ರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ
ಚಿತ್ರದುರ್ಗದ ಮಾರಗಟ್ಟದಲ್ಲಿ ಇಲ್ಲಿಯವರೆಗೆ ಕಾರ್ಯನಿರ್ವಹಿಸುತ್ತಿದ್ದ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರ ವಿಸ್ತರಣ ಕೇಂದ್ರವನ್ನು ಪ್ರಾದೇಶಿಕ ರೇಷ್ಮೆ ಕೃಷಿ ಸಂಶೋಧನಾ ಕೇಂದ್ರವನ್ನಾಗಿ ಮೇಲ್ದರ್ಜೆ ಗೇರಿಸಲಾಗಿದೆ. 1982ರಲ್ಲಿ ಪ್ರಾರಂಭವಾದ ಚಿತ್ರದುರ್ಗ ತಾಲೂಕಿನ ಮಾರಗಟ್ಟದಲ್ಲಿರುವ ರೇಷ್ಮೆ ಸಂಶೋಧನಾ ವಿಸ್ತರಣ ಕೇಂದ್ರವು ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆ ಮೂರು ಜಿಲ್ಲೆಗಳ ರೇಷ್ಮೆ ಬೆಳೆಗಾರರ ಅಗತ್ಯತೆಗಳನ್ನು ಪೂರೈಸುತ್ತಿತ್ತು.