ʻಬಾಸ್ʼ ಸಿನಿಮಾ ರಿಲೀಸ್ಗೆ ಗ್ರೀನ್ ಸಿಗ್ನಲ್; ನಟ ದರ್ಶನ್ ಹೇಳಿದ್ದೇನು?
ತನುಷ್ ಶಿವಣ್ಣ ನಟಿಸಿ, ನಿರ್ಮಿಸಿರುವ 'ಬಾಸ್' ಚಿತ್ರದ ಬಿಡುಗಡೆಗೆ ಎದುರಾಗಿದ್ದ ತಡೆಯಾಜ್ಞೆ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರು ಹೊಸಬರ ಶ್ರಮವನ್ನು ಗೌರವಿಸಿ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸದೆ ಸಿನಿಮಾ ಬಿಡುಗಡೆಗೆ ಶುಭ ಹಾರೈಸಿದ್ದಾರೆ.