ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್ ವೇಳೆ ದುರಂತ; ಓಡುತ್ತಿದ್ದಾಗಲೇ ಕುಸಿದು ಬಿದ್ದು ಕ್ರೀಡಾಪಟು ಸಾವು

ನಂದಿ ಹಿಲ್ಸ್ ಮ್ಯಾರಥಾನ್‌ನಲ್ಲಿ ಓಡುತ್ತಿದ್ದಾಗಲೇ ಕ್ರೀಡಾಪಟು ಸಾವು

ಭಾನುವಾರ ನಡೆದ ನಂದಿ ಹಿಲ್ಸ್ ಮಾನ್ಸೂನ್ ಮ್ಯಾರಥಾನ್‌ನಲ್ಲಿ ಸುಮಾರು 4,500 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಪೈಕಿ ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಖಾಸಗಿ ಕಂಪನಿಯೊಂದರ ಉದ್ಯೋಗಿ ಕೂಡ 21 ಕಿ.ಮೀ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದರು. ಅರ್ಧ ಭಾಗದಷ್ಟು ಓಟವನ್ನು ಪೂರ್ಣಗೊಳಿಸಿದ್ದ ವೇಳೆ ವ್ಯಕ್ತಿ ಏಕಾಏಕಿ ಕುಸಿದು ಬಿದ್ದು, ಮೃತಪಟ್ಟಿದ್ದಾರೆ.

Raichur News: ಭಾರತದಲ್ಲಿ ಗಲಭೆಗೆ ಸಂಚು; ವಿದೇಶಿಗನ ಜತೆ ಸಂಪರ್ಕದಲ್ಲಿದ್ದ ರಾಯಚೂರಿನ ಯುವಕ ಅರೆಸ್ಟ್‌

ಭಾರತದಲ್ಲಿ ಗಲಭೆಗೆ ಸಂಚು; ರಾಯಚೂರಿನ ಟೀ ಸ್ಟಾಲ್‌ ಮಾಲೀಕ ಅರೆಸ್ಟ್‌

ಭಾರತದಲ್ಲಿ ಗಲಭೆ ಎಬ್ಬಿಸುವ ಸಂಚು ರೂಪಿಸಿದ ಆರೋಪದಲ್ಲಿ ರಾಯಚೂರಿನ ಟೀ ಸ್ಟಾಲ್‌ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವ್ಯಕ್ತಿಯ ಪ್ರಚೋದನೆಯ ಮೇರೆಗೆ ರಾಯಚೂರಿನ ಯುವಕ ದುಷ್ಕೃತ್ಯಕ್ಕೆ ಸಿದ್ಧತೆ ನಡೆಸಿದ್ದನಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tumkur News: ಲೋ ಬಿಪಿಯಿಂದ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು!

ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು

Pavagada News: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನ ಶೌಚಾಲಯದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಸ್ಥಳಕ್ಕೆ ಪಾವಗಡ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಪ್ರಿಯಕರನನ್ನು ಭೇಟಿಯಾಗಲು ಜೈಲಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಪತ್ತೆಯಾಯ್ತು ಜೀವಂತ ಗುಂಡುಗಳು!

ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಪತ್ತೆಯಾಯ್ತು ಜೀವಂತ ಗುಂಡುಗಳು!

Crime News: ಪ್ರಿಯಕರನನ್ನು ಭೇಟಿಯಾಗಲು ಜೈಲಿಗೆ ಹೋಗಿದ್ದ ಅಪ್ರಾಪ್ತ ಬಾಲಕಿಯ ಬಳಿ 10 ಜೀವಂತ ಬುಲೆಟ್ ಕಾರ್ಟ್ರಿಡ್ಜ್‌ಗಳು ಪತ್ತೆಯಾಗಿವೆ. ಬಳಿಕ ಜೈಲು ಹೊರಠಾಣೆಯ ಉಸ್ತುವಾರಿಯನ್ನು ಸ್ಥಳಕ್ಕೆ ಕರೆಸಲಾಯಿತು. ವಶಪಡಿಸಿಕೊಂಡ ವಸ್ತುಗಳೊಂದಿಗೆ ಆ ಇಬ್ಬರು ವ್ಯಕ್ತಿಗಳನ್ನು ಅವರ ವಶಕ್ಕೆ ಒಪ್ಪಿಸಲಾಯಿತು.

ಡೇಟಿಂಗ್ ಅಪ್ಲಿಕೇಶನ್‌, ಖಾಸಗಿ ಕ್ಷಣದ ಫೋಟೊ, ವಿಡಿಯೊ: ಬರೋಬ್ಬರಿ 6 ಕೋಟಿ ರುಪಾಯಿ ದೋಚಿದ ಖತರ್ನಾಕ್‌ ಲೇಡಿಯ ಕಳ್ಳಾಟ ಬಯಲಾಗಿದ್ದು ಹೇಗೆ?

ಮಹಿಳೆ ಬರೋಬ್ಬರಿ 6 ಕೋಟಿ ರುಪಾಯಿ ವಂಚಿಸಿದ್ದು ಹೇಗೆ?

Dating app fraud: ಉತ್ತರ ಪ್ರದೇಶದ ಮಹಿಳೆಯೊಬ್ಬಳು ಟಿಂಡರ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸಿಕೊಂಡು, ಬಳಿಕ ಅವರ ಖಾಸಗಿ ಫೋಟೊ ಮತ್ತು ವಿಡಿಯೊ ಬಳಸಿ ಬ್ಲ್ಯಾಕ್‌ಮೇಲ್ ಮಾಡಿ, ದೊಡ್ಡ ಮೊತ್ತದ ಹಣಕ್ಕೆ ಬೇಡಿಕೆ ಇಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ.

Honey Trap: ಮಹಿಳೆಯ ಆಮಿಷಕ್ಕೆ ಒಳಗಾಗಿ ಪಾಕಿಸ್ತಾನಕ್ಕೆ ರಕ್ಷಣಾ ರಹಸ್ಯ ಸೋರಿಕೆ ಮಾಡಿದ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅರೆಸ್ಟ್‌

ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಹನಿ ಟ್ರ್ಯಾಪ್‌ಗೆ ಬಲಿ

ಪಾಕಿಸ್ತಾನಕ್ಕೆ ಭಾರತದ ವಾಯುಪಡೆಯ ರಕ್ಷಣಾ ರಹಸ್ಯಗಳನ್ನು ನೀಡಿರುವ ಆರೋಪದಲ್ಲಿ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅನ್ನು ಬಂಧಿಸಲಾಗಿದೆ. ಹನಿ ಟ್ರ್ಯಾಪ್‌ಗೆ ಬಲಿಯಾದ ಸೇವೆಯಲ್ಲಿದ್ದ ಅಧಿಕಾರಿ ಆರೋಪಿಯನ್ನು ಕಳೆದ ಮೇ 30ರಂದು ಬಂಧಿಸಲಾಗಿದ್ದು, ಇದೀಗ ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Chikkamagaluru Car Accident: ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರು ಭೀಕರ ಅಪಘಾತ; ಮೂವರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ

ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರು ಭೀಕರ ಅಪಘಾತ; ಮೂವರ ದುರ್ಮರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಶುಕ್ರವಾರ ರಾತ್ರಿ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಮೃತರು ತುಮಕೂರಿನ ಮೂಲದವರು ಎಂದು ತಿಳಿದು ಬಂದಿದೆ.

ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಲೆ; ಭಾರತೀಯ ಯೋಧನ ಬಂಧನ

ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಯೋಧನ ಬಂಧನ

Crime News: ಯೋಧನೊಬ್ಬ ತನ್ನ 7 ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ನಡೆದಿದೆ. ದಂಪತಿಗಳ ನಡುವೆ ಜಗಳ ನಡೆದಿದ್ದು, ಆ ಸಮಯದಲ್ಲಿ ಯೋಧ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ: ಉಡುಪಿ ಉದ್ಯಮಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನ ಕಾಲಿಗೆ ಗುಂಡು, ಬಂಧನ

ಮುದರಂಗಡಿ ಶೂಟೌಟ್ ಪ್ರಕರಣ: ಆರೋಪಿಯೊಬ್ಬನ ಬಂಧನ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿಯೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗಳಲ್ಲಿ ಓರ್ವನನ್ನು ಕಾಪು ಮತ್ತು ಕಾರ್ಕಳ ಗ್ರಾಮಾಂತರ ಪೊಲೀಸ್ ತಂಡವು ಬಂಧಿಸಿದೆ. ಈ ಕಾರ್ಯಾಚರಣೆ ವೇಳೆ ಪಿಎಸ್ಐ ಅವರಿಗೂ ಗುಂಡೇಟು ತಗಲಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪ್ಪ-ಅಮ್ಮ ಕ್ಷಮಿಸಿ, ನಾನು ಮಾಡುತ್ತಿರೋದು ಸರಿಯಲ್ಲ; ಡೆತ್‌ನೋಟ್‌ ಬರೆದಿಟ್ಟು ಬೆಂಗಳೂರಿನ ಹಾಸ್ಟೆಲ್‌ನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಐಐಎಸ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

Bengaluru Student Death: ಚಿಕ್ಕಬಳ್ಳಾಪುರ ಮೂಲದ ವಿದ್ಯಾರ್ಥಿಯೊಬ್ಬ ಬೆಂಗಳೂರಿನ ಹಾಸ್ಟೆಲ್‌ನಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಐಐಎಸ್‌ಸಿಯಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ. ಪೊಲೀಸರು ಸ್ಥಳಕ್ಕೆ ತೆರಳಿ ಕೇಸ್‌ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ.

ರೀಲ್ಸ್‌ ಗೀಳಿಗೆ ಪತ್ನಿಯನ್ನೇ ಕೊಂದ; ಬೆಂಗಳೂರಿನಿಂದ  ಬಿಹಾರಕ್ಕೆ ಓಡಿ ಹೋಗಿದ್ದ ಪತಿ ಬಂಧನ

ಪತ್ನಿಯನ್ನು ಕೊಂದು ಬಿಹಾರಕ್ಕೆ ಓಡಿ ಹೋಗಿದ್ದ ಪತಿ ಬಂಧನ

Crime News: ಪತ್ನಿಯನ್ನು ಕೊಂದು ತನ್ನ ತವರು ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪದ ಮೇಲೆ 24 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣ ಬೆಳಕಿಗೆ ಬಂದ ಕೂಡಲೇ ಬೆಂಗಳೂರು ಪೊಲೀಸರು ಬಿಹಾರಕ್ಕೆ ತೆರಳಿ ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ನಂತರ ವಿಚಾರಣೆಗಾಗಿ ಕುಂಬಳಗೋಡಿಗೆ ಕರೆತಂದರು.

ಕುಶಾಲನಗರದಲ್ಲಿ ಘೋರ ಘಟನೆ; ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

ಆಟವಾಡುವಾಗ ಶಾಲೆಯ ಗೇಟ್ ಬಿದ್ದು 4 ವರ್ಷದ ಮಗು ಸಾವು

Kushalnagar News: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಬಸವನಹಳ್ಳಿ ಹಾಡಿಯಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ವೇಳೆ ಶಾಲೆಯ ಗೇಟ್ ಏಕಾಏಕಿ ಕುಸಿದು ಬಿದ್ದು ಮಗು ಗಂಭೀರವಾಗಿ ಗಾಯಗೊಂಡಿತ್ತು. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.

ಶಾಲೆಯಲ್ಲಿ ಗುಂಡಿನ ದಾಳಿ: ಹದಿಹರೆಯದ ಬಾಲಕನಿಂದ ಫೈರಿಂಗ್, ಐವರು ಸಾವು

ಶಾಲೆಯಲ್ಲಿ ಗುಂಡಿನ ದಾಳಿ: ಐವರು ಸಾವು

Thailand School Shooting: ಥೈಲ್ಯಾಂಡ್‌ನ ಶಾಲೆಯೊಂದರಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಶಂಕಿತ ಹದಿಹರೆಯದ ಬಂದೂಕುಧಾರಿಯೊಬ್ಬ ತನ್ನ ಅಜ್ಜ-ಅಜ್ಜಿಯರ ಮೇಲೆ ಗುಂಡು ಹಾರಿಸಿದ್ದು, ಒಟ್ಟು ಐದು ಜನರನ್ನು ಹತ್ಯೆ ಮಾಡಿದ್ದಾನೆ. ಬ್ಯಾಂಗ್ ಕ್ರುವಾಯಿ ಜಿಲ್ಲೆಯ ಡೆಬ್‌ಸಿರಿನ್ ನೊಂಥಬುರಿ ಶಾಲೆಯಲ್ಲಿ ಈ ದಾಳಿ ನಡೆದಿದೆ.

Udupi shootout case: ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡ, ಗ್ರಾಪಂ ಮಾಜಿ ಅಧ್ಯಕ್ಷನ ಕೊಲೆ!

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಕೊಲೆ!

Udupi News: ಉಡುಪಿ ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿರು ಶುಕ್ರವಾರ ಮಧಾಹ್ನ ಶೂಟೌಟ್ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಕಾಂಗ್ರೆಸ್‌ ಮುಖಂಡನ ನೇಲೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಉದ್ಯಮಿ, ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು: ಪಾಟ್ನಾದಲ್ಲಿ ಭುಗಿಲೆದ್ದ ಹಿಂಸಾಚಾರ, ಹೊತ್ತಿ ಉರಿದ ವಾಹನಗಳು

ಪಾಟ್ನಾದಲ್ಲಿ ಹಿಂಸಾಚಾರ; ಪೊಲೀಸ್ ಜೀಪ್ ಗಳಿಗೆ ಬೆಂಕಿ

ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದರಿಂದ ಪಾಟ್ನಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಉದ್ರಿಕ್ತ ಜನ ಸಮೂಹ ಮೂರು ಪೊಲೀಸ್ ಜೀಪ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಹಲವೆಡೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Bengaluru News: ಸಲಿಂಗ ಪ್ರೀತಿಗೆ ಮನೆಯವರ ವಿರೋಧ; ಮನನೊಂದು ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರು!

ಸಲಿಂಗ ಪ್ರೀತಿ; ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಯುವತಿಯರು!

ನೇಪಾಳ ಮೂಲದ ಇಬ್ಬರು ಯುವತಿಯರು ಬೆಂಗಳೂರಿನ ಯಲಹಂಕದ ಶಿವನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಅಪಾರ್ಟ್‌ಮೆಂಟ್‌ಗಳಲ್ಲಿ ಮನೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇವರ ಸಾವಿನ ಬಗ್ಗೆ ಯಲಹಂಕ ಓಲ್ಡ್ ಟೌನ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗುಂಡಿನ ಸದ್ದಿಗೆ ಬೆದರಿದ ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಮನಬಂದಂತೆ ಏರ್ ಗನ್‌ನಿಂದ ಶೂಟೌಟ್ ಮಾಡಿದ ಟೆಕ್ಕಿ

ಗುಂಡಿನ ಸದ್ದಿಗೆ ಬೆದರಿದ ಸಿಲಿಕಾನ್ ಸಿಟಿ ಬೆಂಗಳೂರು

Techie Opens Fire: ಬೆಂಗಳೂರಿನ ಅಪಾರ್ಟ್‌ಮೆಂಟ್ ಒಳಗೆ ಭದ್ರತಾ ಸಿಬ್ಬಂದಿ ಮತ್ತು ವಾಹನಗಳ ಮೇಲೆ ಏರ್ ಗನ್‌ನಿಂದ ಗುಂಡು ಹಾರಿಸಿದ ಆರೋಪದ ಮೇಲೆ 40 ವರ್ಷದ ಐಟಿ ಉದ್ಯೋಗಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ವೇಳೆ ಅನುರಾಗ್ ತಿವಾರಿ ಕುಡಿದ ಅಮಲಿನಲ್ಲಿದ್ದ. ನಂತರ ಬಾಲ್ಕನಿಗೆ ಹೋಗಿ ಏರ್ ಗನ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಲೈಂಗಿಕ ದೌರ್ಜನ್ಯ ಪ್ರಕರಣ: ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಜೈಲು ಶಿಕ್ಷೆ

ತರುಣ್ ತೇಜ್‌ಪಾಲ್‌ಗೆ 10 ವರ್ಷಗಳ ಜೈಲು ಶಿಕ್ಷೆ

ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಬಾಂಬೆ ಹೈಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. 2013ರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಗುರುವಾರ ಅವರನ್ನು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.

ಹದಿಹರೆಯದ ಬಾಲಕಿಯನ್ನು ಅಪಹರಿಸಿ, ಸ್ನೇಹಿತನಿಂದಲೇ ಅತ್ಯಾಚಾರ: ಪ್ರಕರಣ ಬೇಧಿಸಲು ಪೊಲೀಸರಿಗೆ ಸಹಾಯ ಮಾಡಿದ್ದು ಫುಡ್ ಡೆಲಿವರಿ ಆರ್ಡರ್

ಹದಿಹರೆಯದ ಬಾಲಕಿಯನ್ನು ಅಪಹರಿಸಿ, ಸ್ನೇಹಿತನಿಂದಲೇ ಅತ್ಯಾಚಾರ

Crime News: ಹದಿಹರೆಯದ ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತನೇ ಅಪಹರಿಸಿ, ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 16 ವರ್ಷದ ಬಾಲಕಿ ಇನ್‌ಸ್ಟಾಗ್ರಾಮ್, ಸ್ನ್ಯಾಪ್‌ಚಾಟ್ ಮತ್ತು ಕೆಲವು ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

2013ರ ಲೈಂಗಿಕ ದೌರ್ಜನ್ಯ ಪ್ರಕರಣ: ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ ಅಪರಾಧಿ ಎಂದು ಘೋಷಿಸಿದ ಬಾಂಬೆ ಹೈಕೋರ್ಟ್‌

ಲೈಂಗಿಕ ದೌರ್ಜನ್ಯ: ತೆಹಲ್ಕಾ ಮಾಜಿ ಸಂಪಾದಕ ದೋಷಿ ಎಂದು ಘೋಷಣೆ

ಕಿರಿಯ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದಲ್ಲಿ ಬಂಧಿಸಲಾಗಿದ್ದ ತೆಹಲ್ಕಾದ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ ನನ್ನು ಬಾಂಬೆ ಹೈಕೋರ್ಟ್ ದೋಷಿ ಎಂದು ಘೋಷಿಸಿದೆ. 2013ರಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ತರುಣ್ ತೇಜ್‌ಪಾಲ್ ನನ್ನು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.

ಮಾನಸಿಕ ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ 10 ದಿನ ಕಂಬಕ್ಕೆ ಕಟ್ಟಿ ಹಾಕಿದ ಸ್ವಯಂ ಘೋಷಿತ ದೇವಮಾನವ: ಮೂಢನಂಬಿಕೆಗೆ ಬಲಿಯಾಯ್ತು ಜೀವ

ಚಿಕಿತ್ಸೆ ನೆಪದಲ್ಲಿ 10 ದಿನ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿದ ದೇವಮಾನವ

Woman Dies after Mental Illness Treatment: ಸ್ವಯಂ ಘೋಷಿತ ದೇವ ಮಾನವನೊಬ್ಬ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ನೀಡಿದ ಪರಿಣಾಮ 33 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಮತ್ತು ತನಿಖಾ ವರದಿಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Bengaluru Accident: ನೆಲಮಂಗಲ ಬಳಿ ಮಹೀಂದ್ರಾ ಥಾರ್ ಪಲ್ಟಿಯಾಗಿ ಇಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ

ನೆಲಮಂಗಲ ಬಳಿ ಮಹೀಂದ್ರಾ ಥಾರ್ ಪಲ್ಟಿಯಾಗಿ ಇಬ್ಬರ ದುರ್ಮರಣ

Bengaluru Accident: ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಭೀಕರ ಅಪಘಾತ ನಡೆದಿದೆ. ಸ್ನೇಹಿತನ ಹುಟ್ಟುಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಥಾರ್‌ ಜೀಪ್‌ ಗದ್ದೆಗೆ ಬಿದ್ದು, ದುರಂತ ಸಂಭವಿಸಿದೆ.

ಶಾಲಾ ಬಾಲಕಿಯ ಅಪಹರಿಸಿ, ಅತ್ಯಾಚಾರ ಆರೋಪ: ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿದ ಗ್ರಾಮಸ್ಥರು

ಅತ್ಯಾಚಾರ ಆರೋಪಿಯನ್ನು ಥಳಿಸಿ ಹತ್ಯೆ ಮಾಡಿದ ಗ್ರಾಮಸ್ಥರು

Crime News: ಬಾಲಕಿಯ ಅತ್ಯಾಚಾರ ಆರೋಪಿಯನ್ನು ಉದ್ರಿಕ್ತ ಗುಂಪು ಥಳಿಸಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಎಮ್ರೋಜ್‌ನನ್ನು ಜನಸಂದಣಿಯಿಂದ ರಕ್ಷಿಸಿದ ಪೊಲೀಸರು, ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

Yadgir Breaking: ಯಾದಗಿರಿ: ಬಾಡಿಯಾಳ–ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ

ಕೈಗಾರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಅದರ ಪರಿಣಾಮ ಐವರು ಕಾರ್ಮಿಕರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

Loading...