ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Prajwal Revanna Case: ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್‌ ರೇವಣ್ಣ ಎರಡು ದಿನ ಪೊಲೀಸ್‌ ಕಸ್ಟಡಿಗೆ

ಜೈಲಿನಲ್ಲಿ ಮೊಬೈಲ್‌ ಬಳಕೆ ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದು, ಇಬ್ಬರನ್ನೂ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಪೊಲೀಸರು ಕೋರಿದ್ದರು. ಇದಕ್ಕೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಅನುಮತಿ ನೀಡಿದೆ.

ಜೈಲಿನಲ್ಲಿ ಮೊಬೈಲ್ ಬಳಕೆ; ಪ್ರಜ್ವಲ್‌ ರೇವಣ್ಣ 2 ದಿನ ಪೊಲೀಸ್‌ ಕಸ್ಟಡಿಗೆ

-

Prabhakara R
Prabhakara R Sep 8, 2026 6:03 PM

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಇಂದು ಪ್ರಜ್ವಲ್‌ನನ್ನು ನಗರದ 42ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಪೊಲೀಸರು ಕೋರ್ಟ್‌ನಲ್ಲಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸ್‌ ಕಸ್ಟಡಿಗೆ ನೀಡಲು ಕೋರ್ಟ್‌ ಒಪ್ಪಿದೆ.

ಈ ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದು, ತನಿಖೆಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಇಬ್ಬರು ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಪೊಲೀಸರು ಕೋರಿದ್ದರು. ಇದೀಗ ಕೋರ್ಟ್‌ ಪೊಲೀಸ್‌ ಅರ್ಜಿಯನ್ನು ಪರಿಗಣಿಸಿ 2 ದಿನ ಪೊಲೀಸ್‌ ಕಸ್ಟಡಿಗೆ ಆದೇಶ ನೀಡಿದೆ.

ಜೈಲಿನಲ್ಲಿ ಪ್ರಜ್ವಲ್ ಬಳಿ ಮೊಬೈಲ್, ಪೆನ್ ಡ್ರೈವ್, ನೋಟ್ ಬುಕ್ ಪತ್ತೆಯಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಶಪಡಿಸಿಕೊಂಡ ಮೊಬೈಲ್, ಪೆನ್ ಡ್ರೈವ್‌ಗಳನ್ನು ಪೊಲೀಸರು ರಿಟ್ರೀವ್‌ಗೆ ಕಳುಹಿಸಿದ್ದರು.

ತನಿಖೆ ಮುಂದುವರಿಸಲು, ಪ್ರಜ್ವಲ್ ರೇವಣ್ಣ‌ನ ವಿಚಾರಣೆ ಅಗತ್ಯವಿದೆ ಎಂದು ಇಂದು 42 ನೇ ಎಸಿಜೆಎಂ ಕೋರ್ಟ್‌ಗೆ ಪೊಲೀಸರು ಅರ್ಜಿ ಸಲ್ಲಿಸಿ, ಇಂದು ಪ್ರಜ್ವಲ್ ರೇವಣ್ಣ‌, ಮತ್ತೊಬ್ಬ ಆರೋಪಿ ಪ್ರತಾಪ್ ಎಂಬಾತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿಲಾಗಿತ್ತು. ಈ ವೇಳೆ ವಾದ ಮಂಡಿಸಿದ ಪ್ರಜ್ವಲ್ ಪರ ವಕೀಲ ಅರುಣ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಹಾಗೂ ಜೈಲು ದೂರ ಇಲ್ಲ. ವಿಚಾರಣೆ ಅವಶ್ಯಕತೆ ಇದ್ದಾಗ ಅಲ್ಲಿಯೇ ಹೋಗಿ ವಿಚಾರಣೆ ನಡೆಸಬಹುದು.ಇಷ್ಡು ದಿನ ತನಿಖೆಗೆ ಸಹಕಾರ ಕೊಟ್ಟಿದ್ದಾರೆ. ಮುಂದೆಯೂ ಅದೇ ರೀತಿ ಜೈಲಿಗೆ ಹೋಗಿ ವಿಚಾರಣೆ ಮಾಡಬಹುದು. ಕಸ್ಟಡಿಗೆ ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಪತ್ನಿಯನ್ನು ಕೊಂದು ತಲೆಯನ್ನು ಫ್ರಿಜ್‌ನಲ್ಲಿಟ್ಟ ಪತಿ : ಅಕ್ರಮ ಸಂಬಂಧಕ್ಕೆ ಕಾರಣನಾದ ʼಶುಗರ್‌ ಡ್ಯಾಡಿʼ ಕೊಲೆ ಮಾಡುವುದಾಗಿ ಬೆದರಿಕೆ

ಇದೇ ವೇಳೆ ಸರ್ಕಾರಿ ಪರ ವಕೀಲ ಸತೀಶ್ ವಾದ ಮಂಡಿಸಿ ಆರೋಪಿತರ ಬಳಿ ಕೆಲವು ಪ್ರಮುಖ ಮಾಹಿತಿ ಪಡೆಯಲು ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡರು. ಇಬ್ಬರ ವಾದ ಪ್ರತಿವಾದ ಆಲಿಸಿದ ನಂತರ ಪೊಲೀಸ್‌ ಅರ್ಜಿಯನ್ನು ಮನ್ನಿಸಿದ ನ್ಯಾ. ಸಂದೀಪ್ ಪಾಟೀಲ್ ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದರು. ಈ ಆದೇಶದ ಅನ್ವಯ ಇಂದಿನಿಂದಲೇ ಪೊಲೀಸರು ಪ್ರಜ್ವಲ್‌ ಅವರನ್ನು ವಿಚಾರಣೆ ನಡೆಸಲಿದ್ದಾರೆ.