ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

ಪಾಕಿಸ್ತಾನಕ್ಕೆ ಗೂಢಚಾರಿಕೆ ಆರೋಪ: ಅಸ್ಸಾಂನಲ್ಲಿ ನಿವೃತ್ತ ವಾಯುಪಡೆ ಅಧಿಕಾರಿಯ ಬಂಧನ

ಅಸ್ಸಾಂನಲ್ಲಿ ನಿವೃತ್ತ ವಾಯುಪಡೆ ಅಧಿಕಾರಿಯ ಬಂಧನ

Retired Air Force Officer Arrested: ಅಸ್ಸಾಂನಲ್ಲಿ ನಿವೃತ್ತ ವಾಯುಸೇನಾ ಅಧಿಕಾರಿ ಕುಲೆಂದ್ರ ಶರ್ಮಾನನ್ನು ಪಾಕಿಸ್ತಾನಕ್ಕೆ ಗೂಢಚಾರಿಕೆ ನಡೆಸಿದ ಆರೋಪದ ಮೇರೆಗೆ ಬಂಧಿಸಲಾಗಿದೆ. ಶರ್ಮಾನ ಚಲನವಲನಗಳ ಬಗ್ಗೆ ತೀವ್ರ ನಿಗಾ ವಹಿಸಿದ್ದ ಪೊಲೀಸರು, ಕೊನೆಗೆ ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

4 ವರ್ಷಗಳ ಬಳಿಕ ಹೈ ಪ್ರೊಫೈಲ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ಪತ್ನಿಯನ್ನು ಕೊಂದು ದರೋಡೆಯ ಕಥೆ ಕಟ್ಟಿದ ಪ್ರೊಫೆಸರ್ ಅರೆಸ್ಟ್

ಪತ್ನಿ ಕೊಂದ ಆರೋಪದ ಮೇಲೆ ಪ್ರೊಫೆಸರ್ ಅರೆಸ್ಟ್

ಚಂಡೀಗಢದ ಪಂಜಾಬ್ ಯುನಿವರ್ಸಿಟಿಯ ಹಿರಿಯ ಪ್ರಾಧ್ಯಾಪಕ ಬಿಬಿ ಗೋಯಲ್‌ನನ್ನು ಪತ್ನಿ ಸೀಮಾ ಗೋಯಲ್ ಅವರ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಪೊಲೀಸ್ ತಂಡವು ದೀರ್ಘ ಕಾಲದ ತನಿಖೆಯ ನಂತರ ಈ ಹೈ–ಪ್ರೊಫೈಲ್ ಕೊಲೆ ಪ್ರಕರಣವನ್ನು ಭೇದಿಸಿದ್ದು, ಬ್ರೇನ್–ಮ್ಯಾಪಿಂಗ್ ಮತ್ತು BEOS ಪ್ರೊಫೈಲಿಂಗ್ ಮೂಲಕ ಪ್ರಮುಖ ಸಾಕ್ಷ್ಯಗಳನ್ನು ಪತ್ತೆ ಹಚ್ಚಲಾಗಿದೆ.

ಸೈಟ್‌ ಕೊಡಿಸುವುದಾಗಿ ಮಂಚಕ್ಕೆ ಕರೆದ ಸ್ವಾಮೀಜಿ; ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯಿಂದ ದೂರು

ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ; ಬ್ರಹ್ಮಾನಂದ ಗುರೂಜಿ ವಿರುದ್ಧ ದೂರು

Brahmananda Guruji: ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಮಹಿಳೆಯಿಂದ 5 ಲಕ್ಷ ಹಣವನ್ನು ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ, ಒಂದು ವರ್ಷವಾದರೂ ಸೈಟ್‌ ನೀಡದ ಹಿನ್ನೆಲೆಯಲ್ಲಿ ಹಣ ವಾಪಸ್‌ ಕೇಳಿದಾಗ ಮಹಿಳೆಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಾಧುವಿನ ವೇಷದಲ್ಲಿ ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯ ಬಂಧನ

37 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯ ಬಂಧನ

ಸುಮಾರು 37 ವರ್ಷಗಳ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ಇದೀಗ ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ. ಆಸಿಡ್ ದಾಳಿ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿ ಸಾಧುವಿನ ವೇಷದಲ್ಲಿ ತಲೆ ಮರೆಸಿಕೊಂಡಿದ್ದನು. ಆತನನ್ನು ಶಿವಪುರಿ ಜಿಲ್ಲೆಯ ಗಾಯತ್ರಿ ಶಕ್ತಿಪೀಠದಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

Tiptur News: ನಟಿ ಹೇಮಲತಾ ಮನೆಯಲ್ಲಿ ಕಳ್ಳತನ; ರಾಜ್ಯೋತ್ಸವ ಪ್ರಶಸ್ತಿಯ 22 ಗ್ರಾಂ ಚಿನ್ನದ ಪದಕ ಮಾಯ

ನಟಿ ಹೇಮಲತಾ ಮನೆಯಲ್ಲಿ ಕಳ್ಳತನ; ರಾಜ್ಯೋತ್ಸವ ಪ್ರಶಸ್ತಿಯ ಚಿನ್ನದ ಪದಕ ಮಾಯ

ಒಂದು ತಿಂಗಳ ಹಿಂದೆಯೂ ಮನೆ ಕೆಲಸದವರಿಂದ ಸುಮಾರು 25 ಗ್ರಾಂ ಚಿನ್ನದ ಸರ ಕಳ್ಳತನ ಮಾಡಲಾಗಿತ್ತು. ಆಗ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ತಡರಾತ್ರಿ ಕೂಡ ಮನೆ ಕೆಲಸದವರಿಂಲೇ ಪುನಃ ಕಳ್ಳತನ ನಡೆದಿದೆ ಎನ್ನಲಾಗಿದೆ.

Road Accident: ಹಿಟ್‌ ಆ್ಯಂಡ್ ರನ್ ಕೇಸ್‌: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳೆಯರು ಬಲಿ

ಹಿಟ್‌ ಆ್ಯಂಡ್ ರನ್ ಕೇಸ್‌: ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳೆಯರು ಬಲಿ

ನಗರದ ಹೊಸಕೆರೆಹಳ್ಳಿ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಹಿಟ್‌ ಆ್ಯಂಡ್ ರನ್ ಅಪಘಾತ ನಡೆದಿದ್ದು, ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಮಹಿಳಾ ಕಾರ್ಮಿಕರಿಗೆ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ.

ಬ್ರಿಟಿಷ್ ವಸ್ತು ಸಂಗ್ರಹಾಲಯದಿಂದ ಕಳವಾಯಿತು ಬೆಲೆಬಾಳುವ ಭಾರತೀಯ ಕಲಾಕೃತಿಗಳು

ಯುಕೆಯಲ್ಲಿ ಭಾರತೀಯ ಕಲಾಕೃತಿಗಳು ಕಳವು

ಕಳೆದ ಸೆಪ್ಟೆಂಬರ್ ತಿಂಗಳಾಂತ್ಯದಲ್ಲಿ ಯುಕೆಯ ವಸ್ತು ಸಂಗ್ರಹಾಲಯದಿಂದ ಬೆಲೆಬಾಳುವ 600ಕ್ಕೂ ಹೆಚ್ಚು ಭಾರತೀಯ ಕಲಾಕೃತಿಗಳು ಕಳವಾಗಿವೆ. ಬ್ರಿಟಿಷ್ ಸಾಮ್ರಾಜ್ಯ ಮತ್ತು ಕಾಮನ್‌ವೆಲ್ತ್ ಸಂಗ್ರಹದಿಂದ ಈ ವಸ್ತುಗಳನ್ನು ಕಳವು ಮಾಡಲಾಗಿದ್ದು, ಇದರಿಂದ ನಗರಕ್ಕೆ ಅಪಾರ ಪ್ರಮಾಣದ ನಷ್ಟವಾಗಿದೆ. ಆರೋಪಿಗಳ ಪತ್ತೆಗೆ ಇದೀಗ ಶಂಕಿತರ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ.

ಕಾಲ ಬದಲಾದರೂ ಮೂಢನಂಬಿಕೆ ಬದಲಾಗಿಲ್ಲ; ಕೋಟ್ಯಾಧಿಪತಿಯಾಗುವ ದುರಾಸೆಯಿಂದ ಮಂತ್ರವಾದಿಯ ಮೊರೆ ಹೋಗಿ ಪ್ರಾಣ ಕಳೆದುಕೊಂಡ ಮೂವರು!

ವಾಮಾಚಾರಕ್ಕೆ ಮೂವರು ಬಲಿ

ಮಾಂತ್ರಿಕನೊಬ್ಬ ನಡೆಸಿರುವ ಮಾಟಮಂತ್ರಕ್ಕೆ ಮೂವರು ವ್ಯಕ್ತಿಗಳು ಬಲಿಯಾಗಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಬಲಿಯಾದ ಮೂವರು ಕೋಟ್ಯಧಿಪತಿಯಾಗುವ ಆಸೆಯಿಂದ ಮಾಟಮಂತ್ರದಲ್ಲಿ ಭಾಗಿಯಾಗಲು ಸ್ವಇಚ್ಛೆಯಿಂದ ಒಪ್ಪಿಕೊಂಡಿದ್ದರು. ಈ ಘಟನೆ ಕೊರ್ಬಾ ಜಿಲ್ಲೆಯ ಉರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಬಸ್ ಪಲ್ಟಿ; 9 ಮಂದಿ ಸಾವು

ಬಸ್ ಪಲ್ಟಿ: ಒಂಬತ್ತು ಸಾವು

ಬಸ್ ಪಲ್ಟಿಯಾಗಿ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಮಾರು 22 ಮಂದಿ ಗಾಯಗೊಂಡಿದ್ದಾರೆ. ಚಿಂತೂರು ಮತ್ತು ಭದ್ರಾಚಲಂ ನಡುವಿನ ಘಾಟ್ ರಸ್ತೆಯಲ್ಲಿ ಈ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

Prajwal Revanna Case: ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಶಾಕ್

ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಶಾಕ್

ತಮ್ಮ ವಿರುದ್ಧ ಬಾಕಿ ಇರುವ ಇನ್ನೂ ಎರಡು ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು 81ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿಂದ ಬೇರೆ ಕೋರ್ಟ್ ಗೆ ವರ್ಗಾಯಿಸಬೇಕೆಂದು ಕೋರಿ ಸೆಪ್ಟೆಂಬರ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​​ ವಜಾಗೊಳಿಸಿತ್ತು. ಹೀಗಾಗಿ ಪ್ರಜ್ವಲ್ ಸುಪ್ರೀಂಕೋರ್ಟ್​​​ ಮೊರೆ ಹೋಗಿದ್ದು, ಅಲ್ಲೂ ಸಹ ಹಿನ್ನಡೆಯಾಗಿದೆ.

Kalaburagi Accident: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು

ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ; ವೃದ್ಧ ದಂಪತಿ ಸೇರಿ ಮೂವರ ಸಾವು

ಕಲಬುರಗಿ ತಾಲೂಕಿನ ಹಾರುತಿ ಹಡಗಿಲ ಸಮೀಪ ಗುರುವಾರ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಕಮಿಷನರ್‌ ಶರಣಪ್ಪ ಎಸ್.ಡಿ, ಸಂಚಾರ ವಿಭಾಗದ ಎಸಿಪಿ ಸುಧಾ ಆದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Murder Case: ಮಗಳನ್ನು ಪ್ರೀತಿಸಿದ್ದಕ್ಕೆ  ಕ್ರಿಕೆಟ್‌ ಬ್ಯಾಟ್‌ನಲ್ಲಿ ಹೊಡೆದು ಯವಕನನ್ನು ಕೊಂದ ಪೋಷಕರು!

ಮಗಳನ್ನು ಪ್ರೀತಿಸಿದ್ದಕ್ಕೆ ಯುವಕನ ಕೊಲೆ ಮಾಡಿದ ಷೋಷಕರು!

ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಪ್ರೇಮಿಗಳಿಬ್ಬರ ನಡುವಿನ ಪ್ರೀತಿ ಹುಡುಗನ ಸಾವಿಗೆ ಕಾರಣವಾಗಿದೆ. ಹುಡುಗ ಮತ್ತು ಹುಡುಗಿ ಪರಸ್ಪರ ಪ್ರೀತಿಸುತ್ತಿರುವ ವಿಷಯವನ್ನು ಅರಿತ ಹುಡುಗಿಯ ಪೋಷಕರು ಮದುವೆಯ ಕುರಿತು ಮಾತನಾಡಲು ಮನೆಗೆ ಕರೆದು ಹುಡುಗನಿಗೆ ಬ್ಯಾಟ್‌ನಿಂದ ಹೊಡೆದು ಕೊಲೆ ಮಾಡಿರುವುದಾಗಿ ವರದಿಯಾಗಿದೆ.

PM Narendra Modi: ಪ್ರಧಾನಿ ಮೋದಿಗೆ ಅವಹೇಳನ, ಕೊಡಗಿನಲ್ಲಿ ಮೂವರ ಸೆರೆ

ಪ್ರಧಾನಿ ಮೋದಿಗೆ ಅವಹೇಳನ, ಕೊಡಗಿನಲ್ಲಿ ಮೂವರ ಸೆರೆ

ಸ್ಪೈಸಸ್ ಅಂಗಡಿಯಲ್ಲಿ ಕುಳಿತು ಆರೋಪಿಗಳು ವಿಡಿಯೋ ಮಾಡಿದ್ದರು. ಅವಾಚ್ಯ ಪದಗಳಿಂದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಆರೋಪಿಗಳು ನಿಂದಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಮೂವರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಮಡಿಕೇರಿ ನಗರ ಠಾಣೆಗೆ ಕೊಡಗು ಜಿಲ್ಲಾ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಆರೆಸ್ಟ್ ಮಾಡಿದ್ದಾರೆ.

Chikkaballapur Crime: ಒಂಟಿ ಮಹಿಳೆಯ ಸರ ಕಳವು : ಆರೋಪಿಗಳ ಬಂಧನ, ಮಾಲು ವಶ

ಒಂಟಿ ಮಹಿಳೆಯ ಸರ ಕಳವು : ಆರೋಪಿಗಳ ಬಂಧನ, ಮಾಲು ವಶ

ಬಟ್ಲಹಳ್ಳಿ ಠಾಣಾ ವ್ಯಾಪ್ತಿಯ ದಿಗವಕೋಟೆ ಗ್ರಾಮದ ಶಾರದಮ್ಮ ಅವರು ಅಕ್ಟೋಬರ್‌ ೧೬ರಂದು ಒಂಟಿಯಾಗಿ ಮನೆಯಲ್ಲಿದ್ದಾಗ ಯಾರೋ ಇಬ್ಬರು ಅಪರಿಚಿತರು ಕೊಲ್ಲುವುದಾಗಿ ಬೆದರಿಸಿ ಈಕೆಯ ಬಳಿಯಿದ್ದ ೩೫ ಗ್ರಾಂ ತೂಕದ ಬಂಗಾರದ ಮಾಂಗಲ್ಯದ ಸರವನ್ನು ಕಸಿದು ಹೋಗಿದ್ದರು. ಈ ಸಂಬಂಧ ಸಂತ್ರಸ್ಥೆ ನೀಡಿದ ದೂರನ್ನು ದಾಖಲಿಸಿಕೊಂಡಿದ್ದ ಬಟ್ಲಹಳ್ಳಿ ಠಾಣೆ ಪೊಲೀಸರು ತನಿಖೆ ಮುಂದು ವರೆಸಿದ್ದರು.

Haveri News: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಉರ್ದು ಶಾಲೆ ಶಿಕ್ಷಕನಿಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

ವಿದ್ಯಾರ್ಥಿನಿಗೆ ಕಿರುಕುಳ; ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಘಟನೆ ನಡೆದದಿದೆ. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಾಲೆಯ ಬಳಿ ಜಮಾಯಿಸಿದ ಸ್ಥಳೀಯರು, ಶಿಕ್ಷಕನಿಗೆ ಮನಬಂದಂತೆ ಥಳಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ ಶಾಲೆಯಿಂದ ಪೊಲೀಸ್ ಠಾಣೆವರೆಗೂ ಮೆರವಣಿಗೆ ಕರೆದೊಯ್ದಿದ್ದಾರೆ.

TMC ನಾಯಕನ ವಿರುದ್ಧದ ದೂರಿನ ಪ್ರಮುಖ ಸಾಕ್ಷಿಯ ಮಗ ಅಪಘಾತದಲ್ಲಿ ಸಾವು; ಸಿಬಿಐ ತನಿಖೆಗೆ ಆಗ್ರಹ

TMC ನಾಯಕನ ವಿರುದ್ಧದ ದೂರಿನ ಪ್ರಮುಖ ಸಾಕ್ಷಿಯ ಮಗನ ನಿಗೂಢ ಸಾವು

ತೃಣಮೂಲ ಕಾಂಗ್ರೆಸ್‍ನ ಪದಚ್ಯುತಗೊಂಡ ನಾಯಕ ಶಹಜಹಾನ್ ಶೇಖ್ ವಿರುದ್ಧ ದಾಖಲಾದ ದೂರಿನ ಪ್ರಮುಖ ಸಾಕ್ಷಿಯ ಮಗ ಅಪಘಾತದಲ್ಲಿ ಜೀವ ಕಳೆದುಕೊಂಡ ಘಟನೆ ನಡೆದಿದೆ. ತಂದೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ನಡೆಸುವಂತೆ ಜನರು ಆಗ್ರಹಿಸಿದ್ದಾರೆ.

ಸಾವಿನಲ್ಲಿ ಕೊನೆಯಾದ ಬರ್ತ್ ಡೇ ಸಂಭ್ರಮ; ಭಿಕ್ಷುಕನನ್ನು ತಮಾಷೆ ಮಾಡಿದ ಯುವಕನನ್ನು ಕೊಂದ ಸ್ನೇಹಿತರು

ಬರ್ತ್ ಡೇ ಸಂಭ್ರಮದ ವೇಳೆ ಸ್ನೇಹಿತನಿಗೆ ಚಾಕು ಇರಿದು ಕೊಲೆ

ಗುಜರಾತ್‌ನ ರಾಜ್‌ಕೋಟ್ ನಗರದಲ್ಲಿ ಹುಟ್ಟುಹಬ್ಬದ ಆಚರಣೆಯಲ್ಲಿ ಯುವಕರ ತಂಡ ಭಾಗಿಯಾಗಿತ್ತು. ಆದರೆ ಅವರ ನಡುವೆಯೇ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. 18 ವರ್ಷದ ಹದಿಹರೆಯದವನನ್ನು ಆತನ ಸ್ನೇಹಿತರೆ ಚಾಕುವಿನಿಂದ ಇರಿದು ಕೊಂದಿದ್ದಾರೆ. ಹುಟ್ಟುಹಬ್ಬದ ಆಚರಣೆಗಾಗಿ ಸೇರಿದ್ದ ಸ್ನೇಹಿತರ ಗುಂಪಿನ ನಡುವೆ ವಾಗ್ವಾದ ನಡೆದಿದ್ದು ಯುವಕ ಪ್ರಾಣವನ್ನೆ ಕಳೆದುಕೊಂಡಿದ್ದಾನೆ.

ನಕಲಿ ಕ್ಲಿನಿಕ್‌ ಅಟ್ಟಹಾಸಕ್ಕೆ ಮತ್ತೊಂದು ಬಲಿ; ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು

ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ, ಮಹಿಳೆ ಸಾವು

YouTube-guided surgery: ಯೂಟ್ಯೂಬ್ ವಿಡಿಯೊ ನೋಡಿ ಶಸ್ತ್ರಚಿಕಿತ್ಸೆ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆರೋಗ್ಯ ಸುರಕ್ಷತೆ, ನಕಲಿ ವೈದ್ಯರು ಮತ್ತು ನಿಯಂತ್ರಣವಿಲ್ಲದ ಚಿಕಿತ್ಸಾ ಕೇಂದ್ರಗಳ ಬಗ್ಗೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Dharmasthala Case: ಹಣದ ಆಮಿಷದಿಂದ ಬುರುಡೆ ಚಿನ್ನಯ್ಯ ಸುಳ್ಳು ದೂರು, 6 ಜನರ ಪಿತೂರಿ: ಧರ್ಮಸ್ಥಳ ಕೇಸ್‌ನ ಪ್ರಾಥಮಿಕ ವರದಿ ಸಲ್ಲಿಕೆ

ಹಣದ ಆಮಿಷದಿಂದ ಬುರುಡೆ ಚಿನ್ನಯ್ಯ ಸುಳ್ಳು ದೂರು, 6 ಜನರ ಪಿತೂರಿ

ಮಾಸ್ಕ್‌ ಮ್ಯಾನ್‌ ಚಿನ್ನಯ್ಯ (Chinnayya), ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ ಜಯಂತ್ ಹಾಗೂ ಸುಜಾತಾ ಭಟ್ ಅಪರಾಧ ಕೃತ್ಯದಲ್ಲಿ ಶಾಮೀಲಾಗಿದ್ದಾರೆ. ಪ್ರಕರಣದ (Dharmasthala Case) ಮೊದಲ ಆರೋಪಿಯಾಗಿರುವ ದೂರುದಾರ ಚಿನ್ನಯ್ಯ ಆಮಿಷಕ್ಕೆ ಒಳಗಾಗಿ ಸುಳ್ಳು ಹೇಳಿದ್ದಾನೆ. ಹಣವನ್ನು ಪಡೆದು ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಅಪರಿಚಿತ ಶವ ಹೂತಿದ್ದೇನೆಂದು ಸುಳ್ಳು ಹೇಳಿಸಿ ಆರೋಪಿಗಳು ವಿಡಿಯೋ ರೆಕಾರ್ಡ್‌ ಮಾಡಿದ್ದರು.

Janardhan Reddy: 100 ಕೋಟಿ ರೂ. ಮೌಲ್ಯದ ಭೂಹಗರಣ, ಜನಾರ್ದನ ರೆಡ್ಡಿ ಪುತ್ರನ ಹೆಸರು; ಹೈಕೋರ್ಟ್‌ ನೋಟಿಸ್

100 ಕೋಟಿಯ ಭೂಹಗರಣ, ಜನಾರ್ದನ ರೆಡ್ಡಿ ಪುತ್ರನ ಹೆಸರು; ಹೈಕೋರ್ಟ್‌ ನೋಟಿಸ್

ಕಿರೀಟಿ ರೆಡ್ಡಿ ಹಾಗೂ ಸಹವರ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸಿದ (Land grabbing) ಆರೋಪ ಕೇಳಿ ಬಂದಿದೆ. ಈ ಬಗ್ಗೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ರಿಟ್ ಅರ್ಜಿ ಸಹ ಸಲ್ಲಿಕೆಯಾಗಿದೆ. ಬಳ್ಳಾರಿಯ ಗೋವರ್ಧನ ಎಂಬವರು ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಸಿಐಡಿ ಅಥವಾ ಎಸ್ಐಟಿ ತನಿಖೆಗೆ ವಹಿಸುವಂತೆ ಗೋವರ್ಧನ್ ಮನವಿ ಮಾಡಿದ್ದಾರೆ.

ಅತ್ಯಾಚಾರಕ್ಕೆ ಯತ್ನಿಸಿ 6 ವರ್ಷದ ಬಾಲಕಿಯ ಖಾಸಗಿ ಭಾಗಕ್ಕೆ ರಾಡ್ ತುರುಕಿದ; ಪಾಪಿಯ ಕೃತ್ಯಕ್ಕೆ ಬೆಚ್ಚಿಬಿದ್ದ ದೇಶ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಆರು ವರ್ಷದ ಬಾಲಕಿಯ ಮೇಲೆ ಭೀಕರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಬಾಲಕಿಯ ಖಾಸಗಿ ಭಾಗಕ್ಕೆ ರಾಡ್ ತುರುಕಿದ್ದು ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಹಲವಾರು ಮಂದಿಯನ್ನು ವಿಚಾರಣೆ ನಡೆಸಿರುವ ಪೊಲೀಸರು ಕೃಷಿ ಕೆಲಸಗಾರನೊಬ್ಬನನ್ನು ಬಂಧಿಸಿದ್ದಾರೆ.

ಬೆಂಗಳೂರು ಗ್ಯಾಂಗ್‌ ರೇಪ್‌ ಕೇಸ್‌ಗೆ ಟ್ವಿಸ್ಟ್‌; ಲವರ್‌ ಬಳಿ ಸತ್ಯ ಮುಚ್ಚಿಡಲು ಸುಳ್ಳು ದೂರು ಕೊಟ್ಟ ಯುವತಿ!

ಬೆಂಗಳೂರು ಗ್ಯಾಂಗ್‌ ರೇಪ್‌ ಕೇಸ್‌ಗೆ ಟ್ವಿಸ್ಟ್;‌ ಯುವತಿಯಿಂದ ಸುಳ್ಳು ದೂರು!

Bengaluru News: ಕ್ಯಾಬ್ ಚಾಲಕ ಮತ್ತು ಆತನ ಗೆಳೆಯರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಕೇರಳ ಮೂಲದ ಯುವತಿ ದೂರು ನೀಡಿದ್ದಳು. ಆದರೆ, ಆಕೆಯ ಲವರ್‌​ ಬಳಿ ಸತ್ಯ ಮುಚ್ಚಿಡಲು ಸುಳ್ಳು ದೂರು ದಾಖಲಿಸಿದ್ದಳು ಎಂದು ತನಿಖೆಯ ವೇಳೆ ತಿಳಿದುಬಂದಿದೆ.

MLA Vinay Kulkarni: ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಶಾಸಕ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಕರಣದ ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದ ಹಿನ್ನಲೆಯಲ್ಲಿ ಜಾಮೀನು ಕೋರಿ ವಿನಯ್ ಕುಲಕರ್ಣಿ (MLA Vinay Kulkarni) ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತು ಕೋರ್ಟ್ ವಾದ ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿತ್ತು. ಇನ್ನೊಂದೆಡೆ ವಿನಯ್ ಕುಲಕರ್ಣಿ ಸಹ ಈಗ ಜಾಮೀನು ಸಿಕ್ಕರೆ ಈ ಬಾರಿ ಸಂಪುಟ ಪುನಾರಚನೆ ವೇಳೆ ಸಚಿವರಾಗಬೇಕೆಂಬ ಕನಸು ಕಂಡಿದ್ದರು.

Bengaluru News: ಬೆಂಗಳೂರಿನಲ್ಲೊಂದು ಘೋರ ದುರಂತ: ಸಾಲದಿಂದ ತತ್ತರಿಸಿ ಮಗಳು, ಮೊಮ್ಮಗ ಆತ್ಮಹತ್ಯೆ, ಹೃದಯಾಘಾತದಿಂದ ಅಜ್ಜಿ ಸಾವು

ಸಾಲದಿಂದ ತತ್ತರಿಸಿ ಮಗಳು, ಮೊಮ್ಮಗ ಆತ್ಮಹತ್ಯೆ, ಹೃದಯಾಘಾತದಿಂದ ಅಜ್ಜಿ ಸಾವು

ಮೃತ ಸುಧಾ ಬಿರಿಯಾನಿ ಸೆಂಟರ್, ಚಿಪ್ಸ್‌ ಶಾಪ್ ಹಾಗೂ ಮಿಲ್ಕ್ ಪಾರ್ಲರ್ ನಡೆಸಿ, ಅಪಾರ ನಷ್ಟಕ್ಕೆ ಸಿಲುಕಿದ್ದರು. ಇದರಿಂದ ಮೈತುಂಬ ಸಾಲ ಮಾಡಿಕೊಂಡಿದ್ದರು. ಹೀಗಾಗಿ ಕಳೆದ ಮೂರು ತಿಂಗಳ ಹಿಂದೆಯಷ್ಟೇ ಬಿರಿಯಾನಿ ಹಾಗೂ ಚಿಪ್ಸ್ ಸೆಂಟರನ್ನು ಬೇರೆಯವರಿಗೆ ಕೊಟ್ಟಿದ್ದರು. ಅಂಗಡಿ ಪಡೆದವನು ಮೂರು ತಿಂಗಳಾದರೂ ಕೂಡ ಹಣ ಕೊಟ್ಟಿರಲಿಲ್ಲ. ಇತ್ತ ಸಾಲ ಪಡೆದಿದ್ದ ಸುಧಾಗೆ ಸಾಲದ ಕಾಟ ಶುರುವಾಗಿತ್ತು.

Loading...