ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actress Rachita Ram: ಕೊನೆಗೂ ಮೌನ ಮುರಿದ ನಟಿ ರಚಿತಾ ರಾಮ್; ಆರೋಪಗಳಿಗೆ ವಿಡಿಯೋ ಮೂಲಕ ಸ್ಪಷ್ಟನೆ

Actress Rachita Ram: ನಾನು ಸಂಜು ವೆಡ್ಸ್ ಗೀತಾ 2 ಚಿತ್ರಕ್ಕೆ ಎಲ್ಲಾ ರೀತಿಯ ಸಪೋರ್ಟ್ ‌ಮಾಡಿದ್ದೇನೆ. ಮೊದಲ ಬಾರಿ ರಿಲೀಸ್ ಆದಾಗ ಎಲ್ಲಾ ಕಾರ್ಯಕ್ರಮಗಳಿಗೂ ಅಟೆಂಡ್ ಆಗಿದ್ದೇನೆ. ಈಗ ಯಾಕೆ ನನ್ನ ಅನುಪಸ್ಥಿತಿಯಲ್ಲಿ ಆ ರೀತಿ ಮಾತನಾಡುತ್ತಿದ್ದಾರೋ ಗೊತ್ತಿಲ್ಲ ಎಂದು ನಟಿ ರಚಿತಾ ರಾಮ್‌ ಅಸಮಾಧಾನ ಹೊರಹಾಕಿದ್ದಾರೆ.

ಕೊನೆಗೂ ಮೌನ ಮುರಿದ ರಚಿತಾ ರಾಮ್; ಎಲ್ಲಾ ಆರೋಪಗಳಿಗೆ ವಿಡಿಯೋ ಮೂಲಕ ಸ್ಪಷ್ಟನೆ

Profile Prabhakara R Jun 20, 2025 8:04 PM

ಬೆಂಗಳೂರು: ನಟಿ ರಚಿತಾ ರಾಮ್‌ ವಿರುದ್ಧ ಸಂಜು ವೆಡ್ಸ್‌ ಗೀತಾ 2 ಚಿತ್ರದ ಪ್ರಚಾರಕ್ಕೆ ಅಸಹಕಾರ ಹಾಗೂ ಚಿತ್ರವೊಂದರ ನಿರ್ಮಾಪಕಿಗೆ ಅಡ್ವಾನ್ಸ್‌ ಹಣ ನೀಡದ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿ ಫಿಲ್ಮ್‌ ಚೇಂಬರ್‌ಗೆ ದೂರು ಸಹ ನೀಡಲಾಗಿತ್ತು. ಈ ಆರೋಪಗಳ ಬಗ್ಗೆ ಕೊನೆಗೂ ನಟಿ ರಚಿತಾ ರಾಮ್ (Actress Rachita Ram) ಮೌನ ಮುರಿದಿದ್ದು, ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು, ಇದೆಲ್ಲಾ ನನ್ನ ಮೇಲೆ ಬೇಕಂತಲೇ ಮಾಡಿರುವ ಆರೋಪ ಎಂದು ತಿಳಿಸಿದ್ದಾರೆ.

ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ನಟಿ ರಚಿತಾ ರಾಮ್‌ ಅವರು, ನಾನು ಸಂಜು ವೆಡ್ಸ್ ಗೀತಾ 2 ಚಿತ್ರಕ್ಕೆ ಎಲ್ಲಾ ರೀತಿಯ ಸಪೋರ್ಟ್ ‌ಮಾಡಿದ್ದೇನೆ. ಮೊದಲ ಬಾರಿ ರಿಲೀಸ್ ಆದಾಗ ಎಲ್ಲಾ ಕಾರ್ಯಕ್ರಮಗಳಿಗೂ ಅಟೆಂಡ್ ಆಗಿದ್ದೇನೆ. ಆಗ ಎಲ್ಲಾ ಮಾಧ್ಯಮಗಳ ಎದುರು ನನ್ನ ಹೊಗಳಿದ್ದಾರೆ. ರಚಿತಾ ರಾಮ್ ಅಂದ್ರೆ ಸಪೋರ್ಟಿವ್ ಅಂತೆಲ್ಲಾ ಮಾತನಾಡಿದ್ದಾರೆ. ಈಗ ಯಾಕೆ ನನ್ನ ಅನುಪಸ್ಥಿತಿಯಲ್ಲಿ ಆ ರೀತಿ ಮಾತನಾಡುತ್ತಿದ್ದಾರೋ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

ಇದೇ ಸಂಜು ವೆಡ್ಸ್ ಗೀತಾ 2 ಟೀಮ್ ಅವರು ಶೂಟಿಂಗ್ ಕಾರಣವೊಡ್ಡಿ, ಬೇರೊಂದು ಸಿನಿಮಾ ಪ್ರಮೋಷನ್‌ಗೆ ಹೋಗಲು ಅವಕಾಶ ಮಾಡಿಕೊಡಲಿಲ್ಲ. ಅವರು ದುಡ್ಡು ಹಾಕಿರಲಿಲ್ವಾ? ಅವಾಗ ಇನ್ನೊಬ್ಬರು ನಿರ್ಮಾಪಕರಿಗೆ ಕಷ್ಟ ಆಗ್ಲಿಲ್ವಾ? ಸರಿಯಾದ ಪ್ಲ್ಯಾನಿಂಗ್ ಇರಲಿಲ್ಲ, ಒಂದೊಂದು ದಿನ ಒಂದೊಂದು ಶೆಡ್ಯೂಲ್ ಹೇಳುತ್ತಿದ್ದರು. ಇವತ್ತು ಕಾರ್ಯಕ್ರಮ ಎಂದು ಹೇಳಿ ಕೊನೆ ಕ್ಷಣದಲ್ಲಿ ಮುಂದೂಡುತ್ತಿದ್ದರು. ಹೀಗಾಗಿ ನಾನು ಎರಡನೇ ಬಾರಿ ರಿಲೀಸ್ ಪ್ರಚಾರದಲ್ಲಿ ಪಾಲ್ಗೊಳ್ಳಲಾಗಲಿಲ್ಲ. ಇದೆಲ್ಲಾ ನನ್ನ ಮೇಲೆ ಬೇಕಂತಲೇ ಮಾಡಿರುವ ಆರೋಪ ಎಂದು ಹೇಳಿದ್ದಾರೆ.



ಇನ್ನೊಂದು ಸಿನಿಮಾದ ಅಡ್ವಾನ್ಸ್ ಪಡೆದು ವಾಪಸ್ ಮಾಡಿಲ್ಲ ಅನ್ನೋ ವಿಚಾರ ಸಾರಾ ಗೋವಿಂದು ನೇತೃತ್ವದಲ್ಲಿ ಮಾತುಕತೆಯಲ್ಲಿದೆ. ನಾನು ಆ ಬಗ್ಗೆ ಏನನ್ನೂ ಮಾತನಾಡುವಂತಿಲ್ಲ ಎಂದು ಆರೋಪಗಳಿಗೆ ರಚಿತಾ ರಾಮ್ ಕ್ಲಾರಿಟಿ ಕೊಟ್ಟಿದ್ದಾರೆ.

ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡದೇ ಇರುವಾಗ ಯಾಕೆ ಕ್ಷಮೆ ಕೇಳಬೇಕು? ಈಗಾಗಲೇ ನಾನು ಈ ವಿಚಾರದ ಬಗ್ಗೆ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದೇನೆ. ಈ ಎಲ್ಲಾ ವಿಚಾರದಿಂದ ನಾನು ತಪ್ಪು ಮಾಡಿದ್ದೇನೆ ಎಂದು ಅಭಿಮಾನಿಗಳು ಭಾವಿಸಿದರೆ ಅಭಿಮಾನಿಗಳ ಬಳಿ ಮಾತ್ರ ಕ್ಷಮೆ ಕೇಳುತ್ತೇನೆ ಹೊರತು ಬೇರೆ ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ ಎಂದು ರಚಿತಾ ರಾಮ್‌ ಹೇಳಿದ್ದಾರೆ.

ನಟಿ ವಿರುದ್ಧ ಕೇಳಿಬಂದಿರುವ ಆರೋಪಗಳೇನು?

ಸಿನಿಮಾ ಪ್ರಚಾರಕ್ಕೆ ಅಸಹಕಾರ ನೀಡಿದ ಹಿನ್ನೆಲೆಯಲ್ಲಿ ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಎಂದು ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದ ನಿರ್ದೇಶಕ ನಾಗಶೇಖರ್ (Nagashekar) ಮನವಿ ಸಲ್ಲಿಸಿದ್ದರು. ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿತ್ತು. ನಟಿ ಕಠಿಣ ಕ್ರಮ ತೆಗೆದುಕೊಳ್ಬೇಕು ಎಂದು ಚಿತ್ರತಂಡ ಆಗ್ರಹಿಸಿತ್ತು.

ಅದೇ ರೀತಿ ‘ಉಪ್ಪಿ ರುಪ್ಪಿ’ ಸಿನಿಮಾಗಾಗಿ ನಟಿ ರಚಿತಾ ರಾಮ್‌ಗೆ ನೀಡಿದ್ದ ಅಡ್ವಾನ್ಸ್‌ ಹಣ ವಾಪಸ್‌ ಕೊಡದೇ ಸತಾಯಿಸುತ್ತಿದ್ದಾರೆ ಆರೋಪಿಸಿ ನಿರ್ಮಾಪಕಿ ವಿಜಯಲಕ್ಷ್ಮಿ ಅರಸ್ ದೂರು ನೀಡಿದ್ದರು. 8 ವರ್ಷಗಳ ಹಿಂದೆ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದಲ್ಲಿ ‘ಉಪ್ಪಿ ರುಪ್ಪಿ’ ಸಿನಿಮಾ ಸಿದ್ಧವಾಗಬೇಕಿತ್ತು. ವಿಜಯಲಕ್ಷ್ಮಿ ಅರಸ್ ನಿರ್ಮಾಣದ ಆ ಸಿನಿಮಾಗೆ ಕೆ. ಮಾದೇಶ್ ನಿರ್ದೇಶನ ಮಾಡುತ್ತಿದ್ದರು. ಆ ಚಿತ್ರದಲ್ಲಿ ನಟಿಸಲು ರಚಿತಾ ರಾಮ್ ಒಪ್ಪಿಕೊಂಡಿದ್ದರು. 23 ಲಕ್ಷ ರೂಪಾಯಿ ಸಂಭಾವನೆಗೆ ಕಮಿಟ್ ಆಗಿದ್ದ ರಚಿತಾ ಅವರು ಮುಂಗಡವಾಗಿ 13 ಲಕ್ಷ ರೂಪಾಯಿ ಪಡೆದುಕೊಂಡಿದ್ದರು. ಆದರೆ, ಹಣ ವಾಪಸ್‌ ನೀಡಿಲ್ಲ ಎಂಬ ಆರೋಪ ನಟಿ ವಿರುದ್ಧ ಕೇಳಿಬಂದಿದೆ.

ಈ ಸುದ್ದಿಯನ್ನೂ ಓದಿ | Rachita Ram: ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್‌ಗೆ ದೂರು; ಕಠಿಣ ಕ್ರಮ ಕೈಗೊಳ್ಳುವಂತೆ ನಿರ್ದೇಶಕ ನಾಗಶೇಖರ್ ಒತ್ತಾಯ