"ನೀನು ಕಪ್ಪಗಿದ್ದೀಯಾ, ನಿನ್ನ ಬಣ್ಣವೇ ಸರಿ ಇಲ್ಲ"; ಸಹಪಾಠಿ ಹೇಳಿಕೆಗೆ ಮನನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ
boy dies by self-harming: ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯಲ್ಲಿ ಸಹಪಾಠಿಯೊಂದಿಗೆ ನಡೆದ ಸಣ್ಣ ಜಗಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ನಡೆದಿದೆ. ರಾಹುಲ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಜೊತೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಜೈಪುರ, ಜು.19: ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಶಾಲೆಯಲ್ಲಿ ಸಹಪಾಠಿಯೊಂದಿಗೆ ನಡೆದ ಸಣ್ಣ ಜಗಳದಿಂದ ಆತ್ಮಹತ್ಯೆ (self-harming) ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ (Rajasthan) ಧೋಲ್ಪುರ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ ರಾಹುಲ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತನ್ನ ಶಿಕ್ಷಣವನ್ನು ಮುಂದುವರಿಸಲು ತನ್ನ ಕುಟುಂಬದಿಂದ ದೂರದಲ್ಲಿರುವ ಸಂಬಂಧಿಕರೊಂದಿಗೆ ವಾಸಿಸುತ್ತಿದ್ದ. ಅವನು ಮೂಲತಃ ಮಧ್ಯಪ್ರದೇಶದ ಟಕ್ರೌಲಿ ಗ್ರಾಮದವನು.
ರಾಹುಲ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಜೊತೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮಾಹಿತಿಯ ಪ್ರಕಾರ, ಸಹಪಾಠಿಯು ಚರ್ಮದ ಬಣ್ಣವನ್ನು ಉಲ್ಲೇಖಿಸಿ ಅವಹೇಳನಕಾರಿ ಪದವನ್ನು ಬಳಸಿದ್ದಾಳೆ. ಆ ಮಾತಿನಿಂದ ನೊಂದ ರಾಹುಲ್ ಆ ಸಂಜೆ ಮನೆಗೆ ಹಿಂತಿರುಗಿದ ನಂತರ ನೇಣು ಬಿಗಿದುಕೊಂಡನು. ಮರುದಿನ ಅವನು ತನ್ನ ಕೋಣೆಯಿಂದ ಹೊರಗೆ ಬಾರದಿದ್ದಾಗ, ಮನೆಯಲ್ಲಿದ್ದ ಇತರರು ಆತಂಕಗೊಂಡರು. ಕಿಟಕಿಯ ಮೂಲಕ ನೋಡಿದಾಗ ಆತ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ನಿವಾಸಿಗಳು ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ವಶಕ್ಕೆ ಪಡೆದರು. ಅವರ ಸಂಬಂಧಿಕರು ಬಂದ ನಂತರ, ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಅಂತ್ಯಕ್ರಿಯೆಗಾಗಿ ಹಸ್ತಾಂತರಿಸಿದರು. ಪ್ರಕರಣ ದಾಖಲಿಸಿಕೊಂಡು, ಘಟನೆಯ ಬಗ್ಗೆ ಕೂಲಂಕುಷವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ಅಪಾರ್ಟ್ಮೆಂಟ್ನಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
ಇನ್ಸ್ಟಾಗ್ರಾಂನಲ್ಲಿ ದುಃಖ ತೋಡಿಗೊಂಡು ಆತ್ಮಹತ್ಯೆಗೆ ಶರಣಾದ ಯುವಕ
ಇನ್ಸ್ಟಾಗ್ರಾಮ್ನಲ್ಲಿ ನೋವಿನ ಕಥೆಗಳನ್ನು ಒಂದರ ನಂತರ ಒಂದರಂತೆ ಪೋಸ್ಟ್ ಮಾಡಿದ ನಂತರ, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಕರ್ನಲ್ಗಂಜ್ನಲ್ಲಿ ನಡೆದಿದೆ.
ಎರಡು ದಿನಗಳ ಹಿಂದೆ, ಸ್ಥಳೀಯ ಗೂಂಡಾಗಳು ತಮ್ಮ ಮನೆಗೆ ದಾಳಿ ಮಾಡಿ, ತನ್ನ ಮಗನನ್ನು ಕ್ರೂರವಾಗಿ ಥಳಿಸಿದ್ದಾರೆ. ನೆರೆಹೊರೆಯ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಪಿಸ್ತೂಲ್ ಹಿಡಿದು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಾಯಿ ಆರೋಪಿಸಿದ್ದಾರೆ. ಈ ಭಯವೇ ಮಗನ ಆತ್ಮಹತ್ಯೆಗೆ ಕಾರಣವಾಯಿತು ಎಂದು ಅವರು ದೂರಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣದ ತನಿಖೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಲಕ್ಷ್ಮಿ ಎಂಬ ಮಹಿಳೆ ಮನೆಕೆಲಸಗಳನ್ನು ಮಾಡುವ ಮೂಲಕ ತನ್ನ ಕುಟುಂಬವನ್ನು ಪೋಷಿಸುತ್ತಾರೆ. ಅವರ ಪತಿ ಮುನ್ನಿಲಾಲ್ ಅವರ ಮರಣದ ನಂತರ, ಅವರು ವಿವಾಹಿತ ಮಗಳು ಮೌನಿ ಮತ್ತು 25 ವರ್ಷದ ಮಗ ಸೂರಜ್ ಗೌತಮ್ ಜೊತೆ ವಾಸಿಸುತ್ತಿದ್ದರು. ಶನಿವಾರ (ಜು.18) ರಾತ್ರಿ 10 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಕೋಣೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು ಎಂದು ಲಕ್ಷ್ಮಿ ಹೇಳಿದ್ದಾರೆ. ಅವರ ಮಗ ಸೂರಜ್ಗೆ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನೆರೆಹೊರೆಯವರು ಬಾಗಿಲು ಒಡೆದು ನೋಡಿದಾಗ ಅವರ ಮಗನ ಶವ ನೇತಾಡುತ್ತಿರುವುದು ಕಂಡುಬಂದಿದೆ.