ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ನಗರ

ಹೊಟೇಲ್ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಹೊರೆ; ತಿಂಡಿ ಬೆಲೆ ಹೆಚ್ಚಳ

ಬೆಂಗಳೂರಿನಲ್ಲಿ ಹೊಟೇಲ್ ತಿಂಡಿ ತಿನಿಸು ಬೆಲೆ ಏರಿಕೆ

ಊಟ, ತಿಂಡಿಗಾಗಿ ಹೊಟೇಲ್ ಅನ್ನೇ ನೆಚ್ಚಿಕೊಂಡಿದ್ದೀರಾ ? ಹಾಗಿದ್ದರೆ ಬೆಂಗಳೂರು ಹೊಟೇಲ್ ಗಳು ನಿಮಗೆ ಶಾಕ್ ಕೊಡುವುದು ಗ್ಯಾರಂಟಿ. ಬಹುತೇಕ ಎಲ್ಲಾ ಹೊಟೇಲ್ ಗಳಲ್ಲೂ ಚಹಾ, ಕಾಫಿ, ತಿಂಡಿ, ಊಟದ ಬೆಲೆಯನ್ನು ಹೆಚ್ಚಿಸಲಾಗಿದೆ. ಕನಿಷ್ಠ 5 ರೂ. ನಿಂದ 20 ರೂ. ವರೆಗೂ ದರ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರ ಜೇಬಿಗೆ ಕತ್ತರಿ ಹಾಕಲಿದೆ.

BJP MLA DN Jeevaraj: ಅಂಚೆ ಮತ ತಿರುಚಿದ ಆರೋಪ; ಶೃಂಗೇರಿ ಬಿಜೆಪಿ ಶಾಸಕ ಡಿ.ಎನ್‌. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಶೃಂಗೇರಿ ಶಾಸಕ ಡಿ.ಎನ್‌. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

2023ರಲ್ಲಿ ಮತ ತಿರುಚಿರುವುದು ನಡೆದಿದೆ ಎನ್ನುವುದಾದರೆ ಆ ವಿಚಾರವನ್ನು ಮರು ಎಣಿಕೆಗೆ ಆದೇಶಿಸಿದ ನ್ಯಾಯಾಲಯದ ಗಮನಕ್ಕೆ ತಂದು, ನಿರ್ದೇಶನ ಪಡೆದು ಮುಂದುವರಿಯಬೇಕಿತ್ತು. ದೂರಿನಲ್ಲಿ ಹಾಲಿ ಚುನಾವಣಾಧಿಕಾರಿ ಗೌರವ್‌ ಶೆಟ್ಟಿಯನ್ನು ಏಕೆ ಆರೋಪಿ ಮಾಡಲಾಗಿಲ್ಲ ಎಂದು ಪ್ರಶ್ನಿಸಿರುವ ಕೋರ್ಟ್‌, ಶಾಸಕ ಜೀವರಾಜ್‌ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.

ಶೃಂಗೇರಿ ಕ್ಷೇತ್ರದ ಮರುಎಣಿಕೆ: ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ ಎಂದ ಡಿ.ಕೆ. ಶಿವಕುಮಾರ್

ಶೃಂಗೇರಿ ಮರುಎಣಿಕೆ: ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ: ಡಿಕೆಶಿ

DK Shivakumar: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಶೃಂಗೇರಿಯಲ್ಲಿ ಬಿಜೆಪಿಯು ವೋಟ್ ಚೋರಿ ಮಾಡಿರುವುದು ಸ್ಪಷ್ಟ: ಸಿಎಂ ಆರೋಪ

ಶೃಂಗೇರಿಯಲ್ಲಿ ಬಿಜೆಪಿಯು ವೋಟ್ ಚೋರಿ ಮಾಡಿರುವುದು ಸ್ಪಷ್ಟ: ಸಿಎಂ

Sringeri Postal Ballot Recount: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ರಾಜೇಗೌಡರಿಗೆ 255 ಮತಗಳು ಅನರ್ಹ ಆಗಿವೆ. ಜೀವರಾಜ್ ಅವರಿಗೆ ಮರು ಎಣಿಕೆಯಲ್ಲಿ 690 ಮತಗಳು ಲಭಿಸಿವೆ. ಇದರಿಂದ ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ, ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ಇದು ವೋಟ್ ಡಕಾಯಿತಿಯಾಗಿದೆ ಎಂದು ಆರೋಪಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮೇ 11ರಿಂದ ಪರಮ್ ಹಿಸ್ಟರಿ ಸೆಂಟರ್‌ನಿಂದ 'ಅನ್ವೇಷಣ 2026' ಬೇಸಿಗೆ ಶಿಬಿರ

ಬೆಂಗಳೂರಿನಲ್ಲಿ ಮೇ 11ರಿಂದ 'ಅನ್ವೇಷಣ 2026' ಬೇಸಿಗೆ ಶಿಬಿರ

Bengaluru News: ಪರಮ್ ಹಿಸ್ಟರಿ ಸೆಂಟರ್‌ನಿಂದ ಮೇ 11 ರಿಂದ ಮೇ 17ರವರೆಗೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್‌ನಲ್ಲಿರುವ 'ಯುವಪಥ' ದಲ್ಲಿ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ವಿಭಿನ್ನ ಮತ್ತು ಆಕರ್ಷಕ ಕಾರ್ಯಚಟುವಟಿಕೆ, ರೋಚಕ ಕಥೆಗಳು ಹಾಗೂ ನೈಜ ಅನುಭವದ ಮಾಧ್ಯಮಗಳ ಮೂಲಕ ಮಕ್ಕಳನ್ನು ನಮ್ಮ ಇತಿಹಾಸದ ಕಾಲಗರ್ಭಕ್ಕೆ ಕರೆದೊಯ್ಯುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ.

Bengaluru Airport: ಬೆಂಗಳೂರು ವಿಮಾನ ನಿಲ್ದಾಣ ಈಗ ಮತ್ತಷ್ಟು ಸ್ಮಾರ್ಟ್‌; ಅಪಘಾತ ತಡೆಗೆ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ ಜಾರಿ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ ಸುರಕ್ಷತಾ ವ್ಯವಸ್ಥೆ

ವಿಮಾನಗಳು ಓಡಾಡುವ ಜಾಗದಲ್ಲಿಭದ್ರತೆ ಹೆಚ್ಚಿಸಲು 'ಸ್ಮಾರ್ಟ್ ಏರ್‌ಸೈಡ್ ಸೇಫ್ಟಿ ಸಿಸ್ಟಂʼ ಎಂಬ ಹೊಸ ತಂತ್ರಜ್ಞಾನವನ್ನು ಬೆಂಗಳೂರು ವಿಮಾನ ನಿಲ್ದಾಣವು ಜಾರಿಗೆ ತಂದಿದೆ. ಹೊಸ ವ್ಯವಸ್ಥೆಯು ಸ್ಮಾರ್ಟ್ ಕ್ಯಾಮೆರಾಗಳು ಮತ್ತು ಎಐ ತಂತ್ರಜ್ಞಾನವನ್ನು ಒಳಗೊಂಡಿದ್ದು, ಇದು ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಗುರುತಿಸಿ, ಏನಾದರೂ ಅಪಾಯ ಎದುರಾದರೆ ತಕ್ಷಣವೇ ಎಚ್ಚರಿಕೆ ನೀಡುತ್ತದೆ.

Biocon successor: ಬಯೋಕಾನ್ ಮುಂದಿನ ಉತ್ತರಾಧಿಕಾರಿ ಘೋಷಿಸಿದ ಕಿರಣ್ ಮಜುಂದಾರ್ ಶಾ; ಯಾರು ಈ ಕ್ಲೇರ್ ಮಜುಂದಾರ್?

ಬಯೋಕಾನ್ ಮುಂದಿನ ಉತ್ತರಾಧಿಕಾರಿ ಘೋಷಿಸಿದ ಕಿರಣ್ ಮಜುಂದಾರ್ ಶಾ

Who is Claire Mazumdar?: ಬಯೋಕಾನ್‌ ಕಂಪನಿಯು ಮುಂದಿನ ಹಂತದ ಪ್ರಗತಿಗಾಗಿ ಸುಧಾರಿತ ಜೈವಿಕ ತಂತ್ರಜ್ಞಾನ ಮತ್ತು ಕಾರ್ಯಾಚರಣೆಗಳಲ್ಲಿ ಕೃತಕ ಬುದ್ಧಿಮತ್ತೆಯ ಸಂಯೋಜನೆಯ ಮೇಲೆ ಗಮನ ಕೇಂದ್ರೀಕರಿಸುತ್ತಿರುವ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಆಗಲಿರುವುದು ಗಮನಾರ್ಹವಾಗಿದೆ.

ಮೇ.9, 10 ರಂದು ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ

ಮೇ.9, 10 ರಂದು ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ

ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬನಶಂಕರಿ ಎರಡನೇ ಹಂತ, ಬಸವನಗುಡಿ ಯಲಿರುವ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ) "ಗಾಯತ್ರಿ ಭವನದಲ್ಲಿ ನಡೆಯಲಿದೆ ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಧು-ವರಾನ್ವೇಷಣಾ ಸಮಾವೇಶ ಆಯೋಜಿಸಲಾಗಿದೆ.

Bangalore News: ನಟ ವಿಜಯ ದಳಪತಿ ನಾಯಕತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ರಾಜಕೀಯ ಕ್ರಾಂತಿ: ಎಸ್.ಸಂಗಮೇಶ್

ನಟ ವಿಜಯ ನಾಯಕತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ರಾಜಕೀಯ ಕ್ರಾಂತಿ

ಸಾಮಾಜಿಕ ನ್ಯಾಯದ ಇತಿಹಾಸವನ್ನು ಮರುಬರೆಯುವ ಸಮಯ ಬಂದಿದೆ. ಮಾದಿಗರ ಹೆಮ್ಮೆಯ ಮಗ ತಮಿಳುನಾಡಿನ ಮುಖ್ಯಮಂತ್ರಿಯಾಗುವುದು ಕೇವಲ ಕನಸು ಅಲ್ಲ – ಅದು ನಮ್ಮ ಗೌರವ, ನಮ್ಮ ಹಕ್ಕು, ವಿಜಯ ಹೋರಾಟಕ್ಕೆ ಸಿಕ್ಕ ಜಯ!” ಮುಂದಿನ ಬೆಂಗಳೂರು ಜಿಬಿಎ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಟಿವಿಕೆ ಪಕ್ಷ ಪ್ರವೇಶಿಸುವುದು ಖಚಿತವಾಗಿದ್ದು, ಸಂಘಟಿತ ಯುವಶಕ್ತಿ ಮತ್ತು ಹಿಂದುಳಿದ ವರ್ಗಗಳ ಭಾರೀ ಬೆಂಬಲದ ಹಿನ್ನೆಲೆ ಟಿವಿಕೆ ಅಭ್ಯರ್ಥಿಗಳು ಗಮನಾರ್ಹ ಸಾಧನೆ ಮಾಡಲಿದ್ದಾರೆ

ಮುಸ್ಲಿಮರ ಅಸಮಾಧಾನದ ನಡುವೆ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್‌ ಗೆದ್ದಿದ್ದೇಗೆ?; ಬಾಗಲಕೋಟೆಯಲ್ಲಿ ಮೇಟಿ ಗೆಲುವಿಗೆ ಪ್ರಮುಖ ಕಾರಣಗಳು

ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು

Karnataka By-Election Results 2026: ಪಂಚ ರಾಜ್ಯ ಚುನಾವಣೆ ಜತೆಗೆ ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಸೋಮವಾರ ಹೊರಬಿದ್ದಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವಿಗೆ ಕಾರಣವಾದ ಪ್ರಮುಖ ಅಂಶಗಳು ಇಲ್ಲಿವೆ.

ಬಾಗಲಕೋಟೆ, ದಾವಣಗೆರೆ ಕ್ಷೇತ್ರ ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸಿಎಂ ಅಭಿನಂದನೆ

ಉಪ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಸಿಎಂ ಅಭಿನಂದನೆ

Bagalkot By-Election Results 2026: ವಿರೋಧಪಕ್ಷಗಳ ಅಪಪ್ರಚಾರ ಮತ್ತು ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟು ಮತಚಲಾಯಿಸಿದ್ದಾರೆ. ರಾಜ್ಯದ ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ಶೃಂಗೇರಿ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್

ಶೃಂಗೇರಿ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್

DK Shivakumar: ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ ಎಂದು ಆರೋಪಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ ಎಂದು ಹೇಳಿದ್ದಾರೆ.

Election results 2026: ಕರ್ನಾಟಕದಲ್ಲಿ ಗ್ಯಾರಂಟಿಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ: ಡಿಕೆಶಿ

DK Shivakumar: ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು ಎಂದು ಅವರು ಹೇಳಿದ್ದಾರೆ.

ಮೇ.8 ರಿಂದ ಅಮೆಜಾನ್ ಇಂಡಿಯಾದ ಗ್ರೇಟ್ ಸಮ್ಮರ್ ಸೇಲ್ 2026 ನೊಂದಿಗೆ ಕ್ಯುರೇಟೆಡ್ AI ಫೈಂಡ್ ಗಳಿಂದ ಮಾಡಿ ಶಾಪಿಂಗ್

ಮೇ.8 ರಿಂದ ಅಮೆಜಾನ್ ಇಂಡಿಯಾದ ಗ್ರೇಟ್ ಸಮ್ಮರ್ ಸೇಲ್

ವಿಭಾಗಗಳಾದ್ಯಂತ ತಡೆಯಲಾಗದ ಡೀಲ್ ಗಳ ಹೊರತಾಗಿ, ಗ್ರಾಹಕರು ಗ್ರೇಟ್ ಸಮ್ಮರ್ ಸೇಲ್ 2026 ನ ಸಮಯದಲ್ಲಿ ಹಲವಾರು ಕೈಗೆಟುಕುವ ಆಯ್ಕೆಗಳನ್ನು ಎದುರು ನೋಡಬಹುದು, ಇದರಲ್ಲಿ ಆಯ್ದ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಗಳಲ್ಲಿ ನೋ-ಕಾಸ್ಟ್ ಇಎಂಐ, ತ್ವರಿತ ಬ್ಯಾಂಕ್ ರಿಯಾಯಿತಿಗಳು, ವಿನಿಮಯ ಕೊಡುಗೆಗಳು ಮತ್ತು ಅಮೆಜಾನ್ ಪೇ ಪ್ರಯೋಜನಗಳು ಸೇರಿವೆ, ಇದು ಬೇಸಿಗೆ ಅಗತ್ಯ ವಸ್ತುಗಳು ಮತ್ತು ಪ್ರೀಮಿಯಂ ಖರೀದಿ ಗಳನ್ನು ಹೆಚ್ಚು ಪಡೆಯುವ ಹಾಗೆ ಮಾಡುತ್ತದೆ

Karnataka By-Election Results 2026: ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು, ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿ ಮುನ್ನಡೆ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಮುನ್ನಡೆ

Karnataka Bypoll Results: ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಸ್ಪರ್ಧಿಸಿದ್ದರೆ, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ ದಾಸಕರಿಯಪ್ಪ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಮರ್ಥ ಶಾಮನೂರು ಸ್ಪರ್ಧಿಸಿದ್ದಾರೆ. ಇವರ ರಾಜಕೀಯ ಭವಿಷ್ಯ ಇಂದು ಹೊರಬೀಳಲಿದೆ.

ದಾವಣಗೆರೆಯಲ್ಲಿ ಅಲ್ಪ ಸಂಖ್ಯಾತರೇ "ಕೈ" ಕೊಟ್ಟರಾ? ಐದನೇ ಸುತ್ತಿನಲ್ಲಿಯೂ ಸಮರ್ಥ್‌ಗೆ ಹಿನ್ನಡೆ; ಬಾಗಲಕೋಟೆಯಲ್ಲಿ ಮೇಟಿ ಮುನ್ನಡೆ

ಐದನೇ ಸುತ್ತಿನಲ್ಲಿಯೂ ಸಮರ್ಥ್‌ಗೆ ಹಿನ್ನಡೆ; ಬಾಗಲಕೋಟೆಯಲ್ಲಿ ಮೇಟಿ ಮುನ್ನಡೆ

Davanagere Byelection: ರಾಜ್ಯದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬೈ ಎಲೆಕ್ಷನ್‌ ನಡೆದಿದ್ದು, ಇಂದು ಫಲಿತಾಂಶ ಹೊರ ಬೀಳಲಿದೆ. ದಾವಣಗೆರೆ ಕ್ಷೇತ್ರದ ಫಲಿತಾಂಶ ಇದೀಗ ಭಾರೀ ಕುತೂಹಲ ಮೂಡಿಸಿದೆ. ದಾವಣಗೆರೆಯಲ್ಲಿ ಸಮರ್ಥ ಐದನೇ ಸುತ್ತನಲ್ಲಿಯೂ ಹಿನ್ನಡೆಯಲ್ಲಿದ್ದಾರೆ.

Elections 2026 Result: ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ; ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರು ಹಿನ್ನಡೆ!

ಬಾಗಲಕೋಟೆಯಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್‌

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಸಮರದ ಫಲಿತಾಂಶ ಹೊರಬರಲಿದ್ದು, ಹಿರಿಯ ಕಾಂಗ್ರೆಸ್ ಶಾಸಕರಾದ ಎಚ್ ವೈ ಮೇಟಿ (ಬಾಗಲಕೋಟೆ) ಮತ್ತು ಶಾಮನೂರು ಶಿವಶಂಕರಪ್ಪ (ದಾವಣಗೆರೆ ದಕ್ಷಿಣ) ಅವರ ನಿಧನದಿಂದಾಗಿ ಉಪಚುನಾವಣೆ ಘೋಷಣೆಯಾಗಿತ್ತು.

ರೈತ ಮಕ್ಕಳ 50% ಮೀಸಲಾತಿ ಸದುಪಯೋಗಪಡಿಸಿಕೊಳ್ಳಲು ಮೇ. 4 ರಂದು ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ಕಾರ್ಯಾಗಾರ

ಮೇ. 4 ರಂದು ಕೃಷಿ ಪ್ರಾಯೋಗಿಕ ಪರೀಕ್ಷೆಗಾಗಿ ತರಬೇತಿ ಕಾರ್ಯಾಗಾರ

ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯ ಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಲಭ್ಯವಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳಲು ಜಿಕೆವಿಕೆ ಬಳಿ ಇರುವ ಅರಬಿಂದೋ ಶಾಲೆಯಲ್ಲಿ ವಿಕ್ಸಿತ್47 ಅಕಾಡೆಮಿ ಯಿಂದ ಕೃಷಿ ಪ್ರಾಯೋಗಿಕ ಪರೀಕ್ಷೆಗೆ ಸನ್ನದ್ಧಗೊಳ್ಳಲು ಮೇ. 4 ರಂದು ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ.

Dr. C.N. Ashwathnarayana Column: ಬಿಎಸ್‌ʼವೈ ಜನಪರ ಕಾಯಕ, ದಣಿವರಿಯದ ನಾಯಕ

ಬಿಎಸ್‌ʼವೈ ಜನಪರ ಕಾಯಕ, ದಣಿವರಿಯದ ನಾಯಕ

ರಾಜಕೀಯ ಕುಟುಂಬದ ಹಿನ್ನೆಲೆಯಿಂದ ಯಡಿಯೂರಪ್ಪ ಬಂದವರಲ್ಲ. ಉನ್ನತ ಶಿಕ್ಷಣಕ್ಕೂ ತಮ್ಮನ್ನು ತಾವು ತೆರೆದುಕೊಂಡವರಲ್ಲ. ಆದರೂ ಅವರ ಆಡಳಿತ ಶೈಲಿ ಬೇರೆ ಎಲ್ಲ ಮಂತ್ರಿ, ಮುಖ್ಯಮಂತ್ರಿಗಳಿಗೂ ಮಿಗಿಲು. ಕಾರಣ ಜನರ ಬದುಕು ಹಸನಾಗಿಸಲು ಬಲು ಸುದೀರ್ಘ ಕಾಲ ಅವರ ತುಡಿತ ಮತ್ತು ದುಡಿತದ ಅನುಭವ ಮಾತ್ರ ಕಾರಣ ಎಂದರೆ ಅತಿಶಯೋಕ್ತಿ ಅಲ್ಲವೇ ಅಲ್ಲ.

ಶೃಂಗೇರಿ ಅಂಚೆ ಮತ ಮರು ಎಣಿಕೆ; ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ ಎಂದ ಸಚಿವ ಪ್ರಲ್ಹಾದ್‌ ಜೋಶಿ

ಶೃಂಗೇರಿ ಅಂಚೆ ಮತ ಮರು ಎಣಿಕೆ; ಬಿಜೆಪಿ ಅಭ್ಯರ್ಥಿ ಗೆಲುವು ಸ್ಪಷ್ಟ: ಜೋಶಿ

ಅಂಚೆ ಮತಗಳ ಮರು ಎಣಿಕೆಯಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ಚುನಾವಣಾಧಿಕಾರಿಯೇ ಘೋಷಿಸಬೇಕೆಂದು ನ್ಯಾಯಾಲಯ ಸ್ಪಷ್ಟ ಆದೇಶ ನೀಡಿದೆ. ಅದರಂತೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಎಣಿಕೆಯಲ್ಲಿ ಚುನಾವಣಾಧಿಕಾರಿ ಹೈಕೋರ್ಟ್ ಆದೇಶವನ್ನು ಪಾಲಿಸಬೇಕೆಂದು ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ. ‌

Karnataka Bypoll Results: ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ; ಯಾರಿಗೆ ಒಲಿಯಲಿದೆ ಗೆಲುವು?

ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ನಾಳೆ

ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ಉಪಚುನಾವಣೆಯ ಮತ ಎಣಿಕೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಡಿದೆ. ಬೈ ಎಲೆಕ್ಷನ್‌ನಲ್ಲಿ ಯಾರಿಗೆ ಗೆಲುವು ಒಲಿಯಲಿದೆ ಎಂಬ ಕುತೂಹಲ ರಾಜ್ಯ ರಾಜಕೀಯ ವಲಯದಲ್ಲಿ ಮೂಡಿದೆ.

Tungabhadra Dam Crest Gates: ಮೇ 15ರಂದು ತುಂಗಭದ್ರಾ ಅಣೆಕಟ್ಟು ಹೊಸ ಗೇಟ್‌ಗಳ ಉದ್ಘಾಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇ 15ರಂದು ತುಂಗಭದ್ರಾ ಅಣೆಕಟ್ಟು ಹೊಸ ಗೇಟ್‌ಗಳ ಉದ್ಘಾಟನೆ: ಡಿಕೆಶಿ

ತುಂಗಭದ್ರಾ ಅಣೆಕಟ್ಟು ಆಡಳಿತ ವಿಚಾರದಲ್ಲಿ ಸ್ವಾತಂತ್ರ್ಯ ನೀಡಿದ್ದು, ಯಾವುದೇ ಹಸ್ತಕ್ಷೇಪ ಆಗದಂತೆ ನೋಡಿಕೊಂಡಿದ್ದೇವೆ. 33 ಗೇಟ್ ಅಳವಡಿಕೆ ದೇಶಕ್ಕೆ ಮಾದರಿಯಾಗಿದೆ. ಅಣೆಕಟ್ಟು ವಿಚಾರವಾಗಿ ಟೀಕೆ ಮಾಡಿದವರಿಗೆ ಇಂದು ಉತ್ತರ ಸಿಕ್ಕಿದೆ. ನಾವು ಕೈಗೊಂಡ ತೀರ್ಮಾನಕ್ಕೆ ಫಲ ಸಿಕ್ಕಿದೆ. ನಾಲ್ಕು ಜಿಲ್ಲೆಗಳ ರೈತರನ್ನು ಕರೆಸಿ ಕಾರ್ಯಕ್ರಮ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Sringeri Postal Ballot recount: ಶೃಂಗೇರಿ ಕಾಂಗ್ರೆಸ್‌ ಅಭ್ಯರ್ಥಿಯ ಅಂಚೆ ಮತ ತಿದ್ದಿ ಷಡ್ಯಂತ್ರ; ಕಾನೂನು ಹೋರಾಟ ಮಾಡ್ತೇವೆ ಎಂದ ಡಿಕೆಶಿ

ಶೃಂಗೇರಿ ಕಾಂಗ್ರೆಸ್‌ ಅಭ್ಯರ್ಥಿಯ ಅಂಚೆ ಮತ ತಿದ್ದಿ ಷಡ್ಯಂತ್ರ: ಡಿಕೆಶಿ

ಮಾಜಿ ಶಾಸಕ ಜೀವರಾಜ್ ಅವರು ಅಧಿಕಾರಿಗಳ ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳಲ್ಲಿ ಅಕ್ರಮ ಮಾಡಿದ್ದಾರೆ ಎಂದು ವರದಿಯಾಗಿದೆ. ಜಯನಗರ ಕ್ಷೇತ್ರದಲ್ಲೂ ನಮಗೆ ಇದೇ ರೀತಿ ಅನ್ಯಾಯ ಮಾಡಲಾಗಿದೆ. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ನಗುವಿನ ಕ್ಷಣವಾಗಿ ಬದಲಾದ ಭಾವನಾತ್ಮಕ ವಿದಾಯ: ಬೆಂಗಳೂರು ಉದ್ಯೋಗಿಯ ರಾಜೀನಾಮೆ ಮೇಲ್‌ ಕಂಡು ನಕ್ಕ ಸಹೋದ್ಯೋಗಿ

ಮೀಮ್ ಶೇರ್ ಮಾಡಿ ಕೆಲಸಕ್ಕೆ ವಿದಾಯ ಹೇಳಿದ ಬೆಂಗಳೂರಿನ ಯುವಕ

Viral Video: ಬೆಂಗಳೂರಿನ ಉದ್ಯೋಗಿಯೊಬ್ಬರು ಅಸಾಮಾನ್ಯ ಭಾವನಾತ್ಮಕ ವಿದಾಯ ಸಹೋದ್ಯೋಗಿಗಳನ್ನು ನಗುವಿನ ಅಲೆಯಲ್ಲಿ ತೇಲುವಂತೆ ಮಾಡಿದೆ. ರಾಜೀನಾಮೆ ಪತ್ರವನ್ನು ಅವರು ವಿಭಿನ್ನವಾಗಿ ಮೇಲ್ ಮಾಡಿ ವಿದಾಯ ಹೇಳಿದ್ದಾರೆ. ತಮಾಷೆಯ ಮೀಮ್‌ ಕಳುಹಿಸುವ ಮೂಲಕ ಅವರು ಸಹೋದ್ಯೋಗಿಗಳಿಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Loading...