ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಚಿತ್ರದುರ್ಗ
Second Marriage: 2ನೇ ಮದುವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಚಪ್ಪಲಿಯಿಂದ ಬಾರಿಸಿದ ಪತ್ನಿ!

2ನೇ ಮದುವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಚಪ್ಪಲಿಯಿಂದ ಬಾರಿಸಿದ ಪತ್ನಿ!

Chitradurga News: ಚಿತ್ರದುರ್ಗ ನಗರದಲ್ಲಿ ಈ ಘಟನೆ ನಡೆದಿದೆ. ಗಂಡ ಎರಡನೇ ಮದುವೆಯಾಗುತ್ತಿರುವ ವಿಷಯ ತಿಳಿದು ಮೊದಲ ಪತ್ನಿ ಕುಟುಂಬಸ್ಥರು ಮದುವೆ ಮಂಟಪಕ್ಕೇ ತೆರಳಿ ಮದುವೆ ನಿಲ್ಲಿಸಿದ್ದಾರೆ. ಈ ವೇಳೆ ಗಂಡನಿಗೆ ಪತ್ನಿ ಧರ್ಮದೇಟು ನೀಡಿದ್ದಾಳೆ.

Renukaswamy Murder Case: ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ ಒಂದು ವರ್ಷ; ಪುತ್ರನನ್ನು ನೆನೆದು ಪೋಷಕರು ಕಣ್ಣೀರು

ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ ಒಂದು ವರ್ಷ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ನಡೆದು ಇಂದಿಗೆ ಒಂದು ವರ್ಷ ಸಂದಿದೆ. ಸ್ಟಾರ್‌ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಪವಿತ್ರ ಗೌಡ ಸೇರಿದಂತೆ ಅನೇಕರು ಈ ಪ್ರಕರಣದಲ್ಲಿ ಕಂಬಿ ಎಣಿಸುವಂತಾಗಿತ್ತು. ಇದೀಗ ಮಗ ತಮ್ಮನ್ನಗಲಿ ಒಂದು ವರ್ಷ ಸಂದಿರುವ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಅವರ ತಾಯಿ ಮಾಧ್ಯಮಗಳ ಜೊತೆ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

Road Accident: ಚಿತ್ರದುರ್ಗದಲ್ಲಿ ಕಾರು- ಟ್ರ್ಯಾಕ್ಟರ್‌ ಡಿಕ್ಕಿ: 2 ವರ್ಷದ ಮಗು ಸೇರಿ ನಾಲ್ವರು ಮೃತ್ಯು

ಕಾರು- ಟ್ರ್ಯಾಕ್ಟರ್‌ ಡಿಕ್ಕಿ: 2 ವರ್ಷದ ಮಗು ಸೇರಿ ನಾಲ್ವರು ಮೃತ್ಯು

ಅರೇಹಳ್ಳಿಯ ಉದ್ಯಮಿ ಯಶವಂತ್‌ ಅವರ ಪತ್ನಿ ಕಾವ್ಯಾ (30), ಅತ್ತೆ ಗಂಗಮ್ಮ (50) ಹಾಗೂ ಪುತ್ರಿಯರಾದ ಹನ್ಸಿಕಾ (4), ಮನಸ್ವಿ (2) ಮೃತ ದುರ್ದೈವಿಗಳು. ಯಶವಂತ್‌ ಹಾಗೂ ಕುಟುಂಬ ಸದಸ್ಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು-ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

Road Accident: ಚಿತ್ರದುರ್ಗ ಬಳಿ ಭೀಕರ ಅಪಘಾತ, ಆಂಧ್ರದ ಮೂವರು ಸಾವು

ಚಿತ್ರದುರ್ಗ ಬಳಿ ಭೀಕರ ಅಪಘಾತ, ಆಂಧ್ರದ ಮೂವರು ಸಾವು

ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ, ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅವಘಡ (Road Accident) ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆಂಧ್ರಪ್ರದೇಶದ ನಿವಾಸಿಗಳು ಇದ್ದ ಇನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Road Accident: ಚಿತ್ರದುರ್ಗದ ಬಳಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಸಾವು

ಚಿತ್ರದುರ್ಗದ ಬಳಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಮೂವರು ಸಾವು

ಘಟನೆ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ. ಸದ್ಯ ಚಿತ್ರದುರ್ಗ (Chitradurga news) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಮೂವರು ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ.

Self Harming: ಗೆಳತಿ ಸೈಕಲ್‌ ಕೊಡಲಿಲ್ಲ ಎಂದು ಪುಟ್ಟ ಬಾಲಕಿ ಆತ್ಮಹತ್ಯೆ

ಗೆಳತಿ ಸೈಕಲ್‌ ಕೊಡಲಿಲ್ಲ ಎಂದು ಪುಟ್ಟ ಬಾಲಕಿ ಆತ್ಮಹತ್ಯೆ

ಪಕ್ಕದ ಮನೆ ಗೆಳತಿ ಜೊತೆ ಬಾಲಕಿ ಪ್ರತಿನಿತ್ಯ ಸೈಕಲ್ ಆಡುತ್ತಿದ್ದಳು. ಅವಳು ಅಂದು ಆಡುವುದಕ್ಕೆ ಸೈಕಲ್ ಕೊಟ್ಟಿಲ್ಲ ಎಂದು ಮನನೊಂದು ಸ್ಪಂದನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹಿರಿಯೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಷ್ಟು ಸಣ್ಣ ಬಾಲಕಿಗೆ ಕರಾರುವಕ್ಕಾಗಿ ನೇಣು ಬಿಗಿದುಕೊಳ್ಳುವುದಕ್ಕೆ ತಿಳಿದದ್ದು ಕೂಡ ಆಶ್ಚ‌ರ್ಯಕರವಾಗಿದೆ.

Chitradurga Accident: ಚಿತ್ರದುರ್ಗದಲ್ಲಿ 15 ಪಲ್ಟಿ ಹೊಡೆದ ಕಾರು; ಮೂವರ ಸಾವು, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚಿತ್ರದುರ್ಗದಲ್ಲಿ 15 ಪಲ್ಟಿ ಹೊಡೆದ ಕಾರು; ಮೂವರ ಸಾವು

Chitradurga Accident: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಗ್ರಾಮದ ಮಸೀದಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ಭೀಕರ ಅಪಘಾತ ನಡೆದಿದೆ. ಹೆದ್ದಾರಿಯಲ್ಲಿ ಕಾರು 15 ಬಾರಿ ಪಲ್ಟಿಯಾಗಿದ್ದು, ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Road Accident: ಚಿತ್ರದುರ್ಗದಲ್ಲಿ ಟಿಟಿ ಅಪಘಾತ, ಮೂವರು ದುರ್ಮರಣ

ಚಿತ್ರದುರ್ಗದಲ್ಲಿ ಟಿಟಿ ಅಪಘಾತ, ಮೂವರು ದುರ್ಮರಣ

ಟಿಟಿ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವು (death) ಕಂಡಿದ್ದು, ಐವರಿಗೆ ಗಂಭೀರವಾದ ಗಾಯಗಳಾಗಿವೆ. ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಶಂಕರಿಬಾಯಿ (65) ಕುಮಾರ್ ನಾಯಕ್ (46) ಮತ್ತು ಶ್ವೇತ (38) ಎಂದು ಗುರುತಿಸಲಾಗಿದೆ.

Chitradurga Accident: ಭೀಕರ ಅಪಘಾತ; KSRTC ಬಸ್‌ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಬಲಿ

ಬೈಕ್‌ಗೆ KSRTC ಬಸ್‌ ಡಿಕ್ಕಿ- ನರ್ಸಿಂಗ್‌ ವಿದ್ಯಾರ್ಥಿಗಳ ದುರ್ಮರಣ

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಕೇರಳ ಮೂಲದವರು ಎಂದು ಗುರುತಿಸಲಾಗಿದೆ. . ಚಿತ್ರದುರ್ಗ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Wedding Cancelled: ಆರತಕ್ಷತೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಜಗಳ; ನಿಂತೇ ಹೋಯ್ತು ಮದುವೆ!

ಆರತಕ್ಷತೆಯಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಜಗಳ; ನಿಂತೇ ಹೋಯ್ತು ಮದುವೆ!

Wedding Cancelled: ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದ ಬಲಿಜ ಶ್ರೇಯಾ ಭವನದಲ್ಲಿ ನಡೆದಿದೆ. ಕುಡಿಯುವ ನೀರಿನ ವಿಚಾರಕ್ಕೆ ವಧು, ವರರ ಸಂಬಂಧಿಕರ ನಡುವೆ ಜಗಳ ನಡೆದಿದ್ದು, ಹಿರಿಯರು, ಸಂಬಂಧಿಕರು ಸಂಧಾನ ನಡೆಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ, ಹೀಗಾಗಿ ಮದುವೆ ಮುರಿದು ಬಿದ್ದಿದೆ.

PSI Slapped BJP Leader: ಬಿಜೆಪಿ ಮುಖಂಡನಿಗೆ ನಡುರಸ್ತೆಯಲ್ಲಿ PSI ಕಪಾಳಮೋಕ್ಷ; ಚಿತ್ರದುರ್ಗದ ಈ ವಿಡಿಯೊ ಫುಲ್‌ ವೈರಲ್‌

ಬಿಜೆಪಿ ಮುಖಂಡನಿಗೆ ನಡುರಸ್ತೆಯಲ್ಲಿ PSI ಕಪಾಳಮೋಕ್ಷ

ಚಿತ್ರದುರ್ಗದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ ಅವಾಚ್ಯ ಪದ ಬಳಸಿದರು ಎಂಬ ಕಾರಣಕ್ಕೆ ಪಿಎಸ್‌ಐ ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ.

POCSO Case: ಐಸ್‌ ಕ್ರೀಂ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನೀಚ

ಐಸ್‌ ಕ್ರೀಂ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ನೀಚ

ಚಿತ್ರದುರ್ಗ ನಗರದ ಅಗಸನಹಳ್ಳಿ ಬಡಾವಣೆಯ ಸಾಧಿಕ್ (56) ಎಂಬಾತ ಬಾಲಕಿ ಮೇಲೆ ಹೇಯ ಕೃತ್ಯ ಎಸಗಿದ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದಳು. ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Rudrappa Lamani: ಬೈಕ್‌ ಡಿಕ್ಕಿಯಾಗಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

ಬೈಕ್‌ ಡಿಕ್ಕಿಯಾಗಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

Rudrappa Lamani: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಅಪಘಾತ ನಡೆದಿದೆ. ಕಾರಿಂದ ಕೆಳಗಿಳಿದು ನಿಂತಿದ್ದ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಡಿಕ್ಕಿ ಹೊಡೆದಿದ್ದಾರೆ.

Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಐವರ ದುರ್ಮರಣ

ಚಿತ್ರದುರ್ಗದಲ್ಲಿ ಲಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಐವರ ದುರ್ಮರಣ

Chitradurga Accident: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐವರು ದುರ್ಮರಣ ಹೊಂದಿದ್ದು, ಘಟನಾ ಸ್ಥಳಕ್ಕೆ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Renuka Swamy Murder Case: ಮೃತ ರೇಣುಕಾ ಸ್ವಾಮಿ ಮಗನಿಗೆ ನಾಮಕರಣ, ಹೆಸರಿಟ್ಟಿದ್ದು ಹೀಗೆ

ಮೃತ ರೇಣುಕಾ ಸ್ವಾಮಿ ಮಗನಿಗೆ ನಾಮಕರಣ, ಹೆಸರಿಟ್ಟಿದ್ದು ಹೀಗೆ

ರೇಣುಕಾ ಸ್ವಾಮಿ ಕೊಲೆಯಾದಾಗ ಅವರ ಪತ್ನಿ 5 ತಿಂಗಳ ಗರ್ಭಿಣಿಯಾಗಿದ್ದರು. ನಂತರ ಈ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ (Pavithra Gowda) ಅರೆಸ್ಟ್ ಆಗಿದ್ದರು. ಆನಂತರ ಗಂಡು ಮಗುವಿಗೆ ರೇಣುಕಾಸ್ವಾಮಿ ಪತ್ನಿ ಜನ್ಮ ನೀಡಿದ್ದರು. ಇದೀಗ ಮೃತ ರೇಣುಕಾಸ್ವಾಮಿ ಅವರ ಪುತ್ರನ ನಾಮಕರಣ ಮತ್ತು ತೊಟ್ಟಿಲು ಶಾಸ್ತ್ರ ನಡೆದಿದೆ.

Student Self Harming: ಪರೀಕ್ಷೆ ಭಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಭಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗ ನಗರದ ತಮಟಕಲ್ಲು ರಸ್ತೆ ಈಶ್ವರ ಬಡಾವಣೆ ನಿವಾಸಿ ರಾಕೇಶ್ (16) ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಆತಂಕದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷೆಯ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಘಟನೆ ಸಂಬಂಧ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Murder Case: ನಿಧಿಯಾಸೆಗೆ ಅಮಾಯಕ ವ್ಯಕ್ತಿಯನ್ನು ಕರೆದೊಯ್ದು ನರಬಲಿ

ನಿಧಿಯಾಸೆಗೆ ಅಮಾಯಕ ವ್ಯಕ್ತಿಯನ್ನು ಕರೆದೊಯ್ದು ನರಬಲಿ

ನರಬಲಿ ನೀಡಿದರೆ ನಿಧಿ ಸಿಗುತ್ತದೆ ಎಂದ ಅಡ್ಡಕಸುಬಿ ಜ್ಯೋತಿಷಿಯ ಮಾತು ನಂಬಿದ ದುರುಳನೊಬ್ಬ ತನಗೆ ಯಾವ ರೀತಿಯಲ್ಲೂ ಸಂಬಂಧವಿಲ್ಲದ ಅಮಾಯಕನೊಬ್ಬನನ್ನು ಪುಸಲಾಯಿಸಿ ಕರೆದೊಯ್ದು ಕೊಚ್ಚಿ ಕೊಲೆ ಮಾಡಿದ್ದಾನೆ. ಪೊಲೀಸರು ಹಂತಕ ಹಾಗೂ ಜ್ಯೋತಿಷಿ ಇಬ್ಬರನ್ನೂ ಬಂಧಿಸಿದ್ದಾರೆ.

Honor Killing: ರಾಜ್ಯದಲ್ಲೊಂದು ಮರ್ಯಾದೆಗೇಡು ಹತ್ಯೆ: ಪ್ರೀತಿಸಿದ ಮಗಳಿಗೆ ಹಗ್ಗ ಬಿಗಿದು ಕೊಲೆಗೈದ ತಂದೆ

ಮರ್ಯಾದೆಗೇಡು ಹತ್ಯೆ: ಪ್ರೀತಿಸಿದ ಮಗಳಿಗೆ ಹಗ್ಗ ಬಿಗಿದು ಕೊಲೆಗೈದ ತಂದೆ

ಲವ್‌ ಗಿವ್‌ ಎಲ್ಲಾ ಮಾಡಬೇಡ ಎಂದು ತಂದೆ ಸಾಕಷ್ಟು ಬುದ್ದಿಮಾತು ಹೇಳಿದರೂ ಕೇಳದೆ ಯುವಕನೊಬ್ಬನನ್ನು ಪ್ರೀತಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ಮೋತಿರಾಮ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಮಾಡುತ್ತಿದ್ದ ಮಗಳ ಕುತ್ತಿಗೆಗೆ ಹಗ್ಗ ಬಿಗಿದು ಹತ್ಯೆಗೈದಿದ್ದಾನೆ.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.