ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Thimmana Mottegalu Movie: ಟ್ರೈಲರ್‌ನಲ್ಲೇ ಕುತೂಹಲ ಮೂಡಿಸಿದ ʼತಿಮ್ಮನ ಮೊಟ್ಟೆಗಳುʼ

Thimmana Mottegalu Movie: ವಿಭಿನ್ನ ಕಥಾಹಂದರ ಹೊಂದಿರುವ ʼತಿಮ್ಮನ ಮೊಟ್ಟೆಗಳುʼ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ರಕ್ಷಿತ್ ತೀರ್ಥಹಳ್ಳಿ ಅವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಜೂನ್ 27 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

ಟ್ರೈಲರ್‌ನಲ್ಲೇ ಕುತೂಹಲ ಮೂಡಿಸಿದ ʼತಿಮ್ಮನ ಮೊಟ್ಟೆಗಳುʼ

Profile Siddalinga Swamy Jun 13, 2025 2:26 PM

ಬೆಂಗಳೂರು: ರಕ್ಷಿತ್ ತೀರ್ಥಹಳ್ಳಿ ಅವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ ʼತಿಮ್ಮನ ಮೊಟ್ಟೆಗಳುʼ ಚಿತ್ರದ (Thimmana Mottegalu Movie) ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಹಿರಿಯ ನಿರ್ದೇಶಕ ಪಿ. ಶೇಷಾದ್ರಿ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್‌ನ ಅಧ್ಯಕ್ಷ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.



ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಹಿರಿಯ ನಿರ್ದೇಶಕ ಪಿ. ಶೇಷಾದ್ರಿ, ನಾನು ಈ ಚಿತ್ರವನ್ನು ಕೊಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೋಡಿದ್ದೇನೆ. ಈಗಿನ ಪರಿಸ್ಥಿತಿಗೆ ತಕ್ಕಂತಹ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ‌. ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು

ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬಂದಿರುವ ಚೊಚ್ಚಲ ನಿರ್ಮಾಣಕ್ಕೆ ಆದರ್ಶ್ ಅಯ್ಯಂಗಾರ್ ಬಂಡವಾಳ ಹಾಕಿದ್ದಾರೆ. ನಾನೇ ಬರೆದಿರುವ ʼಕಾಡಿನ ನೆಂಟರುʼ ಕಥಾ ಸಂಕಲನದಿಂದ ಆಯ್ದ ಒಂದು ಕಥೆ ʼತಿಮ್ಮನ ಮೊಟ್ಟೆಗಳುʼ ಸಿನಿಮಾವಾಗಿದೆ. ಪಶ್ಚಿಮಘಟ್ಟದ ಕಾಡುಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಕಾಳಿಂಗ ಸರ್ಪದ ಕುರಿತು ಚಿತ್ರದ ಪ್ರಮುಖ ಕಥೆಯಿದ್ದು, ಮನುಷ್ಯನಲ್ಲಿರುವ ಹಾಗೆ ಪ್ರಾಣಿಗಳಲ್ಲೂ ಬಾಂಧವ್ಯವಿದೆ. ಈ ತರಹದ ವಿಚಾರಗಳನ್ನು ಜನರ ಮುಂದಿಡುವ ಪ್ರಯತ್ನ ಮಾಡಿದ್ದೇನೆ. ನಿರ್ಮಾಪಕರು ಇತ್ತೀಚೆಗೆ ಅಮೇರಿಕಾದ ಡಾಲಸ್‌ನಲ್ಲಿ ಪ್ರಿಮೀಯರ್ ಶೋ ಸಹ ಆಯೋಜಿಸಿದ್ದರು. ಅಲ್ಲಿನ ಜನರು ಚಿತ್ರವನ್ನು ಬಹಳ ಇಷ್ಟಪಟ್ಟಿದ್ದಾರೆ. ಪ್ರಸಿದ್ದ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರದರ್ಶನವಾಗಿರುವ ನಮ್ಮ ಚಿತ್ರ ಜೂನ್ 27 ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ.

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮ ಸಂವೇದನೆಗಳನ್ನೊಳಗೊಂಡಿರುವ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ಹಿರಿಯ ನಟ ಸುಚೇಂದ್ರ ಪ್ರಸಾದ್ ತಿಳಿಸಿದರು.

ಈ ಸುದ್ದಿಯನ್ನೂ ಓದಿ | Monsoon Lipsticks 2025: ಮಾನ್ಸೂನ್‌ಗೆ ಕಾಲಿಟ್ಟ ವೈವಿಧ್ಯಮಯ ವಾಟರ್ ಪ್ರೂಫ್ ಲಿಪ್‌ಸ್ಟಿಕ್ಸ್

ತಿಮ್ಮನ ಪಾತ್ರಧಾರಿ ಕೇಶವ್ ಗುತ್ತಳಿಕೆ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಆಶಿಕಾ ಸೋಮಶೇಖರ್, ಪ್ರಗತಿ ಪ್ರಭು, ರಘು ರಾಮನಕೊಪ್ಪ ಹಾಗೂ ಸಂಗೀತ ನಿರ್ದೇಶಕ ಹೇಮಂತ್ ಜೋಯಿಷ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.