ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿಕ್ಕಬಳ್ಳಾಪುರ

MLA K H Puttaswamy Gowda: ಅಭಿವೃದ್ಧಿ ಕಾರ್ಯ ಮೆಚ್ಚಿ ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ: ಕೆ.ಎಚ್.ಪುಟ್ಟಸ್ವಾಮಿಗೌಡ

ಅಭಿವೃದ್ಧಿ ಕಾರ್ಯ ಮೆಚ್ಚಿ ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಸುಮಾರು 600 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಶುದ್ಧ ಕುಡಿಯುವ ನೀರಿನ ಘಟಕಗಳು, ಚರಂಡಿ ಅಭಿವೃದ್ಧಿ, ಹೈಮಾಸ್ಟ್ ದೀಪಗಳ ಅಳವಡಿಕೆ, ಅಂತರ್ಜಲ ಮಟ್ಟ ಹೆಚ್ಚಿಸಲು ಚೆಕ್‌ಡ್ಯಾಂಗಳ ನಿರ್ಮಾಣ, ಅಗತ್ಯವಿರುವ ಕಡೆ ಶಾಲಾ ಕೊಠಡಿಗಳು ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಮತ್ತು ಬಸ್ ಪ್ರಯಾಣಿಕರ ತಂಗುದಾಣ ಸೇರಿದಂತೆ ಹಲವು ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ

Chikkaballapur News: ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಚೇತನ್

ಜಂತುಹುಳು ನಿವಾರಣಾ ಮಾತ್ರೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಿ

ವೈಯಕ್ತಿಕ ನೈರ್ಮಲ್ಯದ ಕೊರತೆ, ಅಶುದ್ಧ ನೀರು ಹಾಗೂ ಕಲುಷಿತ ಆಹಾರದಿಂದ ಜಂತುಹುಳು ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಲಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಯಲ್ಲಿ ಅಂಗನವಾಡಿ, ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಮಕ್ಕಳಿಗೆ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಮಾತ್ರೆ ವಿತರಿಸುವುದರೊಂದಿಗೆ ಜಂತುಹುಳು ಸೋಂಕಿನ ಕುರಿತು ಅರಿವು ಮೂಡಿಸಲಾಗುತ್ತಿದೆ

ಪದವೀಧರರ ಕ್ಷೇತ್ರ ಗೆಲುವಿಗೆ ಬಿಜೆಪಿ ರಣತಂತ್ರ; ಬರ, ರೈತರ ಸಮಸ್ಯೆ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ

ಕೆ.ಎಂ.ಸುರೇಶ್‌ರನ್ನು ಭಾರಿ ಅಂತರದಿಂದ ಗೆಲ್ಲಿಸಿ: ವಿಜಯೇಂದ್ರ ಕರೆ

Chikkaballapur News: ಚಿಕ್ಕಬಳ್ಳಾಪುರ ನಗರದ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿದ್ದಾರೆ.

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ; ಓಡುತ್ತಿದ್ದಾಗಲೇ ಕುಸಿದು ಬಿದ್ದು ಕ್ರೀಡಾಪಟು ಸಾವು

ನಂದಿ ಹಿಲ್ಸ್ ಮ್ಯಾರಥಾನ್‌ನಲ್ಲಿ ಓಡುತ್ತಿದ್ದಾಗಲೇ ಕ್ರೀಡಾಪಟು ಸಾವು

ಭಾನುವಾರ ನಡೆದ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ಸುಮಾರು 4,500 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪೈಕಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಖಾಸಗಿ ಕಂಪನಿಯೊಂದರ ಉದ್ಯೋಗಿ ಕೂಡ 21 ಕಿ.ಮೀ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದರು. ಅರ್ಧ ಭಾಗದಷ್ಟು ಓಟವನ್ನು ಪೂರ್ಣಗೊಳಿಸಿದ್ದ ವೇಳೆ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು, ಮೃತಪಟ್ಟಿದ್ದಾರೆ.

K H Muniyappa: ಕೆ.ಹೆಚ್.ಮುನಿಯಪ್ಪ ಸಚಿವ ಸ್ಥಾನ ತ್ಯಜಿಸಿ ಪುತ್ರಿಗೆ ಅವಕಾಶ ನೀಡುತ್ತಾರೆಂಬುದು ಕೇವಲ ಊಹಾಪೋಹ : ಪಟ್ರೇನಹಳ್ಳಿ ಕೃಷ್ಣ

ಹಿರಿಯ ನಾಯಕನ ಅನುಭವ ರಾಜ್ಯಕ್ಕೆ ಅಗತ್ಯ

ಕೋಲಾರ ಲೋಕಸಭಾ ಕ್ಷೇತ್ರವನ್ನು ಸತತ ಏಳು ಬಾರಿ ಪ್ರತಿನಿಧಿಸಿರುವ ಮುನಿಯಪ್ಪ ಅವರ ಸುದೀರ್ಘ ರಾಜಕೀಯ ಅನುಭವ ರಾಜ್ಯಕ್ಕೆ ಅಗತ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಅವರ ಅನುಭವ ಮತ್ತು ನಾಯಕತ್ವ ಮುಖ್ಯ ವಾಗಿದ್ದು, ಇದೇ ಕಾರಣಕ್ಕೆ ಸರ್ಕಾರ ಅವರಿಗೆ ಸಚಿವ ಸ್ಥಾನ ನೀಡಿದೆ

‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’ ಘೋಷಣೆ: ಆ.10ರಂದು ಚಿಕ್ಕಬಳ್ಳಾಪುರದಲ್ಲಿ ಜೈಲ್‌ ಭರೋ

ಆ.10ರಂದು ಚಿಕ್ಕಬಳ್ಳಾಪುರದಲ್ಲಿ ಜೈಲ್‌ ಭರೋ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಹಾಗೂ ದುಡಿಯುವ ವರ್ಗದ ಹಿತಾಸಕ್ತಿಗೆ ವಿರುದ್ಧವಾದ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಆರೋಪಿಸಿದರು. ರೈತರ ಭೂಮಿಯನ್ನು ದೇಶೀಯ ಹಾಗೂ ವಿದೇಶಿ ಕಾರ್ಪೊರೇಟ್‌ ಕಂಪನಿಗಳಿಗೆ ಒಪ್ಪಿಸುವ ಪ್ರಯತ್ನ ನಡೆಯುತ್ತಿದ್ದು, ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಸಾಲ ಹಾಗೂ ಬಡತನದಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ

Bidadi Township: ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ರಣಕಹಳೆ; ನಿಖಿಲ್ ನೇತೃತ್ವದಲ್ಲಿ ಪಾದಯಾತ್ರೆ : ಮುಕ್ತ ಮುನಿಯಪ್ಪ

ರೈತರ ಭೂಮಿ ಉಳಿಸಿಕೊಳ್ಳಲು ಆ.9ರಿಂದ ಹೋರಾಟ

ರೈತರ ಭೂಮಿ ಮತ್ತು ಹಕ್ಕುಗಳ ರಕ್ಷಣೆಯ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧವಾಗಿ ಜೆಡಿಎಸ್ ಇದೀಗ ಸರ್ಕಾರದ ವಿರುದ್ಧ ರಾಜಕೀಯ ಸಮರಕ್ಕೆ ಸಜ್ಜಾಗಿದೆ. ಆ.9ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡ ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

Chikkaballapur News: ಎಲ್ಲರನ್ನೂ ಒಳಗೊಂಡ ಸಂಘಟನೆ ಕಟ್ಟಿದಾಗಲೇ ಸಾಮಾಜಿಕ ಬದಲಾವಣೆ ಸಾಧ್ಯ: ಕೋಟಿಗಾನಹಳ್ಳಿ ರಾಮಯ್ಯ

'ದಸಂಸ ಆತ್ಮಾವಲೋಕನ ಮಾಡಿಕೊಳ್ಳದಿದ್ದರೆ ಚಳವಳಿಯ ಭವಿಷ್ಯ ಅಪಾಯ'

ಹುಣಸೀಕೋಟೆ ಹೋರಾಟ ಯಶಸ್ವಿಯಾಗಲು ಎಲ್ಲರನ್ನು ಒಳಗೊಂಡ ಸಂಘಟನೆಯೇ ಕಾರಣ ವಾಗಿತ್ತು. ಅದೇ ಮಾದರಿಯಲ್ಲಿ ಇಂದು ಕೂಡ ಬಹುತ್ವದ ನೆಲೆಗಟ್ಟಿನಲ್ಲಿ ಚಳವಳಿಯನ್ನು ಕಟ್ಟಬೇಕಿದೆ. ಕಣ್ಣಿಗೆ ಕಾಣುವ ಅಸಮಾನತೆಗಿಂತ ಸಮಾಜದೊಳಗಿನ ವಿಭಜನೆ ಮತ್ತು ಬಹಿಷ್ಕಾರ ವೇ ಹೆಚ್ಚು ಅಪಾಯಕಾರಿ. ದಸಂಸದೊಳಗಿನ ಬಹಿಷ್ಕೃತ ಮನೋಭಾವವನ್ನು ಮೊದಲು ನಿವಾರಿಸಬೇಕಿದೆ

ಅಕ್ರಮ ದಂಧೆಗಳ ವಿರುದ್ಧ ಹೋರಾಡಿದ್ದ ಭೂಮಾನಂದ ಬರ್ಬರ ಹತ್ಯೆ ಖಂಡನೆ

ಅಕ್ರಮ ದಂಧೆಗಳ ವಿರುದ್ಧ ಹೋರಾಡಿದ್ದ ಭೂಮಾನಂದ ಬರ್ಬರ ಹತ್ಯೆ ಖಂಡನೆ

ಗಂಗಾಧರ್ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಮತ್ತು ಜಿಲ್ಲೆಯಲ್ಲಿ, ಮರಳು ದಂಧೆ, ಜೂಜಾಟ, ಇಸ್ಪೀಟು ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳ ವಿರುದ್ಧ ಭೂಮಾನಂದ ಅವರು ಬಿಎಸ್ಪಿ ಜಿಲ್ಲಾಧ್ಯಕ್ಷರಾಗಿ ಸಂಘಟಿತ ಹೋರಾಟ ನಡೆಸುತ್ತಿದ್ದರು. ಇದೇ ಕಾರಣಕ್ಕೆ ದಂದೆಕೋರ ಮೇಲ್ಜಾತಿ ಮಂದಿ ಅವರನ್ನು ಗುರಿಯಾಗಿಸಿ ಹಾಡಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಮಟ್ಟದ ಕಿರಿಯರ ಅಥ್ಲೆಟಿಕ್ಸ್‌ಗೆ ಚಿಕ್ಕಬಳ್ಳಾಪುರ ಜಿಲ್ಲಾ ತಂಡ ಆಯ್ಕೆ

ರಾಜ್ಯ ಮಟ್ಟದ ಕಿರಿಯರ ಅಥ್ಲೆಟಿಕ್ಸ್‌ಗೆ ಚಿಕ್ಕಬಳ್ಳಾಪುರ ಜಿಲ್ಲಾ ತಂಡ ಆಯ್ಕೆ

18 ವರ್ಷದ ಬಾಲಕಿಯರ ವಿಭಾಗದಲ್ಲಿ 100 ಮೀಟರ್ ಓಟಕ್ಕೆ ಸುಪ್ರಿತಾ, 200 ಮೀಟರ್ ಓಟಕ್ಕೆ ಭಗವತಿ, 400 ಮೀಟರ್ ಓಟಕ್ಕೆ ಮಧುಶ್ರೀ ಹಾಗೂ ಭಾರ್ಗವಿ, 1000 ಮೀಟರ್ ಓಟಕ್ಕೆ ಮಧುಶ್ರೀ, ಮಿಡ್ಲಿ ರಿಲೇ ಸ್ಪರ್ಧೆಗೆ ಸುಪ್ರಜಾ, ಭಾರ್ಗವಿ, ಮಧುಶ್ರೀ ಹಾಗೂ ರೋಶಿನಿ ಮತ್ತು ಉದ್ದ ಜಿಗಿತಕ್ಕೆ ಸುಪ್ರಜಾ ಆಯ್ಕೆ ಯಾಗಿದ್ದಾರೆ.

Chikkaballapur News: ಕ್ರಿಯಾ ಯೋಜನೆ ವಿಳಂಬಕ್ಕೆ ಅವಕಾಶವಿಲ್ಲ: ಆಗಸ್ಟ್ 8ರೊಳಗೆ ಸಲ್ಲಿಸಿ, ಅಕ್ಟೋಬರ್ 30ರೊಳಗೆ ಕಾಮಗಾರಿ ಪೂರ್ಣಗೊಳಿಸಿ

ಅನುದಾನ ಬಳಕೆಯಲ್ಲಿ ಪಾರದರ್ಶಕತೆಗೆ ಒತ್ತು: ಜಿ. ಪ್ರಭು ಸೂಚನೆ

ಕ್ರಿಯಾ ಯೋಜನೆಗಳಿಗೆ ಜಿಲ್ಲಾ ಮಟ್ಟದಲ್ಲಿ ತ್ವರಿತ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಸೆಪ್ಟೆಂಬರ್ 15ರೊಳಗೆ ಕಾರ್ಯಾದೇಶಗಳನ್ನು ನೀಡಬೇಕು. ಕಾರ್ಯಾದೇಶ ಪಡೆದ ಎಲ್ಲ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ ಅಕ್ಟೋಬರ್ 30ರೊಳಗೆ ಪೂರ್ಣ ಗೊಳಿಸಬೇಕು ಎಂದು ಸೂಚಿಸಿದರು. ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆ.30 ರೊಳಗೆ ಮುಕ್ತಾಯಗೊಳಿಸು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Shidlaghatta News: ಪಾದಚಾರಿಗಳ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕಾರ್ಯಾಚರಣೆ; ಶಿಡ್ಲಘಟ್ಟದಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ ಜಾರಿ

ಫುಟ್ಪಾತ್ ಒತ್ತುವರಿ ತೆರವುಗೊಳಿಸಿ; ಇಲ್ಲದಿದ್ದರೆ ಕಠಿಣ ಕಾನೂನು ಕ್ರಮ

ನಗರದ ಪ್ರಮುಖ ರಸ್ತೆಗಳಲ್ಲಿ ಅಂಗಡಿಗಳು ಹಾಗೂ ವ್ಯಾಪಾರಿಗಳು ಫುಟ್ಪಾತ್‌ಗಳನ್ನು ಅತಿಕ್ರಮಿಸಿ ಕೊಂಡಿರುವ ಪರಿಣಾಮ ಪಾದಚಾರಿಗಳು ರಸ್ತೆಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದ್ದು, ಅಪಘಾತಗಳ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಸಾರ್ವಜನಿಕರಿಗೆ ಸ್ವಯಂ ಪ್ರೇರಿತವಾಗಿ ಒತ್ತುವರಿ ತೆರವುಗೊಳಿಸಲು ಅವಕಾಶ ನೀಡಲಾಗಿದೆ

ಕುರುಕ್ಷೇತ್ರ ಪೌರಾಣಿಕ ನಾಟಕಕ್ಕೆ ಮೆಚ್ಚುಗೆ; ಜಾತ್ರೆಯ ಸಂಭ್ರಮದಲ್ಲಿ ಸಾವಿರಾರು ಭಕ್ತರು ಭಾಗಿ

ಗ್ರಾಮ ದೇವತೆಗಳಿಗೆ ದೀಪಾರಾಧನೆ: ಮುತ್ತುರಾಯನಹಳ್ಳಿಯಲ್ಲಿ ಭಕ್ತಿಸಾಗರ

ದೀಪೋತ್ಸವದ ಅಂಗವಾಗಿ ಮುತ್ತುರಾಯನಸ್ವಾಮಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಹಾಗೂ ಸಪ್ಪಲಮ್ಮ ದೇವಸ್ಥಾನಗಳನ್ನು ತಳಿರು ತೋರಣ ಮತ್ತು ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಹೂಗಳಿಂದ ವಿಶೇಷವಾಗಿ ಸಿಂಗರಿಸಲಾದ ತಂಬಿಟ್ಟಿನ ದೀಪಗಳನ್ನು ಮಹಿಳೆಯರು ಕೊಂಬು, ಕಹಳೆ ಹಾಗೂ ತಮಟೆ ವಾದ್ಯಗಳ ನಾದದೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ದೇವರಿಗೆ ಅರ್ಪಿಸಿದರು.

ಕ್ಷೇತ್ರದ ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಆಡಳಿತ, ಬರ ಪರಿಹಾರ ಸೇರಿ ಅಭಿವೃದ್ಧಿ ಅಜೆಂಡಾ ಮುಂದಿಟ್ಟ ಶಾಸಕ; ಉಸ್ತುವಾರಿ ಸಚಿವರಿಂದ ಬೇಡಿಕೆ ಈಡೇರಿಕೆಯ ಭರವಸೆ

ಕೆಡಿಪಿಯಲ್ಲಿ ಶಾಸಕ ಪ್ರದೀಪ್ ಈಶ್ವರ್ ದಿಟ್ಟ ಧ್ವನಿ

ನಗರ ಹೊರವಲಯದ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಸಭೆ ಯಲ್ಲಿ ಮಾತನಾಡಿದ ಅವರು, ಹಿಂದಿನ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಲಾಗಿದ್ದು, ಹೊಸ ಕಟ್ಟಡವೂ ಅಂತಿಮ ಹಂತದಲ್ಲಿದೆ. ಹೀಗಾಗಿ ಯಾವುದೇ ವಿಳಂಬ ಮಾಡದೆ ಜಿಲ್ಲಾಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೇವೆ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

Chikkaballapur News: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರೀ ವೀರ ಬ್ರಹ್ಮೇಂದ್ರಸ್ವಾಮಿಗಳ ರಥೋತ್ಸವ; ವೇದಘೋಷ, ಹೋಮ-ಹವನ, ಅಭಿಷೇಕಗಳಿಂದ ಕಂಗೊಳಿಸಿದ ಪುಣ್ಯಕ್ಷೇತ್ರ

ಪಾಪಾಗ್ನಿ ಮಠದಲ್ಲಿ 308ನೇ ಆರಾಧನಾ ಮಹೋತ್ಸವದ ದಿವ್ಯ ವೈಭವ

ಬೆಳಗ್ಗೆಯಿಂದಲೇ ಗಣಪತಿ ಪೂಜೆ, ಪುಣ್ಯಾಹ, ದಶಶಾಂತಿ, ರುದ್ರಾಭಿಷೇಕ, ಕಳಶಾರಾಧನೆ, ಮಹಾನ್ಯಾಸ ಪೂರ್ವಕ ಅಭಿಷೇಕ, ಮಹಾಮಂತ್ರ ಹೋಮ, ಧ್ವಜಾರೋಹಣ, ಕಳಶೋತ್ಸವ, ಲಿಂಗ ಪ್ರತಿಷ್ಠಾಪನೆ ಹಾಗೂ ಶ್ರೀ ಶರಭಯೋಗೇಂದ್ರಸ್ವಾಮಿ, ಅನ್ನಪೂರ್ಣದೇವಿ ಮತ್ತು ಕಾಶಿ ವಿಶ್ವನಾಥ ಸ್ವಾಮಿಗಳಿಗೆ ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ವೈದಿಕ ಪೂಜೆಗಳು ಭಕ್ತಿಭಾವದಿಂದ ನೆರವೇರಿದವು.

Chikkaballapur News: ಮಹಿಳೆಯರಿಗೆ ಸೀರೆ, ಮಕ್ಕಳಿಗೆ ಪುಸ್ತಕ ವಿತರಣೆ; ಜನರ ಪ್ರೀತಿಯೇ ನನ್ನ ಶಕ್ತಿ, ನಂಬಿಕೆಗೆ ಚ್ಯುತಿ ಬಾರದಂತೆ ಸೇವೆ ಮಾಡುತ್ತೇನೆ ಎಂದ ಹರೀಶ್ ರೆಡ್ಡಿ

ಸಾಮಾಜಿಕ ಸೇವೆಯ ಮೂಲಕ ಜನ್ಮದಿನ ಆಚರಿಸಿದ ಗೋದಾನಿ ಹರೀಶ್ ಕೆ.ರೆಡ್ಡಿ

ಗುರುವಾರ ಬೆಳಿಗ್ಗೆ ನಗರದಲ್ಲಿರುವ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಹರೀಶ್ ರೆಡ್ಡಿ, ಬಳಿಕ ಅಂಬೇಡ್ಕರ್ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಹಿಳೆಯರಿಗೆ ಸೀರೆ ಹಾಗೂ ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು. ನಂತರ ಮೂಸ್ಟೂರಿನಲ್ಲಿ ಯುವಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೃಹತ್ ಕೇಕ್ ಕತ್ತರಿಸಿ ಯುವಕರೊಂದಿಗೆ ಸಂಭ್ರಮ ಹಂಚಿಕೊಂಡರು

Chikkaballapur News: ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ಹಿಂಪಡೆಯಲು ಆಗ್ರಹಿಸಿ ಯುವ ಕಾಂಗ್ರೆಸ್ ಸ್ಟಿಕರ್ ಪ್ರತಿಭಟನೆ

ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥಗೌಡ ಅವರ ಸೂಚನೆಯಂತೆ ನಡೆದ ಪ್ರತಿಭಟನೆಗೆ ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಹಾಗೂ ಜಿಲ್ಲಾ ಉಸ್ತುವಾರಿ ದಿವ್ಯಾ ಚಾಲನೆ ನೀಡಿದರು. ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ ನೇತೃತ್ವ ದಲ್ಲಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಸ್ಟಿಕರ್ ಅಂಟಿಸಿ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿದರು.

Miss World pageant: ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮಿಂಚಿದ ಚಿಕ್ಕಬಳ್ಳಾಪುರದ ಡಾ.ವಿ.ಮೋನಿಷಾ

ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮಿಂಚಿದ ಚಿಕ್ಕಬಳ್ಳಾಪುರದ ಡಾ.ವಿ.ಮೋನಿಷಾ

ಚಿಂತಾಮಣಿಯ ರಾಯಲ್ ಶಾಲೆ ಹಾಗೂ ಏನಿಗದಲೆ ಜವಾಹರ್ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು, ಉಡುಪಿಯ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆಯುರ್ವೇದ ವೈದ್ಯಕೀಯ ಪದವಿ ಹಾಗೂ ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಆರೋಗ್ಯ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

Chikkaballapur News: ಪಸುಪಲೋಡು ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ನೂತನ ಪದಾಧಿಕಾರಿಗಳ ಆಯ್ಕೆ

ಪಸುಪಲೋಡು ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ನೂತನ ಪದಾಧಿಕಾರಿಗಳ ಆಯ್ಕೆ

ತಾಲೂಕಿನ ಪಸುಪಲೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕರ ಸಾಮಾನ್ಯ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಯ 18 ಸದಸ್ಯರನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ಸದಸ್ಯರು ಸಭೆ ನಡೆಸಿ, ಸುಮತಿ ಅವರನ್ನು ಎಸ್‌ಡಿಎಂಸಿ ಅಧ್ಯಕ್ಷರಾಗಿ ಹಾಗೂ ಜಿ.ವಿ. ವೆಂಕಟೇಶಪ್ಪ ಅವರನ್ನು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದರು.

Chikkaballapur News: ಭಾರತ್ ಜೋಡೋ ಯುವ ಸಂಘಗಳಿಗೆ ನೋಂದಣಿ ಆರಂಭ

ಭಾರತ್ ಜೋಡೋ ಯುವ ಸಂಘಗಳಿಗೆ ನೋಂದಣಿ ಆರಂಭ

16ರಿಂದ 35 ವರ್ಷದೊಳಗಿನ 100 ಯುವ ಸದಸ್ಯರನ್ನು ಒಳಗೊಂಡ ಒಂದು ಸಂಘವನ್ನು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ರಚಿಸಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಪ್ರಾತಿ ನಿಧ್ಯ ದೊರೆಯುವಂತೆ ಸಂಘಗಳನ್ನು ರೂಪಿಸಲು ಸೂಚಿಸಲಾಗಿದೆ. ಪ್ರತಿ ಸಂಘಕ್ಕೆ ರಾಜ್ಯ ಸರ್ಕಾರ ದಿಂದ ವಾರ್ಷಿಕ 10 ಲಕ್ಷ ರೂ. ಅನುದಾನ ನೀಡಲಾಗುತ್ತದೆ.

Chikkaballapur News: ವಿದ್ಯಾರ್ಥಿ ಪರಿಷತ್ ಅಕಾಡೆಮಿಕ್ ಹಾಗೂ ಸೇವಾ ಪರಂಪರೆಯನ್ನು ಎತ್ತಿ ಹಿಡಿಯಲಿ: ಡಾ.ಕೋಡಿ ರಂಗಪ್ಪ

ಡಿಜಿಟಲ್ ಚುನಾವಣೆ: ವಿದ್ಯಾರ್ಥಿ ಪರಿಷತ್ ಪ್ರತಿನಿಧಿಗಳಿಗೆ ಅಭಿನಂದನೆ

ಶಾಲೆ ಹಾಗೂ ಕಾಲೇಜು ಹಂತದಲ್ಲಿನ ಚುನಾವಣೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಗಳನ್ನು ಬೆಳೆಸಲು ಅತ್ಯುತ್ತಮ ವೇದಿಕೆಯಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕುಟುಂಬ, ಶಾಲೆ, ಸಮಾಜ, ಕೈಗಾರಿಕೆ ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ ಸಮರ್ಥ ನಾಯಕತ್ವ ಅಗತ್ಯವಿದ್ದು, ಅದರ ಅಡಿಪಾಯ ವಿದ್ಯಾರ್ಥಿ ಜೀವನದಲ್ಲೇ ನಿರ್ಮಾಣವಾಗಬೇಕು

'ನಾನೇಕೆ ರಾಜೀನಾಮೆ ಕೊಡಲಿ? ಜನರೇ ನನ್ನನ್ನು ಗೆಲ್ಲಿಸಿದ್ದಾರೆ': ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸುಬ್ಬಾರೆಡ್ಡಿ ಬೇಸರ; 'ಹೈಕಮಾಂಡ್ ಕೈಬಿಟ್ಟಿದೆ' ಆರೋಪ

'ನಾನೇಕೆ ರಾಜೀನಾಮೆ ಕೊಡಲಿ? ಜನರೇ ನನ್ನನ್ನು ಗೆಲ್ಲಿಸಿದ್ದಾರೆ'

ಸಚಿವ ಸ್ಥಾನ ಕೈತಪ್ಪಲು ಹೈಕಮಾಂಡ್ ಕಾರಣ ಎಂಬ ಮಾಹಿತಿ ನನಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(Chief Minister D K Shivkumar) ಅವರು ನನಗೆ ಸಚಿವ ಸ್ಥಾನ ನೀಡಲು ಪ್ರಯತ್ನಿಸಿದ್ದರು. ಆದರೆ ಅಂತಿಮ ನಿರ್ಧಾರ ಬೇರೆ ರೀತಿಯಾಯಿತು ಎಂದು ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ನಾಲ್ವರು ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ: ಉಸ್ತುವಾರಿ ಸಚಿವ; ‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ ಸಂದೇಶ

ಸಂಪುಟ ವಿಸ್ತರಣೆ ಹೈಕಮಾಂಡ್ ತೀರ್ಮಾನ; ಎಲ್ಲರೂ ಅದಕ್ಕೆ ಬದ್ಧ: ಬೈರತಿ ಸುರೇಶ್

ಜಿಲ್ಲೆಯ ಬರ ನಿರ್ವಹಣೆಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ರೈತರ ಹಿತಾಸಕ್ತಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಜನರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ಕ್ರಮಗಳನ್ನು ವೈಜ್ಞಾ ನಿಕ ನೆಲೆಗಟ್ಟಿನಲ್ಲಿ ಕೈಗೊಳ್ಳಲಾಗುತ್ತಿದೆ

ಪ್ರತಿ ಕ್ಷೇತ್ರಕ್ಕೆ 1 ಕೋಟಿ ಬಿಡುಗಡೆ; ಬೆಳೆ ಹಾನಿ ಪ್ರದೇಶಗಳಿಗೆ ತ್ವರಿತ ವರದಿ ಸಲ್ಲಿಸಲು ಸಚಿವ ಬಿ.ಎಸ್. ಸುರೇಶ್ ಸೂಚನೆ

ಎಂಟೂ ತಾಲೂಕುಗಳಲ್ಲಿ ತೀವ್ರ ಬರ: ಕುಡಿಯುವ ನೀರು, ರೈತರ ರಕ್ಷಣೆಗೆ ಕ್ರಮ

ಕಳೆದ ಮಾರ್ಚ್ನಿಂದ ಈವರೆಗೆ ಆಗಬೇಕಿದ್ದ ಮಳೆಯ ಪೈಕಿ ಕೇವಲ ಶೇ.4.5ರಷ್ಟು ಮಾತ್ರ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಈ ವೇಳೆಗೆ 1.26 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಳ್ಳಬೇಕಿದ್ದರೆ, ಕೇವಲ 5650 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದೆ

Loading...