ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸಿನಿಮಾ

TV actor Aryan: ಹುಟ್ಟು ಹಬ್ಬದ ದಿನವೇ ಕೊನೆಯುಸಿರೆಳೆದ ಕಿರುತೆರೆ ನಟ ಆರ್ಯನ್

ಹುಟ್ಟು ಹಬ್ಬದ ದಿನವೇ ಕೊನೆಯುಸಿರೆಳೆದ ಕಿರುತೆರೆ ನಟ ಆರ್ಯನ್

Sandalwood News: ಕಳೆದ 15 ದಿನಗಳ ಹಿಂದೆ ಹಾಸನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಕಿರುತೆರೆ ನಟ ಆರ್ಯನ್ ಗುರುಸ್ವಾಮಿ ವಸ್ತ್ರದ್​ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು ಆಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Divya Suresh: ಕಾನೂನಿನ ಮುಂದೆ ಎಲ್ಲೆರೂ ಒಂದೇ; ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್

ಹಿಟ್ ಆ್ಯಂಡ್ ರನ್ ಪ್ರಕರಣ; ದಿವ್ಯಾ ಸುರೇಶ್ ಏನಂದ್ರು.?

ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ​​ಬಾಸ್ ಮಾಜಿ ಸ್ಪರ್ಧಿ ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 4ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ ಎಂದಿದ್ದಾರೆ.

Varna Movie: ಟೀಸರ್‌ನಲ್ಲೇ ಕುತೂಹಲ ಮೂಡಿಸಿದೆ ಅರ್ಜುನ್ ಯೋಗಿ ನಟನೆಯ ʼವರ್ಣʼ

ಟೀಸರ್‌ನಲ್ಲೇ ಕುತೂಹಲ ಮೂಡಿಸಿದೆ ಅರ್ಜುನ್ ಯೋಗಿ ನಟನೆಯ ʼವರ್ಣʼ

Sandalwood News: ಅರ್ಜುನ್ ಯೋಗಿ ನಾಯಕನಾಗಿ ನಟಿಸಿರುವ, ದೇವ ಶರ್ಮ ನಿರ್ದೇಶಿಸಿರುವ ಹಾಗೂ ಮಲ್ಲಿನೇನಿ ನವೀನ್ ಚೌಧರಿ ನಿರ್ಮಿಸಿರುವ ʼವರ್ಣʼ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದ ನಾಯಕಿಯಾಗಿ ಭವ್ಯ ಗೌಡ, ವಿಲನ್ ಪಾತ್ರದಲ್ಲಿ ಲಂಕೇಶ್ ರಾವಣ ನಟಿಸಿದ್ದಾರೆ.

Actor Yash: ʼಕೆಜಿಎಫ್' ಛಾಯಾಗ್ರಾಹಕ ಭುವನ್ ಗೌಡ ಮದುವೆಗೆ ಕಳೆ ತಂದ ರಾಕಿಂಗ್ ಸ್ಟಾರ್ ಯಶ್; ಇಲ್ಲಿದೆ ನೋಡಿ ವಿಡಿಯೊ

ಭುವನ್ ಗೌಡ ಮದುವೆಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್

Yash attends Bhuvan Gowda’s wedding: ಶೂಟಿಂಗ್‍ನಲ್ಲಿ ಎಷ್ಟೇ ಬ್ಯುಸಿಯಾಗಿದ್ದರೂ ನಟ ಯಶ್ ಹಬ್ಬ, ಕುಟುಂಬ ಹಾಗೂ ಆಪ್ತರ ಕಾರ್ಯಕ್ರಮ ಅಂದಾಗ ಬಿಡುವು ಮಾಡಿಕೊಂಡು ಹಾಜರಾಗುತ್ತಾರೆ. ಇದೀಗ 'ಕೆಜಿಎಫ್‌ʼ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರ ವಿವಾಹಕ್ಕೆ ಆಗಮಿಸಿ ನೂತನ ದಂಪತಿಗೆ ಶುಭ ಕೋರಿದ್ದಾರೆ.

Dies Irae Movie: ʼಹೃದಯಂʼ ಮೂಲಕ ಪ್ರೇಕ್ಷಕರ ಹೃದಯ ಗೆದ್ದ ಪ್ರಣವ್ ಮೋಹನ್‌ಲಾಲ್ ನಟನೆಯ ʼಡೀಯಸ್ ಈರೇʼ ಚಿತ್ರದ ಟ್ರೈಲರ್‌ ಔಟ್‌

ಪ್ರಣವ್ ಮೋಹನ್‌ಲಾಲ್ ನಟನೆಯ ʼಡೀಯಸ್ ಈರೇʼ ಟ್ರೈಲರ್‌ ಔಟ್‌

Dies Irae Movie Trailer: ಮಾಲಿವುಡ್ ಸೂಪರ್ ಸ್ಟಾರ್ ಮೋಹನ್‌ಲಾಲ್ ಪುತ್ರ ಪ್ರಣವ್ ಮೋಹನ್‌ಲಾಲ್ ಅಭಿನಯದ ʼಡೀಯಸ್ ಈರೇʼ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿದೆ. ಟ್ರೈಲರ್‌ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮುಕ್ಕಾಲು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡು ಸದ್ದು ಮಾಡುತ್ತಿದೆ.

Twinkle Khanna: ಮದ್ವೆ ನಂತರ ಬೇರೊಬ್ಬರ ಜೊತೆ ಅಫೇರ್‌; ಅಕ್ಷಯ್‌ ಕುಮಾರ್‌ ಪತ್ನಿ ಟ್ವಿಂಕಲ್‌ ಖನ್ನಾ ಖುಲ್ಲಾಂ ಖುಲ್ಲಾ ಮಾತು!

ಶೃಂಗಾರದ ಬಗ್ಗೆ ಟ್ವಿಂಕಲ್ ಖನ್ನಾ ಓಪನ್ ಟಾಕ್

Twinkle Khanna speaks physical cheating: ಬಾಲಿವುಡ್ ಸೆಲೆಬ್ರಿಟಿಗಳು ಸದಾ ಸುದ್ದಿಯಲ್ಲಿರುತ್ತಾರೆ. ತಮ್ಮ ಏನಾದರೊಂದು ವಿಚಿತ್ರ ಹೇಳಿಕೆಗಳಿಂದ ಭಾರಿ ಚರ್ಚೆಗೆ ಕಾರಣರಾಗುತ್ತಾರೆ. ಇದೀಗ ನಟ ಅಕ್ಷಯ್‌ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ.

Thalapathy Vijay: ಕರೂರು ಕಾಲ್ತುಳಿತ ಕೇಸ್‌; ಶೀಘ್ರದಲ್ಲೇ ಮೃತರ ಕುಟುಂಬ ಭೇಟಿ ಮಾಡಲಿರುವ ದಳಪತಿ ವಿಜಯ್

ಕರೂರುರಿಗೆ ಭೇಟಿ ನೀಡಲಿರುವ ದಳಪತಿ ವಿಜಯ್

TVK Chief Vijay: ಕರೂರು ಕಾಲ್ತುಳಿತದ ಘಟನೆ ಬಳಿಕ ತೀವ್ರ ಟೀಕೆಗೆ ಗುರಿ ಆಗಿದ್ದ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರು ಮೃತರ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಲು ಮುಂದಾಗಿದ್ದಾರೆ. ಈ ಹಿಂದೆ ಗಾಯಾಳುಗಳು ಹಾಗೂ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದರು. ಮೃತರ ಕುಟುಂಬಗ್ಗೆ ತಲಾ 20 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 2 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದರು.

Asha Jois: ಸ್ನೇಹಿತೆಯ ಖಾಸಗಿ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಎಫ್‌ಐಆರ್‌

ಖಾಸಗಿ ವಿಡಿಯೊ ಇಟ್ಟುಕೊಂಡು ಬ್ಲ್ಯಾಕ್​ಮೇಲ್; ನಟಿ ವಿರುದ್ಧ ಕೇಸ್‌

Sandalwood News: ಶೃಂಗೇರಿ ಶಾರದಾ ಪೀಠದ ಜೋಯಿಸ್ ಕುಟುಂಬದ ಸದಸ್ಯೆ ಹಾಗೂ ಮಿಸ್ ಇಂಡಿಯಾ ಪ್ಲಾನೆಟ್ 2016ರಲ್ಲಿ ಸ್ಪರ್ಧಿಯಾಗಿದ್ದ ನಟಿ ಆಶಾ ಜೋಯಿಸ್ ವಿರುದ್ಧ ಪಾರ್ವತಿ ಎಂಬುವವರು ಅವರು ದೂರು ದಾಖಲಿಸಿದ್ದಾರೆ. ತಿಲಕನಗರ ಪೊಲೀಸ್ ಠಾಣೆಯಲ್ಲಿ ಆಶಾ ಜೋಯಿಸ್​ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

Kannada New Movie: ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನೆರವೇರಿತು ʼಜುಮ್ಕಿʼ ಚಿತ್ರದ ಸ್ಕ್ರಿಪ್ಟ್ ಪೂಜೆ

ಎಂ.ಜೆ. ಜಯರಾಜ್ ನಟನೆ, ನಿರ್ದೇಶನದ ʼಜುಮ್ಕಿʼ ಚಿತ್ರದ ಸ್ಕ್ರಿಪ್ಟ್ ಪೂಜೆ

Sandalwood News: ಎಂ.ಜೆ. ಜಯರಾಜ್ ನಟನೆ ಮತ್ತು ನಿರ್ದೇಶನದ ʼಜುಮ್ಕಿʼ ಚಿತ್ರದ ಸ್ಕ್ರಿಪ್ಟ್ ಪೂಜೆಯು ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ತಾಯಿಯ ಸನ್ನಿಧಿಯಲ್ಲಿ ನೆರವೇರಿತು. ನಿರ್ದೇಶಕ, ಹಾಗೂ ನಾಯಕನಟ ಎಂ.ಜೆ. ಜಯರಾಜ್, ಪತ್ರಕರ್ತ ಹಾಗೂ ಕಲಾವಿದ ವಿಸಿಎನ್‌ ಮಂಜುರಾಜ್, ಛಾಯಾಗ್ರಾಹಕ ಸಿದ್ಧಾರ್ಥ್ ಎಚ್‌.ಆರ್‌. ಮತ್ತು ಸಹ ನಿರ್ದೇಶಕ ಚಂದ್ರಕಾಂತ್ ಗುಜ್ಜಾಲ್ ಪಾಲ್ಗೊಂಡಿದ್ದರು.

Actor Mohanlal: ಆನೆ ದಂತ ಮಾಲೀಕತ್ವ; ಖ್ಯಾತ ನಟ ಮೋಹನ್‌ ಲಾಲ್‌ಗೆ ಭಾರೀ ಹಿನ್ನಡೆ

ದಂತ ಮಾಲೀಕತ್ವ: ನಟ ಮೋಹನ್ ಲಾಲ್ ಗೆ ಹಿನ್ನಡೆ

Ivory items: ದಂತ ವಸ್ತುಗಳಿಗೆ ಸಂಬಂಧಿಸಿ ಅರಣ್ಯ ಇಲಾಖೆಯ ಮಾಲೀಕತ್ವ ಪ್ರಮಾಣ ಪತ್ರಕ್ಕೆ ಸಂಬಂಧಿಸಿ ನಟ ಮೋಹನ್ ಲಾಲ್ ಅವರ ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಇದನ್ನು ಕಾನೂನು ಬದ್ಧವಾಗಿ ಜಾರಿಗೊಳಿಸಲಾಗುವುದಿಲ್ಲ ಎಂದು ಹೇಳಿದೆ. ಇದರಿಂದ ನಟನಿಗೆ ಭಾರಿ ಹಿನ್ನಡೆಯಾಗಿದೆ.

Kantara: Chapter -1: 2025ರಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಕಾಂತಾರ ಚಾಪ್ಟರ್- 1 ಸಿನಿಮಾ!

2025ರಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಕಾಂತಾರ ಚಾಪ್ಟರ್- 1 ಸಿನಿಮಾ!

Kantara: Chapter -1: ಕಾಂತಾರ ಚಾಪ್ಟರ್ -1 ಸಿನಿಮಾ ಚಿತ್ರಮಂದಿರದಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಕಂಡಿದ್ದು ಅನೇಕ ಸೂಪರ್ ಹಿಟ್ ಸಿನಿಮಾಗಳ ದಾಖಲೆ ಯನ್ನು ಕೂಡ ಮೀರಿಸಿದೆ. ವಾರ್ 2, ಸೈಯಾರಾ, ಛಾವಾ, ಕೂಲಿ ಸಿನಿಮಾಗಳ ದಾಖಲೆಯನ್ನು ಮೀರಿಸಿ ಹೊಸ ದಾಖಲೆ ಮಾಡಿದೆ. ಈ ಮೂಲಕ ಕಾಂತಾರಾ ಸಿನಿಮಾ 2025 ರಲ್ಲಿ ತೆರೆಕಂಡ ಸಿನಿಮಾದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ್ದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Kantara: Chapter -1: ರಾಜ್‌ ಬಿ ಶೆಟ್ಟಿ ಹಾಗೂ ರಕ್ಷಿತ್ ಶೆಟ್ಟಿ'ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿಲ್ವಾ? ರಿಷಬ್‌ ಪತ್ನಿ ಪ್ರಗತಿ ಹೇಳಿದ್ದೇನು?

ರಾಜ್‌ ಬಿ ಶೆಟ್ಟಿ ಹಾಗೂ ರಕ್ಷಿತ್ 'ಕಾಂತಾರ: ಚಾಪ್ಟರ್ 1’ ಸಿನಿಮಾ ನೋಡಿಲ್ವ?

Kantara: Chapter -1: ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯೂ ಕೂಡ ಕಾಂತಾರ ಸಿನಿಮಾ ಸಂಚಲನ ಉಂಟುಮಾಡುತ್ತಿದೆ. ರಿಷಭ್ ನಿರ್ದೇಶನ ಅಭಿಯನಕ್ಕೆ ಪ್ರೇಕ್ಷಕರು ಫಿದಾ ಆಗಿದ್ದು ಹಲವು ಸೆಲೆಬ್ರಿಟಿಗಳು ಕೂಡ ಸಿನಿಮಾದ ಬಗ್ಗೆ ಮೆಚ್ಚುಗೆಯ ಪ್ರತಿಕ್ರಿಯೆ ನೀಡಿದ್ದಾರೆ.‌ ಆದರೆ 'ಕಾಂತರ ‌ಚಾಪ್ಟರ್ 1’ ಚಿತ್ರದ ಬಗ್ಗೆ ರಕ್ಷಿತ್ ಶೆಟ್ಟಿ ಹಾಗೂ ರಾಜ್‌ ಬಿ ಶೆಟ್ಟಿ ಯವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ‌ ಎನ್ನುವ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಾ ಇದೆ.‌ ಈ ಬಗ್ಗೆ ಇದೀಗ ರಿಷಬ್‌ ಶೆಟ್ಟಿ ಪತ್ನಿ ಪ್ರಗತಿ ಸ್ಪಷ್ಟನೆ ನೀಡಿದ್ದಾರೆ.

Raghu Dixit Wedding: ಗಾಯಕಿ ವಾರಿಜಶ್ರೀ ಜತೆ ವಿವಾಹ ಜೀವನಕ್ಕೆ ಕಾಲಿಟ್ಟ ರಘು ದೀಕ್ಷಿತ್

ಗಾಯಕಿ ವಾರಿಜಶ್ರೀ ಜತೆ ವಿವಾಹ ಜೀವನಕ್ಕೆ ಕಾಲಿಟ್ಟ ರಘು ದೀಕ್ಷಿತ್

Raghu Dixit and Varijashree Venugopal Wedding: ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಗಾಯಕ ರಘು ದೀಕ್ಷಿತ್‌ ಮತ್ತು ವಾರಿಜಶ್ರೀ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳು ವೈರಲ್‌ ಆಗಿದ್ದು, ನವಜೋಡಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

Ram Charan: ಅವಳಿ ಮಕ್ಕಳ ನಿರೀಕ್ಷೆಯಲ್ಲಿ ರಾಮ್‍ ಚರಣ್-ಉಪಾಸನಾ; ವಿಡಿಯೊ ಮೂಲಕ ಗುಡ್‌ನ್ಯೂಸ್‌ ಹಂಚಿಕೊಂಡ ಗ್ಲೋಬಲ್‌ ಸ್ಟಾರ್‌

ಅವಳಿ ಮಕ್ಕಳ ನಿರೀಕ್ಷೆಯಲ್ಲಿ ರಾಮ್‍ ಚರಣ್ ದಂಪತಿ

Ram Charan sharing video: ಟಾಲಿವುಡ್ ನಟ ರಾಮ್‍ ಚರಣ್ ಮತ್ತು ಅವರ ಪತ್ನಿ ಉಪಾಸನಾ ಕಾಮಿನೇನಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಕ್ಷಣದ ವಿಡಿಯೊವನ್ನು ನಟ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.

Nihal Pillai: ಎರಡು ಭಾರಿ ಲೈಂಗಿಕ ದೌರ್ಜನ್ಯ.... ಬಾಲ್ಯದ ಕಹಿ ಘಟನೆ ಬಿಚ್ಚಿಟ್ಟ ಖ್ಯಾತ ನಟ

ಬಾಲ್ಯದಲ್ಲಿ ನಡೆದ ಲೈಂಗಿಕ ದೌರ್ಜನ್ಯವನ್ನು ಬಿಚ್ಚಿಟ್ಟ ಖ್ಯಾತ ನಟ!

Malayalam actor Nihal Pillai: ನಟ ನಿಹಾಲ್ ಪಿಳ್ಳೈ ಮಲಯಾಳಂನ ಹಲವು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದು ಕೊಂಡಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ಅವರ 'ಮುಂಬೈ ಪೊಲೀಸ್' ಮತ್ತು 'ಟಿಯಾನ್' ಸಿನಿಮಾ ದಲ್ಲಿನ ನಟನೆಗಾಗಿ ಇವರು ಹೆಚ್ಚು ಹೆಸರು ಮಾಡಿದ್ದರು. ಸದ್ಯ ಅವರು ತಮ್ಮ ಯೂಟ್ಯೂಬ್ ಚಾನೆಲ್ 'ಒರು ಹ್ಯಾಪಿ ಫ್ಯಾಮಿಲಿ' ಮೂಲಕ ಹಲವು ಇಂಟ್ರಸ್ಟಿಂಗ್ ವಿಚಾರಗಳನ್ನು ಮಾತನಾಡಿದ್ದಾರೆ.

Bombat Bhojana: ಸ್ಟಾರ್ ಸುವರ್ಣ ವಾಹಿನಿಯಲ್ಲಿ ಬೊಂಬಾಟ್ ಭೋಜನ ಸೀಸನ್- 6 ಶೀಘ್ರದಲ್ಲೇ ಆರಂಭ!

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಶುರುವಾಗ್ತಿದೆ ಬೊಂಬಾಟ್ ಭೋಜನ ಸೀಸನ್ -6

Bombat Bhojana Season-6: ಸ್ಟಾರ್ ಸುವರ್ಣ ವಾಹಿನಿಯ 'ಬೊಂಬಾಟ್ ಭೋಜನ'. 1500ಕ್ಕೂ ಹೆಚ್ಚು ಸಂಚಿಕೆಗಳನ್ನು ದಾಟಿ ಹೊಸ ಮೈಲಿಗಲ್ಲು ಸೃಷ್ಟಿಸಿರುವ ಈ ಶೋ ಈಗಾಗಲೇ 5 ಸೀಸನ್ ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇದೀಗ ಇನ್ನಷ್ಟು ಹೊಸತನವನ್ನೊಳಗೊಂಡು 6ನೇ ಆವೃತ್ತಿಯೊಂದಿಗೆ ವೀಕ್ಷಕರ ಮುಂದೆ ಬರಲು ಸಜ್ಜಾಗಿದೆ.

First Salary Short Film: ಪವನ್ ವೆಂಕಟೇಶ್ ನಿರ್ದೇಶನದ ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ರಿಲೀಸ್‌

ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ರಿಲೀಸ್‌

Sandalwood News: ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆ ಮುನ್ನೆಡೆಸುತ್ತಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಈಗ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ತಮ್ಮ ಪುತ್ರ ಪವನ್ ವೆಂಕಟೇಶ್ ಆಕ್ಷನ್ ಕಟ್ ಹೇಳಿರುವ ʼಫಸ್ಟ್ ಸ್ಯಾಲರಿʼ ಕಿರುಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಶೀರ್ಷಿಕೆ ಕೆಳಗೆ ಕನಸುಗಳ ಹಾದಿ ಎನ್ನುವ ಅಡಿಬರಹವಿದೆ. ʼಫಸ್ಟ್ ಸ್ಯಾಲರಿʼ ಕಿರುಚಿತ್ರದ ಪೋಸ್ಟರ್ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗಿದೆ.

Green Movie: ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಈ ವಾರ ತೆರೆಗೆ

ರಾಜ್ ವಿಜಯ್ ನಿರ್ದೇಶನದ ‘ಗ್ರೀನ್’ ಚಿತ್ರ ಈ ವಾರ ತೆರೆಗೆ

Sandalwood News: ರಾಜ್ ವಿಜಯ್ ನಿರ್ದೇಶನದ ವಿಭಿನ್ನ ಕಥಾಹಂದರ ಹೊಂದಿರುವ ʼಗ್ರೀನ್ʼ ಚಿತ್ರ (Green Movie) ಈ ವಾರ ತೆರೆಗೆ ಬರುತ್ತಿದೆ. ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳ ಜತೆಗೆ ಪ್ರಶಂಸೆಯನ್ನು ಈ ಚಿತ್ರ ಪಡೆದುಕೊಂಡಿದೆ.

SV Rajendrasingh Babu: ಬೆಂಗಳೂರಿನಲ್ಲಿ ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

SVR @ 50: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ ಇದೇ ಅಕ್ಟೋಬರ್ ತಿಂಗಳಿಗೆ 50 ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ʼಎಸ್‌ವಿಆರ್ @ 50ʼ ಸಾಧನೆ-ಸಂಭ್ರಮ-ಚಿತ್ರೋತ್ಸವವನ್ನು ಅ.23ರಿಂದ 27ರವರೆಗೆ ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿರುವ ಡಾ.ರಾಜ್‌ಕುಮಾರ್‌ ಭವನ, ಅಂಬರೀಷ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

Udaala Movie: ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

Sandalwood News: ಯೋಗರಾಜ್ ಭಟ್ ನಿರ್ಮಾಣದ, ಅಮೋಲ್ ಪಾಟೀಲ್ ನಿರ್ದೇಶನದ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ʼಉಡಾಳʼ ಚಿತ್ರವು ನವೆಂಬರ್ 14ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಕುರಿತ ವಿವರ ಇಲ್ಲಿದೆ.

I Am Ruby Movie: ಚೇತನ್ ಕೇಶವ್ ನಿರ್ದೇಶನದ ʼI Am ರೂಬಿʼ ಚಿತ್ರದ ಶೀರ್ಷಿಕೆ ಅನಾವರಣ

ಚೇತನ್ ಕೇಶವ್ ನಿರ್ದೇಶನದ ʼI Am ರೂಬಿʼ ಚಿತ್ರದ ಶೀರ್ಷಿಕೆ ಅನಾವರಣ

Sandalwood News: ಚೇತನ್ ಕೇಶವ್ ನಿರ್ದೇಶನದ ಎರಡನೇ ಸಿನಿಮಾದ ಶೀರ್ಷಿಕೆ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಅನಾವರಣವಾಗಿದೆ. ಆಕಾಶ್ ಎಂಬ ಮೈಸೂರಿನ ನೂತನ ಪ್ರತಿಭೆ ನಾಯಕನಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ʼI Am ರೂಬಿʼ ಎಂದು ಹೆಸರಿಡಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Kantara: Chapter -1: ಹೊಸ ದಾಖಲೆಯತ್ತ ಮುನ್ನುಗ್ಗುತ್ತಿದೆ ಕಾಂತಾರ ಚಾಪ್ಟರ್ -1 ಸಿನಿಮಾ- ಈವರೆಗಿನ ಕಲೆಕ್ಷನ್ ಎಷ್ಟು?

ಕಾಂತಾರ ಚಾಪ್ಟರ್ 1 ಸಿನಿಮಾ ಒಟ್ಟು ಕಲೆಕ್ಷನ್ ಎಷ್ಟು ಗೊತ್ತಾ?

Kantara: Chapter 1: ಕಾಂತಾರ ಚಾಪ್ಟರ್ 1 ಸಿನಿಮಾ ವೀಕ್ಷಿಸಲು ಬಹುತೇಕ ಪ್ರೇಕ್ಷಕರ ವರ್ಗ ಬಂದಿದ್ದು ಬಾಕ್ಸ್ ಆಫೀಸ್ ಕಲೆಕ್ಷನ್ ಮಟ್ಟ ಏರಿಕೆಯಾಗಿದೆ. ಬರೀ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯೂ ಕೂಡ ಕಾಂತಾರ ಸಿನಿಮಾ ಸಂಚಲನ ಉಂಟುಮಾಡುತ್ತಿದೆ. ಹಾಗಾದರೆ ಕಾಂತಾರ ಚಾಪ್ಟರ್ 1 ಸಿನಿಮಾ ಇದುವರೆಗೆ ಮಾಡಿದ್ದ ಕಲೆಕ್ಷನ್ ಎಷ್ಟು?

Anupam Kher: ನೂರಾರು ಸಿನಿಮಾಗಳಲ್ಲಿ ನಟನೆ... ಅನೇಕ ವರ್ಷಗಳ ಸಿನಿ ಜರ್ನಿ! ಆದ್ರೂ ಇರೋದು ಮಾತ್ರ ಬಾಡಿಗೆ ಮನೆಯಲ್ಲಿ

ಬಾಡಿಗೆ ಮನೆಯಲ್ಲೇ ವಾಸ ಮಾಡುತ್ತಿರುವ ಬಾಲಿವುಡ್‌ನ ಖ್ಯಾತ ನಟ!

Anupam Kher: ಬಾಲಿವುಡ್‌ ನಟ ಅನುಪಮ್‌ ಖೇರ್‌ ಅವರು ಅದ್ಭುತವಾದ ನಟನೆ ಮೂಲಕ ಹೆಸರು ಗಳಿಸಿದ್ದಾರೆ. ಕನ್ನಡದ 'ಘೋಸ್ಟ್' ಸಿನಿಮಾ ಮೂಲಕ ಅನುಪಮ್ ಖೇರ್ ಸ್ಯಾಂಡಲ್ ವುಡ್ ನಲ್ಲೂ ನಟಿಸಿದ್ದು ವಿವಿಧ ಭಾಷೆಗಳಲ್ಲಿ‌ 540ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ. ಆದರೆ ಇಷ್ಟೆಲ್ಲಾ ಸಾಧನೆ ಗೈದಿರುವ ಇವರು ಇಂದಿಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವುದಾಗಿ ಬಹಿರಂಗಪಡಿಸಿದ್ದಾರೆ..

Kannada New Movie: ವಿಭಿನ್ನ ಶೀರ್ಷಿಕೆಯ ‘4.30 - 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ’ ಚಿತ್ರಕ್ಕೆ ಮುಹೂರ್ತ

‘4.30 - 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ’ ಚಿತ್ರಕ್ಕೆ ಮುಹೂರ್ತ

Sandalwood News: ಪೂವೈ ಸುರೇಶ್ ಹಾಗೂ ಶಿವರಾಜ್ ನಿರ್ದೇಶಿಸುತ್ತಿರುವ ವಿಭಿನ್ನ ಶೀರ್ಷಿಕೆಯುಳ್ಳ ʼ4.30 ರಿಂದ 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲʼ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರೇಣುಕಾಂಬ ಥಿಯೇಟರ್‌ನಲ್ಲಿ ನೆರವೇರಿತು. ಈ ಕುರಿತ ವಿವರ ಇಲ್ಲಿದೆ.

Loading...