ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬೆಕ್ಕು ಸಾಕಲು ನಿರಾಕರಿಸಿದ ಮನೆಯವರು: ಹೈದರಾಬಾದ್‌ನಲ್ಲಿ ಯುವತಿ ಆತ್ಮಹತ್ಯೆ

ಬೆಕ್ಕು ಸಾಕುವ ವಿಚಾರಕ್ಕೆ ಯುವ ವೈದ್ಯೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೈದರಾಬಾದ್‌ನ ಅಲ್ವಾಲ್‌ನಲ್ಲಿ ಈ ಘಟನೆ ಕಂಡು ಬಂದಿದ್ದು ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. 23 ವರ್ಷದ ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠಾ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಕ್ಕಿನ ವಿಚಾರಕ್ಕೆ ಜಗಳ: ಯುವ ವೈದ್ಯೆ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯೆ ಶ್ರೇಷ್ಠಾ (ಸಂಗ್ರಹ ಚಿತ್ರ) -

Profile
Pushpa Kumari Mar 22, 2026 3:03 PM

ಹೈದರಾಬಾದ್, ಮಾ. 22: ಇಂದು ಕ್ಷುಲ್ಲಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಬೆಕ್ಕು ಸಾಕುವ ವಿಚಾರಕ್ಕೆ ಯುವ ವೈದ್ಯೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೆಲಂಗಾಣದ ಹೈದರಾಬಾದ್‌ನ ಅಲ್ವಾಲ್‌ನಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ಘಟನೆ ತಿಳಿದು ದೇಶವೇ ಬೆಚ್ಚಿಬಿದ್ದಿದೆ.

23 ವರ್ಷದ ವೈದ್ಯೆಯೊಬ್ಬಳು ಮನೆಯವರು ಬೆಕ್ಕನ್ನು ದತ್ತು ಪಡೆಯಲು ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಕುಟುಂಬ ಸದಸ್ಯರೊಂದಿಗೆ ಜಗಳವಾಡಿದ್ದಳು. ಯುವತಿ ತನ್ನ ತಾಯಿ ಮತ್ತು ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು. ಕೆಲವು ವಾರಗಳ ಹಿಂದೆ ಯುವತಿ ಬೆಕ್ಕನ್ನು ಮನೆಗೆ ಕರೆತಂದಿದ್ದು, ಮನೆಯವರು ನಿರಂತರ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದರು. ನಂತರ ಅವರ ಕುಟುಂಬವು ಬೆಕ್ಕನ್ನು ದತ್ತು ತೆಗೆದುಕೊಳ್ಳುವುದನ್ನು ವಿರೋಧಿಸಿದ್ದು ಇದು ಅವರ ನಡುವೆ ಆಗಾಗ್ಗೆ ಜಗಳಗಳಿಗೆ ಕಾರಣವಾಗಿತ್ತು.

ರಷ್ಯಾಕ್ಕೆ ಬರುವವರೇ ಎಚ್ಚರ; ಉಕ್ರೇನ್‌ ವಶದಲ್ಲಿರುವ ಭಾರತೀಯ ಬಿಚ್ಚಿಟ್ಟ ಕರಾಳತೆ ಏನು?

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಟಿ ಪ್ರಿನ್ಸಿ ಅಲಿಯಾಸ್ ಶ್ರೇಷ್ಠಾ ಎಂದು ಗುರುತಿಸಲಾಗಿದೆ. ಆಕೆ ಒಂಟಿಯಾಗಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ (ಮಾರ್ಚ್‌ 20) ಸಂಜೆ, ಶ್ರೇಷ್ಠಾ ತಾಯಿ ಮತ್ತು ಅಜ್ಜಿ ಯಾವುದೋ ಕೆಲಸದ ನಿಮಿತ್ತ ಹೊರಗೆ ತೆರಳಿದ್ದರು.‌ ಅವರು ಹಿಂತಿರುಗಿದಾಗ, ಶ್ರೇಷ್ಠಾ ತನ್ನ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಳು.

ಕುಟುಂಬ ಸದಸ್ಯರು ನೆರೆಹೊರೆಯವರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ತಿಳಿಸಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಗಿಸಿದ್ದಾರೆ. ಪ್ರಾಥಮಿಕ ತನಿಖೆಯು ಕೌಟುಂಬಿಕ ಭಿನ್ನಾಭಿಪ್ರಾಯವನ್ನು ಸೂಚಿಸುತ್ತಿದ್ದರೂ, ಪೊಲೀಸರು ಎಲ್ಲ ರೀತಿಯಲ್ಲಿ ಪರಿಶೀಲಿಸುತ್ತಿದ್ದಾರೆ.

ಶ್ರೇಷ್ಠಾ ಇತ್ತೀಚೆಗೆ ತನ್ನ ವೈದ್ಯಕೀಯ ಪದವಿಯನ್ನು ಪೂರ್ಣಗೊಳಿಸಿದ್ದು ಸ್ನಾತಕೋತ್ತರ ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಳು. ಅವಳು ತನ್ನ ವೈದ್ಯಕೀಯ ಪರವಾನಗಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿದ್ದಳು ಎಂದು ತಿಳಿದು ಬಂದಿದೆ.