Murder Case: ಹಾವೇರಿಯಲ್ಲಿ ನಡುಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಟ್ರಾಕ್ಟರ್ ಕೊಲೆ
ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ಹೊಟೇಲ್ನಲ್ಲಿ ಊಟ ಮಾಡಿ ವಾಪಸ್ ಕಾರಿನ ಕಡೆಗೆ ಹೋಗುತ್ತಿದ್ದ ವೇಳೆ ನಾಲ್ಕು ಜನರ ತಂಡ ಅಟ್ಯಾಕ್ ಮಾಡಿ, ಕಬ್ಬಿಣದ ರಾಡ್ ಮತ್ತು ತಲವಾರ್ನಿಂದ ಹೊಡೆದು ಕೊಲೆ ಮಾಡಿದೆ.

ಕೊಲೆಯಾದ ಶಿವಾನಂದ

ಹಾವೇರಿ: ಹಾವೇರಿಯಲ್ಲಿ (Haveri news) ಹಾಡಹಗಲೇ ಭೀಕರವಾದ ಕೊಲೆ (Murder case) ನಡೆದಿದೆ. ನಡುಬೀದಿಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ಪ್ರಥಮ ದರ್ಜೆಯ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ಹೊಟೇಲ್ನಲ್ಲಿ ಊಟ ಮಾಡಿ ವಾಪಸ್ ಕಾರಿನ ಕಡೆಗೆ ಹೋಗುತ್ತಿದ್ದ ವೇಳೆ ನಾಲ್ಕು ಜನರ ತಂಡ ಅಟ್ಯಾಕ್ ಮಾಡಿ, ಕಬ್ಬಿಣದ ರಾಡ್ ಮತ್ತು ತಲವಾರ್ನಿಂದ ಹೊಡೆದು ಕೊಲೆ ಮಾಡಿದೆ. ನಾಲ್ವರು ಯುವಕರ ಗ್ಯಾಂಗ್ ಶಿವಾನಂದನನ್ನು ಹತ್ಯೆಗೈಯುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಇದರಿಂದ ರೊಚ್ಚಿಗೆದ್ದ ಗುತ್ತಿಗೆದಾರರ ಸಂಬಂಧಿಕರು ಆರೋಪಿಯ ಮನೆಗೆ ಬೆಂಕಿ ಹಚ್ಚಿದ್ದಾರೆ. ಶಿವಾನಂದ ಕುನ್ನೂರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಗ್ಗಾಂವಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಆರೋಪಿ ನಾಗರಾಜ್ ಮನೆಗೆ ಸಂಬಂಧಿಕರು ಬೆಂಕಿ ಹಚ್ಚಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.
ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ಅವರನ್ನು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟಕ ಶಿಗ್ಗಾವಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತು ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Viral News: ಯೂಟ್ಯೂಬ್ ನೋಡಿ ಗಂಡನ ಕೊಲೆಗೆ ಸ್ಕೆಚ್; ಪತಿ ಮಲಗಿದ್ದಾಗ ಕುದಿಯುವ ಎಣ್ಣೆ ಸುರಿದ ಪತ್ನಿ!