ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕ್ರೈಂ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದ ಖದೀಮರು; ತಕ್ಷಣ ಕ್ರಮಕ್ಕೆ ಭಾರತ ಆಗ್ರಹ

ಗಾಂಧಿ ಪ್ರತಿಮೆಗೆ ಹಾನಿ; ಕ್ರಮಕ್ಕೆ ಆಗ್ರಹ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದಿರುವ ಘಟನೆ ನಡೆದಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ಯಲಾಗಿದೆ. ಇದು ಭಾರತೀಯ ಮತ್ತು ಆಸ್ಟ್ರೇಲಿಯನ್ ಸಮುದಾಯದಲ್ಲಿ ತೀವ್ರ ಕಳವಳವನ್ನು ಉಂಟು ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ ಕ್ರಮಕ್ಕೆ ಆಗ್ರಹಿಸಿದೆ.

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು; ಸಂಬಂಧಿಕರಲ್ಲಿ ಕ್ಷಮೆ ಕೇಳಿದ್ದೇಕೆ?

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು

ರೈಲ್ವೇ ಹಳಿಯಲ್ಲಿ ತಾಯಿ ಮತ್ತು ಮಕ್ಕಳು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮಹಿಳೆ ತನ್ನ ಸಂಬಂಧಿಕರಿಗೆ ಕ್ಷಮೆ ಕೇಳಿ ಪತ್ರ ಬರೆದಿದ್ದು, ಡೆತ್ ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಈ ಹೃದಯ ವಿದ್ರಾವಕ ಘಟನೆಯ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.

ಕುಡಿದ ಮತ್ತಿನಲ್ಲಿ ಅರೆಬೆತ್ತಲೆಯಾಗಿ ಪತ್ನಿ ಮೇಲೆ ಹಲ್ಲೆ ನಡೆಸಿದ ಕಾನ್‌ಸ್ಟೇಬಲ್; ಚಿಕ್ಕ ಮಗು ಕೈಲಿದ್ರೂ ಮನಸ್ಸು ಕರಗಲಿಲ್ಲ

ಅರೆಬೆತ್ತಲೆಯಾಗಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಪೇದೆ

Constable attacks wife: ಕುಡಿದ ಮತ್ತಿನಲ್ಲಿ ಕಾನ್‌ಸ್ಟೇಬಲ್‍ ಒಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪತ್ನಿಯು ತನ್ನ ಮಗುವನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರೆ, ಪೇದೆಯು ಅರೆಬೆತ್ತಲೆಯಾಗಿದ್ದು, ಮನಬಂದಂತೆ ಹೆಂಡತಿಗೆ ಥಳಿಸಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಕಾರ್ಯಾಚರಣೆ; ಉಧಮ್‌ಪುರದಲ್ಲಿ ಸಿಲುಕಿಕೊಂಡ ಇಬ್ಬರು ಜೈಶ್ ಭಯೋತ್ಪಾದಕರು

ಕಾಶ್ಮೀರದಲ್ಲಿ ಜೈಶ್ ಭಯೋತ್ಪಾದಕರಿಗೆ ದಿಗ್ಬಂಧನ

ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಇತರ ಭದ್ರತಾ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಶಂಕಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿರುವ ಇಬ್ಬರು ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಚಿತ್ರದುರ್ಗದಲ್ಲಿ ಖಾಸಗಿ ಶಾಲೆ ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಖಾಸಗಿ ಶಾಲೆ ಶಿಕ್ಷಕನ ಬಂಧನ

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಶಿಕ್ಷಕ ಹೀನ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿಯಿಂದ ಶಿಕ್ಷಕನ ವಿರುದ್ಧ ದೂರು ನೀಡಲಾಗಿದ್ದು, ಪೋಕ್ಸೊ ಪ್ರಕರಣ ದಾಖಲಾಗಿದೆ.

ಅನೈತಿಕ ಸಂಬಂಧ ವಿಚಾರಕ್ಕೆ ವ್ಯಕ್ತಿಯ ಕೊಲೆ; ಖ್ಯಾತ ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಸೇರಿ 7 ಮಂದಿ ಬಂಧನ

ಸಿದ್ದಾಪುರದಲ್ಲಿ ವ್ಯಕ್ತಿಯ ಕೊಲೆ; ಜ್ಯೋತಿಷಿ ಕಮಲಾಕರ ಭಟ್ ಗುರೂಜಿ ಬಂಧನ

Siddapura Murder Case: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಕೊಲೆ ಘಟನೆ ನಡೆದಿದೆ. ಜ್ಯೋತಿಷಿ ಕಮಲಾಕರ ಭಟ್‌ ಗುರೂಜಿ ಜತೆ ತಾಯಿಗೆ ಅನೈತಿಕ ಸಂಬಂಧ ಇದ್ದ ಬಗ್ಗೆ ಮಗಳು ತಂದೆಗೆ ತಿಳಿಸಿದ್ದಳು. ಈ ಬಗ್ಗೆ ದೂರು ನೀಡಿದ್ದಕ್ಕೆ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಈ ಸಂಬಂಧ ಏಳು ಮಂದಿಯ ಬಂಧನವಾಗಿದೆ.

Murder Case: ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಶವದ ಮೇಲೆ ಕಾಲಿಟ್ಟು ನಿಂತ!

10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನ ಕೊಲ್ಹಾಪುರದಲ್ಲಿ ಬಿಟ್ಟು ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆಯಷ್ಟೇ ಬಸಪ್ಪ ಬಂದಿದ್ದ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಆರೋಪಿ ಈರಯ್ಯ ಆತನನ್ನು ಕೊಲೆ ಮಾಡಿದ್ದಾನೆ.

Murder Case: ಆಸ್ತಿಗಾಗಿ ಕಲಹ, ತಮ್ಮನಿಗೆ ಬೀಸಿದ ಕತ್ತಿ ಮಗಳ ಪ್ರಾಣ ತೆಗೀತು!

ಆಸ್ತಿಗಾಗಿ ಕಲಹ, ತಮ್ಮನಿಗೆ ಬೀಸಿದ ಕತ್ತಿ ಮಗಳ ಪ್ರಾಣ ತೆಗೀತು!

ಉಮರ್ ಮತ್ತು ಜುಮೈಲ ಚಿಕ್ಕಪ್ಪ ಶೇಕುಂ ನಡುವೆ ಜಗಳ ಆಗುತ್ತಿದ್ದಾಗ ಜಗಳ ಬಿಡಿಸಲು ಉಮರ್ ಮಗಳು ಜುಮೈಲಾ ಬಂದಿದ್ದಳು. ಈ ವೇಳೆ ‌ಶೇಕುಂಗಾಗಿ ಬೀಸಿದ ಅಪ್ಪನ ಕತ್ತಿ ಏಟು ತಗುಲಿ ಜುಮೈಲ ಸಾವನ್ನಪ್ಪಿದ್ದಾಳೆ. ಆರೋಪಿ ಉಮರ್ ಫಾರೂಕ್‌ನನ್ನು ಮಂಜೇಶ್ವರ ಠಾಣೆ ಪೋಲೀಸರು ಆರೆಸ್ಟ್ ಮಾಡಿದ್ದಾರೆ.

ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು 6 ವರ್ಷದ ಪುತ್ರಿಯನ್ನೇ ಕೊಲೆ ಮಾಡಿದ ಪಾಪಿ ತಂದೆ

ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಮಗುವನ್ನು ಕೊಂದ ಅಪ್ಪ

Father kills his daughter: ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶದಿಂದ ತನ್ನ ಆರು ವರ್ಷದ ಪುತ್ರಿಯನ್ನೇ ತಂದೆ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಅಮಾನವೀಯ ಕೃತ್ಯ ಸಾರ್ವಜನಿಕರಲ್ಲಿ ಆಕ್ರೋಶ ಮತ್ತು ಆಘಾತ ಮೂಡಿಸಿದ್ದು, ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಎಸ್‌ಬಿಐ ಎಟಿಎಂ ಹೊರಗೆ ಉದ್ಯಮಿ ಮೇಲೆ ಗುಂಡು ಹಾರಿಸಿ 6 ಲಕ್ಷ ರೂ. ದರೋಡೆ!

ಉದ್ಯಮಿ ಮೇಲೆ ಗುಂಡು ಹಾರಿಸಿ 6 ಲಕ್ಷ ರೂ. ದರೋಡೆ

SBI ATM robbery: ಎಸ್‌ಬಿಐ ಎಟಿಎಂ ಹೊರಗೆ ಕೇರಳ ಮೂಲದ ಉದ್ಯಮಿಯ ಮೇಲೆ ಗುಂಡು ಹಾರಿಸಿ 6 ಲಕ್ಷ ರೂ. ಹಣವನ್ನು ದರೋಡೆ ಮಾಡಿದ ಘಟನೆ ತೆಲಂಗಾಣ ಹೈದರಾಬಾದ್‍ನಲ್ಲಿ ನಡೆದಿದೆ. ಹಣ ತೆಗೆಯುವ ವೇಳೆ ಆರೋಪಿಗಳು ದಾಳಿ ನಡೆಸಿದ್ದು, ಗಾಯಗೊಂಡ ಉದ್ಯಮಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Murder Case: ಬರ್ಬರ ಕೃತ್ಯ, ಸಾಲ ಮಾಡಿದ್ದನ್ನು ಆಕ್ಷೇಪಿಸಿದ್ದಕ್ಕೆ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ, ಇಬ್ಬರು ಮಕ್ಕಳು ಅನಾಥ

ಬರ್ಬರ ಕೃತ್ಯ, ಸಾಲ ಮಾಡಿದ್ದು ಆಕ್ಷೇಪಿಸಿದ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ

ರಕ್ತದ ಮಡುವಿನಲ್ಲೇ ಪ್ರಾಣ ಉಳಿಸಿಕೊಳ್ಳಲು ಮಾಸಬ್ಬಿ ಮನೆಯ ಹೊರಗೆ ಓಡಿ ಬಂದಿದ್ದಾಳೆ. ಮನೆಯ ಎದುರಲ್ಲೇ ಬಿದ್ದು ಒದ್ದಾಡುತ್ತಿದ್ದ ಮಾಸಬ್ಬಿಯನ್ನು ಹಿಂಬಾಲಿಸಿದ ಪಾಪಿ, ಮತ್ತೆ ಕತ್ತಿಗೆ ಚಾಕು ಇರಿದು ಸ್ಥಳದಲ್ಲೇ ಕೊಂದಿದ್ದಾನೆ. ಈ ದೃಶ್ಯವನ್ನು ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

Self Harming: ಮದ್ಯ ಪಾರ್ಟಿ ಬಳಿಕ ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು

ಮದ್ಯ ಪಾರ್ಟಿ ಬಳಿಕ ಹೆತ್ತವರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು

ಶಾಲೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭ ಮುಗಿದ ನಂತರ ಸ್ನೇಹಿತರೆಲ್ಲರೂ ಪಬ್‌ವೊಂದರಲ್ಲಿ ಮದ್ಯದ ಪಾರ್ಟಿ ಮಾಡಿದ್ದರು. ಮದ್ಯ ಸೇವಿಸಿದ್ದ ಹಿನ್ನೆಲೆಯಲ್ಲಿ ಬಾಲಕನಿಗೆ ಮನೆಗೆ ಹೋಗಲು ಭಯವಾಗಿದ್ದು, ಅಪಾರ್ಟ್‌ಮೆಂಟ್‌ 7ನೇ ಮಹಡಿಯಿಂದ ಹಾರಿ ಮೃತಪಟ್ಟಿದ್ದ. ಅಪ್ರಾಪ್ತ ಬಾಲಕನಿಗೆ ಮದ್ಯಪಾನ ಮಾಡಲು ಅವಕಾಶ ನೀಡಿದ್ದ ಪಬ್ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ.

ಮದುವೆಯಂದು ಕುದುರೆ ಸವಾರಿ ಮಾಡಿದ್ದಕ್ಕಾಗಿ ದಲಿತ ವರನ ಮೇಲೆ ಹಲ್ಲೆ; ಗುಜರಾತ್‌ನಲ್ಲೊಂದು ಅಮಾನವೀಯ ಘಟನೆ

ಕುದುರೆ ಸವಾರಿ ಮಾಡಿದ್ದಕ್ಕಾಗಿ ದಲಿತ ವರನ ಮೇಲೆ ಹಲ್ಲೆ

Dalit groom attacked: ವಿವಾಹದ ಸಂದರ್ಭದಲ್ಲಿ ದಲಿತ ವರನು ಕುದುರೆ ಸವಾರಿ ಮಾಡಿದ ಕಾರಣ ಆತನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಲಾಗಿದೆ. ಗುಜರಾತ್‌ನಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ವರ್ಗಭೇದದಿಂದ ಉಂಟಾದ ಹಿಂಸಾತ್ಮಕ ಘಟನೆ ಎಂದು ಹೇಳಲಾಗಿದೆ. ವಿಜ್ಞಾನ-ತಂತ್ರಜ್ಞಾನದಲ್ಲಿ ಎಷ್ಟೇ ಮುಂದುವರಿದರೂ ಪುರಾತನ ಜಾತಿ ವ್ಯವಸ್ಥೆ ಇನ್ನೂ ತೊಲಗಿಲ್ಲ ಎಂಬುದು ವಿಚಾರವೇ ಆತಂಕ ಮೂಡಿಸುತ್ತಿದೆ ಎಂದು ನೆಟ್ಟಿಗರು ತಿಳಿಸಿದ್ದಾರೆ.

Sagara Accident: ಸಾಗರ ಸಮೀಪ ಭೀಕರ ಅಪಘಾತ; ಕ್ಯಾಂಟರ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

ಸಾಗರ ಸಮೀಪ ಕ್ಯಾಂಟರ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಆನಂದಪುರದಿಂದ ಸಾಗರಕ್ಕೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಆನಂದಪುರದ ಕಡೆಗೆ ಬರುತ್ತಿದ್ದ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ: ಖಾಸಗಿ ಕಂಪನಿ ಉದ್ಯೋಗಿಯ ಮೇಲೆ ಹಲ್ಲೆ ನಡೆಸಿ 31 ಲಕ್ಷ ರುಪಾಯಿ ದೋಚಿದ ಡಕಾಯಿತರು

ಬೆಂಗಳೂರಿನಲ್ಲಿ ಹಾಡಹಗಲೇ ದರೋಡೆ; 31 ಲಕ್ಷ ರುಪಾಯಿ ದೋಚಿದ ಖದೀಮರು

Robbery in Bengaluru: ಬೆಂಗಳೂರು ನಗರದ ಬನ್ನೇರುಘಟ್ಟದಲ್ಲಿ ಮಧ್ಯಾಹ್ನದ ಹೊತ್ತಿನಲ್ಲಿ ನಡೆದ ದರೋಡೆ ಭೀತಿ ಮೂಡಿಸಿದೆ. ಖಾಸಗಿ ಕಂಪನಿಯ ಉದ್ಯೋಗಿಯ ಮೇಲೆ ದಾಳಿ ನಡೆಸಿ 31 ಲಕ್ಷ ರುಪಾಯಿಯನ್ನು ದರೋಡೆಕೋರರು ದೋಚಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಘಟನೆಯ ವಿಡಿಯೊ ವೈರಲ್ ಆಗಿದೆ.

ಫ್ರೀ ಮೊಮೊಸ್‌ ಆಸೆಗೆ 85 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳೆದುಕೊಂಡ 7ನೇ ತರಗತಿ ಬಾಲಕ

ಮೊಮೊಸ್‌ಗಾಗಿ ಮನೆಯಲ್ಲಿದ್ದ ಚಿನ್ನಾಭರಣ ಕೊಟ್ಟ ಬಾಲಕ

ಉತ್ತರ ಪ್ರದೇಶದಲ್ಲಿ 7ನೇ ತರಗತಿ ಬಾಲಕನಿಗೆ ಉಚಿತ ಮೊಮೊಸ್‌ ನೀಡುವ ಆಮಿಷ ತೋರಿಸಿ, ಮೂವರು ವ್ಯಾಪಾರಿಗಳು ಕುಟುಂಬದ ಸುಮಾರು 85 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಾಲಕ ಮನೆಯ ಲಾಕರ್‌ನಲ್ಲಿದ್ದ ಆಭರಣಗಳನ್ನು ಹಂತ ಹಂತವಾಗಿ ತೆಗೆದುಕೊಂಡು ಅವರಿಗೆ ಒಪ್ಪಿಸಿದ್ದಾನೆ. ಅತ್ತೆ ಆಭರಣ ಕೇಳಿದ ವೇಳೆ ಕಬೋರ್ಡ್ ತೆರೆಯುತ್ತಿದ್ದಾಗ ವಿಷಯ ಬಹಿರಂಗವಾಗಿದೆ. ತಂದೆ ವಿಮಲೇಶ್ ಮಿಶ್ರಾ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶ ಮರ್ಯಾದಾ ಹತ್ಯೆ: ಥೂ ಇವನೆಂಥಾ ಅಪ್ಪ?! ಕರೆಂಟ್ ಶಾಕ್ ನೀಡಿ ಮಗಳನೇ ಕೊಂದ ರಾಕ್ಷಸ

ಪ್ರೀತಿಸಿದ್ದಕ್ಕೆ ವಿದ್ಯುತ್ ಶಾಕ್ ನೀಡಿ ಮಗಳನ್ನೇ ಕೊಲೆ ಮಾಡಿದ ತಂದೆ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಥೋರ್ಹಾನ್ಸ್ ಗ್ರಾಮದಲ್ಲಿ ದೂರದ ಸಂಬಂಧಿಯನ್ನು ಮದುವೆಯಾಗಲು ಬಯಸಿದ 19 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ಸಹೋದರರು ‘ಗೌರವ ಹತ್ಯೆ’ ರೂಪದಲ್ಲಿ ವಿದ್ಯುತ್ ಶಾಕ್ ನೀಡಿ ಕೊಲೆ ಮಾಡಿದ್ದಾರೆ. ಘಟನೆಯನ್ನು ಅಪಘಾತವೆಂದು ತೋರಿಸಲು ಪ್ರಯತ್ನಿಸಿದರೂ, ಮರಣೋತ್ತರ ಪರೀಕ್ಷೆ ಮತ್ತು ತಾಂತ್ರಿಕ ಸಾಕ್ಷ್ಯಗಳಿಂದ ಸತ್ಯ ಬಹಿರಂಗವಾಗಿದೆ. ಯುವತಿಯ ಭಾವಿ ಪತಿ ನೀಡಿದ ದೂರಿನ ಮೇರೆಗೆ ಇಬ್ಬರನ್ನೂ ಬಂಧಿಸಿ, ಕೊಲೆ ಪ್ರಕರಣ ದಾಖಲಿಸಲಾಗಿದೆ.

ಉದ್ಯಮಿ ಸಿಜೆ ರಾಯ್ ಅಸಹಜ ಸಾವು; ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯ್ ವಿಜಯನ್ ಆಗ್ರಹ

ಉದ್ಯಮಿ ಸಿಜೆ ರಾಯ್ ಸಾವಿನ ತನಿಖೆಗೆ ಕೇರಳ ಸಿಎಂ ಆಗ್ರಹ

ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ದೇಶದ ತೆರಿಗೆ ಆಡಳಿತಕ್ಕೆ ಒಂದು ಕಪ್ಪು ಚುಕ್ಕೆ. ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಸಮುದಾಯಗಳ ನಡುವೆ ಕೋಮು ಘರ್ಷಣೆ; ಮನೆಗಳು, ವಾಹನಗಳಿಗೆ ಬೆಂಕಿ, ಮೂವರ ಬಂಧನ

ಹತ್ಖೋಜ್‌ನಲ್ಲಿ ಸಾಮುದಾಯಿಕ ಘರ್ಷಣೆ, ಮೂವರು ಬಂಧನ

ಗರಿಯಾಬಂದ್ ಜಿಲ್ಲೆಯ ಹತ್ಖೋಜ್ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವಿನ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ, ಮನೆಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರು ಭಾರೀ ಬಂದೋಬಸ್ತ್ ಮಾಡಿ, ಹಳೆಯ ಪ್ರಕರಣಗಳಿಗೆ ಸಂಬಂಧಪಟ್ಟ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

36 ಗಂಟೆಗಳಲ್ಲಿ 8 ಹೆಣ್ಮಕ್ಕಳು ಸೇರಿ 12 ಅಪ್ರಾಪ್ತ ಮಕ್ಕಳು ನಾಪತ್ತೆ; ಮುಂಬೈಯಲ್ಲಿ ಹೈ ಅಲರ್ಟ್

36 ಗಂಟೆಗಳಲ್ಲಿ 8 ಹೆಣ್ಮಕ್ಕಳು ಸೇರಿ 12 ಅಪ್ರಾಪ್ತ ಮಕ್ಕಳು ನಾಪತ್ತೆ

Missing children: ಮುಂಬೈನಲ್ಲಿ ಕೇವಲ 36 ಗಂಟೆಗಳ ಅವಧಿಯಲ್ಲಿ 8 ಹೆಣ್ಮಕ್ಕಳು ಸೇರಿ ಒಟ್ಟು 12 ಅಪ್ರಾಪ್ತ ಮಕ್ಕಳು ನಾಪತ್ತೆಯಾಗಿರುವ ಘಟನೆ ಭಾರಿ ಆತಂಕಕ್ಕೆ ಕಾರಣವಾಗಿದೆ. ಪ್ರಕರಣದ ಗಂಭೀರತೆಯನ್ನು ಗಮನಿಸಿದ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಮಕ್ಕಳ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದೆ. ನಗರದ ಬೀದಿಗಳು, ಕೊಳೆಗೇರಿಗಳು, ರೈಲ್ವೆ ನಿಲ್ದಾಣಗಳು ಮತ್ತು ಬಸ್ ಡಿಪೋಗಳಲ್ಲಿ ಕಾಣೆಯಾದ ಮಕ್ಕಳ ಹುಡುಕಾಟ ತೀವ್ರಗೊಂಡಿದೆ.

ಹಸುವಿನ ಮೇಲೆ ಅತ್ಯಾಚಾರವೆಸಗಿದ ಮುಸ್ಲಿಂ ವ್ಯಕ್ತಿ! ಹಿಂದೂಗಳಿಂದ ಭಾರಿ ಆಕ್ರೋಶ

ಹಸುವಿನ ಮೇಲೆ ಅತ್ಯಾಚಾರವೆಸಗಿದ ಮುಸ್ಲಿಂ ವ್ಯಕ್ತಿ

ಹಸುವಿನ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದೆ. ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಅಂಗಡಿಗಳು ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

Assault Case: ಉಡುಪಿಯಲ್ಲಿ ಕಾಂಗ್ರೆಸ್‌ ಯುವ ಮುಖಂಡನ ಮೇಲೆ ಮಾರಕ ದಾಳಿ

ಉಡುಪಿಯಲ್ಲಿ ಕಾಂಗ್ರೆಸ್‌ ಯುವ ಮುಖಂಡನ ಮೇಲೆ ಮಾರಕ ದಾಳಿ

ಮಣಿಪಾಲದ ಹೋಟೆಲ್‌ ಒಂದರಲ್ಲಿ ಊಟಕ್ಕೆ ತೆರಳಿದ್ದ ವೇಳೆ ಹೋಟೆಲ್‌ನಲ್ಲಿ ಶರತ್ ಕುಂದರ್ ಅವರ ಕೈ ಆರೋಪಿಗಳ ಪೈಕಿ ಒಬ್ಬರ ಕೈಗೆ ತಾಗಿದ ಹಿನ್ನೆಲೆಯಲ್ಲಿ ಮಾತಿನ ವಾಗ್ವಾದ ನಡೆದಿತ್ತು. ಬಳಿಕ ಹೋಟೆಲ್‌ನಲ್ಲಿ ನಡೆದ ಗಲಾಟೆಯ ಬಗ್ಗೆ ಮಾತನಾಡಲು ಪಿಪಿಸಿ ಕ್ರಾಸ್ ಬಳಿ ಬರುವಂತೆ ಕರೆಸಿ ಹಲ್ಲೆ ನಡೆಸಿದ್ದಾರೆ. ಜೀವ ಬೆದರಿಕೆ ಹಾಕಲಾಗಿದೆ.

Chamarajanagara: ಮದುವೆ ಮುಹೂರ್ತಕ್ಕೆ ಬರುತ್ತಿದ್ದ ವರನಿಗೇ ಮಹೂರ್ತ ಇಟ್ಟಳಾ ಭಾವಿ ವಧು!

ಮದುವೆ ಮುಹೂರ್ತಕ್ಕೆ ಬರುತ್ತಿದ್ದ ವರನಿಗೇ ಮಹೂರ್ತ ಇಟ್ಟಳಾ ಭಾವಿ ವಧು!

ಚಾಕು ಚುಚ್ಚಿದ ವಧುವಿನ ಮಾಜಿ ಲವರ್ ಅನ್ನು ಪೊಲೀಸರು ಬಂಧಿಸಿ ಸರಿಯಾಗಿ ವಿಚಾರಣೆ ಮಾಡಿದ್ದಾರೆ. ಆಗ ಆರೋಪಿಗಳಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮದುವೆಯಾಗಲಿದ್ದ ವಧುವೇ ಭಾವಿ ಪತಿಗೆ ಮುಹೂರ್ತ ಫಿಕ್ಸ್​ ಮಾಡಿರೋದು ಬಯಲಾಗಿದೆ. ಚಾಕು ಇರಿತ ಪ್ರಕರಣದಲ್ಲಿ ವಧು ನಯನ ಕೈವಾಡ ಬಹಿರಂಗವಾಗಿದೆ. ವಧು ನಯನ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Murder Case: ಪಾರ್ಕಿಂಗ್‌ ವಿಚಾರ ಕೊಲೆಯಲ್ಲಿ ಅಂತ್ಯ, ಆಟೋ ನಿಲ್ಲಿಸುವ ಕುರಿತ ತಗಾದೆ ಸ್ನೇಹಿತನ ಜೀವ ತೆಗೆಯಿತು

ಆಟೋ ಪಾರ್ಕಿಂಗ್ ಕುರಿತ ತಗಾದೆ ಸ್ನೇಹಿತನ ಜೀವ ತೆಗೆಯಿತು

2 ದಿನದ ಹಿಂದೆ ಮನೆ ಬಳಿ ಆಟೊ ನಿಲ್ಲಿಸುವ ವಿಚಾರಕ್ಕೆ ಮೂವರ ನಡುವೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ಬೈಕ್‍ನಲ್ಲಿ ಬರುತ್ತಿದ್ದ ವೇಲು ಮತ್ತು ಗುಣನನ್ನು ವಿನೋದ್ ಅಡ್ಡಗಟ್ಟಿದ್ದ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರಿಗೂ ಚಾಕು ಇರಿದಿದ್ದ. ಗುಣ ಸಾವನ್ನಪ್ಪಿದ್ದು, ಗಾಯಗೊಂಡ ವೇಲುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Loading...