊಳಗೆ ಕೊಳೆತ ಶವ ಪತ್ತೆ; ಹತ್ಯೆಯೆಸಗಿ ಮನೆಗೆ ಲಾಕ್‌

ನಾಗರಾಜ್ ಎಂಬವರಿಗೆ ಸೇರಿದ ಮನೆಯಲ್ಲಿ ಶವ ಪತ್ತೆಯಾಗಿದೆ. 4 ದಿನದ ಹಿಂದೆ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಮನೆಗೆ ಬೀಗ ಹಾಕಲಾಗಿತ್ತು ಹಾಗೂ ಸುತ್ತಮುತ್ತ ಕೆಟ್ಟ ವಾಸನೆ ಬರುತ್ತಿತ್ತು. ಮನೆ ಮಾಲೀಕ ನಾಗರಾಜ್‌ಗೆ ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಬಂದಿದ್ದು, ಈ ವೇಳೆ ಗುರುತು ಸಿಗದ ಬೆತ್ತಲೆ ಕೊಳೆತ ಮೃತದೇಹ ಕಂಡು ಶಾಕ್ ಆಗಿದ್ದಾರೆ.

HD Kumaraswamy: ಉಪನಗರ ವರ್ತುಲ ರಸ್ತೆ ಭೂ ಪರಿಹಾರ ನೀಡಿಕೆ ಸದ್ಯದಲ್ಲೇ: ಸುಳಿವು ನೀಡಿದ ಸಚಿವ ಎಚ್‌ಡಿಕೆ

ಉಪನಗರ ವರ್ತುಲ ರಸ್ತೆ ಭೂ ಪರಿಹಾರ ನೀಡಿಕೆ ಸದ್ಯದಲ್ಲೇ: ಎಚ್‌ಡಿಕೆ ಸುಳಿವು

ಯೋಜನೆಯು ಅನುಮೋದನೆಗಾಗಿ ಪರಿಗಣನೆಯಲ್ಲಿದೆ. ಯೋಜನೆಯ ಹೂಡಿಕೆಗೆ ಅನುಮೋದನೆ ನೀಡಿದ ನಂತರವೇ ಪರಿಹಾರ ವಿತರಣೆಯನ್ನು ಪುನರಾರಂಭಿಸಬಹುದು ಎಂದು ಹೆದ್ದಾರಿ ಸಚಿವರು ಪತ್ರ ಮುಖೇನ ನನಗೆ ತಿಳಿಸಿದ್ದಾರೆ. ಹೀಗಾಗಿ ಭೂಮಿ ಕಳೆದುಕೊಂಡಿರುವ ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Road Accident: ಬುಲೆಟ್‌ ಬೈಕ್‌ನಲ್ಲಿ ತ್ರಿಬಲ್‌ ರೈಡ್‌, ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಬುಲೆಟ್‌ ಬೈಕ್‌ನಲ್ಲಿ ತ್ರಿಬಲ್‌ ರೈಡ್‌, ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಮಂಗಳವಾರ (ಫೆ.24) ರಾತ್ರಿ 1 ಗಂಟೆ ಸುಮಾರಿಗೆ ಬುಲೆಟ್ ಬೈಕ್‌ನಲ್ಲಿ ಯುವಕರು ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಹೊರಟಿದ್ದರು. ಈ ವೇಳೆ ಮರಕ್ಕೆ ಡಿಕ್ಕಿಯಾಗಿ ಬೈಕ್ ಪಲ್ಟಿಯಾಗಿದೆ. ಪರಿಣಾಮ ಬುಲೆಟ್ ಬೈಕ್ ಓಡಿಸುತ್ತಿದ್ದ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವಕ ಯಶವಂತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

Bengaluru news: ಸಿಲಿಕಾನ್‌ ಸಿಟಿಗೆ ಬರುವ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

ಸಿಲಿಕಾನ್‌ ಸಿಟಿಗೆ ಬರುವ ತರಕಾರಿಯಲ್ಲಿ ವಿಷಕಾರಿ ಅಂಶ ಪತ್ತೆ

ಬೆಂಗಳೂರಿನಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ಸೀಸದ (ಲೆಡ್) ಪ್ರಮಾಣ ಹೆಚ್ಚಿದೆ ಎಂದು ತಿಳಿಸಿದ್ದು, ಈ ತರಕಾರಿ ತಿಂದರೆ ಕಿಡ್ನಿ, ಮೆದುಳಿಗೆ ಸಮಸ್ಯೆಯಾಗಬಹುದು. ಸಂಗ್ರಹಿಸಿದ 72 ಮಾದರಿಗಳ ಪೈಕಿ 10 ಮಾದರಿಗಳಲ್ಲಿ 8 ಕೀಟನಾಶಕ ಅವಶೇಷಗಳು ಪತ್ತೆಯಾಗಿದೆ. ನಗರದ ವಿವಿಧ ಮಾರುಕಟ್ಟೆಗಳಲ್ಲಿ ಕಂಡುಬರುವ ತರಕಾರಿಗಳಲ್ಲಿ ಸೀಸದ ಪ್ರಮಾಣ ಮಿತಿಗಿಂತ ಹೆಚ್ಚು ಮಟ್ಟದಲ್ಲಿದೆ.

ನೆಲಮಂಗಲದ ವಿಪ್ರೋ ಎಂಟರ್‌ಪ್ರೈಸಸ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ನೆಲಮಂಗಲದ ವಿಪ್ರೋ ಎಂಟರ್‌ಪ್ರೈಸಸ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ

ಮಾದನಾಯಕನಹಳ್ಳಿ ಪೊಲೀಸ್ ವ್ಯಾಪ್ತಿಯಲ್ಲಿ ಅಗ್ನಿ ಅವಘಡ ನಡೆದಿದೆ. ಬೆಂಕಿಗಾಹುತಿಯಾದ ಗೋದಾಮಿನಲ್ಲಿ ಸಾಬೂನು, ಸೋಪು ಪುಡಿ ಸೇರಿ ವಿವಿಧ ರೀತಿಯ ವಸ್ತುಗಳನ್ನಿಟ್ಟಿಡಲಾಗಿತ್ತು. ಪ್ರಾಥಮಿಕ ವರದಿಗಳ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Woman Murder: ಪತಿಯೆದುರೇ ವೃದ್ಧೆಯನ್ನು ಕೊಂದು ಚಿನ್ನ ದೋಚಿದವನು ಪಕ್ಕದ ಮನೆಯವನೇ!

ಪತಿಯೆದುರೇ ವೃದ್ಧೆಯನ್ನು ಕೊಂದು ಚಿನ್ನ ದೋಚಿದವನು ಪಕ್ಕದ ಮನೆಯವನೇ!

ಕರಣ ದಾಖಲಿಸಿಕೊಂಡ ನೆಲಮಂಗಲ ಟೌನ್ ಪೊಲೀಸರು ಸಿಸಿಟಿವಿಯ ದೃಶ್ಯ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಮೈತುಂಬ ಸಾಲವಿದ್ದು, ಸಾಲ ತೀರಿಸೋಕೆ ಚಿನ್ನಾಭರಣ ದೋಚುವ ಸ್ಕೆಚ್ ಹಾಕಿದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಕೊಲೆಯಾದ ಆರು ಗಂಟೆಯಲ್ಲಿ ನೆಲಮಂಗಲ ಟೌನ್ ಪೊಲೀಸರು ಪ್ರಕರಣ ಬೇಧಿಸಿದ್ದಾರೆ.

Murder case: ವ್ಹೀಲ್‌ ಚೇರ್‌ನಲ್ಲಿದ್ದ ಪತಿಯ ಎದುರೇ ಪತ್ನಿಯನ್ನು ಕೊಂದು ಚಿನ್ನಾಭರಣ ದೋಚಿ ಪರಾರಿ

ವ್ಹೀಲ್‌ ಚೇರ್‌ನಲ್ಲಿದ್ದ ಪತಿಯ ಎದುರೇ ಪತ್ನಿಯ ಕೊಂದು ಚಿನ್ನಾಭರಣ ದರೋಡೆ

ಮಾಹಿತಿಗಳ ಪ್ರಕಾರ ಮಧ್ಯಾಹ್ನ 4 ಗಂಟೆ ಸರಿಸುಮಾರಿಗೆ ಪೇಟೆ ಬೀದಿಯಿಂದ ಮನೆಗೆ ಬಂದಿದ್ದ ಶೋಭಾರನ್ನು ಆರೋಪಿ ಹಿಂಬಾಲಿಸಿದ್ದಾನೆ. ಇವರ ಮೈಮೇಲಿದ್ದ ಸುಮಾರು 100 ಗ್ರಾಂಗಳಿಗೂ ಹೆಚ್ಚು ತೂಕದ ಒಡವೆ ಆರೋಪಿ ಕಣ್ಣಿಗೆ ಬಿದ್ದಿದೆ. ಹೀಗಾಗಿ ನೀರು ಕೇಳುವ ನೆಪದಲ್ಲಿ ಮನೆಗೆ ಬಂದ ದುಷ್ಕರ್ಮಿ, ತನ್ನ ಬಳಿಯಿದ್ದ ಚಾಕುವಿನಿಂದ ಶೋಭಾರ ಕತ್ತು ಸೀಳಿದ್ದಾನೆ.

Self Harming: ಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿನಿ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಕಂಪ್ಯೂಟರ್‌ ಸೈನ್ಸ್‌ ವಿದ್ಯಾರ್ಥಿನಿ 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇವನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ (Gitam University) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ ಪದವಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ಶೋಧಿಸಲಾಗುತ್ತಿದೆ.

Murder Case: ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರರು

ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರರು

ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ ಮತ್ತು ಮಕ್ಕಳ ನಡುವೆ ತೀವ್ರ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರರು ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

Karnataka Weather: ಶಿವರಾತ್ರಿ ಬಳಿಕ ಇಳಿಯುತ್ತಿರುವ ಚಳಿ; ರಾಜ್ಯದಲ್ಲಿ ಒಣ ಹವೆ

ಶಿವರಾತ್ರಿ ಬಳಿಕ ಇಳಿಯುತ್ತಿರುವ ಚಳಿ; ರಾಜ್ಯದಲ್ಲಿ ಒಣ ಹವೆ

ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 31°C ಇರಲಿದೆ.

Valentine Day: ನಂದಿ ಬೆಟ್ಟಕ್ಕೆ ಇಂದು ಪ್ರೇಮಿಗಳಿಗೆ ಪ್ರವೇಶವಿಲ್ಲ

ನಂದಿ ಬೆಟ್ಟಕ್ಕೆ ಇಂದು ಪ್ರೇಮಿಗಳಿಗೆ ಪ್ರವೇಶವಿಲ್ಲ

ಫೆಬ್ರವರಿ 14ರ ಪ್ರೇಮಿಗಳ ದಿನ ನಂದಿಬೆಟ್ಟಕ್ಕೆ ಹೆಚ್ಚಿನ ಪ್ರವಾಸಿಗರು ಬರುತ್ತಾರೆ. ಇದೇ ವೇಳೆ ಕೆಲವು ಅಹಿತಕರ ಘಟನೆಗಳು ನಡೆದ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಕ್ರಮ ತೆಗೆದುಕೊಂಡಿದೆ. ಆದೇಶದ ಪ್ರಕಾರ, ಶನಿವಾರ ನಂದಿ ಬೆಟ್ಟಕ್ಕೆ ಯಾವುದೇ ಖಾಸಗಿ ವಾಹನಗಳು ಅಥವಾ ಪ್ರವಾಸಿಗರನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.

Hoskote Accident: 7 ಮಂದಿಯನ್ನು ಬಲಿ ಪಡೆದ ಭೀಕರ ಅಪಘಾತ ಸಂಭವಿಸಿದ್ದು ಹೇಗೆ? ಸತ್ತವರು ಯಾರು?

7 ಮಂದಿಯನ್ನು ಬಲಿ ಪಡೆದ ಭೀಕರ ಅಪಘಾತ ಸಂಭವಿಸಿದ್ದು ಹೇಗೆ? ಸತ್ತವರು ಯಾರು?

ಹೊಸಕೋಟೆಯಿಂದ ದೇವನಹಳ್ಳಿ ಕಡೆಗೆ ಅತೀವೇಗವಾಗಿ ಚಲಿಸುತ್ತಿದ್ದ ಎಕ್ಸ್‌ಯುವಿ 700 ಕಾರು ಮೊದಲು ಕಾರಿನಿಂದ ಮುಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆ ಮೇಲೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ನಂತರ ನಿಯಂತ್ರಣ ತಪ್ಪಿದ ಕಾರು ಎದುರಿನಿಂದ ಬರುತ್ತಿದ್ದ ಕ್ಯಾಂಟರ್ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

Road Accident: ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ, 7 ಮಂದಿ ಸಾವು

ಹೊಸಕೋಟೆಯಲ್ಲಿ ಭೀಕರ ರಸ್ತೆ ಅಪಘಾತ, 7 ಮಂದಿ ಸಾವು

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಅಪಘಾತವಾಗಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್ ನೇಮಕ

ಬ್ರಾಹ್ಮಣ ಮಹಾಸಂಘದ ಬೆಂ. ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್

Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಸಂಘಟನೆಯ ವಿಸ್ತರಣೆ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ ಎಂದು ಸಂಘ ತಿಳಿಸಿದೆ.

Bengaluru Crime News: ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಇದೇ ವೇಳೆ ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಹಿಟ್‌ & ರನ್‌ಗೆ ವ್ಯಕ್ತಿ ಬಲಿ, 11 ಗಂಟೆ ರಸ್ತೆಯಲ್ಲೇ ಬಿದ್ದಿತ್ತು ಶವ

ಹಿಟ್‌ & ರನ್‌ಗೆ ವ್ಯಕ್ತಿ ಬಲಿ, 11 ಗಂಟೆ ರಸ್ತೆಯಲ್ಲೇ ಬಿದ್ದಿತ್ತು ಶವ

ಬೆಂಗಳೂರು – ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹಳೆಯ ಚಂದಾಪುರ ಸಮೀಪ ಬುಧವಾರ ಬೆಳಗ್ಗೆ 9:00ರ ಸಮಯದಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಅದಾದ ನಂತರ ವ್ಯಕ್ತಿ ಅಲ್ಲಿಯೇ ಕೆಳಗೆ ಬಿದ್ದು, ಸಾವನ್ನಪ್ಪಿದ್ದರು. ರಾತ್ರಿ 9:00ರ ವರೆಗೂ ಅವರ ಶವ ಅಲ್ಲೇ ಬಿದ್ದಿತ್ತು ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಎಂದರೆ 3 ಸಿ: ಕೈ ಪಕ್ಷಕ್ಕೆ ಹೊಸ ವ್ಯಾಖ್ಯಾನ ನೀಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್ ಕಾಲದಲ್ಲಿ ಎಷ್ಟು ಸಾರಿ ಹೆಸರು ಬದಲಿಸಿಲ್ಲ? ಛಲವಾದಿ ಪ್ರಶ್ನೆ

Chalavadi Narayanaswamy: ಕಾಂಗ್ರೆಸ್ ಎಂದರೆ 3 ಸಿ. ಅಂದರೆ, ಕರಪ್ಶನ್ ಅಂದರೆ ಭ್ರಷ್ಟಾಚಾರ. ಕಾಂಗ್ರೆಸ್‌ ನಾಯಕರು ಭ್ರಷ್ಟಾಚಾರದಲ್ಲಿ ನಿಪುಣರು. ಮೋದಿ ಅವರ ಸರ್ಕಾರ 12 ವರ್ಷ ಪೂರೈಸುತ್ತಿದ್ದು, ಈ 12 ವರ್ಷಗಳಲ್ಲಿ ಭ್ರಷ್ಟಾಚಾರದ ಆರೋಪಗಳಿಲ್ಲ. ಕಾಂಗ್ರೆಸ್ಸೆಂದರೆ ಕಮಿಷನ್; ಟೆಂಡರ್ ಹಾಕು ಕಮಿಷನ್ ಹೊಡಿ ಎಂಬ ನೀತಿ. ಅದಾದ ಮೇಲೆ ಕನ್ನಿಂಗ್, ಕಮ್ಯುನಲ್, ಕಾಸ್ಟಿಸಂ, ಓಲೈಕೆಗಳು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Bus fire accident: ಮತ್ತೊಂದು ಖಾಸಗಿ ಬಸ್‌ ಧಗಧಗ, ನೆಲಮಂಗಲದಲ್ಲಿ 40 ಪ್ರಯಾಣಿಕರಿದ್ದ ಬಸ್‌ ಬೆಂಕಿಗಾಹುತಿ

ನೆಲಮಂಗಲದಲ್ಲಿ 40 ಪ್ರಯಾಣಿಕರಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ

ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ಬಸ್‌ನಲ್ಲಿ 40 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ.

Loading...