ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೀದರ್

ಮಜಾ ಭಾರತ ರಿಯಾಲಿಟಿ ಶೋ ಕಲಾವಿದ ಸಾವು; ಅರಣ್ಯದಲ್ಲಿ ಪತ್ತೆಯಾಯ್ತು ಶವ

ಮಜಾ ಭಾರತ ರಿಯಾಲಿಟಿ ಶೋ ಕಲಾವಿದ ಸಾವು

ಮಜಾಭಾರತ ಕಾಮಿಡಿ ರಿಯಾಲಿಟಿ ಶೋನಲ್ಲಿ ಪಾಲ್ಗೊಂಡಿದ್ದ ಕಲಾವಿದ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಣಕುಣಿಯಲ್ಲಿ ನಡೆದಿದೆ. ಹುಮ್ನಾಬಾದ್ ನಗರದ ಟೀಚರ್ಸ್ ಕಾಲೊನಿ‌ಯಲ್ಲಿ ವಾಸವಿದ್ದ ಸಿದ್ದಾರ್ಥ ಪರಶನೂರ ಶವವಾಗಿ ಪತ್ತೆಯಾಗಿದ್ದಾರೆ.

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು; ಕುಟುಂಬಸ್ಥರು ಅಸ್ವಸ್ಥ

ಮಾವಿನ ಹಣ್ಣು ತಿಂದು ಇಬ್ಬರು ಸಹೋದರಿಯರು ಸಾವು

ಮಾವಿನ ಹಣ್ಣನ್ನು ತಿಂದ ಬಳಿಕ ಸಹೋದರಿಯರಿಬ್ಬರು ಸಾವನ್ನಪ್ಪಿದ ಘಟನೆ ಬೀದರ್‌ನಲ್ಲಿ ನಡೆದಿದೆ. ಮನೆಯಲ್ಲಿ ಊಟದ ಬಳಿಕ ಮಾವಿನ ಹಣ್ಣು ತಿಂದ ಇಬ್ಬರು ಸಹೋದರಿಯರು ತೀವ್ರ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Bidar News: ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ; ಬೀದರ್‌ನಲ್ಲಿ ಕೃಷಿ ಅಧಿಕಾರಿಗಳಿಂದ 9.35 ಲಕ್ಷ ಮೌಲ್ಯದ 1,539 ಚೀಲ ಜಪ್ತಿ

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ; ಬೀದರ್‌ನಲ್ಲಿ 1,539 ಚೀಲ ಜಪ್ತಿ

ಹೆಚ್ಚಿನ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಯಲ್ಲಿ ಯಾರಾದರೂ ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಿದ್ದರೆ, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರೆ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Bidar News: ಹೆಡ್‌ ಮಾಸ್ಟರ್‌ ಕಿರುಕುಳ ಆರೋಪ; ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್‌ನಲ್ಲಿ ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಬೀದರ್‌ನ ಪ್ರತಾಪ್ ನಗರದ ಬಳಿ ಘಟನೆ ನಡೆದಿದೆ. ಖಾಸಗಿ ಶಾಲೆಯಲ್ಲಿ ಮುಖ್ಯ ಶಿಕ್ಷಕ ಕಿರುಕುಳ ನೀಡಿದ್ದಾರೆ ಎಂದು 10ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೀದರ್‌ನಲ್ಲೊಬ್ಬ ವಿಕೃತ ಕಾಮಿ; ಆಸ್ಪತ್ರೆಯ ಶವಾಗಾರದಲ್ಲಿ ಮೃತ ಮಹಿಳೆಯರ ಫೋಟೊ ಕ್ಲಿಕ್ಕಿಸುತ್ತಿದ್ದ ಮುನೀರ್ ಅಹ್ಮದ್ ಅರೆಸ್ಟ್‌

ಮೃತ ಮಹಿಳೆಯರ ಫೋಟೊ ಕ್ಲಿಕ್ಕಿಸುತ್ತಿದ್ದ ವಿಕೃತ ಕಾಮಿ ಅರೆಸ್ಟ್

Crime News: ಬೀದರ್‌ನ ಬ್ರಿಮ್ಸ್ ಬೋಧನಾ ಆಸ್ಪತ್ರೆಯ ಶವಾಗಾರದೊಳಗೆ ಮೃತ ಮಹಿಳೆಯರ ಫೋಟೊವನ್ನು ತನ್ನ ಫೋನ್‌ನಲ್ಲಿ ರಹಸ್ಯವಾಗಿ ತೆಗೆಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುನೀರ್ ಅಹ್ಮದ್ ಎಂದು ಗುರುತಿಸಲಾಗಿದೆ. ಈತ ಆಸ್ಪತ್ರೆಯಲ್ಲಿ ಅಟೆಂಡರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ.

Karnataka Weather: ಆರೆಂಜ್‌ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನ/ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್ ಪಶು ವೈದ್ಯಕೀಯ ವಿವಿಯ 45 ಕೋಟಿ ರೂ. ಹಗರಣ; ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

ಬೀದರ್ ಪಶು ವಿವಿ ಹಗರಣ; ಮಾಜಿ ಉಪಕುಲಪತಿ ಸೇರಿ 6 ಮಂದಿ ಅರೆಸ್ಟ್‌

Bidar Veterinary University scandal: 2017-18ರ ಅವಧಿಯಲ್ಲಿ ಬೀದರ್‌ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಾಮಗ್ರಿ ಖರೀದಿಯಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 45 ಕೋಟಿ ರೂ.ಗೂ ಅಧಿಕ ಹಣ ದರ್ಬಳಕೆ ಮಾಡಲಾಗಿತ್ತು. ಬಳಿಕ 2021ರಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದೀಗ ಆರು ಮಂದಿ ಆರೋಪಿಗಳ ಬಂಧನವಾಗಿದೆ.

ಜೆಜೆಎಂ ಗುತ್ತಿಗೆದಾರರ ವಿರುದ್ಧ ಜನಾಕ್ರೋಶ

ಜೆಜೆಎಂ ಗುತ್ತಿಗೆದಾರರ ವಿರುದ್ಧ ಜನಾಕ್ರೋಶ

ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಮುಂಜಾಗ್ರತಾ ಸಭೆಯಲ್ಲಿ ಸಾಕಷ್ಟು ಬಾರಿ ಸೂಚಿಸಿದರು ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಮಹಾರಾಜಾವಾಡಿ ಜನರಿಗೆ ಟ್ರ್ಯಾಕ್ಟರ್‌ ನೀರೇ ಗತಿ

ಮಹಾರಾಜಾವಾಡಿ ಜನರಿಗೆ ಟ್ರ್ಯಾಕ್ಟರ್‌ ನೀರೇ ಗತಿ

ಮಹಾರಾಜವಾಡಿ ಗ್ರಾಮದಲ್ಲಿ ತೀವ್ರ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಮಾರುತಿ ರಾಠೋಡ್ ಅವರು ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆ ಅನಾಹುತ; ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ವಾಟರ್ ಪಾರ್ಕ್ ಗೋಡೆ ಕುಸಿತ, 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Heavy Rain: ರಾಜ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಬೀದರ್ (Bidar) ತಾಲೂಕಿನ ಅಣದೂರು ವಾಡಿ ಗ್ರಾಮದ ಬಳಿ ಇರುವ ಮಾಂಜ್ರಾ ವಾಟರ್ ಪಾರ್ಕ್‌ನ ಗೋಡೆ ಕುಸಿದು ಬಿದ್ದು ಅನಾಹುತ ಸಂಭವಿಸಿದೆ.

Bike Accident: ಔರಾದ್‌ನಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು!

ಔರಾದ್‌ನಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Bidar News: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್‌-ಔರಾದ್‌ ರಾಷ್ಟ್ರೀಯ ಹೆದ್ದಾರಿ-161 (ಎ) ರಲ್ಲಿ ಔರಾದ್‌ ಪಟ್ಟಣದ ಬಂಧಿಖಾನೆ ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ.

ಬಸವಕಲ್ಯಾಣದಲ್ಲಿ ಬಸವೇಶ್ವರರ ರಥೋತ್ಸವದ ವೇಳೆ ಘೋರ ದುರಂತ; ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಬಸವಕಲ್ಯಾಣದಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

Bidar News: ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಬಸವೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ವೇಳೆ ಭೀಕರ ಅವಘಡ ಸಂಭವಿಸಿದೆ. ರಥ ಎಳೆಯುವ ವೇಳೆ ಆಯಾ ತಪ್ಪಿ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ ಧನರಾಜ ಚಾಕೂರೆ (65) ಮೃತಪಟ್ಟಿದ್ದಾರೆ.

Bidar news: ಬೀದರ್‌ನಲ್ಲಿ ಬಿಸಿಲಿನ ಝಳಕ್ಕೆ ಯುವಕ ಬಲಿ

ಬೀದರ್‌ನಲ್ಲಿ ಬಿಸಿಲಿನ ಝಳಕ್ಕೆ ಯುವಕ ಬಲಿ

ಬಿಸಿಲಿನಿಂದಲೇ ಮಗ ಸಾವನ್ನಪ್ಪಿದ್ದಾನೆ ಎಂದು ತಂದೆ ಲಯಿಕ್ ಅಹ್ಮದ್ ದೂರು ನೀಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಿಸಿಲು ಅತ್ಯಧಿಕವಾಗಿರುವ ಹೊತ್ತಿನಲ್ಲಿ ಹೊರಗೆ ಹೋಗದಂತೆ, ಹೋಗಲೇಬೇಕಾದ ಪರಿಸ್ಥಿತಿಯಲ್ಲಿ ತಲೆ ಹಾಗೂ ಮುಖವನ್ನು ಬಟ್ಟೆಯಿಂದ ಕವರ್‌ ಮಾಡಿಕೊಳ್ಳುವಂತೆ, ಹಾಗೂ ಸಾಕಷ್ಟು ನೀರು ಸೇವಿಸಿ ಹೈಡ್ರೇಟ್‌ ಆಗಿರುವಂತೆ ತಜ್ಞರು ಸೂಚಿಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಯೆಲ್ಲೋ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಬಹುತೇಕ ಶುಭ್ರ ಆಕಾಶ, ಸಂಜೆಯ ಹೊತ್ತಿಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37°C ಮತ್ತು 24°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

40th State Journalists' Conference: ವಿಶ್ವವಾಣಿಯ ರಮೇಶ್ ಕುಮಾರ್ ನಾಯಕ್‌ಗೆ ʼಗರುಡನಗಿರಿ ನಾಗರಾಜ್ ಪ್ರಶಸ್ತಿʼ ಪ್ರದಾನ

ರಮೇಶ್ ಕುಮಾರ್ ನಾಯಕ್‌ಗೆ ʼಗರುಡನಗಿರಿ ನಾಗರಾಜ್ ಪ್ರಶಸ್ತಿʼ ಪ್ರದಾನ

KUWJ Awards: ಬೀದರ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶ್ವವಾಣಿ ಡಿಜಿಟಲ್ ಸಂಪಾದಕ ರಮೇಶ್ ಕುಮಾರ್ ನಾಯಕ್ ಸೇರಿ ವಿವಿಧ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

40th State Journalists' Conference: ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

CM Siddaramaiah: ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರಿಯುತ್ತದೆ.‌ ಅದು ಮುಂದುವರಿಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್;‌ ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ. ಸಂಜೆ / ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ, ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Bidar Rain: ಬೀದರ್‌ನಲ್ಲಿ ಮಳೆ ಅಬ್ಬರ; ಸಿಡಿಲು ಬಡಿದು ಯುವರೈತ ಸಾವು

ಬೀದರ್‌ನಲ್ಲಿ ಮಳೆ ಅಬ್ಬರ; ಸಿಡಿಲು ಬಡಿದು ಯುವರೈತ ಸಾವು

Lightning strike: ಬೇಸಿಗೆಯ ಬಿರುಬಿಸಿಲಿನ ನಡುವೆ ಬೀದರ್‌ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದೆ. ಇದೇ ರೀತಿ ಮುಂದಿನ 6 ದಿನ ಗುಡುಗು ಸಹಿತ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್‌ 1ರಂದು 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಎಂಬಿಬಿಎಸ್‌ ವಿದ್ಯಾರ್ಥಿ ಕಾಲೇಜಿನಲ್ಲೇ ಆತ್ಮಹತ್ಯೆ

ಎಂಬಿಬಿಎಸ್‌ ವಿದ್ಯಾರ್ಥಿ ಕಾಲೇಜಿನಲ್ಲೇ ಆತ್ಮಹತ್ಯೆ

ಅನಿಷ್ಕಾರ್ ಅವರು ಬಿರಿಮ್ಸ್ ಕಾಲೇಜಿನ ಹಾಸ್ಟೆಲ್ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೈದ್ಯಕೀಯ ಶಿಕ್ಷಣದ ಅಂತಿಮ ಘಟ್ಟದಲ್ಲಿದ್ದ ಇವರು, ಇನ್ನೇನು ಕೆಲವೇ ದಿನಗಳಲ್ಲಿ ವೈದ್ಯರಾಗಿ ಸಮಾಜದ ಸೇವೆಗೆ ಸಿದ್ಧರಾಗಬೇಕಿತ್ತು. ಆದರೆ ಅನಿಷ್ಕಾರ್ ಅವರ ಈ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸಹಪಾಠಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.

Road Accident: ಯುಗಾದಿಯಂದೇ ಭೀಕರ ಅಪಘಾತ, ದಂಪತಿ ಸಾವು

ಯುಗಾದಿಯಂದೇ ಭೀಕರ ಅಪಘಾತ, ದಂಪತಿ ಸಾವು

ಮೃತ ದಂಪತಿಗಳನ್ನು ಬಸವಕಲ್ಯಾಣ ನಗರದ ಖಡಿ ಝಂಡಾ ಕಾಲೋನಿಯ ನಿವಾಸಿ ಸೈಯದ್ ದಸ್ತಗೀರ್ (35) ಮತ್ತು ಅವರ ಪತ್ನಿ ಯಾಸ್ಮೀನ್ ದಸ್ತಗೀರ್ (33) ಎಂದು ಗುರುತಿಸಲಾಗಿದೆ. ತ್ರಿಪುರಾಂತ ಬಳಿಯ ಕಾಲೋನಿಯೊಂದರಲ್ಲಿ ವಾಸಿಸುತ್ತಿದ್ದ ಮೃತರು, ಬೈಕ್​ನಲ್ಲಿ ಬಸ್ ನಿಲ್ದಾಣ ಕಡೆಯಿಂದ ಖಡಿ ಝಂಡಾ ಕಾಲೋನಿಯತ್ತ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ.

ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಶಾಲಾ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಘಟನೆ ನಡೆದಿದೆ. ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲವ್ ಮಾಡುವಂತೆ ಸಹಪಾಠಿ ಚುಡಾಯಿಸುತ್ತಿದ್ದ. ಪ್ರೀತಿಸುವಂತೆ ಒತ್ತಡ ಹಾಕಿದ್ದರಿಂದ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

Bidar news: ಬಸವಕಲ್ಯಾಣದಲ್ಲಿ ಮುಸ್ಲಿಂ ಯುವಕರಿಂದ ಭಾರಿ ಪ್ರತಿಭಟನೆ, ಠಾಣೆಗೆ ಮುತ್ತಿಗೆ

ಬಸವಕಲ್ಯಾಣದಲ್ಲಿ ಮುಸ್ಲಿಂ ಯುವಕರಿಂದ ಭಾರಿ ಪ್ರತಿಭಟನೆ, ಠಾಣೆಗೆ ಮುತ್ತಿಗೆ

ಕೆಲವು ಹಿಂದೂ ಯುವಕರು ಮುಸ್ಲಿಂ ಮೌಲ್ವಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಚಾರ ನಗರದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದರಿಂದ ಕೆರಳಿದ ಮುಸ್ಲಿಂ ಸಮುದಾಯದ ಸಾವಿರಾರು ಯುವಕರು ಮತ್ತು ಮುಖಂಡರು ನಗರದ ಗಾಂಧಿ ವೃತ್ತದಲ್ಲಿರುವ ಪೊಲೀಸ್ ಠಾಣೆಯತ್ತ ಧಾವಿಸಿ‌ದ್ದಾರೆ. ಠಾಣೆಯ ಮುಂಭಾಗದಲ್ಲಿ ಭಾರಿ ಗದ್ದಲ ಸೃಷ್ಟಿಸಿದ್ದಾರೆ.

ಈ ಬಾರಿ ಬಜೆಟ್‌ನಲ್ಲಿ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ ಇರುತ್ತೆ: ಕೆ.ವಿ. ಪ್ರಭಾಕರ್

ಈ ಬಾರಿ ಬಜೆಟ್‌ನಲ್ಲಿ ಪತ್ರಕರ್ತ ಸಮುದಾಯಕ್ಕೆ ಸಿಹಿ ಸುದ್ದಿ: ಕೆವಿಪಿ

KV Prabhakar: ಪತ್ರಕರ್ತ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನೆರಳಾಗಿ ನಿಂತಿದ್ದಾರೆ. ಈ ಬಾರಿಯ ಬಜೆಟ್‌ನಲ್ಲೂ ಶ್ರಮಿಕ ಪತ್ರಕರ್ತ ಸಮುದಾಯಕ್ಕೆ ಉತ್ತಮ‌ ಅನುಕೂಲಗಳು ಆಗುವ ಭರವಸೆ ಇದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

Bidar News: ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಬೀದರ್‌ನ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ-ಮಗ ಸಾವು

ಕೈಕಾಲು ತೊಳೆದುಕೊಳ್ಳಲು ಕಾರಂಜಾ ಡ್ಯಾಂನ ಕಾಲುವೆಯಲ್ಲಿ ಕಾಲುವೆಗೆ ಯುವಕ ಇಳಿದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ಆತನನ್ನು ರಕ್ಷಿಸಲು ತಂದೆ ತೆರಳಿದ್ದು, ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

Loading...