ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cow Slaughter: ಬೆಂಗಳೂರಿನಲ್ಲಿ ಬರ್ಬರ ಕೃತ್ಯ, ಮಚ್ಚಿನಿಂದ ಕೆಚ್ಚಲು ಕೊಯ್ದು ಗೋಹತ್ಯೆ

Cow Slaughter: ಹಸು ಮೇಯಲು ಹೋಗಿದ್ದಾಗ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಹಸುವಿನ ರೋದನ ಕೇಳಿ ಓಡಿಬಂದ ಸ್ಥಳೀಯರು ಕೂಡಲೇ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ತೀವ್ರ ನೋವಿನಿಂದ ನರಳಿದ ಹಸು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

ಬೆಂಗಳೂರಿನಲ್ಲಿ ಬರ್ಬರ ಕೃತ್ಯ, ಮಚ್ಚಿನಿಂದ ಕೆಚ್ಚಲು ಕೊಯ್ದು ಗೋಹತ್ಯೆ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Jun 21, 2025 11:36 AM

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಹಸುವಿನ ಕೆಚ್ಚಲಿಗೆ (udder) ಮಚ್ಚಿನಿಂದ ಹೊಡೆದು ಕತ್ತರಿಸಿ ಅದನ್ನು ಹತ್ಯೆ (cow slaughter) ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರ (Yeshwantpur) ಸಮೀಪದ ಸೂಲಿವಾರದ ಬಳಿ ಮರಿಬಸವಯ್ಯ ಎಂಬುವವರ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು (Bengaluru Crime News) ಪೈಶಾಚಿಕತೆ ಮೆರೆದಿದ್ದಾರೆ. ಬೆಂಗಳೂರಿನಲ್ಲಿ ಇದು ಎರಡನೇ ಬಾರಿಗೆ ಇಂಥ ಬರ್ಬರ ಕೃತ್ಯ ನಡೆಯುತ್ತಿದೆ.

ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಹಸು ಮೇಯಲು ಹೋಗಿದ್ದಾಗ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಹಸುವಿನ ರೋದನ ಕೇಳಿ ಓಡಿಬಂದ ಸ್ಥಳೀಯರು ಕೂಡಲೇ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ತೀವ್ರ ನೋವಿನಿಂದ ನರಳಿದ ಹಸು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಚುನಾವಣೆ ಸಂಬಂಧ ಇಲ್ಲಿನ ಎರಡು ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿತ್ತು, ಈ ಕಾರಣಕ್ಕೆ ದ್ವೇಷದಿಂದ ಹಸುವಿನ ಕೆಚ್ಚಲು ಕತ್ತರಿಸಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಕಠಿಣ ಕ್ರಮ ಕೈಗೊಳ್ಳಲು ಸಂತ್ರಸ್ತ ಕುಟುಂಬ ಒತ್ತಾಯಿಸಿದೆ.

ಕೆಲ ತಿಂಗಳ ಹಿಂದೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಹಸುವಿನ ಕೆಚ್ಚಲು ಕೊಯ್ದದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಇದರ ಹಿಂದೆಯೇ ರಾಜ್ಯದ ಇನ್ನೂ ಕೆಲವು ಕಡೆ ಇಂಥ ಕೃತ್ಯಗಳು ನಡೆದಿದ್ದವು.

ಕ್ರೈಸ್ತ ಮತದಿಂದ ಹಿಂದೂ ಧರ್ಮಕ್ಕೆ ಮರಳಿದ ಕುಟುಂಬ

ಯಾದಗಿರಿ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಮರಳಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಈ ಘರ್‌ ವಾಪಸಿಗೆ ಪ್ರೇರಣೆ ಕನಸಿನಲ್ಲಿ ಆಂಜನೇಯ ದೇವರು ಬಂದು ನೀಡಿರುವ ನಿರ್ದೇಶನ ಎಂದು ಕುಟುಂಬ ಹೇಳಿಕೊಂಡಿದೆ. ಯಾದಗಿರಿಯ ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ್ ಎಂಬವರು ತಮ್ಮ ಕುಟುಂಬದ ಸಮೇತ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದರು. ಇದೀಗ ಹಿಂದೂ ಧರ್ಮಕ್ಕೆ ಮರಳಿದ್ದಾರೆ.

ತಮ್ಮ ಕನಸಿನಲ್ಲಿ ಆಂಜನೇಯ ಪ್ರತ್ಯಕ್ಷನಾಗಿ, ಹಿಂದೂ ಧರ್ಮಕ್ಕೆ ಮರಳಿ ಬರುವಂತೆ ಹೇಳಿದ್ದಾನೆ. ಇದೇ ಕಾರಣಕ್ಕೆ ಮರಳಿ ಬಂದಿದ್ದಾಗಿ ವೆಂಕಟೇಶ್ ಹೇಳಿದ್ದಾರೆ. ಕೆಲ ವರ್ಷಗಳ ಹಿಂದೆ ಹಿಂದೂ ಧರ್ಮ ತೊರೆದಿದ್ದ ವೆಂಕಟೇಶ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು.

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ವೆಂಕಟೇಶ್ ಕುಟುಂಬಕ್ಕೆ ಮೇಲಿಂದ ಮೇಲೆ ಪೆಟ್ಟು ಬೀಳಲು ಆರಂಭಿಸಿತಂತೆ. ಕೈಗೊಂಡ ಕೆಲಸ ಯಾವುದೂ ಕೈಹಿಡಿಯುತ್ತಿರಲಿಲ್ಲವಂತೆ. ಇದರ ನಡುವೆ ವೆಂಕಟೇಶ್ ಕನಸಿನಲ್ಲಿ ಆಂಜನೇಯ ಸ್ವಾಮಿ ಬರುತ್ತಿದ್ದರಂತೆ. ಹಿಂದೂ ಧರ್ಮಕ್ಕೆ ಮರಳುವಂತೆ ಆದೇಶ ನೀಡುತ್ತಿದ್ದರಂತೆ. ಇದೇ ಕಾರಣಕ್ಕೆ ಇದೀಗ ವೆಂಕಟೇಶ್ ಕ್ರಿಶ್ಚಿಯನ್ ಧರ್ಮ ತೊರೆದು, ಮತ್ತೆ ಹಿಂದೂ ಧರ್ಮಕ್ಕೆ ಮರಳಿದ್ದಾಗಿ ಹೇಳಿದ್ದಾರೆ.

ಇದನ್ನೂ ಓದಿ: Shocking News: ರಾಜ್ಯದಲ್ಲಿ ಮತ್ತೆ ಗೋವಿನ ಮೇಲೆ ಕಿಡಿಗೇಡಿತನ, ಕೆಚ್ಚಲು ಕೊಯ್ದು ವಿಕೃತಿ