ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shocking News: ಇಬ್ಬರು ಅಪ್ರಾಪ್ತರಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

Shocking News: ನಿನ್ನೆ ಸಂಜೆ ಆರೋಪಿ, ಅಪ್ರಾಪ್ತ ಬಾಲಕನ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದ್ದು, ಮನೆಯಲ್ಲಿ ಮಗಳು ಇಲ್ಲದ್ದನ್ನು ಗಮನಿಸಿದ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರಿಂದ ಈ ಕೃತ್ಯ ನಡೆದಿದ್ದು, ಇಬ್ಬರನ್ನು ಹದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇಬ್ಬರು ಅಪ್ರಾಪ್ತರಿಂದಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Jun 23, 2025 10:08 AM

ದಾವಣಗೆರೆ: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕಿಯನ್ನು (minor girl) ಪುಸಲಾಯಿಸಿ ಅಪ್ರಾಪ್ತರು ಲೈಂಗಿಕ ದೌರ್ಜನ್ಯ (Physical Abuse) ಎಸಗಿರುವ ಘಟನೆ ದಾವಣಗೆರೆ (Davanagere news) ತಾಲೂಕಿನ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಟದ ನೆವದಲ್ಲಿ ಕರೆದೊಯ್ದಿರುವ ಇಬ್ಬರು ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಅವರನ್ನು ಇದೀಗ ವಿಚಾರಣೆಗಾಗಿ ವಶಕ್ಕೆ ಪಡೆಯಾಗಿದೆ.

ನಿನ್ನೆ ಸಂಜೆ ಆರೋಪಿ, ಅಪ್ರಾಪ್ತ ಬಾಲಕನ ಮನೆಯಲ್ಲಿ ಈ ದುಷ್ಕೃತ್ಯ ನಡೆದಿದ್ದು, ಮನೆಯಲ್ಲಿ ಮಗಳು ಇಲ್ಲದ್ದನ್ನು ಗಮನಿಸಿದ ತಾಯಿ ಹುಡುಕಿಕೊಂಡು ನೆರೆ ಮನೆಗೆ ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. 15 ವರ್ಷದ ಹಾಗೂ 17 ವರ್ಷದ ಇಬ್ಬರು ಅಪ್ರಾಪ್ತರಿಂದ ಈ ಕೃತ್ಯ ನಡೆದಿದ್ದು, ಇಬ್ಬರನ್ನು ಹದಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗೆ ದಾಖಲಿಸಲಾಗಿದೆ.

ಅಕ್ರಮ ಸಂಬಂಧದ ಆರೋಪದಲ್ಲಿ ಅಡವಿಸಿದ್ದೇಶ್ವರ ಸ್ವಾಮೀಜಿ ಉಚ್ಚಾಟನೆ

ಬೆಳಗಾವಿ: ಅಕ್ರಮ ಸಂಬಂಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಠದಿಂದ ಸ್ವಾಮೀಜಿಯನ್ನು ಉಚ್ಚಾಟಿಸಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರದಲ್ಲಿ ನಡೆದಿದೆ. ಗ್ರಾಮದ ಅಡವಿಸಿದ್ಧೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯನ್ನು ಮಠದಿಂದ ಹೊರಹಾಕಲಾಗಿದೆ.

ಜೂ. 21ರಂದು ವಿಜಯಪುರ ಜಿಲ್ಲೆಯ ತಾಳಿಕೋಟಿಯ ಮಹಿಳೆ ತನ್ನ ಮಗಳೊಂದಿಗೆ ಅಡವಿ ಸಿದ್ದೇಶ್ವರ ಮಠಕ್ಕೆ ಆಗಮಿಸಿದ್ದರು. ಆ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಸ್ಥಳೀಯ ಯುವಕರು ಸ್ವಾಮೀಜಿಯ ಕೊಠಡಿಯೊಳಗೆ ಆ ಮಹಿಳೆ ಇರುವುದನ್ನು ನೋಡಿ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು ಸ್ವಾಮಿಯನ್ನು ಹಾಗೂ ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನು ಗ್ರಾಮದ ಪ್ರಮುಖರು ರಾತ್ರಿ ಸಮಯದಲ್ಲಿ ಮಠದಲ್ಲಿ ಯಾರು ಇಲ್ಲದ ವೇಳೆ ಆ ಮಹಿಳೆ ತಮ್ಮ ಕೊಠಡಿಯೊಳಗೆ ಇರುವುದು ಯಾಕೆ ಎಂದು ಸ್ವಾಮೀಜಿಯನ್ನ ಪ್ರಶ್ನಿಸಿದ್ದಾರೆ. ಇದಕ್ಕೆ ಸ್ವಾಮೀಜಿ ಸಮಯವಾಗಿದ್ದರಿಂದ ಇಲ್ಲೇ ಉಳಿದುಕೊಂಡಿದ್ದಾರೆ ಎಂದು ಹೇಳಿದ್ದು. ನಾನು ಯಾವುದೇ ತಪ್ಪನ್ನು ಮಾಡಿಲ್ಲ ಎಂದು ವಾದಿಸಿದ್ದಾರೆ. ಅದಕ್ಕೆ, ಗ್ರಾಮಸ್ಥರು ಒಪ್ಪಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ತಡರಾತ್ರಿ ಆ ಮಹಿಳೆ ಮತ್ತು ಅವಳ ಮಗಳನ್ನು ಸಾಂತ್ವನ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ಇಂದು ಇಡೀ ಗ್ರಾಮಸ್ಥರು ಮಠದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಯಾವುದೇ ಕಾರಣಕ್ಕೂ ಸ್ವಾಮೀಜಿ ಮಠದಲ್ಲಿ ಇರಲು ಅವಕಾಶ ಕೊಡುವುದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಸ್ವಾಮೀಜಿಯನ್ನು ಊರಿನ ಹಿರಿಯರು ಮಠದಿಂದ ಹೊರಹಾಕಿದ್ದಾರೆ.

ಇದನ್ನೂ ಓದಿ: ಜೈಲಿನಿಂದ ಹೊರಬಂದ ಎರಡನೇ ದಿನ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಪಾಪಿ; ಛೀ...ಥೂ...ಎಂದ ಜನ