ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ನಗರ

Pro-tem Speaker: ವಿಧಾನಸಭೆ ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ

ವಿಧಾನಸಭೆ ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ನೇಮಕ

ಕರ್ನಾಟಕ ವಿಧಾನಸಭೆ ನೂತನ ಸಭಾಧ್ಯಕ್ಷರನ್ನು ಸಂವಿಧಾನಬದ್ಧವಾಗಿ ಚುನಾಯಿಸುವವರೆಗೂ ಟಿ.ಬಿ. ಜಯಚಂದ್ರ ಅವರು ಸ್ಪೀಕರ್ ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲಿದ್ದಾರೆ. ಹಂಗಾಮಿ ಅಧ್ಯಕ್ಷರಾಗಿ ಟಿ.ಬಿ. ಜಯಚಂದ್ರ ಅವರನ್ನು ನೇಮಿಸಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯದ ಸರ್ಕಾರದ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ಡೆಲಿವರಿ ಬಾಯ್‌ಯ ಮತ್ತೊಂದು ಅಸಭ್ಯ ವರ್ತನೆ; ಕುಡಿತದ ಮತ್ತಿನಲ್ಲಿ ಮಹಿಳೆಯ ಮನೆಗೆ ನುಗ್ಗಲು ಯತ್ನ: ಭಯಾನಕ ವಿಡಿಯೊ ವೈರಲ್‌

ಕುಡಿದ ಮತ್ತಿನಲ್ಲಿ ಮಹಿಳೆಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್

Viral Video: ಮಹಿಳೆಯರ ಸುರಕ್ಷತೆಯನ್ನು ಪ್ರಶ್ನಿಸುವ ಮಾಡುವ ಮತ್ತೊಂದು ಅಘಾತಕಾರಿ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಮನೆಗೆ ಬಂದ ಉಬರ್ ಪಾರ್ಸಲ್ ಡೆಲಿವರಿ ಬಾಯ್ ಕುಡಿತದ ಮತ್ತಿನಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾನೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಚಾರ ಶೇರ್ ಮಾಡಿದ ಮಹಿಳೆ ಆತನ ನಡವಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟರಿಗೆ ಬಹುಮಾನ, ಪೇಮೆಂಟ್ ಕೊಟ್ಟವರಿಗೆ ಸಚಿವ ಸ್ಥಾನ: ಡಿಕೆಶಿ ಸಂಪುಟ ವಿಸ್ತರಣೆ ಬಗ್ಗೆ ಬಿಜೆಪಿ ಟೀಕೆ

ಕಾಂಗ್ರೆಸ್‌ನಲ್ಲಿ ಪೇಮೆಂಟ್ ಕೊಟ್ಟವರಿಗೆ ಸಚಿವ ಸ್ಥಾನ: ಬಿಜೆಪಿ ಟೀಕೆ

Karnataka cabinet expansion: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಬಿಜೆಪಿ ಟೀಕಿಸಿದೆ. ಲೂಟಿಕೋರ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟರಿಗೆ ಮಾತ್ರ ಆದ್ಯತೆ, ಮಾನ್ಯತೆ. ಭ್ರಷ್ಟ ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಪೇಮೆಂಟ್‌ ಕೊಟ್ರೆ ಸಾಕು ಸಚಿವರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆಗುತ್ತೆ ಎಂದು ಬಿಜೆಪಿ ಆರೋಪಿಸಿದೆ.

Karnataka Cabinet Expansion: ಡಿಕೆಶಿ ಸಂಪುಟದ ಸಚಿವರಾಗಿ ಅಜಯ್ ಧರಮ್ ಸಿಂಗ್, ಬಾಲಕೃಷ್ಣ ಸೇರಿ 19 ಮಂದಿ ಪ್ರಮಾಣವಚನ ಸ್ವೀಕಾರ; ಇಲ್ಲಿದೆ ನೂತನ ಸಚಿವರ ಪಟ್ಟಿ

ಸಚಿವರಾಗಿ ಅಜಯ್‌ ಸಿಂಗ್‌, ಬಾಲಕೃಷ್ಣ ಸೇರಿ 19 ಶಾಸಕರ ಪ್ರಮಾಣವಚನ

ಬೆಂಗಳೂರಿನ ರಾಜಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ 19 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಮತ್ತೊಂದೆಡೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಹಲವು ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಆಗಸ್ಟ್‌ 8ರಂದು ವಿಪ್ರ ಉದ್ಯಮಿಗಳ ವಿಬಿಎಫ್‌ ಸಮ್ಮೇಳನ

ಬೆಂಗಳೂರಿನಲ್ಲಿ ಆಗಸ್ಟ್‌ 8ಕ್ಕೆ ವಿಪ್ರ ಉದ್ಯಮಿಗಳ ವಿಬಿಎಫ್‌ ಸಮ್ಮೇಳನ

VBF Conference: ವಿಪ್ರ ಬಿಸಿನೆಸ್‌ ಫೋರಮ್‌ ಆಶ್ರಯದಲ್ಲಿ ವಿಪ್ರ ಉದ್ಯಮಿಗಳ ಸಮ್ಮೇಳನವು ಬೆಂಗಳೂರಿನಲ್ಲಿ ಆಗಸ್ಟ್‌ 8ರಂದು ಶನಿವಾರ ನಡೆಯಲಿದೆ. ನಗರದ ಕೆಜಿ ರಸ್ತೆಯಲ್ಲಿರುವ ಎಫ್‌ಕೆಸಿಸಿಐ ಸಂಸ್ಥೆಯ ಸರ್‌ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಈ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿದೆ.

ಸಚಿವ ಸ್ಥಾನ ಸಿಗದ ಹಿನ್ನೆಲೆ ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ಸಲ್ಲಿಕೆ, ನಾಳೆಯೇ ರಾಜೀನಾಮೆ ಕೊಡುವೆ ಎಂದ ಬೇಳೂರು ಗೋಪಾಲಕೃಷ್ಣ!

ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ಸಲ್ಲಿಕೆ

Karnataka Cabinet expansion: ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯ ಗೌಡ ಪಾಟೀಲ್ ಅವರು ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕ ಸ್ಥಾನಕ್ಕೇ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿನ ಈ ಬೆಳವಣಿಗೆಗಳು ಕೈ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿವೆ.

ಬೆಂಗಳೂರಿಗರೇ ಗಮನಿಸಿ; ಲೋಕಭವನದಲ್ಲಿ ಸಚಿವರ ಪ್ರಮಾಣವಚನ, ಹಲವೆಡೆ ಸಂಚಾರ ನಿರ್ಬಂಧ

ಲೋಕಭವನದಲ್ಲಿ ಸಚಿವರ ಪ್ರಮಾಣವಚನ, ಹಲವೆಡೆ ಸಂಚಾರ ನಿರ್ಬಂಧ

Bengaluru Traffic Police : ಬಾರೀ ಕುತೂಹಲ ಮೂಡಿಸಿದ್ದ ಸಿಎಂ ಡಿಕೆ ಶಿವಕುಮಾರ್‌ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸಚಿವರ ಪಟ್ಟಿ ಹೊರ ಬಿದ್ದಿದೆ. ಲೋಕಭವನದಲ್ಲಿ ಇಂದು ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ.

ಡಿ ಕೆ ಶಿವಕುಮಾರ್‌ ಸಂಪುಟದ ಸಚಿವರ ಲಿಸ್ಟ್‌ ಫೈನಲ್‌; ಯಾರಿಗೆಲ್ಲ ಇದೆ ಸ್ಥಾನ?

ಡಿ ಕೆ ಶಿವಕುಮಾರ್‌ ಸಂಪುಟದ ಸಚಿವರ ಲಿಸ್ಟ್‌ ಫೈನಲ್!

ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕ್ಕೆ ತೆರೆ ಬಿದ್ದಿದ್ದು, ನೂತನ ಸಚಿವರ ಪಟ್ಟಿ ಇದೀಗ ಹೊರ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ. ಇಂದು (ಆ.3-ಸೋಮವಾರ) ಸಂಜೆಯೇ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವೂ ನಡೆಯಲಿದೆ ಎಂದು ಮೂಲಗಳು ಖಚಿತಪಡಿಸಿವೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ 79 ನೇ ಜನ್ಮ ದಿನದ ಸಂಭ್ರಮ; ಗಣ್ಯರಿಂದ ಶುಭಾಶಯ

ಮಾಜಿ ಸಿಎಂ ಸಿದ್ದರಾಮಯ್ಯಗೆ 79 ನೇ ಜನ್ಮ ದಿನದ ಸಂಭ್ರಮ

Siddaramaiah Birthday: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು 79 ನೇ ಜನ್ಮದಿನದ ಸಂಭ್ರಮ. ಸಿದ್ದರಾಮಯ್ಯ ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ರಾಜಕೀಯ ನಾಯಕರು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಆಗಸ್ಟ್ 3 ರಂದು 1948 ರಂದು ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿ ಗ್ರಾಮದಲ್ಲಿ ಜನಿಸಿದ ಸಿದ್ದರಾಮಯ್ಯ ಶಾರದಾ ವಿಲಾಸ ಕಾನೂನು ಕಾಲೇಜಿನಿಂದ 1972 ರಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡಿದ್ದಾರೆ.

ʼಮೇಕೆದಾಟಿʼದರೆ ಸಂಕಷ್ಟಕ್ಕೆ ಪರಿಹಾರ

ʼಮೇಕೆದಾಟಿʼದರೆ ಸಂಕಷ್ಟಕ್ಕೆ ಪರಿಹಾರ

ರಾಜಕಾರಣ ಏನೇ ಇದ್ದರೂ ನಾವು ಅದನ್ನು ಬಿಟ್ಟು ಎಲ್ಲ ಸಂದರ್ಭದಲ್ಲೂ ರಾಜ್ಯದ ರೈತರ ಹಿತಕ್ಕಾಗಿ ಒಗ್ಗಟ್ಟಿನಿಂದ ಹೋರಾಟ ಮಾಡಿಕೊಂಡು ಬಂದಿದ್ದೇವೆ. ಎಲ್ಲರೂ ಹೊರಗೆ ಏನೇ ಹೇಳಿಕೆ ನೀಡಿದರೂ ರಾಜ್ಯದ ವಿಚಾರದಲ್ಲಿ ನೀವೆ ಸಹಕಾರ ನೀಡುತ್ತಾ ಬಂದಿದ್ದೀರಿ ಅದಕ್ಕೆ ನಾನು ಆಭಾರಿ ಎಂದರು. ಉತ್ತಮ ಮಳೆ, ನೀರು ಹರಿಸಲು ಸಮಸ್ಯೆಯಿಲ್ಲ: ವರುಣನ ಕೃಪೆಯಿಂದ ಕೊಡಗಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.

ʼನಾಳೆ ಬಾʼ ಸಂಪುಟ ವಿಸ್ತರಣೆ ಇಂದು ?

ʼನಾಳೆ ಬಾʼ ಸಂಪುಟ ವಿಸ್ತರಣೆ ಇಂದು ?

ಒಂದು ವೇಳೆ ಭಾನುವಾರ ತಡರಾತ್ರಿ ಸಭೆ ನಡೆದರೆ, ಸೋಮವಾರ ಬೆಳಗ್ಗೆ 10.30ರ ಹೊತ್ತಿಗೆ ಪಟ್ಟಿ ಯನ್ನು ರವಾನಿಸುವ ಸಂದೇಶವನ್ನು ಪಕ್ಷದ ಹೈಕಮಾಂಡ್ ನೀಡಿದೆ. ಭಾನುವಾರ ತಡರಾತ್ರಿ ಪಟ್ಟಿ ಅಂತಿಮ ಗೊಂಡರೂ, ಸೋಮವಾರ ಬೆಳಗ್ಗೆ ರಾಜ್ಯ ನಾಯಕರಿಗೆ ಪಟ್ಟಿಯನ್ನು ರವಾನಿಸು ವುದರೊಂದಿಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ

Special Photo Gallery: ವಿಶ್ವವಾಣಿ ಪುಸ್ತಕ ಬಿಡುಗಡೆ ಸಮಾರಂಭ; ಅನಂತನಾಗ್ ಜತೆ ಅಭಿಮಾನಿಗಳು!

ಅನಂತನಾಗ್ ಜತೆ ಅಭಿಮಾನಿಗಳು; ಇಲ್ಲಿದೆ ನೋಡಿ ಫೋಟೊ ಗ್ಯಾಲರಿ

Actor Anant Nag: ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್‌‌ಕೆಸಿಸಿಐ ಸಭಾಂಗಣದಲ್ಲಿ 9 ಪುಸ್ತಕಗಳ ಬಿಡುಗಡೆ ಸಮಾರಂಭ ನೆರವೇರಿತು. ವಿಶ್ವವಾಣಿʼ ಮತ್ತು ʼಪ್ರವಾಸಿ ಪ್ರಪಂಚʼ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್, ಖ್ಯಾತ ವಾಗ್ಮಿ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ , ಹಿರಿಯ ನಟ ಅನಂತನಾಗ್ ಸೇರಿ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ಅಭಿಮಾನಿಗಳು ಅನಂತನಾಗ್‌ ಜತೆ ಫೋಟೊ ಕ್ಲಿಕ್ಕಿಸಿಕೊಂಡರು. ಇಲ್ಲಿದೆ ವಿಶೇಷ ಫೋಟೊ ಗ್ಯಾಲರಿ.

Bangalore News: ಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರದಲ್ಲಿ ಅದ್ದೂರಿ ಕಾರ್ಯಕ್ರಮ: ಡಾ.ಟಿ.ಎಸ್.ಸತ್ಯವತಿ ಅವರಿಗೆ ಸನ್ಮಾನ ಹಾಗೂ ಕೈಲಾಸ ಮಾನಸ ಸರೋವರ ದರ್ಶನ

ಶ್ರೀ ಪ್ರಸನ್ನ ವೀರಾಂಜನೇಯ ಯೋಗ ಕೇಂದ್ರದಲ್ಲಿ ಅದ್ದೂರಿ ಕಾರ್ಯಕ್ರಮ

ಕಾರ್ಯಕ್ರಮದ ಆರಂಭದಲ್ಲಿ "ದೀಪಂ ಜ್ಯೋತಿ ಪರಬ್ರಹ್ಮ" ಎಂಬ ಮಂಗಳಗೀತೆಯ ನಡುವೆ ಸಂಗೀತ ವಿದ್ವಾಂಸರಾದ ಡಾ.ಟಿ.ಎಸ್.ಸತ್ಯವತಿ ಹಾಗೂ ಹಿರಿಯ ಆಡಳಿತಾಧಿಕಾರಿ ಶ್ರೀ ಸಿ.ವಿ.ಗೋಪಿನಾಥ್ ಅವರು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಸ್ಥಿತರಿದ್ದ ಗಣ್ಯರು ಹಾಗೂ ಯೋಗಸಾಧಕರು ಈ ಶುಭ ಕ್ಷಣಕ್ಕೆ ಸಾಕ್ಷಿಯಾದರು.

Vishwavani Pustaka: ವಿಶ್ವವಾಣಿ ಪುಸ್ತಕ ಪ್ರಕಾಶನದ 9 ಕೃತಿಗಳ ಲೋಕಾರ್ಪಣೆ; ಹಿರಿಯ ನಟ ಅನಂತನಾಗ್‌, ಚಕ್ರವರ್ತಿ ಸೂಲಿಬೆಲೆ ಸೇರಿ ಗಣ್ಯರು ಭಾಗಿ- ಇಲ್ಲಿವೆ Photos

ವಿಶ್ವವಾಣಿ ಪುಸ್ತಕ ಪ್ರಕಾಶನದಿಂದ 9 ಕೃತಿಗಳ ಲೋಕಾರ್ಪಣೆ, ಇಲ್ಲಿವೆ Photos

Vishweshwar Bhat's Book Release: ʼವಿಶ್ವವಾಣಿ ಪುಸ್ತಕʼ ಪ್ರಕಾಶನ ಸಂಸ್ಥೆಯಿಂದ ಪ್ರಕಟಿಸಲಾಗಿರುವ ಒಂಬತ್ತು ಪುಸ್ತಕಗಳು ಬೆಂಗಳೂರಿನಲ್ಲಿ ಭಾನುವಾರ ಲೋಕಾರ್ಪಣೆಗೊಂಡಿವೆ. ಈ ಪೈಕಿ ವಿಶ್ವೇಶ್ವರ ಭಟ್‌ ಅವರ ನಾಲ್ಕು ಪುಸ್ತಕಗಳು, ಲೇಖಕರಾದ ಕಿರಣ್ ಉಪಾಧ್ಯಾಯ, ರೂಪಾ ಗುರುರಾಜ, ರಾಜು ಅಡಕಳ್ಳಿ, ಮೋಹನ ವಿಶ್ವ ಹಾಗೂ ಶಿಶಿರ ಹೆಗಡೆ ಅವರ ತಲಾ ಒಂದು ಪುಸ್ತಕ ಬಿಡುಗಡೆ ಆಗಿವೆ.

Karnataka Cabinet expansion: ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಸಚಿವ ಪ್ರಿಯಾಂಕ್ ಖರ್ಗೆ

30 ರಿಂದ 40 ಮಂದಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳುವುದು ಈ ಸಂಪುಟ ವಿಸ್ತರಣೆಯ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಲವು ಜಿಲ್ಲೆಗಳ ಶಾಸಕರಿಗೆ ಈ ಬಾರಿ ಮಂತ್ರಿಗಿರಿ ಸಿಗುವುದು ಖಚಿತವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ದೆಹಲಿಯಲ್ಲಿ ಹವಾಮಾನ-ಸಹನಶೀಲ ಕೃಷಿ ಮತ್ತು ಶಾಸನಾತ್ಮಕ ಸಾಮರ್ಥ್ಯ ನಿರ್ಮಾಣ ಕುರಿತ ಎನ್‌ಎಫ್‌ಪಿಆರ್‌ಸಿ ಕಾರ್ಯಾಗಾರ ಯಶಸ್ವಿ

ದೆಹಲಿಯಲ್ಲಿ ಹವಾಮಾನ-ಸಹನಶೀಲ ಕೃಷಿ ಕುರಿತು ಕಾರ್ಯಾಗಾರ

NFPRC's workshop in New Delhi: ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಾಗಾರವು ಶಾಸಕರು ಮತ್ತು ನೀತಿ ತಜ್ಞರನ್ನು ಒಟ್ಟುಗೂಡಿಸಿ ಅನುಭವ ವಿನಿಮಯ ಹಾಗೂ ಪರಿಣಾಮಕಾರಿ, ಸಾಕ್ಷ್ಯಾಧಾರಿತ ಮತ್ತು ಜನಕೇಂದ್ರಿತ ಆಡಳಿತಕ್ಕಾಗಿ ಪ್ರಾಯೋಗಿಕ ಪರಿಹಾರಗಳನ್ನು ಅನ್ವೇಷಿಸಲು ವೇದಿಕೆಯನ್ನು ಒದಗಿಸಿತು.

ʼʼಪ್ರಧಾನಿ ನರೇಂದ್ರ ಮೋದಿ ಜೆನ್‌ ಝೀಗಳ ಕ್ಷಮೆ ಕೋರಿದ್ದು ಬೇಜಾರಾಯ್ತುʼʼ: ಅನಂತನಾಗ್‌ ಮನದಾಳ

ಚಿತ್ರರಂಗದಲ್ಲಿ ಕಲಾತ್ಮಕತೆ ಕಡಿಮೆಯಾಗುತ್ತಿದೆ: ಅನಂತ್‌ನಾಗ್‌ ವಿಷಾದ

Actor Anant Nag: ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಭಾನುವಾರ (ಆಗಸ್ಟ್‌ 2) ಬೆಂಗಳೂರಿನ ಎಫ್‌‌ಕೆಸಿಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ಅನಂತನಾಗ್‌, ಯುವ ತಲೆಮಾರಿನಲ್ಲಿ ಓದುವ ಹವ್ಯಾಸ ಬೆಳೆಯಬೇಕು ಎಂದು ಕರೆ ನೀಡಿದರು.

Vishweshwar Bhat: ಕನ್ನಡ ಪುಸ್ತಕಗಳಿಗೆ ಓದುಗರು ಇದ್ದೇ ಇದ್ದಾರೆ, ತಲುಪಿಸುವ ಕೆಲಸವಾಗಬೇಕು: ವಿಶ್ವೇಶ್ವರ ಭಟ್‌

ಕನ್ನಡ ಪುಸ್ತಕಗಳಿಗೆ ಓದುಗರು ಇದ್ದೇ ಇದ್ದಾರೆ, ತಲುಪಿಸುವ ಕೆಲಸವಾಗಲಿ

ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಸಭಾಂಗಣದಲ್ಲಿ ವಾಗ್ದೇವಿ ವಿದ್ಯಾವರ್ಧಕ ಸಂಘ, ವಿಶ್ವವಾಣಿ ಪುಸ್ತಕ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಒಂಬತ್ತು ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮಾತನಾಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪುಸ್ತಕ ಸಂಸ್ಕೃತಿ ಬೆಳೆಸುವ ಕೆಲಸವಾಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

"ಹೊಸ ಪೀಳಿಗೆಯ ಭಾಷೆ, ಸಂಸ್ಕಾರ ದಾರಿ ತಪ್ಪುತ್ತಿದೆ" ; ವಿಶ್ವವಾಣಿ ಪುಸ್ತಕ ಪ್ರಕಾಶನದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸೂಲಿಬೆಲೆ

ವಿಶ್ವವಾಣಿ ಪುಸ್ತಕ ಪ್ರಕಾಶನದ ಕೃತಿ ಬಿಡುಗಡೆಯಲ್ಲಿ ಸೂಲಿಬೆಲೆ ಹೇಳಿದ್ದೇನು?

ವಿಶ್ವವಾಣಿ ಪುಸ್ತಕ ಪ್ರಕಾಶನದ ವತಿಯಿಂದ ಭಾನುವಾರ (ಆಗಸ್ಟ್‌ 2) 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು (Vishwavani Book Release). ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್‌‌ಕೆಸಿಸಿಐ ಸಭಾಂಗಣದಲ್ಲಿ ಸಮಾರಂಭ ನೆರವೇರಿತು.

"ಆದಾಯ ಹೆಚ್ಚಾಗಿದೆ ಎಂಬ ಕಾರಣಕ್ಕೆ ಜೀವನಶೈಲಿ ಬದಲಾಯಿಸಬೇಕಾಗಿಲ್ಲ": ಬೆಂಗಳೂರು ಯುವತಿಯ ಸಲಹೆಗೆ ನೆಟ್ಟಿಗರು ಫಿದಾ

ದುಬಾರಿ ಜೀವನ ಶೈಲಿ ನಿಯಂತ್ರಿಸುವ ಬಗ್ಗೆ ಯುವತಿಯ ಸಲಹೆ ಏನು?

Viral Video: 7 ತಿಂಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಸಿಮ್ರಿಧಿ ಮಖಿಜಾ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊವೊಂದರಲ್ಲಿ ತಮ್ಮ ಅನಿಸಿಕೆ ಶೇರ್ ಮಾಡಿದ್ದಾರೆ. ನಗರದಲ್ಲಿ ಅವರು ಗಮನಿಸಿದ ಹಲವು ಖರ್ಚಿನ ಬಗ್ಗೆ ಅವರು ಮಾತನಾಡಿದ್ದು, ʼʼಸಿಟಿಗೆ ಬಂದಿದ್ದೇವೆ, ಒಳ್ಳೆಯ ಕೆಲಸ ಸಿಕ್ಕಿದೆ ಅಂದಾಕ್ಷಣ ನಮ್ಮ ಜೀವನಶೈಲಿ ಬದಲಾಯಿಸಬೇಕಾಗಿಲ್ಲʼʼ ಎಂದು ಸಲಹೆ ನೀಡಿದ್ದಾರೆ.

Vishwavani Book Release: ʼʼಯುವ ತಲೆಮಾರಿನಲ್ಲಿ ಓದುವ ಹವ್ಯಾಸ ಬೆಳೆಯಲಿʼʼ; ವಿಶ್ವವಾಣಿ ಪುಸ್ತಕ ಪ್ರಕಾಶನದ 9 ಕೃತಿ ಬಿಡುಗಡೆಗೊಳಿಸಿ ನಟ ಅನಂತನಾಗ್‌ ಆಶಯ

ವಿಶ್ವವಾಣಿ ಪುಸ್ತಕ ಪ್ರಕಾಶನದ 9 ಕೃತಿ ಬಿಡುಗಡೆ

Vishwavani Pustaka: ಭಾನುವಾರ ಬೆಂಗಳೂರಿನಲ್ಲಿ ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾ ವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ 9 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಹಿರಿಯ ನಟ ಅನಂತನಾಗ್‌ ಕೃತಿ ಬಿಡುಗಡೆಗೊಳಿಸಿದರು. ʼವಿಶ್ವವಾಣಿʼ ಮತ್ತು ʼಪ್ರವಾಸಿ ಪ್ರಪಂಚʼ ಪತ್ರಿಕೆ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

3000 ರೊಬೊ ನೆರವಿನ ಶಸ್ತ್ರಚಿಕಿತ್ಸೆಗಳ ಪೂರ್ಣಗೊಳಿಸಿದ ಎಂಬ ಹೆಗ್ಗಳಿಕೆಗೆ ಫೋರ್ಟಿಸ್ ಆಸ್ಪತ್ರೆ ಪಾತ್ರ

3000 ರೊಬೊ ನೆರವಿನ ಶಸ್ತ್ರಚಿಕಿತ್ಸೆಗಳ ಪೂರ್ಣಗೊಳಿಸಿದ ಫೋರ್ಟಿಸ್ ಆಸ್ಪತ್ರೆ

2018 ರಲ್ಲಿ ತನ್ನ ರೋಬೋಟಿಕ್ ಶಸ್ತ್ರಚಿಕಿತ್ಸಾ ಕಾರ್ಯಕ್ರಮವನ್ನು ಪ್ರಾರಂಭಿಸಿದ ದಿನದಿಂದಲೂ ಆಸ್ಪತ್ರೆಯು ಯುರಾಲಜಿ, ಮೂತ್ರಪಿಂಡ ಕಸಿ, ಗೈನಕಾಲಜಿ, ಸರ್ಜಿಕಲ್ ಆಂಕಾಲಜಿ, ಗ್ಯಾಸ್ಟ್ರೋ ಇಂಟಸ್ಟೈನಲ್ ಶಸ್ತ್ರಚಿಕಿತ್ಸೆ, ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ, ಹೃದ್ರೋಗ ಶಸ್ತ್ರಚಿಕಿತ್ಸೆ ಮತ್ತು ಇಎನ್‌ಟಿ ಸೇರಿದಂತೆ 12 ಕ್ಕೂ ಹೆಚ್ಚು ವಿಭಾಗಗಳಲ್ಲಿ ಭಾರತದ ಅತ್ಯಂತ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸಾ ಕಾರ್ಯಕ್ರಮಗಳಲ್ಲಿ ಒಂದನ್ನು ನಿರ್ಮಿಸಿದೆ

ಇಂದು ಒಂಭತ್ತು ಕೃತಿಗಳ ಲೋಕಾರ್ಪಣೆ

ಇಂದು ಒಂಭತ್ತು ಕೃತಿಗಳ ಲೋಕಾರ್ಪಣೆ

ವಿಶ್ವವಾಣಿ ಪುಸ್ತಕ ಪ್ರಕಾಶನದ ವತಿಯಿಂದ ಭಾನುವಾರದಂದು ಒಂಬತ್ತು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವವಾಣಿ ಪುಸ್ತಕ, ವಾಗ್ದೇವಿ ವಿದ್ಯಾವರ್ಧಕ ಟ್ರಸ್ಟ್ ಹಾಗೂ ವಾಗ್ದೇವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಬೆಂಗಳೂರಿನ ಎಫ್ಕೆಸಿಸಿಐ ಸಭಾಂಗಣದಲ್ಲಿ ಒಂಬತ್ತು ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ‌

Police Transfer Guidelines: ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

Karnataka Police Department: ಪೊಲೀಸ್ ಉಪಾಧೀಕ್ಷಕರು (ಸಿವಿಲ್) ಮತ್ತು ಪೊಲೀಸ್ ನಿರೀಕ್ಷಕರ (ಸಿವಿಲ್) ವರ್ಗಾವಣೆ ಮಾರ್ಗಸೂಚಿಗೆ ಸಂಬಂಧಿಸಿ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್‌ ಕಟಾರಿಯಾ ಅವರು ಆದೇಶ ಹೊರಡಿಸಿದ್ದಾರೆ.

Loading...