ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಾನುವಾರುಗಳನ್ನು ರಕ್ಷಿಸಲು ಹೋಗಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಪಿಕ್ ಅಪ್ ಡಿಕ್ಕಿ; 8 ಕಾರ್ಮಿಕರು ಸಾವು, 32 ಮಂದಿ ಗಂಭೀರ

Accident: ಪಿಕ್ ಅಪ್ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಕಾರ್ಮಿಕರು ಮೃತಪಟ್ಟು, 32 ಮಂದಿ ಗಂಭೀರ ಗಾಯಗೊಂಡಿರುವ ದುರ್ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. ಗ್ವಾಲಿಯರ್‌ನಲ್ಲಿ ಭತ್ತ ನಾಟಿ ಕೆಲಸ ಮುಗಿಸಿ ಕಾರ್ಮಿಕರು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿರುವ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು.

ಭೀಕರ ಅಪಘಾತ: 8 ಕಾರ್ಮಿಕರು ದುರ್ಮರಣ, 32 ಮಂದಿ ಗಂಭೀರ

ಟ್ರಕ್‌ಗೆ ಡಿಕ್ಕಿ ಹೊಡೆದು 8 ಕಾರ್ಮಿಕರು ದುರ್ಮರಣ -

Priyanka P
Priyanka P Aug 18, 2026 11:32 AM

ಇಂದೋರ್, ಆ.18: ಇಂದು (ಮಂಗಳವಾರ, ಆ.18) ಬೆಳಗಿನ ಜಾವ ಪಿಕ್ ಅಪ್ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಕಾರ್ಮಿಕರು ಮೃತಪಟ್ಟು, 32 ಮಂದಿ ಗಂಭೀರ ಗಾಯಗೊಂಡಿರುವ ದುರ್ಘಟನೆ ಮಧ್ಯಪ್ರದೇಶದ (Madhya Pradesh) ಭಿಂಡ್ ಜಿಲ್ಲೆಯಲ್ಲಿ ನಡೆದಿದೆ. (Accident) ಭಿಂಡ್-ಗ್ವಾಲಿಯರ್ ರಾಷ್ಟ್ರೀಯ ಹೆದ್ದಾರಿಯ ಚಿಮ್ಕಾ ಗ್ರಾಮದ ಬಳಿ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಗ್ವಾಲಿಯರ್‌ನಲ್ಲಿ ಭತ್ತ ನಾಟಿ ಕೆಲಸ ಮುಗಿಸಿ ಕಾರ್ಮಿಕರು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿರುವ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಕುಳಿತಿದ್ದ ದನಗಳನ್ನು ರಕ್ಷಿಸಲು ಪಿಕ್‌ ಅಪ್ ವಾಹನ ಚಾಲಕ ಮುಂದಾಗಿದ್ದಾನೆ. ಈ ವೇಳೆ ವಾಹನ ನಿಯಂತ್ರಣ ಕಳೆದುಕೊಂಡು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಗೋಹದ್ ಚೌರಾಹಾ ಪೊಲೀಸ್ ಠಾಣೆಯ ಉಸ್ತುವಾರಿ ರಾಮನರೇಶ್ ಯಾದವ್ ತಿಳಿಸಿದ್ದಾರೆ.

ಡಿಕ್ಕಿಯ ಪರಿಣಾಮ ವಾಹನವು ತೀವ್ರವಾಗಿ ಹಾನಿಗೊಳಗಾಗಿದ್ದು, ಕಾರ್ಮಿಕರು ಒಳಗೆ ಸಿಲುಕಿಕೊಂಡರು. ದುರ್ಘಟನೆಯಲ್ಲಿ ಎಂಟು ಕಾರ್ಮಿಕರು ಮೃತಪಟ್ಟರು. ಅವರಲ್ಲಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಮುಖಾಮುಖಿ ಡಿಕ್ಕಿಯಲ್ಲಿ ಇತರ 32 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಕಂಟೈನರ್ ಲಾರಿಗೆ ಆಟೋ ಡಿಕ್ಕಿ: 7 ಮಂದಿ ದುರ್ಮರಣ, ಹಲವರಿಗೆ ಗಂಭೀರ ಗಾಯ

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ, ಸ್ಥಳೀಯರ ಸಹಾಯದಿಂದ ವಾಹನದೊಳಗೆ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಿದರು. ಗಾಯಗೊಂಡ ಎಲ್ಲರನ್ನು ತಕ್ಷಣವೇ ಗೋಹಾದ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗ್ವಾಲಿಯರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈಕ್ ಡಿಕ್ಕಿ ಹೊಡೆದು ಬ್ಯಾಂಕ್ ಮ್ಯಾನೇಜರ್ ದುರ್ಮರಣ

ತನ್ನ ಅತ್ತೆಯ ಮನೆಯಿಂದ ಹಿಂತಿರುಗುತ್ತಿದ್ದಾಗ, ವೇಗವಾಗಿ ಬಂದ ಬೈಕ್ ಸವಾರ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ಗ್ರೂಪ್ ಬ್ಯಾಂಕ್‌ನ ವ್ಯವಸ್ಥಾಪಕ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಪೊಲೀಸರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಘಟನೆಯ ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

30 ವರ್ಷದ ವಿಭವ್ ಶ್ರೀವಾಸ್ತವ ಮೃತ ದುರ್ದೈವಿ. ಅವರು ಸುಮಾರು ಹತ್ತು ವರ್ಷಗಳ ಕಾಲ ಬಂಡಾ ಜಿಲ್ಲೆಯ ಅತಾರಾ ಪಟ್ಟಣದಲ್ಲಿರುವ ಗುಂಪಿನ ಕ್ಯಾಶ್ ಪಾರ್ಕ್ ಬ್ಯಾಂಕಿನ ವ್ಯವಸ್ಥಾಪಕರಾಗಿದ್ದರು. ವಿಭವ್ ಜಲೌನ್ ಜಿಲ್ಲೆಯ ಒರೈ ಪಟ್ಟಣದಲ್ಲಿರುವ ತಮ್ಮ ಅತ್ತೆಯ ಮನೆಗೆ ಹೋಗಿದ್ದರು. ಅಲ್ಲಿಂದ ಸೋಮವಾರ (ಆ.17) ಬೆಳಿಗ್ಗೆ ತಮ್ಮ ಕರ್ತವ್ಯಕ್ಕಾಗಿ ಬೈಕ್‌ನಲ್ಲಿ ಅತಾರಾಕ್ಕೆ ಹಿಂತಿರುಗುತ್ತಿದ್ದರು. ನಿದ್ದೆ ತೂಗಡಿಸುತ್ತಿದ್ದುದರಿಂದ ಬೈಕ್ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.