ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಚಿಕ್ಕಬಳ್ಳಾಪುರ
Chikkaballapur shootout: ಚಿಕ್ಕಬಳ್ಳಾಪುರದಲ್ಲಿ ರಸ್ತೆ ನಿರ್ಮಾಣ ವಿರೋಧಿಸಿದ ವ್ಯಕ್ತಿ ಮೇಲೆ ಫೈರಿಂಗ್‌; ಮಾಜಿ ಎಂಎಲ್‌ಸಿ ಸಂಬಂಧಿ ಅರೆಸ್ಟ್‌

ರಸ್ತೆ ನಿರ್ಮಾಣ ವಿರೋಧಿಸಿದ ವ್ಯಕ್ತಿ ಮೇಲೆ ಗುಂಡಿನ ದಾಳಿ

Chikkaballapur shootout: ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಬುಧವಾರ ಘಟನೆ ನಡೆದಿದೆ. ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ ಚಿಕನ್‌ ರವಿ ಮೇಲೆ ಸಕಲೇಶಕುಮಾರ್‌ ಎಂಬಾತ ಫೈರಿಂಗ್‌ ಮಾಡಿದ್ದಾರೆ.

Chikkaballapur News: ಬಾಗೇಪಲ್ಲಿ:ಕೃಷಿ ಇಲಾಖೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಕಡತಗಳ ತನಿಖೆ

ಕೃಷಿ ಇಲಾಖೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಕಡತಗಳ ತನಿಖೆ

ತಾಲ್ಲೂಕಿನ ಕೃಷಿ ಇಲಾಖೆಯಲ್ಲಿ ಅಟಲ್ ಫಸಲ್ ಭೀಮಾ ಯೋಜನೆ, ಕೃಷಿ ಯಂತ್ರೋಪಕರಗಳ, ಕೃಷಿ ಹೊಂಡ, ಅವಾರ್ಡ್ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳ ಹೆಸರಿ ನಲ್ಲಿ ಖಾಸಗಿ ವ್ಯಕ್ತಿಗಳು ಪಡೆದಿರುವುದು, ಕಾಮಗಾರಿಗಳು ಆಗದೇ, ಕೆಲಸಗಳು ಮಾಡದೇ ಕೋಟ್ಯಾಂತರ ರೂಪಾಯಿಗಳು ಅವ್ಯವಹಾರ ಆಗಿರುವುದು ತಾಲ್ಲೂಕಿನ ಕೆಲ ರೈತರು ಚಿಕ್ಕಬಳ್ಳಾಪುರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು

Chikkaballapur News: ಕನ್ನಡ ಭವನ ಲೋಕಾರ್ಪಣೆ, ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಒಲಿದು ಬರದ ಶುಭ ಮುಹೂರ್ತ

ಮೊದಲ ಬಾರಿ ಇಲಾಖೆ ಸಚಿವರ ನಿರೀಕ್ಷೆಯಲ್ಲಿ ಮುಂದೂಡಿಕೆ

ಬರೋಬ್ಬರಿ 13 ವರ್ಷಗಳ ಹಿಂದೆ ಡಾ.ಕೆ.ಸುಧಾಕರ್ ಶಾಸಕರಾಗಿ ವೀರಪ್ಪ ಮೊಯಿಲಿ ಕೇಂದ್ರ ಮಂತ್ರಿಗಳಾಗಿದ್ದ ಅವಧಿಯಲ್ಲಿ ಪ್ರಾರಂಭವಾದ ರಂಗಮಂದಿರದ ಕಾಮಗಾರಿ ಅಂದು ಕೊಂಡಂತೆ ಆಗಿದಿದ್ದರೆ ಜನಬಳಕೆಗೆ ಬಂದು ದಶಕವೇ ಕಳೆಯುತ್ತಿತ್ತು.ಆದರೆ ರಾಜಕೀಯ ಇಚ್ಛಾಶಕ್ತಿ, ಅನುದಾನದ ಕೊರತೆ ಜನಪ್ರತಿನಿಧಿಗಳ ಪ್ರತಿಷ್ಟೆಗಳ ನಡುವೆ ಸದ್ಯ ಕಾಮಗಾರಿ ಪೂರ್ಣ ಗೊಂಡು ಲೋಕಾರ್ಪಣೆಗೆ ಸಜ್ಜಾಗುವ ವೇಳೆಗೆ ಭರ್ತಿ 12 ವರ್ಷಗಳು ಕಳೆದಿವೆ ಎಂದರೆ ಆಶ್ಚರ್ಯ ವಾಗುತ್ತದೆ

Chikkaballapur News: ಕಸಾಪ ಕಾರಣವಾಗಿ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಕೈಂಕರ್ಯ ನಡೆಯುವಂತಾಗಿದೆ : ಕಸಾಪ ಅಧ್ಯಕ್ಷ ಡಾ.ಚಿನ್ನಕೈವಾರಮಯ್ಯ

ಕಸಾಪ ಕಾರಣವಾಗಿ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಕೈಂಕರ್ಯ

ವಿಶೇಷವಾಗಿ ಯುವ ಜನತೆ ಕನ್ನಡ ಭಾಷೆ,ಕಲೆ, ಸಾಹಿತ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸ ಬೇಕಾಗುತ್ತದೆ. ಇದೇ ದಿನ ವರನಟ ಡಾ.ರಾಜ್ ಪುಣ್ಯಸ್ಮರಣೆ ಮಾಡುವ ಅವಕಾಶ ಸಿಕ್ಕಿರುವುದು ಸಂತೋಷದಾಯಕ. ತಮ್ಮ ನಟನೆಯ ಮೂಲಕ ವಿಶೇಷ ವ್ಯಕ್ತಿತ್ವ ರೂಪಿಸಿಕೊಂಡಿದ್ದಲ್ಲದೆ ಗೋಕಾಕ್ ಚಳುವಳಿ ಮೂಲಕ ಕನ್ನಡದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಪ್ರತಿ ಹುಣ್ಣುಮೆ ಕಾರ್ಯಕ್ರಮ ದಲ್ಲಿ ಕನ್ನಡ ಗೀತೆಗಳ ಗಾಯನ, ಕವಿತೆಗಳ ವಾಚನ ವಿಶೇಷ ಅನುಭವ ತಂದು ಕೊಡುತ್ತದೆ

Chikkaballapur News: ಯುವಜನತೆ ಸಮಾಜ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು: ವಾಲ್ಮೀಕಿ ನಾಯಕ ಸಮುದಾಯದ ಮುಖಂಡ ಅರ್ ಅಶೋಕ್ ಕುಮಾರ್ ಕರೆ

ಯುವಜನತೆ ಸಮಾಜಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು

ಕಾದಲವೇಣಿ ಗ್ರಾಮದ ಅಂಬೇಡ್ಕರ್ ಭವನದ ಅವರಣದಲ್ಲಿ ಲಯನ್ ಸಂಸ್ಥೆ, ಲಯನ್ ಸೇವಾ ಟ್ರಸ್ಟ್, ಜೈ ಭೀಮ್ ಜೇನುಗೂಡು ಗೆಳೆಯರ ಬಳಗ, ಲಯನ್ ರಕ್ತ ನಿಧಿ ಯಲಹಂಕ ಇವರ ಸಂಯಕ್ತ ಆಶ್ರಯ ದಲ್ಲಿ ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಮೌಲ್ಯಮಾಪನ ಕುಲಸಚಿವರಾಗಿ ಲೋಕನಾಥ್ ಅಧಿಕಾರ ಸ್ವೀಕಾರ

ಮೌಲ್ಯಮಾಪನ ಕುಲಸಚಿವರಾಗಿ ಲೋಕನಾಥ್ ಅಧಿಕಾರ ಸ್ವೀಕಾರ

ಉನ್ನತ ಶಿಕ್ಷಣ ಇಲಾಖೆ ಇವರ ನೇಮಕಮಾಡಿ ಆದೇಶ ಹೊರಡಿಸಿದ್ದು ಕುಲಪತಿ ನಿರಂಜನವಾನಳ್ಳಿ ಅವರ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದು ಪರೀಕ್ಷಾಂಗ, ಮೌಲ್ಯಮಾಪನ ಎರಡೂ ಕೂಡ ಮಹತ್ವದ ವಿಭಾಗಳು. ಇದರ ಮುಖವಾಣಿಯಾಗಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ವಿದ್ಯಾರ್ಥಿಗಳ ಭವಿಷ್ಯ ಕಾಪಾಡುವ ಮೂಲಕ ವಿಶ್ವವಿದ್ಯಾಲಯದ ಘನತೆ ಕಾಪಾಡಿ ಎಂದು ಕುಪತಿಗಳು ಹಾರೈಸಿದ್ದಾರೆ

ಜಿಲ್ಲಾಧಿಕಾರಿಗಳ ವಿರುದ್ಧ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಪ್ರತಿಭಟನೆ

ಸರಕಾರಿ ಸೌಲಭ್ಯಗಳ ದುರ್ಬಳಕೆ ಆಗದಂತೆ ನೋಡಿಕೊಳ್ಳುವ ಕೆಲಸ ಮಾಡಬೇಕಿದೆ

ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯು ಪರಿಶಿಷ್ಟಜಾತಿ ಪಂಗಡದ ದೌರ್ಜನ್ಯ ಪ್ರಕರಣ ಗಳಲ್ಲಿ ನೊಂದ ಸಂತ್ರಸ್ಥರಿಗೆ ಪರಿಹಾರ ನೀಡುವ ಕೆಲಸ ಮಾಡುತ್ತದೆ. ಸರಕಾರಿ ಸೌಲಭ್ಯಗಳ ದುರ್ಬಳಕೆ ಆಗ ದಂತೆ ನೋಡಿಕೊಳ್ಳುವ ಕೆಲಸವನ್ನು ಸದಸ್ಯರಾಗಿ ನಾವು ಮಾಡಬೇಕಿದೆ. ಇದಕ್ಕೆ ಆಧ್ಯಕ್ಷರಾಗಿ ಜಿಲ್ಲಾಧಿಕಾರಿ, ಸದಸ್ಯ ಕಾರ್ಯದರ್ಶಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿದ್ದು, ಕಾರ್ಯದರ್ಶಿಯಾಗಿ ಜಿಲ್ಲಾ ಸಮಾಜಕಲ್ಯಾಣಾಧಿ ಕಾರಿಗಳಾಗಿರುತ್ತಾರೆ

Chikkaballapur News: ತಂದೆಯನ್ನು ಮನೆಯಿಂದ ಹೊರ ಹಾಕಿದ ಮಕ್ಕಳು : ತಹಶೀಲ್ದಾರ್ ಮೂಲಕ ಮತ್ತೆ ಮನೆಗೆ ಸೇರ್ಪಡೆ

ತಂದೆಯನ್ನು ಮನೆಯಿಂದ ಹೊರಹಾಕಿದ ಮಕ್ಕಳು

ಚಿಕ್ಕಬಳ್ಳಾಪುರ ನಗರ ನಕ್ಕಲಕುಂಟೆ ಪುರಸಭಾ ನಿವೇಶನ ಸಂಖ್ಯೆ-119ರಲ್ಲಿ ನಿರ್ಮಿಸಲಾಗಿರುವ ಮನೆ ಯನ್ನು ವೆಂಕಟರೋಣಪ್ಪ ಬಿನ್ ಲೇಟ್ ವೆಂಕಟಸ್ವಾಮಿ ಅವರ ಮಕ್ಕಳಾದ ಸುಬ್ಬಲಕ್ಷ್ಮಮ್ಮ ಕೋಂ ವೆಂಕಟೇಶಪ್ಪ ಇವರು ಆಕ್ರಮಿಸಿಕೊಂಡು ನನ್ನನ್ನು ಮನೆಯಿಂದ ಹೊರಹಾಕಿದ್ದಾರೆ. ನನಗೆ ವಯಸ್ಸಾ ಗಿರುವುದರಿಂದ ದುಡಿಯಲು ಅಶಕ್ತನಾಗಿದ್ದೇನೆ.

UGCET: ಏ.16ರಿಂದ ಯುಜಿ ಸಿ.ಇ.ಟಿ ಪರೀಕ್ಷೆಗೆ ಜಿಲ್ಲಾಡಳಿತ ಸಕಲ ಸಿದ್ದತೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಜಿಲ್ಲೆಯಲ್ಲಿ 15 ಪರೀಕ್ಷಾ ಕೇಂದ್ರಗಳು : 7302 ವಿದ್ಯಾರ್ಥಿಗಳು ನೋಂದಣಿ

ಏ.16 ಮತ್ತು ಏ.17ರಂದು ನಡೆಯಲಿರುವ ಯು ಜಿ ಸಿ ಇ ಟಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಾವುದೇ ಲೋಪಗಳಿಲ್ಲದೆ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ನಡೆದ “ಯುಜಿ ಸಿಇಟಿ” ಪರೀಕ್ಷೆಗಳ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದರು.

ಮಹಿಳಾ ಸಬಲೀಕರಣಕ್ಕೆ ಮನರೇಗಾ ಸಹಕಾರಿ : ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅರ್ಚನಾ

ಮಹಿಳಾ ಸಬಲೀಕರಣಕ್ಕೆ ಮನರೇಗಾ ಸಹಕಾರಿ

ಗ್ರಾಮೀಣ ಪ್ರದೇಶದ ಮಹಿಳೆಯರ ಜೀವನ ಮಟ್ಟ ಸುಧಾರಣೆಗೆ ಮತ್ತು ಅವರ ಕುಟುಂಬಕ್ಕೆ ಆರ್ಥಿಕ ವಾಗಿ ಶಕ್ತಿ ನೀಡಲು ಮನರೇಗಾ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಸ್ವ ಸಹಾಯ ಸಂಘಗಳಲ್ಲಿ ವಿಶೇಷ ಮತ್ತು ರಿಯಾಯಿತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮಹಿಳೆಯರು ಇದರ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಂಬಲರಾಗಬೇಕು

Chikkaballapur News: ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ: ಶಾಸಕ ಸುಬ್ಬಾರೆಡ್ಡಿ ತಾಕೀತು

ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ

ತಾಲೂಕಿನ 3 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಲಘುಮದ್ದೇಪಲ್ಲಿ, ಮೂಗಚಿನ್ನೇಪಲ್ಲಿ ಮತ್ತು ಬೈರೇ ಪಲ್ಲಿಗಳಲ್ಲಿ ನೀರಿನ ಸಮಸ್ಯೆ ಇದ್ದು, ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಹಾಗಾಗಿ ಈ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದು, ಯಾವುದೇ ರೀತಿ ಸಮಸ್ಯೆ ಎದುರಾಗದಂತೆ ನಿರಂತರ ನಿಗಾ ಇಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕರು ತಿಳಿಸಿದರು.

Chikkaballapur News: ಕುರಿಗಳ ಹಿಂಡಿನ ಮೇಲೆ ಬೀದಿನಾಯಿಗಳ ದಾಳಿ: 3 ಸಾವು 14 ಕುರಿಗೆ ಗಾಯ

ಕುರಿಗಳ ಹಿಂಡಿನ ಮೇಲೆ ಬೀದಿನಾಯಿಗಳ ದಾಳಿ: 3 ಸಾವು 14 ಕುರಿಗೆ ಗಾಯ

ಬುಧವಾರ ಬೆಳಗಿನ ಜಾವಾ ಸುಮಾರು ೬ ಗಂಟೆ ಸಮಯದಲ್ಲಿ ಕುರಿಗಳನ್ನು ಮಾಲೀಕ ಮನೆಯಿಂದ ಗ್ರಾಮದ ಪಕ್ಕದ ಕೊಟ್ಟಿಗೆಗೆ ಸ್ಥಳಾಂತರ ಮಾಡಿದ್ದು, ತನ್ನ ದಿನನಿತ್ಯ ಕೆಲಸದಲ್ಲಿ ತೊಡಗಿರುತ್ತಾನೆ. ಆದರೆ ೧೦ ಗಂಟೆಗೆ ಕುರಿಗಳನ್ನು ಹೊಲದಲ್ಲಿ ಮೇಯಿಸಲು ಕರೆದುಕೊಂಡು ಹೋಗಲು ಹೋಗಿ ನೋಡಿದರೆ ಸುಮಾರು ೫,೬, ಬೀದಿ ನಾಯಿಗಳು ಕೊಟ್ಟಿಗೆಯಲ್ಲಿ ಕುರಿಗಳನ್ನು ಅಟ್ಟಾಡಿಸುತ್ತಿದ್ದುವು

Chikkaballapur News: ಖಾತಾ ಆಂದೋಲನ: 211 ಫಲಾನುಭವಿಗಳಿಗೆ ವಿತರಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ

211 ಫಲಾನುಭವಿಗಳಿಗೆ ವಿತರಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ

ಶಾಸಕ ಕೆ.ಎಚ್ ಪುಟ್ಟಸ್ವಾಮಿ ಗೌಡ ಅವರು 211 ಫಲಾನುಭವಿಗಳಿಗೆ ಖಾತಾಗಳನ್ನು ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಾಲಕ್ಕೆ ಖಾತಾಗಳು ಕೈ ಸೇರಬೇಕೆಂಬ ಉದ್ದೇಶದಿಂದ ಪ್ರತಿ ವಾರ ಖಾತಾ ಅದಾಲತ್ ಕಾರ್ಯಕ್ರಮ ವನ್ನು ನಗರಸಭೆ ಆವರಣದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ

ಮಾಜಿ ಸಚಿವ ಕೆ.ಎಂ.ಕೃಷ್ಣಾರೆಡ್ಡಿ ಅವರ 13ನೇ ವರ್ಷದ ಪುಣ್ಯಸ್ಮರಣೆ: ಹಣ್ಣು ಹಂಪಲು ವಿತರಣೆ

ಮಾಜಿ ಸಚಿವ ಕೆ.ಎಂ.ಕೃಷ್ಣಾರೆಡ್ಡಿ ಅವರ 13ನೇ ವರ್ಷದ ಪುಣ್ಯಸ್ಮರಣೆ

ಮಾನವತಾವಾದಿ, ರಾಜಕೀಯ ಮುತ್ಸದಿ,ಮಾಜಿ ಸಮಾಜ ಕಲ್ಯಾಣ ಸಚಿವ ಕೆ.ಎಂ ಕೃಷ್ಣಾರೆಡ್ಡಿ ತಮ್ಮ ಅಧಿಕಾರಾವಾಧಿಯಲ್ಲಿ ಆನೇಕ ಜನಪರ ಕಾರ್ಯಗಳನ್ನು ಮಾಡಿ ಜನರ ಮೆಚ್ಚುಗೆಗೆ ಪಾತ್ರ ರಾಗಿದ್ದರು. ಅಂತಹ ಮಹಾನುಭಾವರ ಆದರ್ಶಗುಣಗಳನ್ನು ಇಂದಿನ ಯುವಕರು ಮೈಗೂಡಿ ಸಿಕೊಂಡು ಅವರ ಹಾದಿಯಲ್ಲಿ ನಡೆಯಬೇಕು.ಅವರು ಕಂಡ ಕನಸುಗಳನ್ನು ಈಡೇರಿಸಲು ಶ್ರಮಿಸಬೇಕು.

Chkkaballapur Crime: ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು, ಮೃತದೇಹ ಪತ್ತೆ

ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು, ಮೃತ ದೇಹ ಪತ್ತೆ

ಬಾಲಕ ತನ್ನ ನೆಂಟರ ಜೊತೆಯೊಂದಿಗೆ ಮುರುಗ ಮಲ್ಲ ದರ್ಗಾ ಗೆ ಬಂದಿದ್ದು ಮಧ್ಯಾಹ್ನದ ವೇಳೆ ಕಲ್ಯಾಣಿಯಲ್ಲಿ ಸ್ನಾನ ಮಾಡಕ್ಕೆ ಹೋಗಿ ಕಾಲು ಜಾರಿ ಬಿದ್ದಿದ್ದಾನೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬಾಲಕನ ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ

Chikkaballapur News: ವೈದ್ಯಕೀಯ ವೃತ್ತಿ ಉದಾತ್ತ ವೃತ್ತಿ, ನಿಸ್ವಾರ್ಥ ವೃತ್ತಿ ಪರತೆ ಬೆಳೆಸಿಕೊಳ್ಳಿ: ಡೀನ್ ಡಾ.ಎಂ.ಎಲ್.ಮಂಜುನಾಥ್

ವೈದ್ಯಕೀಯ ವೃತ್ತಿ ಉದಾತ್ತ ವೃತ್ತಿ, ನಿಸ್ವಾರ್ಥ ವೃತ್ತಿ ಪರತೆ ಬೆಳೆಸಿಕೊಳ್ಳಿ

ವೈದ್ಯಕೀಯ ವೃತ್ತಿ ಉದಾತ್ತವೃತ್ತಿಯಾಗಿದ್ದು, ವೈದ್ಯರಾದ ನಂತರ ನಿಸ್ವಾರ್ಥ ವೃತ್ತಿ ಪರತೆ ಬೆಳೆಸಿ ಕೊಳ್ಳಿ, ಉತ್ತಮ ವೈದ್ಯ ರೋಗಿಗೆ ಚಿಕಿತ್ಸೆ ನೀಡುತ್ತಾನೆ. ಸಾಮಾನ್ಯ ವೈದ್ಯ ಕಾಯಿಲೆಗೆ ಮಾತ್ರ ಚಿಕಿತ್ಸೆ ನೀಡುತ್ತಾನೆ. ರೋಗಿಯನ್ನು ಮಾನವೀಯ ಗುಣಗಳಿಂದ ಕಾಣಬೇಕು. ವೈದ್ಯರು ಹಣದ ಬಗ್ಗೆ ಯೋಚಿಸದೆ ಪ್ರಾಮಾಣಿ ಕತೆಯಿಂದ ಸೇವೆ ಸಲ್ಲಿಸಿದರೆ ವೃತ್ತಿಯಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದರೆ ಹಣವೇ ತಮ್ಮನ್ನು ಹಿಂಬಾ ಲಿಸಿಕೊಂಡು ಬರುತ್ತದೆ ಎಂದರು

MBBS Student Death: ಎಂಬಿಬಿಎಸ್ ಪ್ರಥಮ ವರ್ಷದ ವೈದ್ಯ ವಿದ್ಯಾರ್ಥಿ ನೇಣಿಗೆ ಶರಣು

ಎಂಬಿಬಿಎಸ್ ಪ್ರಥಮ ವರ್ಷದ ವೈದ್ಯ ವಿದ್ಯಾರ್ಥಿ ನೇಣಿಗೆ ಶರಣು

ಮೃತ ದುರ್ದೈವಿ ಹೇಮಂತ್ ತಾಲೂಕಿನ ಮುದ್ದೇನಹಳ್ಳಿಯ ಶ್ರೀಸತ್ಯಸಾಯಿ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ಓದುತ್ತಿದ್ದ ಎನ್ನಲಾಗಿದೆ. ಈತನ ತಾಯಿ ವೈದ್ಯರಾಗಿದ್ದು ಅವರ ಜೊತೆ ವಿಯಟ್ನಾಂ ದೇಶದ ಪ್ರವಾಸ ಮುಗಿಸಿ ಮನೆಗೆ ಬುಧವಾರವೇ ಮನೆಗೆ  ಬಂದಿದ್ದ ಎನ್ನಲಾಗಿದೆ.

Chikkaballapur News: ಜಾತಿ ಗಣತಿ ಮಾಡುವಾಗ ಮೂಲ ಜಾತಿ ಹೊಲೆಯ ಎಂದು ನಮೂದಿಸಲು ಮನವಿ

ಜಾತಿ ಗಣತಿ ಮಾಡುವಾಗ ಮೂಲ ಜಾತಿ ಹೊಲೆಯ ಎಂದು ನಮೂದಿಸಲು ಮನವಿ

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗಾಗಿ ಹೊಸದಾಗಿ ಸಮೀಕ್ಷೆ ನಡೆಸಲು ಗಣತಿದಾರರು ಮನೆ ಮನೆಗೂ ಬಂದಾಗ ಆದಿಕರ್ನಾಟಕ ಅಥವಾ ಆದಿ ದ್ರಾವಿಡ ಜತೆಯಲ್ಲಿ ತಮ್ಮ ಮೂಲ ಜಾತಿ ಹೊಲೆಯ ಅಥವಾ ಮಾದಿಗ ಎಂಬುದನ್ನು ಕಡ್ಡಾಯವಾಗಿ ಬರೆಸಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಡಂಪಲ್ಲಿ ಶ್ರೀನಿವಾಸ್ ತಿಳಿಸಿದರು

ಇದೊಂದು ದಶಕಗಳ ಸಮಸ್ಯೆಯಾಗಿದ್ದು ಶೀಘ್ರವೇ ಪರಿಹಾರ ಕಾಣಿಸುವಂತೆ ಇಂಜನಿಯರ್ ಉಮಾಶಂಕರ್ ಅವರಿಗೆ ಶಾಸಕ ಪ್ರದೀಪ್ ಈಶ್ವರ್ ಸೂಚನೆ

ಕೆಳಗಿನ ತೋಟದ ರಾಜಕಾಲುವೆ ಸಮಸ್ಯೆ ಪರಿಹಾರಕ್ಕೆ 2 ಕೋಟಿ ಬೇಕಿದೆ

ಏನಾದರೂ ಹೇಳಿದರೆ ಕನೆಕ್ಟ್ ಮಾಡಲು ಆಗುತ್ತಿಲ್ಲ, ಮಿಸ್ಸಿಂಗ್ ಲಿಂಕ್ ಇದೆ ಅಂತಾರೆ.ಇದು ಬಹಳ ಚಾಲೆಂಜಿಂಗ್ ಇದನ್ನು ಪರಿಹಾರ ಮಾಡಲು ತುಂಬಾ ವರ್ಷಗಳು ಬೇಕು. ಆದರೂ ಕೂಡ ಇಲ್ಲಿನ ಯುಜಿಡಿ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹರಿಸಿ ಚರಂಡಿಯ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲು ನಗರಸಭೆ ಆಡಳಿತಕ್ಕೆ ಶಾಸಕರು ತಾಕೀತು ಮಾಡಿ ದರು.

Chikkaballapur News: ಒತ್ತುವರಿ ತೆರವು ವೇಳೆ ಅಧಿಕಾರಿಗಳ ಹಾಗೂ ಒತ್ತುವರಿದಾರರ ನಡುವೆ ಮಾತಿನ ಜಟಾಪಟಿ

ನಾವು ತೆರವು ಮಾಡಕ್ಕೆ ಬಂದಿದ್ದೇವೆ ತೆರವು ಮಾಡಿ ಹೋಗ್ತೀವಿ

ನಮ್ಮ ಬಳಿ ಕೋರ್ಟ್ ಆದೇಶವಿದೆ. ನಮಗೆ ನೋಟಿಸ್ ಕೊಟ್ಟಿಲ್ಲ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದಾಗ ಅಧಿಕಾರಿ ಗಳು ತಮ್ಮ ಬಳಿ ಇರುವ ದಾಖಲೆಗಳನ್ನು ತೆಗೆದುಕೊಂಡು ಬನ್ನಿ! ನ್ಯಾಯಾಲಯದ ಆದೇಶ ವನ್ನು ತೆಗೆದುಕೊಂಡು ಬನ್ನಿ ಎಂದು ಹೇಳಿದರೆ ಅವರು ಯಾವುದೇ ರೀತಿಯ ಸೂಕ್ತ ದಾಖಲೆಗಳು ಸಲ್ಲಿಸದೆ ಇರುವ ಕಾರಣಕ್ಕೆ ಒತ್ತುವರಿ ತೆರವುಗೊಳಿಸಲು ಹೋಗಿದ್ದ ಅಧಿಕಾರಿಗಳು ಕೊನೆಗೆ ಒತ್ತುವರಿ ಯನ್ನು ತೆರವು ಮಾಡಿ ವಾಪಸ್ ಆದರು!

Chikkaballapur News: ಬಾಲ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಜಿಲ್ಲಾಡಳಿತ ಸದಾ ಕಾರ್ಯೋನ್ಮುಖ: ಜಿಲ್ಲಾಧಿಕಾರಿ ಪಿ,ಎನ್ ರವೀಂದ್ರ

ಬಾಲಕಾರ್ಮಿಕರ ರಕ್ಷಣೆ ಮಾಡುವ ದಾಳಿಗಳಿಗೆ ಇಲಾಖೆ ವಾಹನ ಬಳಸಿಕೊಳ್ಳಬಹುದು

ಜಿಲ್ಲೆಯಲ್ಲಿ ಬಾಲಕಾರ್ಮಿಕರು ಹಾಗೂ ಕಿಶೋರಕಾರ್ಮಿಕರ  ಪತ್ತೆ ಹಾಗೂ ಪುನರ್ವಸತಿ ಕಾರ್ಯವು ನಿರಂತರವಾಗಿ ನಡೆಯುತ್ತಿದ್ದು, ದಿ:01-04-2024 ರಿಂದ ದಿ:31-03-2025 ರವರೆಗೆ ಜಿಲ್ಲೆಯಾದ್ಯಂತ ಹಲವು ತಪಾಸಣೆಗಳನ್ನು ಕೈಗೊಳ್ಳಲಾಗಿದ್ದು, ಅದರಲ್ಲಿ 39 ಮಕ್ಕಳನ್ನು ಪತ್ತೆ ಹಚ್ಚಲಾಗಿರುತ್ತದೆ. ಸದರಿ ಮಕ್ಕಳಿಗೆ ಸರ್ಕಾರದ ವತಿಯಿಂದ ಪುನರ್ವಸತಿ ಕಲ್ಪಿಸಲಾಗಿರುತ್ತದೆ

Dr G Parameshwar: ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಶಾಂತಿಯುತ ಜಿಲ್ಲೆ ಎಂಬ ಹಿರಿಮೆಗೆ ಪಾತ್ರವಾಗಿದೆ : ಗೃಹಸಚಿವ ಡಾ.ಜಿ.ಪರಮೇಶ್ವರ ಶ್ಲಾಘನೆ

ರಾಜ್ಯದಲ್ಲಿ ಚಿಕ್ಕಬಳ್ಳಾಪುರ ಶಾಂತಿಯುತ ಜಿಲ್ಲೆ ಎಂಬ ಹಿರಿಮೆಗೆ ಪಾತ್ರವಾಗಿದೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿರುವಂತೆ, ಜಿಲ್ಲೆಯಲ್ಲಿಯೂ ಚೆನ್ನಾಗಿದೆ. ಜಿಲ್ಲಾ ಪೊಲೀಸ್ ಇಲಾಖೆಯು ಕಾಲಕಾಲಕ್ಕೆ ಕೈಗೊಂಡ ಕಟ್ಟುನಿಟ್ಟಿನ ಕ್ರಮ ಗಳಿಂದಾಗಿ ಇದು ಸಾಧ್ಯವಾಗಿದೆ ಎಂಬುದು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನೆಯಿಂದ ಮನವರಿಕೆ ಯಾಗಿದ್ದು ಜಿಲ್ಲಾ ಪೊಲೀಸ್ ಇಲಾಖೆಯನ್ನು ಶ್ಲಾಘಿಸುತ್ತೇನೆ

Chikkaballapur News: ಒತ್ತಡ ಮುಕ್ತರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ

ಕ್ರಿಯಾಶೀಲವಾಗಿ ಕೆಲಸ ಮಾಡಲು ಕ್ರೀಡೆ ಸಹಕಾರಿ: ಸಂಸದ ಡಾ.ಕೆ.ಸುಧಾಕರ್

ಸರ್ಕಾರಗಳು ಜಾರಿ ಮಾಡುವ ಯೋಜನೆ, ಕಾರ್ಯಕ್ರಮ, ಆದೇಶಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ವಿವಿಧ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಹೊಣೆಗಾರಿಕೆ ಸರ್ಕಾರಿ ನೌಕರರ ಮೇಲಿದೆ. ಸರ್ಕಾರಿ ನೌಕರರು ಒತ್ತಡ ಮುಕ್ತರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದರೆ ಮಾತ್ರ ಸರ್ಕಾರಗಳ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನ ಗೊಂಡು ಸಾಫಲ್ಯ ಕಾಣುತ್ತವೆ.

Chikkaballapur News: ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರಿ ಚೇತನಾ ಅಭಿಯಾನ

ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಸ್ತ್ರೀ ಚೇತನ ಅಭಿಯಾನ

ಬರಗಾಲವಿದೆ ಎಂದು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಕೆಲಸ ಸಿಗದು ಎಂಬ ಭಯ ಬೇಡ, ಏ.೧ ರಿಂದ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಈ ಯೋಜನೆಯಡಿ ಅನೇಕ ಕಾಮಗಾರಿ ಕೈಗೊಳ್ಳುವ ಅಗತ್ಯವಿದೆ. ಗ್ರಾಮೀಣ ಪ್ರದೇಶಗಳ ಕಡು ಬಡವರಿಗೂ ಯೋಜನೆಯ ಸದುಪಯೋಗ ದೊರಕುವಂತಾಗಬೇಕು.