ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಾಮರಾಜನಗರ

Chamarajanagara: ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡಿ ಹಾಕಿದ ಪ್ರಕರಣ, ಐವರ ಮೇಲೆ ಎಫ್‌ಐಆರ್‌

ಬೋನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡಿ ಹಾಕಿದ ಐವರ ಮೇಲೆ ಎಫ್‌ಐಆರ್‌

Tiger cage: ಪ್ರಾಣ ಭಯದಲ್ಲಿ ಜೀವನ ನಡೆಸುತ್ತಿರುವ ನಮಗೆ ರಕ್ಷಣೆ ನೀಡುತ್ತಿಲ್ಲ ಎಂದು ಜಮೀನಿನಲ್ಲಿ ಇದ್ದ ಬೋನಿನಲ್ಲಿ ಸಿಬ್ಬಂದಿಯನ್ನು ಕೂಡಿ ಹಾಕಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಅರಣ್ಯ ಇಲಾಖೆ ನೌಕರರು ದೂರು ನೀಡಿದ ಹಿನ್ನೆಲೆಯಲ್ಲಿ ಬಂಡೀಪುರ ಸಿಎಫ್ ಸೂಚನೆಯಂತೆ ಗುಂಡ್ಲುಪೇಟೆ ಠಾಣೆಗೆ ದೂರು ಸಲ್ಲಿಸಿದ್ದರು.

Road Accident: ಲಾರಿ, ಕಾರು, ಮೊಪೆಡ್ ಮಧ್ಯ ಸರಣಿ ಅಪಘಾತ : ನಾಲ್ವರು ಬಾಲಕರು ಸಾವು

ಸರಣಿ ಅಪಘಾತ : ನಾಲ್ವರು ಬಾಲಕರು ಸಾವು

ಗಾಳೀಪುರ ಸಮೀಪದ ರಿಂಗ್ ರಸ್ತೆಯಲ್ಲಿ ಸಂಭವಿಸಿದ್ದ ಲಾರಿ, ಕಾರು ಹಾಗೂ ಮೊಪೆಡ್ ನಡುವಿನ ಸರಣಿ ಅಪಘಾತದಲ್ಲಿ (Accident) ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಮೊಪೆಡ್ ನಲ್ಲಿ ಹೋಗುತ್ತಿದ್ದ ನಾಲ್ವರ ಪೈಕಿ ಸ್ಥಳದಲ್ಲೇ ಮೆರಾನ್ ಎಂಬ ಬಾಲಕ‌ ಸಾವನ್ನಪ್ಪಿದ್ದ.

Viral News: ಊಟ ತಿಂಡಿ ಬೇಡ ಇಂಜಿನ್‌ ಆಯಿಲ್‌ ಸಾಕು;  28 ವರ್ಷಗಳಿಂದ ಇದನ್ನೇ ಕುಡಿದು ಬದುಕುತ್ತಿರುವ ವ್ಯಕ್ತಿ

28 ವರ್ಷಗಳಿಂದ ಇಂಜಿನ್‌ ಆಯಿಲ್‌ ಕುಡಿದು ಬದುಕುತ್ತಿರುವ ವ್ಯಕ್ತಿ!

ಆಹಾರವನ್ನೇ ಸೇವಿಸದೆ ಬದುಕುಳಿದ ವ್ಯಕ್ತಿಯನ್ನು ನೋಡಿರುತ್ತೇವೆ. ಇಲ್ಲೊಬ್ಬ ಮಹಾಶಯನ ಕಥೆ ಕೇಳಿದರೆ ನಿಮಗೆ ಶಾಕ್‌ ಆಗುವುದಂತೂ ಗ್ಯಾರಂಟಿ. ಈತ ಅಂತಿಂತ ವ್ಯಕ್ತಿ ಅಲ್ಲ. ಕಳೆದ 29 ವರ್ಷಗಳಿಂದ ಕೇವಲ ಇಂಜಿನ್ ಆಯಿಲ್ ಕುಡಿದು ಬದುಕುತ್ತಿದ್ದಾನೆ.

Self Harming: ಗಣೇಶ ಚತುರ್ಥಿಯಂದೇ ದುರಂತ; ಹಬ್ಬಕ್ಕೆ ಕರೆಯಲು ತವರು ಮನೆಯವರಿಲ್ಲವೆಂದು ಗೃಹಿಣಿ ಆತ್ಮಹತ್ಯೆ

ಹಬ್ಬಕ್ಕೆ ಕರೆಯಲು ತವರು ಮನೆಯವರಿಲ್ಲವೆಂದು ಗೃಹಿಣಿ ಆತ್ಮಹತ್ಯೆ

Chamarajanagar News: ಗೌರಿ ಗಣೇಶ ಹಬ್ಬಕ್ಕೆ ಕರೆಯಲು ತವರು ಮನೆಯವರಿಲ್ಲವೆಂದು ಮನನೊಂದು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಆರುವನಪುರ ಬಡಾವಣೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಶ್ಮಿ (32) ಎಂದು ಗುರುತಿಸಲಾಗಿದೆ.

Chamarajanagara: ಚಾಮರಾಜನಗರದಲ್ಲಿ ಲೋ ಬಿಪಿಯಿಂದ 6 ವರ್ಷದ ಬಾಲಕ ಸಾವು

ಚಾಮರಾಜನಗರದಲ್ಲಿ ಲೋ ಬಿಪಿಯಿಂದ 6 ವರ್ಷದ ಬಾಲಕ ಸಾವು

Low BP: ಈತ 1ನೇ ತರಗತಿ ಓದುತ್ತಿದ್ದ. ಸೋಮವಾರ ಶಾಲೆಗೆ ಹೋಗಿ ಸಂಜೆ ವಾಪಸ್ ಮನೆಗೆ ಬಂದಿದ್ದಾನೆ. ಅನಂತರ ಸ್ವಲ್ಪ ಸಮಯದಲ್ಲಿಯೇ ಬಾಲಕ ಕುಸಿದು ಬಿದ್ದಿದ್ದಾನೆ. ತಕ್ಷಣ ಪಾಲಕರು ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Infant death: ಕಿವಿ ಚುಚ್ಚಲು ಅನಸ್ತೇಶಿಯಾ ನೀಡಿದ ವೈದ್ಯರು, 5 ತಿಂಗಳ ಮಗು ಸಾವು

ಕಿವಿ ಚುಚ್ಚಲು ಅನಸ್ತೇಶಿಯಾ ನೀಡಿದ ವೈದ್ಯರು, 5 ತಿಂಗಳ ಮಗು ಸಾವು

Chamarajanagar: ವೈದ್ಯರು ನೋವಾಗಬಾರದೆಂದು ಮಗುವಿನ 2 ಕಿವಿಗಳಿಗೆ ಅರಿವಳಿಕೆ ನೀಡಿದ್ದಾರೆ, ನಂತರ ಮಗುವಿನ ಬಾಯಲ್ಲಿ ನೊರೆ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಮಗು ಮೃತಪಟ್ಟಿದೆ ಎಂದು ವೈದ್ಯರು ಧೃಡಪಡಿಸಿದ್ದರು.

Cauvery Wildlife Sanctuary: ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು

ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು

Cauvery Wildlife Sanctuary: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಮೃತಪಟ್ಟಿವೆ. ಸುಮಾರು 10 ದಿನದ ಹಿಂದೆಯೇ ಒಂದು ಹೆಣ್ಣು, ಒಂದು ಗಂಡು ಹುಲಿ ಮರಿಗಳು ಕೊನೆಯುಸಿರೆಳೆದಿವೆ.

Gundlupet News: ಮುಸ್ಲಿಂ ಎಂಬ ಕಾರಣಕ್ಕೆ ಮಠದಿಂದ ಸ್ವಾಮೀಜಿಯನ್ನು ಹೊರಹಾಕಿದ ಗ್ರಾಮಸ್ಥರು!

ಮುಸ್ಲಿಂ ಎಂಬ ಕಾರಣಕ್ಕೆ ಮಠದಿಂದ ಸ್ವಾಮೀಜಿಯನ್ನು ಹೊರಹಾಕಿದ ಗ್ರಾಮಸ್ಥರು!

Gundlupet News: ಮೂಲತಃ ಮುಸ್ಲಿಂ ಆಗಿದ್ದರೂ, ಬಾಲ್ಯದಿಂದಲೂ ಬಸವಣ್ಣನವರ ವಚನಗಳಿಗೆ, ಮಾನವೀಯ ಬೋಧನೆಗಳಿಗ ಆಕರ್ಷಿತರಾಗಿದ್ದ ವ್ಯಕ್ತಿಯೊಬ್ಬರು, ಲೌಕಿಕ ಜೀವನಕ್ಕೆ ಇತಿಶ್ರೀ ಹೇಳಿ, ಸನ್ಯಾಸತ್ವ ಪಡೆದಿದ್ದರು. ಅವರನ್ನು ಪ್ರಧಾನ ಮಠಾಧೀಶರಾಗಿ ನೇಮಿಸಲಾಗಿತ್ತು, ಇದೀಗ ಸ್ವಾಮೀಜಿಯ ಮೂಲ ಧರ್ಮ ಬಹಿರಂಗವಾಗಿ, ಅವರನ್ನು ಮಠದಿಂದ ಹೊರಗೆ ಕಳುಹಿಸಲಾಗಿದೆ.

Fraud Case: ಚಾಮರಾಜನಗರ: ಉದ್ಯಮಿಗೆ 3.70 ಲಕ್ಷ ರೂ. ವಂಚಿಸಿ ಪೊಲೀಸರೇ ನಾಪತ್ತೆ!

ಚಾಮರಾಜನಗರ: ಉದ್ಯಮಿಗೆ 3.70 ಲಕ್ಷ ರೂ. ವಂಚಿಸಿ ಪೊಲೀಸರೇ ನಾಪತ್ತೆ!

Chamarajanagara news: ಸುಲಿಗೆಕೋರ ವಂಚಕರು ಹಾಗೂ ಧನದಾಹಿ ಪೊಲೀಸರು ಸೇರಿಕೊಂಡು ನಡೆಸಿದ ವಂಚನೆಯ ಕಥೆ ಇದು. ತಮಿಳುನಾಡು ಮೂಲದ ಉದ್ಯಮಿಯನ್ನು ಇವರೆಲ್ಲ ಸೇರಿಕೊಂಡು ಬೆದರಿಸಿ 3.70 ಲಕ್ಷ ರೂ. ಹಣ ದೋಚಿದ್ದಾರೆ. ಇದೀಗ ಪಿಎಸ್‌ಐ ಮತ್ತು ಪೇದೆಗಳು ಪರಾರಿಯಾಗಿದ್ದಾರೆ.

Terrorist Arrested: 58 ಜನರನ್ನು ಸಾಯಿಸಿದ ಕೊಯಮತ್ತೂರು ಬಾಂಬ್‌ ಸ್ಫೋಟ ಆರೋಪಿ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಸೆರೆ!

ಕೊಯಮತ್ತೂರು ಬಾಂಬ್‌ ಸ್ಫೋಟ ಆರೋಪಿ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಸೆರೆ!

Terrorist Arrested: ಕರ್ನಾಟಕದಲ್ಲಿ ಶಂಕಿತ ಉಗ್ರ ಸಾದಿಕ್ ರಾಜಾ ಚಲನವಲನಗಳ ಬಗ್ಗೆ ಕೊಯಮತ್ತೂರು ಪೊಲೀಸರು ಹಾಗೂ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್‌) ಪೊಲೀಸರು ಖಚಿತ ಮಾಹಿತಿ ಪಡೆದಿದ್ದರು. ಈತ ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಮತ್ತೋರ್ವ ಪ್ರಮುಖ ಆರೋಪಿ ಎಸ್‌ಎ ಬಾಷಾ ಸ್ಥಾಪಿಸಿದ ನಿಷೇಧಿತ ಸಂಘಟನೆ ಅಲ್-ಉಮ್ಮಾದ ಕಾರ್ಯಕರ್ತನಾಗಿದ್ದ.

Heart attack: ಗುಂಡ್ಲುಪೇಟೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು!

ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು!

Heart attack: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿಯ ಶಾಲೆಯಲ್ಲಿ ಬುಧವಾರ ಘಟನೆ ನಡೆದಿದೆ. 4ನೇ ತರಗತಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತಪಟ್ಟ ಬಾಲಕ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

Tigers Death: ಹುಲಿಗಳ ಸಾವು, 4 ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು

ಹುಲಿಗಳ ಸಾವು, 4 ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು

Tigers Death: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.

Monkey Massacre: ಹುಲಿ ಹತ್ಯೆ ಬಳಿಕ ಗುಂಡ್ಲುಪೇಟೆಯಲ್ಲಿ 20ಕ್ಕೂ ಅಧಿಕ ಕೋತಿಗಳ ಮಾರಣಹೋಮ

ಹುಲಿ ಹತ್ಯೆ ಬಳಿಕ ಗುಂಡ್ಲುಪೇಟೆಯಲ್ಲಿ 20ಕ್ಕೂ ಅಧಿಕ ಕೋತಿಗಳ ಮಾರಣಹೋಮ

Monkey Massacre: ದಾರಿಹೋಕರು ಚೀಲವನ್ನು ಬಿಚ್ಚಿ ನೋಡಿದ ವೇಳೆ 20ಕ್ಕೂ ಅಧಿಕ ಕೋತಿಗಳ ಕಳೇಬರಗಳು ಪತ್ತೆಯಾಗಿವೆ. ಮೇಲ್ನೋಟಕ್ಕೆ ವಿಷಪ್ರಾಶನ ಮಾಡಿರುವ, ಇಲ್ಲವೇ ಹೊಡೆದು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳ ಮೃತದೇಹಗಳು ಸಿಕ್ಕ ಪ್ರದೇಶ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತದೆ.

Tigers death: ಹುಲಿಗಳ ಸಾವು, ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ

ಹುಲಿಗಳ ಸಾವು, ಕರ್ತವ್ಯ ಲೋಪ ಎಸಗಿದ 3 ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ

Tigers Death: ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪ ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರಂತೆ ಅರಣ್ಯ ಇಲಾಖೆಯು ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ, ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ ಮತ್ತು ವಲಯ ಅರಣ್ಯಾಧಿಕಾರಿ ಮಾದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಆದೇಶಿಸಿದೆ.

Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಹತ್ಯೆ: ವಿಷವಿಕ್ಕಿದ ಮೂವರ ಬಂಧನ

ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಹತ್ಯೆ: ವಿಷವಿಕ್ಕಿದ ಮೂವರ ಬಂಧನ

Tiger Death: ಹಸುವಿನ ಕಳೇಬರದಲ್ಲಿ ವಿಷ ಹಾಕಿ ಹುಲಿಗಳ ಸಾವಿಗೆ ಕಾರಣರಾದ ಕೋನಪ್ಪ ಬಿನ್ ಸೊಣ್ಣೆಗೌಡ, ಮಾದರಾಜು ಬಿನ್ ಶಿವಣ್ಣ ನಾಗರಾಜ ಬಿನ್ ಪೂಜಾರಿಗೌಡ ಇವರನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದೆ. ಇವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Tigers death: ಮಲೆ ಮಹದೇಶ್ವರ ಹುಲಿಗಳ ಸಾವು, ತನಿಖೆಗೆ ಎಸ್‌ಐಟಿ ರಚಿಸಿದ ಕೇಂದ್ರ

ಮಲೆ ಮಹದೇಶ್ವರ ಹುಲಿಗಳ ಸಾವು, ತನಿಖೆಗೆ ಎಸ್‌ಐಟಿ ರಚಿಸಿದ ಕೇಂದ್ರ

Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಭವಿಸಿದ ಐದು ಹುಲಿಗಳ ಸಾವು ಕುರಿತು ತನಿಖೆ ನಡೆಸಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಇಬ್ಬರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಎಸ್‌ಐಟಿ ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಸಿ ಎರಡು ವಾರಗಳ ಅವಧಿಯಲ್ಲಿ ವರದಿಯನ್ನು ಸಲ್ಲಿಸಬೇಕಿದೆ.

Tigers Death: ಬಂಡಿಪುರದಲ್ಲಿ ಮತ್ತೊಂದು ಹುಲಿ ಶವ ಪತ್ತೆ

ಬಂಡಿಪುರದಲ್ಲಿ ಮತ್ತೊಂದು ಹುಲಿ ಶವ ಪತ್ತೆ

Tiger Death: ಬಂಡೀಪುರ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಮತ್ತೊಂದು ಹುಲಿ ಅಸಹಜವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. 4ರಿಂದ 5 ವರ್ಷ ವಯಸ್ಸಿನ ಹೆಣ್ಣು ಹುಲಿ ಸಾವನ್ನಪ್ಪಿದ್ದು, ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಕಳೇಬರ ಪತ್ತೆಯಾಗಿದೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ.

Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಒಂದೇ ದಿನ 5 ಹುಲಿ ಸಾವು, ವಿಷಪ್ರಾಶನ ಶಂಕೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಒಂದೇ ದಿನ 5 ಹುಲಿ ಸಾವು, ವಿಷಪ್ರಾಶನ ಶಂಕೆ

Tiger death: ಹುಲಿಗಳ ಸಾವು ಪ್ರಕರಣದ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ತ್ವರಿತ ಕ್ರಮ ಕೈಗೊಂಡಿದ್ದು, ಹುಲಿಗಳ ಅಸಹಜ ಸಾವಿನ‌ ಕುರಿತು ತನಿಖೆಗೆ ಉನ್ನತ ಮಟ್ಟದ ತನಿಖಾ ತಂಡ ರಚಿಸಿದ್ದಾರೆ. ಹುಲಿ ಕಳೇಬರ ಸಿಕ್ಕ ಪ್ರದೇಶದಿಂದ 500 ಮೀ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಕ್ಷ್ಯ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Tiger Attack: ಚಾಮರಾಜನಗರದಲ್ಲಿ ಒಂದೇ ತಿಂಗಳಲ್ಲಿ 2ನೇ ಬಲಿ ಪಡೆದ ನರಭಕ್ಷಕ ಹುಲಿ

ಚಾಮರಾಜನಗರದಲ್ಲಿ ಒಂದೇ ತಿಂಗಳಲ್ಲಿ 2ನೇ ಬಲಿ ಪಡೆದ ನರಭಕ್ಷಕ ಹುಲಿ

Tiger Attack: ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿ ಪ್ರಕರಣ ಹೆಚ್ಚುತ್ತಿರುವುದರಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ಹುಲಿ ನರಭಕ್ಷಕನಾಗಿ ಪರಿವರ್ತಿತವಾಗಿದೆ ಎಂದು ತರ್ಕಿಸಲಾಗಿದ್ದು, ಈ ಹುಲಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಾಡಂಚಿನ ಜನ ಆಗ್ರಹಿಸಿದ್ದಾರೆ.

ಜಿಲ್ಲೆ ಜನ ಮರೆತಿಲ್ಲ ಆಕ್ಸಿಜನ್ ದುರಂತ, ಕೊಟ್ಟ ಭರವಸೆ ಮರೆಯಿತೆ ಸರಕಾರ?

ಕೊಟ್ಟ ಭರವಸೆ ಮರೆಯಿತೆ ಸರಕಾರ?

ಕೊರೊನಾ ಎರಡನೇ ಅಲೆ 201ರ ಮೇ 9 ರ ರಾತ್ರಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ 36 ಮಂದಿ ಅಸುನೀಗಿದ್ದರು. ಅದರಲ್ಲೂ ಎಲ್ಲಾ ಬಡ ಕುಟುಂಬಗಳು, ಕೆಲವರು ಸಂಸಾರದ ಹೊಣೆ ಹೊತ್ತವರು,ಇನ್ನು ಕೆಲವರು ಕುಟುಂಬದ ಆಧಾರಸ್ತಂಭವಾದವರು, ಈ ವೇಳೆ ಮೃತಪಟ್ಟ ಒಂದೊಂದು ಕುಟುಂಬವೂ ಒಂದೊಂದು ದಾರುಣ ಕಥೆಯನ್ನೇ ಹೇಳುತ್ತವೆ.

Karnataka Rain: ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

Karnataka Rain News: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು, ತುಂಬಿ ಹರಿಯುವ ಹಳ್ಳದಲ್ಲಿ ಎತ್ತಿನ ಬಂಡಿ ಮಗುಚಿ ಬಿದ್ದು, ಕರೆಂಟ್ ಶಾಕ್​ ಹೊಡೆದು, ಕಾವೇರಿ ನದಿಯಲ್ಲಿ ಈಜಲು ಇಳಿದು- ಹೀಗೆ ಎಂಟು ಮಂದಿ ನಾನಾ ಕಡೆ ಸಾವಿಗೀಡಾಗಿದ್ದಾರೆ.

KV Prabhakar: ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪ್ರಭಾಕರ್

ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪ್ರಭಾಕರ್

KV Prabhakar: ಕತ್ತಲಾದ ಮೇಲೆ ಮತ್ತೆ ಬೆಳಕು ಆಗಲೇ ಬೇಕು ಎನ್ನುವುದು ಪ್ರಕೃತಿಯ ನಿಯಮ. ಹಾಗೆಯೇ ಮನುಷ್ಯ ಜೀವನದಲ್ಲೂ ಕಷ್ಟದ ಸಂದರ್ಭಗಳು ಬರಬಹುದು, ಆ ಸಂದರ್ಭಗಳೂ ಅಳಿಸಿ ಹೋಗುತ್ತವೆ ಎನ್ನುವುದರ ಸಂಕೇತ ಇದು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

Sri Guruswamy passes away: ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

Sri Guruswamy passes away: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶ್ರೀಗಳು ಚಿಕಿತ್ಸೆ ಸ್ಪಂದಿಸದ ಹಿನ್ನೆಲೆ ಮಠಕ್ಕೆ ಕರೆತಂದಿದ್ದರು. ಇಂದು ಮುಂಜಾನೆ ಗುರುಸ್ವಾಮೀಜಿ ನಿಧನರಾಗಿದ್ದಾರೆ.

Car Accident: ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ; ಪಿಎಸ್‌ಐ, ಚಾಲಕನಿಗೆ ಗಂಭೀರ ಗಾಯ

ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ

Car Accident: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಚಾಲಕ ಮತ್ತು ಪಿಎಸ್‌ಐ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading...