ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Indore Couple Missing: ಮೇಘಾಲಯ ಮಿಸ್ಸಿಂಗ್‌ ಕೇಸ್‌; ಟೂರ್‌ ಗೈಡ್‌ ಕೊಟ್ಟ ಆ ಸುಳಿವಿನಿಂದ ಬಯಲಾಯ್ತು ಘೋರ ಕೃತ್ಯ!

ಇಂದೋರ್‌ ದಂಪತಿ ಮಿಸ್ಸಿಂಗ್‌ ಪ್ರಕರಣದಲ್ಲಿ(Indore Couple Missing) ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಪತ್ನಿಯೇ ಪತಿಯ ಹತ್ಯೆಗೆ ಸುಪಾರಿ ಕೊಟ್ಟಿದ್ದಳೆಂಬ ಭಯಾನಕ ಸಂಗತಿ ಬಯಲಾಗಿದೆ. ಕಳೆದ ಎರಡು ವಾರಗಳಿಂದ ನಾಪತ್ತೆಯಾಗಿದ್ದ ಹಂತಕಿ ಮತ್ತು ಆಕೆಯ ಮೂವರು ಸಹಚರರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಟೂರ್‌ ಗೈಡ್‌ ಕೊಟ್ಟ ಮಹತ್ವದ ಸುಳಿವೊಂದು ಈ ಪ್ರಕರಣ ಭೇದಿಸುವಲ್ಲಿ ಪೊಲೀಸರಿಗೆ ಬಹಳ ಸಹಾಯ ಮಾಡಿತ್ತು.

ಮೇಘಾಲಯ ಮಿಸ್ಸಿಂಗ್‌ ಕೇಸ್‌-ಟೂರ್‌ ಗೈಡ್‌ ಕೊಟ್ಟ ಆ ಸುಳಿವೇನು?

Profile Rakshita Karkera Jun 9, 2025 10:26 AM

ಶಿಲ್ಲಾಂಗ್‌: ಮೇಘಾಲಯಕ್ಕೆ ಹನಿಮೂನ್‌ಗೆ ಹೋದ ಇಂದೋರ್‌ ದಂಪತಿ ಮಿಸ್ಸಿಂಗ್‌ ಪ್ರಕರಣದಲ್ಲಿ(Indore Couple Missing) ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಪತ್ನಿಯೇ ಪತಿಯ ಹತ್ಯೆಗೆ ಸುಪಾರಿ ಕೊಟ್ಟಿದ್ದಳೆಂಬ ಭಯಾನಕ ಸಂಗತಿ ಬಯಲಾಗಿದೆ. ಕಳೆದ ಎರಡು ವಾರಗಳಿಂದ ನಾಪತ್ತೆಯಾಗಿದ್ದ ಹಂತಕಿ ಮತ್ತು ಆಕೆಯ ಮೂವರು ಸಹಚರರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ವಿಚಾರಣೆ ವೇಳೆ ಸುಪಾರಿ ಕಿಲ್ಲರ್‌ಗಳು ಆರೋಪಿ ಸೋನಂ ತನ್ನ ಪತಿ ರಾಜಾ ರಘುವಂಶಿ ಹತ್ಯೆಗೆ ಸುಪಾರಿ ಕೊಟ್ಟಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಉತ್ತರಪ್ರದೇಶದ ಗಾಜಿಪುರರದಲ್ಲಿ ಎಲ್ಲಾ ಆರೋಪಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಇನ್ನು ಕಳೆದ ಕೆಲವು ವಾರಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಈ ಮಿಸ್ಸಿಂಗ್‌ ಕೇಸ್‌ ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಮೇಘಾಲಯದ ಟೂರ್‌ ಗೈಡ್‌. ಈತ ಕೊಟ್ಟ ಮಹತ್ವದ ಸುಳಿವಿನಿಂದ ಈ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೇಘಾಲಯದ ಟೂರ್‌ ಗೈಡ್‌ ಆಲ್ಬರ್ಟ್ ಪಿಡೆ ಅವರ ಪ್ರಕಾರ, ಸೋನಮ್ ಮತ್ತು ರಾಜಾ ರಘುವಂಶಿ ದಂಪತಿಗಳು ಮೇ 23 ರಂದು ಮೇಘಾಲಯದ ಸೊಹ್ರಾ ಪ್ರದೇಶದಿಂದ ಕಾಣೆಯಾದ ದಿನದಂದು ಮೂವರು ಪುರುಷ ಪ್ರವಾಸಿಗರೊಂದಿಗೆ ಇದ್ದರು. ಮೇ 23 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ನೊಂಗ್ರಿಯಾತ್‌ನಿಂದ ಮೌಲ್ಖಿಯಾತ್‌ಗೆ 3,000 ಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಹತ್ತುತ್ತಿದ್ದಾಗ ಮೂವರು ಪುರುಷರು ದಂಪತಿಗಳೊಂದಿಗೆ ಹೋಗಿದ್ದರು. ನಾಲ್ವರು ಪುರುಷರು ಹಿಂದಿಯಲ್ಲಿ ಪರಸ್ಪರ ಮಾತನಾಡುತ್ತಿದ್ದರು. ಮಹಿಳೆ ಹಿಂದೆ ಇದ್ದಾಗ ನಾಲ್ವರು ಪುರುಷರು ಮುಂದೆ ನಡೆಯುತ್ತಿದ್ದರು. ನಾಲ್ವರು ಪುರುಷರು ಹಿಂದಿಯಲ್ಲಿ ಮಾತನಾಡುತ್ತಿದ್ದರು, ಆದರೆ ನನಗೆ ಖಾಸಿ ಮತ್ತು ಇಂಗ್ಲಿಷ್ ಮಾತ್ರ ತಿಳಿದಿರುವ ಕಾರಣ ಅವರು ಏನು ಮಾತನಾಡುತ್ತಿದ್ದಾರೆಂದು ನನಗೆ ಅರ್ಥವಾಗಲಿಲ್ಲ. ದಂಪತಿಗೆ ಹಿಂದಿನ ದಿನ ತಾನೇ ಮಾರ್ಗದರ್ಶನ ನೀಡಿದ್ದೆ. ಆದರೆ ಮತ್ತೆ ಅವರು ನನ್ನನ್ನು ನಿರಾಕರಿಸಿ ಬೇರೊಬ್ಬರನ್ನು ನೇಮಿಸಿಕೊಂಡಿದ್ದರು ಎಂದು ತಿಳಿಸಿದ್ದಾರೆ. ಎಂದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಸುದ್ದಿಯನ್ನೂ ಓದಿ: Indore Couple missing: ಇಂದೋರ್‌ ಜೋಡಿ ಮಿಸ್ಸಿಂಗ್‌ ಕೇಸ್‌ನಲ್ಲಿ ಮಹತ್ವದ ಸುಳಿವು; ಆ ದಿನ ಅವರ ಜೊತೆಗಿದ್ದ ಆ ಮೂವರು ಯಾರು?

ಈ ಬಗ್ಗೆ ಡಿಐಜಿ ಮಾಹಿತಿ ನೀಡಿದ್ದು, ಮೇಘಾಲಯದಲ್ಲಿ ನಿಗೂಢವಾಗಿ ನಾಪತ್ತೆಯಾಗಿ ಕೊಲೆಯಾಗಿದ್ದ ರಾಜಾ ರಘುವಂಶೀ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಪತ್ನಿ ಸೇರಿದಂತೆ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಪತ್ನಿ ಸೋನಂ ರಾಜಾ ಹತ್ಯೆಗೆ ಸುಪಾರಿ ಕಿಲ್ಲರ್‌ಗಳನ್ನು ನೇಮಿಸಿದ್ದಳು. ಸದ್ಯ ಎಲ್ಲಾ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. ಇನ್ನು ಈ ಕೃತ್ಯಕ್ಕೆ ಕಾರಣ ಏನೆಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಇನ್ನು ಈ ಪ್ರಕರಣದಲ್ಲಿ ಮತ್ತಷ್ಟು ಜನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಇಂದೋರ್‌ನಲ್ಲಿ ಅವರಿಗಾಗಿ ಬಲೆ ಬೀಸಿದ್ದೇವೆ ಎಂದಿದ್ದಾರೆ.

ಮೇಘಾಲಯಕ್ಕೆ ಹನಿಮೂನ್‌ಗೆಂದು ತೆರಳಿದ್ದ ನವದಂಪತಿ ರಾಜಾ ಮತ್ತು ಸೋನಂ, ಮೇ 23 ರಂದು ನೊಂಗ್ರಿಯಾಟ್ ಗ್ರಾಮದ ಹೋಮ್‌ಸ್ಟೇಯಿಂದ ಚೆಕ್‌ಔಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಕಾಣೆಯಾಗಿದ್ದರು. ಒಂಬತ್ತು ದಿನಗಳ ಬಳಿಕ, ಪತಿ 30 ವರ್ಷದ ರಾಜಾ ರಘುವಂಶಿ (Raja Raghuvanshi) ಮೃತದೇಹ ಜೂನ್ 2 ರಂದು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಸೊಹ್ರಾ ಪ್ರದೇಶದ ಜಲಪಾತದ ಬಳಿಯ ಕಂದಕದಲ್ಲಿ ಪತ್ತೆಯಾಗಿತ್ತು. ಆದರೆ ಆತನ ಪತ್ನಿ ಸೋನಂ ಮಾತ್ರ ಸಿಕ್ಕಿರಲಿಲ್ಲ. ಆಕೆಯನ್ನು ಯಾರೋ ಕಿಡ್ನಾಪ್‌ ಮಾಡಿರಬಹುದು ಎಂದು ಶಂಕಿಸಲಾಗಿತ್ತು. ಇನ್ನು ಕಾಣೆಯಾಗಿರುವ ಸೋನಂ ಅನ್ನು ಸುರಕ್ಷಿತವಾಗಿ ಹುಡುಕಿಕೊಡುವಂತೆ ಕುಟುಂಬಸ್ಥರು ಪ್ರಧಾನಿ ನರೇಂದ್ರ ಮೋದಿಗೂ ಮನವಿ ಮಾಡಿದ್ದರು.