ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Raj Kundra: 60 ಕೋಟಿ ರೂ. ವಂಚನೆ ಪ್ರಕರಣ: ರಾಜ್ ಕುಂದ್ರಾಗೆ ಸಮನ್ಸ್

60 ಕೋಟಿ ರೂ. ವಂಚನೆ ಪ್ರಕರಣ; ರಾಜ್ ಕುಂದ್ರಾಗೆ ಸಮನ್ಸ್

ಸುಮಾರು 60 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರಿಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಮೊದಲು ಸಂಪರ್ಕಿಸಿದ್ದ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯ ಮಂಡಳಿಯ ಲೆಕ್ಕಪರಿಶೋಧಕರಿಗೂ ಸಮನ್ಸ್ ನೀಡಲಾಗಿದೆ.

MLA Satish Sail: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಇಡಿಯಿಂದ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಬಂಧನ

ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಇಡಿಯಿಂದ ಕಾಂಗ್ರೆಸ್‌ ಶಾಸಕ ಸತೀಶ್ ಸೈಲ್ ಬಂಧನ

Disproportionate assets case: ಕಾರವಾರ ಶಾಸಕ ಸತೀಶ್ ಸೈಲ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಸ್ಟ್ 13 ಮತ್ತು 14ರಂದು ದಾಳಿ ನಡೆಸಿ, ಕೋಟ್ಯಂತರ ರೂಪಾಯಿ ನಗದು, ಚಿನ್ನಾಭರಣ ಮತ್ತು ಬ್ಯಾಂಕ್ ಖಾತೆಗಳಲ್ಲಿ ದೊಡ್ಡ ಮೊತ್ತವನ್ನು ವಶಪಡಿಸಿಕೊಂಡಿತ್ತು. ಇದೀಗ ವಿಚಾರಣೆ ಬಳಿಕ ಅವರನ್ನು ಬಂಧಿಸಲಾಗಿದೆ.

Bidar News: ಬೀದರ್‌ನಲ್ಲಿ ಕಾಲುವೆಗೆ ಹಾರಿ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಯತ್ನ, ನಾಲ್ವರ ಸಾವು, ಇಬ್ಬರು ಪಾರು

ಬೀದರ್‌ನಲ್ಲಿ ಕಾಲುವೆಗೆ ಹಾರಿ ಒಂದೇ ಕುಟುಂಬದ 4 ಮಂದಿ ಆತ್ಮಹತ್ಯೆ

Self Harming: ಒಂದೇ ಕುಟುಂಬದ ಆರು ಮಂದಿ, ಕಾರಂಜಾ ಡ್ಯಾಮ್‌ನ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಇಬ್ಬರನ್ನು ರಕ್ಷಣೆ ಮಾಡಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಸಚಿವ ಈಶ್ವರ್‌ ಖಂಡ್ರೆ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

Murder Attempt: ಲವರ್‌ ಜೊತೆ ಸೇರಿ ಗಂಡನ ಮರ್ಮಾಂಗ ಹಿಸುಕಿದ ಪತ್ನಿ, ಕೊಲೆ ಯತ್ನದಿಂದ ಪಾರಾದ ಗಂಡ

ಲವರ್‌ ಜೊತೆ ಸೇರಿ ಗಂಡನ ಮರ್ಮಾಂಗ ಹಿಸುಕಿದ ಪತ್ನಿ, ಕೊಲೆಯಿಂದ ಪಾರಾದ ಗಂಡ

Vijayapura Crime: ಪರಾರಿಯಾಗಿರುವ ಸುನಂದಾ ಪ್ರಿಯಕರ ಸಿದ್ಧಪ್ಪ ಅಜ್ಞಾತ ಸ್ಥಳದಿಂದ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಗಂಡನ ಹತ್ಯೆಗೆ ಸುನಂದಾ ಮಾಡಿದ್ದ ಪ್ಲ್ಯಾನ್ ಅನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಭೀರಪ್ಪನ ಹತ್ಯೆಗೆ ಸ್ಕೆಚ್‌ ಹಾಕಿದ್ದೇ ಸ್ವತಃ ಪತ್ನಿ ಸುನಂದಾ. ಆಕೆಯೇ ಹತ್ಯೆಗೆ ದಿನ ಹಾಗೂ ಟೈಂ ಫಿಕ್ಸ್‌ ಮಾಡಿದ್ದಳು ಎಂದಿದ್ದಾನೆ.

Postpartum Psychosis: ದೇಶವೇ ಬೆಚ್ಚಿ ಬೀಳುವ ಘಟನೆ: ನವಜಾತ ಶಿಶುವನ್ನು ಫ್ರೀಜರ್‌ನಲ್ಲಿ ಇಟ್ಟ ತಾಯಿ

ನವಜಾತ ಶಿಶುವನ್ನು ಫ್ರೀಜರ್‌ನಲ್ಲಿ ಇಟ್ಟ ತಾಯಿ

ಕೆಟ್ಟ ಮಕ್ಕಳಿದ್ದರೂ ಕೆಟ್ಟ ತಾಯಿ ಇರಲ್ಲ ಎನ್ನುವ ಮಾತಿದೆ. ಆದರೆ ಇದನ್ನು ಕೆಲವರು ಸುಳ್ಳು ಮಾಡುತ್ತಿದ್ದಾರೆ. ಇಲ್ಲೊಬ್ಬಳು ಹೆತ್ತ ತಾಯಿಯೇ ತನ್ನ ಮಗುವನ್ನು ಫ್ರೀಜರ್‌ನಲ್ಲಿ ಇರಿಸಿ ಸಾಯಲು ಬಿಟ್ಟಿದ್ದಳು. ಆದರೆ ಅದೃಷ್ಟವಶಾತ್ ಕುಟುಂಬ ಸದಸ್ಯರು ಮಗುವನ್ನು ರಕ್ಷಿಸಿದ್ದಾರೆ.

Yellapur News: ಯಲ್ಲಾಪುರದಲ್ಲಿ ಆಲದ ಮರ ಬಿದ್ದು 5 ತಿಂಗಳ ಗರ್ಭಿಣಿ ಸಾವು, ನಾಲ್ವರು ಮಕ್ಕಳಿಗೆ ಗಾಯ

ಯಲ್ಲಾಪುರದಲ್ಲಿ ಆಲದ ಮರ ಬಿದ್ದು 5 ತಿಂಗಳ ಗರ್ಭಿಣಿ ಸಾವು

Yellapur News: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಡೊಮಗೇರಿ-ಕಿರವತ್ತಿಯಲ್ಲಿ ಘಟನೆ ನಡೆದಿದೆ. ಅಂಗನವಾಡಿಯಲ್ಲಿದ್ದ ಕೆಲಸವನ್ನು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ರಸ್ತೆಯ ಬದಿಯಲ್ಲಿದ್ದ ಹಳೆಯ ಆಲದ ಮರ ಬಿದ್ದು ಗರ್ಭಿಣಿ ಮೃತಪಟ್ಟಿದ್ದಾರೆ. ಅವರೊಂದಿಗೆ ಇದ್ದ 4 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

Bomb Threat: ಬಾಂಬ್ ಬೆದರಿಕೆ; ಕೇರಳ ಸಿಎಂ ನಿವಾಸ, ಜಿಲ್ಲಾ ನ್ಯಾಯಾಲಯದಲ್ಲಿ ಶೋಧ

ಬಾಂಬ್ ಬೆದರಿಕೆ: ಕೇರಳದಲ್ಲಿ ಶೋಧ

ಕೇರಳ ಮುಖ್ಯಮಂತ್ರಿಯ ಅಧಿಕೃತ ನಿವಾಸ ಮತ್ತು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ತೀವ್ರ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಇಮೇಲ್ ಮೂಲಕ ಬೆದರಿಕೆ ಬಂದ ಬಳಿಕ ಸೋಮವಾರ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಯಿತು.

Maddur Stone Pelting: ಮದ್ದೂರು ಕಲ್ಲು ತೂರಾಟ ಪ್ರಕರಣ; 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಮದ್ದೂರು ಕಲ್ಲು ತೂರಾಟ; 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Maddur Stone Pelting: ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಸೆ.7ರಂದು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ನಡೆಸುತ್ತಿರುವಾಗ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ ನಾಲ್ವರು ಹೋಮ್‌ಗಾರ್ಡ್​​ಗಳು ಸೇರಿ 8 ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ 22 ಆರೋಪಿಗಳನ್ನು ಬಂಧಿಸಲಾಗಿದೆ.

Sowjanya case: ಸೌಜನ್ಯಳನ್ನು ಕೊಂದಿದ್ದು ಆಕೆಯ ಮಾವ ವಿಠಲ್‌ ಗೌಡ: ಸ್ನೇಹಮಯಿ ಕೃಷ್ಣ ದೂರು

ಸೌಜನ್ಯಳನ್ನು ಕೊಂದಿದ್ದು ಆಕೆಯ ಮಾವ ವಿಠಲ್‌ ಗೌಡ: ಸ್ನೇಹಮಯಿ ಕೃಷ್ಣ ಆರೋಪ

Sowjanya case: ಸೌಜನ್ಯ ತಾಯಿ ಕುಸುಮಾವತಿಗೂ ಸಹೋದರ ವಿಠಲ್‌ ಗೌಡನ ಮೇಲೆ ಸಂಶಯವಿತ್ತು. ಮಗಳ ಮೃತದೇಹವನ್ನು ನೋಡಲು ಕುಸುಮಾವತಿ ಹೋಗಿರಲಿಲ್ಲ. ಪ್ರಕರಣದ ಸಂಪೂರ್ಣ ಮರು ತನಿಖೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಬೇಕು. ವಿಠಲ ಗೌಡನ ಮಂಪರು ಪರೀಕ್ಷೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ

K.C.Veerendra Puppy: ಅಕ್ರಮ ಬೆಟ್ಟಿಂಗ್ ಪ್ರಕರಣ: ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

ಅಕ್ರಮ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

illegal betting case: ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಇತ್ತೀಚೆಗೆ ಸಿಕ್ಕಿಂನಲ್ಲಿ ಬಂಧಿಸಿದ್ದರು. ರಿಮಾಂಡ್‌ ಅರ್ಜಿಯಲ್ಲಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ಶಾಸಕ ವೀರೇಂದ್ರ ಪಪ್ಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

Viral Video: ಕ್ಷುಲ್ಲಕ ಕಾರಣಕ್ಕೆ ಜಗಳ; ಗ್ರಾಹಕರ ಮೇಲೆ ಹಲ್ಲೆ- ರೆಸ್ಟೋರೆಂಟ್ ಸಿಬ್ಬಂದಿ ವಿರುದ್ಧ ದೂರು

ಗ್ರಾಹಕರ ಮೇಲೆ ಹಲ್ಲೆ ನಡೆಸಿದ ರೆಸ್ಟೋರೆಂಟ್ ಸಿಬ್ಬಂದಿ

ನಹರ್‌ಗಢದ ಐತಿಹಾಸಿಕ ಕೋಟೆಯಲ್ಲಿರುವ ಜೈಪುರದ ಪದವ್ ರೆಸ್ಟೋರೆಂಟ್‌ನಲ್ಲಿ ಭಾನುವಾರ ರಾತ್ರಿ ಮಹಿಳಾ ಗ್ರಾಹಕರೊಬ್ಬರು ಆಸನ ವ್ಯವಸ್ಥೆ ಕುರಿತು ರೆಸ್ಟೋರೆಂಟ್‌ ಸಿಬ್ಬಂದಿಯೊಂದಿಗೆ ಜಗಳ ಪ್ರಾರಂಭಿಸಿದ್ದು, ಇದು ಮಾತಿನ ಚಕಮಕಿಗೆ ಕಾರಣವಾಗಿದೆ. ಬಳಿಕ ಗ್ರಾಹಕರು ಮತ್ತು ರೆಸ್ಟೋರೆಂಟ್ ಸಿಬ್ಬಂದಿ ನಡುವೆ ಹೊಡೆದಾಟವಾಗಿದ್ದು, ಇದರ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ.

Crime News: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ಮಾಡಬೇಡ ಅಂದಿದ್ದೇ ತಪ್ಪಾಯ್ತೇ? ಅಮೆರಿಕದಲ್ಲಿ ಭಾರತೀಯನ ಶೂಟೌಟ್‌!

ಭಾರತೀಯರ ಮೇಲೆ ಅಮೆರಿಕದಲ್ಲಿ ಪದೇ ಪದೇ ಶೂಟೌಟ್!

Haryana Man Killed in US: ಅಮೆರಿಕ ದೇಶದಲ್ಲಿ ಶೂಟೌಟ್ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿವೆ. ದೇಶದ ಎಲ್ಲೆಂದರಲ್ಲಿ ಗುಂಡಿನ ಆರ್ಭಟ ಕೇಳಿ ಬರುತ್ತಿದೆ. ಅಲ್ಲಿ ಭಾರತೀಯರ ಸರಣಿ ಹತ್ಯೆಗಳು ನಡೆಯುತ್ತಿದ್ದು, ಅದು ಅಲ್ಲಿರುವ ಭಾರತ ಮೂಲದವರಿಗೆ ತೀವ್ರ ಆತಂಕ ತಂದೊಡ್ಡಿದೆ. ಈ ಮಧ್ಯೆ ಇದೀಗ ಮತ್ತೇ ಮತ್ತೊಬ್ಬ ಭಾರತೀಯನ ಹತ್ಯೆಯಾಗಿದೆ. ಕ್ಯಾಲಿಫೋರ್ನಿಯಾದ ಸಾರ್ವಜನಿಕ ಸ್ಥಳದಲ್ಲಿ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದಿದ್ದಕ್ಕೆ, ಭಾರತ ಮೂಲದ ಯುವಕನ ಮೇಲೆ ಗುಂಡು ಹಾರಿಸಿ ಆತನನ್ನು ಹತ್ಯೆ ಮಾಡಿದ್ದಾನೆ.

Viral News: ಬಡತನದಿಂದ ಬೇಸತ್ತು ಹೆತ್ತ ಮಗುವನ್ನೇ ಮಾರಾಟ ಮಾಡಿದ ದಂಪತಿ!

ಬಡತನದಿಂದ ಬೇಸತ್ತು ತಿಂಗಳ ಮಗುವನ್ನು ಮಾರಾಟ ಮಾಡಿದ ದಂಪತಿ

Couple Sells Month-Old Baby: ಬಡತನದಿಂದ ಬೇಸತ್ತ ದಂಪತಿಯು ತಮ್ಮ ಒಂದು ತಿಂಗಳ ಗಂಡು ಮಗುವನ್ನು 50,000 ರೂ. ಗೆ ಮಾರಾಟ ಮಾಡಿರುವ ಕರುಣಾಜನಕ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಘಟನೆಯ ಬಗ್ಗೆ ತಿಳಿದ ಕೂಡಲೇ ಪೊಲೀಸರಿಗೆ ಮಗುವನ್ನು ರಕ್ಷಿಸುವಂತೆ ಮುಖ್ಯಮಂತ್ರಿ ಆದೇಶ ನೀಡಿದ್ದರು.

Maddur Stone Pelting: ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ 21 ಮುಸ್ಲಿಮರ ಬಂಧನ: ಸಚಿವ ಚಲುವರಾಯಸ್ವಾಮಿ

ಮದ್ದೂರು ಕಲ್ಲು ತೂರಾಟ ಪ್ರಕರಣ; 21 ಮುಸ್ಲಿಮರ ಬಂಧನ

Maddur Stone Pelting: ಪ್ರಕರಣ ನಡೆದ ತಕ್ಷಣ ಎಫ್‌ಐಆರ್ ದಾಖಲಿಸಿಕೊಂಡು 21 ಜನ ಮುಸ್ಲಿಮರನ್ನು ಬಂಧಿಸಲಾಗಿದೆ. ಅದರಲ್ಲಿ ಹೊರಗಡೆಯ ಒಂದಿಬ್ಬರು ಇರಬಹುದು ಎನ್ನಲಾಗಿದೆ. ಹಿಂದೂಗಳ ಮೇಲೆ ಯಾವುದೇ ಕೇಸ್ ಹಾಕಿಲ್ಲ, ಯಾರನ್ನೂ ಬಂಧಿಸಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

Murder Case: ಬೆಂಗಳೂರಿನಲ್ಲಿ ಸ್ನೇಹಿತರಿಂದಲೇ ಕ್ಯಾಬ್‌ ಚಾಲಕನ ಕೊಚ್ಚಿ ಕೊಲೆ

ಬೆಂಗಳೂರಿನಲ್ಲಿ ಸ್ನೇಹಿತರಿಂದಲೇ ಕ್ಯಾಬ್‌ ಚಾಲಕನ ಕೊಚ್ಚಿ ಕೊಲೆ

Bengaluru Crime: 2020ರಲ್ಲಿ ಕೊಲೆ ಕೇಸ್ ಒಂದರಲ್ಲಿ ಕೌಶಿಕ್ ಎ8 ಆರೋಪಿಯಾಗಿ ಜೈಲು ಸೇರಿದ್ದ. ಬಳಿಕ ಜಾಮೀನಿನ ಮೂಲಕ ಹೊರಬಂದು, ಕ್ಯಾಬ್ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ. ಭಾನುವಾರ ರಾತ್ರಿ ಕೌಶಿಕ್, ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವೇಳೆ ಜಗಳ ನಡೆದಿದೆ. ಬಳಿಕ ಜೊತೆಯಲ್ಲಿದ್ದ ಸ್ನೇಹಿತರೇ ಕೌಶಿಕ್‌ನನ್ನು ಹತ್ಯೆಗೈದಿದ್ದಾರೆ.

Stone Pleting: ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿ ಚಾರ್ಜ್‌, ಮದ್ದೂರು ಉದ್ವಿಗ್ನ

ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿ ಚಾರ್ಜ್‌, ಮದ್ದೂರು ಉದ್ವಿಗ್ನ

ನಿನ್ನೆ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಮೆರವಣಿಗೆ ಮೇಲೆ ನಡೆದಿದ್ದ ಕಲ್ಲು ತೂರಾಟದಲ್ಲಿ 8 ಮಂದಿ ಗಾಯಗೊಂಡಿದ್ದರು. ಮಸೀದಿಯಿಂದ ಕಲ್ಲು ತೂರಾಟ ನಡೆದಿದೆ ಎಂದು ಗಣೇಶಭಕ್ತರು ಆರೋಪಿಸಿದ್ದರು. ಇದನ್ನು ವಿರೋಧಿಸಿ ಇಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Physical Assault: ಅಪರಿಚಿತರ ವಾಹನ ಹತ್ತುವ ಮುನ್ನ ಎಚ್ಚರ; 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ

9ನೇ ತರಗತಿಯ ವಿದ್ಯಾರ್ಥಿನಿಯನ್ನು ಕಾರಿನೊಳಗೆ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಕಂಧಮಲ್ ಜಿಲ್ಲೆಯಲ್ಲಿ ನಡೆದಿದೆ. ಅಪರಿಚಿತ ವಾಹನವೊಂದು ಬಂದು ಪಕ್ಕಕ್ಕೆ ನಿಂತಿತು, ಅದರಲ್ಲಿದ್ದ ಆರೋಪಿ ಡ್ರಾಪ್‌ ಕೊಡುತ್ತೇನೆ ಎಂದು ಬಾಲಕಿಯ ಬಳಿ ತನ್ನ ಕಾರನ್ನು ಹತ್ತುವಂತೆ ಹೇಳಿದ್ದಾನೆ.

Stone Pelting: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, 8 ಮಂದಿಗೆ ಗಾಯ

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, 8 ಮಂದಿಗೆ ಗಾಯ

Maddur: ಬೀದಿಯಲ್ಲಿ ಮೆರವಣಿಗೆ ಮೂಲಕ ಬಂದ ಗಣಪ ಮಸೀದಿ ಮುಂದೆ ಹಾದುಹೋಗುತ್ತಿದ್ದಾಗ ಸ್ಥಳದಲ್ಲಿ ದಿಢೀರ್ ಲೈಟ್​ ಆಫ್​ ಮಾಡಿ ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ದೊಣ್ಣೆಗಳನ್ನು ಕೂಡ ಎಸೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ದೂರಿದ್ದಾರೆ.

Murder Case:  ಗಂಡನಿಗೆ ಸ್ಕೆಚ್‌ ಹಾಕಿ ಗೆಳೆಯನ ಜೊತೆ ಲವ್ವಿ ಡವ್ವಿ; ದೃಶ್ಯಂ ಸಿನಿಮಾ ರೀತಿ ಮರ್ಡರ್‌ ಮಾಡಿದ್ದ ಚಾಲಾಕಿ ತಗ್ಲಾಕೊಂಡಿದ್ದು ಹೇಗೆ?

ಗೆಳೆಯನ ಜೊತೆ ಸೇರಿ ಗಂಡನಿಗೇ ಮುಹೂರ್ತ ಇಟ್ಲು ಈ ಹೆಣ್ಣು!

ವ್ಯಕ್ತಿಯ ಕೊಲೆಯಾಗಿ ಬರೋಬ್ಬರಿ ಹತ್ತು ತಿಂಗಳ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ವ್ಯಕ್ತಿಯನ್ನು ಗುದ್ದಲಿಯಿಂದ ಕೊಲೆ ಮಾಡಿ ಆತನ ಮನೆಯ ಹಿತ್ತಲಿನಲ್ಲಿ ಹೂಳಲಾಗಿತ್ತು. ಪೊಲೀಸರು ಭಾನುವಾರ ಆತನ ಅಸ್ಥಿಪಂಜರದ ಅವಶೇಷಗಳನ್ನು ಹೊರತೆಗೆದು, ಆತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಿದ್ದಾರೆ.

Murder case: ಬರ್ಬರ ಕೃತ್ಯ, ಮಗನನ್ನೇ ಡೀಸೆಲ್‌ ಸುರಿದು ಸುಟ್ಟು ಕೊಂದು ಹಾಕಿದ ಹೆತ್ತವರು!

ಬರ್ಬರ ಕೃತ್ಯ, ಮಗನನ್ನೇ ಡೀಸೆಲ್‌ ಸುರಿದು ಸುಟ್ಟು ಕೊಂದು ಹಾಕಿದ ಹೆತ್ತವರು!

Bagalakote: ಮಗ ದುಶ್ಚಟಗಳ ದಾಸನಾಗಿ, ಸಾಕಷ್ಟು ಸಾಲ ಮಾಡಿದ್ದಲ್ಲದೆ ಆಸ್ತಿಯಲ್ಲಿ ಪಾಲು ಕೇಳಿ ಮನೆಯವರಿಗೆ ಸದಾ ಕಿರುಕುಳ ನೀಡುತ್ತಿದ್ದ. ಮನೆಯವರ ಮೇಲೆ ಹಲ್ಲೆಗೂ ಯತ್ನಿಸಿದ್ದ ಎಂದು ತಿಳಿದುಬಂದಿದೆ. ಇಂಥ ಮಗನನ್ನು ತಂದೆ-ತಾಯಿ ಹಾಗೂ ಸಹೋದರ ಸೇರಿಕೊಂಡು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Physical Abuse: ಹುಟ್ಟುಹಬ್ಬದಂದೇ ಯುವತಿ ಮೇಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ

ಗೆಳೆಯರಿಂದಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕೆಲವು ತಿಂಗಳ ಹಿಂದೆಯಷ್ಟೇ ಪರಿಚಿತರಾಗಿದ್ದ ಗೆಳೆಯರು ಯುವತಿಯೊಬ್ಬಳ ಮೇಲೆ ಆಕೆಯ ಹುಟ್ಟುಹಬ್ಬದ ದಿನದಂದೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ದೇಶದಲ್ಲಿ ಮಹಿಳೆಯರಿಗೆ ಅತ್ಯಂತ ಸುರಕ್ಷಿತ ನಗರವೆಂದು ಕರೆಯಲ್ಪಡುವ ಕೋಲ್ಕತಾ ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಮದರಸಾದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣ: ಐವರ ಬಂಧನ

ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣ: ಐವರ ಬಂಧನ

ಮದರಸಾದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಿರುವ ಐವರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ. ಒಡಿಶಾದ ನಯಾಗಢ ಜಿಲ್ಲೆಯ ಮದರಸಾದಲ್ಲಿ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಹತ್ಯೆ ಮಾಡಲಾಗಿತ್ತು.

Crime News: ಹರಿಯಾಣದಲ್ಲಿ ವಿದೇಶಿ ಮಹಿಳೆಯ ಅರೆನಗ್ನ ಶವ ಪತ್ತೆ; ಬೆಚ್ಚಿಬಿದ್ದ ದೇಶ

ಹರಿಯಾಣದಲ್ಲಿ ವಿದೇಶಿ ಮಹಿಳೆಯ ಅರೆನಗ್ನ ಶವ ಪತ್ತೆ

ಹರಿಯಾಣದ ಮಾನೇಸರ್ ಪ್ರದೇಶದಲ್ಲಿ ವಿದೇಶಿ ಮಹಿಳೆಯ ಅರೆನಗ್ನ ಶವ ಅನುಮಾನಾಸ್ಪದವಾಗಿ ಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ಮೃತ ಮಹಿಳೆಯು ಆಫ್ರಿಕನ್ ಮೂಲದವರಾಗಿರಬಹುದು ಎಂದು ಪ್ರಾಥಮಿಕ ಸಂಶೋಧನೆಗಳು ಹೇಳುತ್ತವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

Syrians Arrest: ಗಾಜಾ ಸಂತ್ರಸ್ತರ ಪರವಾಗಿ ಹಣ ಸಂಗ್ರಹ: ಮೂವರು ಸಿರಿಯನ್ನರ ಬಂಧನ

ದೆಹಲಿಯಲ್ಲಿ ಮೂವರು ಸಿರಿಯನ್ನರ ಬಂಧನ

ಗಾಜಾ ಸಂತ್ರಸ್ತರ ಪರವಾಗಿ ಎಂದು ಹೇಳಿ ಅಕ್ರಮವಾಗಿ ಹಣ ಸಂಗ್ರಹಿಸಿದ್ದ ಮೂವರು ಸಿರಿಯನ್ನರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಆರೋಪಿಗಳು ದೆಹಲಿಯಿಂದ ದುಬೈ ಮೂಲಕ ಡಮಾಸ್ಕಸ್‌ಗೆ ಹೋಗಲು ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದರು. ಇವರು ಗಾಜಾ ಸಂತ್ರಸ್ತರ ಪರವಾಗಿ ಸಂಗ್ರಹಿಸಿದ ಹಣವನ್ನು ಆರೋಪಿಗಳು ಐಷಾರಾಮಿ ಜೀವನ ನಡೆಸಲು ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದೆ.

Loading...