ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Kidnap attempt: ಕಿಡ್ನಾಪರ್ಸ್‌ಗೆ ಚಳ್ಳೆಹಣ್ಣು ತಿನ್ನಿಸಿ ಬಾಲಕಿ ಗ್ರೇಟ್‌ ಎಸ್ಕೇಪ್‌!

ಪೊಲೀಸ್ ಠಾಣೆಯ ಬಳಿಯೇ ಬಾಲಕಿ ಕಿಡ್ನಾಪ್‌ಗೆ ಯತ್ನ

Kidnap attempt near police station: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಧೈರ್ಯಶಾಲಿ ಹದಿಹರೆಯದ ಬಾಲಕಿಯೊಬ್ಬಳು ತನ್ನ ಅಪಹರಣ ಯತ್ನವನ್ನು ವಿಫಲಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಠಾಣೆಯ ಹತ್ತಿರವೇ ಈ ಘಟನೆ ನಡೆದಿದ್ದು, ಆಘಾತ ತಂದಿದೆ. ಮೂವರು ದುಷ್ಕರ್ಮಿಗಳು ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದು ಕರೆದೊಯ್ಯಲು ಯತ್ನಿಸಿದ್ದಾರೆ. ಆದರೆ ಬಾಲಕಿ ತನ್ನ ಸಮಯಪ್ರಜ್ಞೆಯಿಂದ ತಪ್ಪಿಸಿಕೊಂಡಿದ್ದಾಳೆ.

WhatsApp RTO challan scam: ವಾಟ್ಸ್ಯಾಪ್‌ನಲ್ಲಿ ಹೊಸ ವಂಚನೆ, ಆರ್‌ಟಿಒ ಚಲನ್‌ ಹೆಸರಿನಲ್ಲಿ ಧೋಖಾ

ವಾಟ್ಸ್ಯಾಪ್‌ನಲ್ಲಿ ಹೊಸ ವಂಚನೆ, ಆರ್‌ಟಿಒ ಚಲನ್‌ ಹೆಸರಿನಲ್ಲಿ ಧೋಖಾ

RTO challan scam:‌ ನಿಮಗೆ ಬರುವ ಈ ಫೈಲ್ ಅನ್ನು ತೆರೆದ ಕೂಡಲೇ ನಿಮ್ಮ ಫೋನ್‌ಗೆ ಮಾಲ್‌ವೇರ್‌ ಅಪಾಯ ಸಂಭವಿಸಬಹುದು. ಈ ಸಂದೇಶ ಸಾಮಾನ್ಯವಾಗಿ RTO E Challan.apk ಅಥವಾ Mparivahan.apk ಹೆಸರಿನ ಫೈಲ್ ಅನ್ನು ಹೊಂದಿರುತ್ತದೆ. ನೀವು ಅದನ್ನು ತೆರೆದ ನಂತರ, ಒಳಗೆ ಅಡಗಿರುವ ಮಾಲ್‌ವೇರ್ ಹ್ಯಾಕರ್‌ಗಳಿಗೆ ನಿಮ್ಮ ಸಾಧನಕ್ಕೆ ರಿಮೋಟ್ ಪ್ರವೇಶವನ್ನು ನೀಡುತ್ತದೆ. ಇದರಿಂದ ಸೈಬರ್ ಅಪರಾಧಿಗಳಿಗೆ ನಿಮ್ಮ ವೈಯಕ್ತಿಕ ಡೇಟಾ, ಬ್ಯಾಂಕ್ ವಿವರಗಳಿಗೆ ಪ್ರವೇಶ ಸಿಗುತ್ತದೆ. ಅವನ್ನು ಅವರು ಕದಿಯಬಹುದು. ನಿಮ್ಮ ಇತರ WhatsApp ಸಂಪರ್ಕಗಳಿಗೆ ಇದೇ ವಂಚನೆ ಸಂದೇಶವನ್ನು ಕಳುಹಿಸಲು ನಿಮ್ಮ ಸಂಖ್ಯೆಯನ್ನು ಸಹ ಬಳಸಬಹುದು.

Plane Crash: 25 ಜನರಿದ್ಧ ಸರಕು ವಿಮಾನ ಪತನ- ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ- ಇಲ್ಲಿದೆ ಭಯಾನಕ ವಿಡಿಯೊ

ಕಾರ್ಗೋ ವಿಮಾನ ಪತನ; ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ

Cargo plane crash: ಲೂಯಿಸ್‌ವಿಲ್ಲೆಯ ಮುಹಮ್ಮದ್ ಅಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊನೊಲುಲುಗೆ ಹೊರಟಿದ್ದ ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ನ ಯುಪಿಎಸ್ ಸರಕು ವಿಮಾನ ಮಂಗಳವಾರ ಸಂಜೆ ಅಪಘಾಕ್ಕೀಡಾಗಿ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾದ ವಿಮಾನ ದುರಂತದಿಂದ ಹಲವಾರು ಕಟ್ಟಡಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದು ಸುಮಾರು 8 ಕಿ.ಮೀ. ವ್ಯಾಪಿಸಿದ್ದು, ಇದನ್ನು ನಿಯಂತ್ರಿಸಲು ಲೂಯಿಸ್‌ವಿಲ್ಲೆ ಮೆಟ್ರೋ ತುರ್ತು ಸೇವಾ ಸಿಬ್ಬಂದಿಗೆ ಸಾಕಷ್ಟು ಸಮಯ ಬೇಕಾಯಿತು. ಆದರೂ ಕೆಲವೆಡೆ ಬುಧವಾರ ಬೆಳಗಿನವರೆಗೂ ಬೆಂಕಿ ಹೊತ್ತಿ ಉರಿಯುತ್ತಿತ್ತು ಎನ್ನಲಾಗಿದೆ.

POCSO case: ಮಾತು ಬಾರದ ವಿದ್ಯಾರ್ಥಿನಿಗೆ ಶಿಕ್ಷಕನ ಲೈಂಗಿಕ ಕಿರುಕುಳ, 13 ವರ್ಷದ ಬಳಿಕ ಬಯಲು

ಮೂಕ ವಿದ್ಯಾರ್ಥಿನಿಗೆ ಶಿಕ್ಷಕನ ಲೈಂಗಿಕ ಕಿರುಕುಳ, 13 ವರ್ಷ ಬಳಿಕ ಬಯಲು

Harassment: ವಿದ್ಯಾರ್ಥಿನಿಗೆ ಮಾತನಾಡಲು ಬರದಿದ್ದರಿಂದ ಇದನ್ನೇ ಆರೋಪಿ ಲಾಭವಾಗಿ ಬಳಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಕೊಳ್ಳೇಗಾಲದಲ್ಲಿ 2012-2013ನೇ ಸಾಲಿನಲ್ಲಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವೇಳೆ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಬಂಧ ಕಳೆದ 1 ವಾರದ ಹಿಂದೆ ಶಾಲೆಯಲ್ಲಿ ನಡೆದ ಹಳೇ ವಿದ್ಯಾರ್ಥಿಗಳ ಸಭೆಯಲ್ಲಿ ಸಂತ್ರಸ್ತೆ ಈ ವಿಚಾರವನ್ನು ಬಿಚ್ಚಿಟ್ಟಿದ್ದಾಳೆ. ಬಳಿಕ ಸಂತ್ರಸ್ತೆ ಕೊಟ್ಟ ಮಾಹಿತಿ ಮೇರೆಗೆ ಶಾಲೆಯ ಸಿಇಒ ದೂರು ನೀಡಿದ್ದು, ಇದೀಗ ಕೊಳ್ಳೇಗಾಲ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Mangaluru News: ದಾಂಪತ್ಯ ಕಲಹ; ಮಗಳ ಜತೆ ಆತ್ಮಹತ್ಯೆಗೆ ಯತ್ನಿಸಿದ ತಂದೆಯ ರಕ್ಷಣೆ

ದಾಂಪತ್ಯ ಕಲಹ; ಮಗಳ ಜತೆ ಆತ್ಮಹತ್ಯೆಗೆ ಯತ್ನಿಸಿದ ತಂದೆಯ ರಕ್ಷಣೆ

Self Harming: ಮಂಗಳೂರಿನ ಪಣಂಬೂರು ಬೀಚ್ ಬಳಿ ಪುಟ್ಟ ಮಗಳ ಜತೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದ. ಸುತ್ತಮುತ್ತಲು ಜನ, ಪೊಲೀಸರು ಇರುವುದನ್ನು ಗಮನಿಸಿ ಆತ ಮನೆಗೆ ತೆರಳಿದ್ದ. ಸಂಶಯದಿಂದ ಮನೆಗೆ ತೆರಳಿದಾಗ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಂದೆ ಮತ್ತು ಮಗಳನ್ನು ಪೊಲೀಸರು ರಕ್ಷಿಸಿದ್ದಾರೆ.

Doctor Murder Case: ನಿನಗಾಗಿ ನನ್ನ ಹೆಂಡ್ತಿಯನ್ನು ಕೊಂದೆ; ಪತ್ನಿ ಕೊಲೆ ಬಳಿಕ ನಾಲ್ಕೈದು ಮಹಿಳೆಯರಿಗೆ ಮೆಸೇಜ್‌ ಕಳುಹಿಸಿದ್ದ ವೈದ್ಯ!

ನಿನಗಾಗಿ ನನ್ನ ಹೆಂಡ್ತಿಯನ್ನು ಕೊಂದೆ; ಪತ್ನಿ ಕೊಲೆ ಬಳಿಕ ವೈದ್ಯ ಮೆಸೇಜ್‌!

Dr Kritika Reddy Murder Case: ಪತ್ನಿ ಕೃತಿಕಾ ಕೊಲೆ ಬಳಿಕ ವೈದ್ಯ ಮಹೇಂದ್ರ ರೆಡ್ಡಿ, ತನ್ನ ಪ್ರಪೋಸಲ್ ತಿರಸ್ಕರಿಸಿದ್ದ ಮಹಿಳೆಯರಿಗೆ ಮೆಸೇಜ್‌ ಕಳುಹಿಸಿದ್ದ ಎನ್ನುವುದು ತಿಳಿದುಬಂದಿದೆ. ಪೊಲೀಸರು ವಶಪಡಿಸಿಕೊಂಡ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್‌ನಲ್ಲಿದ್ದ ಡೇಟಾವನ್ನು ಪರಿಶೀಲಿಸಿದಾಗ ವೈದ್ಯನ ಕುರಿತ ಹಲವು ವಿಚಾರ ಬೆಳಕಿಗೆ ಬಂದಿದೆ.

Murder Case: ಆನೇಕಲ್‌ನಲ್ಲಿ ಪ್ರಾವಿಜನ್‌ ಸ್ಟೋರ್‌ ಮಾಲಿಕನ ಕತ್ತು ಕೊಯ್ದು ಹತ್ಯೆ

ಆನೇಕಲ್‌ನಲ್ಲಿ ಪ್ರಾವಿಜನ್‌ ಸ್ಟೋರ್‌ ಮಾಲಿಕನ ಕತ್ತು ಕೊಯ್ದು ಹತ್ಯೆ

Bengaluru Crime news: ಕೊಲೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್​ ಈ ಬಗ್ಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು 112ಗೆ ಫೋನ್​ ಬಂದಿತ್ತು. ಕೂಡಲೇ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಇದನ್ನು ನೋಡಿದ್ದಾರೆ. ಕೂಡಲೇ ಆರೋಪಿಯನ್ನು ಹಿಡಿಯಲು ಮುಂದಾಗಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟುವಾಗ ಅವರ ಮೇಲೂ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎಂದರು.

Crime News: ಟ್ಯೂಶನ್‌ ಮುಗಿಸಿ ಮನೆಗೆ ಬರ್ತಿದ್ದ ಬಾಲಕಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ; ರಣಭೀಕರ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ

ಬಾಲಕಿ ಮೇಲೆ ಡೆಡ್ಲಿ ಅಟ್ಯಾಕ್‌! ಭೀಕರ ದೃಶ್ಯ ಇಲ್ಲಿದೆ ನೋಡಿ

17-Year-Old Girl Shot: ಹರಿಯಾಣದ ಫರೀದಾಬಾದ್‌ನಲ್ಲಿ 17 ವರ್ಷದ ಬಾಲಕಿಯನ್ನು ಅವಳ ಟ್ಯೂಷನ್‌ಮೇಟ್ ಗುಂಡಿಕ್ಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಬಾಲ್ಲಭಗಢದ ಶ್ಯಾಮ್ ಕಾಲೋನಿಯಲ್ಲಿನ ತನ್ನ ಮನೆಯ ಸಮೀಪವಿದ್ದಾಗಲೇ ಈ ದಾಳಿ ನಡೆದಿದೆ. ವರದಿಗಳ ಪ್ರಕಾರ, ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಟ್ಯೂಷನ್ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದ ವೇಳೆ ಆರೋಪಿಯು ಅವಳ ಮೇಲೆ ಗುಂಡು ಹಾರಿಸಿದ್ದಾನೆ. ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ. ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಅವನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

physical assault Case: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್‌... ಮೂವರು ಕಾಮುಕರ ಮೇಲೆ ಫೈರಿಂಗ್‌

ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌; ಆರೋಪಿಗಳಿಗೆ ಗುಂಡೇಟು

Coimbatore physical assault Case: ತಮಿಳುನಾಡಿನ ಕೊಯಮತ್ತೂರಿನ ವಿಮಾನ ನಿಲ್ದಾಣದ ಸಮೀಪ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಗಳನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಕಾರ್ಯಪ್ರವೃತ್ತರಾದ ಪೊಲೀಸರು, ಆರೋಪಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಘಟನೆಯು ಇದೀಗ ರಾಜಕೀಯ ಸ್ವರೂರ ಪಡೆದುಕೊಂಡಿದ್ದು, ಸರ್ಕಾರದ ವಿರುದ್ಧ ವಿಪಕ್ಷ ವಾಗ್ದಾಳಿ ನಡೆಸಿದೆ.

Pavithra Gowda: ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ; ಕಾರಣವೇನು?

ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ; ಕಾರಣವೇನು?

Supreme Court: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ ಆಗಿದ್ದಾರೆ. ಎ1 ಪವಿತ್ರಾ ಗೌಡ, ಎ2 ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಮತ್ತೆ ಎಲ್ಲಾ ಆರೋಪಿಗಳನ್ನು ಜೈಲಿಗೆ ಹಾಕಲಾಗಿತ್ತು. ಆದರೆ ಇದೀಗ ಎ1 ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಗುರುವಾರ (ನವೆಂಬರ್ 6, 2025) ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದ್ದು, ಇದರಿಂದ ಪ್ರಕರಣಕ್ಕೆ ಹೊಸ ತಿರುವು ಬರಬಹುದು.

Physical Harassment: ಮೇಡಂ... ಎಂದು ಕರೆದು ಹಸ್ತ ಮೈಥುನ; ವಾಕಿಂಗ್‌ ಹೋಗಿದ್ದ ಮಹಿಳೆಗೆ ಕಿರುಕುಳ

ವಾಕಿಂಗ್‌ ಹೋಗಿದ್ದ ಮಹಿಳೆಗೆ ಕಿರುಕುಳ

Woman was allegedly harassed : 33 ವರ್ಷದ ಮಹಿಳೆ ತನ್ನ ನಾಯಿಯೊಂದಿಗೆ ದಿನನಿತ್ಯದ ಬೆಳಗಿನ ವಾಕಿಂಗ್‌ ಮಾಡುತ್ತಿದ್ದಾಗ ಈ ಆಘಾತಕಾರಿ ಘಟನೆ ನಡೆದಿದೆ ಎನ್ನಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯ ಬಳಿಗೆ ಬಂದು "ಮೇಡಂ" ಎಂದು ಕರೆದಿದ್ದಾನೆ. ಆಕೆ ತಿರುಗಿ ನೋಡಿದಾಗ, ಆ ವ್ಯಕ್ತಿ ಆಕೆಯ ಎದುರು ಹಸ್ತಮೈಥುನ ಮಾಡಿಕೊಳ್ಳಲು ಪ್ರಾರಂಭಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Physical Abuse: ಕಾಮುಕನ ಅಟ್ಟಹಾಸ; ಗುಪ್ತಾಂಗದ ವಿಡಿಯೊ ಕಳಿಸಿ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ

ಗುಪ್ತಾಂಗದ ವಿಡಿಯೊ ಕಳಿಸಿ ಸೀರಿಯಲ್ ನಟಿಗೆ ಟಾರ್ಚರ್‌

Physical harassment: ತೆಲುಗು ಹಾಗೂ ಕನ್ನಡ ಧಾರವಾಹಿಗಳಲ್ಲಿ ಸಂತ್ರಸ್ತೆ ನಟಿಸಿದ್ದು, ಆರೋಪಿ ಕಳೆದ 3 ತಿಂಗಳಿನಿಂದ ನಟಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಆರೋಪಿ ಮೊದಲು ಫೇಸ್ ಬುಕ್ ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ ಆದರೆ ರಿಕ್ವೆಸ್ಟ್ ಸ್ವೀಕರಿಸದ ಹಿನ್ನೆಲೆ ಮೆಸೆಂಜರ್ ನಲ್ಲಿ ಮೆಸೇಜ್ ಮಾಡಿದ್ದಾನೆ.

Assault Case: ಮಹಿಳೆಯ ಖಾಸಗಿ ಅಂಗಕ್ಕೆ ಹಲ್ಲೆ ದೂರು, ವರ್ತೂರು ಪೊಲೀಸರ ಮೇಲೆ ಪ.ಬಂಗಾಳ ಸಿಎಂ ಕಚೇರಿ ಅಸಮಾಧಾನ

ಮಹಿಳೆಯ ಖಾಸಗಿ ಅಂಗಕ್ಕೆ ಹಲ್ಲೆ, ವರ್ತೂರು ಪೊಲೀಸರ ಮೇಲೆ ದೂರು

Bengaluru: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ಸುಂದರಿ ಬೀಬಿ ಮನೆ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಹಣ ಬಿದ್ದಿರುವುದನ್ನು ತೆಗೆದುಕೊಂಡು ಮನೆ ಮಾಲೀಕರಿಗೆ ಕೊಡಲು ಹೋಗಿದ್ದಾರೆ. ಇದನ್ನ ಸಿಸಿಟಿವಿಯಲ್ಲಿ ಗಮನಿಸಿದ ಅಪಾರ್ಟ್ಮೆಂಟ್‌ ಫ್ಲ್ಯಾಟ್‌ನ ಮಾಲೀಕರು ಬೀಬಿ ಮೇಲೆ ಹಲ್ಲೆ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಠಾಣೆಯಲ್ಲಿ ಪೊಲೀಸರು ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Physical Assault: ಕುಟುಂಬದ ಮೇಲಿನ ದ್ವೇಷಕ್ಕೆ ಬಾಲಕಿ ಮೇಲೆ ಅತ್ಯಾಚಾರ? ಕತ್ತು ಸೀಳಿ ಸ್ಥಿತಿಯಲ್ಲಿ ಸಿಕ್ತು ಶವ

ಕುಟುಂಬದ ಮೇಲಿನ ದ್ವೇಷಕ್ಕೆ ಬಾಲಕಿ ಮೇಲೆ ಅತ್ಯಾಚಾರ?

Crime News: ಎರಡು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ 15 ವರ್ಷದ ಬಾಲಕಿ ಇಂದು ಶವವಾಗಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದಿದೆ. ಆಕೆಯ ಸಹೋದರ ಮೂವರು ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ಬಾಲಕಿ ಕುಟುಂಬ ದೂರು ನೀಡಿತ್ತು. ಇಂದು, ಆಕೆಯ ಶವ ಆಕೆಯ ಮನೆಯ ಸಮೀಪದ ತೋಟದಲ್ಲಿ ಪತ್ತೆಯಾಗಿದೆ. ಹದಿಹರೆಯದ ಬಾಲಕಿಯ ದೇಹದ ಮೇಲಿನ ಗಾಯಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ ಎಂದು ವಿಪಕ್ಷಗಳು ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಇತ್ತೀಚಿನ ವರದಿಯ ಪ್ರಕಾರ, ಉತ್ತರ ಪ್ರದೇಶವು ಸುಮಾರು 58.6 ರಷ್ಟು ಕಡಿಮೆ ಅಪರಾಧ ಪ್ರಮಾಣವನ್ನು ಕಾಯ್ದುಕೊಂಡಿದೆ.

Animal Cruelty: ಸಾಕಲೆಂದು ಬಂದವಳು, ನೆಲಕ್ಕೆ ಬಡಿದು ನಾಯಿಮರಿಯನ್ನು ಕೊಂದಳು!  ಮಹಿಳೆಯ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಸಾಕಲೆಂದು ಬಂದವಳು, ನೆಲಕ್ಕೆ ಬಡಿದು ನಾಯಿಮರಿಯನ್ನು ಕೊಂದಳು!

viral video: ಕೆಲವರ ಕ್ರೌರ್ಯಕ್ಕೆ ಕಾರಣ ಊಹಿಸಲೂ ಸಾಧ್ಯವಿಲ್ಲ ಎಂಬುದು ಈ ಘಟನೆಯಿಂದ ರುಜುವಾತು ಆಗಿದೆ. ಆ ಮನೆ ಮಾಲೀಕರು ತಾವು ಇಲ್ಲದಾಗ ತಮ್ಮ ನಾಯಿ ಮರಿಯನ್ನು ನೋಡಿಕೊಳ್ಳಲಿ ಎಂದು ಒಬ್ಬಾಕೆ ಮಹಿಳೆಯನ್ನು ನೇಮಿಸಿಕೊಂಡಿದ್ದಾರೆ. ಆದರೆ ಸಾಕಲೆಂದು ಬಂದವಳೇ ಆ ನಾಯಿ ಮರಿಗೆ ಯಮಸ್ವರೂಪಿಯಾಗಿದ್ದಾಳೆ. ಅದೂ ಆಕೆ ನಾಯಿ ಮರಿ ಮೇಲೆ ತೋರಿದ್ದು ಅಂತಿಂಥಾ ಕ್ರೌರ್ಯವಲ್ಲ. ಲಿಫ್ಟ್‌ ಒಳಗೆ ನಾಯಿಮರಿಯನ್ನು ಅದರ ಕೊರಳಿಗೆ ಕಟ್ಟಿದ ಬೆಲ್ಟ್‌ನಿಂದಲೇ ಎತ್ತಿ ಬಟ್ಟೆ ಕುಕ್ಕಿದಂತೆ ಕುಕ್ಕಿ ಕೊಂದುಹಾಕಿದ್ದಾಳೆ. ನಂತರ ನಾಯಿ ಮರೆ ಹೇಗೆ ಸತ್ತಿತು ಎಂದು ತನಗೆ ಗೊತ್ತೇ ಇಲ್ಲ ಎಂದು ನಾಟಕ ಆಡಿದ್ದಾಳೆ.

Harvard Explosion: ಹಾರ್ವರ್ಡ್ ವೈದ್ಯಕೀಯ ಶಾಲೆಯಲ್ಲಿ ಸ್ಫೋಟ- ಶಂಕಿತರ ಫೋಟೋ ರಿಲೀಸ್‌

ಹಾರ್ವರ್ಡ್ ವೈದ್ಯಕೀಯ ಶಾಲೆಯಲ್ಲಿ ಸ್ಫೋಟ

Explosion at Harvard Medical School: ಬೋಸ್ಟನ್ ನ ಹಾರ್ವರ್ಡ್ ವೈದ್ಯಕೀಯ ಶಾಲೆಯಲ್ಲಿ ಭಾನುವಾರ ಬೆಳಗಿನ ಜಾವ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲವಾದರೂ ಜನರನ್ನು ಭಯಭೀತಿಗೊಳಿಸಲು ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಲಾಗಿದೆ ಎನ್ನಲಾಗುತ್ತಿದೆ. ಘಟನೆಯ ಕುರಿತು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್, ಬೋಸ್ಟನ್ ಪೊಲೀಸರು, ಹಾರ್ವರ್ಡ್ ವಿಶ್ವವಿದ್ಯಾಲಯ ಪೊಲೀಸ್ ಇಲಾಖೆ ಜಂಟಿಯಾಗಿ ತನಿಖೆ ಆರಂಭಿಸಿದೆ. ಇಬ್ಬರು ಅಪರಿಚಿತರು ಹಾರ್ವರ್ಡ್ ವೈದ್ಯಕೀಯ ಶಾಲೆಯ ಒಳಗೆ ಪ್ರವೇಶಿಸಿ ಈ ಕೃತ್ಯ ಎಸಗಿರುವುದಾಗಿ ಶಂಕಿಸಲಾಗಿದೆ. ಅಪರಿಚಿತರು ಶಾಲಾ ಆವರಣದಲ್ಲಿ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ತನಿಖಾಧಿಕಾರಿಗಳು ಇಬ್ಬರು ಮುಸುಕುಧಾರಿ ಶಂಕಿತರನ್ನು ತೋರಿಸುವ ಸಿಸಿಟಿವಿ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.

Mass stabbing: ರೈಲಿನಲ್ಲಿ ಸಾಮೂಹಿಕ ಚಾಕು ಇರಿತ- ಹತ್ತು ಜನರಿಗೆ ಗಾಯ, ಶಂಕಿತರಿಬ್ಬರ ಬಂಧನ

ರೈಲಿನಲ್ಲಿ ಹತ್ತು ಮಂದಿಗೆ ಚಾಕು ಇರಿತ

UK Mass stabbing Case: ಕೇಂಬ್ರಿಡ್ಜ್‌ಶೈರ್‌ನ ಹಂಟಿಂಗ್‌ಡನ್ ನಲ್ಲಿ ಶನಿವಾರ ರಾತ್ರಿ ಇಬ್ಬರು ವ್ಯಕ್ತಿಗಳು ರೈಲು ಪ್ರಯಾಣಿಕರ ಮೇಲೆ ದಾಳಿ ನಡೆಸಿದ್ದು, ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಶಂಕಿತರನ್ನು ಯುಕೆ ಪೊಲೀಸರು ಬಂಧಿಸಿದ್ದು, ಘಟನೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಭಯೋತ್ಪಾದನಾ ನಿಗ್ರಹ ಘಟಕಗಳು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿವೆ. ಘಟನೆಯ ಕುರಿತು ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಟಿಷ್ ಸಾರಿಗೆ ಪೊಲೀಸರು ಹಂಚಿಕೊಂಡಿದ್ದಾರೆ. ಇದೊಂದು ಕಳವಳಕಾರಿ ಪ್ರಕರಣ. ಸಂತ್ರಸ್ತರೊಂದಿಗೆ ನಾವಿದ್ದೇವೆ. ತಕ್ಷಣ ಪ್ರತಿಕ್ರಿಯೆ ನೀಡಿರುವ ತುರ್ತು ಸೇವೆಗಳಿಗೆ ಧನ್ಯವಾದಗಳು ಎಂದು ಪ್ರಧಾನಿ (UK Prime Minister) ಕೀರ್ ಸ್ಟಾರ್ಮರ್ (Keir Starmer) ಹೇಳಿದ್ದಾರೆ.

Murder Case: ಲೈಟ್ ಆಫ್ ವಿಚಾರಕ್ಕೆ ಗಲಾಟೆ; ಸಹೋದ್ಯೋಗಿಯನ್ನೇ ಹೊಡೆದು ಕೊಂದ ವ್ಯಕ್ತಿ

ಸಹೋದ್ಯೋಗಿಯನ್ನೇ ಹೊಡೆದು ಕೊಂದ ವ್ಯಕ್ತಿ !

ಕಚೇರಿಯಲ್ಲಿ ಲೈಟ್ ಸ್ವಿಚ್‌ ಆಫ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದ್ಯೋಗಿಗಳ ಜಗಳ ನಡೆದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಗೋವಿಂದರಾಜ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ 40 ವರ್ಷದ ಭೀಮೇಶ್ ಬಾಬು ಕೊಲೆಯಾದ ವ್ಯಕ್ತಿ.

Self Harming: ಯುವತಿ ಅನುಮಾನಾಸ್ಪದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಯುವತಿ ಅನುಮಾನಾಸ್ಪದ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

25 ವರ್ಷದ ಯುವತಿ ಅನುಮಾನಾಸ್ಪದ ಸಾವನ್ನಪ್ಪಿದ್ದು, ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಮೃತಳನ್ನು ದಾವಣಗೆರೆ ಜಿಲ್ಲೆಯ ಮೂಲದ ಸುಪ್ರಿಯಾ ಎಂದು ಗುರುತಿಸಲಾಗಿದೆ. ಎಂಬಿಎ ಪದವಿ ಪಡೆದಿದ್ದ ಸುಪ್ರಿಯಾ, ಬೈಕ್ ರೈಡಿಂಗ್ ತರಬೇತಿ ಪಡೆಯುತ್ತಿದ್ದಳು ಎನ್ನಲಾಗಿದೆ.

Drown in water: ನಾಲೆ ನೀರಲ್ಲಿ ಕೊಚ್ಚಿ ಹೋದ ನಾಲ್ವರು ಮಕ್ಕಳು;  ಮುಂದುವರಿದ ಶೋಧ ಕಾರ್ಯ

ನಾಲೆ ನೀರಲ್ಲಿ ಕೊಚ್ಚಿ ಹೋದ ನಾಲ್ವರು ಮಕ್ಕಳು

ಪ್ರವಾಸಕ್ಕೆ ಬಂದಿದ್ದ ಮದರಸದ ನಾಲ್ವರು ಮಕ್ಕಳು ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಬಳಿಯ ರಾಮಸ್ವಾಮಿ ನಾಲೆಯಲ್ಲಿ ನಡೆದಿದೆ. ಶಾಂತಿನಗರದ ಮದರಸದ ಮಕ್ಕಳನ್ನು ಪಿಕ್‌ನಿಕ್‌ಗೆ ಎಂದು ಕರೆದುಕೊಂಡು ಬರಲಾಗಿತ್ತು. ನಿನ್ನೆ ಸಂಜೆ 5.30ರ ಸಮಯಕ್ಕೆ ನಾಲೆ ಬಳಿ ಆಟವಾಡುವಾಗ ಮಕ್ಕಳು ನಾಲೆಗೆ ಇಳಿದಿದ್ದರು. ಆದರೆ ನೋಡು ನೋಡುತ್ತಿದ್ದಂತೆ ನಾಲ್ವರು ಮಕ್ಕಳು ಕೊಚ್ಚಿ ಹೋಗಿದ್ದರು.

Bihar Assembly Election: ಬಿಹಾರ ಚುನಾವಣೆಗೂ ಮುನ್ನವೇ ನೀತೀಶ್‌ಗೆ ಬಿಗ್‌ ಶಾಕ್‌; ಆಪ್ತ ಶಾಸಕ ಅರೆಸ್ಟ್‌!

ನಿತೀಶ್‌ ಕುಮಾರ್‌ಗೆ ಬಿಗ್‌ ಶಾಕ್‌; ಆಪ್ತ ಶಾಸಕ ಅರೆಸ್ಟ್‌!

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ(ಯು) ನಿಂದ ಸ್ಪರ್ಧಿಸಿರುವ ಬಿಹಾರದ ಮಾಜಿ ಶಾಸಕ ಅನಂತ್ ಸಿಂಗ್ ಅವರನ್ನು ಜನ ಸುರಾಜ್ ಬೆಂಬಲಿಗ ದುಲಾರ್ ಚಂದ್ ಯಾದವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿಸಲಾಗಿದೆ.

Road Accident: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಗುದ್ದಿದ ಆ್ಯಂಬುಲೆನ್ಸ್‌; ದಂಪತಿ ಸ್ಥಳದಲ್ಲಿಯೇ ಸಾವು

ರಸ್ತೆ ಅಪಘಾತ; ದಂಪತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆ್ಯಂಬುಲೆನ್ಸ್‌ ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ರೆಡ್‌ ಸಿಗ್ನಲ್‌ ಇದ್ದರಿಂದ ಬೈಕ್‌ ಸವಾರ ಬೈಕ್‌ ನಿಲ್ಲಿಸಿದ್ದ. ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಆ್ಯಂಬುಲೆನ್ಸ್‌ ನಿಯಂತ್ರಣ ತಪ್ಪಿ ಬೈಕ್‌ ಸವಾರನಿಗೆ ಗುದ್ದಿದೆ.

Crime News: ಮತ್ತೊಂದು ವೈಶಾಚಿಕ ಕೃತ್ಯ; ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಕೆಲಸ ಮುಗಿಸಿ ಮರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

Young woman sexual assaulted: ದೇಶದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಕಾಳಜಿ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತವೆ. ಇದೀಗ ಒಡಿಶಾದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿತ ಅತ್ಯಾಚಾರವೆಸಗಲಾದ ಆಘಾತಕಾರಿ ಘಟನೆ ನಡೆದಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಶೋರೂಂ ಉದ್ಯೋಗಿಯೊಬ್ಬರಿಗೆ ಮೂವರು ಮುಸುಕುಧಾರಿಗಳು, ಸ್ಪ್ರೇ ಸಿಂಪಡಿಸಿ, ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿದ್ದಾರೆ. ಒಡಿಶಾದ ಸುಬರ್ಣಾಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ. ಶಂಕಿತರು ತಮ್ಮ ಗುರುತುಗಳನ್ನು ಮರೆಮಾಡಲು ಮಾಸ್ಕ್ ಧರಿಸಿದ್ದರಿಂದ, ಯುವತಿಗೆ ಅವರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಸಂತ್ರಸ್ತೆಯು ಬಿರಾಮಹರಾಜಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ಗುಂಡಿನ ಚಕಮಕಿ: ಭಾರತೀಯ ಸಾವು

ಅರೇಬಿಯಾದಲ್ಲಿ ಭಾರತೀಯ ಸಾವು

ಪೊಲೀಸರು ಮತ್ತು ಕಳ್ಳ ಸಾಗಾಣೆದಾರರ ನಡುವಿನ ಗುಂಡಿನ ಚಕಮಕಿಯಲ್ಲಿ ಭಾರತೀಯನೋರ್ವ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ಕಳೆದ ಒಂಬತ್ತು ತಿಂಗಳಿನಿಂದ ಸೌದಿಯ ಖಾಸಗಿ ಕಂಪನಿಯೊಂದರಲ್ಲಿ ಟವರ್ ಲೈನ್ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದ ಜಾರ್ಖಂಡ್‌ನ ವಿಜಯ್ ಕುಮಾರ್ ಮಹತೋ ಮೃತರು. ಕಂಪನಿಯ ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ಸಾಮಗ್ರಿಗಳನ್ನು ಖರೀದಿಗೆಂದು ವಿಜಯ್ ಕುಮಾರ್ ಕೆಲಸದ ಸ್ಥಳಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿಜಯ್ ಕುಮಾರ್ ಮೃತದೇಹವನ್ನು ಸ್ವದೇಶಕ್ಕೆ ತರಲು ಆತನ ಕುಟುಂಬ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸುತ್ತಿದೆ

Loading...