ಪುಣೆ ಉದ್ಯಮಿ ಕೊಲೆ ಕೇಸ್; ಸಿಕ್ಕಿಬಿದ್ದ ಬಳಿಕ ಮೂಡಿತಾ ಬಿರುಕು? ಸಿಯಾ - ಚೇತನ್ ಪರಸ್ಪರ ಆರೋಪ
ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆಯ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಇಬ್ಬರು ಪ್ರಮುಖ ಆರೋಪಿಗಳಾದ ಕೇತನ್ ಅವರ ನಿಶ್ಚಿತಾರ್ಥ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರೇಮಿ ಚೇತನ್ ಚೌಧರಿ ಈಗ ಪರಸ್ಪರ ಅಪರಾಧಕ್ಕೆ ದೂಷಿಸುತ್ತಿದ್ದಾರೆ ಎಂದು ವರದಿಯಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಇಬ್ಬರೂ ಆರೋಪಿಗಳು ವಿಚಾರಣೆಯ ಸಮಯದಲ್ಲಿ ತಮ್ಮದೇ ಆದ ಪಾತ್ರಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದಾರೆ.
ಸಂಗ್ರಹ ಚಿತ್ರ -
ಪುಣೆ: ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆಯ (Pune businessman murder case) ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಇಬ್ಬರು ಪ್ರಮುಖ ಆರೋಪಿಗಳಾದ ಕೇತನ್ ಅವರ ನಿಶ್ಚಿತಾರ್ಥ ಪತ್ನಿ ಸಿಯಾ ಗೋಯಲ್ ( Siya Goyal) ಮತ್ತು ಆಕೆಯ ಪ್ರೇಮಿ ಚೇತನ್ ಚೌಧರಿ ( Chetan Chaudhary) ಈಗ ಪರಸ್ಪರ ಅಪರಾಧಕ್ಕೆ ದೂಷಿಸುತ್ತಿದ್ದಾರೆ ಎಂದು ವರದಿಯಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಇಬ್ಬರೂ ಆರೋಪಿಗಳು ವಿಚಾರಣೆಯ ಸಮಯದಲ್ಲಿ ತಮ್ಮದೇ ಆದ ಪಾತ್ರಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದಾರೆ ಮತ್ತು ಒಬ್ಬರು ಮತ್ತೊಬ್ಬರ ಮೇಲೆ ತಪ್ಪನ್ನು ಎತ್ತಿ ಹಾಕಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.
ಆರೋಪಿಗಳು ಘಟನೆಗಳ ಬಗ್ಗೆ ಪರಸ್ಪರ ವಿರುದ್ಧವಾದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚೇತನ್ ಓಡಿಹೋಗುವ ಮೂಲಕ ಸಿಯಾಳೊಂದಿಗೆ ಹೊಸ ಜೀವನ ಆರಂಭಿಸಲು ಬಯಸಿದ್ದಾಗಿ ಹೇಳಿಕೊಂಡಿದ್ದಾನೆ, ಆದರೆ ಅವಳು ಕೇತನ್ನನ್ನು ಸಾಯಿಸಲು ಬಯಸಿದ್ದಳು ಎಂದು ತಿಳಿಸಿದ್ದ. ಇನ್ನು ಮತ್ತೊಂದೆಡೆ ಕೊಲೆಯ ಪಿತೂರಿಯನ್ನು ಚೇತನ್ ರೂಪಿಸಿದ್ದಾಗಿ ಮತ್ತು ಜೂನ್ 14 ರಂದು ಕೇತನ್ನ ಮೇಲೆ ವಿಫಲ ಪ್ರಯತ್ನದ ನಂತರವೂ ಅವನು ಅಳುತ್ತಿದ್ದನೆಂದು ಸಿಯಾ ತನಿಖಾಧಿಕಾರಿಗಳಿಗೆ ತಿಳಿಸಿದ್ದಾಳೆ. ಲೋಹಗಡ್ ಕೋಟೆಯಲ್ಲಿ ಪೂರ್ವನಿರ್ಧರಿತ ಸಿಗ್ನಲ್ ಯೋಜನೆಯ ಭಾಗವಾಗಿತ್ತು ಎಂದು ಸಿಯಾ ಒಪ್ಪಿಕೊಂಡಿದ್ದಾಳೆ.
ಕೊಲೆ ಮಾಡುವ ಎರಡು ದಿನಗಳ ಮೊದಲು ಆರೋಪಿಗಳು ಭೇಟಿ ನೀಡಿದ್ದರು. ಅದು ಅಪರಾಧಕ್ಕೆ ಸೂಕ್ತ ಸ್ಥಳವೆಂದು ಗುರುತಿಸಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳು , 2,000 ಕ್ಕೂ ಹೆಚ್ಚು ಕರೆಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಸುಮಾರು 238 ಗಂಟೆಗಳ ಕಾಲ ಪರಸ್ಪರ ಮಾತನಾಡುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಚೇತನ್ ಅವರ ಕುಟುಂಬ ಕೂಡ ಈ ಆರೋಪಗಳನ್ನು ಸಾರ್ವಜನಿಕವಾಗಿ ತಿರಸ್ಕರಿಸಿದ್ದು, ಅವರ ಮೇಲೆ ಸುಳ್ಳು ಆರೋಪ ಹೊರಿಸಲಾಗುತ್ತಿದೆ ಎಂದು ಹೇಳಿಕೊಂಡಿದೆ.
Murder Case: ಮಾರಕಾಸ್ತ್ರಗಳಿಂದ ಕೊಚ್ಚಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ, ಕೊಲೆ ಹಿಂದೆ ಲವ್ ಸ್ಟೋರಿ
ತನ್ನ ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಅಂದರೆ ಜೂನ್ 18 ರಂದು ಸಿಯಾ ಮತ್ತೆ ಕೋಟೆಗೆ ಹೋಗಲು ಕೇತನ್ನನ್ನು ಒಪ್ಪಿಸಿದಳು. ಅಂದು ಬೆಳಿಗ್ಗೆ, ಸಿಯಾ ಮತ್ತು ಪ್ರಿಯಕರ ಚೇತನ್ ಪುಣೆಯ ಕೆಫೆಯೊಂದರಲ್ಲಿ ಭೇಟಿಯಾಗಿ ಕೊನೆಯ ಹಂತದ ಯೋಜನೆ ರೂಪಿಸಿದ್ದರು. ಕೋಟೆಯ ತುದಿಯಲ್ಲಿ ಫೋಟೋಗೆ ಪೋಸ್ ನೀಡುವ ನೆಪದಲ್ಲಿ ಕೇತನ್ನನ್ನು ನಿಲ್ಲಿಸಿದ ಸಿಯಾ, ಆತನನ್ನು 3,300 ಅಡಿ ಆಳದ ಕಮರಿಗೆ ತಳ್ಳಿ ಕ್ರೂರವಾಗಿ ಕೊಂದಿದ್ದಾಳೆ. ಇದಕ್ಕೆ ಪ್ರಿಯಕರ ಚೇತನ್ ಸಾಥ್ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.