ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Abdul Rahiman murder case: ಅಬ್ದುಲ್‌ ರಹಿಮಾನ್‌ ಹತ್ಯೆ: ಫೋನ್‌ ಮಾಡಿ ಕರೆಸಿ ಕತ್ತಿಯಿಂದ ಕೊಚ್ಚಿದರು!

Abdul Rahiman murder case‌: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಬಂಧಿಸಲಾದ ಕೊಲೆಯ ಆರೋಪಿಗಳ ಕುರಿತು ಮಾಹಿತಿ ನೀಡಿದ್ದಾರೆ. ಮರಳು ತರುವಂತೆ ಅಬ್ದುಲ್‌ ರಹಿಮಾನ್‌ಗೆ ಆರೋಪಿಗಳೇ ಫೋನ್‌ ಮಾಡಿ ಕರೆಸಿ, ಹಾಗೆ ಬಂದಾಾಗ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು ಎಂದು ಎಸ್‌ಪಿ ತಿಳಿಸಿದ್ದಾರೆ.

ಅಬ್ದುಲ್‌ ರಹಿಮಾನ್‌ ಹತ್ಯೆ: ಫೋನ್‌ ಮಾಡಿ ಕರೆಸಿ ಕತ್ತಿಯಿಂದ ಕೊಚ್ಚಿದರು!

ಮೃತ ಅಬ್ದುಲ್‌ ರಹಿಮಾನ್

ಹರೀಶ್‌ ಕೇರ ಹರೀಶ್‌ ಕೇರ May 29, 2025 8:29 PM

ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದಲ್ಲಿ (Bantwal) ಅಬ್ದುಲ್‌ ರಹಿಮಾನ್‌ (Abdul Rahiman murder case) ಬರ್ಬರ ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿ ಖಚಿತಪಡಿಸಿದ್ದಾರೆ. ಮರಳು ತರುವಂತೆ ಅಬ್ದುಲ್‌ ರಹಿಮಾನ್‌ಗೆ ಆರೋಪಿಗಳೇ ಫೋನ್‌ ಮಾಡಿ ಕರೆಸಿ, ಹಾಗೆ ಬಂದಾಾಗ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು ಎಂದು ಎಸ್‌ಪಿ ತಿಳಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿಯಲ್ಲಿ ಆರೋಪಿಗಳ ಬಂಧನವಾಗಿದೆ. ಬಂಟ್ವಾಳದ ದೀಪಕ್‌ (21), ಪೃಥ್ವಿರಾಜ್ (21), ಚಿಂತನ್ (19) ಬಂಧಿತ ಪ್ರಮುಖ ಆರೋಪಿಗಳು. ಬಂಧಿತರಾಗಿರುವ ಮೂವರು ಈ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಬೈಕಿನಲ್ಲಿ ಬಂದು ಅಬ್ದುಲ್ ರಹಿಮಾನ್ ಮೇಲೆ ಹಲ್ಲೆ ಮಾಡಿದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಆರೋಪಿಗಳ ಪತ್ತೆಗಾಗಿ ಅವರ ನೇತೃತ್ವದಲ್ಲಿ ಐದು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದ್ದು, ಅವರ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಕಟ್ಟಡದ ಕೆಲಸಕ್ಕೆ ತುರ್ತಾಗಿ ಒಂದು ಲೋಡ್ ಮರಳು ತರುವಂತೆ ಅಬ್ದುಲ್ ರಹಿಮಾನ್‌ಗೆ ದೀಪಕ್ ಕರೆ ಮಾಡಿದ್ದ. ಮರಳನ್ನು ಪಿಕಪ್ ವಾಹನದಲ್ಲಿ ತಂದು ಇಳಿಸುವಾಗ ಅಬ್ದುಲ್ ರಹಿಮಾನ್ ಮೇಲೆ ಹಲ್ಲೆ ನಡೆದಿತ್ತು. ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಕೊಲೆ ಸಂಚಿನಲ್ಲಿ ಬಂಧಿತ ಆರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಬ್ದುಲ್ ರಹಿಮಾನ್ ಕೊಲೆ ಮತ್ತು ಜೊತೆಗಾರ ಕಲಂದರ್ ಶಾಫಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿತ್ತು.

ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣದಲ್ಲಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗಾಯಗೊಂಡಿದ್ದ ಕಲಂದರ್‌ ಶಾಫಿ ಮಾಹಿತಿ ಮೇರೆಗೆ ನಿಸಾರ್‌ ಎಂಬವರ ದೂರಿನಡಿ ಪರಿಚಯಸ್ಥರೇ ಆಗಿರುವ ದೀಪಕ್‌ ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌ ಆಗಿತ್ತು.

ಇದನ್ನೂ ಓದಿ: Abdul Rahiman Murder Case: ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ, 15 ಮಂದಿ ವಿರುದ್ಧ ಪ್ರಕರಣ‌; ಪರಿಚಯದವರೇ ಕೊಲೆಗಾರರು!