ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕ್ರಿಕೆಟ್‌
ಮಾಲಿನ್ಯ ಸಮಸ್ಯೆ; ನವೆಂಬರ್ ಟೆಸ್ಟ್ ಪಂದ್ಯವನ್ನು ದೆಹಲಿಯಿಂದ ಸ್ಥಳಾಂತರಿಸಿದ ಬಿಸಿಸಿಐ

ತವರಿನ ಕ್ರಿಕೆಟ್‌ ಸರಣಿಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಭಾರತ ತಂಡವು ನವೆಂಬರ್ 14 ರಿಂದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯವನ್ನು ಆಡಬೇಕಿತ್ತು. ಆ ಪಂದ್ಯವು ಈಗ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ನವದೆಹಲಿಯು ಪ್ರವಾಸಿ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಅಕ್ಟೋಬರ್‌ನಲ್ಲಿ ಕೋಲ್ಕತ್ತಾದಲ್ಲಿ ನಡೆಯಬೇಕಿದ್ದ ಟೆಸ್ಟ್ ಪಂದ್ಯವನ್ನು ಆಯೋಜಿಸಲಿದೆ.

ICC WTC Final 2025: ವಿಶ್ವ ಟೆಸ್ಟ್‌ ಫೈನಲ್ ಗೆದ್ದ ತಂಡಕ್ಕೆ ಸಿಗಲಿದೆ ಭಾರೀ ಮೊತ್ತದ ಬಹುಮಾನ

ವಿಶ್ವ ಟೆಸ್ಟ್‌ ಫೈನಲ್ ಗೆದ್ದ ತಂಡಕ್ಕೆ ಸಿಗಲಿದೆ ಭಾರೀ ಮೊತ್ತದ ಬಹುಮಾನ

ಈ ಹಿಂದಿನ ಎರಡು ಆವೃತ್ತಿಗಿಂತ ಈ ಬಾರಿ ಚಾಂಪಿಯನ್‌ ಮತ್ತು ರನ್ನರ್‌ ಅಪ್‌ ಆದ ತಂಡಗಳು ಭಾರೀ ನಗದು ಬಹುಮಾನ ಪಡೆಯಲಿದೆ. ಅದರಂತೆ ಫೈನಲ್‌ನಲ್ಲಿ ಗೆಲುವು ಸಾಧಿಸುವ ತಂಡಕ್ಕೆ ಒಟ್ಟು $3.6 ಮಿಲಿಯನ್ ಡಾಲರ್​ ಬಹುಮಾನ ಸಿಗಲಿದೆ. ಅಂದರೆ ವಿಜೇತ ತಂಡಕ್ಕೆ ರೂ.30.88 ಕೋಟಿ ಸಿಗಲಿದೆ. ರನ್ನರ್‌ ಅಪ್‌ ತಂಡವು 18.50 ಕೋಟಿ (2.1 ಮಿಲಿಯನ್ ಡಾಲರ್) ಪಡೆದುಕೊಳ್ಳಲಿದೆ.​

R Ashwin Loses Cool: ಔಟ್‌ ವಿಚಾರವಾಗಿ ಮಹಿಳಾ ಅಂಪೈರ್‌ ಜತೆ ವಾಗ್ವಾದ ನಡೆಸಿದ ಅಶ್ವಿನ್

ಔಟ್‌ ವಿಚಾರವಾಗಿ ಮಹಿಳಾ ಅಂಪೈರ್‌ ಜತೆ ವಾಗ್ವಾದ ನಡೆಸಿದ ಅಶ್ವಿನ್

ಪಂದ್ಯದಲ್ಲಿ ಅತ್ಯಂತ ಹೀನಾಯ ಬ್ಯಾಟಿಂಗ್‌ ಪ್ರದರ್ಶನ ತೋರಿದ ದಿಂಡಿಗಲ್ ಡ್ರಾಗನ್ಸ್ 16.2 ಓವರ್‌ಗಳಲ್ಲಿ ಕೇವಲ 93 ರನ್‌ಗೆ ಸರ್ವಪತನ ಕಂಡಿತು. ಅಲ್ಪ ಮೊತ್ತವನ್ನು ಬೆನ್ನಟ್ಟಿದ ಐಡ್ರೀಮ್ ತಿರುಪ್ಪೂರ್ 11.5 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 94 ರನ್‌ ಬಾರಿಸಿ 9 ವಿಕೆಟ್‌ ಅಂತರದ ಭರ್ಝರಿ ಗೆಲುವು ಸಾಧಿಸಿತು.

INDA vs ENGA: ಖಲೀಲ್ ಬೌಲಿಂಗ್‌ ದಾಳಿಗೆ ಕುಸಿದ ಇಂಗ್ಲೆಂಡ್ ಲಯನ್ಸ್

ಖಲೀಲ್ ಬೌಲಿಂಗ್‌ ದಾಳಿಗೆ ಕುಸಿದ ಇಂಗ್ಲೆಂಡ್ ಲಯನ್ಸ್

ನಾಯಕ ಅಭಿಮನ್ಯು ಈಶ್ವರನ್ ನಾಯಕನ ಆಟವಾಡಿ 80 ರನ್‌ ಬಾರಿಸಿದರು. ಆದರೆ ಕರುಣ್‌ ನಾಯರ್‌(15) ಮತ್ತು ಆರಂಭಕಾರ ಯಶಸ್ವಿ ಜೈಸ್ವಾಲ್‌(5) ರನ್‌ ಗಳಿಸಿದರು. ಧ್ರುವ್ ಜುರೆಲ್(6) ಮತ್ತು ನಿತೀಶ್‌ ಕುಮಾರ್‌ ರೆಡ್ಡಿ(1) ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಇಂದು ಅಂತಿಮ ದಿನವಾಗಿದ್ದು ಪಂದ್ಯ ಡ್ರಾದಲ್ಲಿ ಮುಕ್ತಾಯಗೊಳ್ಳುವುದು ಖಚಿತವಾದಂತಿದೆ.

IND vs ENG Test Series: ಮೊದಲ ಟೆಸ್ಟ್‌ಗೆ ಭಾರತ ಆಡುವ ಬಳಗ ಹೇಗಿದ್ದೀತು?

ಮೊದಲ ಟೆಸ್ಟ್‌ಗೆ ಭಾರತ ಆಡುವ ಬಳಗ ಹೇಗಿದ್ದೀತು?

ಉಪನಾಯಕ ರಿಷಭ್‌ ಪಂತ್‌ ಕೀಪಿಂಗ್‌ ಹೊಣೆ ಹೊರಲಿದ್ದಾರೆ. ನಿತೀಶ್‌ ಕುಮಾರ್‌ ರೆಡ್ಡಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಆಡಲಿದ್ದಾರೆ. ಈ ತಂಡದ ಪ್ರಕಾರ ಆಡುವ ಬಳಗದಲ್ಲಿ ಒಟ್ಟು ಮೂರು ಕನ್ನಡಿಗರು ಕಾಣಿಸಿಕೊಳ್ಳಲಿದ್ದಾರೆ.

IPL 2025 Revenue: ಐಪಿಎಲ್ 2025ರಿಂದ ಬಿಸಿಸಿಐಗೆ ಬಂದ ಆದಾಯ ಎಷ್ಟು?

ಐಪಿಎಲ್ 2025ರಿಂದ ಬಿಸಿಸಿಐಗೆ ಬಂದ ಆದಾಯ ಎಷ್ಟು?

ಟಾಟಾ ಗ್ರೂಪ್ 2024 ರಿಂದ 2028 ರವರೆಗಿನ ಐಪಿಎಲ್‌ನ ಶೀರ್ಷಿಕೆ ಪ್ರಾಯೋಜಕರಾಗಿದ್ದು, ಒಟ್ಟು ₹2,500 ಕೋಟಿ ಮೌಲ್ಯದ ಒಪ್ಪಂದವನ್ನು ಹೊಂದಿದೆ. ಅಂದರೆ ಐಪಿಎಲ್ 2025 ಸೇರಿದಂತೆ ಪ್ರತಿ ಋತುವಿನಲ್ಲಿ ಟಾಟಾದಿಂದಲೇ ₹500 ಕೋಟಿ ಆದಾಯ ಬರುತ್ತದೆ.

ಕ್ರಿಕೆಟಿಗ ಅಯ್ಯರ್‌ ಜತೆ ಮದುವೆಯಾಗಿ ಇಬ್ಬರು ಮಕ್ಕಳ ತಾಯಿಯಾಗಿದ್ದೇನೆ; ಬಾಲಿವುಡ್‌ ನಟಿಯ ಸ್ಫೋಟಕ ಹೇಳಿಕೆ

ಅಯ್ಯರ್‌ ಜತೆ ಮದುವೆಯಾಗಿ ಇಬ್ಬರು ಮಕ್ಕಳ ತಾಯಿಯಾಗಿದ್ದೇನೆ ಎಂದ ನಟಿ

ಶ್ರೇಯಸ್‌ ಅಯ್ಯರ್‌ ಇತ್ತೀಚೆಗೆ ಮುಕ್ತಾಯ ಕಂಡಿದ್ದ ಐಪಿಎಲ್‌ ಟೂರ್ನಿಯಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದ ನಾಯಕನಾಗಿದ್ದರು. ಪಂಜಾಬ್‌ ತಂಡ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ 6 ರನ್‌ ಅಂತರದಿಂದ ಸೋತು ಚೊಚ್ಚಲ ಟ್ರೋಫಿ ಎತ್ತಿ ಹಿಡಿಯುವ ಅವಕಾಶ ಕಳೆದುಕೊಂಡಿತ್ತು.

IND vs ENG Test: ಟೆಸ್ಟ್‌ ಸರಣಿಗೆ ಅಭ್ಯಾಸ ಆರಂಭಿಸಿದ 'ಯಂಗ್‌ ಟೀಮ್‌ ಇಂಡಿಯಾ'

ಟೆಸ್ಟ್‌ ಸರಣಿಗೆ ಅಭ್ಯಾಸ ಆರಂಭಿಸಿದ 'ಯಂಗ್‌ ಟೀಮ್‌ ಇಂಡಿಯಾ'

ನಾಯಕ ಶುಭಮನ್ ಗಿಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಕುಲ್‌ದೀಪ್‌ ಯಾದವ್‌ ಹಾಗೂ ವೇಗಿಗಳಾದ ಜಸ್‌ಪ್ರೀತ್‌ ಬೂಮ್ರಾ, ಪ್ರಸಿದ್ದ್‌ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ ಮುಖ್ಯ ಕೋಚ್‌ ಗೌತಮ್‌ ಗಂಭೀರ್‌ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ನಡೆಸಿದರು.

Bengaluru Stampede: ಕಬ್ಬನ್ ಪಾರ್ಕ್‌ನ ಗಿಡ-ಮರಗಳಿಗೆ ಹಾನಿ; ಆರ್‌ಸಿಬಿ, ಕೆಎಸ್‌ಸಿಎ ವಿರುದ್ಧ ದೂರು ದಾಖಲು

ಕಬ್ಬನ್ ಪಾರ್ಕ್‌ನ ಗಿಡ-ಮರಗಳಿಗೆ ಹಾನಿ; ಆರ್‌ಸಿಬಿ ವಿರುದ್ಧ ದೂರು ದಾಖಲು

ಜನರ ಕಾಲ್ತುಳಿತದಿಂದ ಕಬ್ಬನ್​ ಪಾರ್ಕ್​​ನ ಗಿಡ, ಮರಗಳಿಗೂ ಹಾನಿ ಉಂಟಾಗಿದೆ. ಹೀಗಾಗಿ ವಾಕರ್ಸ್ ಅಸೋಸಿಯೇಷನ್​​ನಿಂದ ಆರ್‌ಸಿಬಿ, ಡಿಎನ್‌ಎ ಕಂಪನಿ, ಕೆಎಸ್‌ಸಿಎ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಈಗಾಗಲೇ ಪ್ರಕರಣದಲ್ಲಿ ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಹಾಗೂ ಡಿಎನ್‌ಎ ಕಂಪನಿ ವ್ಯವಸ್ಥಾಪಕ ಕಿರಣ್ ಸೇರಿ ನಾಲ್ವರ ಬಂಧನವಾಗಿದೆ.

Rinku Singh-Priya Saroj: ಸಂಸದೆ ಪ್ರಿಯಾ ಸರೋಜ್ ಜತೆ ನಿಶ್ಚಿತಾರ್ಥ ಮಾಡಿಕೊಂಡ ರಿಂಕು ಸಿಂಗ್

ಸಂಸದೆ ಪ್ರಿಯಾ ಸರೋಜ್ ಜತೆ ನಿಶ್ಚಿತಾರ್ಥ ಮಾಡಿಕೊಂಡ ರಿಂಕು ಸಿಂಗ್

ನಿಶ್ಚಿತಾರ್ಥದಲ್ಲಿ ಮಾಜಿ ಕ್ರಿಕೆಟಿಗರಾದ ಪ್ರವೀಣ್ ಕುಮಾರ್ ಮತ್ತು ಪಿಯೂಷ್ ಚಾವ್ಲಾ, ಉತ್ತರ ಪ್ರದೇಶ ರಣಜಿ ತಂಡದ ನಾಯಕ ಆರ್ಯನ್ ಜುಯಾಲ್ ಉಪಸ್ಥಿತರಿದ್ದರು. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಸಂಸದೆ ಡಿಂಪಲ್ ಯಾದವ್ ಮತ್ತು ಪ್ರಿಯಾ ಸರೋಜ್ ಅವರ ಗೆಳತಿ ಸಂಸದೆ ಇಕ್ರಾ ಹಸನ್ ಸೇರಿದಂತೆ ರಾಜಕೀಯ ಗಣ್ಯರು ಉಪಸ್ಥಿತರಿದ್ದರು.

IND vs ENG: ಟೆಸ್ಟ್‌ ಸರಣಿಗೆ ಮಾರ್ಕ್‌ ವುಡ್‌ ಲಭ್ಯತೆ ಬಗ್ಗೆ ಇಂಗ್ಲೆಂಡ್‌ ಸೆಲೆಕ್ಟರ್‌ ಮಹತ್ವದ ಹೇಳಿಕೆ!

ಮಾರ್ಕ್‌ ವುಡ್‌ ಲಭ್ಯತೆ ಬಗ್ಗೆ ಇಂಗ್ಲೆಂಡ್‌ ಸೆಲೆಕ್ಟರ್‌ ಮಾಹಿತಿ!

Luke Wright on Mark Wood's Comeback: ಭಾರತ ವಿರುದ್ಧದ ಮುಂಬರುವ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ವೇಗದ ಬೌಲರ್‌ ಮಾರ್ಕ್‌ ವುಡ್‌ ಆಡಬಹುದೆಂದು ಇಂಗ್ಲೆಂಡ್ ತಂಡ ಸೆಲೆಕ್ಟರ್‌ ಲ್ಯೂಕ್‌ ರೈಟ್‌ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.‌ ಮಾರ್ಕ್‌ ವುಡ್‌ ಮೊಣಕಾಲು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು.

IND vs ENG: ರಿಷಭ್‌ ಪಂತ್‌ ಔಟ್‌! ವಿಕೆಟ್‌ ಕೀಪರ್‌ ಆಗಿ ಮೊದಲನೇ ಟೆಸ್ಟ್‌ ಆಡಲಿರುವ ಧ್ರುವ್‌ ಜುರೆಲ್?

ಪಂತ್‌ ಬದಲು ವಿಕೆಟ್‌ ಕೀಪರ್‌ ಆಗಿ ಆಡಲಿರುವ ಧ್ರುವ್‌ ಜುರೆಲ್‌?

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಐದು ಪಂದ್ಯಗಳ ಟೆಸ್ಟ್‌ ಸರಣಿಯು ಜೂನ್‌ 20 ರಂದು ಆರಂಭವಾಗಲಿದೆ. ಈ ಟೆಸ್ಟ್‌ ಸರಣಿಯಲ್ಲಿ ಯಾವ ಪ್ಲೇಯಿಂಗ್‌ XIನೊಂದಿಗೆ ಭಾರತ ಕಣಕ್ಕೆ ಇಳಿಯಲಿದೆ ಎಂಬುದು ಇನ್ನೂ ಖಚಿತವಿಲ್ಲ. ಆದರೆ, ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ಧ್ರುಬ್‌ ಜುರೆಲ್‌, ಔಟ್‌ ಆಫ್‌ ಫಾರ್ಮ್‌ ರಿಷಭ್‌ ಪಂತ್‌ ಅವರನ್ನು ಹಿಂದಿಕ್ಕುವ ಸಾಧ್ಯತೆ ಇದೆ.

ಭಾರತ ತಂಡದ ನಾಯಕತ್ವದ ರೇಸ್‌ನಲ್ಲಿ ಶ್ರೇಯಸ್‌ ಅಯ್ಯರ್‌! ಅಧಿಕಾರಿ ಹೇಳಿದ್ದೇನು?

ಭಾರತ ತಂಡದ ನಾಯಕತ್ವದ ರೇಸ್‌ನಲ್ಲಿ ಶ್ರೇಯಸ್‌ ಅಯ್ಯರ್!

2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದ ಸಾಮರ್ಥ್ಯವನ್ನು ಬಿಸಿಸಿಐ ಪರಿಶೀಲಿಸುತ್ತಿದೆ ಹಾಗೂ ಭಾರತ ವೈಟ್‌ಬಾಲ್‌ ತಂಡದ ನಾಯಕತ್ವದ ರೇಸ್‌ಗೆ ಅವರು ಮರಳಿದ್ದಾರೆಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

IND vs ENG: ಯಶಸ್ವಿ ಜೈಸ್ವಾಲ್‌ ಜೊತೆ ಸಾಯಿ ಸುದರ್ಶನ್‌ ಇನಿಂಗ್ಸ್‌ ಆರಂಭಿಸಬೇಕೆಂದ ರಿಕಿ ಪಾಂಟಿಂಗ್‌!

ಜೈಸ್ವಾಲ್‌ ಜೊತೆ ಸುದರ್ಶನ್‌ ಇನಿಂಗ್ಸ್‌ ಆರಂಭಿಸಬೇಕೆಂದ ಪಾಂಟಿಂಗ್‌!

Ricky Ponting on Sai Sudarshan: ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟೆಸ್ಟ್‌ ಸರಣಿಯ ಭಾರತ ತಂಡದ ಪ್ಲೇಯಿಂಗ್‌ XIನಲ್ಲಿ ಯಶಸ್ವಿ ಜೈಸ್ವಾಲ್‌ ಅವರ ಜೊತೆ ಸಾಯಿ ಸುದರ್ಶನ್‌ ಇನಿಂಗ್ಸ್‌ ಆರಂಭಿಸಬೇಕೆಂದು ಆಸ್ಟ್ರೇಲಿಯಾ ದಿಗ್ಗಜ ರಿಕಿ ಪಾಂಟಿಂಗ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೂನ್‌ 20 ರಂದು ಮೊದಲನೇ ಪಂದ್ಯದ ಮೂಲಕ ಟೆಸ್ಟ್‌ ಸರಣಿ ಆರಂಭವಾಗಲಿದೆ.

IPL 2025: ಆರ್‌ಸಿಬಿಗೆ ಕಪ್‌ ಗೆದ್ದುಕೊಡಬಲ್ಲ ನಾಲ್ವರು ಸ್ಟಾರ್‌ಗಳನ್ನು ಆರಿಸಿದ ವಿಜಯ್ ಮಲ್ಯ!

ಆರ್‌ಸಿಬಿಗೆ ಕಪ್‌ ಗೆದ್ದುಕೊಡಬಲ್ಲ 4 ಸ್ಟಾರ್‌ಗಳನ್ನು ಆರಿಸಿದ ಮಲ್ಯ!

Vijay mallya on Match winners for RCB: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ನಡುವೆ ಈ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ಅವರ ಸಂದರ್ಶನವೊಂದು ಸಿಕ್ಕಾಪಟ್ಟೆ ವೈರಲ್‌ ಆಗಿದೆ.

IND vs ENG: ಇಂಗ್ಲೆಂಡ್‌ ವಿರುದ್ಧ ಅತಿ ಹೆಚ್ಚು ಟೆಸ್ಟ್‌ ರನ್‌ ಗಳಿಸಿದ ಭಾರತದ ಟಾಪ್‌ 5 ಬ್ಯಾಟರ್ಸ್‌!

ಆಂಗ್ಲರ ಎದುರು ಅತಿ ಹೆಚ್ಚು ಟೆಸ್ಟ್‌ ರನ್‌ ಗಳಿಸಿದ ಟಾಪ್‌ 5 ಬ್ಯಾಟರ್ಸ್‌!

ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಣ ಟೆಸ್ಟ್‌ ಕ್ರಿಕೆಟ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ಮೌಲ್ಯವಿದೆ. ಇಂಗ್ಲೆಂಡ್‌ ವಿರುದ್ಧ ಭಾರತ ತಂಡ ತನ್ನ ತವರಿನಲ್ಲಿ ಪ್ರಾಬಲ್ಯ ಸಾಧಿಸಿದ್ದರೆ, ಇಂಗ್ಲೆಂಡ್‌ ತಂಡ ತನ್ನ ತವರಿನಲ್ಲಿ ಭಾರತದ ವಿರುದ್ಧ ಪ್ರಾಬಲ್ಯ ಸಾಧಿಸಿದೆ. ಜೂನ್‌ 20 ರಂದು ಇಂಗ್ಲೆಂಡ್‌ ವಿರುದ್ದ ಐದು ಪಂದ್ಯಗಳಲ್ಲಿ ಟೆಸ್ಟ್‌ ಸರಣಿಯನ್ನು ಟೀಮ್‌ ಇಂಡಿಯಾ ಆರಂಭಿಸಲಿದೆ. ಇಂಗ್ಲೆಂಡ್‌ ವಿರುದ್ದ ಅತಿ ಹೆಚ್ಚು ಟೆಸ್ಟ್‌ ರನ್‌ ಗಳಿಸಿದ ಬ್ಯಾಟ್ಸ್‌ಮನ್‌ಗಳನ್ನು ಇಲ್ಲಿ ವಿವರಿಸಲಾಗಿದೆ.

IND vs ENG: ಭಾರತದ ಪ್ಲೇಯಿಂಗ್‌ XIನಲ್ಲಿ 3ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರನನ್ನು ಹೆಸರಿಸಿದ ಮೈಕಲ್‌ ಕ್ಲಾರ್ಕ್‌!

ಭಾರತದ 3ನೇ ಕ್ರಮಾಂಕಕ್ಕೆ ಸೂಕ್ತ ಆಟಗಾರನನ್ನು ಆರಿಸಿದ ಮೈಕಲ್ ಕ್ಲಾರ್ಕ್‌!

Michael Clarke Huge Praised on Sai Sudarshan: ಜೂನ್ 20ರಂದು ಭಾರತ ಹಾಗೂ ಇಂಗ್ಲೆಂಡ್ ನಡುವೆ ಟೆಸ್ಟ್ ಸರಣಿ ಆರಂಭವಾಗಲಿದೆ. ಇದೇ ವೇಳೆ ಟೀಮ್ ಇಂಡಿಯಾದ ಮೂರನೇ ಕ್ರಮಾಂಕದಲ್ಲಿ ಎಡಗೈ ಆಟಗಾರ ಸಾಯಿ ಸುದರ್ಶನ್‌ಗೆ ಅವಕಾಶ ಕಲ್ಪಿಸಬೇಕೆಂದು ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಸಲಹೆ ನೀಡಿದ್ದಾರೆ.

ಬೆಂಗಳೂರು ಫ್ರಾಂಚೈಸಿ ವಿಜಯ್‌ ಮಲ್ಯಗೆ ಮೊದಲ ಆಯ್ಕೆಯಾಗಿರಲಿಲ್ಲ: ಲಲಿತ್‌ ಮೋದಿ!

ಬೆಂಗಳೂರು ಫ್ರಾಂಚೈಸಿ ಮಲ್ಯಗೆ ಮೊದಲ ಆಯ್ಕೆಯಾಗಿರಲಿಲ್ಲ: ಲಲಿತ್‌ ಮೋದಿ

Lalit Modi on Bengaluru franchise: 2008ರಲ್ಲಿ ಆರಂಭವಾಗಿದ್ದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಬೆಂಗಳೂರು ಫ್ರಾಂಚೈಸಿ ವಿಜಯ್‌ ಮಲ್ಯಗೆ ಮೊದಲ ಆಯ್ಕೆಯಾಗಿರಲಿಲ್ಲ. ಅವರು ಮುಂಬೈ ಫ್ರಾಂಚೈಸಿಯನ್ನು ಖರೀದಿಸಲು ಬಯಸಿದ್ದರು. ಆದರೆ, ಅದು ಸಿಗದ ಕಾರಣ ಬೆಂಗಳೂರು ಫ್ರಾಂಚೈಸಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದರು ಎಂದು ಐಪಿಎಲ್‌ ಸಂಸ್ಥಾಪಕ ಲಲಿತ್‌ ಮೋದಿ ತಿಳಿಸಿದ್ದಾರೆ.

Bengaluru Stampede: ಬೆಂಗಳೂರು ಕಾಲ್ತುಳಿತ; ನೈತಿಕ ಹೊಣೆ ಹೊತ್ತು ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು ಕಾಲ್ತುಳಿತ; ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

Bengaluru Stampede: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಕಾರ್ಯದರ್ಶಿ ಶಂಕರ್ ಹಾಗೂ ಕೆಎಸ್​​ಸಿಎ ಖಜಾಂಚಿ ಜೈರಾಮ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜಿನಾಮೆ (Resignation) ನೀಡಿದ್ದಾರೆ. ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಶಂಕರ್, ಜೈರಾಮ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Bengaluru Stampede: ಬೆಂಗಳೂರು ಕಾಲ್ತುಳಿತಕ್ಕೆ ಸಂಬಂಧಿಸಿ ಆರ್‌ಸಿಬಿ ಮೇಲೆ 3ನೇ ಎಫ್‌ಐಆರ್

ಬೆಂಗಳೂರು ಕಾಲ್ತುಳಿತಕ್ಕೆ ಸಂಬಂಧಿಸಿ ಆರ್‌ಸಿಬಿ ಮೇಲೆ 3ನೇ ಎಫ್‌ಐಆರ್

Bengaluru Stampede: ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಹೊಣೆಗಾರರನ್ನಾಗಿ ಮಾಡಿ ಆರ್‌ಸಿಬಿ ಮೇಲೆ ಮೂರು ಎಫ್‌ಐಆರ್‌ ದಾಖಲಾಗಿದೆ. ಆರ್​ಸಿಬಿ ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಆರ್​ಸಿಬಿ ಮ್ಯಾನೇಜ್ಮೆಂಟ್ A-1, DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್​ A3 ಆಗಿದ್ದಾರೆ.

ವಿರಾಟ್‌ ಕೊಹ್ಲಿ ಟೆಸ್ಟ್‌ ನಿವೃತ್ತಿಯಿಂದ ಹೊರಬರುವ ಸಾಧ್ಯತೆ ಇದೆ ಎಂದ ಮೈಕಲ್‌ ಕ್ಲಾರ್ಕ್‌!

ವಿರಾಟ್‌ ಕೊಹ್ಲಿ ಟೆಸ್ಟ್‌ ನಿವೃತ್ತಿಯಿಂದ ಹೊರಬರುವ ಸಾಧ್ಯತೆ: ಕ್ಲಾರ್ಕ್‌!

ಆಧುನಿಕ ಕ್ರಿಕೆಟ್‌ ದಿಗ್ಗಜ ವಿರಾಟ್‌ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ಗೆ ಇಷ್ಟು ಬೇಗ ನಿವೃತ್ತಿ ಪಡೆಯಬಾರದಿತ್ತು ಆಸ್ಟ್ರೇಲಿಯಾ ಮಾಜಿ ನಾಯಕ ಮೈಕಲ್‌ ಕ್ಲಾರ್ಕ್‌ ಎಂದು ಹೇಳಿದ್ದಾರೆ. ಇಂಗ್ಲೆಂಡ್‌ ವಿರುದ್ಧ ಮುಂಬರುವ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡ 0-5 ಅಂತರದಲ್ಲಿ ಸೋಲು ಅನುಭವಿಸಿದರೆ, ವಿರಾಟ್‌ ಕೊಹ್ಲಿ ಟೆಸ್ಟ್‌ ನಿವೃತ್ತಿಯಿಂದ ಹೊರ ಬರಬಹುದು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

INDA vs ENGA: ಇಂಗ್ಲೆಂಡ್‌ ಲಯನ್ಸ್‌ ಎದುರು ಶತಕ ಸಿಡಿಸಿದ ಕನ್ನಡಿಗ ಕೆಎಲ್‌ ರಾಹುಲ್‌!

ಇಂಗ್ಲೆಂಡ್‌ ಲಯನ್ಸ್‌ ವಿರುದ್ಧ ಶತಕ ಬಾರಿಸಿದ ಕೆಎಲ್‌ ರಾಹುಲ್!

KL Rahul Scored Hundred againsr England Lions: ಇಂಗ್ಲೆಂಡ್‌ ವಿರುದ್ಧ ಮುಂಬವರು ಐದು ಪಂದ್ಯಗಳ ಟೆಸ್ಟ್‌ ಸರಣಿಗೂ ಮುನ್ನ ಭಾರತ ತಂಡದ ಕೆಎಲ್‌ ರಾಹುಲ್‌ ಭರ್ಜರಿ ಶತಕವನ್ನು ಸಿಡಿಸಿದ್ದಾರೆ. ಅವರು ಜೂನ್‌ 6 ರಂದು ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ ಎರಡನೇ ಅನಗತ್ಯ ಟೆಸ್ಟ್‌ ಪಂದ್ಯದಲ್ಲಿ ಶತಕವನ್ನು ಬಾರಿಸಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಖರೀದಿಸಲು ಬಲವಾದ ಕಾರಣ ತಿಳಿಸಿದ ವಿಜಯ್‌ ಮಲ್ಯ!

2028ರಲ್ಲಿ ಆರ್‌ಸಿಬಿಯನ್ನು ಖರೀದಿಸಲು ಕಾರಣ ತಿಳಿಸಿದ ವಿಜಯ್‌ ಮಲ್ಯ!

18 ವರ್ಷಗಳ ದೀರ್ಘ ಕಾಯುವಿಕೆಯ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಚೊಚ್ಚಲ ಚಾಂಪಿಯನ್‌ ಆಯಿತು. ಉದ್ಯಮಿ ವಿಜಯ್ ಮಲ್ಯ 2008ರಲ್ಲಿ ಆರ್‌ಸಿಬಿ ತಂಡವನ್ನು ಖರೀದಿಸಲು ಬಲವಾದ ಕಾರಣವೇನೆಂದು ವಿವರಿಸಿದ್ದಾರೆ.

IPL 2025: ಈ ಒಂದೇ ಒಂದು ಕಾರಣದಿಂದಾಗಿ ಭಾರತಕ್ಕೆ ಮರಳಲು ಸಾಧ್ಯವಾಗಿಲ್ಲ ಎಂದ ಮಿಚೆಲ್‌ ಸ್ಟಾರ್ಕ್‌!

ಈ ಒಂದೇ ಒಂದು ಕಾರಣದಿಂದ ನಾನು ಭಾರತಕ್ಕೆ ಮರಳಲು ಆಗಲಿಲ್ಲ: ಸ್ಟಾರ್ಕ್‌!

ಇತ್ತೀಚೆಗೆ ಮುಕ್ತಾಯಗೊಂಡಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಲೀಗ್‌ ಹಂತದ ಕೊನೆಯ ಪಂದ್ಯಗಳನ್ನು ಆಡಲು ಭಾರತಕ್ಕೆ ಮರಳದೇ ಇರಲು ಕಾರಣವೇನೆಂದು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ವೇಗಿ ಮಿಚೆಲ್‌ ಸ್ಟಾರ್ಕ್‌ ಬಹಿರಂಗಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಸಂಘರ್ಷದ ಕಾರಣ ಒಂದು ವಾರದವರೆಗೂ ಪಂದ್ಯಗಳನ್ನು ನಿಲ್ಲಿಸಲಾಗಿತ್ತು. ಈ ವೇಳೆ ಆಸ್ಟ್ರೇಲಿಯಾಗೆ ತೆರಳಿದ್ದ ಮಿಚೆಲ್‌ ಸ್ಟಾರ್ಕ್‌ ಮತ್ತೆ ಭಾರತಕ್ಕೆ ಮರಳಲಿಲ್ಲ.