ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿಕ್ಕಬಳ್ಳಾಪುರ

Karnataka Madara Mahasabha: ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ನೇಮಕ : ಪಟ್ರೇನಹಳ್ಳಿ ಕೃಷ್ಣಪ್ಪ ಹೇಳಿಕೆ

ಕರ್ನಾಟಕ ಮಾದರ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ನೇಮಕ

ಕರ್ನಾಟಕ ಮಾದಾರ ಮಹಾಸಭಾದ ತಾಲೂಕು ಅಧ್ಯಕ್ಷರಾಗಿ ಕೊತ್ತನೂರು ಮುನಿಯಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಪಟ್ರೇನಹಳ್ಳಿ ಕೃಷ್ಣಪ್ಪ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಕರ್ನಾಟಕ ಮಾದರ ಮಹಾಸಭಾದ ತಾಲೂಕು ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿ ಮಾತನಾಡಿದರು

Chikkaballapur News: ಹೆಣ್ಣು ಮಕ್ಕಳಿಗೆ ಅವಕಾಶ ನೀಡಿದಾಗಲೇ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ : ಟಿ.ಜಿ.ಶಿವಶಂಕರೇಗೌಡ

ಹೆಣ್ಣು ಮಕ್ಕಳಿಗೆ ಅವಕಾಶ ನೀಡಿದಾಗಲೇ ಮುಖ್ಯವಾಹಿನಿಗೆ ಬರಲು ಸಾಧ್ಯ

ಹೆಣ್ಣು ಮಕ್ಕಳಿಗೆ ಅವಕಾಶಗಳನ್ನು ನೀಡಿದಾಗ ಅವರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಧ್ಯ ವಾಗಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಪದವಿ, ಸಿಇಟಿ ಸೇರಿದಂತೆ ವಿವಿಧ ಹಂತದ ಕೋರ್ಸುಗಳಲ್ಲಿ ಹೆಣ್ಣುಮಕ್ಕಳೇ ಮೊದಲ ರ‍್ಯಾಂಕ್‌ಗಳನ್ನು ಪಡೆಯು ತ್ತಿರುವುದು ಒಳ್ಳೆಯ ಬೆಳವಣಿಗೆ

Chimul Election: ಚಿಮುಲ್ ಚುನಾವಣೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ, ಭರಣಿ ವೆಂಕಟೇಶ್ ಅವರ ಖಾಲಿ ಡಬ್ಬಾ ಹೇಳಿಕೆಗೆ ತೀವ್ರ ಖಂಡನೆ: ಕ್ಷಮೆ ಕೋರಲು ಆಗ್ರಹ

ಚಿಮುಲ್ ಚುನಾವಣೆ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಆಕ್ರೋಶ

ಚುನಾವಣೆಯಲ್ಲಿ ನನ್ನ ಸೋಲಿಗೆ ನಾನೇ ಕಾರಣ. ಚುನಾವಣಾ ಪೂರ್ವ ತಯಾರಿಗೆ ಸಮಯದ ಅಭಾವ ವಿತ್ತು. ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿ ಇದು ನನ್ನ ಮೊದಲ ಅನುಭವ. ಗೋಪಾಲಕರ ಸೇವೆ ಮಾಡುವ ಉದ್ದೇಶದಿಂದ ಸ್ಪರ್ಧಿಸಿ ಆತುರದ ನಿರ್ಧಾರದ ಕಾರಣ ಸೋಲು ಕಂಡೆ. ಇನ್ನೂ ಗೆದ್ದ ಸಂತೋಷದಲ್ಲಿ ಭರಣಿ ವೆಂಕಟೇಶ್ ಅವರು ನನ್ನ ಹಿಂದೆ ಇದ್ದವರು ಖಾಲಿ ಡಬ್ಬಾಗಳು ಎಂದು ಹೇಳಿರುವುದು ಘನತೆಗೆ ತಕ್ಕದಲ್ಲ.ನಾವು ಖಾಲಿ ಡಬ್ಬಾಗಳೆ ಆಗಿರಲಿ.

ಬಂಗಾರಕ್ಕಾಗಿ ಹೆಲಿಕಾಪ್ಟರ್ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ದರ ಏರಿಕೆ ನಿರೀಕ್ಷೆ.

ಬಂಗಾರಕ್ಕಾಗಿ ಹೆಲಿಕಾಪ್ಟರ್ ಸರ್ವೆ

ಕರ್ನಾಟಕದಲ್ಲಿ ಒಂದು ಕಾಲಕ್ಕೆ ಕೋಲಾರದ ಚಿನ್ನದ ಗಣಿ ಖ್ಯಾತಿ ಪಡೆದಿತ್ತು. ನಂತರ ಈ ಸಾಲಿಗೆ ಹಟ್ಟಿ ಚಿನ್ನದ ಗಣಿ ಸೇರ್ಪಡೆಯಾಗಿ ನಿನ್ನೆ ಮೊನ್ನೆಯವರೆಗ ಚಿನ್ನವನ್ನು ಇಲ್ಲಿಂದ ಪಡೆಯಲಾಗುತ್ತಿತ್ತು. ಆದರೆ ಸುಮಾರು ಒಂದುವರೆ ದಶಕಗಳ ಹಿಂದಯೇ ಕೋಲಾರದ ಚಿನ್ನದ ಗಣಿ ಮುಚ್ಚಲ್ಪಟ್ಟಿದ್ದು ಪ್ರಸ್ತುತ ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಿರುವುದರಿಂದ ಕೆ.ಜಿ.ಎಫ್ ಗಣಿಯನ್ನು ಪುನಾರಂಭ ಮಾಡಲು ಕೇಂದ್ರ ಸರ್ಕಾರ ಮರು ಚಿಂತನೆ ನಡೆಸುತ್ತಿರುವ ಹೊತ್ತಿನಲ್ಲಿ ಯೇ, ಮತ್ತೊಂದು ಚಿನ್ನದ ನಿಕ್ಷೇಪ ಗುಡಿಬಂಡೆಯ  ಸಮೀಪ ಇರುವ ಬಗ್ಗೆ ಸೆರ್ವೆ ಕಾರ್ಯದಲ್ಲಿ ಬೆಳಕಿಗೆ ಬಂದಿದೆ

Chikkaballapur News: ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ನಂದಿಗಿರಿ ಪ್ರದಕ್ಷಿಣೆ : ಭಕ್ತಿಭಾವದಿಂದ ಪಾಲ್ಗೊಂಡ ಸಾವಿರಾರು ಭಕ್ತರು

ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆದ ನಂದಿಗಿರಿ ಪ್ರದಕ್ಷಿಣೆ

ಗಿರಿ ಪ್ರದಕ್ಷಿಣೆಗೆ ಜಿಲ್ಲೆಯ ಭಜನಾ ತಂಡಗಳೊಟ್ಟಿಗೆ ಬೆಂಗಳೂರು ಗ್ರಾಮಾಂತರದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಘಟನೆಗಳು ಕೂಡ ಸಕ್ರಿಯವಾಗಿ ಭಾಗವಹಿಸಿದ್ದವು. 14 ಕಿ.ಮೀ. ಸುತ್ತಳತೆಯ ಪಾದ ಯಾತ್ರೆಯು 5 ಗಂಟೆಗೆ ಭೋಗನಂದೀಶ್ವರ ದೇವಾಲಯದಿಂದ ಪ್ರಾರಂಭವಾಗಿ ರಾತ್ರಿ 9.30ಕ್ಕೆ ಮುಕ್ತಾಯ ವಾಯಿತು. ನಂದಿ ಗಿರಿಧಾಮ ಸುತ್ತ ನಡೆದ ಪ್ರದಕ್ಷಿಣೆಯಲ್ಲಿ ಸಾವಿರಾರು ಭಕ್ತರು, ಮುಖಂಡರು ಭೋಗ ನಂದೀಶ್ವರ ಸ್ವಾಮಿಯ ಆರಾಧನೆಯೊಂದಿಗೆ ಗಿರಿಧಾಮಕ್ಕೆ ಪ್ರದಕ್ಷಿಣೆ ಬಂದರು.

ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಬೇಡಿ: ಡಿ ವೈ ಎಸ್ ಪಿ ಮುರುಳಿಧರ್

ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಬೇಡಿ: ಡಿ ವೈ ಎಸ್ ಪಿ ಮುರುಳಿಧರ್

ಚಿಂತಾಮಣಿ ನಗರ ಭಾಗದಲ್ಲಿರುವ ಟ್ರಾಫಿಕ್ ಸಿಗ್ನಲ್ಸ್ ಅನ್ನು ಬಹಳಷ್ಟು ಮಂದಿ ಪಾಲನೆ ಮಾಡುತ್ತಿಲ್ಲ ಜೀಬ್ರಾ ಕ್ರಾಸಿಂಗ್ ಬಿಟ್ಟು ಮುಂದೆ ವಾಹನಗಳನ್ನು ನಿಲ್ಲಿಸುತ್ತಾರೆ, ಪೊಲೀಸರು ಟ್ರಾಫಿಕ್ ಸಿಗ್ನಲ್ ನಲ್ಲಿ ನಿಂತಿದ್ದಾರೆ ಮಾತ್ರ ಕಾನೂನನ್ನು ಪಾಲನೆ ಮಾಡುತ್ತಾರೆ,ಪೊಲೀಸರ ಭಯ ಬಿಟ್ಟು ತಾವು ಖುದ್ದಾಗಿ ಕಾನೂನನ್ನು ಪಾಲನೆ ಮಾಡಬೇಕಾಗಿದೆ

Veteran actor Ramakrishna: ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ಸಾಹಿತಿ ಮತ್ತು ಸಾಹಿತ್ಯವನ್ನು ಕಡೆಗಣಿಸುತ್ತಿರುವುದು ಸರಿಯಲ್ಲ: ಹಿರಿಯ ನಟ ರಾಮಕೃಷ್ಣ ಬೇಸರ

ಚಿತ್ರರಂಗದಲ್ಲಿ ಸಾಹಿತಿ, ಸಾಹಿತ್ಯವನ್ನು ಕಡೆಗಣಿಸುತ್ತಿರುವುದು ಸರಿಯಲ್ಲ

ನಾನು ಸಾಹಿತ್ಯವನ್ನಾಗಲಿ ಪುಸ್ತಕಗಳನ್ನಾಗಲಿ ಅರೆದು ಕುಡಿದವನಲ್ಲ. 40 ವರ್ಷಗಳ ವೃತ್ತಿ ಜೀವನದಲ್ಲಿ ಸಿಕ್ಕಿರುವ ಅತ್ಯುತ್ತಮ ಬರಹಗಾರರಾದ ಕೆಲವರಿಂದ ಅದು ತರಾಸು ಅವರಿಂದ ತ್ರಿವೇಣಿ ಆಗಿರಬಹುದು ಅನಕೃ ಅವರಿಂದ ಬೀಚಿಯವರಾಗಿರಬಹುದು. ಇವರೆಲ್ಲರಿಂದ ಎರಕ ಹೊಯ್ದಂತಿದ್ದ ಪುಟ್ಟಣ್ಣ ಕಣಗಾಲ್ ಇರಬಹುದು.ಇವರ ಬಳಿ ಸಂಭಾಷಣೆಯನ್ನು ಒಪ್ಪಿಸಿ, ಒಪ್ಪಿಸಿ ಕೆನ್ನೆಗೆ ಏಟು ತಿಂದು ಇಷ್ಟರ ಮಟ್ಟಿಗಿನ ಭಾಷಾ ಶುದ್ಧತೆ ನಮಗೆ ಬಂದಿದೆ

Chimul Election: ಬಿಳಿ ತಲೆಯ ಖಾಲಿ ಡಬ್ಬಗಳು ಸೋತಿದ್ದು, ಕೂಲಿ ಪಡೆದ ತೃಪ್ತಿಯಿದೆ: ಭರಣಿ ವೆಂಕಟೇಶ್

ಬಿಳಿ ತಲೆಯ ಖಾಲಿ ಡಬ್ಬಗಳು ಸೋತಿದ್ದು, ಕೂಲಿ ಪಡೆದ ತೃಪ್ತಿಯಿದೆ

ನನ್ನ ಗೆಲುವಿನಲ್ಲಿ ಪಕ್ಷಾತೀತವಾಗಿ ಅನೇಕರು ಶ್ರಮಿಸಿದ್ದಾರೆ. ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ( Former MLA KP Bachegowda) ಆರೋಗ್ಯ ಸರಿಯಿಲ್ಲದಿದ್ದರೂ ಕೂಡ ನನ್ನ ಪರವಾಗಿ ಒಂದು ದಿನ ಬಹಿರಂಗ ಪ್ರಚಾರಕ್ಕೆ ಬಂದಿದ್ದಲ್ಲದೆ ಮನೆಯಲ್ಲಿದ್ದುಕೊಂಡೇ ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ನುಗಿತಹಳ್ಳಿ ರವಿ 10 ದಿನಗಳ ಕಾಲ ನನ್ನ  ಜತೆಗಿದ್ದು ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ.

Chikkaballapur News: ವಿದ್ಯಾಭ್ಯಾಸದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸಮಯ ಪಾಲನೆ, ಶಿಸ್ತು ಮುಖ್ಯ: ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಶಿಧರ್

ವಿದ್ಯಾಭ್ಯಾಸದ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸಮಯ ಪಾಲನೆ ಶಿಸ್ತು ಮುಖ್ಯ

ವಿದ್ಯಾಭ್ಯಾಸದ ಅವಧಿಯಲ್ಲಿ ಓದಿನತ್ತ ತೋರಿಸುವ ಉದಾಸೀನತೆ ಭವಿಷ್ಯದಲ್ಲಿ ಭಾರೀ ತೊಂದರೆಗಳಿಗೆ ಕಾರಣವಾಗಬಹುದು. ಈ ದಿನಗಳಲ್ಲಿ ಒಂದು ನಿಮಿಷವೂ ಬಹಳ ಅಮೂಲ್ಯ.ಪರೀಕ್ಷೆಗಳಿಗೆ ಪೂರ್ವ ಸಿದ್ಧತೆ ಅತ್ಯಂತ ಅಗತ್ಯ. ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಗಳು ಕಡಿಮೆಯಾಗುತ್ತಿರುವು ದರಿಂದ ವಿದ್ಯಾರ್ಥಿಗಳು ಇನ್ನಷ್ಟು ಕಷ್ಟಪಟ್ಟು ಓದಬೇಕು ಎಂದು ಸಲಹೆ ನೀಡಿದರು. ಜನ್ಮ ನೀಡಿದ ತಂದೆ-ತಾಯಿ, ವಿದ್ಯೆ ಕಲಿಸಿದ ಗುರುಗಳು ಹಾಗೂ ಕಷ್ಟಕಾಲದಲ್ಲಿ ನೆರವಾದ ಸ್ನೇಹಿತರನ್ನು ಯಾವತ್ತೂ ಮರೆಯಬಾರದು

Bagepally News: ಹಿಂದೂಗಳು ಸಂಘಟಿತರಾದಾಗ ಅಖಂಡ ಭಾರತ ನಿರ್ಮಾಣ ಸಾಧ್ಯ: ಎಂ.ಅರ್.ಜಯರಾಂ

ಹಿಂದೂಗಳು ಸಂಘಟಿತರಾದಾಗ ಅಖಂಡ ಭಾರತ ನಿರ್ಮಾಣ ಸಾಧ್ಯ

ಜಾಗೃತಿ ಕೊರತೆಯಿಂದ ಹಿಂದೂ ಧರ್ಮದ ರಕ್ಷಣೆಗೆ ಹಿನ್ನಡೆಯಾಗಿದ್ದು, ಪ್ರತಿ ಮನೆಯಲ್ಲಿಯೂ ಹಿಂದೂಗಳು ಸಂಘಟಿತರಾಗಬೇಕು. ಪ್ರತಿ ಗ್ರಾಮ, ಹೃದಯಕ್ಕೂ ಹಿಂದೂಗಳ ಸಂದೇಶ ಸಾರುವ ಮೂಲ ಉದ್ದೇಶದಿಂದ ಹಿಂದೂ ಸಮ್ಮೇಳನದ ಕಾರ್ಯಕ್ರಮ ಆಯೋಜಿಸಿದ್ದು, ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂಬ ಸಂಕಲ್ಪದೊಂದಿಗೆ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಸಂಘಟಿತರಾಗಬೇಕು

Congress into power in Chimul: ಕುಬೇರರ ಚುನಾವಣೆಗೆ ಸವಾಲು ಹಾಕುವಂತೆ ನಡೆದ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ

ಚಿಮುಲ್‌: ಪ್ರಥಮ ಚುನಾವಣೆಯಲ್ಲಿಯೇ ಗೆದ್ದು ಬೀಗಿದ ʼಕೈʼ ಅಭ್ಯರ್ಥಿಗಳು

ಚಿಮುಲ್ ಚುನಾವಣೆಯಲ್ಲಿ ಉಡುಗೊರೆಗಳದ್ದೆ ದೊಡ್ಡ ಸದ್ದು ಮಾಡಿದ್ದು ಸುಳ್ಳಲ್ಲ. ಚುನಾವಣೆ ಪ್ರಕಟ ವಾದ ಬೆನ್ನಲ್ಲೇ ಡೆಲಿಗೇಟ್ಸ್ಗಳ ಮನೆ ಬಾಗಿಲಿಗೆ ಅಭ್ಯರ್ಥಿಗಳು ಎಡತಾಕುತ್ತಿದ್ದ ದೃಶ್ಯಗಳು ಸಾಮಾನ್ಯ ವಾಗಿದ್ದವು. ಸಾಲದ್ದಕ್ಕೆ ದೇವರ ಪ್ರಸಾದ, ಆಣೆ ಪ್ರಮಾಣ, ಹಣ ಉಡುಗೊರೆಗಳ ಭರಾಟೆ ಜೋರಾಗಿತ್ತು.

MP Dr. K. Sudhakar on Central Budget 2026: ಆರ್ಥಿಕ ಶಿಸ್ತು, ಸಾಮಾಜಿಕ ಸಮಾನತೆ ಮತ್ತು ಅಭಿವೃದ್ಧಿಯ ಸಮತೋಲನದ ಅಪರೂಪದ ಬಜೆಟ್‌

ಸಮತೋಲನದ ಅಪರೂಪದ ಬಜೆಟ್‌

ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುವುದು, ನಾಗರಿಕರ ನಿರೀಕ್ಷೆಗಳನ್ನು ಪೂರೈಸುವುದು ಮತ್ತು ಎಲ್ಲರಿಗೂ ಸಂಪನ್ಮೂಲ ಸಿಗುವಂತೆ ಮಾಡುವ ಮೂರು ಕರ್ತವ್ಯಗಳನ್ನು ಇಲ್ಲಿ ಹೇಳಲಾಗಿದೆ. ಜವಾಬ್ದಾರಿಯುತ ಮತ್ತು ಸುಧಾರಣೆಯ ಆಡಳಿತದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬದ್ಧತೆಯನ್ನು ಈ ಬಜೆಟ್‌ ಪ್ರದರ್ಶಿಸುತ್ತದೆ

Shidlaghatta News: ಹಿರಿಯ ನಾಯಕರ ಅನುಭವವೇ ನಮ್ಮ ಶಕ್ತಿ: ಪುಟ್ಟು ಆಂಜಿನಪ್ಪ

ಹಿರಿಯ ನಾಯಕರ ಅನುಭವವೇ ನಮ್ಮ ಶಕ್ತಿ: ಪುಟ್ಟು ಆಂಜಿನಪ್ಪ

ಪುಟ್ಟು ಆಂಜಿನಪ್ಪ ಬಣ ಹಾಗೂ ರಾಜೀವ್ ಗೌಡರ ಬಣ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲ ಹುಟ್ಟುಹಾಕಲು ಕೆಲವು ಗುಂಪುಗಳು ಯತ್ನಿಸುತ್ತಿವೆ ಎಂದು ಆರೋಪಿಸಿದರು. ಪಕ್ಷದಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಬಲವರ್ಧನೆಗಾಗಿ ಕೆಲಸ ಮಾಡುತ್ತಿದ್ದಾರೆ

Vishwa Hindu Parishad: ಜಾತಿ, ಪಕ್ಷ ಭೇದವಿಲ್ಲದೇ ಹಿಂದೂಗಳು ಸಂಘಟಿತರಾಗಬೇಕಾಗಿದೆ: ಹಿಂದೂ ಸಮಾಜೋತ್ಸವದಲ್ಲಿ ಮೊಳಗಿದ ಹಿಂದೂ ಘೋಷ

ಜಾತಿ, ಪಕ್ಷ ಭೇದವಿಲ್ಲದೇ ಹಿಂದೂಗಳು ಸಂಘಟಿತರಾಗಬೇಕಾಗಿದೆ

ಅಂದಿನಿಂದ ಇಲ್ಲಿಯವರೆಗೂ ಸಂಘಟನೆ ಹಿಂದೂಗಳ ಸಂಘಟನೆ ಮಾಡುವಲ್ಲಿ ನಿರತವಾಗಿದೆ. ಹಿಂದೂ ಗಳಲ್ಲಿ ಸಾಕಷ್ಟು ಜಾತಿಗಳಿವೆ, ಯಾರಾದರೂ ಯಾವ ದೇವರನ್ನು ಬೇಕಾದರೂ ಪೂಜೆ ಮಾಡಬಹುದು. ನಮ್ಮ ಹಿಂದೂ ಧರ್ಮ ಭವ್ಯ ಪರಂಪರೆಯನ್ನು ಹೊಂದಿದೆ. ಹಿಂದೂ ಸಂಸ್ಕೃತಿ, ಸಮಾಜವನ್ನು ಇಂದು ನಾವೆಲ್ಲರೂ ಒಗ್ಗಟ್ಟಿನಿಂದ ಗತವೈಭವಕ್ಕೆ ತರಲು ಶ್ರಮಿಸಬೇಕು.

ಫೆಬ್ರವರಿ 6,7ಕ್ಕೆ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಮನವಿ

ಫೆ.6,7ಕ್ಕೆ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ಕ್ರೀಡಾಕೂಟ/ಸಾಂಸ್ಕೃತಿಕ ಸ್ಪರ್ಧೆಗಳು ನಡೆಯ ಲಿದ್ದು ಅಥ್ಲೆಟಿಕ್ಸ್ ಕ್ರೀಡೆಯಲ್ಲಿ: 35 ಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಿಗೆ 100 ಮೀ, 200 ಮೀ, 400 ಮೀ, ೮೦೦ ಮೀ, ಡಿಸ್ಕಸ್ ಥ್ರೋ, ಗುಂಡುಎಸೆತ, ಭರ್ಜಿ ಎಸೆತ, ಉದ್ದಜಿಗಿತ, ಎತ್ತರ ಜಿಗಿತ, 100 ಮೀ ಹರ್ಡಲ್ಸ್, 100 ಮೀ ರಿಲೇ ಹಾಗೂ 400 ಮೀ ರಿಲೇ ಇರಲಿದೆ

ಫೆ.1ರಂದು ಚಿಮುಲ್ ಚುನಾವಣೆ 13 ಸ್ಥಾನಕ್ಕೆ 28 ಅಭ್ಯರ್ಥಿಗಳ ಸ್ಪರ್ಧೆ : ಜೋರಾಗಿದೆ ಸೋಲು ಗೆಲುವಿನ ಲೆಕ್ಕಾಚಾರ

ಫೆ.1ರಂದು ಚಿಮುಲ್ ಚುನಾವಣೆ 13 ಸ್ಥಾನಕ್ಕೆ 28 ಅಭ್ಯರ್ಥಿಗಳ ಸ್ಪರ್ಧೆ

ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿ ನಡೆಯುತ್ತಿರುವ ಚಿಕ್ಕಬಳ್ಳಾಪುರ ಕೋಲಾರ ಹಾಲು ಒಕ್ಕೂಟದ ಪ್ರಥಮ ಚುನಾವಣೆಯಲ್ಲಿ 13 ನಿರ್ದೇಶಕ ಸ್ಥಾನಗಳಿಗೆ 28 ಮಂದಿ ಸ್ಪರ್ಧೆ ಮಾಡಿದ್ದು ಪಕ್ಷಗಳ ಚಿನ್ಹೆ ಇಲ್ಲದಿದ್ದರೂ ಮಾಡಿದ್ದು ಎಲ್ಲರಿಗೂ ರಾಜಕೀಯ ಪಕ್ಷ ಮತ್ತು ಮುಖಂಡರ ಅಭಯ ಇದ್ದೇ ಇದೆ.

Mahatma Gandhi's martyrdom day: ಮಹಾತ್ಮಾಗಾಂಧೀಜಿ ಹುತಾತ್ಮರಾದ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಧೀಶರಿಂದ ಸ್ವಚ್ಛತಾ ಅಭಿಯಾನ

ಜಿಲ್ಲಾ ನ್ಯಾಯಾಧೀಶರಿಂದ ಸ್ವಚ್ಛತಾ ಅಭಿಯಾನ

ಜಿಲ್ಲೆಯಲ್ಲಿ ಸಾಮಾಜಿಕ ಪಿಡುಗುಗಳ ನಿಯಂತ್ರಣದ, ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಲಾಗಿದೆ. ಜಿಲ್ಲೆಯಲ್ಲಿ ವಿವಿಧೆಡೆ ನಡೆಯುವ ಜಾತ್ರೆಗಳು ಸೇರಿದಂತೆ ಜನಸಂದಣಿ ಸೇರುವ ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ತಂಡ, ಜಿಲ್ಲಾಡಳಿತದ ಅಧಿಕಾರಿಗಳ ತಂಡ ಭೇಟಿ ನೀಡಿ ಅರಿವು ಮೂಡಿಸುವ ಕಾರ್ಯಕ್ಕೆ ಈಗಾಗಲೆ ಚಾಲನೆ ನೀಡಲಾಗಿದೆ.

Rajiv Gowda granted conditional bail :ಬೆದರಿಕೆ ಪ್ರಕರಣದ ಬೆನ್ನಲ್ಲೇ ರಾಜೀವ್ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು

ರಾಜೀವ್ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು

ರಾಜೀವ್ ಗೌಡ ಪರವಾಗಿ ಹಿರಿಯ ವಕೀಲರಾದ ವಿವೇಕ್ ಸುಬ್ಬಾರೆಡ್ಡಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಆರೋಪ ರಾಜಕೀಯ ಪ್ರೇರಿತವಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಆರೋಪಿ ಸಿದ್ಧನಿದ್ದಾರೆ ಎಂದು ಅವರು ನ್ಯಾಯಾಲಯದ ಗಮನ ಸೆಳೆದರು. ಸದರಿ ಪ್ರಕರಣದಲ್ಲಿ ಯಾವುದೇ ನೇರ ಸಾಕ್ಷ್ಯಗಳಿಲ್ಲ, ಹೀಗಾಗಿ ಜಾಮೀನು ನಿರಾಕರಿಸುವ ಅಗತ್ಯವಿಲ್ಲ

Chimul Election: ಚಿಮುಲ್ ಚುನಾವಣೆ: ಗುಡಿಬಂಡೆ ಕ್ಷೇತ್ರದಲ್ಲಿ ಹಣಾಹಣಿ, ಮತದಾರರಿಗೆ ಆಮಿಷದ ಸುರಿಮಳೆ

ಚಿಮುಲ್ ಚುನಾವಣೆ: ಗುಡಿಬಂಡೆ ಕ್ಷೇತ್ರದಲ್ಲಿ ಹಣಾಹಣಿ

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಆದಿನಾರಾಯಣರೆಡ್ಡಿ ಹಾಗೂ ಎನ್.ಡಿ.ಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಯಾಗಿ ಬೈರಾರೆಡ್ಡಿ ಕಣದಲ್ಲಿದ್ದಾರೆ. ವಿಶೇಷವೆಂದರೆ, ಕಳೆದ ಐದು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲೂ ಇವರಿಬ್ಬರೇ ಪರಸ್ಪರ ಎದುರಾಳಿಗಳಾಗಿದ್ದರು. ಅಂದು ಆದಿನಾರಾಯಣರೆಡ್ಡಿ ಸಿಪಿಎಂನಿಂದ ಸ್ಪರ್ಧಿಸಿದ್ದರೆ, ಬೈರಾರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

MP Dr. K. Sudhakar: 22 ಸಾವಿರ ಮನೆಗಳನ್ನು ಕಟ್ಟಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಸಂಸದ ಸುಧಾಕರ್

22 ಸಾವಿರ ಮನೆಗಳ ಕಟ್ಟಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ

ನಾನು ಮುಂದಿನ ಅವಧಿಯಲ್ಲಿ 22 ಸಾವಿರ ಸೈಟುಗಳನ್ನು ಅಭಿವೃದ್ದಿಪಡಿಸಿ ಬಡವರಿಗೆ ನೀಡುವು ದಲ್ಲದೆ ಮನೆಗಳನ್ನೂ ಕಟ್ಟಿಸಿಕೊಡುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜ್ಯಕಾರಣಕ್ಕೆ ವಾಪಸಾಗುವುದು ಖಚಿತ.ಅಂತೆಯೇ ಮನೆಗಳನ್ನು ಕಟ್ಟಿಸಿಕೊಡುವುದೂ ಖಚಿತವೇ ಆಗಿದೆ.ದೇಶದಲ್ಲಿ ಇನ್ನೂ 20 ವರ್ಷ ಎನ್‌ಡಿಎ ಅಧಿಕಾರದಲ್ಲಿ ಇರಲಿದೆ.ಕಾಂಗ್ರೆಸ್ ಒಂದು ಪಕ್ಷವಾಗಿ ಎಲ್ಲಿರಲಿದೆ ಎಂಬುದನ್ನು ಆ ಪಕ್ಷದ ಮುಖಂಡರನ್ನು ಕೇಳಿ ಎಂದು ವ್ಯಂಗ್ಯವಾಡಿದರು.

ಫೆ.1ರ ಮಾಘ ಹುಣ್ಣಿಮೆಯಂದು ನಂದಿಗಿರಿ ಪ್ರದಕ್ಷಿಣೆ: ಎಲ್ಲರೂ ಭಾಗವಹಿಸಲು ಸಂಸದ ಡಾ.ಕೆ.ಸುಧಾಕರ್‌ ಆಹ್ವಾನ

ಫೆ.1ರ ಮಾಘ ಹುಣ್ಣಿಮೆಯಂದು ನಂದಿಗಿರಿ ಪ್ರದಕ್ಷಿಣೆ

Dr K Sudhakar: ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಬಳಿ ಫೆಬ್ರವರಿ 1ರಂದು ನಂದಿಗಿರಿ ಪ್ರದಕ್ಷಿಣೆ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 4 ಗಂಟೆಗೆ ನಂದಿಗಿರಿಧಾಮದ ಸಮೀಪದ ಶ್ರೀ ಭೋಗನಂದೀಶ್ವರ ದೇವಾಲಯದಿಂದ ನಂದಿ ಗಿರಿ ಪ್ರದಕ್ಷಿಣೆ ಆರಂಭವಾಗಲಿದೆ ಎಂದು ಸಂಸದ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

ಹಿಂದೂ ಸಮಾಜದ ಸಂಸ್ಕೃತಿ ಹಾಗೂ ಪರಂಪರೆಯ ಜಾಗೃತಿಗಾಗಿ : ಫೆ.೧ರಂದು ಶಿಡ್ಲಘಟ್ಟದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ

ಫೆ.೧ರಂದು ಶಿಡ್ಲಘಟ್ಟದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ

ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷ ಹಾಗೂ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕರಾದ ಪ್ರಕಾಶ್ ಮಾತನಾಡಿ, ಇದು ಯಾವುದೇ ರಾಜಕೀಯ ಪಕ್ಷ ಅಥವಾ ನಿರ್ದಿಷ್ಟ ಜಾತಿಗೆ ಸೀಮಿತವಾದ ಕಾರ್ಯಕ್ರಮವಲ್ಲ. ಸನಾತನ ಧರ್ಮದ ಉಳಿವು, ಧಾರ್ಮಿಕ ಮೌಲ್ಯ ಗಳ ಸಂರಕ್ಷಣೆ ಹಾಗೂ ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬ ಹಿಂದೂ ಬಾಂಧವರ ಮೇಲಿದೆ.

ವಸತಿ ನಿಲಯಗಳಲ್ಲಿನ ಮಕ್ಕಳ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ ವಹಿಸುವುದು ಅತ್ಯಗತ್ಯ : ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಆರ್. ಪ್ರಕಾಶ್ ತಾಕೀತು

ವಸತಿ ನಿಲಯಗಳಲ್ಲಿನ ಮಕ್ಕಳ ಸುರಕ್ಷತೆಗೆ ಕ್ರಮ ವಹಿಸುವುದು ಅತ್ಯಗತ್ಯ

ಸರಕಾರಿ ಅಥವಾ ಖಾಸಗಿ ವಸತಿ ನಿಲಯಗಳಲ್ಲಿನ ಮಕ್ಕಳ ಸುರಕ್ಷತೆಗೆ ಸಂಬಂಧ ಪಟ್ಟಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮವಹಿಸುವುದು ಅತ್ಯಗತ್ಯ ತಪ್ಪಿದ್ದಲ್ಲಿ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಮಕ್ಕಳ ಪೊಲೀಸ್ ಕಲ್ಯಾಣಾಧಿಕಾರಿ ಆರ್. ಪ್ರಕಾಶ್ ವಸತಿ ನಿಲಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ವಿವೇಕವಾಣಿ ಇಂದಿಗೂ ಜೀವಂತವಾಗಿದೆ : ಪಿಡಿಜೆ ರಾಮಲಿಂಗೇಗೌಡ

ವಿವೇಕವಾಣಿ ಇಂದಿಗೂ ಜೀವಂತವಾಗಿದೆ : ಪಿಡಿಜೆ ರಾಮಲಿಂಗೇಗೌಡ

ಸ್ವಾಮಿ ವಿವೇಕಾನಂದರ ಆದರ್ಶಗಳು ಧೈರ್ಯ, ಆತ್ಮವಿಶ್ವಾಸ,ಶಿಸ್ತು,ಸೇವಾಭಾವನೆ ಹಾಗೂ ರಾಷ್ಟ್ರಭಕ್ತಿ ಯನ್ನು ಯುವಜನರಲ್ಲಿ ಬೆಳೆಸುತ್ತವೆ ಅವರು ಶಿಕ್ಷಣವನ್ನು ಕೇವಲ ಉದ್ಯೋಗ ಪಡೆ ಯುವ ಸಾಧನವಾಗಿ ನೋಡಲಿಲ್ಲ ಮನುಷ್ಯನಲ್ಲಿನ ಶ್ರೇಷ್ಠತೆಯನ್ನು ಹೊರತರುವ ಪ್ರಕ್ರಿಯೆಯೇ ನಿಜವಾದ ಶಿಕ್ಷಣ ಎಂದು ನಂಬಿದ್ದರು.ಆದ್ದರಿಂದ ಯುವಜನರು ಆಧುನಿಕ ಜ್ಞಾನ, ತಾಂತ್ರಿಕ ಕೌಶಲ್ಯಗಳ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು

Loading...